‘ಚೋಳ ಕಡಿತು, ನನಗೊಂದು ಚೋಳ ಕಡಿತು’ – ಇದು ಶರೀಫರು ರಚಿಸಿದ ಗೀತೆ.
ಸಾಮಾನ್ಯವಾಗಿ ಕುಂಡಲಿನಿ ಶಕ್ತಿಯನ್ನು ಅಂದರೆ ಮನುಷ್ಯನಲ್ಲಿ ನಿಹಿತವಾದ ದೈವಿ ಶಕ್ತಿಯನ್ನು ಸರ್ಪರೂಪವಾಗಿ ಕಲ್ಪಿಸುತ್ತಾರೆ. ಈ ಕವನದಲ್ಲಿ ಶರೀಫರು ತಮ್ಮ ಬದುಕನ್ನು ಬದಲಾಯಿಸಿದ ಘಟನೆಯನ್ನು, ಅದಕ್ಕೆ ಕಾರಣವಾದ ಶಕ್ತಿಯನ್ನು ಚೋಳಿನ ರೂಪದಲ್ಲಿ ಬಣ್ಣಿಸಿದ್ದಾರೆ. ಶರೀಫರ ಗೀತೆಯ ಪೂರ್ಣಪಾಠ ಹೀಗಿದೆ:
ಚೋಳ ಕಡಿತು ನನಗೊಂದು ಚೋಳ ಕಡಿತು
ಕಾಳಕತ್ತಲದೊಳಗೆ ಕೂತಿತ್ತು, ನನಕಂಡ ಬಂತು ||ಪಲ್ಲ||
ಎಷ್ಟು ದಿನದ ಸಿಟ್ಟು ಇಟ್ಟಿತ್ತು, ತೀರಿಸಿ ಬಿಟ್ಟಿತು
ಯಾರಿಗೆ ಹೇಳಿದರ ಏನ ಆದೀತು
ಗುರುತಾತು ಈ ಮಾತು
ಹುಟ್ಟಿದ ಮಗಳ ಕಂಡಿದ್ದಿಲ್ಲ
ಇದರ ಕಷ್ಟ ಶಿವನೇ ಬಲ್ಲ
ಘಟ್ಟಿಯಾಗಿ ಮುಳ್ಳು ಚುಚ್ಚಿತ್ತು ಮಾಯವಾಗಿ ಹೋತು ||೧||
ಮೂರು ದೇಹದೊಳಗ ತಾನಿತ್ತ
ಪರಮಾತ್ಮನಾದದೊಳು ತಾನು ಬೆಳೆದಿತ್ತ
ಸಾರಿಬಂದು ಎನ್ನ ನೋಡುತ
ಮೂರು ಲೋಕ ಬೆಳಗು ಮೇಲು ಮೀರಿದುನ್ಮನಿ ಹಾರಿ ನಿಂತಿತು ||೨||
ದೇವರಮನಿ ಮೂಲೆಯೊಳಗಿತ್ತು
ಆಧಾರ ಹಿಡಿದು ಊರ್ಧ್ವಮುಖದಿ ಕೊಂಡಿ ಮಾಡಿತ್ತು
ಕಾಲ ಕಳೆದು ಸ್ಥೂಲದೇಹದೊಳಗೆ ಮಲಗಿತ್ತು
ಕಲಿಕರ್ಮ ನುಂಗಿತ್ತು
ದೇವಶಿಶುನಾಳಧೀಶನ ಧ್ಯಾನದೊಳಗಾ ಚೋಳು ಇತ್ತು
ಕಚ್ಚುತಿರಲು ಎಚ್ಚರಾದಿತು, ಹುಚ್ಚು ಹಿಡಿದಂಗಾತು ||೩||
ಆಧ್ಯಾತ್ಮಪಥದಲ್ಲಿ ಸಾಗಿದವರ ಜೀವನದಲ್ಲಿ ನಡೆಯುವ ಒಂದೆರಡು ಘಟನೆಗಳಿಂದಾಗಿ ಅವರ ಜೀವನವೇ ಬದಲಾಗಿ ಬಿಡುತ್ತದೆ. ಇಂತಹ ಸಂದರ್ಭವನ್ನು ಅನೇಕ ಸಾಧಕರು ಕಾವ್ಯದ ಮೂಲಕ ವರ್ಣಿಸಿದ್ದೂ ಉಂಟು.
ತಮ್ಮ ಬದುಕಿನಲ್ಲಿಯ ಇಂತಹ ಘಟನೆಯೊಂದನ್ನು ಶರೀಫರು “ಚೋಳ ಕಡಿತು ನನಗೊಂದು ಚೋಳ ಕಡಿತು”.
ಎನ್ನುವ ಚಿಕ್ಕ ಗೀತೆಯಲ್ಲಿ ಬಣ್ಣಿಸಿದ್ದಾರೆ.
ಯಾವ ಜೀವಿಗೂ ತನ್ನ ಮುಂದಿನ ಕ್ಷಣದ ಭವಿಷ್ಯದ ಅರಿವಿರುವದಿಲ್ಲ. ಭವಿಷ್ಯವೆಂದರೆ ಕಪ್ಪುಕತ್ತಲೆಯೇ ಸೈ. ಇಂತಹ ಕಪ್ಪು ಕತ್ತಲೆಯಲ್ಲಿ ತನ್ನ ಬಲಿಯನ್ನು ಜಪ್ಪಿಸಿಕೊಂಡು ಈ ಚೋಳು ಕೂತಿರುತ್ತದೆ. ಬಲಿಗೆ ಚೋಳು ಕಾಣಲಿಕ್ಕಿಲ್ಲ. ಆದರೆ ಚೋಳಿಗೆ ಬಲಿಯು ಸುಸ್ಪಷ್ಟ.
ಆದುದರಿಂದ ಇದನ್ನು “ಕಾಳಕತ್ತಲದೊಳಗೆ ಕೂತಿತ್ತು, ನನಕಂಡ ಬಂತು” ಎಂದು ಶರೀಫರು ಬಣ್ಣಿಸುತ್ತಾರೆ.
ಈ ಚೋಳು ಅಕಸ್ಮಾತ್ತಾಗಿ ಶರೀಫರನ್ನು ಕಂಡದ್ದಲ್ಲ. ಅದು ಎಷ್ಟೋ ದಿನದಿಂದ ಇವರ ಮೇಲೆ ಸಿಟ್ಟು ಇಟ್ಟುಕೊಂಡು ಕಾಯುತ್ತ ಕೂತಿದೆ. ಆದುದರಿಂದಲೇ ಚೋಳು ಕಚ್ಚಿಸಿಕೊಂಡ ಬಳಿಕ ಶರೀಫರು ವಿಸ್ಮಯಗೊಳ್ಳುತ್ತಾರೆ. “ಎಷ್ಟು ದಿನದ ಸಿಟ್ಟು ಇಟ್ಟಿತ್ತು, ಈಗ ತೀರಿಸಿ ಬಿಟ್ಟಿತು”, ಎನ್ನುತ್ತಾರೆ.
ಈ ಚೋಳಿಗೆ ಶರೀಫರ ಮೇಲೆ ದೀರ್ಘಕಾಲದ ಸಿಟ್ಟು ಯಾಕೆ ಎನ್ನುವ ಪ್ರಶ್ನೆ ಬರುತ್ತದೆ.
ಶರೀಫರ ಜನ್ಮಾಂತರಗಳ ಕರ್ಮಫಲವೇ ಈ ಚೋಳು. ಆದುದರಿಂದ ಅದರ ಸಿಟ್ಟು ಎಷ್ಟೋ ಜನ್ಮಗಳ ಸಿಟ್ಟು. ಈ ಚೋಳು ಕಡಿದ ಸಂಗತಿಯನ್ನು ಅಥವಾ ಅದರ ನೋವನ್ನು ಯಾರಿಗೆ ಹೇಳಿದರೂ ಪ್ರಯೋಜನವಿಲ್ಲ, ಕರ್ಮಫಲವನ್ನು ಬದಲಿಸಲು ಯಾರೂ ತಮಗೆ ಸಹಾಯ ಮಾಡಲಾರರು ಎನ್ನುವದು ಶರೀಫರ ಮನಸ್ಸಿಗೆ ಅನುಭವವಾಗುತ್ತದೆ. ಅದಕ್ಕೇ ಸ್ವಗತದಲ್ಲಿ ಎಂಬಂತೆ ಶರೀಫರು ನುಡಿಯುತ್ತಾರೆ:
“ಯಾರಿಗೆ ಹೇಳಿದರ ಏನ ಆದೀತು
ಗುರುತಾತು ಈ ಮಾತು”.
ಚೋಳಿನ ಕಡಿತದಷ್ಟು ಶರೀಫರ ಮನಸ್ಸಿಗೆ ಆಘಾತ ಕೊಡುವ ಯಾವ ಘಟನೆ ನಡೆದಿರಬಹುದೆನ್ನುವ ಸೂಚನೆ ಮುಂದಿನ ಸಾಲಿನಲ್ಲಿ ಸಿಗುತ್ತದೆ:
“ಹುಟ್ಟಿದ ಮಗಳ ಕಂಡಿದ್ದಿಲ್ಲ
ಇದರ ಕಷ್ಟ ಶಿವನೇ ಬಲ್ಲ
ಘಟ್ಟಿಯಾಗಿ ಮುಳ್ಳು ಚುಚ್ಚಿತ್ತು ಮಾಯವಾಗಿ ಹೋತು ”
ಶರೀಫರ ಮೊದಲ ಹಾಗೂ ಒಂದೇ ಸಂತತಿಯಾದ ಹೆಣ್ಣು ಕೂಸು, ಅವರ ಹೆಂಡತಿಯ ತವರು ಮನೆಯಲ್ಲಿ ಜನಿಸಿ, ಸ್ವಲ್ಪೇ ದಿನಗಳಲ್ಲಿ ತೀರಿಕೊಳ್ಳುತ್ತದೆ. ಇದೊಂದು ತೀವ್ರ ದುಃಖದ ಅನುಭವ. ಅದಕ್ಕೇ ‘ಇದರ ಕಷ್ಟ ಶಿವನೇ ಬಲ್ಲ’ ಎಂದು ಶರೀಫರು ದುಃಖದಿಂದ ಹೇಳುತ್ತಾರೆ. ಇದು ಎದೆಯಲ್ಲಿ ಮುಳ್ಳು ಚುಚ್ಚಿದಂತಹ ಅನುಭವವಾಗಿರಬೇಕು. ಆ ಸಮಯದಲ್ಲಿ ಅಧ್ಯಾತ್ಮದ ಕಡೆಗೆ ಹೆಚ್ಚೆಚ್ಚಾಗಿ ತಿರುಗಿದ ಶರೀಫರು ‘ಮಾಯವಾಗಿ ಹೋತು’ ಎಂದು ಹೇಳುತ್ತಾರೆ.
ಈ ‘ಮಾಯವಾಗಿ ಹೋತು’ ಎನ್ನುವ ವಾಕ್ಯ ಅನೇಕ ಅರ್ಥಗಳಿಂದ ಕೂಡಿದೆ. ಇದೀಗ ಹುಟ್ಟಿದ ಕೂಸು ಕೆಲವೇ ದಿನಗಳಲ್ಲಿ ಮಾಯವಾಗಿ ಹೋಯಿತು ಎನ್ನುವದು ಒಂದು ಅರ್ಥ. ಚುಚ್ಚಿದ ಮುಳ್ಳು ಮಾಯವಾಗಿ ಹೋಯಿತು ಎಂದು ತಿಳಿದರೆ ಸಂಸಾರದಲ್ಲಿ ಯಾವದೂ ಶಾಶ್ವತವಲ್ಲ; ಸುಖ ಹಾಗೂ ದುಃಖಗಳು ಬರುತ್ತವೆ ಹಾಗೂ ಹೋಗುತ್ತವೆ ಎನ್ನುವದು ಮತ್ತೊಂದುಅರ್ಥ. ಸಂಸಾರದಲ್ಲಿ ಮುಳುಗಿದ ಶರೀಫರಿಗೆ ಕವಿದ ಮೋಹದ ಮಾಯೆ ಮಾಯವಾಗಿ ಹೋಯಿತು ಎನ್ನುವದು ಮೂರನೆಯ ಅರ್ಥ.
ಇಂತಹ ದುಃಖದ ಅನುಭವದ ನಂತರ ಶರೀಫರು ಇದೀಗ ಕಣ್ಣು ತೆರೆದ ವ್ಯಕ್ತಿ. ಹೀಗಾಗಿ ಆ ಚೋಳನ್ನು ಕೇವಲ ಆಘಾತ ನೀಡುವ ಕರ್ಮಫಲವೆಂದು ತಿಳಿಯದೆ, ಜ್ಞಾನದ ಬೆಳಕು ನೀಡುವ ಶಕ್ತಿಯೆಂದು ಅವರು ಭಾವಿಸುತ್ತಾರೆ. ಈ ಚೋಳು ಕೇವಲ ಕಷ್ಟ ಕೊಡುವ ಚೋಳಲ್ಲ, ಕಷ್ಟದ ಮೂಲಕ ಪರಮಜ್ಞಾನದ ಕಡೆಗೆ ಮನಸ್ಸನ್ನು ತಿರುಗಿಸುವ ಚೋಳು ಎನ್ನುವದು ಅವರಿಗೆ ಅರಿವಾಗುತ್ತದೆ. ಅದರ ನಿಜಸ್ವರೂಪ ಅವರಿಗೆ ಈಗ ನಿಚ್ಚಳವಾಗತೊಡಗಿದೆ. ಈ ಗೂಢಾರ್ಥ ಅವರ ಮುಂದಿನ ನುಡಿಗಳಲ್ಲಿ ಸ್ಪಷ್ಟವಾಗಿದೆ.
“ಮೂರು ದೇಹದೊಳಗ ತಾನಿತ್ತ
ಪರಮಾತ್ಮನಾದದೊಳು ತಾನು ಬೆಳೆದಿತ್ತ
ಸಾರಿಬಂದು ಎನ್ನ ನೋಡುತ
ಮೂರು ಲೋಕ ಬೆಳಗು ಮೇಲು ಮೀರಿದುನ್ಮನಿ ಹಾರಿ ನಿಂತಿತು”
ಈ ಚೋಳು ಇರುವ ಮೂರು ದೇಹಗಳು ಅಂದರೆ ಸ್ಥೂಲ ಶರೀರ, ಸೂಕ್ಷ್ಮ ಶರೀರ ಹಾಗೂ ಕಾರಣಶರೀರಗಳು. ಸ್ಥೂಲಶರೀರವೆಂದರೆ ಯಾವುದೇ ಒಂದು ಜನ್ಮದಲ್ಲಿ ನಮಗಿರುವ ದೇಹ. ಸೂಕ್ಷ್ಮಶರೀರವೆಂದರೆ ವಾಸನಾಶರೀರ. ಇದು ಸ್ಥೂಲಶರೀರವು ನಾಶವಾದ ನಂತರವೂ ಉಳಿದಿರುವ ವಾಸನೆಗಳ ಹಾಗೂ ಕರ್ಮಫಲಗಳ ಶರೀರ. ಕಾರಣಶರೀರವೆಂದರೆ ಆತ್ಮವು ದೇಹವನ್ನು ಧರಿಸಲು ಬೇಕಾಗುವ ಮೂಲ ಪ್ರೇರಣಾ ಶರೀರ. ಈ ಮೂರೂ ದೇಹಗಳಲ್ಲಿ ಈ ಚೋಳು ಇರುತ್ತದೆ ಎಂದು ಶರೀಫರು ಹೇಳುತ್ತಾರೆ. ಅಂದರೆ, ಈ ಚೋಳು ನಮಗೆ ಹೊರಗಿನದಲ್ಲ, ನಮ್ಮಲ್ಲೇ ಸದಾಕಾಲ ಇರುವಂಥಾದ್ದು. ನಮ್ಮನ್ನು ತಪ್ಪು ಮಾರ್ಗದಿಂದ ಬಿಡಿಸಿ ಸನ್ಮಾರ್ಗಕ್ಕೆ ಹಚ್ಚುವಂಥಾದ್ದು. ಈ ಚೋಳಿಗೆ ಇರುವ ಸ್ವಭಾವ ಯಾವುದು ಎಂದರೆ ‘ಪರಮಾತ್ಮನಾದದೊಳು ತಾನು ಬೆಳೆದಿತ್ತ’.
ಯಾವಾಗಲೂ ಪರಮಾತ್ಮನನ್ನು ಚಿಂತಿಸುತ್ತ ಅದೇ ನಾದದಲ್ಲಿ, ಅದೇ ಧ್ಯಾನದಲ್ಲಿ ಇರುವ ಜೀವಿ ಇದು. ಹಾಗಿದ್ದರೆ ಇದಕ್ಕೆ ನೋವು ಕೊಡುವ ಕೊಂಡಿ ಏಕೆ ಇದೆ ಎಂದು ಕೇಳಬಹುದು. ಮನುಷ್ಯನಿಗೆ ನೋವಿನ ಅನುಭವವಾಗದೇ ಅವನ ಮನಸ್ಸು ಪರಮಾರ್ಥದ ಕಡೆಗೆ ಹೊರಳದು. ಆದುದರಿಂದ ನಮ್ಮ ಒಳಗೇ ಇರುವ ಈ ಜ್ಞಾನಶಕ್ತಿಯು ಚೋಳಿನ ರೂಪ ಧರಿಸಿರುತ್ತದೆ. ಸಕಾಲದಲ್ಲಿ ನೋವಿನ ಕೊಂಡಿಯಿಂದ ಚುಚ್ಚಿ, ನಮ್ಮನ್ನು ಎಚ್ಚರಕ್ಕೆ ತರುತ್ತದೆ. ಸರಿಯಾದ ಸಮಯದಲ್ಲಿ ಇದು ಸಾರಿ ಬಂದು ಅಂದರೆ ಧಾವಿಸಿ ಬಂದು, ಶರೀಫರನ್ನು ನೋಡಿತು. ಆ ಚೋಳು ನೋಡಿದ್ದೇ ಒಂದು ಅನುಗ್ರಹ! ಆ ಚೋಳಿನಲ್ಲಿರುವ ಬೆಳಕು ಎಂತಹದಂದರೆ, ಮೂರು ಲೋಕಗಳನ್ನೂ ಬೆಳಗುವ ಬೆಳಕು ಅದು. ಮೂರು ಲೋಕಗಳೆಂದರೆ ಸ್ವರ್ಗ, ಮರ್ತ್ಯ ಹಾಗೂ ಪಾತಾಳ. ಆತ್ಮವು ತನ್ನ ವಿವಿಧ ಅವಸ್ಥೆಗಳಲ್ಲಿ ಈ ಲೋಕಗಳಲ್ಲಿ ವಾಸಿಸುತ್ತದೆ. ಯಾವುದೇ ಲೋಕದಲ್ಲಿರಲಿ, ಅಲ್ಲಿ ಈ ಎಚ್ಚರಿಕೆ ನೀಡುವ ಚೋಳು ಆತ್ಮವನ್ನು ದಿಟ್ಟಿಸುತ್ತಲೇ ಇರುತ್ತದೆ. ಹಾಗು ಈ ಮೂರೂ ಲೋಕಗಳ ಮೇಲಿರುವ ಉನ್ಮನಿ ಅವಸ್ಥೆಯಲ್ಲಿ ಈ ಚೋಳು ಹಾರಿ ಐಕ್ಯವಾಗುತ್ತದೆ. (ಉನ್ಮನಿ ಅವಸ್ಥೆ ಎಂದರೆ ಸಾಧನೆಯ ಒಂದು ಅವಸ್ಥೆ. ಈ ಅವಸ್ಥೆಯಲ್ಲಿ ಸಾಧಕನ ಪ್ರಜ್ಞೆಯು ಲೋಕಸಾಮಾನ್ಯ ಸ್ಥಿತಿಯಲ್ಲಿ ಇರುವದಿಲ್ಲ. ಹೀಗಾಗಿ ಆ ವ್ಯಕ್ತಿಯು ಜನರ ಕಣ್ಣಿಗೆ ಹುಚ್ಚನಂತೆ ಕಾಣಬಹುದು. ರಾಮಕೃಷ್ಣ ಪರಮಹಂಸರು ಈ ಅವಸ್ಥೆಯಲ್ಲಿ ಇದ್ದಾಗ ಹುಚ್ಚರಂತೆ ವರ್ತಿಸುತ್ತಿದ್ದರು ಎಂದು ಹೇಳಲಾಗುತ್ತದೆ.)
ಈಗಿನ ಆಧುನಿಕ ಮನೆಗಳಲ್ಲಿ ಚೋಳು ಕಾಣಸಿಗುವದಿಲ್ಲ. ಆದರೆ ಮೊದಲು ಹಳ್ಳಿಗಳಲ್ಲಿ ಕಟ್ಟಿರುತ್ತಿದ್ದ ಮಣ್ಣಿನ ಮನೆಗಳಲ್ಲಿ ಇವು ಸಾಮಾನ್ಯವಾಗಿರುತ್ತಿದ್ದವು. ಮನೆಯ ಕೋಣೆಗಳ ಮೂಲೆಗಳಲ್ಲಿ ಇವು ಸಿಗುತ್ತಿದ್ದವು. ಶರೀಫರು ತಮ್ಮ ಈ ಚೋಳು ದೇವರ ಕೋಣೆಯ ಮೂಲೆಯೊಳಗಿತ್ತು ಎಂದು ಹೇಳುತ್ತಾರೆ. ಅಂದರೆ ಈ ಚೋಳನ್ನು ನೀವು ಕಾಣಬೇಕಾದರೆ ಅಥವಾ ಈ ಚೋಳಿನಿಂದ ಕಡಿಸಿಕೊಳ್ಳಬೇಕಾದರೆ, ದೇವರ ಕೋಣೆಯೊಳಗೆ ನೀವು ಪ್ರವೇಶಿಸಬೇಕು ಅರ್ಥಾತ್ ನಿಮ್ಮ ಮನಸ್ಸು ಪರಮಾತ್ಮದ ಕಡೆಗೆ ತಿರುಗಬೇಕು! ದೇವರ ಮನೆ ಎಂದರೆ ಮನುಷ್ಯನ ಮನಸ್ಸು ಎಂದೂ ಅರ್ಥವಾಗಬಹುದು. ಅಲ್ಲಿ ಈ ಚೋಳು ಆಧಾರ ಹಿಡಿದು ಕೊಂಡಿಯನ್ನು ಮೇಲ್ಮುಖವಾಗಿ ಮಾಡಿಕೊಂಡಿತ್ತು.
“ದೇವರಮನಿ ಮೂಲೆಯೊಳಗಿತ್ತು
ಆಧಾರ ಹಿಡಿದು ಊರ್ಧ್ವಮುಖದಿ ಕೊಂಡಿ ಮಾಡಿತ್ತು
ಕಾಲ ಕಳೆದು ಸ್ಥೂಲದೇಹದೊಳಗೆ ಮಲಗಿತ್ತು
ಕಲಿಕರ್ಮ ನುಂಗಿತ್ತು
ದೇವಶಿಶುನಾಳಧೀಶನ ಧ್ಯಾನದೊಳಗಾ ಚೋಳು ಇತ್ತು
ಕಚ್ಚುತಿರಲು ಎಚ್ಚರಾದಿತು, ಹುಚ್ಚು ಹಿಡಿದಂಗಾತು ”
ಶರೀಫರು ಈ ಸಾಲಿನಲ್ಲಿ ಯೋಗಸಾಧನೆಯ ಪರಿಭಾಷೆಯನ್ನು ಬಳಸುತ್ತಾರೆ. ಆಧಾರ ಎಂದರೆ ಮೂಲಾಧಾರ ಚಕ್ರ. ಅಲ್ಲಿ ಈ ಚೋಳು ಊರ್ಧ್ವಮುಖಿಯಾಗಿತ್ತು ಅಂದರೆ ಇದರ ಗಮನ ಮೂಲಾಧಾರದ ಮೇಲಿರುವ ಚಕ್ರಗಳತ್ತ ಇದೆ. (ಮೂಲಾಧಾರದ ಮೇಲಿನ ಚಕ್ರಗಳು ಹೀಗಿವೆ: ಸ್ವಾಧಿಸ್ಠಾನ, ಮಣಿಪೂರ, ಅನಾಹತ, ವಿಶುದ್ಧಿ ಹಾಗೂ ಆಜ್ಞಾಚಕ್ರ.) ಸಾಧಕನನ್ನು ಮೇಲ್ಮುಖವಾಗಿ ಕರೆದೊಯ್ಯುವ ಶಕ್ತಿ ಇದು. ತನ್ನ ಸಮಯ ಬರುವವರೆಗೆ ಇದು ಸ್ಥೂಲದೇಹದಲ್ಲಿ ಅಂದರೆ ಜ್ಞಾನವಿಹೀನ ದೇಹದಲ್ಲಿ ನಿದ್ರಿಸುತ್ತಿರುತ್ತದೆ. (ಕುಂಡಲಿನಿ ಶಕ್ತಿಯು ಮೂಲಾಧಾರದಲ್ಲಿ ಸರ್ಪರೂಪದಲ್ಲಿ ಮಲಗಿರುತ್ತದೆ ಎನ್ನುವದು ಯೋಗಶಾಸ್ತ್ರದ ಪರಿಭಾಷೆ.) ಹಾಗೂ ಕಲಿಕರ್ಮವನ್ನು ಅಂದರೆ ದುಷ್ಕರ್ಮಗಳನ್ನು ನುಂಗುತ್ತ ತಕ್ಕ ಸಮಯಕ್ಕಾಗಿ ಕಾಯುತ್ತಿತ್ತು. ಸಮಯ ಬರುವ ವರೆಗೂ ಈ ಚೋಳು ಪರಮಾತ್ಮನ ಧ್ಯಾನದಲ್ಲಿಯೇ ಮಗ್ನವಾಗಿತ್ತು. ಅರ್ಥಾತ್ ಪರಮಾತ್ಮನ ಹೊರತಾಗಿ ಈ ಶಕ್ತಿಗೆ ಮತ್ತೇನೂ ಬೇಕಾಗಿಲ್ಲ. ಅಂತಹ ಚೈತನ್ಯ ವು ಕುಟುಕಿದಾಗ, ಶರೀಫರು ತಮಗೆ ಎಚ್ಚರಾಯಿತು, ಅಷ್ಟೇ ಅಲ್ಲ ಹುಚ್ಚು ಹಿಡಿದ ಹಾಗಾಯಿತು ಎಂದು ಹೇಳುತ್ತಾರೆ.
ಪರಮಾರ್ಥದ ಜ್ಞಾನ ದೊರೆತ ಬಳಿಕ ಜೀವಿಯು ಪರಮಾತ್ಮನ ಹುಚ್ಚಿನಲ್ಲಿ ಮುಳುಗುವದು ಸಹಜವೇ ಆಗಿದೆ!
[ಟಿಪ್ಪಣಿ:
ಪರಮಾರ್ಥದ ಜ್ಞಾನಕ್ಕಾಗಿ ನೋವಿನ ಅನುಭವ ಅನಿವಾರ್ಯವೇನೊ? ಕರ್ನಾಟಕದ ಇನ್ನಿಬ್ಬರು ಸಂತರ ಬಾಳಿನಲ್ಲಿಯೂ ಇಂತಹ ವಿಷಾದಕರ ಘಟನೆಗಳು ನಡೆದಿವೆ. ಮೊದಲನೆಯವರು ಬಸವಣ್ಣ. ತಮ್ಮ ಮಗ ಸಂಗಬಸವಣ್ಣ ನಿಧನ ಹೊಂದಿದಾಗ ಅವರು ಉದ್ಗರಿಸಿದ ವಚನ ಹೀಗಿದೆ:
“ಪಕ್ವವಾದ ಫಲವಿರಲು ಕಸುಕಾಯನೆತ್ತಿಕೊಂಡನು ಶಿವನು”.
ಪರಮಾತ್ಮನು ವಯಸ್ಸಾದ ತನಗೆ ಸಾವು ಕೊಡುವ ಬದಲು ಚಿಕ್ಕ ಬಾಲಕನಿಗೆ ಸಾವು ಕೊಟ್ಟನಲ್ಲ ಎನ್ನುವ ಈ ವಚನದಲ್ಲಿ ವ್ಯಕ್ತವಾಗುವ anguish ಹಾಗೂ resignation to God’s will ಇವು ಬೇರೆ ಯಾವ ಭಾಷೆಯ ಸಾಹಿತ್ಯದಲ್ಲೂ ಸಿಗಲಿಕ್ಕಿಲ್ಲ.
ಎರಡನೆಯವರು ಪುರಂದರದಾಸರು. ತಮ್ಮ ಮಗನ ಮರಣದ ಸಂದರ್ಭದಲ್ಲಿ ಇವರು ಹಾಡಿದ ಗೀತೆಯೂ ಸಹ ಶೋಕರಸದ ಅನನ್ಯ ಗೀತೆಯಾಗಿದೆ:
“ಗಿಳಿಯು ಪಂಜರದೊಳಿಲ್ಲ
ಬರಿದೆ ಪಂಜರವಾಯಿತಲ್ಲ!”]
Friday, July 3, 2009
Wednesday, June 24, 2009
‘ಹಕ್ಕಿ ಹಾರುತಿದೆ ನೋಡಿದಿರಾ?’
‘ಹಕ್ಕಿ ಹಾರುತಿದೆ ನೋಡಿದಿರಾ?’ ಇದು ಬೇಂದ್ರೆಯವರ ಸುಪ್ರಸಿದ್ಧ ಕವನ. ೧೯೨೯ನೆಯ ಇಸವಿಯಲ್ಲಿ ಬೆಳಗಾವಿಯಲ್ಲಿ ಜರುಗಿದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೇಂದ್ರೆಯವರು ಈ ಕವನವನ್ನು ಹಾಡಿದರು. ಬೇಂದ್ರೆಯವರ ಉತ್ತರ ಕರ್ನಾಟಕದ ವೇಷ-ಭೂಷ, ಅವರ ಹಾವಭಾವ ಹಾಗೂ ಹಾಡುಗಾರಿಕೆಯ ಗತ್ತು ಇವುಗಳಿಂದ ನೆರೆದ ಸಭಿಕರೆಲ್ಲ ಮಂತ್ರಮುಗ್ಧರಾದರಂತೆ. ಆನಂತರ ೧೯೩೨ರಲ್ಲಿ ಪ್ರಕಟವಾದ ಅವರ ಪ್ರಥಮ ಕವನ ಸಂಕಲನ ’ಗರಿ’ಯಲ್ಲಿ ಈ ಕವನ ಸೇರ್ಪಡೆಯಾಯಿತು.
ಕವನದ ಪೂರ್ತಿಪಾಠ ಹೀಗಿದೆ:
ಇರುಳಿರಳಳಿದು ದಿನದಿನ ಬೆಳಗೆ
ಸುತ್ತಮುತ್ತಲೂ ಮೇಲಕೆ ಕೆಳಗೆ
ಗಾವುದ ಗಾವುದ ಗಾವುದ ಮುಂದಕೆ
ಎವೆ ತೆರೆದಿಕ್ಕುವ ಹೊತ್ತಿನ ಒಳಗೆ
ಹಕ್ಕಿ ಹಾರುತಿದೆ ನೋಡಿದಿರಾ?
ಕರಿನೆರೆ ಬಣ್ಣದ ಪುಚ್ಚಗಳುಂಟು
ಬಿಳಿ-ಹೊಳೆ ಬಣ್ಣದ ಗರಿ-ಗರಿಯುಂಟು
ಕೆನ್ನನ ಹೊನ್ನನ ಬಣ್ಣಬಣ್ಣಗಳ
ರೆಕ್ಕೆಗಳೆರಡೂ ಪಕ್ಕದಲುಂಟು
ಹಕ್ಕಿ ಹಾರುತಿದೆ ನೋಡಿದಿರಾ?
ನೀಲಮೇಘಮಂಡಲ-ಸಮ ಬಣ್ಣ !
ಮುಗಿಲಿಗೆ ರೆಕ್ಕೆಗಳೊಡೆದವೊ ಅಣ್ಣಾ !
ಚಿಕ್ಕೆಯ ಮಾಲೆಯ ಸೆಕ್ಕಿಸಿಕೊಂಡು
ಸೂರ್ಯ-ಚಂದ್ರರನು ಮಾಡಿದೆ ಕಣ್ಣಾ
ಹಕ್ಕಿ ಹಾರುತಿದೆ ನೋಡಿದಿರಾ?
ರಾಜ್ಯದ ಸಾಮ್ರಾಜ್ಯದ ತೆನೆ ಒಕ್ಕಿ
ಮಂಡಲ-ಗಿಂಡಲಗಳ ಗಡ ಮುಕ್ಕಿ
ತೇಲಿಸಿ ಮುಳುಗಿಸಿ ಖಂಡ-ಖಂಡಗಳ
ಸಾರ್ವಭೌಮರಾ ನೆತ್ತಿಯ ಕುಕ್ಕಿ
ಹಕ್ಕಿ ಹಾರುತಿದೆ ನೋಡಿದಿರಾ?
ಯುಗ-ಯುಗಗಳ ಹಣೆಬರಹವ ಒರಸಿ
ಮನ್ವಂತರಗಳ ಭಾಗ್ಯವ ತೆರೆಸಿ
ರೆಕ್ಕೆಯ ಬೀಸುತ ಚೇತನೆಗೊಳಿಸಿ
ಹೊಸಗಾಲದ ಹಸುಮಕ್ಕಳ ಹರಸಿ
ಹಕ್ಕಿ ಹಾರುತಿದೆ ನೋಡಿದಿರಾ?
ಬೆಳ್ಳಿಯ ಹಳ್ಳಿಯ ಮೇರೆಯ ಮೀರಿ
ತಿಂಗಳೂರಿನ ನೀರನು ಹೀರಿ
ಆಡಲು ಹಾಡಲು ತಾ ಹಾರಾಡಲು
ಮಂಗಳಲೋಕದ ಅಂಗಳಕೇರಿ
ಹಕ್ಕಿ ಹಾರುತಿದೆ ನೋಡಿದಿರಾ?
ಮುಟ್ಟಿದೆ ದಿಗ್ಮಂಡಲಗಳ ಅಂಚ
ಆಚೆಗೆ ಚಾಚಿದೆ ತನ್ನಯ ಚುಂಚ
ಬ್ರಹ್ಮಾಂಡಗಳನು ಒಡೆಯಲು ಎಂದೊ
ಬಲ್ಲರು ಯಾರಾ ಹಾಕಿದ ಹೊಂಚ
ಹಕ್ಕಿ ಹಾರುತಿದೆ ನೋಡಿದಿರಾ?
ಬೇಂದ್ರೆಯವರು ಈ ಕವನದಲ್ಲಿ ಕಾಲವನ್ನು ಹಾರುತ್ತಿರುವ ಹಕ್ಕಿಗೆ ಹೋಲಿಸಿದ್ದಾರೆ. ಈ ಕವನದ ಮೊದಲ ನುಡಿಯಲ್ಲಿ ಕಾಲಪಕ್ಷಿಯನ್ನು ಪರಿಚಯಿಸುವ ವಿಧಾನ ತುಂಬಾ ಸ್ವಾರಸ್ಯಕರವಾಗಿದೆ.
`ಇರುಳು ಅಳಿದು ದಿನವಾಗುವದು'-- ಇದು ಒಂದು ದಿನದ ಕಾಲಮಾನವನ್ನು ಸೂಚಿಸುತ್ತದೆ.
‘ಇರುಳು ಇರುಳು ಅಳಿದು ದಿನದಿನ ಬೆಳಗೆ’ ಅನ್ನುವದು ಈ ಕಾಲಮಾನದ recurrence.
ಈ ರೀತಿಯಾಗಿ ಮೊದಲನೆಯ ಸಾಲಿನ ಮೂಲಕ ಬೇಂದ್ರೆಯವರು ಒಂದು ಚಲನಶೀಲ ಕಾಲವನ್ನು ನಮ್ಮ ಕಣ್ಣೆದುರಿಗೆ ಮೂಡಿಸುತ್ತಾರೆ.
ಈಗ ಕವನದ ಮುಂದಿನ ಸಾಲನ್ನು ನೋಡಿರಿ:
‘ಸುತ್ತಮುತ್ತಲೂ ಮೇಲಕೆ ಕೆಳಗೆ’ ಎನ್ನುವ ಸಾಲು ‘ಅವಕಾಶ’ದ (space) ಮೂರು ಆಯಾಮಗಳನ್ನು (3 co-ordinates) ಬಣ್ಣಿಸುತ್ತದೆ.
ಅಂದರೆ ಈ ಕಾಲವು ‘ವಿಶ್ವವ್ಯಾಪಿ ಕಾಲ’ವಾಯಿತು !
ಕಾಲಪಕ್ಷಿಯ ಬೃಹತ್ ರೂಪವನ್ನು ಈ ರೀತಿಯಾಗಿ ಬೇಂದ್ರೆ ನಿರೂಪಿಸಿದ್ದಾರೆ.
ಈ ಕಾಲಪಕ್ಷಿಯ ಗತಿ ಎಂತಹದು?
‘ಗಾವುದ ಗಾವುದ ಗಾವುದ ಮುಂದಕೆ’!
‘ಮುಂದಕೆ’ ಎಂದು ಹೇಳುವ ಮೂಲಕ ಈ ಕಾಲಪಕ್ಷಿಯು ಕೇವಲ ಗತಿಶೀಲವಲ್ಲ, ಪ್ರ-ಗತಿಶೀಲವೂ ಹೌದು ಎಂದು ಬೇಂದ್ರೆ ಸೂಚಿಸುತ್ತಾರೆ.
ಈ ಗಾವುದ ದೂರವನ್ನು ಚಲಿಸಲು ಈ ಪಕ್ಷಿಗೆ ಬೇಕಾಗುವ ಸಮಯ ಮಾತ್ರ ‘ಎವೆ ತೆರೆದಿಕ್ಕುವ ಹೊತ್ತು’.
ಕೇವಲ ಕಣ್ಣು ಮಿಟುಕಿಸುವ ಸಮಯದಲ್ಲಿ ಈ ಕಾಲಪಕ್ಷಿ ಸುದೂರ ಗಮಿಸಬಲ್ಲದು.
ಸಮಯದ ಅತ್ಯಂತ ಚಿಕ್ಕ ಅಳತೆ ಯಾವುದು ಎಂದರೆ ‘ನಿಮಿಷ’. ಭಾರತೀಯರು ಪೂರ್ವಕಾಲದಿಂದಲೂ ಬಳಸುತ್ತಿದ್ದ ಕಾಲಮಾನ ಇದು. ‘ನಿಮಿಷ’ವನ್ನು ಅಳೆಯುವ ಬಗೆ ಹೇಗೆ? ಕಣ್ಣರೆಪ್ಪೆಯನ್ನು ಬಡಿಯುವ ಕಾಲಮಾನಕ್ಕೆ ‘ನಿಮಿಷ’ ಎನ್ನುತ್ತಾರೆ. ಆದುದರಿಂದ ‘ಎವೆ ತೆರೆದಿಕ್ಕುವ ಹೊತ್ತಿನ ಒಳಗೆ’ ಈ ಪದಪುಂಜದ ಅರ್ಥ=ನಿಮಿಷ. ಇದೇ least unit of time. ಆದುದರಿಂದ ಅತಿ ಚಿಕ್ಕ ಕಾಲಮಾನದಲ್ಲಿ ಈ ಹಕ್ಕಿ ಗಾವುದ ದೂರಕ್ಕೆ ಚಲಿಸಬಲ್ಲದು. ಕಲ್ಪನೆಯಂತೆ ಕಾಣುವ ಪದದಲ್ಲಿ ವಾಸ್ತವತೆಯನ್ನು ಹಿಡಿದಿಡುವ ಬೇಂದ್ರೆ-ಪ್ರತಿಭೆಯನ್ನು ಈ ಸಾಲಿನಲ್ಲಿ ನಾವು ಕಾಣುತ್ತೇವೆ.
(ದೇವತೆಗಳು ಕಣ್ಣು ಮುಚ್ಚುವದಿಲ್ಲ ಅಂದರೆ ಕಣ್ಣರೆಪ್ಪೆ ಬಡೆಯುವದಿಲ್ಲ ; ಆದುದರಿಂದ ಅವರು ‘ಅನಿಮೇಷ’ರು.)
ಈಗ ಈ ನುಡಿಯ ಮತ್ತೊಂದು ಆಯಾಮವನ್ನು ನೋಡೋಣ.
ವಿಶ್ವವನ್ನು ವ್ಯಾಪಿಸಿರುವ ಈ ಕಾಲಪಕ್ಷಿ ತನ್ನ ಚಲನೆಯ ಮೂಲಕ ವಿಶ್ವವನ್ನು ಅಂದರೆ ದೇಶವನ್ನು ಬದಲಾವಣೆಗೆ ಒಳಪಡಿಸುತ್ತದೆ. ಇದೇ ಮಾತನ್ನು ವಿಜ್ಞಾನಿ ಐನ್ಸ್ಟೈನ್ ‘ಕಾಲ ಮತ್ತು ದೇಶ ಇವೆರಡು ಸಾಪೇಕ್ಷವಾಗಿವೆ’ ಎನ್ನುವ ಮೂಲಕ ತಿಳಿಸಿದರು. (Relativity of space and time.)
ಶಂಕರಾಚಾರ್ಯರೂ ಇದೇ ಮಾತನ್ನು ‘ಮಾಯಾಕಲ್ಪಿತ ದೇಶ,ಕಾಲ ಕಲನಾ’ ಎಂದು philosophically ಹೇಳಿದ್ದಾರೆ (=ದೇಶ ಮತ್ತು ಕಾಲ ಇವು ಕೇವಲ ಭ್ರಮೆ.)
ಆದುದರಿಂದ ಬೇಂದ್ರೆಯವರ ಈ ಕಾಲಪಕ್ಷಿ ಕೇವಲ ಸಮಯದ ಪಕ್ಷಿ ಅಲ್ಲ. ವಿಶ್ವವನ್ನೇ ತನ್ನ ಚಲನೆಯಲ್ಲಿ ಬದಲಾಯಿಸುತ್ತಿರುವ ಬೃಹತ್ ಚೈತನ್ಯಪಕ್ಷಿ!
ಎರಡನೆಯ ನುಡಿಯಲ್ಲಿ ಬೇಂದ್ರೆಯವರು ಈ ಚೈತನ್ಯರೂಪಿ ಕಾಲಪಕ್ಷಿಯ ಭೌತಿಕ ವಿವರಗಳನ್ನು ಕೊಡುತ್ತಾರೆ:
ಕರಿನೆರೆ ಬಣ್ಣದ ಪುಚ್ಚಗಳುಂಟು
ಬಿಳಿ-ಹೊಳೆ ಬಣ್ಣದ ಗರಿ-ಗರಿಯುಂಟು
ಕೆನ್ನನ ಹೊನ್ನನ ಬಣ್ಣ-ಬಣ್ಣಗಳ
ರೆಕ್ಕೆಗಳೆರಡೂ ಪಕ್ಕದಲುಂಟು
ಹಕ್ಕಿ ಹಾರುತಿದೆ ನೋಡಿದಿರಾ?
ಈ ನುಡಿಯನ್ನು ಎರಡು ರೀತಿಯಲ್ಲಿ ಅರ್ಥೈಸಬಹುದು:
ಪುಚ್ಚ ಅಂದರೆ ಬಾಲ. ಇದು ಹಕ್ಕಿಯ ಹಿಂದಿರುತ್ತದೆ. ಇದು ಭೂತಕಾಲ. ಆದುದರಿಂದ ಇದರ ಬಣ್ಣ ಕರಿ.
ಈಗ ಕಣ್ಣಿಗೆ ಕಾಣುತ್ತಿರುವ , ಹೊಳೆಯುತ್ತಿರುವ ಗರಿಯ ಬಣ್ಣ ಬಿಳಿ. ಆದುದರಿಂದ ಇದು ವರ್ತಮಾನ ಕಾಲ. ನಮಗೆ ಮುಂದೆ ಕಾಣುವದು ಭವಿಷ್ಯತ್ ಕಾಲ. ಇದು ಉದಯಿಸುತ್ತಿರುವ ಸೂರ್ಯನ ಹಾಗೆ ಕೆಂಪಾಗಿ ಹಾಗೂ ಬಂಗಾರ ಬಣ್ಣದ್ದಾಗಿರುತ್ತದೆ. ಈ ಮೂರೂ ಕಾಲಗಳು ಕಾಲಪಕ್ಷಿಯ ಚಲನೆಯ ಅಂಶಗಳು.
ಎರಡನೆಯದಾಗಿ, ನಮ್ಮ ಪೃಥ್ವಿಯ ಮೇಲಿನ ಜನಾಂಗಗಳನ್ನು ಗಮನಿಸಿರಿ: ಕರಿಯ ಬಣ್ಣದ ಆಫ್ರಿಕನ್ ಜನಾಂಗ, ಬಿಳಿಯ ಬಣ್ಣದ ಕಾ^ಕೇಸಿಯನ್ ಜನಾಂಗ, ಇವೆರಡರ ನಡುವಿನ ಕೆನ್ನನ ಅಂದರೆ brownie ಜನಾಂಗ ಹಾಗೂ ಕೊನೆಯದಾಗಿ ಹಳದಿ ಬಣ್ಣದ ಅಂದರೆ ಹೊನ್ನ ಬಣ್ಣದ ಮಂಗೋಲಿಯನ್ ಜನಾಂಗ.
ಈ ಎಲ್ಲ ಜನಾಂಗಗಳನ್ನು ಈ ಕಾಲಪಕ್ಷಿ ಹೊತ್ತುಕೊಂಡು ಮುನ್ನಡೆದಿದೆ ಎಂದೂ ಅರ್ಥೈಸಬಹುದು.
ಇಂತಹ ಒಂದು ಬೃಹತ್ ಪಕ್ಷಿ ನೋಡಲು ಹೇಗೆ ಕಾಣುತ್ತಿರಬಹುದು?
ಇದರ ಹರಹು ಪೃಥ್ವಿಯನ್ನಷ್ಟೇ ಅಲ್ಲ, ನಮ್ಮ ಆಕಾಶಗಂಗೆಯನ್ನೂ (milky way) ದಾಟಿದೆ. ಬೇಂದ್ರೆ ಇದರ ಅನಂತ ವೈಶಾಲ್ಯವನ್ನು ಹೀಗೆ ಬಣ್ಣಿಸುತ್ತಾರೆ :
ನೀಲಮೇಘಮಂಡಲ-ಸಮ ಬಣ್ಣ !
ಮುಗಿಲಿಗೆ ರೆಕ್ಕೆಗಳೊಡೆದವೊ ಅಣ್ಣಾ !
ಚಿಕ್ಕೆಯ ಮಾಲೆಯ ಸೆಕ್ಕಿಸಿಕೊಂಡು
ಸೂರ್ಯ-ಚಂದ್ರರನು ಮಾಡಿದೆ ಕಣ್ಣಾ
ಹಕ್ಕಿ ಹಾರುತಿದೆ ನೋಡಿದಿರಾ?
ಆಕಾಶ ಅನಂತವಾದದ್ದು. ಅದರ ಬಣ್ಣ ಈ ಕಾಲಪಕ್ಷಿಯದು, ಅಂದರೆ ಕಾಲವೂ ಸಹ ಅನಂತವೇ. ಆ ಅನಂತವಾದ ಆಕಾಶಕ್ಕೆ ರೆಕ್ಕೆ ಒಡೆದರೆ ಹೇಗಿರಬೇಡ!? ಅಂತಹ ಈ ಕಾಲಪಕ್ಷಿಯು ಚಿಕ್ಕೆಗಳ ಮಾಲೆಯನ್ನು ಅಂದರೆ ಆಕಾಶಗಂಗೆಯೇ(=milky way) ಮೊದಲಾದ ವಿಶ್ವಗಳನ್ನು (=galaxies) ಸೆಕ್ಕಿಸಿಕೊಂಡಿದೆ.
ಬೇಂದ್ರೆಯವರು ‘ಸಿಕ್ಕಿಸಿಕೊಂಡಿದೆ’ ಎಂದು ಹೇಳಿಲ್ಲ . ಸೆಕ್ಕಿಸಿಕೊಂಡಿದೆ ಎಂದು ಹೇಳಿದ್ದಾರೆ. ಸೆಕ್ಕಿಸಿಕೊಳ್ಳುವದು ಅಂದರೆ ದಿಮಾಕಿನಿಂದ ಸಿಕ್ಕಿಸಿಕೊಳ್ಳುವದು.
ಈ ಕಾಲಪಕ್ಷಿಯ ಕಣ್ಣುಗಳು ಸೂರ್ಯ ಹಾಗೂ ಚಂದ್ರ ಎನ್ನುವ ಎರಡು ಪ್ರಭಾಬಿಂಬಗಳು. ಸೂರ್ಯ ಹಾಗೂ ಚಂದ್ರರನ್ನು ನಾವು ಕಾಲಗಣನೆಗೆ ಬಳಸುತ್ತೇವೆ. ಆದುದರಿಂದ ಈ ಪ್ರಭಾಬಿಂಬಗಳು ಕಾಲಪಕ್ಷಿಯ ಕಣ್ಣುಗಳು ಎಂದು ಹೇಳುವದು ಯಥಾರ್ಥವಾಗಿದೆ.
ಇಂತಹ ಅದ್ಭುತ ನೋಟದ ಈ ಕಾಲಪಕ್ಷಿಯು ಮಾಡುತ್ತಿರುವದೇನು?
ಅದನ್ನು ನಾಲ್ಕನೆಯ ನುಡಿಯಲ್ಲಿ ಬೇಂದ್ರೆಯವರು ಈ ರೀತಿಯಾಗಿ ಬಣ್ಣಿಸುತ್ತಾರೆ:
ರಾಜ್ಯದ ಸಾಮ್ರಾಜ್ಯದ ತೆನೆ ಒಕ್ಕಿ
ಮಂಡಲ-ಗಿಂಡಲಗಳ ಗಡ ಮುಕ್ಕಿ
ತೇಲಿಸಿ ಮುಳುಗಿಸಿ ಖಂಡ-ಖಂಡಗಳ
ಸಾರ್ವಭೌಮರಾ ನೆತ್ತಿಯ ಕುಕ್ಕಿ
ಹಕ್ಕಿ ಹಾರುತಿದೆ ನೋಡಿದಿರಾ?
ಸಣ್ಣ ಪುಟ್ಟ ರಾಜ್ಯಗಳನ್ನು, ದೊಡ್ಡ ದೊಡ್ಡ ಸಾಮ್ರಾಜ್ಯಗಳನ್ನು ಹುಟ್ಟಿಸಿ ಬೆಳೆಯಿಸುವದೇ ಈ ಕಾಲಪಕ್ಷಿ. ಅವುಗಳ ತೆನೆ ಒಕ್ಕುವದು ಅಂದರೆ ಅವುಗಳ ಫಲಿತವನ್ನು harvest ಮಾಡುವದು ಈ ಕಾಲಪಕ್ಷಿ. ಈ ತರಹ ಬೆಳೆದು ನಿಂತ ತೆನೆಗಳನ್ನು ಮುಕ್ಕುವದೂ ಸಹ ಈ ಕಾಲಪಕ್ಷಿಯೇ! (ಸುಗ್ಗಿಯ ಸಮಯದಲ್ಲಿ ಹಕ್ಕಿಗಳು ಹೊಲದಲ್ಲಿಯ ಕಾಳುಗಳನ್ನು ಮುಕ್ಕುವದನ್ನು ನೆನಪಿಸಿಕೊಳ್ಳಿರಿ.) ಭೂಮಂಡಲವೆಲ್ಲ ಈ ಹಕ್ಕಿಯ ಆಹಾರವೇ. ಧರಣಿಮಂಡಲದಲ್ಲಿರುವ ಏಳೂ ಖಂಡಗಳನ್ನು ಈ ಹಕ್ಕಿ ತೇಲಿಸುತ್ತದೆ ಹಾಗೂ ಮುಳುಗಿಸುತ್ತದೆ. ಒಂದು ಕಾಲದಲ್ಲಿ ಏಶಿಯಾ ಖಂಡ ಎಲ್ಲಕ್ಕೂ ಮೇಲೆ ತೇಲುತ್ತಿತ್ತು,ಇದೀಗ ಯುರೋಪ ಹಾಗೂ ಅಮೇರಿಕಾ ಖಂಡಗಳು ಮೇಲೆದ್ದಿವೆ!
(ಭೌತಿಕವಾಗಿಯೂ ಸಹ ಇಡೀ ಭೂಪ್ರದೇಶವು ಮೊದಲು ಗೊಂಡವನ ಖಂಡವೆನ್ನುವ ಒಂದೇ ಭೂಮಿಯಾಗಿದ್ದು, ಅನಂತರ ತುಂಡಾಗಿ ಏಳು ಖಂಡಗಳಾದವು.)
ಈ ಖಂಡಗಳಿಗೆ ತಾವು ಸಾರ್ವಭೌಮರೆಂದುಕೊಂಡು ಬೀಗುತ್ತಿರುವವರ ನೆತ್ತಿಯನ್ನು ಕುಕ್ಕಿ ಅವರ ಅಹಂಕಾರವನ್ನು ಈ ಕಾಲಪಕ್ಷಿ ಮೆಟ್ಟಿ ನಿಂತಿದೆ.
(ಸ್ವಾತಂತ್ರ್ಯಪೂರ್ವದಲ್ಲಿ ಬ್ರಿಟಿಶ್ ಸಾಮ್ರಾಟರನ್ನು ಅಣಕಿಸುವ ಈ ಸಾಲುಗಳನ್ನು ಬರೆಯಲು ಯಾವುದೇ ಕವಿಗೂ ಅಪಾರ ಧೈರ್ಯ ಬೇಕು. ಸಾಹಿತ್ಯಸಮ್ಮೇಳನದಲ್ಲಿ ಈ ಕವನವನ್ನು ಕೇಳುತ್ತಿದ್ದ ಬಿ.ಎಮ್.ಶ್ರೀಕಂಠಯ್ಯನವರು ಗಾಬರಿಗೊಂಡರೆಂದು ದಾಖಲೆಗಳಿವೆ.)
ಈ ವಿಶ್ವ, ಈ ಭೂಮಿ, ಭೂಮಿಯ ಮೇಲಿನ ಜೀವಜಂತುಗಳು ಇವೆಲ್ಲವುಗಳ ಉಗಮವಾಗಿ ಯಾವ ಕಾಲವಾಯಿತೊ? ಹೊಸ ಯುಗಕ್ಕೊಮ್ಮೆ ಆ ಯುಗದ ಹಣೆಬರಹವನ್ನು ಬರೆಯುವದು, ಹಳೆಯ ಯುಗದ ಹಣೆಬರಹವನ್ನು ಒರೆಸುವದು ಈ ಕಾಲಪಕ್ಷಿಯ ಕೆಲಸ. ಭೂಮಿಯ ಮೇಲಿನ ಶಿಲಾಯುಗ, ಧಾತುಯುಗ, ಪರಮಾಣುಯುಗ ಇವೆಲ್ಲ ಕಾಲದ ಅಧೀನವೇ.
ಆದುದರಿಂದ ಈ ಕಾಲಪಕ್ಷಿಯ ಮಹಿಮೆ ಅಪಾರ. ಅದು ಯುಗ-ಯುಗಗಳನ್ನು, ಮನ್ವಂತರಗಳನ್ನು ತನ್ನ ಆಧೀನದಲ್ಲಿಟ್ಟುಕೊಂಡಿದೆ:
ಯುಗ-ಯುಗಗಳ ಹಣೆಬರಹವ ಒರಸಿ
ಮನ್ವಂತರಗಳ ಭಾಗ್ಯವ ತೆರೆಸಿ
ರೆಕ್ಕೆಯ ಬೀಸುತ ಚೇತನೆಗೊಳಿಸಿ
ಹೊಸಗಾಲದ ಹಸುಮಕ್ಕಳ ಹರಸಿ
ಹಕ್ಕಿ ಹಾರುತಿದೆ ನೋಡಿದಿರಾ?
ಕಾಲಪಕ್ಷಿಯ ಕೆಲಸ ಕೇವಲ ವಿನಾಶಕಾರಿಯಲ್ಲ. ಹೊಸ ಮನ್ವಂತರದ ಶುಭೋದಯವಾಗುವದು ಈ ಕಾಲಪಕ್ಷಿಯಿಂದಲೇ. ಯಾಕೆಂದರೆ ತನ್ನ ರೆಕ್ಕೆಗಳನ್ನು ಬೀಸುವ ಮೂಲಕ ಪ್ರಾಣವಾಯುವನ್ನು ಕೊಟ್ಟು ಈ ನಿರ್ಜೀವ (inanimate) ಮನ್ವಂತರಗಳನ್ನು ಚೇತನಗೆ ಒಳಪಡಿಸುವದು ಅಂದರೆ ಸಜೀವಗೊಳಿಸುವದು ಈ ಕಾಲಪಕ್ಷಿ. ನಮ್ಮ ಭೂಮಂಡಲದಲ್ಲಿ ಜರುಗಿದ ಸಾಂಸ್ಕೃತಿಕ ಬದಲಾವಣೆಗಳು, ಪುನಶ್ಚೇತನಗಳು (Renaissances) ಎಲ್ಲವೂ ಈ ಕಾಲಪಕ್ಷಿಯ ಮಹಿಮೆಯೇ! ಹೊಸ ಕಾಲದ ಎಳೆಯ ಮಕ್ಕಳಿಗೆ ಹಾರೈಸಿ ಬೆಳೆಸುವದು ಈ ಕಾಲಪಕ್ಷಿಯೇ. ಇದನ್ನೆಲ್ಲ ಪರಿವೀಕ್ಷಿಸುವ ಕಣ್ಣು ನಮಗೆ ಬೇಕು. ಅಂತಲೇ ಬೇಂದ್ರೆ ನಮ್ಮನ್ನು ಕೇಳುತ್ತಿದ್ದಾರೆ:
“ಹಕ್ಕಿ ಹಾರುತಿದೆ ನೋಡಿದಿರಾ?”
ಮಾನವ ದೃಷ್ಟಿ ತತ್ಕಾಲಕ್ಕೆ ಸೀಮಿತವಾಗಿರುತ್ತದೆ. ಆದರೆ ಕವಿಯ ನೋಟ ಕಾಲಾತೀತ, ದೇಶಾತೀತ.
ಮುಂದಿನ ನುಡಿಯಲ್ಲಿ ಬೇಂದ್ರೆಯವರು ಕಾಲಪಕ್ಷಿಯ ಲಾಘವದ ಭವಿಷ್ಯ ನುಡಿಯುತ್ತಿದ್ದಾರೆ:
ಬೆಳ್ಳಿಯ ಹಳ್ಳಿಯ ಮೇರೆಯ ಮೀರಿ
ತಿಂಗಳೂರಿನ ನೀರನು ಹೀರಿ
ಆಡಲು ಹಾಡಲು ತಾ ಹಾರಾಡಲು
ಮಂಗಳಲೋಕದ ಅಂಗಳಕೇರಿ
ಹಕ್ಕಿ ಹಾರುತಿದೆ ನೋಡಿದಿರಾ?
ಕಾಲದ ಓಟದಲ್ಲಿ ಬೆಳ್ಳಿ ಅಂದರೆ ಶುಕ್ರಗ್ರಹವು ಮನುಷ್ಯನಿಗೆ ಕೇವಲ ಹಳ್ಳಿಯಾಗಬಹುದು, ಚಂದ್ರಲೋಕವು ಬರಿ ಊರಾಗಬಹುದು ಹಾಗೂ ಮಂಗಳಲೋಕವು ಭೂಮಿಗೆ ಅಂಗಳವಾಗಬಹುದು. ಮಾನವನಿಗೆ ಈ ಆಕಾಶಕಾಯಗಳು ಆಡಲು, ಹಾಡಲು ಹಾಗೂ ಹಾರಾಡಲು platforms ಆಗಬಹುದು!
ಮಾನವನು ಭೂಮಿಯಿಂದ ಇತರ ಗ್ರಹ, ಉಪಗ್ರಹಗಳಿಗೆ ಸಂಚರಿಸಬಹುದಾದ ದಾರ್ಶನಿಕ ಮುನ್ನೋಟ ಈ ನುಡಿಯಲ್ಲಿ ವ್ಯಕ್ತವಾಗಿದೆ.
ಕೊನೆಯ ನುಡಿಯಲ್ಲಿ ಬೇಂದ್ರೆಯವರು ಈ ಕಾಲಪಕ್ಷಿಯ ಹಾರಾಟ ಮಾನವನ ಕಲ್ಪನೆಗೆ ಮೀರಿದ್ದು ಎನ್ನುವದನ್ನು ವ್ಯಕ್ತಪಡಿಸುತ್ತಾರೆ:
ಮುಟ್ಟಿದೆ ದಿಗ್ಮಂಡಲಗಳ ಅಂಚ
ಆಚೆಗೆ ಚಾಚಿದೆ ತನ್ನಯ ಚುಂಚ
ಬ್ರಹ್ಮಾಂಡಗಳನು ಒಡೆಯಲು ಎಂದೊ
ಬಲ್ಲರು ಯಾರಾ ಹಾಕಿದ ಹೊಂಚ
ಹಕ್ಕಿ ಹಾರುತಿದೆ ನೋಡಿದಿರಾ?
ವಿಶ್ವಗಳು ಅನೇಕವಿರಬಹುದು. ಈ ವಿಶ್ವಗಳ ದಿಕ್ಕುಗಳು ಅನಂತವಾಗಿರಬಹುದು. ಆದರೆ ಈ ಕಾಲಪಕ್ಷಿಯು ಈ ಎಲ್ಲ ಮಂಡಲಗಳ ಅಂಚನ್ನು ಮುಟ್ಟಿದೆ. ಇಷ್ಟೇ ಅಲ್ಲ, ಈ ಅನಂತತೆಯ ಆಚೆಗೂ ಸಹ ಇದು ತನ್ನ ಚುಂಚನ್ನು ಚಾಚಿದೆ. ಅಬ್ಬಾ, ಎಂತಹ ಕಲ್ಪನೆ !
ಈ ಕಾಲಪಕ್ಷಿಯ ಮನೋಗತ ನಮಗೆ ಅರ್ಥವಾಗಬಹುದೆ? ಇದು ಅಸಾಧ್ಯ ಎನ್ನುವ ಹೊಳಹನ್ನು ‘ಬಲ್ಲರು ಯಾರಾ’ ಎನ್ನುವ ಪ್ರಶ್ನೆಯ ಮೂಲಕ ಬೇಂದ್ರೆ ವ್ಯಕ್ತಪಡಿಸುತ್ತಾರೆ.
ಬ್ರಹ್ಮಾಂಡ ಅಂದರೆ ಬ್ರಹ್ಮದೇವನು ಸೃಷ್ಟಿಸಿದ ಬೃಹತ್ ಅಂಡ. ಆ ಬ್ರಹ್ಮಸೃಷ್ಟಿಗಳನ್ನೇ ಈ ಕಾಲಪಕ್ಷಿ ಒಡೆಯಲೆಂದು ಹೊಂಚು ಹಾಕಿ ಹಾರುತ್ತಿದೆಯೆ? ಇರಬಹುದು, ಅಥವಾ ಅಂಡವು ಒಡೆದಾಗಲೇ ಹೊಸ ಸೃಷ್ಟಿ ಹೊರಗೆ ಬರುವದು ಎನ್ನುವ ಅರ್ಥವೂ ಇಲ್ಲಿ ಇರಬಹುದು.
ಇದಕ್ಕೆ ಉತ್ತರ : “ಬಲ್ಲರು ಯಾರಾ?”
ಇಂತಹ ಹಕ್ಕಿ ಹಾರುತ್ತಿರುವದನ್ನು ನೀವು ನೋಡಿದಿರಾ?
ಬಹುಶ: ಈ ಕಾಣ್ಕೆ, ಈ ನೋಟ ವರಕವಿಗೆ ಮಾತ್ರ ಸಾಧ್ಯ!
ಈ ಕವನದ ಕೆಲವು ವೈಶಿಷ್ಟ್ಯಗಳು:
ಈ ಕವನವನ್ನು ಓದಿದಾಗ ಮೂಡುವ ಭಾವನೆ ಎಂದರೆ ಬೆರಗು.
ವಿಸ್ಮಯರಸವೇ ಈ ಕವನದ ಪ್ರಧಾನ ರಸ. ಈ ರಸವನ್ನು ಬೇಂದ್ರೆಯವರು ಹೇಗೆ ಸಾಧಿಸಿದ್ದಾರೆ?
ಕವನದ ಪ್ರತಿಯೊಂದು ನುಡಿಯ ಕೊನೆಯ ಸಾಲು “ಹಕ್ಕಿ ಹಾರುತಿದೆ ನೋಡಿದಿರಾ?” ಎಂದಾಗಿರುವದನ್ನು ನೀವು ಗಮನಿಸಿರಬಹುದು. ಕವನದ ಏಳೂ ನುಡಿಗಳಲ್ಲಿ ಇದು repeat ಆಗಿದೆ. ಆಗಸದಲ್ಲಿ ಹಾರುವ ಹಕ್ಕಿಯೊಂದನ್ನು ನೋಡಿದ ಹುಡುಗನೊಬ್ಬ ಬೆರಗುಪಟ್ಟು ತನ್ನ ಗೆಳೆಯನೊಬ್ಬನಿಗೆ ಆ ಹಕ್ಕಿಯನ್ನು ತೋರಿಸುತ್ತ, ಬಣ್ಣಿಸುತ್ತ, ಪದೇ ಪದೇ ಉದ್ಗರಿಸುವ ಪ್ರಶ್ನೆಯಂತಿದೆ ಈ ಸಾಲು. ಆ ಹುಡುಗನ ಬೆರಗು ಅವನ ಗೆಳೆಯನಿಗೂ ಸಹ ಹಬ್ಬುತ್ತದೆ.
ಇದು ಬೇಂದ್ರೆಯವರು ವಿಸ್ಮಯರಸವನ್ನು ಈ ಕವನದಲ್ಲಿ ಸಾಧಿಸಿದ ವಿಧಾನ.
ಕವನಕ್ಕೆ ಅವಶ್ಯವಾದ ಛಂದಸ್ಸನ್ನು ಆಯ್ಕೆ ಮಾಡುವದು, ಕವನದಲ್ಲಿ ಲಯವನ್ನು ಸಾಧಿಸುವದು ಇವು ಬೇಂದ್ರೆಯವರ ಸಹಜಸಿದ್ಧಿಗಳು. ಈ ಕವನದ ನುಡಿಗಳಲ್ಲಿ ಐದು ಸಾಲುಗಳಿವೆ. ಕವನದಲ್ಲಿ ನಾಲ್ಕು ಸಾಲುಗಳಿರುವದು ಸಹಜ. ದಾಸರ ಹಾಡುಗಳಿಂದ ಹಿಡಿದು, ನವೋದಯದ ಭಾವಗೀತೆಗಳವರೆಗೆ, ಕನ್ನಡದ ಕವನಗಳು ಬಹುತೇಕವಾಗಿ ಚೌಪದಿಗಳೇ ಆಗಿವೆ. ನಡುಗನ್ನಡದ ಕವಿಗಳು ಷಟ್ಪದಿಗಳನ್ನು ರಚಿಸಿದ್ದಾರೆ ನಿಜ, ಆದರೆ ಅವೂ ಸಹ ಚೌಪದಿಗಳೇ. ಉದಾಹರಣೆಗೆ ಚಾಮರಸನ ಪ್ರಭುಲಿಂಗಲೀಲೆಯ ಈ ಪದ್ಯವನ್ನು ಗಮನಿಸಿರಿ:
ಹಿಡಿಹಿಡಿದುಕೊಂಡರ್ತಿಯಲಿ ಬೆಂ-
ಬಿಡದೆ ಶಿಕ್ಷಾಚಾರ್ಯತನದಲಿ
ಜಡಿದು, ಜಂಕಿಸಿ, ಮುದ್ದುತನ ಮಿಗೆ ಮಾಯೆ ತನ್ನಂತೆ|
ನಡೆಯಕಲಿಸಿದಳಂಚೆವಿಂಡಿಗೆ
ನುಡಿಯಕಲಿಸಿದರಗಿಳಿಗೆ
ಸರವಿಡಲು ಕಲಿಸಿದಳಾಕೆ ತನ್ನರಮನೆಯ ಕೋಗಿಲೆಗೆ||
ಭಾಮಿನೀಷಟ್ಪದಿಯ ಈ ನುಡಿಯನ್ನು ಹೀಗೂ ಬರೆಯಬಹುದು:
“ ಹಿಡಿಹಿಡಿದುಕೊಂಡರ್ತಿಯಲಿ, ಬೆಂಬಿಡದೆ ಶಿಕ್ಷಾಚಾರ್ಯತನದಲಿ
ಜಡಿದು ಜಂಕಿಸಿ, ಮುದ್ದುತನ ಮಿಗೆ ಮಾಯೆ ತನ್ನಂತೆ|
ನಡೆಯಕಲಿಸಿದಳಂಚೆವಿಂಡಿಗೆ, ನುಡಿಯಕಲಿಸಿದರಗಿಳಿಗೆ
ಸರವಿಡಲು ಕಲಿಸಿದಳಾಕೆ ತನ್ನರಮನೆಯ ಕೋಗಿಲೆಗೆ ”||
ಇದೀಗ ಚೌಪದಿಯಾಯಿತು!
ಹೀಗಿರುವಾಗ, ಬೇಂದ್ರೆಯವರು ಕವನವನ್ನು ಚೌಪದಿಯನ್ನಾಗಿ ಬರೆಯದೆ, ಪ್ರತಿಯೊಂದು ನುಡಿಗೂ ಐದನೆಯ ಸಾಲೊಂದನ್ನು ಜೋಡಿಸಿದ್ದಾರೆ. ಐದನೆಯ ಸಾಲಿನಲ್ಲಿ ವಿಸ್ಮಯವನ್ನು ಸೂಚಿಸುವ Recurring Lineಅನ್ನು ಇಟ್ಟಿದ್ದಾರೆ.
ಹೀಗೆ ಮಾಡುವಾಗ ಕಾವ್ಯದ ಲಯವು ಕೈತಪ್ಪಿ ಹೋಗಬೇಕು. ಆದರೆ ಏಳು ನುಡಿಗಳ ಈ ಕವನದಲ್ಲಿ ಮೊದಲ ಸಾಲಿನಿಂದ ಕೊನೆಯ ಸಾಲಿನವರೆಗೂ ಕಾವ್ಯದಲಯವು ಸಮಪ್ರವಾಹದಲ್ಲಿ ಹರಿದಿದೆ.
“ಪಾತರಗಿತ್ತಿ ಪಕ್ಕ”ದಲ್ಲಿ ಪುಟ್ಟ ಸಾಲುಗಳ ಮೂಲಕ, ಎರಡೇ ಸಾಲುಗಳ ನುಡಿಯ ಮೂಲಕ, ದೀರ್ಘವಾಗಿರುವ ಇಡೀ ಕವನವನ್ನೇ ಚಿಕ್ಕ ಚಿಟ್ಟೆಯನ್ನಾಗಿ ಪರಿವರ್ತಿಸಿದ ಕವಿ, ಇಲ್ಲಿ ಚೌಪದಿಯ ಬಂಧವನ್ನು ಕಿತ್ತೊಗೆದು, ಕಾವ್ಯದಲಯವನ್ನು ಹಿಡಿತದಲ್ಲಿ ಇಟ್ಟುಕೊಂಡೇ ಕಾಲಪಕ್ಷಿಯ ವಿಶಾಲತೆಯನ್ನು ಓದುಗನ ಅನುಭವಕ್ಕೆ ತರುತ್ತಾರೆ.
ಇನ್ನು ಬೇಂದ್ರೆಯವರ ಕವನಗಳ ಇತರ ಲಕ್ಷಣಗಳು ಈ ಕವನದಲ್ಲೂ ಕಾಣುತ್ತವೆ.
ವಾಸ್ತವತೆಯನ್ನು ಚಮತ್ಕಾರಿಕವಾಗಿ ಬಳಸುವ ಅವರ ಪ್ರತಿಭೆಯನ್ನು ಇಲ್ಲೂ ಕಾಣಬಹುದು. ಉದಾಹರಣೆಗೆ ‘ಎವೆ ತೆರೆದಿಕ್ಕುವ ಹೊತ್ತಿನ ಒಳಗೆ’ ಎನ್ನುವಾಗಿನ ಕಾಲಮಾನದ ವಾಸ್ತವತೆಯನ್ನು ಗಮನಿಸಬಹುದು.
ಬೇಂದ್ರೆಯವರ ಕವನಗಳಲ್ಲಿ ಬರುವ ಪ್ರತೀಕಗಳು ಸಂಕೀರ್ಣವಾಗಿರುತ್ತವೆ. ಕಾಲಪಕ್ಷಿಯ ಪುಚ್ಚ ಹಾಗೂ ಗರಿಗಳ ಪ್ರತೀಕವನ್ನು ಉದಾಹರಣೆಯಾಗಿ ಗಮನಿಸಬಹುದು.
ಬೇಂದ್ರೆಯವರ ಕಲ್ಪನೆ ಅಗಾಧವಾದದ್ದು. ಕಾಲಪಕ್ಷಿಯ ವರ್ಣನೆ, ಅದರ ಆಹಾರ,ಅದರ ಕಾರ್ಯಸೂಚಿಯನ್ನು ಬೇಂದ್ರೆಯವರು ಹೆಣೆದ ಪರಿಯನ್ನು ಗಮನಿಸಿದರೆ, ಅವರ ಕಲ್ಪನಾಸಾಮರ್ಥ್ಯದ ಅರಿವಾಗುವದು. ಇಂತಹ ಅಪಾರ ಕಲ್ಪನೆಯನ್ನು systematic ಆಗಿ ಹೆಣೆಯುತ್ತ, ಕವನದ focus ಅನ್ನು ಕಾಯ್ದುಕೊಂಡು ಹೋಗುವದು ಪ್ರತಿಭಾವಂತ ಕವಿಗೇ ಸಾಧ್ಯ.
ಇಷ್ಟೆಲ್ಲ ಗುಣಗಳಿದ್ದ ಈ ಕವನದಲ್ಲಿ ದೋಷಗಳೂ ಇವೆ.
ಓದುಗನಲ್ಲಿ ಕಾಲಪಕ್ಷಿಯ ಬಗೆಗೆ ಬೆರಗು ಹುಟ್ಟುತ್ತದೆಯೇ ಹೊರತು, ಕಾಲಪಕ್ಷಿಯ ಪ್ರಧಾನಗುಣವಾದ powerಅನ್ನು ಆತ ಅನುಭವಿಸುವದಿಲ್ಲ. ಕಾಲಪಕ್ಷಿಯ powerಅನ್ನು ತಿಳಿಸಲು, ಬೇಂದ್ರೆ ಮೂರು-ನಾಲ್ಕು ನುಡಿಗಳನ್ನು ಬರೆದಿದ್ದಾರೆ. ಆದರೆ ಈ ಸಾಲುಗಳು ಕೇವಲ ವಾಚ್ಯವಾಗಿವೆ. ಕಾಲಪಕ್ಷಿಯ ಶಕ್ತಿ ಓದುಗನ ಅನುಭವಕ್ಕೆ ಬರುವದಿಲ್ಲ.
ಶಂಕರಾಚಾರ್ಯರು ತಮ್ಮ ಸ್ತೋತ್ರವೊಂದರಲ್ಲಿ ಕಾಲದ ಮಹಿಮೆಯನ್ನು ಹೀಗೆ ಬಣ್ಣಿಸಿದ್ದಾರೆ:
“ಕಾಲೋ ಜಗದ್ ಭಕ್ಷಕ:” (=Time swallows universes.)
ಈ ಒಂದು ಸಾಲಿನಲ್ಲಿ ಅನುಭವಕ್ಕೆ ಬರುವ ಕಾಲದ ಶಕ್ತಿಯು, ಬೇಂದ್ರೆಯವರ ೩೫ ಸಾಲುಗಳಲ್ಲಿ ಬರುವದಿಲ್ಲವೆನ್ನುವದು ಕವನದ ಕಳಾಹೀನತೆಯ ನಿದರ್ಶನವಾಗಿದೆ.
ಹೀಗಾಗಿ ಬೇಂದ್ರೆಯವರ ಈ ಕವನವು ಉತ್ತಮ ಲಕ್ಷಣಗಳಿದ್ದರೂ ಸಹ ರಸಸೃಷ್ಟಿಯಲ್ಲಿ ಸೋತಿದೆ ಎಂದು ಹೇಳಬೇಕಾಗುತ್ತದೆ.
ಕವನದ ಪೂರ್ತಿಪಾಠ ಹೀಗಿದೆ:
ಇರುಳಿರಳಳಿದು ದಿನದಿನ ಬೆಳಗೆ
ಸುತ್ತಮುತ್ತಲೂ ಮೇಲಕೆ ಕೆಳಗೆ
ಗಾವುದ ಗಾವುದ ಗಾವುದ ಮುಂದಕೆ
ಎವೆ ತೆರೆದಿಕ್ಕುವ ಹೊತ್ತಿನ ಒಳಗೆ
ಹಕ್ಕಿ ಹಾರುತಿದೆ ನೋಡಿದಿರಾ?
ಕರಿನೆರೆ ಬಣ್ಣದ ಪುಚ್ಚಗಳುಂಟು
ಬಿಳಿ-ಹೊಳೆ ಬಣ್ಣದ ಗರಿ-ಗರಿಯುಂಟು
ಕೆನ್ನನ ಹೊನ್ನನ ಬಣ್ಣಬಣ್ಣಗಳ
ರೆಕ್ಕೆಗಳೆರಡೂ ಪಕ್ಕದಲುಂಟು
ಹಕ್ಕಿ ಹಾರುತಿದೆ ನೋಡಿದಿರಾ?
ನೀಲಮೇಘಮಂಡಲ-ಸಮ ಬಣ್ಣ !
ಮುಗಿಲಿಗೆ ರೆಕ್ಕೆಗಳೊಡೆದವೊ ಅಣ್ಣಾ !
ಚಿಕ್ಕೆಯ ಮಾಲೆಯ ಸೆಕ್ಕಿಸಿಕೊಂಡು
ಸೂರ್ಯ-ಚಂದ್ರರನು ಮಾಡಿದೆ ಕಣ್ಣಾ
ಹಕ್ಕಿ ಹಾರುತಿದೆ ನೋಡಿದಿರಾ?
ರಾಜ್ಯದ ಸಾಮ್ರಾಜ್ಯದ ತೆನೆ ಒಕ್ಕಿ
ಮಂಡಲ-ಗಿಂಡಲಗಳ ಗಡ ಮುಕ್ಕಿ
ತೇಲಿಸಿ ಮುಳುಗಿಸಿ ಖಂಡ-ಖಂಡಗಳ
ಸಾರ್ವಭೌಮರಾ ನೆತ್ತಿಯ ಕುಕ್ಕಿ
ಹಕ್ಕಿ ಹಾರುತಿದೆ ನೋಡಿದಿರಾ?
ಯುಗ-ಯುಗಗಳ ಹಣೆಬರಹವ ಒರಸಿ
ಮನ್ವಂತರಗಳ ಭಾಗ್ಯವ ತೆರೆಸಿ
ರೆಕ್ಕೆಯ ಬೀಸುತ ಚೇತನೆಗೊಳಿಸಿ
ಹೊಸಗಾಲದ ಹಸುಮಕ್ಕಳ ಹರಸಿ
ಹಕ್ಕಿ ಹಾರುತಿದೆ ನೋಡಿದಿರಾ?
ಬೆಳ್ಳಿಯ ಹಳ್ಳಿಯ ಮೇರೆಯ ಮೀರಿ
ತಿಂಗಳೂರಿನ ನೀರನು ಹೀರಿ
ಆಡಲು ಹಾಡಲು ತಾ ಹಾರಾಡಲು
ಮಂಗಳಲೋಕದ ಅಂಗಳಕೇರಿ
ಹಕ್ಕಿ ಹಾರುತಿದೆ ನೋಡಿದಿರಾ?
ಮುಟ್ಟಿದೆ ದಿಗ್ಮಂಡಲಗಳ ಅಂಚ
ಆಚೆಗೆ ಚಾಚಿದೆ ತನ್ನಯ ಚುಂಚ
ಬ್ರಹ್ಮಾಂಡಗಳನು ಒಡೆಯಲು ಎಂದೊ
ಬಲ್ಲರು ಯಾರಾ ಹಾಕಿದ ಹೊಂಚ
ಹಕ್ಕಿ ಹಾರುತಿದೆ ನೋಡಿದಿರಾ?
ಬೇಂದ್ರೆಯವರು ಈ ಕವನದಲ್ಲಿ ಕಾಲವನ್ನು ಹಾರುತ್ತಿರುವ ಹಕ್ಕಿಗೆ ಹೋಲಿಸಿದ್ದಾರೆ. ಈ ಕವನದ ಮೊದಲ ನುಡಿಯಲ್ಲಿ ಕಾಲಪಕ್ಷಿಯನ್ನು ಪರಿಚಯಿಸುವ ವಿಧಾನ ತುಂಬಾ ಸ್ವಾರಸ್ಯಕರವಾಗಿದೆ.
`ಇರುಳು ಅಳಿದು ದಿನವಾಗುವದು'-- ಇದು ಒಂದು ದಿನದ ಕಾಲಮಾನವನ್ನು ಸೂಚಿಸುತ್ತದೆ.
‘ಇರುಳು ಇರುಳು ಅಳಿದು ದಿನದಿನ ಬೆಳಗೆ’ ಅನ್ನುವದು ಈ ಕಾಲಮಾನದ recurrence.
ಈ ರೀತಿಯಾಗಿ ಮೊದಲನೆಯ ಸಾಲಿನ ಮೂಲಕ ಬೇಂದ್ರೆಯವರು ಒಂದು ಚಲನಶೀಲ ಕಾಲವನ್ನು ನಮ್ಮ ಕಣ್ಣೆದುರಿಗೆ ಮೂಡಿಸುತ್ತಾರೆ.
ಈಗ ಕವನದ ಮುಂದಿನ ಸಾಲನ್ನು ನೋಡಿರಿ:
‘ಸುತ್ತಮುತ್ತಲೂ ಮೇಲಕೆ ಕೆಳಗೆ’ ಎನ್ನುವ ಸಾಲು ‘ಅವಕಾಶ’ದ (space) ಮೂರು ಆಯಾಮಗಳನ್ನು (3 co-ordinates) ಬಣ್ಣಿಸುತ್ತದೆ.
ಅಂದರೆ ಈ ಕಾಲವು ‘ವಿಶ್ವವ್ಯಾಪಿ ಕಾಲ’ವಾಯಿತು !
ಕಾಲಪಕ್ಷಿಯ ಬೃಹತ್ ರೂಪವನ್ನು ಈ ರೀತಿಯಾಗಿ ಬೇಂದ್ರೆ ನಿರೂಪಿಸಿದ್ದಾರೆ.
ಈ ಕಾಲಪಕ್ಷಿಯ ಗತಿ ಎಂತಹದು?
‘ಗಾವುದ ಗಾವುದ ಗಾವುದ ಮುಂದಕೆ’!
‘ಮುಂದಕೆ’ ಎಂದು ಹೇಳುವ ಮೂಲಕ ಈ ಕಾಲಪಕ್ಷಿಯು ಕೇವಲ ಗತಿಶೀಲವಲ್ಲ, ಪ್ರ-ಗತಿಶೀಲವೂ ಹೌದು ಎಂದು ಬೇಂದ್ರೆ ಸೂಚಿಸುತ್ತಾರೆ.
ಈ ಗಾವುದ ದೂರವನ್ನು ಚಲಿಸಲು ಈ ಪಕ್ಷಿಗೆ ಬೇಕಾಗುವ ಸಮಯ ಮಾತ್ರ ‘ಎವೆ ತೆರೆದಿಕ್ಕುವ ಹೊತ್ತು’.
ಕೇವಲ ಕಣ್ಣು ಮಿಟುಕಿಸುವ ಸಮಯದಲ್ಲಿ ಈ ಕಾಲಪಕ್ಷಿ ಸುದೂರ ಗಮಿಸಬಲ್ಲದು.
ಸಮಯದ ಅತ್ಯಂತ ಚಿಕ್ಕ ಅಳತೆ ಯಾವುದು ಎಂದರೆ ‘ನಿಮಿಷ’. ಭಾರತೀಯರು ಪೂರ್ವಕಾಲದಿಂದಲೂ ಬಳಸುತ್ತಿದ್ದ ಕಾಲಮಾನ ಇದು. ‘ನಿಮಿಷ’ವನ್ನು ಅಳೆಯುವ ಬಗೆ ಹೇಗೆ? ಕಣ್ಣರೆಪ್ಪೆಯನ್ನು ಬಡಿಯುವ ಕಾಲಮಾನಕ್ಕೆ ‘ನಿಮಿಷ’ ಎನ್ನುತ್ತಾರೆ. ಆದುದರಿಂದ ‘ಎವೆ ತೆರೆದಿಕ್ಕುವ ಹೊತ್ತಿನ ಒಳಗೆ’ ಈ ಪದಪುಂಜದ ಅರ್ಥ=ನಿಮಿಷ. ಇದೇ least unit of time. ಆದುದರಿಂದ ಅತಿ ಚಿಕ್ಕ ಕಾಲಮಾನದಲ್ಲಿ ಈ ಹಕ್ಕಿ ಗಾವುದ ದೂರಕ್ಕೆ ಚಲಿಸಬಲ್ಲದು. ಕಲ್ಪನೆಯಂತೆ ಕಾಣುವ ಪದದಲ್ಲಿ ವಾಸ್ತವತೆಯನ್ನು ಹಿಡಿದಿಡುವ ಬೇಂದ್ರೆ-ಪ್ರತಿಭೆಯನ್ನು ಈ ಸಾಲಿನಲ್ಲಿ ನಾವು ಕಾಣುತ್ತೇವೆ.
(ದೇವತೆಗಳು ಕಣ್ಣು ಮುಚ್ಚುವದಿಲ್ಲ ಅಂದರೆ ಕಣ್ಣರೆಪ್ಪೆ ಬಡೆಯುವದಿಲ್ಲ ; ಆದುದರಿಂದ ಅವರು ‘ಅನಿಮೇಷ’ರು.)
ಈಗ ಈ ನುಡಿಯ ಮತ್ತೊಂದು ಆಯಾಮವನ್ನು ನೋಡೋಣ.
ವಿಶ್ವವನ್ನು ವ್ಯಾಪಿಸಿರುವ ಈ ಕಾಲಪಕ್ಷಿ ತನ್ನ ಚಲನೆಯ ಮೂಲಕ ವಿಶ್ವವನ್ನು ಅಂದರೆ ದೇಶವನ್ನು ಬದಲಾವಣೆಗೆ ಒಳಪಡಿಸುತ್ತದೆ. ಇದೇ ಮಾತನ್ನು ವಿಜ್ಞಾನಿ ಐನ್ಸ್ಟೈನ್ ‘ಕಾಲ ಮತ್ತು ದೇಶ ಇವೆರಡು ಸಾಪೇಕ್ಷವಾಗಿವೆ’ ಎನ್ನುವ ಮೂಲಕ ತಿಳಿಸಿದರು. (Relativity of space and time.)
ಶಂಕರಾಚಾರ್ಯರೂ ಇದೇ ಮಾತನ್ನು ‘ಮಾಯಾಕಲ್ಪಿತ ದೇಶ,ಕಾಲ ಕಲನಾ’ ಎಂದು philosophically ಹೇಳಿದ್ದಾರೆ (=ದೇಶ ಮತ್ತು ಕಾಲ ಇವು ಕೇವಲ ಭ್ರಮೆ.)
ಆದುದರಿಂದ ಬೇಂದ್ರೆಯವರ ಈ ಕಾಲಪಕ್ಷಿ ಕೇವಲ ಸಮಯದ ಪಕ್ಷಿ ಅಲ್ಲ. ವಿಶ್ವವನ್ನೇ ತನ್ನ ಚಲನೆಯಲ್ಲಿ ಬದಲಾಯಿಸುತ್ತಿರುವ ಬೃಹತ್ ಚೈತನ್ಯಪಕ್ಷಿ!
ಎರಡನೆಯ ನುಡಿಯಲ್ಲಿ ಬೇಂದ್ರೆಯವರು ಈ ಚೈತನ್ಯರೂಪಿ ಕಾಲಪಕ್ಷಿಯ ಭೌತಿಕ ವಿವರಗಳನ್ನು ಕೊಡುತ್ತಾರೆ:
ಕರಿನೆರೆ ಬಣ್ಣದ ಪುಚ್ಚಗಳುಂಟು
ಬಿಳಿ-ಹೊಳೆ ಬಣ್ಣದ ಗರಿ-ಗರಿಯುಂಟು
ಕೆನ್ನನ ಹೊನ್ನನ ಬಣ್ಣ-ಬಣ್ಣಗಳ
ರೆಕ್ಕೆಗಳೆರಡೂ ಪಕ್ಕದಲುಂಟು
ಹಕ್ಕಿ ಹಾರುತಿದೆ ನೋಡಿದಿರಾ?
ಈ ನುಡಿಯನ್ನು ಎರಡು ರೀತಿಯಲ್ಲಿ ಅರ್ಥೈಸಬಹುದು:
ಪುಚ್ಚ ಅಂದರೆ ಬಾಲ. ಇದು ಹಕ್ಕಿಯ ಹಿಂದಿರುತ್ತದೆ. ಇದು ಭೂತಕಾಲ. ಆದುದರಿಂದ ಇದರ ಬಣ್ಣ ಕರಿ.
ಈಗ ಕಣ್ಣಿಗೆ ಕಾಣುತ್ತಿರುವ , ಹೊಳೆಯುತ್ತಿರುವ ಗರಿಯ ಬಣ್ಣ ಬಿಳಿ. ಆದುದರಿಂದ ಇದು ವರ್ತಮಾನ ಕಾಲ. ನಮಗೆ ಮುಂದೆ ಕಾಣುವದು ಭವಿಷ್ಯತ್ ಕಾಲ. ಇದು ಉದಯಿಸುತ್ತಿರುವ ಸೂರ್ಯನ ಹಾಗೆ ಕೆಂಪಾಗಿ ಹಾಗೂ ಬಂಗಾರ ಬಣ್ಣದ್ದಾಗಿರುತ್ತದೆ. ಈ ಮೂರೂ ಕಾಲಗಳು ಕಾಲಪಕ್ಷಿಯ ಚಲನೆಯ ಅಂಶಗಳು.
ಎರಡನೆಯದಾಗಿ, ನಮ್ಮ ಪೃಥ್ವಿಯ ಮೇಲಿನ ಜನಾಂಗಗಳನ್ನು ಗಮನಿಸಿರಿ: ಕರಿಯ ಬಣ್ಣದ ಆಫ್ರಿಕನ್ ಜನಾಂಗ, ಬಿಳಿಯ ಬಣ್ಣದ ಕಾ^ಕೇಸಿಯನ್ ಜನಾಂಗ, ಇವೆರಡರ ನಡುವಿನ ಕೆನ್ನನ ಅಂದರೆ brownie ಜನಾಂಗ ಹಾಗೂ ಕೊನೆಯದಾಗಿ ಹಳದಿ ಬಣ್ಣದ ಅಂದರೆ ಹೊನ್ನ ಬಣ್ಣದ ಮಂಗೋಲಿಯನ್ ಜನಾಂಗ.
ಈ ಎಲ್ಲ ಜನಾಂಗಗಳನ್ನು ಈ ಕಾಲಪಕ್ಷಿ ಹೊತ್ತುಕೊಂಡು ಮುನ್ನಡೆದಿದೆ ಎಂದೂ ಅರ್ಥೈಸಬಹುದು.
ಇಂತಹ ಒಂದು ಬೃಹತ್ ಪಕ್ಷಿ ನೋಡಲು ಹೇಗೆ ಕಾಣುತ್ತಿರಬಹುದು?
ಇದರ ಹರಹು ಪೃಥ್ವಿಯನ್ನಷ್ಟೇ ಅಲ್ಲ, ನಮ್ಮ ಆಕಾಶಗಂಗೆಯನ್ನೂ (milky way) ದಾಟಿದೆ. ಬೇಂದ್ರೆ ಇದರ ಅನಂತ ವೈಶಾಲ್ಯವನ್ನು ಹೀಗೆ ಬಣ್ಣಿಸುತ್ತಾರೆ :
ನೀಲಮೇಘಮಂಡಲ-ಸಮ ಬಣ್ಣ !
ಮುಗಿಲಿಗೆ ರೆಕ್ಕೆಗಳೊಡೆದವೊ ಅಣ್ಣಾ !
ಚಿಕ್ಕೆಯ ಮಾಲೆಯ ಸೆಕ್ಕಿಸಿಕೊಂಡು
ಸೂರ್ಯ-ಚಂದ್ರರನು ಮಾಡಿದೆ ಕಣ್ಣಾ
ಹಕ್ಕಿ ಹಾರುತಿದೆ ನೋಡಿದಿರಾ?
ಆಕಾಶ ಅನಂತವಾದದ್ದು. ಅದರ ಬಣ್ಣ ಈ ಕಾಲಪಕ್ಷಿಯದು, ಅಂದರೆ ಕಾಲವೂ ಸಹ ಅನಂತವೇ. ಆ ಅನಂತವಾದ ಆಕಾಶಕ್ಕೆ ರೆಕ್ಕೆ ಒಡೆದರೆ ಹೇಗಿರಬೇಡ!? ಅಂತಹ ಈ ಕಾಲಪಕ್ಷಿಯು ಚಿಕ್ಕೆಗಳ ಮಾಲೆಯನ್ನು ಅಂದರೆ ಆಕಾಶಗಂಗೆಯೇ(=milky way) ಮೊದಲಾದ ವಿಶ್ವಗಳನ್ನು (=galaxies) ಸೆಕ್ಕಿಸಿಕೊಂಡಿದೆ.
ಬೇಂದ್ರೆಯವರು ‘ಸಿಕ್ಕಿಸಿಕೊಂಡಿದೆ’ ಎಂದು ಹೇಳಿಲ್ಲ . ಸೆಕ್ಕಿಸಿಕೊಂಡಿದೆ ಎಂದು ಹೇಳಿದ್ದಾರೆ. ಸೆಕ್ಕಿಸಿಕೊಳ್ಳುವದು ಅಂದರೆ ದಿಮಾಕಿನಿಂದ ಸಿಕ್ಕಿಸಿಕೊಳ್ಳುವದು.
ಈ ಕಾಲಪಕ್ಷಿಯ ಕಣ್ಣುಗಳು ಸೂರ್ಯ ಹಾಗೂ ಚಂದ್ರ ಎನ್ನುವ ಎರಡು ಪ್ರಭಾಬಿಂಬಗಳು. ಸೂರ್ಯ ಹಾಗೂ ಚಂದ್ರರನ್ನು ನಾವು ಕಾಲಗಣನೆಗೆ ಬಳಸುತ್ತೇವೆ. ಆದುದರಿಂದ ಈ ಪ್ರಭಾಬಿಂಬಗಳು ಕಾಲಪಕ್ಷಿಯ ಕಣ್ಣುಗಳು ಎಂದು ಹೇಳುವದು ಯಥಾರ್ಥವಾಗಿದೆ.
ಇಂತಹ ಅದ್ಭುತ ನೋಟದ ಈ ಕಾಲಪಕ್ಷಿಯು ಮಾಡುತ್ತಿರುವದೇನು?
ಅದನ್ನು ನಾಲ್ಕನೆಯ ನುಡಿಯಲ್ಲಿ ಬೇಂದ್ರೆಯವರು ಈ ರೀತಿಯಾಗಿ ಬಣ್ಣಿಸುತ್ತಾರೆ:
ರಾಜ್ಯದ ಸಾಮ್ರಾಜ್ಯದ ತೆನೆ ಒಕ್ಕಿ
ಮಂಡಲ-ಗಿಂಡಲಗಳ ಗಡ ಮುಕ್ಕಿ
ತೇಲಿಸಿ ಮುಳುಗಿಸಿ ಖಂಡ-ಖಂಡಗಳ
ಸಾರ್ವಭೌಮರಾ ನೆತ್ತಿಯ ಕುಕ್ಕಿ
ಹಕ್ಕಿ ಹಾರುತಿದೆ ನೋಡಿದಿರಾ?
ಸಣ್ಣ ಪುಟ್ಟ ರಾಜ್ಯಗಳನ್ನು, ದೊಡ್ಡ ದೊಡ್ಡ ಸಾಮ್ರಾಜ್ಯಗಳನ್ನು ಹುಟ್ಟಿಸಿ ಬೆಳೆಯಿಸುವದೇ ಈ ಕಾಲಪಕ್ಷಿ. ಅವುಗಳ ತೆನೆ ಒಕ್ಕುವದು ಅಂದರೆ ಅವುಗಳ ಫಲಿತವನ್ನು harvest ಮಾಡುವದು ಈ ಕಾಲಪಕ್ಷಿ. ಈ ತರಹ ಬೆಳೆದು ನಿಂತ ತೆನೆಗಳನ್ನು ಮುಕ್ಕುವದೂ ಸಹ ಈ ಕಾಲಪಕ್ಷಿಯೇ! (ಸುಗ್ಗಿಯ ಸಮಯದಲ್ಲಿ ಹಕ್ಕಿಗಳು ಹೊಲದಲ್ಲಿಯ ಕಾಳುಗಳನ್ನು ಮುಕ್ಕುವದನ್ನು ನೆನಪಿಸಿಕೊಳ್ಳಿರಿ.) ಭೂಮಂಡಲವೆಲ್ಲ ಈ ಹಕ್ಕಿಯ ಆಹಾರವೇ. ಧರಣಿಮಂಡಲದಲ್ಲಿರುವ ಏಳೂ ಖಂಡಗಳನ್ನು ಈ ಹಕ್ಕಿ ತೇಲಿಸುತ್ತದೆ ಹಾಗೂ ಮುಳುಗಿಸುತ್ತದೆ. ಒಂದು ಕಾಲದಲ್ಲಿ ಏಶಿಯಾ ಖಂಡ ಎಲ್ಲಕ್ಕೂ ಮೇಲೆ ತೇಲುತ್ತಿತ್ತು,ಇದೀಗ ಯುರೋಪ ಹಾಗೂ ಅಮೇರಿಕಾ ಖಂಡಗಳು ಮೇಲೆದ್ದಿವೆ!
(ಭೌತಿಕವಾಗಿಯೂ ಸಹ ಇಡೀ ಭೂಪ್ರದೇಶವು ಮೊದಲು ಗೊಂಡವನ ಖಂಡವೆನ್ನುವ ಒಂದೇ ಭೂಮಿಯಾಗಿದ್ದು, ಅನಂತರ ತುಂಡಾಗಿ ಏಳು ಖಂಡಗಳಾದವು.)
ಈ ಖಂಡಗಳಿಗೆ ತಾವು ಸಾರ್ವಭೌಮರೆಂದುಕೊಂಡು ಬೀಗುತ್ತಿರುವವರ ನೆತ್ತಿಯನ್ನು ಕುಕ್ಕಿ ಅವರ ಅಹಂಕಾರವನ್ನು ಈ ಕಾಲಪಕ್ಷಿ ಮೆಟ್ಟಿ ನಿಂತಿದೆ.
(ಸ್ವಾತಂತ್ರ್ಯಪೂರ್ವದಲ್ಲಿ ಬ್ರಿಟಿಶ್ ಸಾಮ್ರಾಟರನ್ನು ಅಣಕಿಸುವ ಈ ಸಾಲುಗಳನ್ನು ಬರೆಯಲು ಯಾವುದೇ ಕವಿಗೂ ಅಪಾರ ಧೈರ್ಯ ಬೇಕು. ಸಾಹಿತ್ಯಸಮ್ಮೇಳನದಲ್ಲಿ ಈ ಕವನವನ್ನು ಕೇಳುತ್ತಿದ್ದ ಬಿ.ಎಮ್.ಶ್ರೀಕಂಠಯ್ಯನವರು ಗಾಬರಿಗೊಂಡರೆಂದು ದಾಖಲೆಗಳಿವೆ.)
ಈ ವಿಶ್ವ, ಈ ಭೂಮಿ, ಭೂಮಿಯ ಮೇಲಿನ ಜೀವಜಂತುಗಳು ಇವೆಲ್ಲವುಗಳ ಉಗಮವಾಗಿ ಯಾವ ಕಾಲವಾಯಿತೊ? ಹೊಸ ಯುಗಕ್ಕೊಮ್ಮೆ ಆ ಯುಗದ ಹಣೆಬರಹವನ್ನು ಬರೆಯುವದು, ಹಳೆಯ ಯುಗದ ಹಣೆಬರಹವನ್ನು ಒರೆಸುವದು ಈ ಕಾಲಪಕ್ಷಿಯ ಕೆಲಸ. ಭೂಮಿಯ ಮೇಲಿನ ಶಿಲಾಯುಗ, ಧಾತುಯುಗ, ಪರಮಾಣುಯುಗ ಇವೆಲ್ಲ ಕಾಲದ ಅಧೀನವೇ.
ಆದುದರಿಂದ ಈ ಕಾಲಪಕ್ಷಿಯ ಮಹಿಮೆ ಅಪಾರ. ಅದು ಯುಗ-ಯುಗಗಳನ್ನು, ಮನ್ವಂತರಗಳನ್ನು ತನ್ನ ಆಧೀನದಲ್ಲಿಟ್ಟುಕೊಂಡಿದೆ:
ಯುಗ-ಯುಗಗಳ ಹಣೆಬರಹವ ಒರಸಿ
ಮನ್ವಂತರಗಳ ಭಾಗ್ಯವ ತೆರೆಸಿ
ರೆಕ್ಕೆಯ ಬೀಸುತ ಚೇತನೆಗೊಳಿಸಿ
ಹೊಸಗಾಲದ ಹಸುಮಕ್ಕಳ ಹರಸಿ
ಹಕ್ಕಿ ಹಾರುತಿದೆ ನೋಡಿದಿರಾ?
ಕಾಲಪಕ್ಷಿಯ ಕೆಲಸ ಕೇವಲ ವಿನಾಶಕಾರಿಯಲ್ಲ. ಹೊಸ ಮನ್ವಂತರದ ಶುಭೋದಯವಾಗುವದು ಈ ಕಾಲಪಕ್ಷಿಯಿಂದಲೇ. ಯಾಕೆಂದರೆ ತನ್ನ ರೆಕ್ಕೆಗಳನ್ನು ಬೀಸುವ ಮೂಲಕ ಪ್ರಾಣವಾಯುವನ್ನು ಕೊಟ್ಟು ಈ ನಿರ್ಜೀವ (inanimate) ಮನ್ವಂತರಗಳನ್ನು ಚೇತನಗೆ ಒಳಪಡಿಸುವದು ಅಂದರೆ ಸಜೀವಗೊಳಿಸುವದು ಈ ಕಾಲಪಕ್ಷಿ. ನಮ್ಮ ಭೂಮಂಡಲದಲ್ಲಿ ಜರುಗಿದ ಸಾಂಸ್ಕೃತಿಕ ಬದಲಾವಣೆಗಳು, ಪುನಶ್ಚೇತನಗಳು (Renaissances) ಎಲ್ಲವೂ ಈ ಕಾಲಪಕ್ಷಿಯ ಮಹಿಮೆಯೇ! ಹೊಸ ಕಾಲದ ಎಳೆಯ ಮಕ್ಕಳಿಗೆ ಹಾರೈಸಿ ಬೆಳೆಸುವದು ಈ ಕಾಲಪಕ್ಷಿಯೇ. ಇದನ್ನೆಲ್ಲ ಪರಿವೀಕ್ಷಿಸುವ ಕಣ್ಣು ನಮಗೆ ಬೇಕು. ಅಂತಲೇ ಬೇಂದ್ರೆ ನಮ್ಮನ್ನು ಕೇಳುತ್ತಿದ್ದಾರೆ:
“ಹಕ್ಕಿ ಹಾರುತಿದೆ ನೋಡಿದಿರಾ?”
ಮಾನವ ದೃಷ್ಟಿ ತತ್ಕಾಲಕ್ಕೆ ಸೀಮಿತವಾಗಿರುತ್ತದೆ. ಆದರೆ ಕವಿಯ ನೋಟ ಕಾಲಾತೀತ, ದೇಶಾತೀತ.
ಮುಂದಿನ ನುಡಿಯಲ್ಲಿ ಬೇಂದ್ರೆಯವರು ಕಾಲಪಕ್ಷಿಯ ಲಾಘವದ ಭವಿಷ್ಯ ನುಡಿಯುತ್ತಿದ್ದಾರೆ:
ಬೆಳ್ಳಿಯ ಹಳ್ಳಿಯ ಮೇರೆಯ ಮೀರಿ
ತಿಂಗಳೂರಿನ ನೀರನು ಹೀರಿ
ಆಡಲು ಹಾಡಲು ತಾ ಹಾರಾಡಲು
ಮಂಗಳಲೋಕದ ಅಂಗಳಕೇರಿ
ಹಕ್ಕಿ ಹಾರುತಿದೆ ನೋಡಿದಿರಾ?
ಕಾಲದ ಓಟದಲ್ಲಿ ಬೆಳ್ಳಿ ಅಂದರೆ ಶುಕ್ರಗ್ರಹವು ಮನುಷ್ಯನಿಗೆ ಕೇವಲ ಹಳ್ಳಿಯಾಗಬಹುದು, ಚಂದ್ರಲೋಕವು ಬರಿ ಊರಾಗಬಹುದು ಹಾಗೂ ಮಂಗಳಲೋಕವು ಭೂಮಿಗೆ ಅಂಗಳವಾಗಬಹುದು. ಮಾನವನಿಗೆ ಈ ಆಕಾಶಕಾಯಗಳು ಆಡಲು, ಹಾಡಲು ಹಾಗೂ ಹಾರಾಡಲು platforms ಆಗಬಹುದು!
ಮಾನವನು ಭೂಮಿಯಿಂದ ಇತರ ಗ್ರಹ, ಉಪಗ್ರಹಗಳಿಗೆ ಸಂಚರಿಸಬಹುದಾದ ದಾರ್ಶನಿಕ ಮುನ್ನೋಟ ಈ ನುಡಿಯಲ್ಲಿ ವ್ಯಕ್ತವಾಗಿದೆ.
ಕೊನೆಯ ನುಡಿಯಲ್ಲಿ ಬೇಂದ್ರೆಯವರು ಈ ಕಾಲಪಕ್ಷಿಯ ಹಾರಾಟ ಮಾನವನ ಕಲ್ಪನೆಗೆ ಮೀರಿದ್ದು ಎನ್ನುವದನ್ನು ವ್ಯಕ್ತಪಡಿಸುತ್ತಾರೆ:
ಮುಟ್ಟಿದೆ ದಿಗ್ಮಂಡಲಗಳ ಅಂಚ
ಆಚೆಗೆ ಚಾಚಿದೆ ತನ್ನಯ ಚುಂಚ
ಬ್ರಹ್ಮಾಂಡಗಳನು ಒಡೆಯಲು ಎಂದೊ
ಬಲ್ಲರು ಯಾರಾ ಹಾಕಿದ ಹೊಂಚ
ಹಕ್ಕಿ ಹಾರುತಿದೆ ನೋಡಿದಿರಾ?
ವಿಶ್ವಗಳು ಅನೇಕವಿರಬಹುದು. ಈ ವಿಶ್ವಗಳ ದಿಕ್ಕುಗಳು ಅನಂತವಾಗಿರಬಹುದು. ಆದರೆ ಈ ಕಾಲಪಕ್ಷಿಯು ಈ ಎಲ್ಲ ಮಂಡಲಗಳ ಅಂಚನ್ನು ಮುಟ್ಟಿದೆ. ಇಷ್ಟೇ ಅಲ್ಲ, ಈ ಅನಂತತೆಯ ಆಚೆಗೂ ಸಹ ಇದು ತನ್ನ ಚುಂಚನ್ನು ಚಾಚಿದೆ. ಅಬ್ಬಾ, ಎಂತಹ ಕಲ್ಪನೆ !
ಈ ಕಾಲಪಕ್ಷಿಯ ಮನೋಗತ ನಮಗೆ ಅರ್ಥವಾಗಬಹುದೆ? ಇದು ಅಸಾಧ್ಯ ಎನ್ನುವ ಹೊಳಹನ್ನು ‘ಬಲ್ಲರು ಯಾರಾ’ ಎನ್ನುವ ಪ್ರಶ್ನೆಯ ಮೂಲಕ ಬೇಂದ್ರೆ ವ್ಯಕ್ತಪಡಿಸುತ್ತಾರೆ.
ಬ್ರಹ್ಮಾಂಡ ಅಂದರೆ ಬ್ರಹ್ಮದೇವನು ಸೃಷ್ಟಿಸಿದ ಬೃಹತ್ ಅಂಡ. ಆ ಬ್ರಹ್ಮಸೃಷ್ಟಿಗಳನ್ನೇ ಈ ಕಾಲಪಕ್ಷಿ ಒಡೆಯಲೆಂದು ಹೊಂಚು ಹಾಕಿ ಹಾರುತ್ತಿದೆಯೆ? ಇರಬಹುದು, ಅಥವಾ ಅಂಡವು ಒಡೆದಾಗಲೇ ಹೊಸ ಸೃಷ್ಟಿ ಹೊರಗೆ ಬರುವದು ಎನ್ನುವ ಅರ್ಥವೂ ಇಲ್ಲಿ ಇರಬಹುದು.
ಇದಕ್ಕೆ ಉತ್ತರ : “ಬಲ್ಲರು ಯಾರಾ?”
ಇಂತಹ ಹಕ್ಕಿ ಹಾರುತ್ತಿರುವದನ್ನು ನೀವು ನೋಡಿದಿರಾ?
ಬಹುಶ: ಈ ಕಾಣ್ಕೆ, ಈ ನೋಟ ವರಕವಿಗೆ ಮಾತ್ರ ಸಾಧ್ಯ!
ಈ ಕವನದ ಕೆಲವು ವೈಶಿಷ್ಟ್ಯಗಳು:
ಈ ಕವನವನ್ನು ಓದಿದಾಗ ಮೂಡುವ ಭಾವನೆ ಎಂದರೆ ಬೆರಗು.
ವಿಸ್ಮಯರಸವೇ ಈ ಕವನದ ಪ್ರಧಾನ ರಸ. ಈ ರಸವನ್ನು ಬೇಂದ್ರೆಯವರು ಹೇಗೆ ಸಾಧಿಸಿದ್ದಾರೆ?
ಕವನದ ಪ್ರತಿಯೊಂದು ನುಡಿಯ ಕೊನೆಯ ಸಾಲು “ಹಕ್ಕಿ ಹಾರುತಿದೆ ನೋಡಿದಿರಾ?” ಎಂದಾಗಿರುವದನ್ನು ನೀವು ಗಮನಿಸಿರಬಹುದು. ಕವನದ ಏಳೂ ನುಡಿಗಳಲ್ಲಿ ಇದು repeat ಆಗಿದೆ. ಆಗಸದಲ್ಲಿ ಹಾರುವ ಹಕ್ಕಿಯೊಂದನ್ನು ನೋಡಿದ ಹುಡುಗನೊಬ್ಬ ಬೆರಗುಪಟ್ಟು ತನ್ನ ಗೆಳೆಯನೊಬ್ಬನಿಗೆ ಆ ಹಕ್ಕಿಯನ್ನು ತೋರಿಸುತ್ತ, ಬಣ್ಣಿಸುತ್ತ, ಪದೇ ಪದೇ ಉದ್ಗರಿಸುವ ಪ್ರಶ್ನೆಯಂತಿದೆ ಈ ಸಾಲು. ಆ ಹುಡುಗನ ಬೆರಗು ಅವನ ಗೆಳೆಯನಿಗೂ ಸಹ ಹಬ್ಬುತ್ತದೆ.
ಇದು ಬೇಂದ್ರೆಯವರು ವಿಸ್ಮಯರಸವನ್ನು ಈ ಕವನದಲ್ಲಿ ಸಾಧಿಸಿದ ವಿಧಾನ.
ಕವನಕ್ಕೆ ಅವಶ್ಯವಾದ ಛಂದಸ್ಸನ್ನು ಆಯ್ಕೆ ಮಾಡುವದು, ಕವನದಲ್ಲಿ ಲಯವನ್ನು ಸಾಧಿಸುವದು ಇವು ಬೇಂದ್ರೆಯವರ ಸಹಜಸಿದ್ಧಿಗಳು. ಈ ಕವನದ ನುಡಿಗಳಲ್ಲಿ ಐದು ಸಾಲುಗಳಿವೆ. ಕವನದಲ್ಲಿ ನಾಲ್ಕು ಸಾಲುಗಳಿರುವದು ಸಹಜ. ದಾಸರ ಹಾಡುಗಳಿಂದ ಹಿಡಿದು, ನವೋದಯದ ಭಾವಗೀತೆಗಳವರೆಗೆ, ಕನ್ನಡದ ಕವನಗಳು ಬಹುತೇಕವಾಗಿ ಚೌಪದಿಗಳೇ ಆಗಿವೆ. ನಡುಗನ್ನಡದ ಕವಿಗಳು ಷಟ್ಪದಿಗಳನ್ನು ರಚಿಸಿದ್ದಾರೆ ನಿಜ, ಆದರೆ ಅವೂ ಸಹ ಚೌಪದಿಗಳೇ. ಉದಾಹರಣೆಗೆ ಚಾಮರಸನ ಪ್ರಭುಲಿಂಗಲೀಲೆಯ ಈ ಪದ್ಯವನ್ನು ಗಮನಿಸಿರಿ:
ಹಿಡಿಹಿಡಿದುಕೊಂಡರ್ತಿಯಲಿ ಬೆಂ-
ಬಿಡದೆ ಶಿಕ್ಷಾಚಾರ್ಯತನದಲಿ
ಜಡಿದು, ಜಂಕಿಸಿ, ಮುದ್ದುತನ ಮಿಗೆ ಮಾಯೆ ತನ್ನಂತೆ|
ನಡೆಯಕಲಿಸಿದಳಂಚೆವಿಂಡಿಗೆ
ನುಡಿಯಕಲಿಸಿದರಗಿಳಿಗೆ
ಸರವಿಡಲು ಕಲಿಸಿದಳಾಕೆ ತನ್ನರಮನೆಯ ಕೋಗಿಲೆಗೆ||
ಭಾಮಿನೀಷಟ್ಪದಿಯ ಈ ನುಡಿಯನ್ನು ಹೀಗೂ ಬರೆಯಬಹುದು:
“ ಹಿಡಿಹಿಡಿದುಕೊಂಡರ್ತಿಯಲಿ, ಬೆಂಬಿಡದೆ ಶಿಕ್ಷಾಚಾರ್ಯತನದಲಿ
ಜಡಿದು ಜಂಕಿಸಿ, ಮುದ್ದುತನ ಮಿಗೆ ಮಾಯೆ ತನ್ನಂತೆ|
ನಡೆಯಕಲಿಸಿದಳಂಚೆವಿಂಡಿಗೆ, ನುಡಿಯಕಲಿಸಿದರಗಿಳಿಗೆ
ಸರವಿಡಲು ಕಲಿಸಿದಳಾಕೆ ತನ್ನರಮನೆಯ ಕೋಗಿಲೆಗೆ ”||
ಇದೀಗ ಚೌಪದಿಯಾಯಿತು!
ಹೀಗಿರುವಾಗ, ಬೇಂದ್ರೆಯವರು ಕವನವನ್ನು ಚೌಪದಿಯನ್ನಾಗಿ ಬರೆಯದೆ, ಪ್ರತಿಯೊಂದು ನುಡಿಗೂ ಐದನೆಯ ಸಾಲೊಂದನ್ನು ಜೋಡಿಸಿದ್ದಾರೆ. ಐದನೆಯ ಸಾಲಿನಲ್ಲಿ ವಿಸ್ಮಯವನ್ನು ಸೂಚಿಸುವ Recurring Lineಅನ್ನು ಇಟ್ಟಿದ್ದಾರೆ.
ಹೀಗೆ ಮಾಡುವಾಗ ಕಾವ್ಯದ ಲಯವು ಕೈತಪ್ಪಿ ಹೋಗಬೇಕು. ಆದರೆ ಏಳು ನುಡಿಗಳ ಈ ಕವನದಲ್ಲಿ ಮೊದಲ ಸಾಲಿನಿಂದ ಕೊನೆಯ ಸಾಲಿನವರೆಗೂ ಕಾವ್ಯದಲಯವು ಸಮಪ್ರವಾಹದಲ್ಲಿ ಹರಿದಿದೆ.
“ಪಾತರಗಿತ್ತಿ ಪಕ್ಕ”ದಲ್ಲಿ ಪುಟ್ಟ ಸಾಲುಗಳ ಮೂಲಕ, ಎರಡೇ ಸಾಲುಗಳ ನುಡಿಯ ಮೂಲಕ, ದೀರ್ಘವಾಗಿರುವ ಇಡೀ ಕವನವನ್ನೇ ಚಿಕ್ಕ ಚಿಟ್ಟೆಯನ್ನಾಗಿ ಪರಿವರ್ತಿಸಿದ ಕವಿ, ಇಲ್ಲಿ ಚೌಪದಿಯ ಬಂಧವನ್ನು ಕಿತ್ತೊಗೆದು, ಕಾವ್ಯದಲಯವನ್ನು ಹಿಡಿತದಲ್ಲಿ ಇಟ್ಟುಕೊಂಡೇ ಕಾಲಪಕ್ಷಿಯ ವಿಶಾಲತೆಯನ್ನು ಓದುಗನ ಅನುಭವಕ್ಕೆ ತರುತ್ತಾರೆ.
ಇನ್ನು ಬೇಂದ್ರೆಯವರ ಕವನಗಳ ಇತರ ಲಕ್ಷಣಗಳು ಈ ಕವನದಲ್ಲೂ ಕಾಣುತ್ತವೆ.
ವಾಸ್ತವತೆಯನ್ನು ಚಮತ್ಕಾರಿಕವಾಗಿ ಬಳಸುವ ಅವರ ಪ್ರತಿಭೆಯನ್ನು ಇಲ್ಲೂ ಕಾಣಬಹುದು. ಉದಾಹರಣೆಗೆ ‘ಎವೆ ತೆರೆದಿಕ್ಕುವ ಹೊತ್ತಿನ ಒಳಗೆ’ ಎನ್ನುವಾಗಿನ ಕಾಲಮಾನದ ವಾಸ್ತವತೆಯನ್ನು ಗಮನಿಸಬಹುದು.
ಬೇಂದ್ರೆಯವರ ಕವನಗಳಲ್ಲಿ ಬರುವ ಪ್ರತೀಕಗಳು ಸಂಕೀರ್ಣವಾಗಿರುತ್ತವೆ. ಕಾಲಪಕ್ಷಿಯ ಪುಚ್ಚ ಹಾಗೂ ಗರಿಗಳ ಪ್ರತೀಕವನ್ನು ಉದಾಹರಣೆಯಾಗಿ ಗಮನಿಸಬಹುದು.
ಬೇಂದ್ರೆಯವರ ಕಲ್ಪನೆ ಅಗಾಧವಾದದ್ದು. ಕಾಲಪಕ್ಷಿಯ ವರ್ಣನೆ, ಅದರ ಆಹಾರ,ಅದರ ಕಾರ್ಯಸೂಚಿಯನ್ನು ಬೇಂದ್ರೆಯವರು ಹೆಣೆದ ಪರಿಯನ್ನು ಗಮನಿಸಿದರೆ, ಅವರ ಕಲ್ಪನಾಸಾಮರ್ಥ್ಯದ ಅರಿವಾಗುವದು. ಇಂತಹ ಅಪಾರ ಕಲ್ಪನೆಯನ್ನು systematic ಆಗಿ ಹೆಣೆಯುತ್ತ, ಕವನದ focus ಅನ್ನು ಕಾಯ್ದುಕೊಂಡು ಹೋಗುವದು ಪ್ರತಿಭಾವಂತ ಕವಿಗೇ ಸಾಧ್ಯ.
ಇಷ್ಟೆಲ್ಲ ಗುಣಗಳಿದ್ದ ಈ ಕವನದಲ್ಲಿ ದೋಷಗಳೂ ಇವೆ.
ಓದುಗನಲ್ಲಿ ಕಾಲಪಕ್ಷಿಯ ಬಗೆಗೆ ಬೆರಗು ಹುಟ್ಟುತ್ತದೆಯೇ ಹೊರತು, ಕಾಲಪಕ್ಷಿಯ ಪ್ರಧಾನಗುಣವಾದ powerಅನ್ನು ಆತ ಅನುಭವಿಸುವದಿಲ್ಲ. ಕಾಲಪಕ್ಷಿಯ powerಅನ್ನು ತಿಳಿಸಲು, ಬೇಂದ್ರೆ ಮೂರು-ನಾಲ್ಕು ನುಡಿಗಳನ್ನು ಬರೆದಿದ್ದಾರೆ. ಆದರೆ ಈ ಸಾಲುಗಳು ಕೇವಲ ವಾಚ್ಯವಾಗಿವೆ. ಕಾಲಪಕ್ಷಿಯ ಶಕ್ತಿ ಓದುಗನ ಅನುಭವಕ್ಕೆ ಬರುವದಿಲ್ಲ.
ಶಂಕರಾಚಾರ್ಯರು ತಮ್ಮ ಸ್ತೋತ್ರವೊಂದರಲ್ಲಿ ಕಾಲದ ಮಹಿಮೆಯನ್ನು ಹೀಗೆ ಬಣ್ಣಿಸಿದ್ದಾರೆ:
“ಕಾಲೋ ಜಗದ್ ಭಕ್ಷಕ:” (=Time swallows universes.)
ಈ ಒಂದು ಸಾಲಿನಲ್ಲಿ ಅನುಭವಕ್ಕೆ ಬರುವ ಕಾಲದ ಶಕ್ತಿಯು, ಬೇಂದ್ರೆಯವರ ೩೫ ಸಾಲುಗಳಲ್ಲಿ ಬರುವದಿಲ್ಲವೆನ್ನುವದು ಕವನದ ಕಳಾಹೀನತೆಯ ನಿದರ್ಶನವಾಗಿದೆ.
ಹೀಗಾಗಿ ಬೇಂದ್ರೆಯವರ ಈ ಕವನವು ಉತ್ತಮ ಲಕ್ಷಣಗಳಿದ್ದರೂ ಸಹ ರಸಸೃಷ್ಟಿಯಲ್ಲಿ ಸೋತಿದೆ ಎಂದು ಹೇಳಬೇಕಾಗುತ್ತದೆ.
Saturday, June 13, 2009
ಸೋರುತಿಹದು ಮನಿಯ ಮಾಳಿಗಿ
ಪರಮಾತ್ಮನ ಸಾಕ್ಷಾತ್ಕಾರಕ್ಕಾಗಿ ಹಂಬಲಿಸುವ ಸಾಧಕರು, ತಾವು ಈ ದರ್ಶನಕ್ಕೆ ಅರ್ಹರೊ ಎಂದು ತಮ್ಮನ್ನೆ ಪರೀಕ್ಷಿಸಿಕೊಳ್ಳುವದು ಸಹಜ. ಕನ್ನಡ ನಾಡಿನಲ್ಲಿ ಬಾಳಿದ, ಇಲ್ಲಿಯ ನಾಡಿಗರ ಮನಸ್ಸನ್ನು ಬೆಳಗಿದ ಇಬ್ಬರು ಅನುಭಾವಿಗಳಾದ ಬಸವಣ್ಣ ಹಾಗೂ ಶರೀಫರು ಇಂತಹ ಭಾವನೆಗಳನ್ನು ತಮ್ಮ ವಚನ ಹಾಗೂ ಹಾಡಿನಲ್ಲಿ ವ್ಯಕ್ತಪಡಿಸಿದ್ದಾರೆ.
ಇವರಲ್ಲಿ ಮೊದಲಿಗರಾದ ಬಸವಣ್ಣನವರ ವಚನವನ್ನೇ ಗಮನಿಸಿರಿ:
“ಮನೆಯೊಳಗೆ ಮನೆಯೊಡೆಯನಿದ್ದಾನೊ, ಇಲ್ಲವೊ?
ಹೊಸ್ತಿಲಲ್ಲಿ ಹುಲ್ಲು ಹುಟ್ಟಿ, ಮನೆಯೊಳಗೆ ರಜ ತುಂಬಿ,
ಮನೆಯೊಳಗೆ ಮನೆಯೊಡೆಯನಿದ್ದಾನೊ, ಇಲ್ಲವೊ?
ತನುವಿನೊಳಗೆ ಹುಸಿ ತುಂಬಿ, ಮನದೊಳಗೆ ವಿಷಯ ತುಂಬಿ
ಮನೆಯೊಳಗೆ ಮನೆಯೊಡೆಯನಿಲ್ಲಾ
ಕೂಡಲಸಂಗಮ ದೇವಾ!”
ಬಸವಣ್ಣನವರು ತಮ್ಮ ತನು ಹಾಗೂ ಮನವನ್ನು ಮನೆಗೆ ಹೋಲಿಸಿ, ಈ ಮನೆಯಲ್ಲಿ ಕೇವಲ ಕಸ ಕಡ್ಡಿ ತುಂಬಿಕೊಂಡಿದೆ; ಈ ಮನೆಯಲ್ಲಿ ಮನೆಯನ್ನು ಸ್ವಚ್ಛಗೊಳಿಸುವ ಒಡೆಯನು ಇಲ್ಲವಲ್ಲ ಎಂದು ವಿಷಾದಿಸುತ್ತಾರೆ. ಮನೆಯನ್ನು ಸ್ವಚ್ಛಗೊಳಿಸುವ ಒಡೆಯ ಅಂದರೆ ತಿಳಿವನ್ನು ಪಡೆದ ಆತ್ಮ ಅಥವಾ ಪರಮಾತ್ಮ.
ಇದರಂತೆಯೆ, ಹತ್ತೊಂಬತ್ತನೆಯ ಶತಮಾನದ ಪೂರ್ವಾರ್ಧದಲ್ಲಿ ಬಾಳಿದ ಶರೀಫರು ಸಹ ಮನೆಯನ್ನು ಮನಸ್ಸಿಗೆ ಅಥವಾ Selfಗೆ ಹೋಲಿಸಿ ಹಾಡಿದ್ದಾರೆ. ಶರೀಫರ ಹಾಡು ಹೀಗಿದೆ:
ಸೋರುತಿಹದು ಮನಿಯ ಮಾಳಿಗಿ, ಅಜ್ಞಾನದಿಂದ
ಸೋರುತಿಹದು ಮನಿಯ ಮಾಳಿಗಿ ||ಪಲ್ಲ||
ಸೋರುತಿಹದು ಮನಿಯ ಮಾಳಿಗಿ
ದಾರುಗಟ್ಟಿ ಮಾಳ್ಪರಿಲ್ಲ
ಕಾಳಕತ್ತಲೆಯೊಳಗೆ ನಾನು
ಮೇಲಕೇರಿ ಮೆಟ್ಟಲಾರೆ ||೧||
ಮುರುಕು ತೊಲೆಯು ಹುಳುಕು ಜಂತಿ
ಕೊರೆದು ಸರಿದು ಕೀಲ ಸಡಲಿ
ಹರಕ ಚಪ್ಪರ ಜೇರು ಗಿಂಡಿ
ಮೇಲಕೇರಿ ಮೆಟ್ಟಲಾರೆ ||೨||
ಕರಕಿ ಹುಲ್ಲು ಕಸವು ಹತ್ತಿ
ದುರಿತ ಭವದಿ ಇರಬಿ ಮುತ್ತಿ
ಜಲದಿ ಭರದಿ ತಿಳಿಯ ಮಣ್ಣು
ಒಳಗೆ ಹೊರಗೆ ಏಕವಾಗಿ ||೩||
ಕಾಂತೆ ಕೇಳೆ ಕರುಣದಿಂದ
ಬಂತೆ ಕಾಣೆ ಹುಬ್ಬಿ ಮಳೆಯು
ಈಗ ಶಿಶುವಿನಾಳ ಗ್ರಾಮಕ
ಮೇಘರಾಜ ಒಲಿದು ಬಂದ ||೪||
ಶರೀಫರು ಜೀವಿಸಿದ್ದ ಬೆಳವಲ ನಾಡಿನಲ್ಲಿ ಮಳೆ ಕಡಿಮೆ. ಆದುದರಿಂದ ಮನೆಯ ಮೇಲ್ಭಾಗವು (roof) ಮಣ್ಣಿನದಾಗಿರುತ್ತಿತ್ತು. ಇದಕ್ಕೆ ಮೇಲ್ಮುದ್ದಿಯ ಮನೆ ಎಂದು ಹೇಳುತ್ತಾರೆ. ಈ ಮೇಲ್ಮುದ್ದಿಗೆ ಆಧಾರ ಎಂದು ಕೆಳಭಾಗದಲ್ಲಿ ಕಟ್ಟಿಗೆಯ ತೊಲೆ ಹಾಗೂ ಜಂತಿಗಳನ್ನು ಬಳಸಿರುತ್ತಾರೆ.
ಮಣ್ಣಿನ ಮೇಲ್ಮುದ್ದಿಯಾಗಿರುವದರಿಂದ, ಇಲ್ಲಿ ಹುಲ್ಲು ಬೆಳೆಯುವದು ಸ್ವಾಭಾವಿಕ. ತೇವಾಂಶದಿಂದಾಗಿ ತೊಲೆ ಹಾಗೂ ಜಂತಿಗಳು ಕೆಡುವದೂ ಸಹ ಸ್ವಾಭಾವಿಕ. ಇದರಿಂದಾಗಿ ಮನೆಯ ಮಾಳಿಗೆ ಸೋರಲು ಪ್ರಾರಂಭವಾಗುತ್ತದೆ.
ಈ ಮೇಲ್ಮುದ್ದಿಯನ್ನು ಮಳೆಗಾಲಕ್ಕಿಂತ ಮೊದಲೇ ದುರಸ್ತು ಮಾಡಬೇಕಾಗುತ್ತದೆ.
ಈ ಹಾಡಿನಲ್ಲಿ ಶರೀಫರು ತಮ್ಮ self ಅಥವಾ ಮನಸ್ಸನ್ನು ಒಂದು ಮನೆಗೆ ಹೋಲಿಸಿ ಹಾಡಿದ್ದಾರೆ. ಈ ಮನೆಯ ಮಾಳಿಗೆ ಗಟ್ಟಿಯಾಗಿ ಉಳಿದಿಲ್ಲ, ಅದೀಗ ಸೋರುತ್ತಿದೆ. ಸೋರುವಿಕೆಗೆ ಅಜ್ಞಾನವೇ ಕಾರಣವೆಂದು ಶರೀಫರು ಮೊದಲಿನಲ್ಲಿಯೇ ಸಾರಿ ಬಿಡುತ್ತಾರೆ. ಈ ಅಜ್ಞಾನದ ಸ್ವರೂಪವೇನು? ಆತ್ಮಜ್ಞಾನವಿಲ್ಲದಿರುವದೇ ಅಜ್ಞಾನ! ಸೋರುವಿಕೆ ಎಂದರೇನು? ಮನೆಯನ್ನು ಸ್ವಚ್ಛವಾಗಿರಿಸಲು ಸಾಧ್ಯವಿಲ್ಲದಂತೆ, ಹೊರಗಿನ ಕಸಕಡ್ಡಿ, ಹುಳಹುಪ್ಪಡಿ ಇವೆಲ್ಲ ಮನೆಯ ಒಳಗೆ ಪ್ರವೇಶ ಪಡೆಯುವದು ಅಂದರೆ ವಿಕಾರಗಳು ಮನಸ್ಸನ್ನು ಪ್ರವೇಸಿಸುವದು.
ಹಾಗಾದರೆ, ಈ ಮಾಳಿಗೆಯನ್ನು ಸರಿಪಡಿಸಲು ಶರೀಫರಿಗೆ ಇರುವ ತೊಂದರೆ ಏನು? ಈ ಹಾಡಿನ ಮೊದಲನೆಯ ನುಡಿಯಲ್ಲಿ ಶರೀಫರು ತಮ್ಮ ಅಸಹಾಯಕತೆಯನ್ನು ವಿವರಿಸಿದ್ದಾರೆ:
ಸೋರುತಿಹದು ಮನಿಯ ಮಾಳಿಗಿ
ದಾರುಗಟ್ಟಿ ಮಾಳ್ಪರಿಲ್ಲ
ಕಾಳಕತ್ತಲೆಯೊಳಗೆ ನಾನು
ಮೇಲಕೇರಿ ಮೆಟ್ಟಲಾರೆ ||
ಸೋರುತ್ತಿರುವ ಮನೆಯ ಮಾಳಿಗೆಯ ದಾರು(=ಮರ=timber)ಅನ್ನು ಗಟ್ಟಿ ಮಾಡುವವರು ಯಾರೂ ಇಲ್ಲ. ಮನೆಯನ್ನು ಕಾಳಕತ್ತಲೆಯು ಆವರಿಸಿರುವದರಿಂದ, ಮೆಟ್ಟಲು ಹತ್ತಿ, ಮಾಳಿಗೆಯನ್ನು ಏರಲು ಶರೀಫರಿಗೆ ಸಾಧ್ಯವಾಗುತ್ತಿಲ್ಲ. ಇಂತಹ ಹೊತ್ತಿನಲ್ಲಿ ಇವರು ಮೇಲೆ ಏರುವದು ಹೇಗೆ? ಮೇಲ್ಮುದ್ದಿಯ ತೊಲೆ ಹಾಗೂ ಜಂತಿಗಳನ್ನು ಸರಿಪಡಿಸುವದು ಹೇಗೆ?
ಎರಡನೆಯ ನುಡಿಯಲ್ಲಿ ಶರೀಫರು ಈ ಮಾಳಿಗೆಯು ಎಷ್ಟರಮಟ್ಟಿಗೆ ನಾದುರಸ್ತ ಆಗಿದೆ ಎನ್ನುವದನ್ನು ವರ್ಣಿಸಿದ್ದಾರೆ:
ಮುರುಕು ತೊಲೆಯು ಹುಳುಕು ಜಂತಿ
ಕೊರೆದು ಸರಿದು ಕೀಲ ಸಡಲಿ
ಹರಕ ಚಪ್ಪರ ಜೇರು ಗಿಂಡಿ
ಮೇಲಕೇರಿ ಮೆಟ್ಟಲಾರೆ ||
ಈ ಮನೆಯ ಮಾಳಿಗೆಯ ತೊಲೆ ಮುರಿದಿದೆ; ಜಂತಿಗೆ ಹುಳುಕು ಹತ್ತಿದೆ; ಹುಳ ಕೊರೆದದ್ದರಿಂದ ಜಂತಿ ಹಾಗೂ ತೊಲೆಗಳನ್ನು ಜೋಡಿಸುವ ಕೀಲಗಳು ಸಡಿಲುಗೊಂಡಿವೆ.ಅವುಗಳ ಮೇಲೆ ಹೊದಿಸಿದ ಚಪ್ಪರ ಹರಿದಿದೆ. ಬೆಳಕು ಬರಲೆಂದು ನಿರ್ಮಿಸಲಾದ ಜೀರುಗಿಂಡಿಯು (=ಸಣ್ಣ ಬೆಳಕಿಂಡಿಯು) ಹಾಳಾಗಿ ಹೋಗಿದೆ. ಅರ್ಥಾತ್ ಮಾಳಿಗೆ ಪೂರ್ಣವಾಗಿ ನಾದುರಸ್ತ ಆಗಿದೆ.
ಮಾಳಿಗೆಯ ಸಂಕೇತದ ಮೂಲಕ ಶರೀಫರು ತಮ್ಮ ಮನಸ್ಸೂ ಸಹ ಈ ಮಾಳಿಗೆಯಂತೆ ನಾದುರಸ್ತ ಆಗಿದೆ. ತಮ್ಮ ಮನಸ್ಸಿಗೆ ಬೆಳಕನ್ನು ಕೊಡುವ ಬೆಳಕಿಂಡಿ ಹಾಳಾಗಿ ಹೋಗಿದ್ದರಿಂದ ಒಳಗೆಲ್ಲ ಕತ್ತಲೆ ಕವಿದಿದೆ ಎಂದು ಹೇಳುತ್ತಿದ್ದಾರೆ. ಆದರೇನು, ಶರೀಫರಿಗೆ ದುರಸ್ತಿಗಾಗಿ ಮೇಲಕ್ಕೆ ಹತ್ತುವದೇ ಅಸಾಧ್ಯವಾಗಿದೆ.
ಈ ರೀತಿಯಾಗಿ ಮಾಳಿಗೆಯು ನಾದುರಸ್ತ ಆಗಿದ್ದರ ಪರಿಣಾಮವೇನು ಎನ್ನುವದನ್ನು ಶರೀಫರು ಮೂರನೆಯ ನುಡಿಯಲ್ಲಿ ಹೀಗೆ ವರ್ಣಿಸಿದ್ದಾರೆ:
ಕರಕಿ ಹುಲ್ಲು ಕಸವು ಹತ್ತಿ
ದುರಿತ ಭವದಿ ಇರಬಿ ಮುತ್ತಿ
ಜಲದಿ ಭರದಿ ತಿಳಿಯ ಮಣ್ಣು
ಒಳಗೆ ಹೊರಗೆ ಏಕವಾಗಿ ||
ಮೇಲ್ಮುದ್ದಿಯು ಕೆಟ್ಟು ಹೋಗಿ, ತೇವಾಂಶ ಜಾಸ್ತಿಯಾಗಿದ್ದರಿಂದ ಅಲ್ಲಿ ಕರಕಿ ಹುಲ್ಲು ಬೆಳೆದು ಬಿಟ್ಟಿದೆ. ಕರಕಿಯು ಬಹಳ ಗಟ್ಟಿಯಾದ ಹುಲ್ಲಿನ ಜಾತಿ. ಎಷ್ಟು ಕಿತ್ತಿ ಒಗೆದರೂ ನಿರ್ಮೂಲವಾಗುವದಿಲ್ಲ. ಅದೇ ರೀತಿಯಾಗಿ, ಶರೀಫರ ಮನಸ್ಸಿನಲ್ಲಿಯೂ ಸಹ ವಿಷಯಗಳೆಂಬ ವಿಕಾರಗಳು ಕರಕಿ ಹುಲ್ಲಿನಂತೆ ಗಟ್ಟಿಯಾಗಿ ಬೆಳೆದು ನಿಂತಿವೆ. (‘ಕಸವು ಹತ್ತಿ’ ಎನ್ನುವದನ್ನು ‘ಗಟ್ಟಿಯಾಗಿ’ ಅಥವಾ ‘ಕಸಕಡ್ಡಿ ಬೆಳೆದು’ ಎನ್ನುವ ಎರಡೂ ಅರ್ಥಗಳಲ್ಲಿ ತಿಳಿಯಬಹುದು.) ಇಂತಹ ವಿಕಾರಗಳು ಇದ್ದಲ್ಲಿ ಈ ಭವದ ದುರಿತಗಳು ಅಂದರೆ ಸಂಸಾರದ ಕೇಡುಗಳು, ಇರುವೆಗಳು ಮುತ್ತಿಕೊಳ್ಳುವಂತೆ ಮುತ್ತಿಕೊಳ್ಳುತ್ತವೆ. ಕಸವನ್ನು ತೆಗೆದು ಹಾಕದ ಹೊರತು, ಇರುವೆಗಳು ಹೋಗುವದಿಲ್ಲ. ಇರುವೆಗಳು ಮುತ್ತಿದ್ದರಿಂದ ಮೇಲ್ಮುದ್ದಿಯ ಮಣ್ಣೆಲ್ಲ ಏಕರೂಪವಾಗಿ ಬಿಟ್ಟಿದೆ. ಅದೇ ರೀತಿಯಾಗಿ, ಸಂಸಾರದ ಕೇಡುಗಳಿಂದ ಶರೀಫರ ಮನೋದ್ರವ್ಯವೆಲ್ಲ ಏಕರೂಪವಾಗಿ ವಿಕಾರಗೊಂಡಿದೆ.
ಆದರೆ, ಶರಿಫರು ಎದೆಗುಂದಿಲ್ಲ. ಅವರಿಗೆ ಗುರುಕರುಣೆಯು ಲಭಿಸುವ ಧೈರ್ಯವಿದೆ. ತಮ್ಮ ಗೆಳೆತಿಗೆ ಶರೀಫರು ಈ ಭರವಸೆಯನ್ನು ಈ ರೀತಿಯಾಗಿ ವ್ಯಕ್ತಪಡಿಸಿದ್ದಾರೆ.
ಕಾಂತೆ ಕೇಳೆ ಕರುಣದಿಂದ
ಬಂತೆ ಕಾಣೆ ಹುಬ್ಬಿ ಮಳೆಯು
ಈಗ ಶಿಶುವಿನಾಳ ಗ್ರಾಮಕ
ಮೇಘರಾಜ ಒಲಿದು ಬಂದ ||
ಶರೀಫರು ಯಾರಿಗೆ ‘ಕಾಂತೆ’ ಎಂದು ಹೇಳುತ್ತಿದ್ದಾರೆ? ಅವರ ಅನೇಕ ಕವನಗಳು ಈ ಕಾಂತೆಗೆ ಸಂಬೋಧಿತವಾಗಿವೆ. ಕಾಂತೆ ಎಂದರೆ ಆಪ್ತ ಗೆಳತಿ ಎಂದು ತಿಳಿಯಬಹುದು. ತಮ್ಮ ಮನದ ಮಾತುಗಳನ್ನು ಯಾರಿಗೆ ಹೇಳಬಹುದೊ ಅಂತಹ confidante ಈ ಕಾಂತೆ. ತಮ್ಮ ಅಂತರಾತ್ಮಕ್ಕೇ ಶರೀಫರು ಕಾಂತೆ ಎಂದು ಕರೆಯುತ್ತಿದ್ದಾರೆ ಎನ್ನಬಹುದು.
ಹುಬ್ಬಿ ಮಳೆಯು ಶ್ರಾವಣ ಮಾಸದಲ್ಲಿ ಬರುತ್ತದೆ. ಶ್ರಾವಣ ಮಾಸವೆಂದರೆ ಮಳೆ ಧೋಧೋ ಎಂದು ಸುರಿಯುವ ಕಾಲ. ಗುರುಕಾರುಣ್ಯವೂ ಸಹ ಶರೀಫರಿಗೆ ಪೂರ್ಣವಾಗಿ ಒಲಿದು ಬರಲಿದೆ ಎನ್ನುವದರ ಸೂಚನೆಯನ್ನು ಶರೀಫರು ಇಲ್ಲಿ ನೀಡುತ್ತಿದ್ದಾರೆ. ಅದರ ಪೂರ್ವಸೂಚನೆಯಾಗಿ ಶಿಶುವಿನಾಳ ಗ್ರಾಮಕ್ಕೆ ಮೋಡಗಳು ಒಲಿದು ಬಂದಿವೆ ಎಂದು ಶರೀಫರು ಹೇಳುತ್ತಿದ್ದಾರೆ.
ಈ ರೀತಿಯಾಗಿ ಶರೀಫರ ಈ ಹಾಡು ಸತ್-ವಿಶ್ವಾಸದೊಂದಿಗೆ ಮುಕ್ತಾಯವಾಗಿದೆ.
ಇವರಲ್ಲಿ ಮೊದಲಿಗರಾದ ಬಸವಣ್ಣನವರ ವಚನವನ್ನೇ ಗಮನಿಸಿರಿ:
“ಮನೆಯೊಳಗೆ ಮನೆಯೊಡೆಯನಿದ್ದಾನೊ, ಇಲ್ಲವೊ?
ಹೊಸ್ತಿಲಲ್ಲಿ ಹುಲ್ಲು ಹುಟ್ಟಿ, ಮನೆಯೊಳಗೆ ರಜ ತುಂಬಿ,
ಮನೆಯೊಳಗೆ ಮನೆಯೊಡೆಯನಿದ್ದಾನೊ, ಇಲ್ಲವೊ?
ತನುವಿನೊಳಗೆ ಹುಸಿ ತುಂಬಿ, ಮನದೊಳಗೆ ವಿಷಯ ತುಂಬಿ
ಮನೆಯೊಳಗೆ ಮನೆಯೊಡೆಯನಿಲ್ಲಾ
ಕೂಡಲಸಂಗಮ ದೇವಾ!”
ಬಸವಣ್ಣನವರು ತಮ್ಮ ತನು ಹಾಗೂ ಮನವನ್ನು ಮನೆಗೆ ಹೋಲಿಸಿ, ಈ ಮನೆಯಲ್ಲಿ ಕೇವಲ ಕಸ ಕಡ್ಡಿ ತುಂಬಿಕೊಂಡಿದೆ; ಈ ಮನೆಯಲ್ಲಿ ಮನೆಯನ್ನು ಸ್ವಚ್ಛಗೊಳಿಸುವ ಒಡೆಯನು ಇಲ್ಲವಲ್ಲ ಎಂದು ವಿಷಾದಿಸುತ್ತಾರೆ. ಮನೆಯನ್ನು ಸ್ವಚ್ಛಗೊಳಿಸುವ ಒಡೆಯ ಅಂದರೆ ತಿಳಿವನ್ನು ಪಡೆದ ಆತ್ಮ ಅಥವಾ ಪರಮಾತ್ಮ.
ಇದರಂತೆಯೆ, ಹತ್ತೊಂಬತ್ತನೆಯ ಶತಮಾನದ ಪೂರ್ವಾರ್ಧದಲ್ಲಿ ಬಾಳಿದ ಶರೀಫರು ಸಹ ಮನೆಯನ್ನು ಮನಸ್ಸಿಗೆ ಅಥವಾ Selfಗೆ ಹೋಲಿಸಿ ಹಾಡಿದ್ದಾರೆ. ಶರೀಫರ ಹಾಡು ಹೀಗಿದೆ:
ಸೋರುತಿಹದು ಮನಿಯ ಮಾಳಿಗಿ, ಅಜ್ಞಾನದಿಂದ
ಸೋರುತಿಹದು ಮನಿಯ ಮಾಳಿಗಿ ||ಪಲ್ಲ||
ಸೋರುತಿಹದು ಮನಿಯ ಮಾಳಿಗಿ
ದಾರುಗಟ್ಟಿ ಮಾಳ್ಪರಿಲ್ಲ
ಕಾಳಕತ್ತಲೆಯೊಳಗೆ ನಾನು
ಮೇಲಕೇರಿ ಮೆಟ್ಟಲಾರೆ ||೧||
ಮುರುಕು ತೊಲೆಯು ಹುಳುಕು ಜಂತಿ
ಕೊರೆದು ಸರಿದು ಕೀಲ ಸಡಲಿ
ಹರಕ ಚಪ್ಪರ ಜೇರು ಗಿಂಡಿ
ಮೇಲಕೇರಿ ಮೆಟ್ಟಲಾರೆ ||೨||
ಕರಕಿ ಹುಲ್ಲು ಕಸವು ಹತ್ತಿ
ದುರಿತ ಭವದಿ ಇರಬಿ ಮುತ್ತಿ
ಜಲದಿ ಭರದಿ ತಿಳಿಯ ಮಣ್ಣು
ಒಳಗೆ ಹೊರಗೆ ಏಕವಾಗಿ ||೩||
ಕಾಂತೆ ಕೇಳೆ ಕರುಣದಿಂದ
ಬಂತೆ ಕಾಣೆ ಹುಬ್ಬಿ ಮಳೆಯು
ಈಗ ಶಿಶುವಿನಾಳ ಗ್ರಾಮಕ
ಮೇಘರಾಜ ಒಲಿದು ಬಂದ ||೪||
ಶರೀಫರು ಜೀವಿಸಿದ್ದ ಬೆಳವಲ ನಾಡಿನಲ್ಲಿ ಮಳೆ ಕಡಿಮೆ. ಆದುದರಿಂದ ಮನೆಯ ಮೇಲ್ಭಾಗವು (roof) ಮಣ್ಣಿನದಾಗಿರುತ್ತಿತ್ತು. ಇದಕ್ಕೆ ಮೇಲ್ಮುದ್ದಿಯ ಮನೆ ಎಂದು ಹೇಳುತ್ತಾರೆ. ಈ ಮೇಲ್ಮುದ್ದಿಗೆ ಆಧಾರ ಎಂದು ಕೆಳಭಾಗದಲ್ಲಿ ಕಟ್ಟಿಗೆಯ ತೊಲೆ ಹಾಗೂ ಜಂತಿಗಳನ್ನು ಬಳಸಿರುತ್ತಾರೆ.
ಮಣ್ಣಿನ ಮೇಲ್ಮುದ್ದಿಯಾಗಿರುವದರಿಂದ, ಇಲ್ಲಿ ಹುಲ್ಲು ಬೆಳೆಯುವದು ಸ್ವಾಭಾವಿಕ. ತೇವಾಂಶದಿಂದಾಗಿ ತೊಲೆ ಹಾಗೂ ಜಂತಿಗಳು ಕೆಡುವದೂ ಸಹ ಸ್ವಾಭಾವಿಕ. ಇದರಿಂದಾಗಿ ಮನೆಯ ಮಾಳಿಗೆ ಸೋರಲು ಪ್ರಾರಂಭವಾಗುತ್ತದೆ.
ಈ ಮೇಲ್ಮುದ್ದಿಯನ್ನು ಮಳೆಗಾಲಕ್ಕಿಂತ ಮೊದಲೇ ದುರಸ್ತು ಮಾಡಬೇಕಾಗುತ್ತದೆ.
ಈ ಹಾಡಿನಲ್ಲಿ ಶರೀಫರು ತಮ್ಮ self ಅಥವಾ ಮನಸ್ಸನ್ನು ಒಂದು ಮನೆಗೆ ಹೋಲಿಸಿ ಹಾಡಿದ್ದಾರೆ. ಈ ಮನೆಯ ಮಾಳಿಗೆ ಗಟ್ಟಿಯಾಗಿ ಉಳಿದಿಲ್ಲ, ಅದೀಗ ಸೋರುತ್ತಿದೆ. ಸೋರುವಿಕೆಗೆ ಅಜ್ಞಾನವೇ ಕಾರಣವೆಂದು ಶರೀಫರು ಮೊದಲಿನಲ್ಲಿಯೇ ಸಾರಿ ಬಿಡುತ್ತಾರೆ. ಈ ಅಜ್ಞಾನದ ಸ್ವರೂಪವೇನು? ಆತ್ಮಜ್ಞಾನವಿಲ್ಲದಿರುವದೇ ಅಜ್ಞಾನ! ಸೋರುವಿಕೆ ಎಂದರೇನು? ಮನೆಯನ್ನು ಸ್ವಚ್ಛವಾಗಿರಿಸಲು ಸಾಧ್ಯವಿಲ್ಲದಂತೆ, ಹೊರಗಿನ ಕಸಕಡ್ಡಿ, ಹುಳಹುಪ್ಪಡಿ ಇವೆಲ್ಲ ಮನೆಯ ಒಳಗೆ ಪ್ರವೇಶ ಪಡೆಯುವದು ಅಂದರೆ ವಿಕಾರಗಳು ಮನಸ್ಸನ್ನು ಪ್ರವೇಸಿಸುವದು.
ಹಾಗಾದರೆ, ಈ ಮಾಳಿಗೆಯನ್ನು ಸರಿಪಡಿಸಲು ಶರೀಫರಿಗೆ ಇರುವ ತೊಂದರೆ ಏನು? ಈ ಹಾಡಿನ ಮೊದಲನೆಯ ನುಡಿಯಲ್ಲಿ ಶರೀಫರು ತಮ್ಮ ಅಸಹಾಯಕತೆಯನ್ನು ವಿವರಿಸಿದ್ದಾರೆ:
ಸೋರುತಿಹದು ಮನಿಯ ಮಾಳಿಗಿ
ದಾರುಗಟ್ಟಿ ಮಾಳ್ಪರಿಲ್ಲ
ಕಾಳಕತ್ತಲೆಯೊಳಗೆ ನಾನು
ಮೇಲಕೇರಿ ಮೆಟ್ಟಲಾರೆ ||
ಸೋರುತ್ತಿರುವ ಮನೆಯ ಮಾಳಿಗೆಯ ದಾರು(=ಮರ=timber)ಅನ್ನು ಗಟ್ಟಿ ಮಾಡುವವರು ಯಾರೂ ಇಲ್ಲ. ಮನೆಯನ್ನು ಕಾಳಕತ್ತಲೆಯು ಆವರಿಸಿರುವದರಿಂದ, ಮೆಟ್ಟಲು ಹತ್ತಿ, ಮಾಳಿಗೆಯನ್ನು ಏರಲು ಶರೀಫರಿಗೆ ಸಾಧ್ಯವಾಗುತ್ತಿಲ್ಲ. ಇಂತಹ ಹೊತ್ತಿನಲ್ಲಿ ಇವರು ಮೇಲೆ ಏರುವದು ಹೇಗೆ? ಮೇಲ್ಮುದ್ದಿಯ ತೊಲೆ ಹಾಗೂ ಜಂತಿಗಳನ್ನು ಸರಿಪಡಿಸುವದು ಹೇಗೆ?
ಎರಡನೆಯ ನುಡಿಯಲ್ಲಿ ಶರೀಫರು ಈ ಮಾಳಿಗೆಯು ಎಷ್ಟರಮಟ್ಟಿಗೆ ನಾದುರಸ್ತ ಆಗಿದೆ ಎನ್ನುವದನ್ನು ವರ್ಣಿಸಿದ್ದಾರೆ:
ಮುರುಕು ತೊಲೆಯು ಹುಳುಕು ಜಂತಿ
ಕೊರೆದು ಸರಿದು ಕೀಲ ಸಡಲಿ
ಹರಕ ಚಪ್ಪರ ಜೇರು ಗಿಂಡಿ
ಮೇಲಕೇರಿ ಮೆಟ್ಟಲಾರೆ ||
ಈ ಮನೆಯ ಮಾಳಿಗೆಯ ತೊಲೆ ಮುರಿದಿದೆ; ಜಂತಿಗೆ ಹುಳುಕು ಹತ್ತಿದೆ; ಹುಳ ಕೊರೆದದ್ದರಿಂದ ಜಂತಿ ಹಾಗೂ ತೊಲೆಗಳನ್ನು ಜೋಡಿಸುವ ಕೀಲಗಳು ಸಡಿಲುಗೊಂಡಿವೆ.ಅವುಗಳ ಮೇಲೆ ಹೊದಿಸಿದ ಚಪ್ಪರ ಹರಿದಿದೆ. ಬೆಳಕು ಬರಲೆಂದು ನಿರ್ಮಿಸಲಾದ ಜೀರುಗಿಂಡಿಯು (=ಸಣ್ಣ ಬೆಳಕಿಂಡಿಯು) ಹಾಳಾಗಿ ಹೋಗಿದೆ. ಅರ್ಥಾತ್ ಮಾಳಿಗೆ ಪೂರ್ಣವಾಗಿ ನಾದುರಸ್ತ ಆಗಿದೆ.
ಮಾಳಿಗೆಯ ಸಂಕೇತದ ಮೂಲಕ ಶರೀಫರು ತಮ್ಮ ಮನಸ್ಸೂ ಸಹ ಈ ಮಾಳಿಗೆಯಂತೆ ನಾದುರಸ್ತ ಆಗಿದೆ. ತಮ್ಮ ಮನಸ್ಸಿಗೆ ಬೆಳಕನ್ನು ಕೊಡುವ ಬೆಳಕಿಂಡಿ ಹಾಳಾಗಿ ಹೋಗಿದ್ದರಿಂದ ಒಳಗೆಲ್ಲ ಕತ್ತಲೆ ಕವಿದಿದೆ ಎಂದು ಹೇಳುತ್ತಿದ್ದಾರೆ. ಆದರೇನು, ಶರೀಫರಿಗೆ ದುರಸ್ತಿಗಾಗಿ ಮೇಲಕ್ಕೆ ಹತ್ತುವದೇ ಅಸಾಧ್ಯವಾಗಿದೆ.
ಈ ರೀತಿಯಾಗಿ ಮಾಳಿಗೆಯು ನಾದುರಸ್ತ ಆಗಿದ್ದರ ಪರಿಣಾಮವೇನು ಎನ್ನುವದನ್ನು ಶರೀಫರು ಮೂರನೆಯ ನುಡಿಯಲ್ಲಿ ಹೀಗೆ ವರ್ಣಿಸಿದ್ದಾರೆ:
ಕರಕಿ ಹುಲ್ಲು ಕಸವು ಹತ್ತಿ
ದುರಿತ ಭವದಿ ಇರಬಿ ಮುತ್ತಿ
ಜಲದಿ ಭರದಿ ತಿಳಿಯ ಮಣ್ಣು
ಒಳಗೆ ಹೊರಗೆ ಏಕವಾಗಿ ||
ಮೇಲ್ಮುದ್ದಿಯು ಕೆಟ್ಟು ಹೋಗಿ, ತೇವಾಂಶ ಜಾಸ್ತಿಯಾಗಿದ್ದರಿಂದ ಅಲ್ಲಿ ಕರಕಿ ಹುಲ್ಲು ಬೆಳೆದು ಬಿಟ್ಟಿದೆ. ಕರಕಿಯು ಬಹಳ ಗಟ್ಟಿಯಾದ ಹುಲ್ಲಿನ ಜಾತಿ. ಎಷ್ಟು ಕಿತ್ತಿ ಒಗೆದರೂ ನಿರ್ಮೂಲವಾಗುವದಿಲ್ಲ. ಅದೇ ರೀತಿಯಾಗಿ, ಶರೀಫರ ಮನಸ್ಸಿನಲ್ಲಿಯೂ ಸಹ ವಿಷಯಗಳೆಂಬ ವಿಕಾರಗಳು ಕರಕಿ ಹುಲ್ಲಿನಂತೆ ಗಟ್ಟಿಯಾಗಿ ಬೆಳೆದು ನಿಂತಿವೆ. (‘ಕಸವು ಹತ್ತಿ’ ಎನ್ನುವದನ್ನು ‘ಗಟ್ಟಿಯಾಗಿ’ ಅಥವಾ ‘ಕಸಕಡ್ಡಿ ಬೆಳೆದು’ ಎನ್ನುವ ಎರಡೂ ಅರ್ಥಗಳಲ್ಲಿ ತಿಳಿಯಬಹುದು.) ಇಂತಹ ವಿಕಾರಗಳು ಇದ್ದಲ್ಲಿ ಈ ಭವದ ದುರಿತಗಳು ಅಂದರೆ ಸಂಸಾರದ ಕೇಡುಗಳು, ಇರುವೆಗಳು ಮುತ್ತಿಕೊಳ್ಳುವಂತೆ ಮುತ್ತಿಕೊಳ್ಳುತ್ತವೆ. ಕಸವನ್ನು ತೆಗೆದು ಹಾಕದ ಹೊರತು, ಇರುವೆಗಳು ಹೋಗುವದಿಲ್ಲ. ಇರುವೆಗಳು ಮುತ್ತಿದ್ದರಿಂದ ಮೇಲ್ಮುದ್ದಿಯ ಮಣ್ಣೆಲ್ಲ ಏಕರೂಪವಾಗಿ ಬಿಟ್ಟಿದೆ. ಅದೇ ರೀತಿಯಾಗಿ, ಸಂಸಾರದ ಕೇಡುಗಳಿಂದ ಶರೀಫರ ಮನೋದ್ರವ್ಯವೆಲ್ಲ ಏಕರೂಪವಾಗಿ ವಿಕಾರಗೊಂಡಿದೆ.
ಆದರೆ, ಶರಿಫರು ಎದೆಗುಂದಿಲ್ಲ. ಅವರಿಗೆ ಗುರುಕರುಣೆಯು ಲಭಿಸುವ ಧೈರ್ಯವಿದೆ. ತಮ್ಮ ಗೆಳೆತಿಗೆ ಶರೀಫರು ಈ ಭರವಸೆಯನ್ನು ಈ ರೀತಿಯಾಗಿ ವ್ಯಕ್ತಪಡಿಸಿದ್ದಾರೆ.
ಕಾಂತೆ ಕೇಳೆ ಕರುಣದಿಂದ
ಬಂತೆ ಕಾಣೆ ಹುಬ್ಬಿ ಮಳೆಯು
ಈಗ ಶಿಶುವಿನಾಳ ಗ್ರಾಮಕ
ಮೇಘರಾಜ ಒಲಿದು ಬಂದ ||
ಶರೀಫರು ಯಾರಿಗೆ ‘ಕಾಂತೆ’ ಎಂದು ಹೇಳುತ್ತಿದ್ದಾರೆ? ಅವರ ಅನೇಕ ಕವನಗಳು ಈ ಕಾಂತೆಗೆ ಸಂಬೋಧಿತವಾಗಿವೆ. ಕಾಂತೆ ಎಂದರೆ ಆಪ್ತ ಗೆಳತಿ ಎಂದು ತಿಳಿಯಬಹುದು. ತಮ್ಮ ಮನದ ಮಾತುಗಳನ್ನು ಯಾರಿಗೆ ಹೇಳಬಹುದೊ ಅಂತಹ confidante ಈ ಕಾಂತೆ. ತಮ್ಮ ಅಂತರಾತ್ಮಕ್ಕೇ ಶರೀಫರು ಕಾಂತೆ ಎಂದು ಕರೆಯುತ್ತಿದ್ದಾರೆ ಎನ್ನಬಹುದು.
ಹುಬ್ಬಿ ಮಳೆಯು ಶ್ರಾವಣ ಮಾಸದಲ್ಲಿ ಬರುತ್ತದೆ. ಶ್ರಾವಣ ಮಾಸವೆಂದರೆ ಮಳೆ ಧೋಧೋ ಎಂದು ಸುರಿಯುವ ಕಾಲ. ಗುರುಕಾರುಣ್ಯವೂ ಸಹ ಶರೀಫರಿಗೆ ಪೂರ್ಣವಾಗಿ ಒಲಿದು ಬರಲಿದೆ ಎನ್ನುವದರ ಸೂಚನೆಯನ್ನು ಶರೀಫರು ಇಲ್ಲಿ ನೀಡುತ್ತಿದ್ದಾರೆ. ಅದರ ಪೂರ್ವಸೂಚನೆಯಾಗಿ ಶಿಶುವಿನಾಳ ಗ್ರಾಮಕ್ಕೆ ಮೋಡಗಳು ಒಲಿದು ಬಂದಿವೆ ಎಂದು ಶರೀಫರು ಹೇಳುತ್ತಿದ್ದಾರೆ.
ಈ ರೀತಿಯಾಗಿ ಶರೀಫರ ಈ ಹಾಡು ಸತ್-ವಿಶ್ವಾಸದೊಂದಿಗೆ ಮುಕ್ತಾಯವಾಗಿದೆ.
Thursday, May 28, 2009
ಇವ ನಮ್ಮವ
ಹನ್ನೆರಡನೆಯ ಶತಮಾನದಲ್ಲಿ ನಡೆದ ಶರಣ ಚಳವಳಿಯು ಕರ್ನಾಟಕದ ಇತಿಹಾಸದಲ್ಲಿಯೆ ಅತ್ಯಂತ ಮಹತ್ವದ ಸಾಂಸ್ಕೃತಿಕ ಘಟನೆಯಾಗಿದೆ. ಈ ಘಟನೆಯ ಕೇಂದ್ರವ್ಯಕ್ತಿಗಳಲ್ಲಿ ಬಸವಣ್ಣನವರು ಅಗ್ರಗಣ್ಯರು. ಬಸವಣ್ಣನವರ ವ್ಯಕ್ತಿತ್ವದಿಂದ ಬೆರಗುಗೊಂಡು, ಪ್ರಭಾವಿತರಾಗಿ ಅವರ ಬಗೆಗೆ ಸಾಹಿತ್ಯ ರಚಿಸಿದವರು ಅನೇಕರು. ಅವರ ಜೀವನಚರಿತ್ರೆಯನ್ನು ಕನ್ನಡದಲ್ಲಿ ರಚಿಸಿದವರಲ್ಲಿ ಹರಿಹರನು ಮೊದಲಿಗನು. ಆಧುನಿಕರಲ್ಲಿ, ದ. ರಾ. ಬೇಂದ್ರೆಯವರು ‘ತಲೆದಂಡ’ ಎನ್ನುವ ನಾಟಕವನ್ನು ರಚಿಸಿದರೂ ಸಹ ಅದು ಪ್ರಕಾಶನಗೊಳ್ಳಲಿಲ್ಲ. ಆಬಳಿಕ ಅ.ನ.ಕೃಷ್ಣರಾಯರು ‘ಜಗಜ್ಯೋತಿ ಬಸವೇಶ್ವರ’ ನಾಟಕವನ್ನು ರಚಿಸಿದರೆ, ಪುಟ್ಟಸ್ವಾಮಿಗಳು ‘ಕಲ್ಯಾಣ ಕ್ರಾಂತಿ’ ಕಾದಂಬರಿಯನ್ನು ಬರೆದರು. ಶರಣ ಚಳುವಳಿಯನ್ನು ಸಾಮಾಜಿಕ ದೃಷ್ಟಿಕೋನದಿಂದ ಅರ್ಥೈಸಲು ಪ್ರಯತ್ನಿಸಿ ಲಂಕೇಶ ಹಾಗೂ ಶಿವಪ್ರಕಾಶ ಅವರು ‘ಸಂಕ್ರಾಂತಿ’ ಹಾಗು ’ಮಹಾಚೈತ್ರ’ ನಾಟಕಗಳನ್ನು ಬರೆದರು. ಗಿರೀಶ ಕಾರ್ನಾಡರು ತಾವು ರಚಿಸಿದ ನಾಟಕಕ್ಕೆ, ಬೇಂದ್ರೆಯವರ ಅನುಮತಿಯೊಂದಿಗೆ ’ತಲೆದಂಡ’ ಎನ್ನುವ ಹೆಸರನ್ನೇ ಬಳಸಿಕೊಂಡರು.
ಶ್ರೀ ವ್ಯಾಸ ದೇಶಪಾಂಡೆಯವರ “ಇವ ನಮ್ಮವ ” ನಾಟಕವು ಈ ಸರಣಿಯಲ್ಲಿಯೆ ಇತ್ತೀಚಿನ ಆದರೆ ಅತ್ಯಂತ ಭಿನ್ನವಾದ ನಾಟಕ. ೨೦೦೬ನೆಯ ಇಸವಿಯಲ್ಲಿ ರಚಿತವಾದ ಈ ನಾಟಕವು ಈವರೆಗೆ ಅನೇಕ ರಂಗಪ್ರಯೋಗಗಳನ್ನೂ ಕಂಡಿದೆ.
“ಇವ ನಮ್ಮವ ” ನಾಟಕವು ಕನ್ನಮಾರಿ ಎನ್ನುವ ಕಳ್ಳನೊಬ್ಬನು ಬಸವಣ್ಣನ ಮನೆಯಲ್ಲಿ ಕಳ್ಳತನ ಮಾಡಲು ಯತ್ನಿಸಿ, ಸಿಕ್ಕಿಬಿದ್ದು, ಆ ಬಳಿಕ ಪರಿವರ್ತನೆಗೊಂಡು ಶರಣನಾದವನ ಕತೆಯನ್ನು ಆಧರಿಸಿದೆ. ಆದರೆ ಇದಿಷ್ಟೇ ಕತೆಯ ಮೂಲಕ ಲೇಖಕರು ಆ ಕಾಲದ ಸಾಮಾಜಿಕ, ಆರ್ಥಿಕ ಹಾಗು ರಾಜಕೀಯ ವಿಶ್ಲೇಷಣೆಯನ್ನು ಸಮಗ್ರವಾಗಿ ಮಾಡಿದ್ದಾರೆ. ಇದಲ್ಲದೆ ಆ ಕಾಲದ ಜನಸಾಮಾನ್ಯರ, ಶರಣಸಂಕುಲದ, ದುಡ್ಡುಳ್ಳವರ ಹಾಗೂ ಆಡಳಿತವರ್ಗದ ಅರ್ಥಪೂರ್ಣ ವಿಶ್ಲೇಷಣೆಯೂ ಇಲ್ಲಿದೆ. (ಆ ವಿಶ್ಲೇಷಣೆಯು ಇಂದಿಗೂ ಹಾಗೂ ಎಂದೆಂದಿಗೂ ನಮ್ಮೆಲ್ಲ ಸಮಾಜಗಳಿಗೆ ಅನ್ವಯಿಸುವಂತಿದೆ!)
ನಾಟಕದ ಪಾತ್ರಗಳು:
ಕನ್ನಮಾರಿ:
ನಾಟಕವನ್ನು ಮೊದಲಿನಿಂದ ಕೊನೆಯವರೆಗೂ ವ್ಯಾಪಿಸಿಕೊಂಡ ಕನ್ನಮಾರಿಯು ಈ ನಾಟಕದ ಮಹತ್ವದ ಪಾತ್ರ. ಆದರೂ ಆತ ನಾಟಕದ ನಾಯಕನಲ್ಲ. ನಾಟಕದ ಬೆಳವಣಿಗೆಯ ದೃಷ್ಟಿಯಿಂದ ನಾಟಕದ ಪ್ರತಿಯೊಂದು ಚಿಕ್ಕ ಪಾತ್ರವೂ ಇಲ್ಲಿ ಮಹತ್ವದ ಪಾತ್ರವೇ. ಆದರೆ ನಾಟಕದ ನಾಯಕಪಟ್ಟ ಲಭ್ಯವಾಗುವದು ಬಸವಣ್ಣನಿಗೇ.
ಈವರೆಗೆ, ಕನ್ನಮಾರಿಯು ರಚಿಸಿದ ಮೂರು ವಚನಗಳು ಲಭ್ಯವಾಗಿವೆ. ಆತನ ಎರಡು ವಚನಗಳನ್ನು ಲೇಖಕರು ಈ ನಾಟಕದಲ್ಲಿ ಬಳಸಿಕೊಂಡಿದ್ದಾರೆ. ನಾಟಕದ ಆರಂಭದಲ್ಲಿಯೇ ಕನ್ನಮಾರಿಯು ತನ್ನ ಬಂಟರೊಡನೆ ರಂಗಪ್ರವೇಶ ಮಾಡುತ್ತ, ತನ್ನ ಕನ್ನಗಾರಿಕೆಯನ್ನು ಸಮರ್ಥಿಸುವ ತರ್ಕವನ್ನು ಪ್ರೇಕ್ಷಕಕರ ಎದುರಿಗೆ ಸಾರುತ್ತಾನೆ. ಬಸವಣ್ಣನವರು ಒಂದು ಧ್ರುವವಾದರೆ, ಕನ್ನಮಾರಿಯು ವಿರುದ್ಧ ಧ್ರುವ. ಕನ್ನಮಾರಿಯ ವಿಚಾರ ಹಾಗೂ ತರ್ಕಗಳನ್ನು ಎದುರಿಸುವದು ಸರಳವಲ್ಲ. ಕಲ್ಯಾಣರಾಜ್ಯವನ್ನೇ ಕಳ್ಳರ ರಾಜ್ಯವೆಂದು ಕರೆಯುತ್ತಾನೀತ.
ರಾಜ, ಆತನ ಅಧಿಕಾರಿಗಳು, ಸಮಾಜದ ಶ್ರೇಷ್ಠಿಗಳು ಇವರೆಲ್ಲ ಹಗಲುಗಳ್ಳರು, ಬಲುಗಳ್ಳರು ಎನ್ನುವದು ಇವನ ಅಭಿಪ್ರಾಯ. ಇವರೆಲ್ಲರೂ ದುಡಿಯುವ ಬಡವರನ್ನು ಶೋಷಿಸುತ್ತಾರೆ. ತಾನು ಉಳ್ಳವರ ಸಂಪತ್ತನ್ನು ಇಲ್ಲದವರಲ್ಲಿ ಹಂಚುತ್ತೇನೆ ಎನ್ನುವದು ಇವನ ಸಮರ್ಥನೆ!
ಸಮಾಜದ ವಿವಿಧ ಸ್ತರಗಳ ಜನತೆಯೊಡನೆ ಈತ ಮಾಡುವ ಸಂಭಾಷಣೆ ಹಾಗೂ ಮಂಡಿಸುವ ತರ್ಕಗಳ ಮೂಲಕ ಈತನ ವ್ಯಕ್ತಿತ್ವದ ಅನಾವರಣವಾಗುತ್ತದೆ. ಅನುಭವ ಮಂಟಪದಲ್ಲಿಯ ಶರಣರಿಗೇ ಎದುರಾಡಬಲ್ಲ ಧಾರ್ಷ್ಟ್ಯ ಈತನದು.
ಕನ್ನಮಾರಿಯ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಸವಣ್ಣನವರ ವ್ಯಕ್ತಿತ್ವವು ಬೆಳಗಿದೆ. ಕನ್ನಮಾರಿಗೆ ಗೊತ್ತಿರುವ ತರ್ಕ ಹಾಗೂ ವಿಚಾರವೆಲ್ಲ ಬಸವಣ್ಣನವರಿಗೂ ಗೊತ್ತಿದೆ. ಅವರೂ ಸಹ ಕಲ್ಯಾಣಪ್ರಭುತ್ವವನ್ನು ಕಳ್ಳರ ಪ್ರಭುತ್ವವೆಂದೇ ಕರೆಯುತ್ತಾರೆ. ಆದರೆ ಕೇವಲ ತರ್ಕದಿಂದ ಸಮಾಜವನ್ನು ಸುಧಾರಿಸಲು ಸಾಧ್ಯವಿಲ್ಲವೆನ್ನುವದು ಅವರಿಗೆ ಗೊತ್ತಿದೆ.
ನಾಟಕದ ಆರಂಭದಲ್ಲಿ, ಮೊದಲಿಗೆ ಕನ್ನಮಾರಿಯ ಕೈಯಲ್ಲಿ ಸಿಗುವವರು ಭೋಳೇ ಜಂಗಮರು. ಅವರ ಭೋಳೇತನವನ್ನು ಹಂಗಿಸಿ ಈತ ಮಾತನಾಡುತ್ತಾನೆ. ಅವರೋ ಬಸವಣ್ಣನನ್ನು ಪವಾಡಪುರುಷನೆಂದು ಭಾವಿಸಿದವರು. ವಚನಗಳನ್ನು ಸಾರುವದರ ಮೂಲಕ ಕೆಡುಕರನ್ನು ಸುಧಾರಿಸಬಹುದೆನ್ನುವ ನಂಬಿಕೆ ಇಟ್ಟುಕೊಂಡವರು. ಜಂಗಮವೃತ್ತಿಯನ್ನೇ ಹೊಟ್ಟೆಪಾಡಿನ ಕಾಯಕ ಮಾಡಿಕೊಂಡವರು! ಹಾಗೂ ಪ್ರಸಂಗ ಬಂದಾಗ ಪ್ರಭುತ್ವಕ್ಕೆ ದಂಡನಮಸ್ಕಾರವನ್ನೂ ಹಾಕಬಲ್ಲವರು.
ತನ್ನನ್ನು ಹುಡುಕುತ್ತಿರುವ ಸೈನಿಕರಿಂದ ತಪ್ಪಿಸಿಕೊಳ್ಳಲು, ಕನ್ನಮಾರಿಯು ಈ ಜಂಗಮರನ್ನೇ ಠಕ್ಕತನದಿಂದ ಕಟ್ಟಿಹಾಕಿ ಅವರೆಲ್ಲರ ವಸ್ತ್ರಭೂಷಣಗಳನ್ನು ಅಪಹರಿಸುವನು. ತಮ್ಮ ಸುರಕ್ಷತೆಯ ಉದ್ದೇಶದಿಂದ ಕನ್ನಮಾರಿ ಹಾಗೂ ಅವನ ಬಂಟರು ಶರಣರ ವೇಷದಲ್ಲಿ ಬಸವಣ್ಣನ ಮಹಾಮನೆಗೆ ತೆರಳುತ್ತಿರುವಾಗ ಅವರಿಗೆ ಭೆಟ್ಟಿಯಾಗುವಳು ಒಬ್ಬ ಹುಲ್ಲು ಹೊರುವ ಹೆಣ್ಣುಮಗಳು. ಸಮಾಜದ ಸಾಂಪ್ರದಾಯಕ ವ್ಯವಸ್ಥೆಯಲ್ಲಿ ತನ್ನ ಕೆಳಸ್ತರವನ್ನು ಒಪ್ಪಿಕೊಂಡು ಬಾಳುತ್ತಿರುವ ಈಕೆ ಬಸವಣ್ಣ ತನ್ನನ್ನು ಮೇಲೆತ್ತಿದ ರೀತಿಯನ್ನು ಕನ್ನಮಾರಿಗೆ ಹೇಳಿದಾಗ, ಆತ ಇವರೆಲ್ಲ ಮರಳು ಜನ ಎಂದು ಅಪಹಾಸ್ಯ ಮಾಡುತ್ತಾನೆ.
ತನ್ನನ್ನು ಹುಡುಕುತ್ತಿರುವ ಸೈನಿಕರಿಂದ ತಪ್ಪಿಸಿಕೊಳ್ಳಲು ಕನ್ನಮಾರಿ ಬಸವಣ್ಣನ ಮಹಾಮನೆಗೇ ಬರುತ್ತಾನೆ. ಅಲ್ಲಿ ಅನುಭವ ಮಂಟಪದಲ್ಲಿ ಶರಣರು ದೈನಂದಿನ ಚರ್ಚೆಯನ್ನು ನಡೆಸಿರುತ್ತಾರೆ. ಕನ್ನಮಾರಿ ತನ್ನ ತಾರ್ಕಿಕ ಅಹಂಭಾವದಲ್ಲಿ, ಅವರಿಗೆ ಉದ್ಧಟ ಪ್ರಶ್ನೆಗಳನ್ನು ಕೇಳುತ್ತಾನೆ.
ಇದಿಷ್ಟು ಕನ್ನಮಾರಿಯ ಮೊದಲ ವ್ಯಕ್ತಿತ್ವ.
ಇಂತಹ ಕನ್ನಮಾರಿ ಶರಣನಾಗಿ ಪರಿವರ್ತಿತನಾಗುವದು ರೋಚಕವಾದ ಘಟನೆ.
ಕನ್ನಮಾರಿಯ ಮಾತುಗಳಲ್ಲಿಯೇ ಹೇಳುವದಾದರೆ :-
“ ಕಳ್ಳರು ಯಾರು, ಕಳ್ಳರ ಕಳ್ಳರು ಯಾರು, ಬಲುಗಳ್ಳರು ಯಾರಂತ ನಾನು ನಿಮ್ಮ ಮುಂದೆ ಒಗಟು ಇಟ್ಟೆ. ಬಸವೇಶ್ವರ, ಇದು ಕಳ್ಳರ ನಗರ. ಕಳ್ಳರ ನಗರದಲ್ಲಿ ನಾನು ಕಳ್ಳರ ಕಳ್ಳನಾಗಿದ್ದೆ. ಕದೀಲಿಕ್ಕೆ ಬಂದ ನನ್ನನ್ನು ನೀವು ನೆಟ್ಟನೇ ನುಂಗಿ ನಿಮ್ಮ ಹೊಟ್ಟೆಯೊಳಗೆ ಅರಗಿಸಿಕೊಂಡು ಬಿಟ್ರಿ. ನೀವೇ ಬಲುಗಳ್ಳರು!..”
ಬಿಜ್ಜಳ:
ಬಿಜ್ಜಳನು ಕಲ್ಯಾಣರಾಜ್ಯದ ಪ್ರಭು. ಬಸವಣ್ಣನ ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದಾಗಿ ರಾಜ್ಯಾಡಳಿತ ಸುಸೂತ್ರವಾಗಿ ನಡೆಯುತ್ತಿರುವದರಿಂದ ಈತನಿಗೆ ಬಸವಣ್ಣ ಬೇಕು. ಬಸವಣ್ಣ ರಾಜ್ಯದ ಮಂತ್ರಿಯಾಗಿ ಉಳಿಯಲೇ ಬೇಕು. ಅಲ್ಲದೆ ಬಸವಣ್ಣನನ್ನು ಆಡಳಿತದಲ್ಲಿ ಬಲವಂತವಾಗಿ ಇಟ್ಟುಕೊಳ್ಳಲು ಈತನಿಗೆ ಮತ್ತೊಂದು ಕಾರಣವಿದೆ. ಬಸವಣ್ಣನಿಗೇ ಬೇಕಾಗಿರದಿದ್ದರೂ ಸಹ ಆತ ಪ್ರಭುತ್ವಕ್ಕೆ ಹೊರತಾದ ಮತ್ತೊಂದು ಶಕ್ತಿಕೇಂದ್ರವಾಗಿರುವದನ್ನು ಬಿಜ್ಜಳ ಬಲ್ಲ. ಈ ಶಕ್ತಿಕೇಂದ್ರವನ್ನು ಜಾಣತನದಿಂದ ಸಂಭಾಳಿಸುವದು ಪ್ರಭುತ್ವದ ಹಿತದ ದೃಷ್ಟಿಯಿಂದ ಅವಶ್ಯವೆಂದು ಈತ ಅರಿತಿದ್ದಾನೆ.
ಬಸವಣ್ಣನ ಬಗೆಗೆ ಬಿಜ್ಜಳ ಹೇಳುವ ಮಾತುಗಳು ಹೀಗಿವೆ:
“…ಮಾರಾಯಾ ನಿನಗ ಯಾವ ಪದವಿನೂ ಬೇಕಾಗಿಲ್ಲ. ಇದು ನನಗ ಗೊತ್ತೈತಿ. ನಿನಗ ಪದವಿ ಯಾಕ ಬೇಕು? ನೀ ಎಲ್ಲಿ ಹೋಗಿ ನಿಲ್ಲತೀ ಅಲ್ಲಿ ದೀಪ ಬೆಳಗತಾರು; ಎಲ್ಲಿ ಹೋಗಿ ಕುಂದರತೀ ಅಲ್ಲಿ ಕಾಯಿ ಒಡೀತಾರು; ನೀ ಕಾಡು ಹೊಕ್ಕೊಂಡು ಮರದ ಕೆಳಗ ಕುಂತರೂ ಶರಣರ ಸಂತಿ ಅಲ್ಲೇ ನಡೀತೈತಿ….”
ಬಸವಣ್ಣನನ್ನು ಮನಸಾ ಗೌರವಿಸುತ್ತಿದ್ದರೂ ಸಹ ಬಿಜ್ಜಳನು ಪ್ರಭುತ್ವಕ್ಕೆ ಅವಶ್ಯವಾದ ಕೋರೆಹಲ್ಲು ಹಾಗೂ ಹುಲಿಯುಗುರುಗಳನ್ನು ಬೆಳೆಸಿಕೊಂಡವನೇ. ವ್ಯವಸ್ಥೆಯ ರಕ್ಷಣೆಯ ಉದ್ದೇಶ ಹಾಗೂ ಅದಕ್ಕೆ ಬೇಕಾದ ಕ್ರೌರ್ಯ ಇವು ಬಿಜ್ಜಳನ ವ್ಯಕ್ತಿತ್ವದ ಭಾಗಗಳಾಗಿವೆ.
ತನ್ನ ದಂಡನಾಯಕ ಮಂಚಣ್ಣನಾಯಕನಿಗೆ ಬಿಜ್ಜಳನ್ನು ಕೊಡುತ್ತಿರುವ ಆದೇಶವನ್ನು ನೋಡಿರಿ:
“…ಮಧ್ಯರಾತ್ರಿಗೆ ಸರಿಯಾಗಿ ನಾಕೂ ಕಡೆಯಿಂದ ಮಹಾಮನಿಗೆ ಮಿಂಚು ಹೊಡಧಾಂಗ ಮುತ್ತಿಗೆ ಹಾಕಬೇಕು……ಹೊರಗಿನ ಸುತ್ತಿನ್ಯಾಗ ಬ್ಯಾಟಿ ನಾಯಿಗಳನ್ನು ಬಿಡಿರಿ, ಬಿಲ್ಲಿನವರನ್ನು ಮರದ ಮ್ಯಾಲ ಏರಸರಿ. ಎರಡು ಕಾಲು ಓಡ್ತಿರೋದು ಕಂಡ್ರ ಸಾಕು, ಬಾಣ ಹೊಡೆದು ಭೂಮಿಗೆ ಬೀಳಿಸತಕ್ಕದ್ದೆಂದು ಕಟ್ಟಪ್ಪಣೆ ಮಾಡ್ರಿ….”
ಶರಣರು:
ಶರಣರಲ್ಲಿ ಭೋಳೇ ಜನರು ಇದ್ದಂತಯೇ, ಬೌದ್ಧಿಕವಾಗಿ ಹಾಗು ಆಧ್ಯಾತ್ಮಿಕವಾಗಿ ಎತ್ತರದ ಮಟ್ಟವನ್ನು ಏರಿದವರೂ ಇದ್ದರು. ಅನುಭವ ಮಂಟಪದ ನಿರ್ವಾಹಕರೆಂದು ಇವರನ್ನು ಕರೆಯಬಹುದು. ಬಸವಣ್ಣನ ಹೊರತಾಗಿಯೂ, ಶರಣಚಳುವಳಿಯನ್ನು ಸಾರ್ಥಕಗೊಳಿಸಬಲ್ಲ ಸಾಮರ್ಥ್ಯ ಉಳ್ಳವರು. ಶರಣನ ವೇಷದಲ್ಲಿಯ ಕನ್ನಮಾರಿಯ ಉದ್ದಟತನದಿಂದ ಇವರಲ್ಲಿ ಕೆಲವರು ವಿಚಲಿತರಾದರೆ, ಮುಂದಾಳುಗಳು ಮಾತ್ರ ಎಲ್ಲರನ್ನೂ ಶಾಂತ ಮಾಡಬಲ್ಲವರು.
ಬಸವಣ್ಣ:
ಈಗಾಗಲೇ ರಚಿತವಾದ ಸಾಹಿತ್ಯದಲ್ಲಿ ಬಸವಣ್ಣನು ರಾಜ್ಯದ ಉನ್ನತ ಅಧಿಕಾರಿಯಂತೆ ಕಾಣುವ ವ್ಯಕ್ತಿತ್ವಕ್ಕೆ ಹೆಚ್ಚು ಮಹತ್ವ ಸಿಕ್ಕಿದೆ. ನಾಟಕಗಳಲ್ಲಿಯೂ ಸಹ ಆತ ಮಂತ್ರಿಯ ಪೋಷಾಕನ್ನು ಧರಿಸಿ ರಂಗದ ಮೇಲೆ ಬರುವದೇ ಜನಪ್ರಿಯವಾಗಿದೆ. ಆದರೆ ಈ ನಾಟಕದಲ್ಲಿ ಬಸವಣ್ಣನು ಸಾಮಾನ್ಯರೊಡನೆ ಸಮಾನನಾಗಿ ಇರಬಯಸುವ ವ್ಯಕ್ತಿ.
ನಾಟಕದ ಮೊದಲಲ್ಲಿಯೆ ಆತ ಕೆಳ ಸ್ತರದ ಹೆಣ್ಣುಮಗಳೊಬ್ಬಳಿಗೆ ಹುಲ್ಲು ಹೊರಿಸುವದನ್ನು, ಅವಳೊಡನೆ ಆತ್ಮೀಯವಾಗಿ ಸಂಭಾಷಿಸುವದನ್ನು ಹಾಗೂ ಅವಳಿಗೆ ಲಿಂಗಧಾರಣೆ ಮಾಡುವದನ್ನು flashbackನಲ್ಲಿ ತೋರಿಸಲಾಗಿದೆ.
ಆನಂತರ ಬಸವಣ್ಣನ ಉಲ್ಲೇಖವಾಗುವದು ಬಿಜ್ಜಳನ ಮಾತುಗಳಲ್ಲಿ:
“ಆತ ಮೊದಲೇ ಮಹಾ ತಲೆತಿರುಕ. …………..ಅಲ್ಲಾ ಮಂತ್ರಿಪದವಿ ಬ್ಯಾಡಾ ಅನ್ನೋ ತಲೆತಿರುಕ ಮತ್ತೊಬ್ಬನದಾನೇನು ಈ ದೇಶದೊಳಗ?”
ಹುಲ್ಲು ಹೊರುವ ಹೆಣ್ಣುಮಗಳೊಡನೆ ಆತ್ಮೀಯವಾಗಿ ಮಾತನಾಡುವಾಗ, ಕನ್ನಮಾರಿಯ ಪರವಾಗಿ ಶರಣರೊಡನೆ ಮಾತನಾಡುವಾಗ, ಬಿಜ್ಜಳನ ದಂಡನಾಯಕನು ತಂದ ಆದೇಶವನ್ನು ಧಿಕ್ಕರಿಸುವಾಗ, ತನ್ನ ಹೆಂಡತಿಯ ಉಪಾಯಕ್ಕೆ ಅಸಮಾಧಾನ ವ್ಯಕ್ತಪಡಿಸುವಾಗ ಬಸವಣ್ಣನ ವ್ಯಕ್ತಿತ್ವ ಪ್ರೇಕ್ಷಕರೆದುರಿಗೆ ಹೊಳೆಯುತ್ತದೆ.
ಎಲ್ಲಕ್ಕಿಂತಲೂ ಮುಖ್ಯವಾಗಿ, ತನ್ನ ಅಪೂರ್ಣ ವಚನವೊಂದರ ಕೊನೆಯ ಸಾಲನ್ನು ಆತ ತನ್ನ ಹೆಂಡತಿ ಗಂಗಾಂಬಿಕೆಗೆ ಪ್ರೀತಿಯಿಂದ ಪೂರ್ಣಗೊಳಿಸಿ ಹೇಳುವ ಸನ್ನಿವೇಶವು ಬಸವಣ್ಣನ ಆದರ್ಶವನ್ನು ಅತ್ಯಂತ ಸಮರ್ಥ ರೀತಿಯಲ್ಲಿ ತೋರಿಸುತ್ತದೆ ಎನ್ನಬಹುದು.
ನಾಟಕದ ಕಥಾನಕ:
ನಾಟಕ ಪ್ರಾರಂಭವಾಗುವದು ಬೆಳಗಿನ ಸಮಯದಲ್ಲಿ. ಬಸವಣ್ಣನ ರಂಗಪ್ರವೇಶವಾಗುವದು ಸಂಜೆಯಲ್ಲಿ (flash back ಹೊರತುಪಡಿಸಿ), ಅಂದರೆ ನಾಟಕದ ಕೊನೆಯ ಭಾಗದಲ್ಲಿ.
ಅಲ್ಲಿಯವರೆಗೂ ಕನ್ನಮಾರಿ ಹಾಗೂ ಅವನನ್ನು ಹಿಡಿಯಲೆತ್ನಿಸುತ್ತಿರುವ ಬಿಜ್ಜಳನ ಸೈನಿಕರೇ ರಂಗವನ್ನು ವ್ಯಾಪಿಸಿದ್ದಾರೆ.
ರಂಗದ ಮೇಲೆ ಪ್ರಾಸಂಗಿಕವಾಗಿ ಕಾಣಿಸಿಕೊಳ್ಳುವ ಸಾಮಾನ್ಯ ಬಹುಜನರು ಪ್ರಭುತ್ವಕ್ಕೆ ಹೆದರುವ, ಪ್ರಭುತ್ವ ಎಸೆಯುವ ರೊಟ್ಟಿಯ ತುಣುಕುಗಳಿಗೆ ಆಸೆ ಪಡುವ ಜನತೆ. ಇವರು ಅನಾದಿ ಕಾಲದಿಂದಲೂ ಹೀಗೇ ಇದ್ದವರು. ಬಸವಣ್ಣನ ಕಾಲದಲ್ಲೂ ಹಾಗೇ ಇದ್ದರು. ಈಗಲೂ ಹಾಗೇ ಇದ್ದಾರೆ. ಅದರಂತೆಯೇ ರಂಗದ ಮೇಲೆ ಕಾಣಿಸಿಕೊಳ್ಳುವ ಶ್ರೇಷ್ಠಿಗಳು ವ್ಯವಸ್ಥೆಯ ಮುಂದುವರಿಕೆಯಲ್ಲಿಯೇ ಆಸಕ್ತಿ ಉಳ್ಳವರು.
ಕನ್ನಮಾರಿಯು ಅನುಭವ ಮಂಟಪದಲ್ಲಿ ಶರಣರ ಜೊತೆಗೆ ಸೇರಿಕೊಂಡಿರುವದು ಬಿಜ್ಜಳನ ಗುಪ್ತಚಾರರಿಗೆ ಗೊತ್ತಾಗಲು ತಡವಾಗುವದಿಲ್ಲ. ಮಧ್ಯರಾತ್ರಿಯ ಸಮಯದಲ್ಲಿ ಬಸವಣ್ಣನವರ ಮಹಾಮನೆಗೆ ಸೈನಿಕರು ಮುತ್ತಿಗೆ ಹಾಕುತ್ತಾರೆ. ಕನ್ನಮಾರಿ ತಮ್ಮೊಳಗೇ ಇದ್ದದ್ದು ಬಸವಣ್ಣನ ಹೆಂಡತಿ ಗಂಗಾಂಬಿಕೆಯ ಅರಿವಿಗೂ ಬಂದಿರುತ್ತದೆ. ಅವನನ್ನು ಹಿಡಿದು ಹಾಕಲು ಗಂಗಾಂಬಿಕೆ ಉಪಾಯವೊಂದನ್ನು ರೂಪಿಸುತ್ತಾಳೆ. ಬಂಗಾರದ ತನ್ನ ಒಡವೆಗಳನ್ನು ಗುಪ್ತವಾಗಿ ನೆಲವಿನಲ್ಲಿ ಇಟ್ಟಿರುವದಾಗಿ ಕನ್ನಮಾರಿಗೆ ನಂಬಿಕೆ ಬರುವಂತೆ ನಟಿಸುತ್ತಾಳೆ. ಕನ್ನಮಾರಿ ಹಾಗೂ ಅವನ ಬಂಟರು ಕಳ್ಳತನ ಮಾಡುತ್ತಿರುವಾಗ ಶರಣರ ಕೈಯಲ್ಲಿ ಸಿಕ್ಕು ಬೀಳುತ್ತಾರೆ.
ಇಲ್ಲಿಯವರೆಗೆ ಬಸವಣ್ಣ ಎಲ್ಲಿದ್ದ? ಗಂಗಾಂಬಿಕೆಯು ತನ್ನ ಉಪಾಯದ ಅಂಗವಾಗಿ ಬಂಗಾರದ ಒಡವೆಗಳನ್ನು ಧರಿಸಿರುತ್ತಾಳೆ. ತನ್ನ ಹೆಂಡತಿ ಬಂಗಾರ ಧರಿಸಿರುವದು ಬಸವಣ್ಣನಿಗೆ ಸಹ್ಯವಾಗುವದಿಲ್ಲ. ಆತ ವ್ಯಥಿತನಾಗಿ, ದಾಸೋಹದಲ್ಲಿರುವದನ್ನು ಬಿಟ್ಟು ತನ್ನ ಅರುಹಿನ ಮನೆಗೆ ಹೋಗಿ ಬಿಟ್ಟಿರುತ್ತಾನೆ. ಇದು ಗಂಗಾಂಬಿಕೆಗೆ ಅರ್ಥವಾಗುವದಿಲ್ಲ. ಬೆಳಿಗ್ಗೆ ಒಂದು ವಚನವನ್ನು ಅರ್ಧ ರಚನೆ ಮಾಡಿದವರು ಎಲ್ಲಿ ಹೋದರು? ‘ನೀರಿಗೆ ನೈದಿಲೆಯೆ ಶೃಂಗಾರ…..’ ಎಂದು ಅರ್ಧ ವಚನ ಹೇಳಿದವರು ಆ ವಚನ ಪೂರ್ತಿಗೊಳಿಸಲು ಹೋದರೆ? ಎಂದುಕೊಳ್ಳುತ್ತಾಳೆ. ಆದರೆ ಬಸವಣ್ಣನನ್ನು ಸೂಕ್ಷ್ಮವಾಗಿ ಗಮನಿಸಿದ್ದ ನಾಗವ್ವೆ ಮಾತ್ರ ‘ಶಟಗೊಂಡವರ ಹಂಗ ದುಡುದುಡು ಹೋದಾ…’ ಎನ್ನುತ್ತಾಳೆ.
ಬಸವಣ್ಣನನ್ನು ಅರುಹಿನ ಮನೆಯಿಂದ ಕರೆದುಕೊಂಡು ಬಂದಾಗ ಕನ್ನಮಾರಿಯನ್ನು ಹಿಡಿದದ್ದಕ್ಕಾಗಿ ಶರಣರೆಲ್ಲ ಸಂತೋಷದಲ್ಲಿ ಮುಳುಗಿದ್ದರು. ಮಹಾಕಳ್ಳ ಕನ್ನಮಾರಿಯನ್ನು ರಾಜನಿಗೆ ಒಪ್ಪಿಸಬೇಕು ಎನ್ನುವದೇ ಎಲ್ಲ ಶರಣರ ಅಭಿಪ್ರಾಯ. ಬಸವಣ್ಣ ಅದಕ್ಕೆ ಒಪ್ಪುವದಿಲ್ಲ.
ಕನ್ನಮಾರಿಯ ತರ್ಕವನ್ನಾಗಲಿ, ಶರಣರ ತರ್ಕವನ್ನಾಗಲಿ , ಪ್ರಭುತ್ವದ ತರ್ಕವನ್ನಾಗಲಿ ಬಸವಣ್ಣನು ಒಪ್ಪುವವನಲ್ಲ. ಅಷ್ಟೇ ಏಕೆ, ಗಂಗಾಂಬಿಕೆಯ ಸ್ತ್ರೀಧನದ ತರ್ಕವನ್ನೂ ಆತ ಕಡೆಗಣಿಸುತ್ತಾನೆ. ಕನ್ನಮಾರಿಗೆ ಆಶ್ರಯ ಕೊಟ್ಟರೆ ಬಸವಣ್ಣನೂ ಅಪರಾಧಿಯೇ ಆಗುತ್ತಾನೆ ಎನ್ನುವ ಮಾತಿಗೂ ಆತ ಬೆಲೆ ಕೊಡುವದಿಲ್ಲ.ಬಿಜ್ಜಳನ ಸೇನಾಪತಿಗೆ ಬಸವಣ್ಣನು ಹೇಳುವ ಮಾತುಗಳಿವು:
"ದೇಶಕ್ಕೊಂದು ಶಾಸನ ಐತಿ ನಿಜ.ಆದರ ಶಾಸನಕ್ಕಂಜಿ ನನ್ನ ಅಂತರಾತ್ಮ ಒಪ್ಪದಿರುವಂಥಾ ಯಾವ ಕೆಲಸವನ್ನೂ ನಾನು ಮಾಡಲಾರೆ."
ಕನ್ನಮಾರಿಯ ಜೀವ ಉಳಿಸಲು ಆತನನ್ನು ತನ್ನ ಅಂದರೆ ಮಂತ್ರಿಯ ಮುತ್ತಿನ ಪಲ್ಲಕ್ಕಿಯಲ್ಲಿ, ಮಂತ್ರಿಯ ಕಿರೀಟ ತೊಡಸಿ, ಗಂಗಾಂಬಿಕೆಯ ಎಲ್ಲ ಒಡವೆಗಳನ್ನೂ ಆತನಿಗೇ ಕೊಟ್ಟು ಆತನನ್ನು ಪಾರು ಮಾಡುತ್ತಾನೆ.
ಆ ಸಮಯದಲ್ಲಿ ಬಸವಣ್ಣನು ಅರ್ಧ ರಚಿಸಿದ ತನ್ನ ವಚನವನ್ನು ಪೂರ್ತಿಗೊಳಿಸಿ ಗಂಗಾಂಬಿಕೆಗೆ ಹೇಳುವ ಭಾಗವು ನಾಟಕದ ಉತ್ತುಂಗಭಾಗವೆನ್ನಬಹುದು.
ಬಸವಣ್ಣನ ತರ್ಕವು ಬುದ್ಧಿಯಿಂದ ಬಂದದ್ದಲ್ಲ, ಅದು ಆತನ ಹೃದಯದಿಂದ ಹೊಮ್ಮಿದ್ದು ಎನ್ನುವದು ಇತರರಿಗೆಲ್ಲ ಆಗ ಅರ್ಥವಾಗುತ್ತದೆ. ಬಸವಣ್ಣ ಬಯಸುವ ಸಮಾಜದ ಆದರ್ಶವೂ ಆ ವಚನದಿಂದಲೇ ಅರಿವಾಗುತ್ತದೆ.
ನಾಟಕದ ಕೊನೆಯ ದೃಶ್ಯದಲ್ಲಿ ಬಿಜ್ಜಳನ ದಂಡನಾಯಕನು ಬಸವಣ್ಣನ ಸೆರೆ ಹಿಡಿಯಲು ಸನ್ನದ್ಧನಾಗಿ ಬರುತ್ತಾನೆ. ಅದೇ ಸಮಯದಲ್ಲಿ ಬಿಜ್ಜಳನು ಕನ್ನಮಾರಿಯೊಂದಿಗೆ ಅಲ್ಲಿಗೆ ಬರುತ್ತಾನೆ. ಯಾಕೆಂದರೆ ಕನ್ನಮಾರಿಯು ತನ್ನ ಜೀವ ಉಳಿಸಿದ ಬಸವಣ್ಣನ ಜೀವವು ಅಪಾಯದಲ್ಲಿರುವದನ್ನು ಅರಿತುಕೊಂಡು, ತಾನೇ ಸ್ವತಃ ಬಿಜ್ಜಳನ ಅರಮನೆಗೆ ತೆರಳಿ, ಅಲ್ಲಿ ತನ್ನನ್ನೇ ಒಪ್ಪಿಸಿಕೊಂಡಿರುತ್ತಾನೆ.
ಕನ್ನಮಾರಿಯ ಬಿಡುಗಡೆಯಾಗುತ್ತದೆ ಹಾಗು ಆತನೂ ಸಹ ಶರಣಜೀವನಕ್ಕೆ ತನ್ನನ್ನು ಸಮರ್ಪಿಸಿಕೊಳ್ಳುತ್ತಾನೆ.
ಇದಿಷ್ಟು ನಾಟಕದ ಕಥಾನಕ.
ನಾಟಕದ ವೈಶಿಷ್ಟ್ಯಗಳು:
ಕೇವಲ ಕಳ್ಳನೊಬ್ಬನು ಶರಣನಾದ ಕತೆಯನ್ನು ಹೇಳುವ ನಾಟಕವಲ್ಲವಿದು. ಕಳ್ಳನನ್ನು ಶರಣನನ್ನಾಗಿ ಪರಿವರ್ತಿಸಿದ ಬಸವಣ್ಣನ ವ್ಯಕ್ತಿತ್ವವನ್ನು ಅರಿತುಕೊಳ್ಳಲು ಮಾಡಿದ ಪ್ರಯತ್ನವು ಇಲ್ಲಿದೆ. ಬಸವಣ್ಣನ ವ್ಯಕ್ತಿತ್ವ ಎಂತಹದು?
ಅಂಗುಲಿಮಾಲಾನನ್ನು ಪರಿವರ್ತಿಸಿದ ಬುದ್ಧನ ವ್ಯಕ್ತಿತ್ವವೆ? ಅಥವಾ ಸಮಾಜಸುಧಾರಕನ ವ್ಯಕ್ತಿತ್ವವೆ?
ಬಸವಣ್ಣನ ಬಗೆಗೆ ಬರೆದ ಲೇಖಕರೆಲ್ಲ ಆತನನ್ನು ಅರಿತುಕೊಳ್ಳಲು ಪ್ರಯತ್ನಿಸಿ ಬರೆದವರೇ.
ವ್ಯಾಸ ದೇಶಪಾಂಡೆಯವರು ಇಲ್ಲಿ ಬಸವಣ್ಣನ ವ್ಯಕ್ತಿತ್ವವನ್ನು ಇತರ ಪಾತ್ರಗಳ ಮೂಲಕ ಅರ್ಥೈಸಲು ಪ್ರಯತ್ನಿಸಿದ್ದಾರೆ.
ಕನ್ನಮಾರಿ vs ಬಸವಣ್ಣ , ಬಿಜ್ಜಳ vs ಬಸವಣ್ಣ , ಶರಣರು vs ಬಸವಣ್ಣ , ಕೊನೆಗೆ ಗಂಗಾಂಬಿಕೆ vs ಬಸವಣ್ಣ.
ಜೊತೆಜೊತೆಗೇ ಆ ಸಮಯದ ಸಮಾಜದ ವ್ಯವಸ್ಥೆ, ದುಡಿವ ವರ್ಗದ ಶೋಷಣೆ, ಪ್ರಭುತ್ವದ ರಾಜಕೀಯ ಇವೆಲ್ಲ ನಾಟಕದಲ್ಲಿ ಪ್ರಾಸಂಗಿಕವಾಗಿ ಬಂದಿವೆ. ಇಂತಹ ವ್ಯವಸ್ಥೆಗೆ ಒಂದು ಪ್ರತಿವ್ಯವಸ್ಥೆ ಇದೆಯೆ?
ಆಧುನಿಕ ಭಾರತದಲ್ಲಿ,ಗಾಂಧೀಜಿ, ವಿನೋಬಾ, ಜಯಪ್ರಕಾಶ ನಾರಾಯಣ ಇವರೆಲ್ಲ ಇದಕ್ಕಾಗಿ ಪ್ರಯತ್ನಿಸಿದವರೆಂದು ನಾವು ಬಲ್ಲೆವು.
ಇಲ್ಲಿ ಬರುವ ಕನ್ನಮಾರಿ ಹಳೆಯ ಕಾಲದ Robin Hood ಹಾಗೂ ಈ ಕಾಲದ ನಕ್ಸಲೀಯರನ್ನು ಸ್ವಲ್ಪ ಮಟ್ಟಿಗೆ ಹೋಲುತ್ತಾನೆ ಎನ್ನಬಹುದಾದರೂ ಲೇಖಕರು ಇಂತಹ ಸುಳಿವುಗಳು ನುಸಳದಂತೆ ಪ್ರಯತ್ನಪೂರ್ವಕವಾಗಿ ನಾಟಕವನ್ನು ರಚಿಸಿದ್ದಾರೆ. ಅದರಂತೆಯೆ ಮಾರ್ಕ್ಸಿಸ್ಟ್ ಗುರುತುಗಳನ್ನೂ ಸಹ ಇಲ್ಲಿ ಸುಳಿಯಗೊಟ್ಟಿಲ್ಲ.
(ಕಮ್ಯುನಿಸ್ಟ ಅರ್ಥವ್ಯವಸ್ಥೆಯ ಪ್ರತಿಪಾದಕನಾದ ಮಾರ್ಕ್ಸನನ್ನು ಬಸವಣ್ಣನಿಗೆ ಹೋಲಿಸುವದು ದೊಡ್ಡ ತಪ್ಪು. ಏಕೆಂದರೆ ಮಾರ್ಕ್ಸನು State Ownershipಅನ್ನು ಹೇಳುತ್ತಿದ್ದ ಹಾಗೂ ಆಧ್ಯಾತ್ಮವನ್ನು ತಿರಸ್ಕರಿಸಿದ್ದ.)
ಬಸವಣ್ಣನವರು ಮಾನವ ಘನತೆಯನ್ನು ಸಾಮಾಜಿಕ ಸಮಾನತೆಯನ್ನು, ಕಾಯಕದ ಮಹತ್ವವನ್ನು ಹಾಗೂ ಆಧ್ಯಾತ್ಮಿಕ ಅವಶ್ಯಕತೆಯನ್ನು ಜೀವಿಸಿ ತೋರಿಸಿದವರು. ಈ ಎಲ್ಲ ಅಂಶಗಳು ೫೩ ಪುಟಗಳ ಈ ಚಿಕ್ಕ ನಾಟಕದಲ್ಲಿ ಸಮರ್ಥವಾಗಿ ಬಂದಿವೆ.
ಎರಡನೆಯದಾಗಿ ಬಸವಣ್ಣನವರ ಈ ಆದರ್ಶಸಮಾಜದ ಅಂಗವ್ಯಕ್ತಿಗಳು ಯಾರು ಅನ್ನುವದನ್ನೂ ಸಹ ನಾಟಕವು ಸ್ಪಷ್ಟಪಡಿಸುತ್ತದೆ. ಶರಣಚಳವಳಿಯು ಕೇವಲ ಕೆಳಸ್ತರದವರ ಚಳವಳಿಯಲ್ಲ ಅಥವಾ ಕೇವಲ ಚಿಂತಕರ ಚಳವಳಿಯೂ ಅಲ್ಲ. ಇದೊಂದು ಸರ್ವಸಮನ್ವಯ ಚಳವಳಿ. ಈ ಆದರ್ಶ ಸಮಾಜಕ್ಕೆ ಯಾರೂ ಹೊರತಲ್ಲ. ಇದರಲ್ಲಿ ಯಾರೂ ಹೆಚ್ಚಲ್ಲ, ಯಾರೂ ಕಡಿಮೆಯಲ್ಲ. ಅದಕ್ಕೆಂದೇ ಈ ನಾಟಕದ ಶೀರ್ಷಿಕೆ: “ಇವ ನಮ್ಮವ”.
ಈ ಎಲ್ಲ ಅಂಶಗಳನ್ನು ಗಮನಿಸಿದಾಗ ಇದು ಐತಿಹಾಸಿಕ ನಾಟಕವೂ ಹೌದು ಹಾಗೂ ಸಾಮಾಜಿಕ ನಾಟಕವೂ ಹೌದು ಎನ್ನುವದು ಸ್ಪಷ್ಟವಾಗುತ್ತದೆ. ಆದುದರಿಂದ ಇದನ್ನು ಐತಿಹಾಸಿಕ-ಸಾಮಾಜಿಕ ನಾಟಕವೆಂದು ಕರೆಯಬಹುದೇನೊ?
ಈ ನಾಟಕ ಪ್ರಾರಂಭವಾಗುವದು ಬೆಳಗಿನ ಸಮಯದಲ್ಲಿ , ಮುಕ್ತಾಯವಾಗುವದು ಮರುದಿನದ ಬೆಳಗಿನಲ್ಲಿ. ಹುಲ್ಲು ಹೊರುವ ಹೆಣ್ಣುಮಗಳು ಬಸವಣ್ಣನ ಜೊತೆಗೆ ಮಾತನಾಡುವ flashback ಹೊರತುಪಡಿಸಿ ನಾಟಕದ ಕಾಲ ಒಂದೇ ದಿನಮಾನದ್ದು.
ಸರಳ ಆಡುನುಡಿಯ ಸಂಭಾಷಣೆ ನಾಟಕದ ಸೊಬಗನ್ನು ಹೆಚ್ಚಿಸಿದೆ.
ನಾಟಕದ ಅಂತರಾಳ ಎಷ್ಟೇ ಗಂಭೀರವಾಗಿದ್ದರೂ ಸಹ ಸನ್ನಿವೇಶಗಳು ಹಾಗೂ ಸಂಭಾಷಣೆಗಳು ಸಹಜ ವಿನೋದವನ್ನು ಹೊಮ್ಮಿಸುತ್ತವೆ. ಸಮಾಜದಲ್ಲಿ ಪರಿವರ್ತನೆ ಸಾಧ್ಯ ಎನ್ನುವ ಆಶಾಭಾವವನ್ನು ಹೊಮ್ಮಿಸುವ ಈ ನಾಟಕವು ಬಸವಣ್ಣನವರ ಬಗೆಗೆ ರಚಿಸಲಾದ ಉಳಿದೆಲ್ಲ ದುರಂತ ನಾಟಕಗಳಿಗಿಂತ ಮನಸ್ಸನ್ನು ತಟ್ಟುತ್ತದೆ.
ಈ ನಾಟಕಕ್ಕೆ ಒಂದು ಮಿತಿಯೂ ಇದೆ. ಕಿರಿದರೊಳ್ ಪಿರಿದರ್ಥವಂ ಹೇಳುವಾಗ ಹುಟ್ಟುವ ಮಿತಿ ಅದು. ನಾಟಕದ ವಸ್ತು ಎಷ್ಟೇ ಜಟಿಲವಾಗಿದ್ದರೂ ಸಹ, ರಚನೆ ಸರಳವಾಗಿದೆ. ಇದು ಈ ನಾಟಕದ ಅನಿವಾರ್ಯತೆ ಹಾಗೂ ಮಿತಿ.
ಒಟ್ಟಿನಲ್ಲಿ ಕನ್ನಡದ ಶ್ರೇಷ್ಠ ನಾಟಕಗಳಲ್ಲಿ ಇದು ಒಂದು ಎಂದು ನಿಸ್ಸಂದೇಹವಾಗಿ ಹೇಳಬಹುದು.
……………………………………………………………………………….
ಟಿಪ್ಪಣಿ: ವ್ಯಾಸ ದೇಶಪಾಂಡೆಯವರ ಬಗೆಗೆ ಹೆಚ್ಚಿನ ಮಾಹಿತಿಯನ್ನು
http://kn.wikipedia.org/wiki/%E0%B2%B5%E0%B3%8D%E0%B2%AF%E0%B2%BE%E0%B2%B8_%E0%B2%A6%E0%B3%87%E0%B2%B6%E0%B2%AA%E0%B2%BE%E0%B2%82%E0%B2%A1%E0%B3%86 ದಲ್ಲಿ ಪಡೆಯಬಹುದು.
ಶ್ರೀ ವ್ಯಾಸ ದೇಶಪಾಂಡೆಯವರ “ಇವ ನಮ್ಮವ ” ನಾಟಕವು ಈ ಸರಣಿಯಲ್ಲಿಯೆ ಇತ್ತೀಚಿನ ಆದರೆ ಅತ್ಯಂತ ಭಿನ್ನವಾದ ನಾಟಕ. ೨೦೦೬ನೆಯ ಇಸವಿಯಲ್ಲಿ ರಚಿತವಾದ ಈ ನಾಟಕವು ಈವರೆಗೆ ಅನೇಕ ರಂಗಪ್ರಯೋಗಗಳನ್ನೂ ಕಂಡಿದೆ.
“ಇವ ನಮ್ಮವ ” ನಾಟಕವು ಕನ್ನಮಾರಿ ಎನ್ನುವ ಕಳ್ಳನೊಬ್ಬನು ಬಸವಣ್ಣನ ಮನೆಯಲ್ಲಿ ಕಳ್ಳತನ ಮಾಡಲು ಯತ್ನಿಸಿ, ಸಿಕ್ಕಿಬಿದ್ದು, ಆ ಬಳಿಕ ಪರಿವರ್ತನೆಗೊಂಡು ಶರಣನಾದವನ ಕತೆಯನ್ನು ಆಧರಿಸಿದೆ. ಆದರೆ ಇದಿಷ್ಟೇ ಕತೆಯ ಮೂಲಕ ಲೇಖಕರು ಆ ಕಾಲದ ಸಾಮಾಜಿಕ, ಆರ್ಥಿಕ ಹಾಗು ರಾಜಕೀಯ ವಿಶ್ಲೇಷಣೆಯನ್ನು ಸಮಗ್ರವಾಗಿ ಮಾಡಿದ್ದಾರೆ. ಇದಲ್ಲದೆ ಆ ಕಾಲದ ಜನಸಾಮಾನ್ಯರ, ಶರಣಸಂಕುಲದ, ದುಡ್ಡುಳ್ಳವರ ಹಾಗೂ ಆಡಳಿತವರ್ಗದ ಅರ್ಥಪೂರ್ಣ ವಿಶ್ಲೇಷಣೆಯೂ ಇಲ್ಲಿದೆ. (ಆ ವಿಶ್ಲೇಷಣೆಯು ಇಂದಿಗೂ ಹಾಗೂ ಎಂದೆಂದಿಗೂ ನಮ್ಮೆಲ್ಲ ಸಮಾಜಗಳಿಗೆ ಅನ್ವಯಿಸುವಂತಿದೆ!)
ನಾಟಕದ ಪಾತ್ರಗಳು:
ಕನ್ನಮಾರಿ:
ನಾಟಕವನ್ನು ಮೊದಲಿನಿಂದ ಕೊನೆಯವರೆಗೂ ವ್ಯಾಪಿಸಿಕೊಂಡ ಕನ್ನಮಾರಿಯು ಈ ನಾಟಕದ ಮಹತ್ವದ ಪಾತ್ರ. ಆದರೂ ಆತ ನಾಟಕದ ನಾಯಕನಲ್ಲ. ನಾಟಕದ ಬೆಳವಣಿಗೆಯ ದೃಷ್ಟಿಯಿಂದ ನಾಟಕದ ಪ್ರತಿಯೊಂದು ಚಿಕ್ಕ ಪಾತ್ರವೂ ಇಲ್ಲಿ ಮಹತ್ವದ ಪಾತ್ರವೇ. ಆದರೆ ನಾಟಕದ ನಾಯಕಪಟ್ಟ ಲಭ್ಯವಾಗುವದು ಬಸವಣ್ಣನಿಗೇ.
ಈವರೆಗೆ, ಕನ್ನಮಾರಿಯು ರಚಿಸಿದ ಮೂರು ವಚನಗಳು ಲಭ್ಯವಾಗಿವೆ. ಆತನ ಎರಡು ವಚನಗಳನ್ನು ಲೇಖಕರು ಈ ನಾಟಕದಲ್ಲಿ ಬಳಸಿಕೊಂಡಿದ್ದಾರೆ. ನಾಟಕದ ಆರಂಭದಲ್ಲಿಯೇ ಕನ್ನಮಾರಿಯು ತನ್ನ ಬಂಟರೊಡನೆ ರಂಗಪ್ರವೇಶ ಮಾಡುತ್ತ, ತನ್ನ ಕನ್ನಗಾರಿಕೆಯನ್ನು ಸಮರ್ಥಿಸುವ ತರ್ಕವನ್ನು ಪ್ರೇಕ್ಷಕಕರ ಎದುರಿಗೆ ಸಾರುತ್ತಾನೆ. ಬಸವಣ್ಣನವರು ಒಂದು ಧ್ರುವವಾದರೆ, ಕನ್ನಮಾರಿಯು ವಿರುದ್ಧ ಧ್ರುವ. ಕನ್ನಮಾರಿಯ ವಿಚಾರ ಹಾಗೂ ತರ್ಕಗಳನ್ನು ಎದುರಿಸುವದು ಸರಳವಲ್ಲ. ಕಲ್ಯಾಣರಾಜ್ಯವನ್ನೇ ಕಳ್ಳರ ರಾಜ್ಯವೆಂದು ಕರೆಯುತ್ತಾನೀತ.
ರಾಜ, ಆತನ ಅಧಿಕಾರಿಗಳು, ಸಮಾಜದ ಶ್ರೇಷ್ಠಿಗಳು ಇವರೆಲ್ಲ ಹಗಲುಗಳ್ಳರು, ಬಲುಗಳ್ಳರು ಎನ್ನುವದು ಇವನ ಅಭಿಪ್ರಾಯ. ಇವರೆಲ್ಲರೂ ದುಡಿಯುವ ಬಡವರನ್ನು ಶೋಷಿಸುತ್ತಾರೆ. ತಾನು ಉಳ್ಳವರ ಸಂಪತ್ತನ್ನು ಇಲ್ಲದವರಲ್ಲಿ ಹಂಚುತ್ತೇನೆ ಎನ್ನುವದು ಇವನ ಸಮರ್ಥನೆ!
ಸಮಾಜದ ವಿವಿಧ ಸ್ತರಗಳ ಜನತೆಯೊಡನೆ ಈತ ಮಾಡುವ ಸಂಭಾಷಣೆ ಹಾಗೂ ಮಂಡಿಸುವ ತರ್ಕಗಳ ಮೂಲಕ ಈತನ ವ್ಯಕ್ತಿತ್ವದ ಅನಾವರಣವಾಗುತ್ತದೆ. ಅನುಭವ ಮಂಟಪದಲ್ಲಿಯ ಶರಣರಿಗೇ ಎದುರಾಡಬಲ್ಲ ಧಾರ್ಷ್ಟ್ಯ ಈತನದು.
ಕನ್ನಮಾರಿಯ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಸವಣ್ಣನವರ ವ್ಯಕ್ತಿತ್ವವು ಬೆಳಗಿದೆ. ಕನ್ನಮಾರಿಗೆ ಗೊತ್ತಿರುವ ತರ್ಕ ಹಾಗೂ ವಿಚಾರವೆಲ್ಲ ಬಸವಣ್ಣನವರಿಗೂ ಗೊತ್ತಿದೆ. ಅವರೂ ಸಹ ಕಲ್ಯಾಣಪ್ರಭುತ್ವವನ್ನು ಕಳ್ಳರ ಪ್ರಭುತ್ವವೆಂದೇ ಕರೆಯುತ್ತಾರೆ. ಆದರೆ ಕೇವಲ ತರ್ಕದಿಂದ ಸಮಾಜವನ್ನು ಸುಧಾರಿಸಲು ಸಾಧ್ಯವಿಲ್ಲವೆನ್ನುವದು ಅವರಿಗೆ ಗೊತ್ತಿದೆ.
ನಾಟಕದ ಆರಂಭದಲ್ಲಿ, ಮೊದಲಿಗೆ ಕನ್ನಮಾರಿಯ ಕೈಯಲ್ಲಿ ಸಿಗುವವರು ಭೋಳೇ ಜಂಗಮರು. ಅವರ ಭೋಳೇತನವನ್ನು ಹಂಗಿಸಿ ಈತ ಮಾತನಾಡುತ್ತಾನೆ. ಅವರೋ ಬಸವಣ್ಣನನ್ನು ಪವಾಡಪುರುಷನೆಂದು ಭಾವಿಸಿದವರು. ವಚನಗಳನ್ನು ಸಾರುವದರ ಮೂಲಕ ಕೆಡುಕರನ್ನು ಸುಧಾರಿಸಬಹುದೆನ್ನುವ ನಂಬಿಕೆ ಇಟ್ಟುಕೊಂಡವರು. ಜಂಗಮವೃತ್ತಿಯನ್ನೇ ಹೊಟ್ಟೆಪಾಡಿನ ಕಾಯಕ ಮಾಡಿಕೊಂಡವರು! ಹಾಗೂ ಪ್ರಸಂಗ ಬಂದಾಗ ಪ್ರಭುತ್ವಕ್ಕೆ ದಂಡನಮಸ್ಕಾರವನ್ನೂ ಹಾಕಬಲ್ಲವರು.
ತನ್ನನ್ನು ಹುಡುಕುತ್ತಿರುವ ಸೈನಿಕರಿಂದ ತಪ್ಪಿಸಿಕೊಳ್ಳಲು, ಕನ್ನಮಾರಿಯು ಈ ಜಂಗಮರನ್ನೇ ಠಕ್ಕತನದಿಂದ ಕಟ್ಟಿಹಾಕಿ ಅವರೆಲ್ಲರ ವಸ್ತ್ರಭೂಷಣಗಳನ್ನು ಅಪಹರಿಸುವನು. ತಮ್ಮ ಸುರಕ್ಷತೆಯ ಉದ್ದೇಶದಿಂದ ಕನ್ನಮಾರಿ ಹಾಗೂ ಅವನ ಬಂಟರು ಶರಣರ ವೇಷದಲ್ಲಿ ಬಸವಣ್ಣನ ಮಹಾಮನೆಗೆ ತೆರಳುತ್ತಿರುವಾಗ ಅವರಿಗೆ ಭೆಟ್ಟಿಯಾಗುವಳು ಒಬ್ಬ ಹುಲ್ಲು ಹೊರುವ ಹೆಣ್ಣುಮಗಳು. ಸಮಾಜದ ಸಾಂಪ್ರದಾಯಕ ವ್ಯವಸ್ಥೆಯಲ್ಲಿ ತನ್ನ ಕೆಳಸ್ತರವನ್ನು ಒಪ್ಪಿಕೊಂಡು ಬಾಳುತ್ತಿರುವ ಈಕೆ ಬಸವಣ್ಣ ತನ್ನನ್ನು ಮೇಲೆತ್ತಿದ ರೀತಿಯನ್ನು ಕನ್ನಮಾರಿಗೆ ಹೇಳಿದಾಗ, ಆತ ಇವರೆಲ್ಲ ಮರಳು ಜನ ಎಂದು ಅಪಹಾಸ್ಯ ಮಾಡುತ್ತಾನೆ.
ತನ್ನನ್ನು ಹುಡುಕುತ್ತಿರುವ ಸೈನಿಕರಿಂದ ತಪ್ಪಿಸಿಕೊಳ್ಳಲು ಕನ್ನಮಾರಿ ಬಸವಣ್ಣನ ಮಹಾಮನೆಗೇ ಬರುತ್ತಾನೆ. ಅಲ್ಲಿ ಅನುಭವ ಮಂಟಪದಲ್ಲಿ ಶರಣರು ದೈನಂದಿನ ಚರ್ಚೆಯನ್ನು ನಡೆಸಿರುತ್ತಾರೆ. ಕನ್ನಮಾರಿ ತನ್ನ ತಾರ್ಕಿಕ ಅಹಂಭಾವದಲ್ಲಿ, ಅವರಿಗೆ ಉದ್ಧಟ ಪ್ರಶ್ನೆಗಳನ್ನು ಕೇಳುತ್ತಾನೆ.
ಇದಿಷ್ಟು ಕನ್ನಮಾರಿಯ ಮೊದಲ ವ್ಯಕ್ತಿತ್ವ.
ಇಂತಹ ಕನ್ನಮಾರಿ ಶರಣನಾಗಿ ಪರಿವರ್ತಿತನಾಗುವದು ರೋಚಕವಾದ ಘಟನೆ.
ಕನ್ನಮಾರಿಯ ಮಾತುಗಳಲ್ಲಿಯೇ ಹೇಳುವದಾದರೆ :-
“ ಕಳ್ಳರು ಯಾರು, ಕಳ್ಳರ ಕಳ್ಳರು ಯಾರು, ಬಲುಗಳ್ಳರು ಯಾರಂತ ನಾನು ನಿಮ್ಮ ಮುಂದೆ ಒಗಟು ಇಟ್ಟೆ. ಬಸವೇಶ್ವರ, ಇದು ಕಳ್ಳರ ನಗರ. ಕಳ್ಳರ ನಗರದಲ್ಲಿ ನಾನು ಕಳ್ಳರ ಕಳ್ಳನಾಗಿದ್ದೆ. ಕದೀಲಿಕ್ಕೆ ಬಂದ ನನ್ನನ್ನು ನೀವು ನೆಟ್ಟನೇ ನುಂಗಿ ನಿಮ್ಮ ಹೊಟ್ಟೆಯೊಳಗೆ ಅರಗಿಸಿಕೊಂಡು ಬಿಟ್ರಿ. ನೀವೇ ಬಲುಗಳ್ಳರು!..”
ಬಿಜ್ಜಳ:
ಬಿಜ್ಜಳನು ಕಲ್ಯಾಣರಾಜ್ಯದ ಪ್ರಭು. ಬಸವಣ್ಣನ ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದಾಗಿ ರಾಜ್ಯಾಡಳಿತ ಸುಸೂತ್ರವಾಗಿ ನಡೆಯುತ್ತಿರುವದರಿಂದ ಈತನಿಗೆ ಬಸವಣ್ಣ ಬೇಕು. ಬಸವಣ್ಣ ರಾಜ್ಯದ ಮಂತ್ರಿಯಾಗಿ ಉಳಿಯಲೇ ಬೇಕು. ಅಲ್ಲದೆ ಬಸವಣ್ಣನನ್ನು ಆಡಳಿತದಲ್ಲಿ ಬಲವಂತವಾಗಿ ಇಟ್ಟುಕೊಳ್ಳಲು ಈತನಿಗೆ ಮತ್ತೊಂದು ಕಾರಣವಿದೆ. ಬಸವಣ್ಣನಿಗೇ ಬೇಕಾಗಿರದಿದ್ದರೂ ಸಹ ಆತ ಪ್ರಭುತ್ವಕ್ಕೆ ಹೊರತಾದ ಮತ್ತೊಂದು ಶಕ್ತಿಕೇಂದ್ರವಾಗಿರುವದನ್ನು ಬಿಜ್ಜಳ ಬಲ್ಲ. ಈ ಶಕ್ತಿಕೇಂದ್ರವನ್ನು ಜಾಣತನದಿಂದ ಸಂಭಾಳಿಸುವದು ಪ್ರಭುತ್ವದ ಹಿತದ ದೃಷ್ಟಿಯಿಂದ ಅವಶ್ಯವೆಂದು ಈತ ಅರಿತಿದ್ದಾನೆ.
ಬಸವಣ್ಣನ ಬಗೆಗೆ ಬಿಜ್ಜಳ ಹೇಳುವ ಮಾತುಗಳು ಹೀಗಿವೆ:
“…ಮಾರಾಯಾ ನಿನಗ ಯಾವ ಪದವಿನೂ ಬೇಕಾಗಿಲ್ಲ. ಇದು ನನಗ ಗೊತ್ತೈತಿ. ನಿನಗ ಪದವಿ ಯಾಕ ಬೇಕು? ನೀ ಎಲ್ಲಿ ಹೋಗಿ ನಿಲ್ಲತೀ ಅಲ್ಲಿ ದೀಪ ಬೆಳಗತಾರು; ಎಲ್ಲಿ ಹೋಗಿ ಕುಂದರತೀ ಅಲ್ಲಿ ಕಾಯಿ ಒಡೀತಾರು; ನೀ ಕಾಡು ಹೊಕ್ಕೊಂಡು ಮರದ ಕೆಳಗ ಕುಂತರೂ ಶರಣರ ಸಂತಿ ಅಲ್ಲೇ ನಡೀತೈತಿ….”
ಬಸವಣ್ಣನನ್ನು ಮನಸಾ ಗೌರವಿಸುತ್ತಿದ್ದರೂ ಸಹ ಬಿಜ್ಜಳನು ಪ್ರಭುತ್ವಕ್ಕೆ ಅವಶ್ಯವಾದ ಕೋರೆಹಲ್ಲು ಹಾಗೂ ಹುಲಿಯುಗುರುಗಳನ್ನು ಬೆಳೆಸಿಕೊಂಡವನೇ. ವ್ಯವಸ್ಥೆಯ ರಕ್ಷಣೆಯ ಉದ್ದೇಶ ಹಾಗೂ ಅದಕ್ಕೆ ಬೇಕಾದ ಕ್ರೌರ್ಯ ಇವು ಬಿಜ್ಜಳನ ವ್ಯಕ್ತಿತ್ವದ ಭಾಗಗಳಾಗಿವೆ.
ತನ್ನ ದಂಡನಾಯಕ ಮಂಚಣ್ಣನಾಯಕನಿಗೆ ಬಿಜ್ಜಳನ್ನು ಕೊಡುತ್ತಿರುವ ಆದೇಶವನ್ನು ನೋಡಿರಿ:
“…ಮಧ್ಯರಾತ್ರಿಗೆ ಸರಿಯಾಗಿ ನಾಕೂ ಕಡೆಯಿಂದ ಮಹಾಮನಿಗೆ ಮಿಂಚು ಹೊಡಧಾಂಗ ಮುತ್ತಿಗೆ ಹಾಕಬೇಕು……ಹೊರಗಿನ ಸುತ್ತಿನ್ಯಾಗ ಬ್ಯಾಟಿ ನಾಯಿಗಳನ್ನು ಬಿಡಿರಿ, ಬಿಲ್ಲಿನವರನ್ನು ಮರದ ಮ್ಯಾಲ ಏರಸರಿ. ಎರಡು ಕಾಲು ಓಡ್ತಿರೋದು ಕಂಡ್ರ ಸಾಕು, ಬಾಣ ಹೊಡೆದು ಭೂಮಿಗೆ ಬೀಳಿಸತಕ್ಕದ್ದೆಂದು ಕಟ್ಟಪ್ಪಣೆ ಮಾಡ್ರಿ….”
ಶರಣರು:
ಶರಣರಲ್ಲಿ ಭೋಳೇ ಜನರು ಇದ್ದಂತಯೇ, ಬೌದ್ಧಿಕವಾಗಿ ಹಾಗು ಆಧ್ಯಾತ್ಮಿಕವಾಗಿ ಎತ್ತರದ ಮಟ್ಟವನ್ನು ಏರಿದವರೂ ಇದ್ದರು. ಅನುಭವ ಮಂಟಪದ ನಿರ್ವಾಹಕರೆಂದು ಇವರನ್ನು ಕರೆಯಬಹುದು. ಬಸವಣ್ಣನ ಹೊರತಾಗಿಯೂ, ಶರಣಚಳುವಳಿಯನ್ನು ಸಾರ್ಥಕಗೊಳಿಸಬಲ್ಲ ಸಾಮರ್ಥ್ಯ ಉಳ್ಳವರು. ಶರಣನ ವೇಷದಲ್ಲಿಯ ಕನ್ನಮಾರಿಯ ಉದ್ದಟತನದಿಂದ ಇವರಲ್ಲಿ ಕೆಲವರು ವಿಚಲಿತರಾದರೆ, ಮುಂದಾಳುಗಳು ಮಾತ್ರ ಎಲ್ಲರನ್ನೂ ಶಾಂತ ಮಾಡಬಲ್ಲವರು.
ಬಸವಣ್ಣ:
ಈಗಾಗಲೇ ರಚಿತವಾದ ಸಾಹಿತ್ಯದಲ್ಲಿ ಬಸವಣ್ಣನು ರಾಜ್ಯದ ಉನ್ನತ ಅಧಿಕಾರಿಯಂತೆ ಕಾಣುವ ವ್ಯಕ್ತಿತ್ವಕ್ಕೆ ಹೆಚ್ಚು ಮಹತ್ವ ಸಿಕ್ಕಿದೆ. ನಾಟಕಗಳಲ್ಲಿಯೂ ಸಹ ಆತ ಮಂತ್ರಿಯ ಪೋಷಾಕನ್ನು ಧರಿಸಿ ರಂಗದ ಮೇಲೆ ಬರುವದೇ ಜನಪ್ರಿಯವಾಗಿದೆ. ಆದರೆ ಈ ನಾಟಕದಲ್ಲಿ ಬಸವಣ್ಣನು ಸಾಮಾನ್ಯರೊಡನೆ ಸಮಾನನಾಗಿ ಇರಬಯಸುವ ವ್ಯಕ್ತಿ.
ನಾಟಕದ ಮೊದಲಲ್ಲಿಯೆ ಆತ ಕೆಳ ಸ್ತರದ ಹೆಣ್ಣುಮಗಳೊಬ್ಬಳಿಗೆ ಹುಲ್ಲು ಹೊರಿಸುವದನ್ನು, ಅವಳೊಡನೆ ಆತ್ಮೀಯವಾಗಿ ಸಂಭಾಷಿಸುವದನ್ನು ಹಾಗೂ ಅವಳಿಗೆ ಲಿಂಗಧಾರಣೆ ಮಾಡುವದನ್ನು flashbackನಲ್ಲಿ ತೋರಿಸಲಾಗಿದೆ.
ಆನಂತರ ಬಸವಣ್ಣನ ಉಲ್ಲೇಖವಾಗುವದು ಬಿಜ್ಜಳನ ಮಾತುಗಳಲ್ಲಿ:
“ಆತ ಮೊದಲೇ ಮಹಾ ತಲೆತಿರುಕ. …………..ಅಲ್ಲಾ ಮಂತ್ರಿಪದವಿ ಬ್ಯಾಡಾ ಅನ್ನೋ ತಲೆತಿರುಕ ಮತ್ತೊಬ್ಬನದಾನೇನು ಈ ದೇಶದೊಳಗ?”
ಹುಲ್ಲು ಹೊರುವ ಹೆಣ್ಣುಮಗಳೊಡನೆ ಆತ್ಮೀಯವಾಗಿ ಮಾತನಾಡುವಾಗ, ಕನ್ನಮಾರಿಯ ಪರವಾಗಿ ಶರಣರೊಡನೆ ಮಾತನಾಡುವಾಗ, ಬಿಜ್ಜಳನ ದಂಡನಾಯಕನು ತಂದ ಆದೇಶವನ್ನು ಧಿಕ್ಕರಿಸುವಾಗ, ತನ್ನ ಹೆಂಡತಿಯ ಉಪಾಯಕ್ಕೆ ಅಸಮಾಧಾನ ವ್ಯಕ್ತಪಡಿಸುವಾಗ ಬಸವಣ್ಣನ ವ್ಯಕ್ತಿತ್ವ ಪ್ರೇಕ್ಷಕರೆದುರಿಗೆ ಹೊಳೆಯುತ್ತದೆ.
ಎಲ್ಲಕ್ಕಿಂತಲೂ ಮುಖ್ಯವಾಗಿ, ತನ್ನ ಅಪೂರ್ಣ ವಚನವೊಂದರ ಕೊನೆಯ ಸಾಲನ್ನು ಆತ ತನ್ನ ಹೆಂಡತಿ ಗಂಗಾಂಬಿಕೆಗೆ ಪ್ರೀತಿಯಿಂದ ಪೂರ್ಣಗೊಳಿಸಿ ಹೇಳುವ ಸನ್ನಿವೇಶವು ಬಸವಣ್ಣನ ಆದರ್ಶವನ್ನು ಅತ್ಯಂತ ಸಮರ್ಥ ರೀತಿಯಲ್ಲಿ ತೋರಿಸುತ್ತದೆ ಎನ್ನಬಹುದು.
ನಾಟಕದ ಕಥಾನಕ:
ನಾಟಕ ಪ್ರಾರಂಭವಾಗುವದು ಬೆಳಗಿನ ಸಮಯದಲ್ಲಿ. ಬಸವಣ್ಣನ ರಂಗಪ್ರವೇಶವಾಗುವದು ಸಂಜೆಯಲ್ಲಿ (flash back ಹೊರತುಪಡಿಸಿ), ಅಂದರೆ ನಾಟಕದ ಕೊನೆಯ ಭಾಗದಲ್ಲಿ.
ಅಲ್ಲಿಯವರೆಗೂ ಕನ್ನಮಾರಿ ಹಾಗೂ ಅವನನ್ನು ಹಿಡಿಯಲೆತ್ನಿಸುತ್ತಿರುವ ಬಿಜ್ಜಳನ ಸೈನಿಕರೇ ರಂಗವನ್ನು ವ್ಯಾಪಿಸಿದ್ದಾರೆ.
ರಂಗದ ಮೇಲೆ ಪ್ರಾಸಂಗಿಕವಾಗಿ ಕಾಣಿಸಿಕೊಳ್ಳುವ ಸಾಮಾನ್ಯ ಬಹುಜನರು ಪ್ರಭುತ್ವಕ್ಕೆ ಹೆದರುವ, ಪ್ರಭುತ್ವ ಎಸೆಯುವ ರೊಟ್ಟಿಯ ತುಣುಕುಗಳಿಗೆ ಆಸೆ ಪಡುವ ಜನತೆ. ಇವರು ಅನಾದಿ ಕಾಲದಿಂದಲೂ ಹೀಗೇ ಇದ್ದವರು. ಬಸವಣ್ಣನ ಕಾಲದಲ್ಲೂ ಹಾಗೇ ಇದ್ದರು. ಈಗಲೂ ಹಾಗೇ ಇದ್ದಾರೆ. ಅದರಂತೆಯೇ ರಂಗದ ಮೇಲೆ ಕಾಣಿಸಿಕೊಳ್ಳುವ ಶ್ರೇಷ್ಠಿಗಳು ವ್ಯವಸ್ಥೆಯ ಮುಂದುವರಿಕೆಯಲ್ಲಿಯೇ ಆಸಕ್ತಿ ಉಳ್ಳವರು.
ಕನ್ನಮಾರಿಯು ಅನುಭವ ಮಂಟಪದಲ್ಲಿ ಶರಣರ ಜೊತೆಗೆ ಸೇರಿಕೊಂಡಿರುವದು ಬಿಜ್ಜಳನ ಗುಪ್ತಚಾರರಿಗೆ ಗೊತ್ತಾಗಲು ತಡವಾಗುವದಿಲ್ಲ. ಮಧ್ಯರಾತ್ರಿಯ ಸಮಯದಲ್ಲಿ ಬಸವಣ್ಣನವರ ಮಹಾಮನೆಗೆ ಸೈನಿಕರು ಮುತ್ತಿಗೆ ಹಾಕುತ್ತಾರೆ. ಕನ್ನಮಾರಿ ತಮ್ಮೊಳಗೇ ಇದ್ದದ್ದು ಬಸವಣ್ಣನ ಹೆಂಡತಿ ಗಂಗಾಂಬಿಕೆಯ ಅರಿವಿಗೂ ಬಂದಿರುತ್ತದೆ. ಅವನನ್ನು ಹಿಡಿದು ಹಾಕಲು ಗಂಗಾಂಬಿಕೆ ಉಪಾಯವೊಂದನ್ನು ರೂಪಿಸುತ್ತಾಳೆ. ಬಂಗಾರದ ತನ್ನ ಒಡವೆಗಳನ್ನು ಗುಪ್ತವಾಗಿ ನೆಲವಿನಲ್ಲಿ ಇಟ್ಟಿರುವದಾಗಿ ಕನ್ನಮಾರಿಗೆ ನಂಬಿಕೆ ಬರುವಂತೆ ನಟಿಸುತ್ತಾಳೆ. ಕನ್ನಮಾರಿ ಹಾಗೂ ಅವನ ಬಂಟರು ಕಳ್ಳತನ ಮಾಡುತ್ತಿರುವಾಗ ಶರಣರ ಕೈಯಲ್ಲಿ ಸಿಕ್ಕು ಬೀಳುತ್ತಾರೆ.
ಇಲ್ಲಿಯವರೆಗೆ ಬಸವಣ್ಣ ಎಲ್ಲಿದ್ದ? ಗಂಗಾಂಬಿಕೆಯು ತನ್ನ ಉಪಾಯದ ಅಂಗವಾಗಿ ಬಂಗಾರದ ಒಡವೆಗಳನ್ನು ಧರಿಸಿರುತ್ತಾಳೆ. ತನ್ನ ಹೆಂಡತಿ ಬಂಗಾರ ಧರಿಸಿರುವದು ಬಸವಣ್ಣನಿಗೆ ಸಹ್ಯವಾಗುವದಿಲ್ಲ. ಆತ ವ್ಯಥಿತನಾಗಿ, ದಾಸೋಹದಲ್ಲಿರುವದನ್ನು ಬಿಟ್ಟು ತನ್ನ ಅರುಹಿನ ಮನೆಗೆ ಹೋಗಿ ಬಿಟ್ಟಿರುತ್ತಾನೆ. ಇದು ಗಂಗಾಂಬಿಕೆಗೆ ಅರ್ಥವಾಗುವದಿಲ್ಲ. ಬೆಳಿಗ್ಗೆ ಒಂದು ವಚನವನ್ನು ಅರ್ಧ ರಚನೆ ಮಾಡಿದವರು ಎಲ್ಲಿ ಹೋದರು? ‘ನೀರಿಗೆ ನೈದಿಲೆಯೆ ಶೃಂಗಾರ…..’ ಎಂದು ಅರ್ಧ ವಚನ ಹೇಳಿದವರು ಆ ವಚನ ಪೂರ್ತಿಗೊಳಿಸಲು ಹೋದರೆ? ಎಂದುಕೊಳ್ಳುತ್ತಾಳೆ. ಆದರೆ ಬಸವಣ್ಣನನ್ನು ಸೂಕ್ಷ್ಮವಾಗಿ ಗಮನಿಸಿದ್ದ ನಾಗವ್ವೆ ಮಾತ್ರ ‘ಶಟಗೊಂಡವರ ಹಂಗ ದುಡುದುಡು ಹೋದಾ…’ ಎನ್ನುತ್ತಾಳೆ.
ಬಸವಣ್ಣನನ್ನು ಅರುಹಿನ ಮನೆಯಿಂದ ಕರೆದುಕೊಂಡು ಬಂದಾಗ ಕನ್ನಮಾರಿಯನ್ನು ಹಿಡಿದದ್ದಕ್ಕಾಗಿ ಶರಣರೆಲ್ಲ ಸಂತೋಷದಲ್ಲಿ ಮುಳುಗಿದ್ದರು. ಮಹಾಕಳ್ಳ ಕನ್ನಮಾರಿಯನ್ನು ರಾಜನಿಗೆ ಒಪ್ಪಿಸಬೇಕು ಎನ್ನುವದೇ ಎಲ್ಲ ಶರಣರ ಅಭಿಪ್ರಾಯ. ಬಸವಣ್ಣ ಅದಕ್ಕೆ ಒಪ್ಪುವದಿಲ್ಲ.
ಕನ್ನಮಾರಿಯ ತರ್ಕವನ್ನಾಗಲಿ, ಶರಣರ ತರ್ಕವನ್ನಾಗಲಿ , ಪ್ರಭುತ್ವದ ತರ್ಕವನ್ನಾಗಲಿ ಬಸವಣ್ಣನು ಒಪ್ಪುವವನಲ್ಲ. ಅಷ್ಟೇ ಏಕೆ, ಗಂಗಾಂಬಿಕೆಯ ಸ್ತ್ರೀಧನದ ತರ್ಕವನ್ನೂ ಆತ ಕಡೆಗಣಿಸುತ್ತಾನೆ. ಕನ್ನಮಾರಿಗೆ ಆಶ್ರಯ ಕೊಟ್ಟರೆ ಬಸವಣ್ಣನೂ ಅಪರಾಧಿಯೇ ಆಗುತ್ತಾನೆ ಎನ್ನುವ ಮಾತಿಗೂ ಆತ ಬೆಲೆ ಕೊಡುವದಿಲ್ಲ.ಬಿಜ್ಜಳನ ಸೇನಾಪತಿಗೆ ಬಸವಣ್ಣನು ಹೇಳುವ ಮಾತುಗಳಿವು:
"ದೇಶಕ್ಕೊಂದು ಶಾಸನ ಐತಿ ನಿಜ.ಆದರ ಶಾಸನಕ್ಕಂಜಿ ನನ್ನ ಅಂತರಾತ್ಮ ಒಪ್ಪದಿರುವಂಥಾ ಯಾವ ಕೆಲಸವನ್ನೂ ನಾನು ಮಾಡಲಾರೆ."
ಕನ್ನಮಾರಿಯ ಜೀವ ಉಳಿಸಲು ಆತನನ್ನು ತನ್ನ ಅಂದರೆ ಮಂತ್ರಿಯ ಮುತ್ತಿನ ಪಲ್ಲಕ್ಕಿಯಲ್ಲಿ, ಮಂತ್ರಿಯ ಕಿರೀಟ ತೊಡಸಿ, ಗಂಗಾಂಬಿಕೆಯ ಎಲ್ಲ ಒಡವೆಗಳನ್ನೂ ಆತನಿಗೇ ಕೊಟ್ಟು ಆತನನ್ನು ಪಾರು ಮಾಡುತ್ತಾನೆ.
ಆ ಸಮಯದಲ್ಲಿ ಬಸವಣ್ಣನು ಅರ್ಧ ರಚಿಸಿದ ತನ್ನ ವಚನವನ್ನು ಪೂರ್ತಿಗೊಳಿಸಿ ಗಂಗಾಂಬಿಕೆಗೆ ಹೇಳುವ ಭಾಗವು ನಾಟಕದ ಉತ್ತುಂಗಭಾಗವೆನ್ನಬಹುದು.
ಬಸವಣ್ಣನ ತರ್ಕವು ಬುದ್ಧಿಯಿಂದ ಬಂದದ್ದಲ್ಲ, ಅದು ಆತನ ಹೃದಯದಿಂದ ಹೊಮ್ಮಿದ್ದು ಎನ್ನುವದು ಇತರರಿಗೆಲ್ಲ ಆಗ ಅರ್ಥವಾಗುತ್ತದೆ. ಬಸವಣ್ಣ ಬಯಸುವ ಸಮಾಜದ ಆದರ್ಶವೂ ಆ ವಚನದಿಂದಲೇ ಅರಿವಾಗುತ್ತದೆ.
ನಾಟಕದ ಕೊನೆಯ ದೃಶ್ಯದಲ್ಲಿ ಬಿಜ್ಜಳನ ದಂಡನಾಯಕನು ಬಸವಣ್ಣನ ಸೆರೆ ಹಿಡಿಯಲು ಸನ್ನದ್ಧನಾಗಿ ಬರುತ್ತಾನೆ. ಅದೇ ಸಮಯದಲ್ಲಿ ಬಿಜ್ಜಳನು ಕನ್ನಮಾರಿಯೊಂದಿಗೆ ಅಲ್ಲಿಗೆ ಬರುತ್ತಾನೆ. ಯಾಕೆಂದರೆ ಕನ್ನಮಾರಿಯು ತನ್ನ ಜೀವ ಉಳಿಸಿದ ಬಸವಣ್ಣನ ಜೀವವು ಅಪಾಯದಲ್ಲಿರುವದನ್ನು ಅರಿತುಕೊಂಡು, ತಾನೇ ಸ್ವತಃ ಬಿಜ್ಜಳನ ಅರಮನೆಗೆ ತೆರಳಿ, ಅಲ್ಲಿ ತನ್ನನ್ನೇ ಒಪ್ಪಿಸಿಕೊಂಡಿರುತ್ತಾನೆ.
ಕನ್ನಮಾರಿಯ ಬಿಡುಗಡೆಯಾಗುತ್ತದೆ ಹಾಗು ಆತನೂ ಸಹ ಶರಣಜೀವನಕ್ಕೆ ತನ್ನನ್ನು ಸಮರ್ಪಿಸಿಕೊಳ್ಳುತ್ತಾನೆ.
ಇದಿಷ್ಟು ನಾಟಕದ ಕಥಾನಕ.
ನಾಟಕದ ವೈಶಿಷ್ಟ್ಯಗಳು:
ಕೇವಲ ಕಳ್ಳನೊಬ್ಬನು ಶರಣನಾದ ಕತೆಯನ್ನು ಹೇಳುವ ನಾಟಕವಲ್ಲವಿದು. ಕಳ್ಳನನ್ನು ಶರಣನನ್ನಾಗಿ ಪರಿವರ್ತಿಸಿದ ಬಸವಣ್ಣನ ವ್ಯಕ್ತಿತ್ವವನ್ನು ಅರಿತುಕೊಳ್ಳಲು ಮಾಡಿದ ಪ್ರಯತ್ನವು ಇಲ್ಲಿದೆ. ಬಸವಣ್ಣನ ವ್ಯಕ್ತಿತ್ವ ಎಂತಹದು?
ಅಂಗುಲಿಮಾಲಾನನ್ನು ಪರಿವರ್ತಿಸಿದ ಬುದ್ಧನ ವ್ಯಕ್ತಿತ್ವವೆ? ಅಥವಾ ಸಮಾಜಸುಧಾರಕನ ವ್ಯಕ್ತಿತ್ವವೆ?
ಬಸವಣ್ಣನ ಬಗೆಗೆ ಬರೆದ ಲೇಖಕರೆಲ್ಲ ಆತನನ್ನು ಅರಿತುಕೊಳ್ಳಲು ಪ್ರಯತ್ನಿಸಿ ಬರೆದವರೇ.
ವ್ಯಾಸ ದೇಶಪಾಂಡೆಯವರು ಇಲ್ಲಿ ಬಸವಣ್ಣನ ವ್ಯಕ್ತಿತ್ವವನ್ನು ಇತರ ಪಾತ್ರಗಳ ಮೂಲಕ ಅರ್ಥೈಸಲು ಪ್ರಯತ್ನಿಸಿದ್ದಾರೆ.
ಕನ್ನಮಾರಿ vs ಬಸವಣ್ಣ , ಬಿಜ್ಜಳ vs ಬಸವಣ್ಣ , ಶರಣರು vs ಬಸವಣ್ಣ , ಕೊನೆಗೆ ಗಂಗಾಂಬಿಕೆ vs ಬಸವಣ್ಣ.
ಜೊತೆಜೊತೆಗೇ ಆ ಸಮಯದ ಸಮಾಜದ ವ್ಯವಸ್ಥೆ, ದುಡಿವ ವರ್ಗದ ಶೋಷಣೆ, ಪ್ರಭುತ್ವದ ರಾಜಕೀಯ ಇವೆಲ್ಲ ನಾಟಕದಲ್ಲಿ ಪ್ರಾಸಂಗಿಕವಾಗಿ ಬಂದಿವೆ. ಇಂತಹ ವ್ಯವಸ್ಥೆಗೆ ಒಂದು ಪ್ರತಿವ್ಯವಸ್ಥೆ ಇದೆಯೆ?
ಆಧುನಿಕ ಭಾರತದಲ್ಲಿ,ಗಾಂಧೀಜಿ, ವಿನೋಬಾ, ಜಯಪ್ರಕಾಶ ನಾರಾಯಣ ಇವರೆಲ್ಲ ಇದಕ್ಕಾಗಿ ಪ್ರಯತ್ನಿಸಿದವರೆಂದು ನಾವು ಬಲ್ಲೆವು.
ಇಲ್ಲಿ ಬರುವ ಕನ್ನಮಾರಿ ಹಳೆಯ ಕಾಲದ Robin Hood ಹಾಗೂ ಈ ಕಾಲದ ನಕ್ಸಲೀಯರನ್ನು ಸ್ವಲ್ಪ ಮಟ್ಟಿಗೆ ಹೋಲುತ್ತಾನೆ ಎನ್ನಬಹುದಾದರೂ ಲೇಖಕರು ಇಂತಹ ಸುಳಿವುಗಳು ನುಸಳದಂತೆ ಪ್ರಯತ್ನಪೂರ್ವಕವಾಗಿ ನಾಟಕವನ್ನು ರಚಿಸಿದ್ದಾರೆ. ಅದರಂತೆಯೆ ಮಾರ್ಕ್ಸಿಸ್ಟ್ ಗುರುತುಗಳನ್ನೂ ಸಹ ಇಲ್ಲಿ ಸುಳಿಯಗೊಟ್ಟಿಲ್ಲ.
(ಕಮ್ಯುನಿಸ್ಟ ಅರ್ಥವ್ಯವಸ್ಥೆಯ ಪ್ರತಿಪಾದಕನಾದ ಮಾರ್ಕ್ಸನನ್ನು ಬಸವಣ್ಣನಿಗೆ ಹೋಲಿಸುವದು ದೊಡ್ಡ ತಪ್ಪು. ಏಕೆಂದರೆ ಮಾರ್ಕ್ಸನು State Ownershipಅನ್ನು ಹೇಳುತ್ತಿದ್ದ ಹಾಗೂ ಆಧ್ಯಾತ್ಮವನ್ನು ತಿರಸ್ಕರಿಸಿದ್ದ.)
ಬಸವಣ್ಣನವರು ಮಾನವ ಘನತೆಯನ್ನು ಸಾಮಾಜಿಕ ಸಮಾನತೆಯನ್ನು, ಕಾಯಕದ ಮಹತ್ವವನ್ನು ಹಾಗೂ ಆಧ್ಯಾತ್ಮಿಕ ಅವಶ್ಯಕತೆಯನ್ನು ಜೀವಿಸಿ ತೋರಿಸಿದವರು. ಈ ಎಲ್ಲ ಅಂಶಗಳು ೫೩ ಪುಟಗಳ ಈ ಚಿಕ್ಕ ನಾಟಕದಲ್ಲಿ ಸಮರ್ಥವಾಗಿ ಬಂದಿವೆ.
ಎರಡನೆಯದಾಗಿ ಬಸವಣ್ಣನವರ ಈ ಆದರ್ಶಸಮಾಜದ ಅಂಗವ್ಯಕ್ತಿಗಳು ಯಾರು ಅನ್ನುವದನ್ನೂ ಸಹ ನಾಟಕವು ಸ್ಪಷ್ಟಪಡಿಸುತ್ತದೆ. ಶರಣಚಳವಳಿಯು ಕೇವಲ ಕೆಳಸ್ತರದವರ ಚಳವಳಿಯಲ್ಲ ಅಥವಾ ಕೇವಲ ಚಿಂತಕರ ಚಳವಳಿಯೂ ಅಲ್ಲ. ಇದೊಂದು ಸರ್ವಸಮನ್ವಯ ಚಳವಳಿ. ಈ ಆದರ್ಶ ಸಮಾಜಕ್ಕೆ ಯಾರೂ ಹೊರತಲ್ಲ. ಇದರಲ್ಲಿ ಯಾರೂ ಹೆಚ್ಚಲ್ಲ, ಯಾರೂ ಕಡಿಮೆಯಲ್ಲ. ಅದಕ್ಕೆಂದೇ ಈ ನಾಟಕದ ಶೀರ್ಷಿಕೆ: “ಇವ ನಮ್ಮವ”.
ಈ ಎಲ್ಲ ಅಂಶಗಳನ್ನು ಗಮನಿಸಿದಾಗ ಇದು ಐತಿಹಾಸಿಕ ನಾಟಕವೂ ಹೌದು ಹಾಗೂ ಸಾಮಾಜಿಕ ನಾಟಕವೂ ಹೌದು ಎನ್ನುವದು ಸ್ಪಷ್ಟವಾಗುತ್ತದೆ. ಆದುದರಿಂದ ಇದನ್ನು ಐತಿಹಾಸಿಕ-ಸಾಮಾಜಿಕ ನಾಟಕವೆಂದು ಕರೆಯಬಹುದೇನೊ?
ಈ ನಾಟಕ ಪ್ರಾರಂಭವಾಗುವದು ಬೆಳಗಿನ ಸಮಯದಲ್ಲಿ , ಮುಕ್ತಾಯವಾಗುವದು ಮರುದಿನದ ಬೆಳಗಿನಲ್ಲಿ. ಹುಲ್ಲು ಹೊರುವ ಹೆಣ್ಣುಮಗಳು ಬಸವಣ್ಣನ ಜೊತೆಗೆ ಮಾತನಾಡುವ flashback ಹೊರತುಪಡಿಸಿ ನಾಟಕದ ಕಾಲ ಒಂದೇ ದಿನಮಾನದ್ದು.
ಸರಳ ಆಡುನುಡಿಯ ಸಂಭಾಷಣೆ ನಾಟಕದ ಸೊಬಗನ್ನು ಹೆಚ್ಚಿಸಿದೆ.
ನಾಟಕದ ಅಂತರಾಳ ಎಷ್ಟೇ ಗಂಭೀರವಾಗಿದ್ದರೂ ಸಹ ಸನ್ನಿವೇಶಗಳು ಹಾಗೂ ಸಂಭಾಷಣೆಗಳು ಸಹಜ ವಿನೋದವನ್ನು ಹೊಮ್ಮಿಸುತ್ತವೆ. ಸಮಾಜದಲ್ಲಿ ಪರಿವರ್ತನೆ ಸಾಧ್ಯ ಎನ್ನುವ ಆಶಾಭಾವವನ್ನು ಹೊಮ್ಮಿಸುವ ಈ ನಾಟಕವು ಬಸವಣ್ಣನವರ ಬಗೆಗೆ ರಚಿಸಲಾದ ಉಳಿದೆಲ್ಲ ದುರಂತ ನಾಟಕಗಳಿಗಿಂತ ಮನಸ್ಸನ್ನು ತಟ್ಟುತ್ತದೆ.
ಈ ನಾಟಕಕ್ಕೆ ಒಂದು ಮಿತಿಯೂ ಇದೆ. ಕಿರಿದರೊಳ್ ಪಿರಿದರ್ಥವಂ ಹೇಳುವಾಗ ಹುಟ್ಟುವ ಮಿತಿ ಅದು. ನಾಟಕದ ವಸ್ತು ಎಷ್ಟೇ ಜಟಿಲವಾಗಿದ್ದರೂ ಸಹ, ರಚನೆ ಸರಳವಾಗಿದೆ. ಇದು ಈ ನಾಟಕದ ಅನಿವಾರ್ಯತೆ ಹಾಗೂ ಮಿತಿ.
ಒಟ್ಟಿನಲ್ಲಿ ಕನ್ನಡದ ಶ್ರೇಷ್ಠ ನಾಟಕಗಳಲ್ಲಿ ಇದು ಒಂದು ಎಂದು ನಿಸ್ಸಂದೇಹವಾಗಿ ಹೇಳಬಹುದು.
……………………………………………………………………………….
ಟಿಪ್ಪಣಿ: ವ್ಯಾಸ ದೇಶಪಾಂಡೆಯವರ ಬಗೆಗೆ ಹೆಚ್ಚಿನ ಮಾಹಿತಿಯನ್ನು
http://kn.wikipedia.org/wiki/%E0%B2%B5%E0%B3%8D%E0%B2%AF%E0%B2%BE%E0%B2%B8_%E0%B2%A6%E0%B3%87%E0%B2%B6%E0%B2%AA%E0%B2%BE%E0%B2%82%E0%B2%A1%E0%B3%86 ದಲ್ಲಿ ಪಡೆಯಬಹುದು.
Wednesday, May 20, 2009
ತುಂಬಿ ಬಂದಿತ್ತು
ಬಸವಣ್ಣನ ಜೀವನದ ಕೊನೆಯ ದಿನಗಳಿಗೆ ಸಂಬಂಧಿಸಿದಂತೆ, ಬೇಂದ್ರೆಯವರು ’ತಲೆದಂಡ’ ಎನ್ನುವ ನಾಟಕವನ್ನು ರಚಿಸಿದ್ದರು. ಬಸವಣ್ಣನವರ ಸಮಾಧಿಯ ಕೆಲಸ ನಡೆದಿರುವಾಗ ಅಲ್ಲಿಗೆ ಬಂದ ಮುದುಕ ಜಂಗಮನೊಬ್ಬನು ಈ ಹಾಡನ್ನು ಹೇಳುವನು.
ಈ ಹಾಡನ್ನು ಸ್ವತಃ ಬೇಂದ್ರೆಯವರೇ ಏಕತಾರಿಯ ಹಿನ್ನೆಲೆಯಲ್ಲಿ ೧೯೪೭ರಲ್ಲಿ ಹಾಡಿದ್ದರು. ಅದು HMV ಕಂಪನಿಯಿಂದ ಮುದ್ರಿತವಾಯಿತು.
ಅನೇಕ ವರ್ಷಗಳ ನಂತರ, ಗಿರೀಶ ಕಾರ್ನಾಡರು ಬಸವಣ್ಣನ ಬಗೆಗೆ ತಾವೂ ಒಂದು ನಾಟಕ ರಚಿಸಿದರು ಹಾಗೂ ಬೇಂದ್ರೆಯವರ ಅನುಮತಿಯನ್ನು ಪಡೆದುಕೊಂಡು ತಮ್ಮ ನಾಟಕಕ್ಕೆ ‘ತಲೆದಂಡ’ ಎಂದು ಹೆಸರು ಕೊಟ್ಟರು.
ಕವನದ ಪೂರ್ತಿಪಾಠ ಹಿಗಿದೆ:
……………………………………………………………..
ತುಮ್ ತುಮ್ ತುಮ್ ತುಮ್ ತುಮ್ ತುಮ್ ತುಮ್ ತುಮ್
ತುಂಬಿ ಬಂದಿತ್ತ ತಂಗೀ
ತುಂಬಿ ಬಂದಿತ್ತು ||ಪಲ್ಲವಿ||
೧
ಬೆಳಕಿಗಿಂತ ಬೆಳ್ಳಗೆ ಇತ್ತ
ಗಾಳಿಗಿಂತ ತೆಳ್ಳಗೆ ಇತ್ತ
ಜಡಿಯಿಂದಿಳಿದ ಗಂಗಿ ಹಾಂಗ
ಚಂಗನೆ ನೆಗೆದಿತ್ತ
ಮೈಯೊಳಗಿರುವ ಮೂಲಿಮೂಲಿಗೂ
ಮೂಡಿ ಬಂದಿತ್ತ
ಅಡಿಮುಡಿಗೂಡಿ ನಡುವಂತೆಲ್ಲಾ
ಮುಳುಗಿಸಿ ಬಿಟ್ಟಿತ್ತ ತಂಗೀ
ತುಂಬಿ ಬಂದಿತ್ತು || ತುಮ್ ತುಮ್……
೨
ಹೂವಿಗಿರುವ ಕಂಪು ಇತ್ತ
ಹಾಡಿಗಿರುವ ಇಂಪು ಇತ್ತ
ಜೀವದ ಮಾತು ಕಟ್ಟಿಧಾಂಗ
ಎದ್ಯಾಗ ನಟ್ಟಿತ್ತ
ವರ್ಮದ ಮಾತು ಆಡಿಧಾಂಗ
ಮರ್ಮಕ ಮುಟ್ಟಿತ್ತ
ಬೆಳಕಿಗೆ ಮರಳಿ ಕಮಲವರಳಿ
ಜೇನ ಬಿಟ್ಟಿತ್ತ ತಂಗೀ
ತುಂಬಿ ಬಂದಿತ್ತು || ತುಮ್ ತುಮ್……
೩
ಕಾಲದ್ಹಾಂಗ ಕಪ್ಪಗಿತ್ತ
ಸಾವಿನ್ಹಾಂಗ ತೆಪ್ಪಗಿತ್ತ
ಹದ್ದು ಬಂದು ಹಾವಿನ ಮ್ಯಾಲೆ
ಎರಗಿದಂತಿತ್ತ
ಇರುಳ ಮಬ್ಬಿನ್ಯಾಗ ಹಗಲಿನ ಬೆಳಕು
ಕರಗಿದಂತಿತ್ತ
ಗುಂಗು ಹಿಡಿದು ತಂಗಿದಾಗ
ತುಂಬಿ ನಿಂತಿತ್ತ ಈಗ
ತುಳಿಕಿ ಹೋಗಿತ್ತ
ತಂಗೀ ತುಂಬಿ ಬಂದಿತ್ತು || ತುಮ್ ತುಮ್……
…………………………………………………………………………………….
ಬೇಂದ್ರೆಯವರು ರಚಿಸಿದ ಈ ಕವನಕ್ಕೆ ಬಸವಣ್ಣನಿಂದ ಹಾಗೂ ಅಲ್ಲಮಪ್ರಭುವಿನಿಂದ ಪ್ರೇರಣೆ ದೊರೆತಿರಬಹುದು.
ಬಸವಣ್ಣನವರೇ ರಚಿಸಿದ ವಚನವೊಂದು ಹೀಗಿದೆ:
ವಚನದಲ್ಲಿ ನಾಮಾಮೃತ ತುಂಬಿ
ನಯನದಲ್ಲಿ ನಿಮ್ಮ ಮೂರುತಿ ತುಂಬಿ
ಮನದಲ್ಲಿ ನಿಮ್ಮ ನೆನಹು ತುಂಬಿ
ಕಿವಿಯಲ್ಲಿ ನಿಮ್ಮ ಕೀರುತಿ ತುಂಬಿ
ಕೂಡಲಸಂಗಮದೇವಾ
ನಿಮ್ಮ ಚರಣಕಮಲದೊಳಗಾನು ತುಂಬಿ.
ಅಲ್ಲಮಪ್ರಭುವಿನ ವಚನ ಈ ರೀತಿಯಾಗಿದೆ:
ಗಿಡದ ಮೇಲಣ ತುಂಬಿ ಕೂಡೆ ವಿಕಸಿತವಾಯಿತ್ತು, ತುಂಬಿ ನೋಡಾ!
ಆತುಮ ತುಂಬಿ ತುಂಬಿ ನೋಡಾ!
ಪರಮಾತುಮ ತುಂಬಿ ತುಂಬಿ ನೋಡಾ!
ಗುಹೇಶ್ವರ ಲಿಂಗಕ್ಕೆರಗಿ ನಿಬ್ಬೆರಗಾಯಿತ್ತು ತುಂಬಿ ನೋಡಾ!!
ಅಲ್ಲಮಪ್ರಭು, ಅಕ್ಕಮಹಾದೇವಿ ಹಾಗೂ ನವೋದಯ ಕಾಲದ ಸಾಹಿತಿಯಾದ ಮಧುರಚೆನ್ನರನ್ನು ಕನ್ನಡದಲ್ಲಿ ಶ್ರೇಷ್ಠ ಅನುಭಾವಸಾಹಿತ್ಯವನ್ನು ನೀಡಿದವರೆಂದು ಗುರುತಿಸಬಹುದು.
ಅಲ್ಲಮಪ್ರಭುವಿನ ವಚನವು ಗಿಡವನ್ನು ಪ್ರಪಂಚಕ್ಕೆ ಹಾಗೂ ಗಿಡದ ಮೇಲಿರುವ ತುಂಬಿಯನ್ನು ಆತ್ಮಕ್ಕೆ ಹೋಲಿಸುತ್ತದೆ. ಆತ್ಮದ ವಿಕಸನ ಹಾಗೂ ಪರಮಾತ್ಮದ ಆನಂದವನ್ನು ಅಲ್ಲಮಪ್ರಭುಗಳು ಈ ವಚನದಲ್ಲಿ ಬಣ್ಣಿಸಿದ್ದಾರೆ.
ಬೇಂದ್ರೆಯವರು ತಮ್ಮ ಕವನದಲ್ಲಿ ಬಸವಣ್ಣ ಹಾಗೂ ಅಲ್ಲಮಪ್ರಭುವಿನ ವಚನಗಳಲ್ಲಿಯ ತುಂಬಿಯ ಹೋಲಿಕೆಯನ್ನು ಅನುಕರಿಸಿಲ್ಲ. ಆದರೆ ಆ ಪದವನ್ನು ಬಳಸುವದಕ್ಕೆ ಈ ವಚನಗಳಿಂದ ಪ್ರೇರಣೆಯನ್ನು ಪಡೆದಿರಬಹುದು.
ವೀರಶೈವ ಆಂದೋಲನ ಜಗತ್ತಿನ ಅತ್ಯಂತ ಮಹತ್ವದ ಆಂದೋಲನಗಳಲ್ಲಿ ಒಂದು. ಇದರ ಕಾರ್ಯಕ್ಷೇತ್ರ ಕನ್ನಡ ನಾಡಾಗಿತ್ತಷ್ಟೆ. ಈ ಆಂದೋಲನದ ಕೇಂದ್ರವ್ಯಕ್ತಿಯಾದ ಬಸವೇಶ್ವರರ ಬಗೆಗೆ ಶರಣರಿಗೆ ಇದ್ದಂತಹ ಭಾವನೆಗಳನ್ನು ಈ ಹಾಡಿನಲ್ಲಿ ವಿವರಿಸಲಾಗಿದೆ.
ಆಧುನಿಕ ಕಾಲದಲ್ಲಿ ಮಹಾತ್ಮಾ ಗಾಂಧಿಯವರು ‘ಅಹಿಂಸಾಮೂರ್ತಿ’ ಎಂದು ಗುರುತಿಸಲ್ಪಟ್ಟಿದ್ದರು. ಅದರಂತೆ ವೀರಶೈವ ಆಂದೋಲನದ ಕಾಲದಲ್ಲಿ ಬಸವಣ್ಣನವರು ಯಾವ ರೀತಿಯಲ್ಲಿ ಗುರುತಿಸಲ್ಪಟ್ಟಿದ್ದರು? ಬೇಂದ್ರೆಯವರು ಜಂಗಮನೋರ್ವನ ಹಾಡಿನ ಮೂಲಕ ಕಲ್ಯಾಣದ ಜನರ ಮನೋಭಾವಗಳನ್ನು ತೋರಿಸಿದ್ದಾರೆ. ಈ ಹಾಡಿನ ಮೂರು ನುಡಿಗಳಲ್ಲಿ ಆ ಜಂಗಮನು ಬಸವಣ್ಣನವರ ವ್ಯಕ್ತಿತ್ವವನ್ನು, ಸಾಧನೆಯನ್ನು ಹಾಗೂ ಅವರ ಕೊನೆಯನ್ನು ವರ್ಣಿಸುತ್ತಾನೆ.
ಮೊದಲನೆಯ ನುಡಿಯನ್ನು ನೋಡಿರಿ:
ಬೆಳಕಿಗಿಂತ ಬೆಳ್ಳಗೆ ಇತ್ತ
ಗಾಳಿಗಿಂತ ತೆಳ್ಳಗೆ ಇತ್ತ
ಜಡಿಯಿಂದಿಳಿದ ಗಂಗಿ ಹಾಂಗ
ಚಂಗನೆ ನೆಗೆದಿತ್ತ
ಮೈಯೊಳಗಿರುವ ಮೂಲಿಮೂಲಿಗೂ
ಮೂಡಿ ಬಂದಿತ್ತ
ಅಡಿಮುಡಿಗೂಡಿ ನಡುವಂತೆಲ್ಲಾ
ಮುಳುಗಿಸಿ ಬಿಟ್ಟಿತ್ತ ತಂಗೀ
ತುಂಬಿ ಬಂದಿತ್ತು || ತುಮ್ ತುಮ್……
ಬಸವಣ್ಣನವರು ಕನ್ನಡನಾಡು ಕಂಡ ಮಹಾಪುರುಷರು. ಅಧ್ಯಾತ್ಮಿಕವಾಗಿ ಹಾಗೂ ಸಾಮಾಜಿಕವಾಗಿ ಇವರದು ಮಹತ್ತಮ ವ್ಯಕ್ತಿತ್ವ. ಬಸವಣ್ಣನವರ ಒಳಗೆ ಅರಳಿದ ಸೂಕ್ಷ್ಮ ದೈವೀ ಚೈತನ್ಯವನ್ನು ಬಣ್ಣಿಸಲು ನಿಸರ್ಗದ ಚೈತನ್ಯಗಳಾದ ಬೆಳಕು, ಗಾಳಿ ಹಾಗೂ ಗಂಗೆ ಇವುಗಳನ್ನೇ ಪ್ರತೀಕಗಳಾಗಿ ಬಳಸುವದು ಸಹಜ. ಆದುದರಿಂದಲೇ ಇಲ್ಲಿ ಹಾಡುತ್ತಿರುವ ಜಂಗಮನು ಈ ಸೂಕ್ಷ್ಮ ಚೈತನ್ಯವು ಬೆಳಕಿಗಿಂತಲೂ ಬೆಳ್ಳಗೆ ಇತ್ತು ಹಾಗೂ ಗಾಳಿಗಿಂತಲೂ ತೆಳ್ಳಗೆ ಇತ್ತು ಎಂದು ಬಣ್ಣಿಸುತ್ತಿದ್ದಾನೆ. ಬೆಳಕು ಜ್ಞಾನವನ್ನು ಕೊಡುತ್ತದೆ, ಗಾಳಿ ನಿಮಗೆ ತಿಳಿಯದಂತೇ ನಿಮ್ಮನ್ನು ಆವರಿಸುತ್ತದೆ ಹಾಗು ನಿಮ್ಮ ಪ್ರಾಣಕ್ಕೆ ಆಧಾರವಾಗಿದೆ. ಗಂಗೆ ಜೀವಿಗಳ ಕೊಳೆಯನ್ನು ತೊಳೆದು ಅವರನ್ನು ಪಾವನಗೊಳಿಸುವಳು. ಬಸವಣ್ಣನವರ ಲೋಕಕಲ್ಯಾಣಕರ ವ್ಯಕ್ತಿತ್ವವು ಬೆಳಕು, ಗಾಳಿ ಹಾಗೂ ಗಂಗೆಯಂತೆ ಪರಿಶುದ್ಧವಾಗಿದೆ, ಅಲ್ಲದೆ ಸಮಾಜಕ್ಕೆ ಒಳಿತನ್ನು ಮಾಡಿದೆ. ಈ ರೂಪಕವು ಬಸವಣ್ಣನವರ ಆಧ್ಯಾತ್ಮಿಕ ವ್ಯಕ್ತಿತ್ವವನ್ನು ವರ್ಣಿಸುವಂತೆ, ಅವರ ಸಾಮಾಜಿಕ ವ್ಯಕ್ತಿತ್ವವನ್ನೂ ಸಹ ವರ್ಣಿಸುತ್ತದೆ.
ಬಸವಣ್ಣನವರ ಒಳಗಿದ್ದ ದೈವೀ ಚೈತನ್ಯವು ಶಿವನ ಜಡೆಯಲ್ಲಿದ್ದ ಗಂಗೆ ಧುಮ್ಮಿಕ್ಕುವಂತೆ ಬಸವಣ್ಣನವರ ಸೂಕ್ಷ್ಮ ನಾಡಿಗಳಲ್ಲೆಲ್ಲ ಧುಮುಕಿ, ಅವರನ್ನು ಅಡಿಯಿಂದ ಮುಡಿಯವರೆಗೆ ಶಿವಮಯವನ್ನಾಗಿಸಿತು. ಅವರ ವ್ಯಕ್ತಿತ್ವವು ಈ ದೈವೀ ಚೈತನ್ಯದಿಂದ ತುಂಬಿಕೊಂಡಿತು.
ಎರಡನೆಯ ನುಡಿಯಲ್ಲಿ ಬಸವಣ್ಣನವರ ಈ ಮಹಾಚೈತನ್ಯವು ಯಾವ ರೀತಿಯಲ್ಲಿ ಜನರನ್ನು, ಶರಣರನ್ನು ಪ್ರಭಾವಿಸುತ್ತಿತ್ತು ಎನ್ನುವದನ್ನು ಹೇಳಲಾಗಿದೆ:
ಹೂವಿಗಿರುವ ಕಂಪು ಇತ್ತ
ಹಾಡಿಗಿರುವ ಇಂಪು ಇತ್ತ
ಜೀವದ ಮಾತು ಕಟ್ಟಿಧಾಂಗ
ಎದ್ಯಾಗ ನಟ್ಟಿತ್ತ
ವರ್ಮದ ಮಾತು ಆಡಿಧಾಂಗ
ಮರ್ಮಕ ಮುಟ್ಟಿತ್ತ
ಬೆಳಕಿಗೆ ಮರಳಿ ಕಮಲವರಳಿ
ಜೇನ ಬಿಟ್ಟಿತ್ತ ತಂಗೀ
ತುಂಬಿ ಬಂದಿತ್ತು || ತುಮ್ ತುಮ್……
ಬೆಳಕು, ಗಾಳಿ ಹಾಗೂ ಗಂಗೆ ಇವು ನಕಾರಾತ್ಮಕ ಗುಣಗಳನ್ನು ನಿವಾರಿಸುತ್ತವೆ. ಅಷ್ಟಾದರೆ ಸಾಕೆ? ಸಕಾರಾತ್ಮಕ ಗುಣಗಳೂ ಸಹ ಬೇಕಲ್ಲವೆ? ಎರಡನೆಯ ನುಡಿಯಲ್ಲಿ ಬಸವಣ್ಣನವರ ಆಚಾರ-ವಿಚಾರಗಳು ಜನರನ್ನು ಸಕಾರಾತ್ಮಕವಾಗಿ ಪ್ರಭಾವಿಸುವ ರೀತಿಯನ್ನು ಹೇಳಲಾಗಿದೆ. ಹೂವಿನ ಕಂಪಿನಂತೆ, ಹಾಡಿನ ಇಂಪಿನಂತೆ ಅವರ ಆಚಾರ-ವಿಚಾರಗಳು ಜನರನ್ನು ಪ್ರಭಾವಿಸುತ್ತಿದ್ದವು.
ಅವರ ಮಾತುಗಳು ಕಾಲಹರಣದ ಮಾತುಗಳಾಗಲೀ, ಮನೋರಂಜನೆಯ ಮಾತುಗಳಾಗಲೀ ಆಗಿರಲಿಲ್ಲ. (‘ನುಡಿದರೆ ಮುತ್ತಿನ ಹಾರದಂತಿರಬೇಕು’ ಎನ್ನುವ ವಚನವನ್ನು ನೆನಪಿಸಿಕೊಳ್ಳಿರಿ.) ಹೃದಯದ ಒಳಗಿಂದ ಹೊರಬರುವ ನೈಜವಾದ ಮಾತುಗಳು ಅವು. ಹೀಗಾಗಿ ಅವು ಕೇಳುಗರ ಮನಕ್ಕೆ ತಟ್ಟುತ್ತಿದ್ದವು. ಹೂವಿನ ಕಂಪಿನಂತೆ ಹಾಗೂ ಹಾಡಿನ ಇಂಪಿನಂತೆ ಅವರ ಮಾತುಗಳು ಮನಸ್ಸನ್ನು ಉಲ್ಲಾಸಗೊಳಿಸುತ್ತಿದ್ದವು, ಅರಳಿಸುತ್ತಿದ್ದವು. ಬಸವಣ್ಣನವರೇ ಹೇಳಿದಂತೆ, ಅವರ ವಚನಗಳಲ್ಲಿ ನಾಮಾಮೃತ ತುಂಬಿದೆ, ಈ ಅಮೃತಪಾನ ಮಾಡುವ ತುಂಬಿ ಅವರು. ಈ ವಚನಗಳ ಕಂಪು ಹಾಗೂ ಇಂಪು ಎಲ್ಲೆಡೆ ಹರಡಿವೆ, ತುಂಬಿಕೊಂಡಿವೆ.
ಈ ನುಡಿಯಲ್ಲಿಯ ಒಂದು ಸಾಲು, “ವರ್ಮದ ಮಾತು ಆಡಿಧಾಂಗ ಮರ್ಮಕ ಮುಟ್ಟಿತ್ತ” ಎನ್ನುವದು ವಿಚಿತ್ರವಾಗಿ ತೋರಬಹುದು. ವರ್ಮ ಎಂದರೆ ವಿರೋಧ ಹಾಗೂ ದ್ವೇಷ. ಬಸವಣ್ಣನವರು ಇಂತಹ ಮಾತುಗಳನ್ನು ಆಡಬಹುದೆ ಎನ್ನುವ ಸಂಶಯ ಬರಬಹುದು. ಆದರೆ ಇಂತಹ ಮಾತುಗಳು ತಪ್ಪು ನಡತೆಯವರಿಗಾಗಿ ಇರುತ್ತಿದ್ದವು.
ಉದಾಹರಣೆಗಾಗಿ:
(೧) ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ,
ಅನ್ಯರಿಗೆ ಅಸಹ್ಯಪಡಬೇಡ………………………
(೨) ಛಲ ಬೇಕು ಶರಣಂಗೆ ಪರಧನವನೊಲೆನೆಂಬ,
ಛಲ ಬೇಕು ಶರಣಂಗೆ ಪರಸತಿಯನೊಲೆನೆಂಬ……
ಈ ವಚನಗಳು ತಪ್ಪುಗಾರರ ಎದೆಗೆ ನಟ್ಟರೆ ಆಶ್ಚರ್ಯವಿಲ್ಲ.
ಬೆಳಕಿಗೆ ಮುಖ ಮಾಡಿದ ಕಮಲವು ಅರಳಿರುವಂತೆ ಅವರದು ಜ್ಞಾನಸೂರ್ಯನಿಂದ ಅರಳಿದಂತಹ ಮನಸ್ಸು. ಆ ಕಮಲದಲ್ಲಿರುವದು ಉತ್ತಮ ವಿಚಾರ ಹಾಗೂ ಆಚಾರಗಳ ಜೇನು. ಅವರು ಸಮಾಜಕ್ಕೆ ಕೊಡುವದು ಇಂತಹ ಜೇನನ್ನು. ಈ ಪರಿಶುದ್ಧ ಆಚಾರ-ವಿಚಾರಗಳ ಇಂಪು, ಕಂಪು ಹಾಗೂ ಜೇನು ಬಸವಣ್ಣನವರ ವ್ಯಕ್ತಿತ್ವವನ್ನೆಲ್ಲ ತುಂಬಿ ಹೊರಸೂಸಿದ್ದವು ಎಂದು ಜಂಗಮನು ಹೇಳುತ್ತಿದ್ದಾನೆ.
ಮೂರನೆಯ ನುಡಿಯಲ್ಲಿ, ಬಸವಣ್ಣನವರ ಕೊನೆಯನ್ನು ವರ್ಣಿಸಲಾಗಿದೆ.
ಕಾಲದ್ಹಾಂಗ ಕಪ್ಪಗಿತ್ತ
ಸಾವಿನ್ಹಾಂಗ ತೆಪ್ಪಗಿತ್ತ
ಹದ್ದು ಬಂದು ಹಾವಿನ ಮ್ಯಾಲೆ
ಎರಗಿದಂತಿತ್ತ
ಇರುಳು ಮಬ್ಬಿನ್ಯಾಗ ಹಗಲಿನ ಬೆಳಕು
ಕರಗಿದಂತಿತ್ತ
ಗುಂಗು ಹಿಡಿದು ತಂಗಿದಾಗ
ತುಂಬಿ ನಿಂತಿತ್ತ ಈಗ
ತುಳಿಕಿ ಹೋಗಿತ್ತ
ತಂಗೀ ತುಂಬಿ ಬಂದಿತ್ತು || ತುಮ್ ತುಮ್……
ಬಸವಣ್ಣನವರ ಕೊನೆಯದಿನಗಳು ಸಾಮಾಜಿಕವಾಗಿ ಭಯಂಕರ ದಿನಗಳು.
ಕಾಲ ಅಂದರೆ ಎಲ್ಲವನ್ನೂ ನಾಶಗೊಳಿಸುವ ಕಾಲಪುರುಷ. ಆತನು ಎಲ್ಲ ಬಣ್ಣಗಳನ್ನೂ ನುಂಗಿಹಾಕುವ ಕಪ್ಪು ಬಣ್ಣದವನು. ಜೀವಿಗಳ ಆಪೋಶನವನ್ನು ಸಾವು ಮೌನವಾಗಿ ತೆಗೆದುಕೊಳ್ಳುತ್ತದೆ. ಆದುದರಿಂದ ’ಕಾಲಧಾಂಗ ಕಪ್ಪಗಿತ್ತ, ಸಾವಿನ್ಹಾಂಗ ತೆಪ್ಪಗಿತ್ತ’ ಎಂದು ಜಂಗಮನು ಹೇಳುತ್ತಿದ್ದಾನೆ. ಬಸವಣ್ಣನವರ ಕೊನೆಯ ದಿನಗಳಲ್ಲಿ ನಡೆದ ಸಾಮಾಜಿಕ ವಿಪ್ಲವವು ’ಹದ್ದು ಹಾವಿನ ಮೇಲೆ ಎರಗುವಂತೆ’ ಕ್ರೂರವೂ, ಕ್ಷಿಪ್ರವೂ ಆಗಿತ್ತು!
ಸಮಾಜದ ಮೇಲೆ ಮತ್ತೆ ಕತ್ತಲೆ ಆವರಿಸಿತು. ಸುಧಾರಣೆಯ ಹಗಲಿನ ಬೆಳಕು ವಿಪ್ಲವದ ಇರುಳಿನ ಮಬ್ಬಿನಲ್ಲಿ ಮತ್ತೆ ಕರಗಿತು! (ಇರುಳು ಶಾಶ್ವತವಲ್ಲ ಎನ್ನುವ ತಿಳಿವಳಿಕೆ ಇಲ್ಲಿ ಮನೋಗತವಾಗಿದೆ.)
ಸಾಮಾಜಿಕ ಹಾಗು ಆಧ್ಯಾತ್ಮಿಕ ಸುಧಾರಣೆಯಲ್ಲಿ ಬಸವಣ್ಣನವರು ಒಂದೇ ಮನಸ್ಸಿನಿಂದ ನಿರತರಾಗಿದ್ದರು. ಈ ಕ್ರಿಯೆಯನ್ನು ‘ಗುಂಗು ಹಿಡಿದು ತಂಗಿದಾಗ’ ಎಂದು ಬಣ್ಣಿಸಲಾಗಿದೆ. ಗುಂಗಿ ಹುಳವು ಅಂದರೆ ಭ್ರಮರವು ಒಂದೇ ಧ್ವನಿಯನ್ನು ಹೊರಡಿಸುತ್ತ ಹಾರುತ್ತಿರುತ್ತದೆ. ಬಸವಣ್ಣನವರದೂ ಸಹ ಅದರಂತೇ ಒಂದೇ ಧ್ವನಿ. ಅದು ಶಿವಾಚಾರದ ಧ್ವನಿ. ಶಿವಾಚಾರವನ್ನು ತುಂಬಿಕೊಂಡ ಅವರ ವ್ಯಕ್ತಿತ್ವವು ತುಂಬಿದ ಕೊಡವಾಗಿತ್ತು. ಆ ತುಂಬಿದ ಚೈತನ್ಯಜಲ ವಿಪ್ಲವ ಸಮಯದಲ್ಲಿ ತುಳುಕಿ ಹೋಯಿತು.
ಈ ಮೂರೂ ನುಡಿಗಳಲ್ಲಿ ಕೊನೆಯ ಚರಣವಾಗಿ ‘ತುಂಬಿ ಬಂದಿತ್ತು’ ಎನ್ನುವ ಪಲ್ಲವಿಯನ್ನು ಬಳಸಲಾಗಿದೆ.
ಮೊದಲನೆಯ ನುಡಿಯು ಬಸವಣ್ಣನವರ ವ್ಯಕ್ತಿತ್ವವನ್ನು ವರ್ಣಿಸುವದರಿಂದ, ಅಲ್ಲಿ ‘ತುಂಬಿ ಬಂದಿತ್ತು’ ಎನ್ನುವದು ಅವರ ಪರಿಪೂರ್ಣತೆಯನ್ನು ತೋರಿಸುತ್ತದೆ.
ಎರಡನೆಯ ನುಡಿಯಲ್ಲಿ ಈ ಪರಿಪೂರ್ಣ ವ್ಯಕ್ತಿತ್ವವು ಸಾಮಾಜಿಕ ಕಾರ್ಯದಲ್ಲಿ ತುಂಬಿಕೊಂಡಿರುವದನ್ನು ತೋರಿಸುತ್ತದೆ.
ಮೂರನೆಯ ನುಡಿಯಲ್ಲಿ ತುಂಬಿ ಎನ್ನುವದು ಭ್ರಮರವನ್ನು ಹಾಗೂ ‘ತುಂಬಿ ಬಂದಿತ್ತು’ ಎನ್ನುವದು ‘ಕಾಲವು ತುಂಬಿ ಬಂದಿತ್ತು’ ಎನ್ನುವದನ್ನು ಸೂಚಿಸುತ್ತದೆ.
ಕಾಡಬೆಳದಿಂಗಳಿನ ಗೋದಾವರಿಯವರು ತಮ್ಮ ಪ್ರತಿಕ್ರಿಯೆಯಲ್ಲಿಈ ಕವನದಲ್ಲಿಯ ವಿಶೇಷ ಗೂಢಾರ್ಥವನ್ನು ಈ ರೀತಿ ತಿಳಿಸಿದ್ದಾರೆ:
ಬಸವಣ್ಣನು ವ್ಯಕ್ತಿಯಲ್ಲ, ಒಂದು ಅಭಿವ್ಯಕ್ತಿ ಅಲ್ಲವೇ?
"ಬೆಳಕಿಗಿಂತ ಬೆಳ್ಳಗೆ ಇತ್ತ
ಗಾಳಿಗಿಂತ ತೆಳ್ಳಗೆ ಇತ್ತ" ಎನ್ನುತ್ತಾ ಬಸವಣ್ಣ ಎಂಬ ಶಕ್ತಿ ದೇಶಕಾಲಗಳನ್ನು ಮೀರಿದ ಬಗೆಗೆ (ಬೇಂದ್ರೆಯವರು) ಹೇಳುತ್ತಾರೆ..
ಅಂತೆಯೇ ಕೊನೆಯಲ್ಲಿ
"ಕಾಲದ್ಹಾಂಗ ಕಪ್ಪಗಿತ್ತ
ಸಾವಿನ್ಹಾಂಗ ತೆಪ್ಪಗಿತ್ತ" ಎಂದು ಕಾಲದ ದುರ್ನಿರೀಕ್ಷ್ಯವನ್ನೂ ಹೇಳುತ್ತಾರೆ..
ಆರಂಭ ಬೆಳಕಿನಂತೆ, ಜಟೆಯಿಂದ ಇಳಿವ ಗಂಗೆಯಂತೆ ಚುರುಕು.. ಆದರೆ ಅಂತ್ಯದಲ್ಲಿ ಬೆಳಕು ಕರಗಿದಂತೆ ಈ ಚಟುವಟಿಕೆಗಳೆಲ್ಲ ಕಳೆದು ತೆಪ್ಪಗಾಗಿ ಹೋಗುತ್ತದೆ!!!
.................................................
ಬೇಂದ್ರೆಯವರ ಕವನಗಳು ತಮ್ಮ ಗುಟ್ಟುಗಳನ್ನು ಅಷ್ಟು ಸುಲಭವಾಗಿ ಬಿಟ್ಟುಕೊಡುವದಿಲ್ಲ, ಅಲ್ಲವೆ? ಗೋದಾವರಿಯವರಿಗೆ ಧನ್ಯವಾದಗಳು.
ಈ ಹಾಡನ್ನು ಸ್ವತಃ ಬೇಂದ್ರೆಯವರೇ ಏಕತಾರಿಯ ಹಿನ್ನೆಲೆಯಲ್ಲಿ ೧೯೪೭ರಲ್ಲಿ ಹಾಡಿದ್ದರು. ಅದು HMV ಕಂಪನಿಯಿಂದ ಮುದ್ರಿತವಾಯಿತು.
ಅನೇಕ ವರ್ಷಗಳ ನಂತರ, ಗಿರೀಶ ಕಾರ್ನಾಡರು ಬಸವಣ್ಣನ ಬಗೆಗೆ ತಾವೂ ಒಂದು ನಾಟಕ ರಚಿಸಿದರು ಹಾಗೂ ಬೇಂದ್ರೆಯವರ ಅನುಮತಿಯನ್ನು ಪಡೆದುಕೊಂಡು ತಮ್ಮ ನಾಟಕಕ್ಕೆ ‘ತಲೆದಂಡ’ ಎಂದು ಹೆಸರು ಕೊಟ್ಟರು.
ಕವನದ ಪೂರ್ತಿಪಾಠ ಹಿಗಿದೆ:
……………………………………………………………..
ತುಮ್ ತುಮ್ ತುಮ್ ತುಮ್ ತುಮ್ ತುಮ್ ತುಮ್ ತುಮ್
ತುಂಬಿ ಬಂದಿತ್ತ ತಂಗೀ
ತುಂಬಿ ಬಂದಿತ್ತು ||ಪಲ್ಲವಿ||
೧
ಬೆಳಕಿಗಿಂತ ಬೆಳ್ಳಗೆ ಇತ್ತ
ಗಾಳಿಗಿಂತ ತೆಳ್ಳಗೆ ಇತ್ತ
ಜಡಿಯಿಂದಿಳಿದ ಗಂಗಿ ಹಾಂಗ
ಚಂಗನೆ ನೆಗೆದಿತ್ತ
ಮೈಯೊಳಗಿರುವ ಮೂಲಿಮೂಲಿಗೂ
ಮೂಡಿ ಬಂದಿತ್ತ
ಅಡಿಮುಡಿಗೂಡಿ ನಡುವಂತೆಲ್ಲಾ
ಮುಳುಗಿಸಿ ಬಿಟ್ಟಿತ್ತ ತಂಗೀ
ತುಂಬಿ ಬಂದಿತ್ತು || ತುಮ್ ತುಮ್……
೨
ಹೂವಿಗಿರುವ ಕಂಪು ಇತ್ತ
ಹಾಡಿಗಿರುವ ಇಂಪು ಇತ್ತ
ಜೀವದ ಮಾತು ಕಟ್ಟಿಧಾಂಗ
ಎದ್ಯಾಗ ನಟ್ಟಿತ್ತ
ವರ್ಮದ ಮಾತು ಆಡಿಧಾಂಗ
ಮರ್ಮಕ ಮುಟ್ಟಿತ್ತ
ಬೆಳಕಿಗೆ ಮರಳಿ ಕಮಲವರಳಿ
ಜೇನ ಬಿಟ್ಟಿತ್ತ ತಂಗೀ
ತುಂಬಿ ಬಂದಿತ್ತು || ತುಮ್ ತುಮ್……
೩
ಕಾಲದ್ಹಾಂಗ ಕಪ್ಪಗಿತ್ತ
ಸಾವಿನ್ಹಾಂಗ ತೆಪ್ಪಗಿತ್ತ
ಹದ್ದು ಬಂದು ಹಾವಿನ ಮ್ಯಾಲೆ
ಎರಗಿದಂತಿತ್ತ
ಇರುಳ ಮಬ್ಬಿನ್ಯಾಗ ಹಗಲಿನ ಬೆಳಕು
ಕರಗಿದಂತಿತ್ತ
ಗುಂಗು ಹಿಡಿದು ತಂಗಿದಾಗ
ತುಂಬಿ ನಿಂತಿತ್ತ ಈಗ
ತುಳಿಕಿ ಹೋಗಿತ್ತ
ತಂಗೀ ತುಂಬಿ ಬಂದಿತ್ತು || ತುಮ್ ತುಮ್……
…………………………………………………………………………………….
ಬೇಂದ್ರೆಯವರು ರಚಿಸಿದ ಈ ಕವನಕ್ಕೆ ಬಸವಣ್ಣನಿಂದ ಹಾಗೂ ಅಲ್ಲಮಪ್ರಭುವಿನಿಂದ ಪ್ರೇರಣೆ ದೊರೆತಿರಬಹುದು.
ಬಸವಣ್ಣನವರೇ ರಚಿಸಿದ ವಚನವೊಂದು ಹೀಗಿದೆ:
ವಚನದಲ್ಲಿ ನಾಮಾಮೃತ ತುಂಬಿ
ನಯನದಲ್ಲಿ ನಿಮ್ಮ ಮೂರುತಿ ತುಂಬಿ
ಮನದಲ್ಲಿ ನಿಮ್ಮ ನೆನಹು ತುಂಬಿ
ಕಿವಿಯಲ್ಲಿ ನಿಮ್ಮ ಕೀರುತಿ ತುಂಬಿ
ಕೂಡಲಸಂಗಮದೇವಾ
ನಿಮ್ಮ ಚರಣಕಮಲದೊಳಗಾನು ತುಂಬಿ.
ಅಲ್ಲಮಪ್ರಭುವಿನ ವಚನ ಈ ರೀತಿಯಾಗಿದೆ:
ಗಿಡದ ಮೇಲಣ ತುಂಬಿ ಕೂಡೆ ವಿಕಸಿತವಾಯಿತ್ತು, ತುಂಬಿ ನೋಡಾ!
ಆತುಮ ತುಂಬಿ ತುಂಬಿ ನೋಡಾ!
ಪರಮಾತುಮ ತುಂಬಿ ತುಂಬಿ ನೋಡಾ!
ಗುಹೇಶ್ವರ ಲಿಂಗಕ್ಕೆರಗಿ ನಿಬ್ಬೆರಗಾಯಿತ್ತು ತುಂಬಿ ನೋಡಾ!!
ಅಲ್ಲಮಪ್ರಭು, ಅಕ್ಕಮಹಾದೇವಿ ಹಾಗೂ ನವೋದಯ ಕಾಲದ ಸಾಹಿತಿಯಾದ ಮಧುರಚೆನ್ನರನ್ನು ಕನ್ನಡದಲ್ಲಿ ಶ್ರೇಷ್ಠ ಅನುಭಾವಸಾಹಿತ್ಯವನ್ನು ನೀಡಿದವರೆಂದು ಗುರುತಿಸಬಹುದು.
ಅಲ್ಲಮಪ್ರಭುವಿನ ವಚನವು ಗಿಡವನ್ನು ಪ್ರಪಂಚಕ್ಕೆ ಹಾಗೂ ಗಿಡದ ಮೇಲಿರುವ ತುಂಬಿಯನ್ನು ಆತ್ಮಕ್ಕೆ ಹೋಲಿಸುತ್ತದೆ. ಆತ್ಮದ ವಿಕಸನ ಹಾಗೂ ಪರಮಾತ್ಮದ ಆನಂದವನ್ನು ಅಲ್ಲಮಪ್ರಭುಗಳು ಈ ವಚನದಲ್ಲಿ ಬಣ್ಣಿಸಿದ್ದಾರೆ.
ಬೇಂದ್ರೆಯವರು ತಮ್ಮ ಕವನದಲ್ಲಿ ಬಸವಣ್ಣ ಹಾಗೂ ಅಲ್ಲಮಪ್ರಭುವಿನ ವಚನಗಳಲ್ಲಿಯ ತುಂಬಿಯ ಹೋಲಿಕೆಯನ್ನು ಅನುಕರಿಸಿಲ್ಲ. ಆದರೆ ಆ ಪದವನ್ನು ಬಳಸುವದಕ್ಕೆ ಈ ವಚನಗಳಿಂದ ಪ್ರೇರಣೆಯನ್ನು ಪಡೆದಿರಬಹುದು.
ವೀರಶೈವ ಆಂದೋಲನ ಜಗತ್ತಿನ ಅತ್ಯಂತ ಮಹತ್ವದ ಆಂದೋಲನಗಳಲ್ಲಿ ಒಂದು. ಇದರ ಕಾರ್ಯಕ್ಷೇತ್ರ ಕನ್ನಡ ನಾಡಾಗಿತ್ತಷ್ಟೆ. ಈ ಆಂದೋಲನದ ಕೇಂದ್ರವ್ಯಕ್ತಿಯಾದ ಬಸವೇಶ್ವರರ ಬಗೆಗೆ ಶರಣರಿಗೆ ಇದ್ದಂತಹ ಭಾವನೆಗಳನ್ನು ಈ ಹಾಡಿನಲ್ಲಿ ವಿವರಿಸಲಾಗಿದೆ.
ಆಧುನಿಕ ಕಾಲದಲ್ಲಿ ಮಹಾತ್ಮಾ ಗಾಂಧಿಯವರು ‘ಅಹಿಂಸಾಮೂರ್ತಿ’ ಎಂದು ಗುರುತಿಸಲ್ಪಟ್ಟಿದ್ದರು. ಅದರಂತೆ ವೀರಶೈವ ಆಂದೋಲನದ ಕಾಲದಲ್ಲಿ ಬಸವಣ್ಣನವರು ಯಾವ ರೀತಿಯಲ್ಲಿ ಗುರುತಿಸಲ್ಪಟ್ಟಿದ್ದರು? ಬೇಂದ್ರೆಯವರು ಜಂಗಮನೋರ್ವನ ಹಾಡಿನ ಮೂಲಕ ಕಲ್ಯಾಣದ ಜನರ ಮನೋಭಾವಗಳನ್ನು ತೋರಿಸಿದ್ದಾರೆ. ಈ ಹಾಡಿನ ಮೂರು ನುಡಿಗಳಲ್ಲಿ ಆ ಜಂಗಮನು ಬಸವಣ್ಣನವರ ವ್ಯಕ್ತಿತ್ವವನ್ನು, ಸಾಧನೆಯನ್ನು ಹಾಗೂ ಅವರ ಕೊನೆಯನ್ನು ವರ್ಣಿಸುತ್ತಾನೆ.
ಮೊದಲನೆಯ ನುಡಿಯನ್ನು ನೋಡಿರಿ:
ಬೆಳಕಿಗಿಂತ ಬೆಳ್ಳಗೆ ಇತ್ತ
ಗಾಳಿಗಿಂತ ತೆಳ್ಳಗೆ ಇತ್ತ
ಜಡಿಯಿಂದಿಳಿದ ಗಂಗಿ ಹಾಂಗ
ಚಂಗನೆ ನೆಗೆದಿತ್ತ
ಮೈಯೊಳಗಿರುವ ಮೂಲಿಮೂಲಿಗೂ
ಮೂಡಿ ಬಂದಿತ್ತ
ಅಡಿಮುಡಿಗೂಡಿ ನಡುವಂತೆಲ್ಲಾ
ಮುಳುಗಿಸಿ ಬಿಟ್ಟಿತ್ತ ತಂಗೀ
ತುಂಬಿ ಬಂದಿತ್ತು || ತುಮ್ ತುಮ್……
ಬಸವಣ್ಣನವರು ಕನ್ನಡನಾಡು ಕಂಡ ಮಹಾಪುರುಷರು. ಅಧ್ಯಾತ್ಮಿಕವಾಗಿ ಹಾಗೂ ಸಾಮಾಜಿಕವಾಗಿ ಇವರದು ಮಹತ್ತಮ ವ್ಯಕ್ತಿತ್ವ. ಬಸವಣ್ಣನವರ ಒಳಗೆ ಅರಳಿದ ಸೂಕ್ಷ್ಮ ದೈವೀ ಚೈತನ್ಯವನ್ನು ಬಣ್ಣಿಸಲು ನಿಸರ್ಗದ ಚೈತನ್ಯಗಳಾದ ಬೆಳಕು, ಗಾಳಿ ಹಾಗೂ ಗಂಗೆ ಇವುಗಳನ್ನೇ ಪ್ರತೀಕಗಳಾಗಿ ಬಳಸುವದು ಸಹಜ. ಆದುದರಿಂದಲೇ ಇಲ್ಲಿ ಹಾಡುತ್ತಿರುವ ಜಂಗಮನು ಈ ಸೂಕ್ಷ್ಮ ಚೈತನ್ಯವು ಬೆಳಕಿಗಿಂತಲೂ ಬೆಳ್ಳಗೆ ಇತ್ತು ಹಾಗೂ ಗಾಳಿಗಿಂತಲೂ ತೆಳ್ಳಗೆ ಇತ್ತು ಎಂದು ಬಣ್ಣಿಸುತ್ತಿದ್ದಾನೆ. ಬೆಳಕು ಜ್ಞಾನವನ್ನು ಕೊಡುತ್ತದೆ, ಗಾಳಿ ನಿಮಗೆ ತಿಳಿಯದಂತೇ ನಿಮ್ಮನ್ನು ಆವರಿಸುತ್ತದೆ ಹಾಗು ನಿಮ್ಮ ಪ್ರಾಣಕ್ಕೆ ಆಧಾರವಾಗಿದೆ. ಗಂಗೆ ಜೀವಿಗಳ ಕೊಳೆಯನ್ನು ತೊಳೆದು ಅವರನ್ನು ಪಾವನಗೊಳಿಸುವಳು. ಬಸವಣ್ಣನವರ ಲೋಕಕಲ್ಯಾಣಕರ ವ್ಯಕ್ತಿತ್ವವು ಬೆಳಕು, ಗಾಳಿ ಹಾಗೂ ಗಂಗೆಯಂತೆ ಪರಿಶುದ್ಧವಾಗಿದೆ, ಅಲ್ಲದೆ ಸಮಾಜಕ್ಕೆ ಒಳಿತನ್ನು ಮಾಡಿದೆ. ಈ ರೂಪಕವು ಬಸವಣ್ಣನವರ ಆಧ್ಯಾತ್ಮಿಕ ವ್ಯಕ್ತಿತ್ವವನ್ನು ವರ್ಣಿಸುವಂತೆ, ಅವರ ಸಾಮಾಜಿಕ ವ್ಯಕ್ತಿತ್ವವನ್ನೂ ಸಹ ವರ್ಣಿಸುತ್ತದೆ.
ಬಸವಣ್ಣನವರ ಒಳಗಿದ್ದ ದೈವೀ ಚೈತನ್ಯವು ಶಿವನ ಜಡೆಯಲ್ಲಿದ್ದ ಗಂಗೆ ಧುಮ್ಮಿಕ್ಕುವಂತೆ ಬಸವಣ್ಣನವರ ಸೂಕ್ಷ್ಮ ನಾಡಿಗಳಲ್ಲೆಲ್ಲ ಧುಮುಕಿ, ಅವರನ್ನು ಅಡಿಯಿಂದ ಮುಡಿಯವರೆಗೆ ಶಿವಮಯವನ್ನಾಗಿಸಿತು. ಅವರ ವ್ಯಕ್ತಿತ್ವವು ಈ ದೈವೀ ಚೈತನ್ಯದಿಂದ ತುಂಬಿಕೊಂಡಿತು.
ಎರಡನೆಯ ನುಡಿಯಲ್ಲಿ ಬಸವಣ್ಣನವರ ಈ ಮಹಾಚೈತನ್ಯವು ಯಾವ ರೀತಿಯಲ್ಲಿ ಜನರನ್ನು, ಶರಣರನ್ನು ಪ್ರಭಾವಿಸುತ್ತಿತ್ತು ಎನ್ನುವದನ್ನು ಹೇಳಲಾಗಿದೆ:
ಹೂವಿಗಿರುವ ಕಂಪು ಇತ್ತ
ಹಾಡಿಗಿರುವ ಇಂಪು ಇತ್ತ
ಜೀವದ ಮಾತು ಕಟ್ಟಿಧಾಂಗ
ಎದ್ಯಾಗ ನಟ್ಟಿತ್ತ
ವರ್ಮದ ಮಾತು ಆಡಿಧಾಂಗ
ಮರ್ಮಕ ಮುಟ್ಟಿತ್ತ
ಬೆಳಕಿಗೆ ಮರಳಿ ಕಮಲವರಳಿ
ಜೇನ ಬಿಟ್ಟಿತ್ತ ತಂಗೀ
ತುಂಬಿ ಬಂದಿತ್ತು || ತುಮ್ ತುಮ್……
ಬೆಳಕು, ಗಾಳಿ ಹಾಗೂ ಗಂಗೆ ಇವು ನಕಾರಾತ್ಮಕ ಗುಣಗಳನ್ನು ನಿವಾರಿಸುತ್ತವೆ. ಅಷ್ಟಾದರೆ ಸಾಕೆ? ಸಕಾರಾತ್ಮಕ ಗುಣಗಳೂ ಸಹ ಬೇಕಲ್ಲವೆ? ಎರಡನೆಯ ನುಡಿಯಲ್ಲಿ ಬಸವಣ್ಣನವರ ಆಚಾರ-ವಿಚಾರಗಳು ಜನರನ್ನು ಸಕಾರಾತ್ಮಕವಾಗಿ ಪ್ರಭಾವಿಸುವ ರೀತಿಯನ್ನು ಹೇಳಲಾಗಿದೆ. ಹೂವಿನ ಕಂಪಿನಂತೆ, ಹಾಡಿನ ಇಂಪಿನಂತೆ ಅವರ ಆಚಾರ-ವಿಚಾರಗಳು ಜನರನ್ನು ಪ್ರಭಾವಿಸುತ್ತಿದ್ದವು.
ಅವರ ಮಾತುಗಳು ಕಾಲಹರಣದ ಮಾತುಗಳಾಗಲೀ, ಮನೋರಂಜನೆಯ ಮಾತುಗಳಾಗಲೀ ಆಗಿರಲಿಲ್ಲ. (‘ನುಡಿದರೆ ಮುತ್ತಿನ ಹಾರದಂತಿರಬೇಕು’ ಎನ್ನುವ ವಚನವನ್ನು ನೆನಪಿಸಿಕೊಳ್ಳಿರಿ.) ಹೃದಯದ ಒಳಗಿಂದ ಹೊರಬರುವ ನೈಜವಾದ ಮಾತುಗಳು ಅವು. ಹೀಗಾಗಿ ಅವು ಕೇಳುಗರ ಮನಕ್ಕೆ ತಟ್ಟುತ್ತಿದ್ದವು. ಹೂವಿನ ಕಂಪಿನಂತೆ ಹಾಗೂ ಹಾಡಿನ ಇಂಪಿನಂತೆ ಅವರ ಮಾತುಗಳು ಮನಸ್ಸನ್ನು ಉಲ್ಲಾಸಗೊಳಿಸುತ್ತಿದ್ದವು, ಅರಳಿಸುತ್ತಿದ್ದವು. ಬಸವಣ್ಣನವರೇ ಹೇಳಿದಂತೆ, ಅವರ ವಚನಗಳಲ್ಲಿ ನಾಮಾಮೃತ ತುಂಬಿದೆ, ಈ ಅಮೃತಪಾನ ಮಾಡುವ ತುಂಬಿ ಅವರು. ಈ ವಚನಗಳ ಕಂಪು ಹಾಗೂ ಇಂಪು ಎಲ್ಲೆಡೆ ಹರಡಿವೆ, ತುಂಬಿಕೊಂಡಿವೆ.
ಈ ನುಡಿಯಲ್ಲಿಯ ಒಂದು ಸಾಲು, “ವರ್ಮದ ಮಾತು ಆಡಿಧಾಂಗ ಮರ್ಮಕ ಮುಟ್ಟಿತ್ತ” ಎನ್ನುವದು ವಿಚಿತ್ರವಾಗಿ ತೋರಬಹುದು. ವರ್ಮ ಎಂದರೆ ವಿರೋಧ ಹಾಗೂ ದ್ವೇಷ. ಬಸವಣ್ಣನವರು ಇಂತಹ ಮಾತುಗಳನ್ನು ಆಡಬಹುದೆ ಎನ್ನುವ ಸಂಶಯ ಬರಬಹುದು. ಆದರೆ ಇಂತಹ ಮಾತುಗಳು ತಪ್ಪು ನಡತೆಯವರಿಗಾಗಿ ಇರುತ್ತಿದ್ದವು.
ಉದಾಹರಣೆಗಾಗಿ:
(೧) ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ,
ಅನ್ಯರಿಗೆ ಅಸಹ್ಯಪಡಬೇಡ………………………
(೨) ಛಲ ಬೇಕು ಶರಣಂಗೆ ಪರಧನವನೊಲೆನೆಂಬ,
ಛಲ ಬೇಕು ಶರಣಂಗೆ ಪರಸತಿಯನೊಲೆನೆಂಬ……
ಈ ವಚನಗಳು ತಪ್ಪುಗಾರರ ಎದೆಗೆ ನಟ್ಟರೆ ಆಶ್ಚರ್ಯವಿಲ್ಲ.
ಬೆಳಕಿಗೆ ಮುಖ ಮಾಡಿದ ಕಮಲವು ಅರಳಿರುವಂತೆ ಅವರದು ಜ್ಞಾನಸೂರ್ಯನಿಂದ ಅರಳಿದಂತಹ ಮನಸ್ಸು. ಆ ಕಮಲದಲ್ಲಿರುವದು ಉತ್ತಮ ವಿಚಾರ ಹಾಗೂ ಆಚಾರಗಳ ಜೇನು. ಅವರು ಸಮಾಜಕ್ಕೆ ಕೊಡುವದು ಇಂತಹ ಜೇನನ್ನು. ಈ ಪರಿಶುದ್ಧ ಆಚಾರ-ವಿಚಾರಗಳ ಇಂಪು, ಕಂಪು ಹಾಗೂ ಜೇನು ಬಸವಣ್ಣನವರ ವ್ಯಕ್ತಿತ್ವವನ್ನೆಲ್ಲ ತುಂಬಿ ಹೊರಸೂಸಿದ್ದವು ಎಂದು ಜಂಗಮನು ಹೇಳುತ್ತಿದ್ದಾನೆ.
ಮೂರನೆಯ ನುಡಿಯಲ್ಲಿ, ಬಸವಣ್ಣನವರ ಕೊನೆಯನ್ನು ವರ್ಣಿಸಲಾಗಿದೆ.
ಕಾಲದ್ಹಾಂಗ ಕಪ್ಪಗಿತ್ತ
ಸಾವಿನ್ಹಾಂಗ ತೆಪ್ಪಗಿತ್ತ
ಹದ್ದು ಬಂದು ಹಾವಿನ ಮ್ಯಾಲೆ
ಎರಗಿದಂತಿತ್ತ
ಇರುಳು ಮಬ್ಬಿನ್ಯಾಗ ಹಗಲಿನ ಬೆಳಕು
ಕರಗಿದಂತಿತ್ತ
ಗುಂಗು ಹಿಡಿದು ತಂಗಿದಾಗ
ತುಂಬಿ ನಿಂತಿತ್ತ ಈಗ
ತುಳಿಕಿ ಹೋಗಿತ್ತ
ತಂಗೀ ತುಂಬಿ ಬಂದಿತ್ತು || ತುಮ್ ತುಮ್……
ಬಸವಣ್ಣನವರ ಕೊನೆಯದಿನಗಳು ಸಾಮಾಜಿಕವಾಗಿ ಭಯಂಕರ ದಿನಗಳು.
ಕಾಲ ಅಂದರೆ ಎಲ್ಲವನ್ನೂ ನಾಶಗೊಳಿಸುವ ಕಾಲಪುರುಷ. ಆತನು ಎಲ್ಲ ಬಣ್ಣಗಳನ್ನೂ ನುಂಗಿಹಾಕುವ ಕಪ್ಪು ಬಣ್ಣದವನು. ಜೀವಿಗಳ ಆಪೋಶನವನ್ನು ಸಾವು ಮೌನವಾಗಿ ತೆಗೆದುಕೊಳ್ಳುತ್ತದೆ. ಆದುದರಿಂದ ’ಕಾಲಧಾಂಗ ಕಪ್ಪಗಿತ್ತ, ಸಾವಿನ್ಹಾಂಗ ತೆಪ್ಪಗಿತ್ತ’ ಎಂದು ಜಂಗಮನು ಹೇಳುತ್ತಿದ್ದಾನೆ. ಬಸವಣ್ಣನವರ ಕೊನೆಯ ದಿನಗಳಲ್ಲಿ ನಡೆದ ಸಾಮಾಜಿಕ ವಿಪ್ಲವವು ’ಹದ್ದು ಹಾವಿನ ಮೇಲೆ ಎರಗುವಂತೆ’ ಕ್ರೂರವೂ, ಕ್ಷಿಪ್ರವೂ ಆಗಿತ್ತು!
ಸಮಾಜದ ಮೇಲೆ ಮತ್ತೆ ಕತ್ತಲೆ ಆವರಿಸಿತು. ಸುಧಾರಣೆಯ ಹಗಲಿನ ಬೆಳಕು ವಿಪ್ಲವದ ಇರುಳಿನ ಮಬ್ಬಿನಲ್ಲಿ ಮತ್ತೆ ಕರಗಿತು! (ಇರುಳು ಶಾಶ್ವತವಲ್ಲ ಎನ್ನುವ ತಿಳಿವಳಿಕೆ ಇಲ್ಲಿ ಮನೋಗತವಾಗಿದೆ.)
ಸಾಮಾಜಿಕ ಹಾಗು ಆಧ್ಯಾತ್ಮಿಕ ಸುಧಾರಣೆಯಲ್ಲಿ ಬಸವಣ್ಣನವರು ಒಂದೇ ಮನಸ್ಸಿನಿಂದ ನಿರತರಾಗಿದ್ದರು. ಈ ಕ್ರಿಯೆಯನ್ನು ‘ಗುಂಗು ಹಿಡಿದು ತಂಗಿದಾಗ’ ಎಂದು ಬಣ್ಣಿಸಲಾಗಿದೆ. ಗುಂಗಿ ಹುಳವು ಅಂದರೆ ಭ್ರಮರವು ಒಂದೇ ಧ್ವನಿಯನ್ನು ಹೊರಡಿಸುತ್ತ ಹಾರುತ್ತಿರುತ್ತದೆ. ಬಸವಣ್ಣನವರದೂ ಸಹ ಅದರಂತೇ ಒಂದೇ ಧ್ವನಿ. ಅದು ಶಿವಾಚಾರದ ಧ್ವನಿ. ಶಿವಾಚಾರವನ್ನು ತುಂಬಿಕೊಂಡ ಅವರ ವ್ಯಕ್ತಿತ್ವವು ತುಂಬಿದ ಕೊಡವಾಗಿತ್ತು. ಆ ತುಂಬಿದ ಚೈತನ್ಯಜಲ ವಿಪ್ಲವ ಸಮಯದಲ್ಲಿ ತುಳುಕಿ ಹೋಯಿತು.
ಈ ಮೂರೂ ನುಡಿಗಳಲ್ಲಿ ಕೊನೆಯ ಚರಣವಾಗಿ ‘ತುಂಬಿ ಬಂದಿತ್ತು’ ಎನ್ನುವ ಪಲ್ಲವಿಯನ್ನು ಬಳಸಲಾಗಿದೆ.
ಮೊದಲನೆಯ ನುಡಿಯು ಬಸವಣ್ಣನವರ ವ್ಯಕ್ತಿತ್ವವನ್ನು ವರ್ಣಿಸುವದರಿಂದ, ಅಲ್ಲಿ ‘ತುಂಬಿ ಬಂದಿತ್ತು’ ಎನ್ನುವದು ಅವರ ಪರಿಪೂರ್ಣತೆಯನ್ನು ತೋರಿಸುತ್ತದೆ.
ಎರಡನೆಯ ನುಡಿಯಲ್ಲಿ ಈ ಪರಿಪೂರ್ಣ ವ್ಯಕ್ತಿತ್ವವು ಸಾಮಾಜಿಕ ಕಾರ್ಯದಲ್ಲಿ ತುಂಬಿಕೊಂಡಿರುವದನ್ನು ತೋರಿಸುತ್ತದೆ.
ಮೂರನೆಯ ನುಡಿಯಲ್ಲಿ ತುಂಬಿ ಎನ್ನುವದು ಭ್ರಮರವನ್ನು ಹಾಗೂ ‘ತುಂಬಿ ಬಂದಿತ್ತು’ ಎನ್ನುವದು ‘ಕಾಲವು ತುಂಬಿ ಬಂದಿತ್ತು’ ಎನ್ನುವದನ್ನು ಸೂಚಿಸುತ್ತದೆ.
ಕಾಡಬೆಳದಿಂಗಳಿನ ಗೋದಾವರಿಯವರು ತಮ್ಮ ಪ್ರತಿಕ್ರಿಯೆಯಲ್ಲಿಈ ಕವನದಲ್ಲಿಯ ವಿಶೇಷ ಗೂಢಾರ್ಥವನ್ನು ಈ ರೀತಿ ತಿಳಿಸಿದ್ದಾರೆ:
ಬಸವಣ್ಣನು ವ್ಯಕ್ತಿಯಲ್ಲ, ಒಂದು ಅಭಿವ್ಯಕ್ತಿ ಅಲ್ಲವೇ?
"ಬೆಳಕಿಗಿಂತ ಬೆಳ್ಳಗೆ ಇತ್ತ
ಗಾಳಿಗಿಂತ ತೆಳ್ಳಗೆ ಇತ್ತ" ಎನ್ನುತ್ತಾ ಬಸವಣ್ಣ ಎಂಬ ಶಕ್ತಿ ದೇಶಕಾಲಗಳನ್ನು ಮೀರಿದ ಬಗೆಗೆ (ಬೇಂದ್ರೆಯವರು) ಹೇಳುತ್ತಾರೆ..
ಅಂತೆಯೇ ಕೊನೆಯಲ್ಲಿ
"ಕಾಲದ್ಹಾಂಗ ಕಪ್ಪಗಿತ್ತ
ಸಾವಿನ್ಹಾಂಗ ತೆಪ್ಪಗಿತ್ತ" ಎಂದು ಕಾಲದ ದುರ್ನಿರೀಕ್ಷ್ಯವನ್ನೂ ಹೇಳುತ್ತಾರೆ..
ಆರಂಭ ಬೆಳಕಿನಂತೆ, ಜಟೆಯಿಂದ ಇಳಿವ ಗಂಗೆಯಂತೆ ಚುರುಕು.. ಆದರೆ ಅಂತ್ಯದಲ್ಲಿ ಬೆಳಕು ಕರಗಿದಂತೆ ಈ ಚಟುವಟಿಕೆಗಳೆಲ್ಲ ಕಳೆದು ತೆಪ್ಪಗಾಗಿ ಹೋಗುತ್ತದೆ!!!
.................................................
ಬೇಂದ್ರೆಯವರ ಕವನಗಳು ತಮ್ಮ ಗುಟ್ಟುಗಳನ್ನು ಅಷ್ಟು ಸುಲಭವಾಗಿ ಬಿಟ್ಟುಕೊಡುವದಿಲ್ಲ, ಅಲ್ಲವೆ? ಗೋದಾವರಿಯವರಿಗೆ ಧನ್ಯವಾದಗಳು.
Wednesday, May 6, 2009
ಅಷ್ಟು ಪ್ರೀತಿ ಇಷ್ಟು ಪ್ರೀತಿ
‘ಸಖೀಗೀತ’ದಲ್ಲಿ ಬೇಂದ್ರೆಯವರು ತಮ್ಮ ಹೆಂಡತಿಯನ್ನು ‘ವಿಧಿ ತಂದ ವಧು’ ಎಂದು ಬಣ್ಣಿಸಿದ್ದಾರೆ. ಅದೇ ರೀತಿಯಲ್ಲಿ ಅವರ ಹೆಂಡತಿ ಲಕ್ಷ್ಮೀಬಾಯಿಯವರಿಗೆ ಬೇಂದ್ರೆ ‘ವಿಧಿ ತಂದ ವರ’ ಆಗಿರಲಿಕ್ಕೆ ಸಾಕು. ಮದುವೆಯಾದಾಗ ಬೇಂದ್ರೆಯವರಿಗೆ ೨೩ ವರ್ಷ ವಯಸ್ಸು. ಲಕ್ಷ್ಮೀಬಾಯಿ ಕೇವಲ ಹದಿಮೂರು ವರ್ಷದ ಹುಡುಗಿ.ಇತರ ಹುಡುಗಿಯರಿಗೆ ಇರುವಂತೆ ಈ ಹುಡುಗಿಗೂ ತನ್ನ ಸಂಸಾರದ ಬಗೆಗೆ ಬಣ್ಣ ಬಣ್ಣದ ಕನಸುಗಳು ಇದ್ದಿರಬಹುದು.
ಬೇಂದ್ರೆಯವರು ೧೯೨೬ರಲ್ಲಿ ‘ಸ್ವಧರ್ಮ’ ಪತ್ರಿಕೆಯ ಹಾಗೂ ೧೯೨೯ರಲ್ಲಿ ‘ಜಯ ಕರ್ನಾಟಕ’ ಪತ್ರಿಕೆಯ ಸಂಪಾದಕರಾಗಿದ್ದರು. ಇವರು ಬರೆದ ‘ನರಬಲಿ’ ಕವನಕ್ಕಾಗಿ ಬ್ರಿಟಿಶ್ ಸರಕಾರವು ಇವರನ್ನು ೧೯೩೨ರಲ್ಲಿ ಹಿಂಡಲಗಿಯ ಜೇಲಿಗೆ ಕಳುಹಿಸಿತು. ಕೆಲ ಕಾಲ ಮುಗದ ಎನ್ನುವ ಹಳ್ಳಿಯಲ್ಲಿ ದಿಗ್ಬಂಧನದಲ್ಲಿರಿಸಿತು. ಆರು ವರ್ಷಗಳ ವರೆಗೆ ಇವರಿಗೆ ಯಾರೂ ಯಾವುದೇ ನೌಕರಿಯನ್ನು ಕೊಡಕೂಡದೆಂದು ನ್ಯಾಯಾಲಯವು ಆಜ್ಞೆ ಹೊರಡಿಸಿತ್ತು. ಆರು ವರ್ಷಗಳವರೆಗೆ ಬೇಂದ್ರೆಯವರು ನಿರುದ್ಯೋಗಿಯಾಗಿ ಉಳಿಯಬೇಕಾಯಿತು. ಬಳಿಕ ೧೯೩೮ರಲ್ಲಿ ಮಾಸ್ತಿಯವರು ಬೇಂದ್ರೆಯವರನ್ನು ‘ಜೀವನ’ ಪತ್ರಿಕೆಯ ಸಂಪಾದಕರನ್ನಾಗಿ ಮಾಡಿದರು.
ಈ ನಡುವಿನ ಅವಧಿಯಲ್ಲಿ ಬೇಂದ್ರೆಯವರು ಪುಣೆಯಲ್ಲಿ ಎಮ್. ಏ. ಪದವಿಯನ್ನು ಪಡೆದರು. ‘ಗರಿ’ ,‘ಮೂರ್ತಿ’, ’ಕಾಮಕಸ್ತೂರಿ’, ‘ಸಖೀಗೀತ’, ‘ನಾದಲೀಲೆ’ ಹಾಗೂ ‘ಉಯ್ಯಾಲೆ’ ಕವನಸಂಕಲನಗಳನ್ನು ಪ್ರಕಟಿಸಿದರು. ಸಾಹಿತ್ಯಸಮ್ಮೇಳನಗಳಲ್ಲಿ ಭಾಗವಹಿಸಿದರು. ಅವರ ಕೀರ್ತಿಸೂರ್ಯನು ನಡುನೆತ್ತಿಗೇರಿದನು. ಆದರೆ ಸಂಸಾರತಾಪದಲ್ಲಿ ಬೆಂದವರು ಇವರ ಧರ್ಮಪತ್ನಿ.
ಇಂತಹ ಸಹನಾಲಕ್ಷ್ಮಿಯ ಬಗೆಗೂ ಬೇಂದ್ರೆಯವರಿಗೆ ಸಹನೆ ಇರಲಿಲ್ಲ.
ಎಲ್ಲ ಹೆಂಡತಿಯರು ಅಪೇಕ್ಷಿಸುವಂತೆ ಇವಳೂ ಸಹ ಒಡವೆ ಕೊಡಿಸಲು ಬೇಂದ್ರೆಯವರನ್ನು ಯಾವಾಗಲೋ ಕೇಳಿದ್ದಾಳು. ಈ ಕವಿಪುಂಗವರು ಅವಳಿಗೆ ಕೇವಲ ಕವನಗಳ ಒಡವೆಗಳನ್ನಷ್ಟೇ ತೊಡಿಸಿದರು !
“ಆತ ಕೊಟ್ಟ ವಸ್ತು, ಒಡವೆ
ನನಗೆ ಅವಗೆ ಗೊತ್ತು
ತೋಳುಗಳಿಗೆ ತೋಳಬಂದಿ
ಕೆನ್ನೆತುಂಬ ಮುತ್ತು.”
ಬೇಂದ್ರೆಯವರಿಗೆ ತನ್ನ ಕಾವ್ಯಾಲಂಕಾರದ ಮಿತಿ ಗೊತ್ತಿರಲಿಲ್ಲ ಎಂದಲ್ಲ.
ಅವರೇ ತಮ್ಮ ಮತ್ತೊಂದು ಕವನದಲ್ಲಿ
“ ನೀನು ಕೊಡುವೆ ನನಗೆ ದವನ
ನಾನು ಕೊಡುವೆ ನಿನಗೆ ಕವನ
……………………..”
ಎಂದೆಲ್ಲ ಹೇಳುತ್ತ ತಮ್ಮ ಕವನಕ್ಕೆ
“ಬರಿಯ ಮಾತಿನ ಪೋಣಿಕೆ” ಎಂದು ಬಣ್ಣಿಸಿದ್ದಾರೆ.
ಬಹುಶ: ‘ಒಂದು ಮುತ್ತಿನ ಸರವನ್ನಾದರೂ ಕೊಡಿಸಿ’ ಎಂದು ಹೆಂಡತಿ ಆಗ್ರಹಪಡಿಸಿದಾಗ, ಈ ಕವಿ ಒಂದು ಉದ್ದವಾದ ಕವನವನ್ನೇ ಹೊಸೆದು ಹೆಂಡತಿಗೆ ಕೊಟ್ಟರು. ಬೇಂದ್ರೆಯವರಿಗೆ ದುಡ್ಡಿನ ಅಭಾವ ಇದ್ದಿರಬಹುದು , ಆದರೆ ಕಲ್ಪನೆಯ ಅಭಾವ ಎಂದೂ ಇರಲಿಲ್ಲ. ಅನಂತ ಕಲ್ಪನಾಸಾಮ್ರಾಜ್ಯದ ಸಾರ್ವಭೌಮರವರು.
‘ಪ್ರೀತಿಯನ್ನು (ಒಡವೆಗಳಿಂದ) ಅಳೆಯಬೇಡ’ ಎಂದು ಹೇಳುವ ಬೇಂದ್ರೆಯವರ ಕವನದ ಪೂರ್ಣಪಾಠ ಹೀಗಿದೆ:
ಅಷ್ಟು ಪ್ರೀತಿ ಇಷ್ಟು ಪ್ರೀತಿ--
ಎಣಿಸಿ ಕಷ್ಟಬಡದಿರು
ಒಲೆದು ಒಲಿಸಿ ಸುಖವಿರು
ಎಷ್ಟೆಯಿರಲಿ ಅಷ್ಟೆ ಮಿಗಿಲು---ತಮ್ಮ ಕಿರಣ ತಮಗೆ ಹಗಲು ;
ಉಳಿದ ಬೆಳಕು ಕತ್ತಲು.
ಬಿಟ್ಟಲ್ಲಿಯೆ ಬೀಡು ಮತ್ತೆ ಆಡಿದಲ್ಲಿ ಅಂಗಳು
ಉಳಿದ ಲೋಕ ಹಿತ್ತಲು.
ಮುತ್ತಿನೆಕ್ಕಸರವನಿಕ್ಕೆ
ಮುದ್ದಿಗೆ ಕಳೆಕಟ್ಟಿತೆ ?
ತೊಯ್ದ ಎವೆಗೆ ಮುದ್ದನಿಡಲು
ಮುದ್ದಿಗೆ ಅದು ತಟ್ಟಿತೆ ?
ಕುದಿದ ಬಂದ ಕಂಬನಿಯಲು
ಕಂಪು ಬರದೆ ಬಿಟ್ಟಿತೆ ?
ಮುತ್ತು ರತುನ ಹೊನ್ನು ಎಲ್ಲ
ಕಲ್ಲು ಮಣ್ಣ ವೈಭವಾ
ಎಲವೊ ಹುಚ್ಚು ಮಾನವಾ
ಒಂದು ಷೋಕು---ಬರಿಯ ಝೋಕು
ಬದುಕಿನೊಂದು ಜಂಬವು
ಒಲವೆ ಮೂಲ ಬಿಂಬವು.
ಸಪ್ತ ನಾಕ ಸಪ್ತ ನರಕ
ಅದರ ಬೆಳಕು ಕತ್ತಲು
ಮನ್ವಂತರ ತನ್ವಂತರ
ಅದರ ಕೋಟೆ ಕೊತ್ತಲು
ಸಿಂಹಾಸನವನೇರಿ ಕುಳಿತೆ ;
ತೊಡೆಗೆ ತೊಡೆಯ ಹಚ್ಚಿದೆ
ಸರಿಯೆ, ಒಲಿದ ತೋಳಿಗಿಂತ
ಅದರೊಳೇನು ಹೆಚ್ಚಿದೆ?
ಎದೆಯ ಕಣ್ಣ ಮುಚ್ಚಿಕೊಂಡು
ಏಕೊ ಏನೊ ಮೆಚ್ಚಿದೆ
ಮರದ ಅಡಿಗೆ ಗುಡಿಸಲಿರಲಿ
ಅಲ್ಲೆ ಒಲವು ಮೆರೆಯದೇ
ನಲಿವು ಮೇರೆವರಿಯದೇ?
................................................
ಬೇಂದ್ರೆಯವರ ಹೆಂಡತಿ ಒಂದು ಲೌಕಿಕ ವಸ್ತುವನ್ನು ಆಸೆಪಟ್ಟು ಕೇಳಿದಾಗ, ಬೇಂದ್ರೆಯವರು ಅದಕ್ಕೊಂದು philosophic ಸಂದೇಶವನ್ನು ನೀಡುತ್ತಿದ್ದಾರೆ. ಮೊದಲನೆಯ ನುಡಿಯನ್ನು ನೋಡಿರಿ :
ಅಷ್ಟು ಪ್ರೀತಿ ಇಷ್ಟು ಪ್ರೀತಿ--
ಎಣಿಸಿ ಕಷ್ಟಬಡದಿರು
ಒಲೆದು ಒಲಿಸಿ ಸುಖವಿರು
ಎಷ್ಟೆಯಿರಲಿ ಅಷ್ಟೆ ಮಿಗಿಲು---ತಮ್ಮ ಕಿರಣ ತಮಗೆ ಹಗಲು ;
ಉಳಿದ ಬೆಳಕು ಕತ್ತಲು.
ಬಿಟ್ಟಲ್ಲಿಯೆ ಬೀಡು ಮತ್ತೆ ಆಡಿದಲ್ಲಿ ಅಂಗಳು
ಉಳಿದ ಲೋಕ ಹಿತ್ತಲು.
ಪ್ರೀತಿಯ ಮಡದಿಯೆ, ನನಗೆ ನಿನ್ನಲ್ಲಿರುವ ಪ್ರೀತಿಯನ್ನು ಇಷ್ಟು , ಇಷ್ಟೇ ಎಂದು ಎಣಿಸಿ ಕಷ್ಟಪಡಬೇಡ. (ಇಲ್ಲಿ ಎಣಿಸು ಎನ್ನುವದಕ್ಕೆ ಎರಡು ಅರ್ಥಗಳಿವೆ. ಎಣಿಸು=counting ಎನ್ನುವದು ಒಂದು ಅರ್ಥವಾದರೆ , ಎಣಿಸು=ಭಾವಿಸುವದು ಎನ್ನುವದು ಎರಡನೆಯ ಅರ್ಥ.)
ನನಗೆ ಒಲೆದು ಎಂದರೆ ನನ್ನಲ್ಲಿ ಅನುರಕ್ತಳಾಗು ; ಒಲಿಸಿ ಎಂದರೆ ನನ್ನನ್ನು ಒಲಿಸಿಕೊಳ್ಳು ಅರ್ಥಾತ್ ನನ್ನ ಒಲವನ್ನು (ಕಷ್ಟಪಟ್ಟು) ಸಂಪಾದಿಸಿಕೊ , ಹಾಗೂ ಸುಖದಿಂದಿರು !
ಕವಿಯು ಪ್ರೀತಿಯ ಈ ವ್ಯಾಪಾರದ ಎಲ್ಲಾ ಭಾರವನ್ನು ಹೆಂಡತಿಯ ಮೇಲೆ ಹಾಕುತ್ತಿದ್ದಾನೆ. ನೀನು ಒಡವೆಯನ್ನು ಕೇಳದೇ ನನ್ನ ಪ್ರೀತಿಯನ್ನು ಪಡೆಯಲು ನೀನೇ ಪ್ರಯತ್ನ ಮಾಡು (!) ಎನ್ನುವದು ಈ ಕವಿಯ ಸಂದೇಶ.
ಇಂತಹ ಸಂದೇಶಕ್ಕೆ ಕವಿ ಕೊಡುವ ತಾತ್ವಿಕ support ಈ ರೀತಿಯಾಗಿದೆ :
“ಎಷ್ಟೆಯಿರಲಿ ಅಷ್ಟೆ ಮಿಗಿಲು ,
ತಮ್ಮ ಕಿರಣ ತಮಗೆ ಹಗಲು ;ಉಳಿದ ಬೆಳಕು ಕತ್ತಲು.”
ಪಾಲಿಗೆ ಬಂದದ್ದು ಪಂಚಾಮೃತ. ನಮ್ಮ ಹಣೆಯಲ್ಲಿ ಎಷ್ಟೇ ಸ್ವಲ್ಪವಿದ್ದರೂ ಅದನ್ನೇ ಬಹಳ ಎಂದು ತಿಳಿಯಬೇಕು. ಯಾಕೆಂದರೆ, “ತಮ್ಮ ಕಿರಣ ತಮಗೆ ಹಗಲು ;ಉಳಿದ ಬೆಳಕು ಕತ್ತಲು.”
ನಮ್ಮ ಮನೆಯ ಕಿಡಕಿಯಿಂದ ಒಳಗೆ ತೂರಿದ ಸೂರ್ಯನ ಒಂದೇ ಕಿರಣವು ನಮ್ಮ ಕತ್ತಲೆ ಕೋಣೆಗೆ ಬೆಳಕು ನೀಡುವದೇ ಹೊರತು, ಇತರ ನಕ್ಷತ್ರಗಳ ಕಿರಣಗಳಿಂದ ನಮ್ಮ ಮನೆಗೆ ಹಗಲು ಸಿಗಲಾರದು. ಆ ಬೆಳಕು ನಮ್ಮ ಮಟ್ಟಿಗೆ ಕತ್ತಲೆಯೇ ಸೈ!
(ನಿನ್ನ ಜೀವನದಲ್ಲಿ ಪ್ರೀತಿಯ ಬೆಳಕನ್ನು ಕಾಣಬೇಕಾಗಿದ್ದರೆ ಹುಚ್ಚು ಹಂಬಲಗಳನ್ನು ಬಿಟ್ಟುಬಿಟ್ಟು, ನಿನ್ನ ಕವೀಶ್ವರ ಪತಿ ಕೊಡುವ ಪ್ರೀತಿಯನ್ನಷ್ಟೇ ನೆಚ್ಚಿಕೊ!)
ವರಕವಿಗಳು ತಮ್ಮ ಕಲ್ಪನಾಶಕ್ತಿಯ ಬಲದಿಂದ ಇನ್ನಿಷ್ಟು ಉದಾಹರಣೆಗಳನ್ನು ಸೃಷ್ಟಿಸುತ್ತಾರೆ:
“ಬಿಟ್ಟಲ್ಲಿಯೆ ಬೀಡು
ಮತ್ತೆ ಆಡಿದಲ್ಲಿ ಅಂಗಳು
ಉಳಿದ ಲೋಕ ಹಿತ್ತಲು.”
ಬೇರೆಯವರ ಅನುಕರಣೆ, ಅನುಸರಣೆ ಬೇಡ ; ನಾವು ಎಲ್ಲಿ ನಿಲ್ಲುತ್ತೇವೆಯೊ ಅದೇ ನಮ್ಮ ಬೀಡು , ಅದೇ ನಮ್ಮ ನೆಲೆ. ನಾವು ಎಲ್ಲಿ ಆಡುತ್ತೇವೊ ಅದೇ ನಮ್ಮ ಮನೆಯ ಅಂಗಳು.
“ ಅಲ್ಲಾ, ಉಳಿದವರು ಎಷ್ಟು ಚೆನ್ನಾಗಿರೊ ಬೀಡಿನಲ್ಲಿ ಇದ್ದಾರಲ್ಲಾ” ಎಂದು ಅವರ ಹೆಂಡತಿ ಏನಾದರೂ ಅನುಮಾನ ವ್ಯಕ್ತ ಪಡಿಸಿದರೆ, ವರಕವಿಗಳ ಉತ್ತರ ಅದಕ್ಕೂ ಸಿದ್ಧವಾಗಿದೆ :
“ಉಳಿದ ಲೋಕ ಹಿತ್ತಲು.”
(=ಅದೆಲ್ಲಾ ನಮ್ಮ ಹಿಂದೆ ಇರೋದು, ನಾವು ಅದನ್ನೆಲ್ಲ ನೋಡೋದು ಬೇಡ !)
ಈ ರೀತಿಯಾಗಿ ಹೆಂಡತಿಗೆ general philosophyಯನ್ನು ಹೇಳಿ ಮುಗಿಸಿದ ಕವಿ, ತನ್ನ ಮಾತುಗಳಿಂದ ತಾನೇ ಕಸಿವಿಸಿಗೊಳ್ಳುತ್ತಾನೆ. ಆತನಿಗೆ ಗೊತ್ತು: ತನ್ನ ಹೆಂಡತಿಯ ಒಂದೇ ಒಂದು ಸಣ್ಣ ಹಂಬಲವನ್ನು ತಾನು ಪೂರೈಸುತ್ತಿಲ್ಲ ಎಂದು. ತನ್ನ ಮೇಲೆ ತನಗೇ ಬರುತ್ತಿರುವ ಕೋಪವನ್ನು ಈಗ ಆತ ಅವಳ ಮೆಲೆ ತಿರುಗಿಸುತ್ತಾನೆ. ಹತಾಶನಾದ ಗಂಡ ಹೆಂಡತಿಯ ಮೇಲೆ ಹರಿಹಾಯುವದು ಒಂದು ಸಾಮಾನ್ಯ ಸಂಗತಿ. ‘ಒಂದು ಮುತ್ತಿನ ಸರವನ್ನು ಪಡೆದು, ನೀನು ಏನು ಮಹಾ ಸಾಧಿಸಿಕೊಂಡಂತಾಯ್ತು’ ಎಂದು ಆತ ಅವಳ ಮೇಲೆ ಹಾರಾಡುತ್ತಾನೆ :
ಮುತ್ತಿನೆಕ್ಕಸರವನಿಕ್ಕೆ
ಮುದ್ದಿಗೆ ಕಳೆಕಟ್ಟಿತೆ ?
ತೊಯ್ದ ಎವೆಗೆ ಮುದ್ದನಿಡಲು
ಮುದ್ದಿಗೆ ಅದು ತಟ್ಟಿತೆ ?
ಕುದಿದ ಬಂದ ಕಂಬನಿಯಲು
ಕಂಪು ಬರದೆ ಬಿಟ್ಟಿತೆ ?
ಮುತ್ತಿನ ಸರ ತೊಡಿಸುವದರಿಂದ ಮಾತ್ರ ಪ್ರೀತಿಗೆ ಕಳೆ ಬರುವದೆ? ನಿನ್ನ ಕಣ್ಣೀರಿನಿಂದ ತೊಯ್ದ ರೆಪ್ಪೆಗಳಿಗೆ ನಾನು ಮುತ್ತು ಕೊಟ್ಟರೆ, ಅದು ನಿನ್ನ ಪ್ರೀತಿಗೆ ತಟ್ಟಲಾರದೆ? ನಿನ್ನ ಕುದಿಯುತ್ತಿರುವ ಮನಸ್ಸು ಹೊರಚೆಲ್ಲಿದ ಕಂಬನಿಗಳಲ್ಲಿ ಸಹ ಒಲವಿನ ಕಂಪು ಇಲ್ಲವೆ? ಗಂಡ ಹೆಂಡಿರಲ್ಲಿ ಪರಸ್ಪರ ಒಲವಿನ ಭಾವನೆಗಳೆ ಮುಖ್ಯವಲ್ಲವೆ?
ಇದು ಕವಿಯು ದಾಂಪತ್ಯದ ನೆಲೆಗಟ್ಟಿನಲ್ಲಿ ಮಾಡುತ್ತಿರುವ argument.
ಆದರೆ ಹೆಂಡತಿ ಮುಖವನ್ನು ಬೇರೆಡೆಗೆ ಹೊರಳಿಸಿ ಬಿಟ್ಟಿದ್ದಾಳೆ. Exasperated ಆದ ಕವಿ ಮಾನವ ಕುಲದ ಮೂರ್ಖತನಕ್ಕೆ ಬೇಸತ್ತು , ವ್ಯಥೆಪಟ್ಟು ಉದ್ಗರಿಸುತ್ತಾನೆ:
ಮುತ್ತು ರತುನ ಹೊನ್ನು ಎಲ್ಲ
ಕಲ್ಲು ಮಣ್ಣ ವೈಭವಾ
ಎಲವೊ ಹುಚ್ಚು ಮಾನವಾ
ಒಂದು ಷೋಕು---ಬರಿಯ ಝೋಕು
ಬದುಕಿನೊಂದು ಜಂಬವು
ಒಲವೆ ಮೂಲ ಬಿಂಬವು.
ಈ precious stonesಗಳೆಲ್ಲ earthly glory ಮಾತ್ರ. ಅವು ಸತ್ಯವಲ್ಲ.
(ಟಿಪ್ಪಣಿ : ರತ್ನಗಳು ಭೂಮಿಯ ಒಳಗಡೆ ಸಿಗುವದರಿಂದ ಅವುಗಳಿಗೆ “ಕಲ್ಲು ಮಣ್ಣ ವೈಭವಾ” ಎಂದು ಕರೆಯುವದು ಒಂದು ವ್ಯಂಗ್ಯೋಕ್ತಿ.)
ಇದೆಲ್ಲ ಬರಿಯ ಶೋಕಿ, ಬರಿಯ ಡೌಲು , vanity of life.
ಪ್ರೀತಿಯೇ ಸತ್ಯ, ಬೇರೆ ಎಲ್ಲ ಮಿಥ್ಯ.
ಕವಿ ಮುಂದುವರಿದು ಸಂಪತ್ತಿನ ಸಂಭ್ರಮವನ್ನಷ್ಟೇ ಅಲ್ಲ, ಅಧಿಕಾರದ ವೈಭವವನ್ನೂ ಸಹ ತುಚ್ಛೀಕರಿಸುತ್ತಾನೆ. ಕೇವಲ ಭೂಮಿಯ ಒಡೆತನವಲ್ಲ, ಸಪ್ತಸ್ವರ್ಗ ಹಾಗೂ ಸಪ್ತನರಕಗಳನ್ನು ಒಳಗೊಂಡ ಇಂದ್ರಾಧಿಕಾರದ ವೈಭೋಗಕ್ಕೂ ಸಹ ಏನು ಬೆಲೆಯಿದೆ?
ಸಪ್ತ ನಾಕ ಸಪ್ತ ನರಕ
ಅದರ ಬೆಳಕು ಕತ್ತಲು
ಮನ್ವಂತರ ತನ್ವಂತರ
ಅದರ ಕೋಟೆ ಕೊತ್ತಲು
ಸಿಂಹಾಸನವನೇರಿ ಕುಳಿತೆ ;
ತೊಡೆಗೆ ತೊಡೆಯ ಹಚ್ಚಿದೆ
ಸರಿಯೆ, ಒಲಿದ ತೋಳಿಗಿಂತ
ಅದರೊಳೇನು ಹೆಚ್ಚಿದೆ?
ಕವಿ ತಮ್ಮ ಹೆಂಡತಿಗೆ ಆಹ್ವಾನ ನೀಡುತ್ತಿದ್ದಾರೆ. ಇಂತಹ ಲೋಕಾಧಿಪತಿಯ ಹೆಂಡತಿಯಾಗಿ ನೀನೂ ಸಹ ಸಿಂಹಾಸನವನ್ನೇರಬಹುದು. ಸಾಮ್ರಾಟನ ತೊಡೆಗೆ ತೊಡೆ ಹಚ್ಚಿ ಕುಳಿತುಕೊಳ್ಳಬಹುದು. ಅವನ pomp and powerದಲ್ಲಿ ನೀನೂ ಭಾಗಿಯಾಗಬಹುದು. ಇದೆಲ್ಲ ಸರಿ, ಒಲಿದ ತೋಳುಗಳ ಅಪ್ಪುಗೆಗಿಂತ ಇದೆಲ್ಲ ಹೆಚ್ಚಿನದೆ?
ಕವಿ ತನ್ನೆಲ್ಲ argumentಗಳನ್ನು ತನ್ನ ಅರ್ಧಾಂಗಿಗೆ ಹೇಳಿದ್ದಾನೆ.
ಮುತ್ತಿನ ಹಾರಕ್ಕಿಂತ ಪತಿಯ ಪ್ರೇಮವೇ ಹೆಚ್ಚಿನದು ಎಂದು ಅವಳಿಗೆ ತಿಳಿಸಿದ್ದಾನೆ.
ತನ್ನ ಹತಾಶೆ, ತನ್ನ ಅಸಹಾಯಕತೆಯನ್ನೆಲ್ಲ ಹೊರಕಕ್ಕಿ, ಆತನೀಗ ನಿರುಮ್ಮಳನಾಗಿದ್ದಾನೆ.
ಇಂತಹ ಸಮಾಧಾನದ ಸ್ಥಿತಿಯಲ್ಲಿ ಆತ ಅಂತರ್ಮುಖಿಯಾಗಿ ಏನನ್ನೊ ಧ್ಯಾನಿಸುತ್ತಾನೆ :
ಎದೆಯ ಕಣ್ಣ ಮುಚ್ಚಿಕೊಂಡು
ಏಕೊ ಏನೊ ಮೆಚ್ಚಿದೆ
ಮರದ ಅಡಿಗೆ ಗುಡಿಸಲಿರಲಿ
ಅಲ್ಲೆ ಒಲವು ಮೆರೆಯದೇ
ನಲಿವು ಮೇರೆವರಿಯದೇ?
ನಿಜ, ಒಲವಿನ ವೈಭವಕ್ಕೆ ಲೌಕಿಕ ಸಂಪತ್ತು ಬೇಕಾಗಿಲ್ಲ. ಪುಟ್ಟ ಗುಡಿಸಲಿನಲ್ಲಿಯೂ ಸಹ ಒಲವು ಹಾಗೂ ನಲಿವು ಮಹಾಪೂರದಂತೆ ಹರಿಯಬಲ್ಲವು !
ಹೆಂಡತಿಯ ಆಸೆಯನ್ನು ಪೂರೈಸಲಾಗದ ಬಡ ಕವಿಯು ಕಂಡ ಸತ್ಯವಿದು !
ತೊದಲು ಮಾತಿನ ಶ್ರೀ ಕೇಶವ ಕುಲಕರ್ಣಿಯವರು ಈ ಕವನದ ಕೆಲವು ವೈಶಿಷ್ಟ್ಯಗಳನ್ನು ವಿವರಿಸಿದ್ದಾರೆ. ಅವು ಇಂತಿವೆ:
೧:
ಕವಿತೆ ಮೊದಲಿನಿಂದ ಕೊನೆಯವರೆಗೆ ನೋಡಲು ಒಂದೇ ತರಹದ ಛಂದಸ್ಸಿನಲ್ಲಿ ಬರೆಯಲ್ಪಟ್ಟಂತೆ ಕಂಡರೂ ನುಡಿಯಿಂದ ನುಡಿಗೆ ಶಬ್ದಗಳ ಬಳಕೆಯಲ್ಲಿ ಅದ್ಭುತ ಬದಲಾವಣೆಯಿದೆ. ಮೊದಲ ನುಡಿಯಲ್ಲಿ
"ತಮ್ಮ ಕಿರಣ ತಮಗೆ ಹಗಲು ;
ಉಳಿದ ಬೆಳಕು ಕತ್ತಲು.
ಬಿಟ್ಟಲ್ಲಿಯೆ ಬೀಡು ಮತ್ತೆ ಆಡಿದಲ್ಲಿ ಅಂಗಳು
ಉಳಿದ ಲೋಕ ಹಿತ್ತಲು."
ಎಂಬ ಹೊಸ ರೂಪಕಗಳನ್ನು ಶಬ್ದಗಾರುಡಿಗ ಆರಾಮವಾಗಿ ತಂದು ನಿಲ್ಲಿಸುತ್ತಾರೆ.
ಮುಂದಿನ ನುಡಿ ಬರೀ ಉತ್ತರಗಳನ್ನೇ ಹೇಳುವ ಪ್ರಶ್ನೆಗಳ ನುಡಿ.
ಮೂರನೇ ನುಡಿಯ ಶಬ್ದ ಮತ್ತು ಭಾವಗಳಲ್ಲಿ ಬರೀ ಲೌಕಿಕತೆಯೇ ಇದೆ. ಶೋಕು, ಝೋಕು ಎಂಬ ಹೊಸಕನ್ನಡ ಪದಗಳು ಬರುತ್ತವೆ.
ನಾಕನೇ ನುಡಿಯಲ್ಲಿ ಇದ್ದಕ್ಕಿದ್ದಂತೆ ಶಬ್ದಗಳೆಲ್ಲ ಪುರಾಣದ್ದಾಗುತ್ತವೆ. ಆದರೆ ತಟ್ಟನೇ "ತೊಡೆಗೆ ತೊಡೆಯ ಹಚ್ಚಿದೆ" ಎಂದು ಶುದ್ಧ ಕನ್ನಡ ಬಂದು ಆ ನುಡಿಯಲ್ಲಿ ಶಾಕ್ ಕೊಡುತ್ತದೆ.
ಐದನೇ ನುಡಿ ಧ್ಯಾನದ ಸ್ಥಿತಿಯನ್ನು ತಲುಪುತ್ತದೆ.
೨. "ತೊಡೆಗೆ ತೊಡೆಯ ಹಚ್ಚಿದೆ, ಸರಿಯೆ," ನನಗೆ ಎರಡು ಅರ್ಥ ಕೊಟ್ಟಿತು. ಒಂದು, ನೀವು ಬರೆದಂತೆ "ಸಾಮ್ರಾಟನ ತೊಡೆಗೆ ತೊಡೆ ಹಚ್ಚಿ ಕುಳಿತುಕೊಳ್ಳಬಹುದು.", ಇನ್ನೊಂದು ನನಗನಿಸಿದ್ದು, "ಕಾಮದ ಮದ (ತೊಡೆಗೆ ತೊಡೆ)ಕ್ಕಿಂತ ಪ್ರೀತಿ (ಒಲಿದ ತೋಳು) ಕವಿಗೆ ಮುಖ್ಯವಾಗುತ್ತದೆ.
ಬೇಂದ್ರೆಯವರ ಕವನಗಳು ತಿಳಿದುಕೊಂಡಷ್ಟೂ ಹಿಗ್ಗುತ್ತಲೇ ಹೋಗುತ್ತವೆ! ಜೊತೆಗೆ ನಮ್ಮ ಹಿಗ್ಗೂ ಹೆಚ್ಚುತ್ತಲೇ ಹೋಗುತ್ತದೆ!
*****************************************************
[ ಟಿಪ್ಪಣಿ:
ಕವಿಯ ಲಂಬಿತ ಉದಾಸ ಭಾವಕ್ಕೆ ತಕ್ಕಂತೆ ಹಾಗೂ ಅವನ ಲಂಬಿತ argumentಗಳಿಗೆ ಹೊಂದುವಂತೆ, ಕವನವು ಲಂಬಿತ ಛಂದಸ್ಸಿನಲ್ಲಿ ಇರುವದನ್ನು ಗಮನಿಸಬಹುದು.
ಬೇಂದ್ರೆಯವರು ೧೯೪೩ರಲ್ಲಿ ಕಾಳಿದಾಸನ ‘ಮೇಘದೂತ ’ವನ್ನು ಕನ್ನಡಕ್ಕೆ ಅನುವಾದಿಸಿದರು. ಆ ಅನುವಾದದ ರಾಜಧನದಿಂದ ತಮ್ಮ ಹೆಂಡತಿಗೆ ಮುತ್ತಿನ ಏಕಾಕ್ಷಿ ಸರವನ್ನು ಕೊಡಿಸಿ ಅವಳ ಹಂಬಲವನ್ನು ಪೂರೈಸಿದರು.]
ಬೇಂದ್ರೆಯವರು ೧೯೨೬ರಲ್ಲಿ ‘ಸ್ವಧರ್ಮ’ ಪತ್ರಿಕೆಯ ಹಾಗೂ ೧೯೨೯ರಲ್ಲಿ ‘ಜಯ ಕರ್ನಾಟಕ’ ಪತ್ರಿಕೆಯ ಸಂಪಾದಕರಾಗಿದ್ದರು. ಇವರು ಬರೆದ ‘ನರಬಲಿ’ ಕವನಕ್ಕಾಗಿ ಬ್ರಿಟಿಶ್ ಸರಕಾರವು ಇವರನ್ನು ೧೯೩೨ರಲ್ಲಿ ಹಿಂಡಲಗಿಯ ಜೇಲಿಗೆ ಕಳುಹಿಸಿತು. ಕೆಲ ಕಾಲ ಮುಗದ ಎನ್ನುವ ಹಳ್ಳಿಯಲ್ಲಿ ದಿಗ್ಬಂಧನದಲ್ಲಿರಿಸಿತು. ಆರು ವರ್ಷಗಳ ವರೆಗೆ ಇವರಿಗೆ ಯಾರೂ ಯಾವುದೇ ನೌಕರಿಯನ್ನು ಕೊಡಕೂಡದೆಂದು ನ್ಯಾಯಾಲಯವು ಆಜ್ಞೆ ಹೊರಡಿಸಿತ್ತು. ಆರು ವರ್ಷಗಳವರೆಗೆ ಬೇಂದ್ರೆಯವರು ನಿರುದ್ಯೋಗಿಯಾಗಿ ಉಳಿಯಬೇಕಾಯಿತು. ಬಳಿಕ ೧೯೩೮ರಲ್ಲಿ ಮಾಸ್ತಿಯವರು ಬೇಂದ್ರೆಯವರನ್ನು ‘ಜೀವನ’ ಪತ್ರಿಕೆಯ ಸಂಪಾದಕರನ್ನಾಗಿ ಮಾಡಿದರು.
ಈ ನಡುವಿನ ಅವಧಿಯಲ್ಲಿ ಬೇಂದ್ರೆಯವರು ಪುಣೆಯಲ್ಲಿ ಎಮ್. ಏ. ಪದವಿಯನ್ನು ಪಡೆದರು. ‘ಗರಿ’ ,‘ಮೂರ್ತಿ’, ’ಕಾಮಕಸ್ತೂರಿ’, ‘ಸಖೀಗೀತ’, ‘ನಾದಲೀಲೆ’ ಹಾಗೂ ‘ಉಯ್ಯಾಲೆ’ ಕವನಸಂಕಲನಗಳನ್ನು ಪ್ರಕಟಿಸಿದರು. ಸಾಹಿತ್ಯಸಮ್ಮೇಳನಗಳಲ್ಲಿ ಭಾಗವಹಿಸಿದರು. ಅವರ ಕೀರ್ತಿಸೂರ್ಯನು ನಡುನೆತ್ತಿಗೇರಿದನು. ಆದರೆ ಸಂಸಾರತಾಪದಲ್ಲಿ ಬೆಂದವರು ಇವರ ಧರ್ಮಪತ್ನಿ.
ಇಂತಹ ಸಹನಾಲಕ್ಷ್ಮಿಯ ಬಗೆಗೂ ಬೇಂದ್ರೆಯವರಿಗೆ ಸಹನೆ ಇರಲಿಲ್ಲ.
ಎಲ್ಲ ಹೆಂಡತಿಯರು ಅಪೇಕ್ಷಿಸುವಂತೆ ಇವಳೂ ಸಹ ಒಡವೆ ಕೊಡಿಸಲು ಬೇಂದ್ರೆಯವರನ್ನು ಯಾವಾಗಲೋ ಕೇಳಿದ್ದಾಳು. ಈ ಕವಿಪುಂಗವರು ಅವಳಿಗೆ ಕೇವಲ ಕವನಗಳ ಒಡವೆಗಳನ್ನಷ್ಟೇ ತೊಡಿಸಿದರು !
“ಆತ ಕೊಟ್ಟ ವಸ್ತು, ಒಡವೆ
ನನಗೆ ಅವಗೆ ಗೊತ್ತು
ತೋಳುಗಳಿಗೆ ತೋಳಬಂದಿ
ಕೆನ್ನೆತುಂಬ ಮುತ್ತು.”
ಬೇಂದ್ರೆಯವರಿಗೆ ತನ್ನ ಕಾವ್ಯಾಲಂಕಾರದ ಮಿತಿ ಗೊತ್ತಿರಲಿಲ್ಲ ಎಂದಲ್ಲ.
ಅವರೇ ತಮ್ಮ ಮತ್ತೊಂದು ಕವನದಲ್ಲಿ
“ ನೀನು ಕೊಡುವೆ ನನಗೆ ದವನ
ನಾನು ಕೊಡುವೆ ನಿನಗೆ ಕವನ
……………………..”
ಎಂದೆಲ್ಲ ಹೇಳುತ್ತ ತಮ್ಮ ಕವನಕ್ಕೆ
“ಬರಿಯ ಮಾತಿನ ಪೋಣಿಕೆ” ಎಂದು ಬಣ್ಣಿಸಿದ್ದಾರೆ.
ಬಹುಶ: ‘ಒಂದು ಮುತ್ತಿನ ಸರವನ್ನಾದರೂ ಕೊಡಿಸಿ’ ಎಂದು ಹೆಂಡತಿ ಆಗ್ರಹಪಡಿಸಿದಾಗ, ಈ ಕವಿ ಒಂದು ಉದ್ದವಾದ ಕವನವನ್ನೇ ಹೊಸೆದು ಹೆಂಡತಿಗೆ ಕೊಟ್ಟರು. ಬೇಂದ್ರೆಯವರಿಗೆ ದುಡ್ಡಿನ ಅಭಾವ ಇದ್ದಿರಬಹುದು , ಆದರೆ ಕಲ್ಪನೆಯ ಅಭಾವ ಎಂದೂ ಇರಲಿಲ್ಲ. ಅನಂತ ಕಲ್ಪನಾಸಾಮ್ರಾಜ್ಯದ ಸಾರ್ವಭೌಮರವರು.
‘ಪ್ರೀತಿಯನ್ನು (ಒಡವೆಗಳಿಂದ) ಅಳೆಯಬೇಡ’ ಎಂದು ಹೇಳುವ ಬೇಂದ್ರೆಯವರ ಕವನದ ಪೂರ್ಣಪಾಠ ಹೀಗಿದೆ:
ಅಷ್ಟು ಪ್ರೀತಿ ಇಷ್ಟು ಪ್ರೀತಿ--
ಎಣಿಸಿ ಕಷ್ಟಬಡದಿರು
ಒಲೆದು ಒಲಿಸಿ ಸುಖವಿರು
ಎಷ್ಟೆಯಿರಲಿ ಅಷ್ಟೆ ಮಿಗಿಲು---ತಮ್ಮ ಕಿರಣ ತಮಗೆ ಹಗಲು ;
ಉಳಿದ ಬೆಳಕು ಕತ್ತಲು.
ಬಿಟ್ಟಲ್ಲಿಯೆ ಬೀಡು ಮತ್ತೆ ಆಡಿದಲ್ಲಿ ಅಂಗಳು
ಉಳಿದ ಲೋಕ ಹಿತ್ತಲು.
ಮುತ್ತಿನೆಕ್ಕಸರವನಿಕ್ಕೆ
ಮುದ್ದಿಗೆ ಕಳೆಕಟ್ಟಿತೆ ?
ತೊಯ್ದ ಎವೆಗೆ ಮುದ್ದನಿಡಲು
ಮುದ್ದಿಗೆ ಅದು ತಟ್ಟಿತೆ ?
ಕುದಿದ ಬಂದ ಕಂಬನಿಯಲು
ಕಂಪು ಬರದೆ ಬಿಟ್ಟಿತೆ ?
ಮುತ್ತು ರತುನ ಹೊನ್ನು ಎಲ್ಲ
ಕಲ್ಲು ಮಣ್ಣ ವೈಭವಾ
ಎಲವೊ ಹುಚ್ಚು ಮಾನವಾ
ಒಂದು ಷೋಕು---ಬರಿಯ ಝೋಕು
ಬದುಕಿನೊಂದು ಜಂಬವು
ಒಲವೆ ಮೂಲ ಬಿಂಬವು.
ಸಪ್ತ ನಾಕ ಸಪ್ತ ನರಕ
ಅದರ ಬೆಳಕು ಕತ್ತಲು
ಮನ್ವಂತರ ತನ್ವಂತರ
ಅದರ ಕೋಟೆ ಕೊತ್ತಲು
ಸಿಂಹಾಸನವನೇರಿ ಕುಳಿತೆ ;
ತೊಡೆಗೆ ತೊಡೆಯ ಹಚ್ಚಿದೆ
ಸರಿಯೆ, ಒಲಿದ ತೋಳಿಗಿಂತ
ಅದರೊಳೇನು ಹೆಚ್ಚಿದೆ?
ಎದೆಯ ಕಣ್ಣ ಮುಚ್ಚಿಕೊಂಡು
ಏಕೊ ಏನೊ ಮೆಚ್ಚಿದೆ
ಮರದ ಅಡಿಗೆ ಗುಡಿಸಲಿರಲಿ
ಅಲ್ಲೆ ಒಲವು ಮೆರೆಯದೇ
ನಲಿವು ಮೇರೆವರಿಯದೇ?
................................................
ಬೇಂದ್ರೆಯವರ ಹೆಂಡತಿ ಒಂದು ಲೌಕಿಕ ವಸ್ತುವನ್ನು ಆಸೆಪಟ್ಟು ಕೇಳಿದಾಗ, ಬೇಂದ್ರೆಯವರು ಅದಕ್ಕೊಂದು philosophic ಸಂದೇಶವನ್ನು ನೀಡುತ್ತಿದ್ದಾರೆ. ಮೊದಲನೆಯ ನುಡಿಯನ್ನು ನೋಡಿರಿ :
ಅಷ್ಟು ಪ್ರೀತಿ ಇಷ್ಟು ಪ್ರೀತಿ--
ಎಣಿಸಿ ಕಷ್ಟಬಡದಿರು
ಒಲೆದು ಒಲಿಸಿ ಸುಖವಿರು
ಎಷ್ಟೆಯಿರಲಿ ಅಷ್ಟೆ ಮಿಗಿಲು---ತಮ್ಮ ಕಿರಣ ತಮಗೆ ಹಗಲು ;
ಉಳಿದ ಬೆಳಕು ಕತ್ತಲು.
ಬಿಟ್ಟಲ್ಲಿಯೆ ಬೀಡು ಮತ್ತೆ ಆಡಿದಲ್ಲಿ ಅಂಗಳು
ಉಳಿದ ಲೋಕ ಹಿತ್ತಲು.
ಪ್ರೀತಿಯ ಮಡದಿಯೆ, ನನಗೆ ನಿನ್ನಲ್ಲಿರುವ ಪ್ರೀತಿಯನ್ನು ಇಷ್ಟು , ಇಷ್ಟೇ ಎಂದು ಎಣಿಸಿ ಕಷ್ಟಪಡಬೇಡ. (ಇಲ್ಲಿ ಎಣಿಸು ಎನ್ನುವದಕ್ಕೆ ಎರಡು ಅರ್ಥಗಳಿವೆ. ಎಣಿಸು=counting ಎನ್ನುವದು ಒಂದು ಅರ್ಥವಾದರೆ , ಎಣಿಸು=ಭಾವಿಸುವದು ಎನ್ನುವದು ಎರಡನೆಯ ಅರ್ಥ.)
ನನಗೆ ಒಲೆದು ಎಂದರೆ ನನ್ನಲ್ಲಿ ಅನುರಕ್ತಳಾಗು ; ಒಲಿಸಿ ಎಂದರೆ ನನ್ನನ್ನು ಒಲಿಸಿಕೊಳ್ಳು ಅರ್ಥಾತ್ ನನ್ನ ಒಲವನ್ನು (ಕಷ್ಟಪಟ್ಟು) ಸಂಪಾದಿಸಿಕೊ , ಹಾಗೂ ಸುಖದಿಂದಿರು !
ಕವಿಯು ಪ್ರೀತಿಯ ಈ ವ್ಯಾಪಾರದ ಎಲ್ಲಾ ಭಾರವನ್ನು ಹೆಂಡತಿಯ ಮೇಲೆ ಹಾಕುತ್ತಿದ್ದಾನೆ. ನೀನು ಒಡವೆಯನ್ನು ಕೇಳದೇ ನನ್ನ ಪ್ರೀತಿಯನ್ನು ಪಡೆಯಲು ನೀನೇ ಪ್ರಯತ್ನ ಮಾಡು (!) ಎನ್ನುವದು ಈ ಕವಿಯ ಸಂದೇಶ.
ಇಂತಹ ಸಂದೇಶಕ್ಕೆ ಕವಿ ಕೊಡುವ ತಾತ್ವಿಕ support ಈ ರೀತಿಯಾಗಿದೆ :
“ಎಷ್ಟೆಯಿರಲಿ ಅಷ್ಟೆ ಮಿಗಿಲು ,
ತಮ್ಮ ಕಿರಣ ತಮಗೆ ಹಗಲು ;ಉಳಿದ ಬೆಳಕು ಕತ್ತಲು.”
ಪಾಲಿಗೆ ಬಂದದ್ದು ಪಂಚಾಮೃತ. ನಮ್ಮ ಹಣೆಯಲ್ಲಿ ಎಷ್ಟೇ ಸ್ವಲ್ಪವಿದ್ದರೂ ಅದನ್ನೇ ಬಹಳ ಎಂದು ತಿಳಿಯಬೇಕು. ಯಾಕೆಂದರೆ, “ತಮ್ಮ ಕಿರಣ ತಮಗೆ ಹಗಲು ;ಉಳಿದ ಬೆಳಕು ಕತ್ತಲು.”
ನಮ್ಮ ಮನೆಯ ಕಿಡಕಿಯಿಂದ ಒಳಗೆ ತೂರಿದ ಸೂರ್ಯನ ಒಂದೇ ಕಿರಣವು ನಮ್ಮ ಕತ್ತಲೆ ಕೋಣೆಗೆ ಬೆಳಕು ನೀಡುವದೇ ಹೊರತು, ಇತರ ನಕ್ಷತ್ರಗಳ ಕಿರಣಗಳಿಂದ ನಮ್ಮ ಮನೆಗೆ ಹಗಲು ಸಿಗಲಾರದು. ಆ ಬೆಳಕು ನಮ್ಮ ಮಟ್ಟಿಗೆ ಕತ್ತಲೆಯೇ ಸೈ!
(ನಿನ್ನ ಜೀವನದಲ್ಲಿ ಪ್ರೀತಿಯ ಬೆಳಕನ್ನು ಕಾಣಬೇಕಾಗಿದ್ದರೆ ಹುಚ್ಚು ಹಂಬಲಗಳನ್ನು ಬಿಟ್ಟುಬಿಟ್ಟು, ನಿನ್ನ ಕವೀಶ್ವರ ಪತಿ ಕೊಡುವ ಪ್ರೀತಿಯನ್ನಷ್ಟೇ ನೆಚ್ಚಿಕೊ!)
ವರಕವಿಗಳು ತಮ್ಮ ಕಲ್ಪನಾಶಕ್ತಿಯ ಬಲದಿಂದ ಇನ್ನಿಷ್ಟು ಉದಾಹರಣೆಗಳನ್ನು ಸೃಷ್ಟಿಸುತ್ತಾರೆ:
“ಬಿಟ್ಟಲ್ಲಿಯೆ ಬೀಡು
ಮತ್ತೆ ಆಡಿದಲ್ಲಿ ಅಂಗಳು
ಉಳಿದ ಲೋಕ ಹಿತ್ತಲು.”
ಬೇರೆಯವರ ಅನುಕರಣೆ, ಅನುಸರಣೆ ಬೇಡ ; ನಾವು ಎಲ್ಲಿ ನಿಲ್ಲುತ್ತೇವೆಯೊ ಅದೇ ನಮ್ಮ ಬೀಡು , ಅದೇ ನಮ್ಮ ನೆಲೆ. ನಾವು ಎಲ್ಲಿ ಆಡುತ್ತೇವೊ ಅದೇ ನಮ್ಮ ಮನೆಯ ಅಂಗಳು.
“ ಅಲ್ಲಾ, ಉಳಿದವರು ಎಷ್ಟು ಚೆನ್ನಾಗಿರೊ ಬೀಡಿನಲ್ಲಿ ಇದ್ದಾರಲ್ಲಾ” ಎಂದು ಅವರ ಹೆಂಡತಿ ಏನಾದರೂ ಅನುಮಾನ ವ್ಯಕ್ತ ಪಡಿಸಿದರೆ, ವರಕವಿಗಳ ಉತ್ತರ ಅದಕ್ಕೂ ಸಿದ್ಧವಾಗಿದೆ :
“ಉಳಿದ ಲೋಕ ಹಿತ್ತಲು.”
(=ಅದೆಲ್ಲಾ ನಮ್ಮ ಹಿಂದೆ ಇರೋದು, ನಾವು ಅದನ್ನೆಲ್ಲ ನೋಡೋದು ಬೇಡ !)
ಈ ರೀತಿಯಾಗಿ ಹೆಂಡತಿಗೆ general philosophyಯನ್ನು ಹೇಳಿ ಮುಗಿಸಿದ ಕವಿ, ತನ್ನ ಮಾತುಗಳಿಂದ ತಾನೇ ಕಸಿವಿಸಿಗೊಳ್ಳುತ್ತಾನೆ. ಆತನಿಗೆ ಗೊತ್ತು: ತನ್ನ ಹೆಂಡತಿಯ ಒಂದೇ ಒಂದು ಸಣ್ಣ ಹಂಬಲವನ್ನು ತಾನು ಪೂರೈಸುತ್ತಿಲ್ಲ ಎಂದು. ತನ್ನ ಮೇಲೆ ತನಗೇ ಬರುತ್ತಿರುವ ಕೋಪವನ್ನು ಈಗ ಆತ ಅವಳ ಮೆಲೆ ತಿರುಗಿಸುತ್ತಾನೆ. ಹತಾಶನಾದ ಗಂಡ ಹೆಂಡತಿಯ ಮೇಲೆ ಹರಿಹಾಯುವದು ಒಂದು ಸಾಮಾನ್ಯ ಸಂಗತಿ. ‘ಒಂದು ಮುತ್ತಿನ ಸರವನ್ನು ಪಡೆದು, ನೀನು ಏನು ಮಹಾ ಸಾಧಿಸಿಕೊಂಡಂತಾಯ್ತು’ ಎಂದು ಆತ ಅವಳ ಮೇಲೆ ಹಾರಾಡುತ್ತಾನೆ :
ಮುತ್ತಿನೆಕ್ಕಸರವನಿಕ್ಕೆ
ಮುದ್ದಿಗೆ ಕಳೆಕಟ್ಟಿತೆ ?
ತೊಯ್ದ ಎವೆಗೆ ಮುದ್ದನಿಡಲು
ಮುದ್ದಿಗೆ ಅದು ತಟ್ಟಿತೆ ?
ಕುದಿದ ಬಂದ ಕಂಬನಿಯಲು
ಕಂಪು ಬರದೆ ಬಿಟ್ಟಿತೆ ?
ಮುತ್ತಿನ ಸರ ತೊಡಿಸುವದರಿಂದ ಮಾತ್ರ ಪ್ರೀತಿಗೆ ಕಳೆ ಬರುವದೆ? ನಿನ್ನ ಕಣ್ಣೀರಿನಿಂದ ತೊಯ್ದ ರೆಪ್ಪೆಗಳಿಗೆ ನಾನು ಮುತ್ತು ಕೊಟ್ಟರೆ, ಅದು ನಿನ್ನ ಪ್ರೀತಿಗೆ ತಟ್ಟಲಾರದೆ? ನಿನ್ನ ಕುದಿಯುತ್ತಿರುವ ಮನಸ್ಸು ಹೊರಚೆಲ್ಲಿದ ಕಂಬನಿಗಳಲ್ಲಿ ಸಹ ಒಲವಿನ ಕಂಪು ಇಲ್ಲವೆ? ಗಂಡ ಹೆಂಡಿರಲ್ಲಿ ಪರಸ್ಪರ ಒಲವಿನ ಭಾವನೆಗಳೆ ಮುಖ್ಯವಲ್ಲವೆ?
ಇದು ಕವಿಯು ದಾಂಪತ್ಯದ ನೆಲೆಗಟ್ಟಿನಲ್ಲಿ ಮಾಡುತ್ತಿರುವ argument.
ಆದರೆ ಹೆಂಡತಿ ಮುಖವನ್ನು ಬೇರೆಡೆಗೆ ಹೊರಳಿಸಿ ಬಿಟ್ಟಿದ್ದಾಳೆ. Exasperated ಆದ ಕವಿ ಮಾನವ ಕುಲದ ಮೂರ್ಖತನಕ್ಕೆ ಬೇಸತ್ತು , ವ್ಯಥೆಪಟ್ಟು ಉದ್ಗರಿಸುತ್ತಾನೆ:
ಮುತ್ತು ರತುನ ಹೊನ್ನು ಎಲ್ಲ
ಕಲ್ಲು ಮಣ್ಣ ವೈಭವಾ
ಎಲವೊ ಹುಚ್ಚು ಮಾನವಾ
ಒಂದು ಷೋಕು---ಬರಿಯ ಝೋಕು
ಬದುಕಿನೊಂದು ಜಂಬವು
ಒಲವೆ ಮೂಲ ಬಿಂಬವು.
ಈ precious stonesಗಳೆಲ್ಲ earthly glory ಮಾತ್ರ. ಅವು ಸತ್ಯವಲ್ಲ.
(ಟಿಪ್ಪಣಿ : ರತ್ನಗಳು ಭೂಮಿಯ ಒಳಗಡೆ ಸಿಗುವದರಿಂದ ಅವುಗಳಿಗೆ “ಕಲ್ಲು ಮಣ್ಣ ವೈಭವಾ” ಎಂದು ಕರೆಯುವದು ಒಂದು ವ್ಯಂಗ್ಯೋಕ್ತಿ.)
ಇದೆಲ್ಲ ಬರಿಯ ಶೋಕಿ, ಬರಿಯ ಡೌಲು , vanity of life.
ಪ್ರೀತಿಯೇ ಸತ್ಯ, ಬೇರೆ ಎಲ್ಲ ಮಿಥ್ಯ.
ಕವಿ ಮುಂದುವರಿದು ಸಂಪತ್ತಿನ ಸಂಭ್ರಮವನ್ನಷ್ಟೇ ಅಲ್ಲ, ಅಧಿಕಾರದ ವೈಭವವನ್ನೂ ಸಹ ತುಚ್ಛೀಕರಿಸುತ್ತಾನೆ. ಕೇವಲ ಭೂಮಿಯ ಒಡೆತನವಲ್ಲ, ಸಪ್ತಸ್ವರ್ಗ ಹಾಗೂ ಸಪ್ತನರಕಗಳನ್ನು ಒಳಗೊಂಡ ಇಂದ್ರಾಧಿಕಾರದ ವೈಭೋಗಕ್ಕೂ ಸಹ ಏನು ಬೆಲೆಯಿದೆ?
ಸಪ್ತ ನಾಕ ಸಪ್ತ ನರಕ
ಅದರ ಬೆಳಕು ಕತ್ತಲು
ಮನ್ವಂತರ ತನ್ವಂತರ
ಅದರ ಕೋಟೆ ಕೊತ್ತಲು
ಸಿಂಹಾಸನವನೇರಿ ಕುಳಿತೆ ;
ತೊಡೆಗೆ ತೊಡೆಯ ಹಚ್ಚಿದೆ
ಸರಿಯೆ, ಒಲಿದ ತೋಳಿಗಿಂತ
ಅದರೊಳೇನು ಹೆಚ್ಚಿದೆ?
ಕವಿ ತಮ್ಮ ಹೆಂಡತಿಗೆ ಆಹ್ವಾನ ನೀಡುತ್ತಿದ್ದಾರೆ. ಇಂತಹ ಲೋಕಾಧಿಪತಿಯ ಹೆಂಡತಿಯಾಗಿ ನೀನೂ ಸಹ ಸಿಂಹಾಸನವನ್ನೇರಬಹುದು. ಸಾಮ್ರಾಟನ ತೊಡೆಗೆ ತೊಡೆ ಹಚ್ಚಿ ಕುಳಿತುಕೊಳ್ಳಬಹುದು. ಅವನ pomp and powerದಲ್ಲಿ ನೀನೂ ಭಾಗಿಯಾಗಬಹುದು. ಇದೆಲ್ಲ ಸರಿ, ಒಲಿದ ತೋಳುಗಳ ಅಪ್ಪುಗೆಗಿಂತ ಇದೆಲ್ಲ ಹೆಚ್ಚಿನದೆ?
ಕವಿ ತನ್ನೆಲ್ಲ argumentಗಳನ್ನು ತನ್ನ ಅರ್ಧಾಂಗಿಗೆ ಹೇಳಿದ್ದಾನೆ.
ಮುತ್ತಿನ ಹಾರಕ್ಕಿಂತ ಪತಿಯ ಪ್ರೇಮವೇ ಹೆಚ್ಚಿನದು ಎಂದು ಅವಳಿಗೆ ತಿಳಿಸಿದ್ದಾನೆ.
ತನ್ನ ಹತಾಶೆ, ತನ್ನ ಅಸಹಾಯಕತೆಯನ್ನೆಲ್ಲ ಹೊರಕಕ್ಕಿ, ಆತನೀಗ ನಿರುಮ್ಮಳನಾಗಿದ್ದಾನೆ.
ಇಂತಹ ಸಮಾಧಾನದ ಸ್ಥಿತಿಯಲ್ಲಿ ಆತ ಅಂತರ್ಮುಖಿಯಾಗಿ ಏನನ್ನೊ ಧ್ಯಾನಿಸುತ್ತಾನೆ :
ಎದೆಯ ಕಣ್ಣ ಮುಚ್ಚಿಕೊಂಡು
ಏಕೊ ಏನೊ ಮೆಚ್ಚಿದೆ
ಮರದ ಅಡಿಗೆ ಗುಡಿಸಲಿರಲಿ
ಅಲ್ಲೆ ಒಲವು ಮೆರೆಯದೇ
ನಲಿವು ಮೇರೆವರಿಯದೇ?
ನಿಜ, ಒಲವಿನ ವೈಭವಕ್ಕೆ ಲೌಕಿಕ ಸಂಪತ್ತು ಬೇಕಾಗಿಲ್ಲ. ಪುಟ್ಟ ಗುಡಿಸಲಿನಲ್ಲಿಯೂ ಸಹ ಒಲವು ಹಾಗೂ ನಲಿವು ಮಹಾಪೂರದಂತೆ ಹರಿಯಬಲ್ಲವು !
ಹೆಂಡತಿಯ ಆಸೆಯನ್ನು ಪೂರೈಸಲಾಗದ ಬಡ ಕವಿಯು ಕಂಡ ಸತ್ಯವಿದು !
ತೊದಲು ಮಾತಿನ ಶ್ರೀ ಕೇಶವ ಕುಲಕರ್ಣಿಯವರು ಈ ಕವನದ ಕೆಲವು ವೈಶಿಷ್ಟ್ಯಗಳನ್ನು ವಿವರಿಸಿದ್ದಾರೆ. ಅವು ಇಂತಿವೆ:
೧:
ಕವಿತೆ ಮೊದಲಿನಿಂದ ಕೊನೆಯವರೆಗೆ ನೋಡಲು ಒಂದೇ ತರಹದ ಛಂದಸ್ಸಿನಲ್ಲಿ ಬರೆಯಲ್ಪಟ್ಟಂತೆ ಕಂಡರೂ ನುಡಿಯಿಂದ ನುಡಿಗೆ ಶಬ್ದಗಳ ಬಳಕೆಯಲ್ಲಿ ಅದ್ಭುತ ಬದಲಾವಣೆಯಿದೆ. ಮೊದಲ ನುಡಿಯಲ್ಲಿ
"ತಮ್ಮ ಕಿರಣ ತಮಗೆ ಹಗಲು ;
ಉಳಿದ ಬೆಳಕು ಕತ್ತಲು.
ಬಿಟ್ಟಲ್ಲಿಯೆ ಬೀಡು ಮತ್ತೆ ಆಡಿದಲ್ಲಿ ಅಂಗಳು
ಉಳಿದ ಲೋಕ ಹಿತ್ತಲು."
ಎಂಬ ಹೊಸ ರೂಪಕಗಳನ್ನು ಶಬ್ದಗಾರುಡಿಗ ಆರಾಮವಾಗಿ ತಂದು ನಿಲ್ಲಿಸುತ್ತಾರೆ.
ಮುಂದಿನ ನುಡಿ ಬರೀ ಉತ್ತರಗಳನ್ನೇ ಹೇಳುವ ಪ್ರಶ್ನೆಗಳ ನುಡಿ.
ಮೂರನೇ ನುಡಿಯ ಶಬ್ದ ಮತ್ತು ಭಾವಗಳಲ್ಲಿ ಬರೀ ಲೌಕಿಕತೆಯೇ ಇದೆ. ಶೋಕು, ಝೋಕು ಎಂಬ ಹೊಸಕನ್ನಡ ಪದಗಳು ಬರುತ್ತವೆ.
ನಾಕನೇ ನುಡಿಯಲ್ಲಿ ಇದ್ದಕ್ಕಿದ್ದಂತೆ ಶಬ್ದಗಳೆಲ್ಲ ಪುರಾಣದ್ದಾಗುತ್ತವೆ. ಆದರೆ ತಟ್ಟನೇ "ತೊಡೆಗೆ ತೊಡೆಯ ಹಚ್ಚಿದೆ" ಎಂದು ಶುದ್ಧ ಕನ್ನಡ ಬಂದು ಆ ನುಡಿಯಲ್ಲಿ ಶಾಕ್ ಕೊಡುತ್ತದೆ.
ಐದನೇ ನುಡಿ ಧ್ಯಾನದ ಸ್ಥಿತಿಯನ್ನು ತಲುಪುತ್ತದೆ.
೨. "ತೊಡೆಗೆ ತೊಡೆಯ ಹಚ್ಚಿದೆ, ಸರಿಯೆ," ನನಗೆ ಎರಡು ಅರ್ಥ ಕೊಟ್ಟಿತು. ಒಂದು, ನೀವು ಬರೆದಂತೆ "ಸಾಮ್ರಾಟನ ತೊಡೆಗೆ ತೊಡೆ ಹಚ್ಚಿ ಕುಳಿತುಕೊಳ್ಳಬಹುದು.", ಇನ್ನೊಂದು ನನಗನಿಸಿದ್ದು, "ಕಾಮದ ಮದ (ತೊಡೆಗೆ ತೊಡೆ)ಕ್ಕಿಂತ ಪ್ರೀತಿ (ಒಲಿದ ತೋಳು) ಕವಿಗೆ ಮುಖ್ಯವಾಗುತ್ತದೆ.
ಬೇಂದ್ರೆಯವರ ಕವನಗಳು ತಿಳಿದುಕೊಂಡಷ್ಟೂ ಹಿಗ್ಗುತ್ತಲೇ ಹೋಗುತ್ತವೆ! ಜೊತೆಗೆ ನಮ್ಮ ಹಿಗ್ಗೂ ಹೆಚ್ಚುತ್ತಲೇ ಹೋಗುತ್ತದೆ!
*****************************************************
[ ಟಿಪ್ಪಣಿ:
ಕವಿಯ ಲಂಬಿತ ಉದಾಸ ಭಾವಕ್ಕೆ ತಕ್ಕಂತೆ ಹಾಗೂ ಅವನ ಲಂಬಿತ argumentಗಳಿಗೆ ಹೊಂದುವಂತೆ, ಕವನವು ಲಂಬಿತ ಛಂದಸ್ಸಿನಲ್ಲಿ ಇರುವದನ್ನು ಗಮನಿಸಬಹುದು.
ಬೇಂದ್ರೆಯವರು ೧೯೪೩ರಲ್ಲಿ ಕಾಳಿದಾಸನ ‘ಮೇಘದೂತ ’ವನ್ನು ಕನ್ನಡಕ್ಕೆ ಅನುವಾದಿಸಿದರು. ಆ ಅನುವಾದದ ರಾಜಧನದಿಂದ ತಮ್ಮ ಹೆಂಡತಿಗೆ ಮುತ್ತಿನ ಏಕಾಕ್ಷಿ ಸರವನ್ನು ಕೊಡಿಸಿ ಅವಳ ಹಂಬಲವನ್ನು ಪೂರೈಸಿದರು.]
Sunday, April 26, 2009
ಸಂಜೀಯ ಜಾವಿಗೆ
ಛಂದಸ್ಸು ಬೇಂದ್ರೆಯವರ ಕಾವ್ಯದ ಸಹಜವಾದ ಸಿದ್ಧಿಗಳಲ್ಲಿ ಒಂದು. ಬೇಂದ್ರೆಯವರು ಕವನವನ್ನು ಬರೆಯುತ್ತಿದ್ದಿಲ್ಲ ; ಕವನವು ಅವರ ಮನದಲ್ಲಿ ಮೂಡುತ್ತಿತ್ತು. ಒಂದು ಘಟನೆಯು ಅವರ ಮನದಲ್ಲಿ ಒಂದು ಭಾವವನ್ನು ಉದ್ದೀಪಿಸಿದ ಬಳಿಕ, ಆ ಭಾವಕ್ಕೆ ತಕ್ಕದಾದ ನಾದ ಹಾಗೂ ಛಂದಗಳೊಂದಿಗೆ ಪ್ರಾಸಬದ್ಧ ಪದಗಳು ಅವರ ಮನದಿಂದ ಕವನರೂಪದಲ್ಲಿ ಹೊರಹೊಮ್ಮುತ್ತಿದ್ದವು.
ಇದರ ಒಂದು ಶ್ರೇಷ್ಠ ಉದಾಹರಣೆ ಎಂದರೆ ‘ಪಾತರಗಿತ್ತಿ ಪಕ್ಕ’ ಎನ್ನುವ ಕವನ.
ಪಾತರಗಿತ್ತಿಯು ಎಷ್ಟು ಕ್ಷಿಪ್ರವಾಗಿ ರೆಕ್ಕೆಗಳನ್ನು ಬಡೆಯುವದೊ, ಅಷ್ಟೇ ಕ್ಷಿಪ್ರವಾದ metre ಈ ಕವನಕ್ಕಿದೆ. ಪಾತರಗಿತ್ತಿಯು ಕ್ಷಣಾರ್ಧದಲ್ಲಿ ಎಲ್ಲೆಲ್ಲಿ ಸುತ್ತಾಡುವದೊ, ಈ ಕವನ ಸಹ ಅದೇ ವೇಗದಲ್ಲಿ ಎಲ್ಲೆಲ್ಲೊ ಸುತ್ತಾಡುತ್ತದೆ. (ಕಲ್ಪನೆಯ ರೆಕ್ಕೆಗಳ ಮೂಲಕ ಹಾರಾಡಿದರೂ ಸಹ ಬೇಂದ್ರೆಯವರ ಕವನ ವಾಸ್ತವದ ನೆಲೆಗಳನ್ನು ಬಿಡುವದಿಲ್ಲ.)
ಇಂತಹದೇ ಸಹಜ ಛಂದಸ್ಸಿನ ಮತ್ತೊಂದು ಕವನ : “ಸಂಜೀಯ ಜಾವಿಗೆ ”.
ಮೂರೂಸಂಜೆಯ ಹೊತ್ತಿನಲ್ಲಿ ಬೇಂದ್ರೆಯವರು ತಮ್ಮ ಮನೆಯ ಮುಂಭಾಗದಲ್ಲಿ ಕುಳಿತುಕೊಂಡಿದ್ದಾರೆ. ಅವರ ಪುಟ್ಟ ಮಗಳು ಮಂಗಲಾ ನೀರು ತರುವವರ ಜೊತೆಗೆ ತಾನೂ ಸಹ ಬಾವಿಗೆ ಹೊರಟಿದ್ದಾಳೆ. ಆ ಕಾಲದಲ್ಲಿ ನೀರನ್ನು ಕೆರೆ ಅಥವಾ ಬಾವಿಯಿಂದಲೇ ತರಬೇಕಾಗಿತ್ತು. ಹೊತ್ತು ಮೂಡುವ ಮುನ್ನ ಹಾಗೂ ಹೊತ್ತು ಮುಳುಗುವ ಸಮಯದಲ್ಲಿ ಈ ಕಾರ್ಯಕ್ರಮ ನಡೆಯುತ್ತಿತ್ತು.
ಈ ಪುಟ್ಟ ಬಾಲೆ, ಪುಟ್ಟ ಬಿಂದಿಗೆ ಹೊತ್ತುಕೊಂಡು ಪುಟ್ಟ ಪುಟ್ಟ ಹೆಜ್ಜೆಯನ್ನಿಡುತ್ತ ನೀರು ತರಲು ಹೊರಟಾಗ, ಬೇಂದ್ರೆಯವರಿಗೆ ವಿನೋದವೆನಿಸಿದೆ. ಅವರು ಅವಳ ಚಲನವಲನವನ್ನು ಕೌತುಕದಿಂದ ಗಮನಿಸುತ್ತಿದ್ದಾರೆ. ಅವಳ ಪುಟ್ಟ ಹೆಜ್ಜೆಗಳ ತಾಳಕ್ಕೆ ತಕ್ಕಂತೆ ಅವರ ಮನದಲ್ಲಿ ಕವನ ಮೂಡುತ್ತಿದೆ.
ಕವನದ ಪೂರ್ತಿಪಾಠ ಇಂತಿದೆ:
ಮಂಗಲೆಯೊಂದಿಗೆ | ಹಿಗ್ಗಾಯ್ತು ತಂದೆಗೆ ||
ಕುಣಿಸ್ಯಾಡಿ ಕೂಸಿಗೆ | ಅರಳಿಸಿ ಆಸೆಗೆ ||
ರಾಗದ ಸಾಟಿಗೆ | ತೂಗ್ಯಾಡೊ ಧಾಟಿಗೆ ||
ಒಲಿದಾಡೊ ರೀತಿಗೆ | ಹಾಡ್ಯಾನೊ ಗೀತಿಗೆ ||
ಸಂಜೀಯ ಜಾವಿಗೆ | ಹೊರಟೀದಿ ಬಾವಿಗೆ ||
ಸಂಜೆಯ ಜಾವಿಗೆ | ಹೊರಟೀದಿ ಬಾವಿಗೆ ||
ಕಿರಗೀಯ ನೀರಿಗೆ | ಒದೆಯೂತ ದಾರಿಗೆ ||
ಗೆಜ್ಜೀಯು ಗೆಜ್ಜಿಗೆ | ತಾಕ್ಯಾವ ಹೆಜ್ಜಿಗೆ ||
ಏನಾರ ನಡಿಗೆ | ಯಾವೂರ ಹುಡಿಗೆ ||
ಸಂಜೆಯ ಜಾವಿಗೆ | ಹೊರಟಾಳ ಬಾವಿಗೆ ||
ಎರಡೂನು ಸಾಲಿಗೆ | ಹಾದ್ಯುದ್ದ ಬೇಲಿಗೆ ||
ಗುಲಬಾಕ್ಷಿ ಮಲ್ಲಿಗೆ | ಕೇಳತಾವ ಕಲ್ಲಿಗೆ ||
“ ಕಳಸೋದೆ ನೀರಿಗೆ | ಇಂಥ ಸುಕುಮಾರಿಗೆ ||
ಚಾಚ್ಯಾವಂಗಾಲಿಗೆ | ಮುಚ್ಚಂಜಿ ನಾಲಿಗೆ ” ||
ಸಂಜೀಯ ಜಾವಿಗೆ | ಬಂದ್ಯಲ್ಲ ಬಾವಿಗೆ ||
ಮಾತೀಗು ಆಚೆಗೆ | ಮೀರಿದ್ದ ನಾಚಿಗೆ ||
ಮುಸುಕ್ಯಾವ ಹೂವಿಗೆ | ಬಂದೀಯೆ ಬಾವಿಗೆ ||
ಗಿಲುಕೆಂಬೊ ಬಳಿಗೆ | ಕೆಲಸೊಂದೊ ಗಳಿಗೆ ||
ಗೆಳತೇರ ಒಂದಿದೆ | ಸೇದಿದೆ ಬಿಂದಿಗೆ ||
ಸಂಜೀಯ ಜಾವಿಗೆ | ಬಂದೀಯೆ ಬಾವಿಗೆ ||
ಮೂಗಿನ ನೇರಿಗೆ | ಹೊರಳೀದೆ ಊರಿಗೆ ||
ತಲಿಮ್ಯಾಲ ಬಿಂದಿಗೆ | ಕಾಲಾಗ ಅಂದಿಗೆ ||
ತುಂ ತುಮುಕು ತುಂಬಿದೆ | ಬಿಂದೀಗೆ ಅಂತಿದೆ ||
ಝಣ್ಝಣ ಅಂದಿಗೆ | ಅಂದಾವ ಹೊಂದಿಗೆ ||
ಸಂಜೀಯ ಜಾವಿಗೆ | ಹೋಗಿದ್ದೆ ಬಾವಿಗೆ ||
ಒಂದೇನೆ ಬಾರಿಗೆ | ಹೋದೆ ಸೀ-ನೀರಿಗೆ ||
ಬೆವರೀನ ಸಾರಿಗೆ | ತಂದೀದಿ ಯಾರಿಗೆ ||
ಇಬ್ಬನಿ ಹೂವಿಗೆ | ನಸುಕಿನ ಜಾವಿಗೆ ||
ಮುತ್ತ್ಹನಿ ಮಾರಿಗೆ | ಮುತ್ತ್ಯಾವೊ ನಾರಿಗೆ ||
ಸಂಜೀಯ ಜಾವಿಗೆ | ಹೋಗಿಯು ಬಾವಿಗೆ ||
ಕೆಲಸಾನ ಆಟಿಗೆ | ಮಾಡುವ ಸೂಟಿಗೆ |
ಹಸನಾದ ಧರತಿಗೆ | ಮೆಚ್ಚಿದೆ ಗರತಿಗೆ ||
ಕುಣಿಸಿದೆ ಇಂದಿಗೆ | ಕಣ್ಬಿಟ್ಟ ಮಂದಿಗೆ ||
ನೀವಾಳಿ ದಿಟ್ಟಿಗೆ | ಕಣ್ಣೆಲ್ಲ ಒಟ್ಟಿಗೆ ||
ಸಂಜೀಯ ಜಾವಿಗೆ | ಹೋಗಿದ್ದ್ಯೆ ಬಾವಿಗೆ ||
ಮಂಗಲೆಯೊಂದಿಗೆ | ಹಿಗ್ಗಾಯ್ತು ತಂದೆಗೆ ||
ಕುಣಿಸ್ಯಾಡಿ ಕೂಸಿಗೆ | ಅರಳಿಸಿ ಆಸೆಗೆ ||
ರಾಗದ ಸಾಟಿಗೆ | ತೂಗ್ಯಾಡೊ ಧಾಟಿಗೆ ||
ಒಲಿದಾಡೊ ರೀತಿಗೆ | ಹಾಡ್ಯಾನ ಗೀತಿಗೆ ||
ಸಂಜೀಯ ಜಾವಿಗೆ | ಹೊರಟೀದಿ ಬಾವಿಗೆ ||
vvvvvvvvvvvvvvvvvvvvvvvvvvvvvvvvvvvvvvvvvvvvvvv
ಪುಟ್ಟ ಮಂಗಲೆಯನ್ನು ಎತ್ತಿಕೊಂಡು ಆಡುವದರಿಂದ ತಂದೆಗೆ ಸಂತೋಷ ಉಕ್ಕುತ್ತದೆ. ಅವಳನ್ನು ಆತ ಎತ್ತಿ ಎತ್ತಿ ಕುಣಿಸುತ್ತಾನೆ. ಇಬ್ಬರ ಮನಸ್ಸೂ ಆನಂದದ ಆಸೆಯಲ್ಲಿ ಅರಳುತ್ತದೆ. ಕುಣಿಸುವಾಗ ಈತ ಮಾಡುವ ‘ಊ ಊ’ ರಾಗದ ದನಿಗೆ ತಕ್ಕಂತೆ ಅವಳು ತೂಗುತ್ತಾಳೆ. ಒಬ್ಬರಿಗೊಬ್ಬರು ಮಮತೆಯಿಂದ ಸ್ಪಂದಿಸುತ್ತಾರೆ. ಈ ಸ್ಪಂದನದಿಂದ ಉದ್ದೀಪ್ತನಾದ ಕವಿಯಲ್ಲಿ ಹಾಡು ಮೂಡುತ್ತದೆ.
“ಮಂಗಲೆಯೊಂದಿಗೆ | ಹಿಗ್ಗಾಯ್ತು ತಂದೆಗೆ ||
ಕುಣಿಸ್ಯಾಡಿ ಕೂಸಿಗೆ | ಅರಳಿಸಿ ಆಸೆಗೆ ||
ರಾಗದ ಸಾಟಿಗೆ | ತೂಗ್ಯಾಡೊ ಧಾಟಿಗೆ ||
ಒಲಿದಾಡೊ ರೀತಿಗೆ | ಹಾಡ್ಯಾನೊ ಗೀತಿಗೆ ||
ಸಂಜೀಯ ಜಾವಿಗೆ | ಹೊರಟೀದಿ ಬಾವಿಗೆ ||”
ಇಂತಹ ಕಾವ್ಯೋದ್ದೀಪನಕ್ಕೆ ಕಾರಣಳಾಗುವ ಈ ಮಗಳು , ಮಂಗಳೆ ಇದೀಗ ಮೂರೂಸಂಜೆಯ ಹೊತ್ತಿನಲ್ಲಿ ನೀರು ತರಲು ಬಾವಿಗೆ ಹೊರಟಿದ್ದಾಳೆ.
ಈ ಪುಟ್ಟ ಬಾಲೆ ನಡೆಯುತ್ತಿರುವ ಪರಿಯಾದರೂ ಎಂತಹದು? ಅವಸರದಲ್ಲಿ ಧಾವಿಸುತ್ತಿರುವದರಿಂದ ತಾನು ಉಟ್ಟುಕೊಂಡ ಕಿರಿಗೆ (=ಸಣ್ಣ ಸೀರೆ)ಯ ನಿರಿಗೆಗಳನ್ನು ಅವಳು ಚಿಮ್ಮುತ್ತಿದ್ದಾಳೆ. ಈ ಕಿರಿಗೆ ಸಹ ಅವಳಿಗೆ ದೊಡ್ಡದೇ ಆಗಿದೆ. ಅದು ಅವಳ ಅಂಗಾಲುಗಳನ್ನು ದಾಟಿ, ನೆಲವನ್ನು ಸ್ಪರ್ಷಿಸುತ್ತದೆ. ಆದುದರಿಂದ ಕವಿ ಇದನ್ನು ‘ಒದೆಯೂತ ದಾರಿಗೆ’ ಎಂದು ಬಣ್ಣಿಸುತ್ತಾನೆ.
“ಸಂಜೆಯ ಜಾವಿಗೆ | ಹೊರಟೀದಿ ಬಾವಿಗೆ ||
ಕಿರಗೀಯ ನೀರಿಗೆ | ಒದೆಯೂತ ದಾರಿಗೆ ||
ಗೆಜ್ಜೀಯು ಗೆಜ್ಜಿಗೆ | ತಾಕ್ಯಾವ ಹೆಜ್ಜಿಗೆ ||
ಏನಾರ ನಡಿಗೆ | ಯಾವೂರ ಹುಡಿಗೆ ||
ಸಂಜೆಯ ಜಾವಿಗೆ | ಹೊರಟಾಳ ಬಾವಿಗೆ ||”
ಅದರಂತೆ ಅವಳ ಗೆಜ್ಜೆಗಳು ಅವಳ ಹೆಜ್ಜೆಗೆ ತಾಕುತ್ತಿವೆ. ಈ ಪುಟ್ಟ ಚೆಲುವಿಯನ್ನು ಕಂಡ ಕವಿಗೆ ತನ್ನ ಮಗಳಲ್ಲಿಯೇ ಹೊಸದೊಂದು ಸೌಂದರ್ಯ ಕಾಣುತ್ತದೆ. She appears to him as a beautiful stranger! ಅಗಾಧಪಟ್ಟುಕೊಂಡ ಕವಿ, “ಏನಾರ ನಡಿಗೆ, ಯಾವೂರ ಹುಡಿಗೆ!” ಎಂದು ಉದ್ಗಾರವೆತ್ತುತ್ತಾನೆ.
ಇವಳು ಹೋಗುತ್ತಿರುವ ಕಿರುದಾರಿಯ ಎರಡೂ ಬದಿಗೆ ಬೇಲಿ ಹಬ್ಬಿದೆ. ಆ ಬೇಲಿಯಲ್ಲಿ , ಬಾವಿಯ ಸನಿಹದಲ್ಲಿ ಗುಲಬಾಕ್ಷಿ ಹಾಗು ಕಾಡುಮಲ್ಲಿಗೆ ಬೆಳೆದಿವೆ. ಅವೂ ಸಹ ಈ ಬಾಲೆಯನ್ನು ನೋಡುತ್ತವೆ. ತಂದೆಯಲ್ಲಿ ಕೌತುಕವನ್ನು ಹುಟ್ಟಿಸಿದ ಈ ದೃಶ್ಯವು ಹೂವುಗಳಲ್ಲಿ ಕನಿಕರವನ್ನು ಹುಟ್ಟಿಸಿದೆ. ನೈಸರ್ಗಿಕ ವಸ್ತುಗಳಲ್ಲಿ ಹುಟ್ಟುವ ಅನುಕಂಪ ಭಾವನೆಯು, ಮನುಷ್ಯರಲ್ಲಿ ಹುಟ್ಟಲಾರದೇನೊ?
“ಎರಡೂನು ಸಾಲಿಗೆ | ಹಾದ್ಯುದ್ದ ಬೇಲಿಗೆ ||
ಗುಲಬಾಕ್ಷಿ ಮಲ್ಲಿಗೆ | ಕೇಳತಾವ ಕಲ್ಲಿಗೆ ||
“ ಕಳಸೋದೆ ನೀರಿಗೆ | ಇಂಥ ಸುಕುಮಾರಿಗೆ ||
ಚಾಚ್ಯಾವಂಗಾಲಿಗೆ | ಮುಚ್ಚಂಜಿ ನಾಲಿಗೆ ” ||
ಸಂಜೀಯ ಜಾವಿಗೆ | ಬಂದ್ಯಲ್ಲ ಬಾವಿಗೆ || ”
ಹೂವು ಮೃದುತ್ವದ ಪ್ರತೀಕ. ಕಲ್ಲು ಕಾಠಿಣ್ಯದ ಪ್ರತೀಕ.
(‘ವಜ್ರಾದಪಿ ಕಠೋರಾಣಿ, ಮೃದೂನಿ ಕುಸುಮಾದಪಿ’ ಎನ್ನುವ ಕಾಳಿದಾಸನ ವಾಕ್ಯವನ್ನು ನೆನಪಿಸಿಕೊಳ್ಳಿ.) ಕಲ್ಲುಮನಸ್ಸಿನ ಕಲ್ಲನ್ನೇ ಈ ಹೂವುಗಳು ಕೇಳುತ್ತವೆ:
“ ಕಳಸೋದೆ ನೀರಿಗೆ , ಇಂಥ ಸುಕುಮಾರಿಗೆ ? ಅದೂ ಸಹ ಇಂತಹ ಮುಚ್ಚಂಜೆಯ ವೇಳೆಯಲ್ಲಿ? ”
ಈ ಪ್ರಶ್ನೆಗೆ ಆ ಕಲ್ಲು ಸಹ ಕರಗಿರಬಹುದೆ?
ಕಾಲವನ್ನು ಗುರುತಿಸಲು ಮನುಷ್ಯರಿಗೆ ಕಾಲಯಂತ್ರವೆನ್ನುವ ಸಾಧನವಿದೆ. ಮರ, ಗಿಡ, ಹೂವು ಮೊದಲಾದ ನೈಸರ್ಗಿಕ ವಸ್ತುಗಳು ಕಾಲವನ್ನು ಹೇಗೆ ಗುರುತಿಸುತ್ತಿವೆ?
“ಚಾಚ್ಯಾವಂಗಾಲಿಗೆ | ಮುಚ್ಚಂಜಿ ನಾಲಿಗೆ ” ||
ಮೂರೂಸಂಜೆಯ ನಾಲಿಗೆ (=ಮುಳುಗುತ್ತಿರುವ ಸೂರ್ಯಕಿರಣಗಳು) ಇವಳ ಅಂಗಾಲನ್ನು ಸ್ಪರ್ಶಿಸುತ್ತಿವೆ. ಇದು ಹೊತ್ತು ಮುಳುಗುವ ಸಮಯ. ಇಂತಹ ಸಮಯದಲ್ಲಿ ಯಾರಾದರೂ ಇಂತಹ ಪುಟ್ಟ ಹುಡುಗೆಯನ್ನು ನೀರು ತರಲು ಕಳಿಸಬಹುದೆ?
ತಮ್ಮ ಪ್ರಶ್ನೆಗೆ ಉತ್ತರಿಸುವರಾರೂ ಇಲ್ಲವೆಂದು ಆ ಹೂವುಗಳು ಆ ಹುಡುಗೆಯನ್ನೇ ಕೇಳುತ್ತವೆ:
“ಯಾಕವ್ವಾ, ಸಂಜೀಯ ಜಾವಿಗೆ ಬಂದ್ಯಲ್ಲ ಬಾವಿಗೆ ? ”
ಯಾರಿಂದಲೂ ಉತ್ತರ ಸಿಗದಿದ್ದಾಗ, ಆ ಹೂವುಗಳು ತಮ್ಮ ಮಾತಿಗಾಗಿ ತಾವೇ ನಾಚಿಕೊಳ್ಳುತ್ತವೆ. (ಹೂವುಗಳು ನಾಚಿಕೊಳ್ಳುವದೆಂದರೇನು? ಕೆಲವು ಹೂವುಗಳು ಸಂಜೆಯಾದಾಗ ಮುಚ್ಚಿಕೊಳ್ಳುತ್ತವೆ.) ಮೃದು ಸ್ವಭಾವದ ಆ ಹೂವುಗಳ ನಾಚಿಗೆಯ ಭಾವನೆಯು ಮಾತಿನಲ್ಲಿ ಹೇಳಲು ಸಾಧ್ಯವಾಗದಂತಹದು. (ಅದಕ್ಕಾಗಿಯೇ ಅವು ಮುಚ್ಚಿಕೊಳ್ಳುವದು.)
“ಮಾತೀಗು ಆಚೆಗೆ | ಮೀರಿದ್ದ ನಾಚಿಗೆ ||
ಮುಸುಕ್ಯಾವ ಹೂವಿಗೆ | ಬಂದೀಯೆ ಬಾವಿಗೆ ||
ಗಿಲುಕೆಂಬೊ ಬಳಿಗೆ | ಕೆಲಸೊಂದೊ ಗಳಿಗೆ ||
ಗೆಳತೇರ ಒಂದಿದೆ | ಸೇದಿದೆ ಬಿಂದಿಗೆ ||
ಸಂಜೀಯ ಜಾವಿಗೆ | ಬಂದೀಯೆ ಬಾವಿಗೆ ||”
ಈ ಬಾಲೆಯಾದರೊ ಬಳೆಗಳನ್ನು ಗಿಲುಕೆನ್ನಿಸುತ್ತ, ಒಂದೇ ಗಳಿಗೆಯಲ್ಲಿ ತನ್ನ ಜೊತೆಗಾತಿಯರೊಡನೆ ನೀರು ಸೇದಿಕೊಂಡು, ತನ್ನ ಬಿಂದಿಗೆಯನ್ನು ತುಂಬಿಕೊಂಡು ಈಗ ಮರಳಿ ಹೋಗುತ್ತಿದ್ದಾಳೆ !
“ಮೂಗಿನ ನೇರಿಗೆ | ಹೊರಳೀದೆ ಊರಿಗೆ ||
ತಲಿಮ್ಯಾಲ ಬಿಂದಿಗೆ | ಕಾಲಾಗ ಅಂದಿಗೆ ||
ತುಂ ತುಮುಕು ತುಂಬಿದೆ | ಬಿಂದೀಗೆ ಅಂತಿದೆ ||
ಝಣ್ಝಣ ಅಂದಿಗೆ | ಅಂದಾವ ಹೊಂದಿಗೆ ||
ಸಂಜೀಯ ಜಾವಿಗೆ | ಹೋಗಿದ್ದೆ ಬಾವಿಗೆ || ”
ಮರಳುತ್ತಿರುವ ಈ ಬಾಲೆಯ ತಲೆಯ ಮೇಲೆ ಇರುವದು ಬಿಂದಿಗೆ
ಹಾಗೂ ಕಾಲಲ್ಲಿ ಇರುವದು ಅಂದಿಗೆ ; ಈ ವರ್ಣನೆಯನ್ನು ಆಪಾದಮಸ್ತಕ ವರ್ಣನೆ ಎನ್ನಬಹುದಲ್ಲವೆ?
ತಲೆಯ ಮೇಲಿನ ಬಿಂದಿಗೆಯು ತುಂ ತುಂ ಎಂದು ಧ್ವನಿಸುತ್ತಿದ್ದರೆ, ಕಾಲೊಳಗಿನ ಅಂದಿಗೆಗಳು ಝಣ್ ಝಣ್ ಎನ್ನುತ್ತಿವೆ. ಬಿಂದಿಗೆಯ ಹಾಗೂ ಅಂದಿಗೆಯ ಧ್ವನಿಗಳು ಸಮತಾಳದಲ್ಲಿ ಸಂವಾದಿಯಾಗಿ ಹೊಂದಿಕೊಂಡಿವೆ !
ಕುಡಿಯಲು ಸಿಹಿನೀರು ತರಲು ಹೋದ ಬಾಲೆ ಒಂದು ಸಾರಿಗೆ ನೀರು ತಂದಳು. ಅಷ್ಟೇ ಸಾಕು, ಅವಳ ಮುಖದ ಮೇಲೆಲ್ಲ ಬೆವರಿನ ಹನಿಗಳು ಮೂಡಿವೆ. ತಂದೆಯ ಕಣ್ಣಿಗೆ ಇದು ಮುಂಜಾವಿನಲ್ಲಿ ಹೂವಿಗೆ ಮುಸುಕಿದ ಇಬ್ಬನಿಯಂತೆ ಕಾಣುವದು. ಈ ಬೆವರಿನ ಹನಿಗಳು ಮುತ್ತಿನ ಹನಿಗಳಂತೆ ಅವನಿಗೆ ಕಾಣುವವು.
“ಒಂದೇನೆ ಬಾರಿಗೆ | ಹೋದೆ ಸೀ-ನೀರಿಗೆ ||
ಬೆವರೀನ ಸಾರಿಗೆ | ತಂದೀದಿ ಯಾರಿಗೆ ||
ಇಬ್ಬನಿ ಹೂವಿಗೆ | ನಸುಕಿನ ಜಾವಿಗೆ ||
ಮುತ್ತ್ಹನಿ ಮಾರಿಗೆ | ಮುತ್ತ್ಯಾವೊ ನಾರಿಗೆ ||
ಸಂಜೀಯ ಜಾವಿಗೆ | ಹೋಗಿಯು ಬಾವಿಗೆ ||”
ಸಂಜೆಯ ಸಮಯದಲ್ಲಿ ನೀರು ತಂದರೂ ಸಹ, ಮುಂಜಾನೆಯ ಇಬ್ಬನಿಗಳು ಮುಖದಲ್ಲಿ ಕಾಣುತ್ತಿವೆಯಲ್ಲ ಎಂದು ಅವನಿಗೆ ಅಚ್ಚರಿಯಾಗುತ್ತಿದೆ. ತನ್ನ ಮಗಳ ಮೊಗವು ಮುಂಜಾನೆಯ ಹೂವಿನಂತೆ ಯಾವಾಗಲೂ fresh ಆಗಿಯೇ ಇರುವದು ಎಂದು ಅವನ ಭಾವನೆಯೆ?
ಆಟವಾಡುವ ವಯಸ್ಸಿನ ಬಾಲೆ ಇವಳು. ಇವಳಿಗೆ ಕೆಲಸವೆಲ್ಲವೂ ಆಟವೇ! ಈ ಪುಟ್ಟ ಗರತಿಯ ಇಂತಹ ಅಚ್ಚುಕಟ್ಟಾದ ವಿಧಾನವನ್ನು ತಂದೆ ಮೆಚ್ಚಿಕೊಳ್ಳುತ್ತಾನೆ. ಅವನ ಮನಸ್ಸು ಕುಣಿಯುತ್ತದೆ. ಈ ಆಟವನ್ನು ನೋಡಿದ ಜನರೂ ಅನೇಕರು. ಅವರ ‘ಕಣ್ಣು’ ಇವಳಿಗೆ ತಾಕಬಾರದಲ್ಲ ! ಅದಕ್ಕಾಗಿ ತಂದೆ ಇವಳಿಗೆ ನೀವಾಳಿಸುತ್ತಾನೆ.
“ಕೆಲಸಾನ ಆಟಿಗೆ | ಮಾಡುವ ಸೂಟಿಗೆ |
ಹಸನಾದ ಧರತಿಗೆ | ಮೆಚ್ಚಿದೆ ಗರತಿಗೆ ||
ಕುಣಿಸಿದೆ ಇಂದಿಗೆ | ಕಣ್ಬಿಟ್ಟ ಮಂದಿಗೆ ||
ನೀವಾಳಿ ದಿಟ್ಟಿಗೆ | ಕಣ್ಣೆಲ್ಲ ಒಟ್ಟಿಗೆ ||
ಸಂಜೀಯ ಜಾವಿಗೆ | ಹೋಗಿದ್ದ್ಯೆ ಬಾವಿಗೆ ||”
ಕವಿ ತನ್ನ ಸವಿ ಅನುಭವವನ್ನು ಮತ್ತೆ ನೆನಪಿಸಿಕೊಳ್ಳುತ್ತಾನೆ.
“ಮಂಗಲೆಯೊಂದಿಗೆ | ಹಿಗ್ಗಾಯ್ತು ತಂದೆಗೆ ||
ಕುಣಿಸ್ಯಾಡಿ ಕೂಸಿಗೆ | ಅರಳಿಸಿ ಆಸೆಗೆ ||
ರಾಗದ ಸಾಟಿಗೆ | ತೂಗ್ಯಾಡೊ ಧಾಟಿಗೆ ||
ಒಲಿದಾಡೊ ರೀತಿಗೆ | ಹಾಡ್ಯಾನ ಗೀತಿಗೆ ||
ಸಂಜೀಯ ಜಾವಿಗೆ | ಹೊರಟೀದಿ ಬಾವಿಗೆ ||”
ಮೊದಲನೆಯ ನುಡಿಯು ಕೊನೆಯ ನುಡಿಯಂತೆಯೇ ಕಾಣುತ್ತಿದೆ. ಆದರೆ ಮೊದಲನೆಯ ನುಡಿಯ ನಾಲ್ಕನೆಯ ಸಾಲಿನಲ್ಲಿ “ ಹಾಡ್ಯಾನೊ ಗೀತಿಗೆ ” ಎನ್ನುವ ಉಲ್ಲಾಸಮಯ ಪ್ರಾರಂಭವಿದ್ದರೆ, ಕೊನೆಯ ನುಡಿಯ ನಾಲ್ಕನೆಯ ಸಾಲಿನಲ್ಲಿ “ ಹಾಡ್ಯಾನ ಗೀತಿಗೆ ” ಎನ್ನುವ ಮಂಗಲಮುಕ್ತಾಯವಿದೆ.
ಬೇಂದ್ರೆಯವರ ಈ ಕವನದ ಎರಡು ವೈಶಿಷ್ಟ್ಯಗಳನ್ನು ಇಲ್ಲಿ ಗಮನಿಸಬಹುದು.
ಮೊದಲನೆಯದು ಸಹಜ ಛಂದಸ್ಸು , ಅಂದರೆ ಕಾವ್ಯದ contentಗೆ ಹೊಂದಿಕೊಳ್ಳುವ metre.
ಎರಡನೆಯದು, ನಿಸರ್ಗದ ವಸ್ತುಗಳಾದ ಹೂವು , ಕಲ್ಲು ಇತ್ಯಾದಿಗಳೊಡನೆ ಕವನ ಹೊಂದಿದ ತಾದಾತ್ಮ್ಯ.
ಈ ಕವನವು ಕೇವಲ ಪುಟ್ಟ ಬಾಲೆಯ ಬಗೆಗಿನ ಕವನವಲ್ಲ. ಇದು ನಿಸರ್ಗವಸ್ತುಗಳ ಬಗೆಗಿನ ಕವನವೂ ಹೌದು.
ಅಂತೆಯೇ ಕವನ ಮುಗಿದ ಬಳಿಕವೂ ಸಹ ಕೆಳಗಿನ ಸಾಲುಗಳು ನಮ್ಮ ಮನಸ್ಸಿನಲ್ಲಿ ರಿಂಗಣಿಸುತ್ತಲೇ ಉಳಿದು ಬಿಡುತ್ತವೆ:
“ಗುಲಬಾಕ್ಷಿ, ಮಲ್ಲಿಗೆ ಕೇಳತಾವ ಕಲ್ಲಿಗೆ
ಕಳಸೋದೆ ನೀರಿಗೆ, ಇಂಥ ಸುಕುಮಾರಿಗೆ ?”
ಇದರ ಒಂದು ಶ್ರೇಷ್ಠ ಉದಾಹರಣೆ ಎಂದರೆ ‘ಪಾತರಗಿತ್ತಿ ಪಕ್ಕ’ ಎನ್ನುವ ಕವನ.
ಪಾತರಗಿತ್ತಿಯು ಎಷ್ಟು ಕ್ಷಿಪ್ರವಾಗಿ ರೆಕ್ಕೆಗಳನ್ನು ಬಡೆಯುವದೊ, ಅಷ್ಟೇ ಕ್ಷಿಪ್ರವಾದ metre ಈ ಕವನಕ್ಕಿದೆ. ಪಾತರಗಿತ್ತಿಯು ಕ್ಷಣಾರ್ಧದಲ್ಲಿ ಎಲ್ಲೆಲ್ಲಿ ಸುತ್ತಾಡುವದೊ, ಈ ಕವನ ಸಹ ಅದೇ ವೇಗದಲ್ಲಿ ಎಲ್ಲೆಲ್ಲೊ ಸುತ್ತಾಡುತ್ತದೆ. (ಕಲ್ಪನೆಯ ರೆಕ್ಕೆಗಳ ಮೂಲಕ ಹಾರಾಡಿದರೂ ಸಹ ಬೇಂದ್ರೆಯವರ ಕವನ ವಾಸ್ತವದ ನೆಲೆಗಳನ್ನು ಬಿಡುವದಿಲ್ಲ.)
ಇಂತಹದೇ ಸಹಜ ಛಂದಸ್ಸಿನ ಮತ್ತೊಂದು ಕವನ : “ಸಂಜೀಯ ಜಾವಿಗೆ ”.
ಮೂರೂಸಂಜೆಯ ಹೊತ್ತಿನಲ್ಲಿ ಬೇಂದ್ರೆಯವರು ತಮ್ಮ ಮನೆಯ ಮುಂಭಾಗದಲ್ಲಿ ಕುಳಿತುಕೊಂಡಿದ್ದಾರೆ. ಅವರ ಪುಟ್ಟ ಮಗಳು ಮಂಗಲಾ ನೀರು ತರುವವರ ಜೊತೆಗೆ ತಾನೂ ಸಹ ಬಾವಿಗೆ ಹೊರಟಿದ್ದಾಳೆ. ಆ ಕಾಲದಲ್ಲಿ ನೀರನ್ನು ಕೆರೆ ಅಥವಾ ಬಾವಿಯಿಂದಲೇ ತರಬೇಕಾಗಿತ್ತು. ಹೊತ್ತು ಮೂಡುವ ಮುನ್ನ ಹಾಗೂ ಹೊತ್ತು ಮುಳುಗುವ ಸಮಯದಲ್ಲಿ ಈ ಕಾರ್ಯಕ್ರಮ ನಡೆಯುತ್ತಿತ್ತು.
ಈ ಪುಟ್ಟ ಬಾಲೆ, ಪುಟ್ಟ ಬಿಂದಿಗೆ ಹೊತ್ತುಕೊಂಡು ಪುಟ್ಟ ಪುಟ್ಟ ಹೆಜ್ಜೆಯನ್ನಿಡುತ್ತ ನೀರು ತರಲು ಹೊರಟಾಗ, ಬೇಂದ್ರೆಯವರಿಗೆ ವಿನೋದವೆನಿಸಿದೆ. ಅವರು ಅವಳ ಚಲನವಲನವನ್ನು ಕೌತುಕದಿಂದ ಗಮನಿಸುತ್ತಿದ್ದಾರೆ. ಅವಳ ಪುಟ್ಟ ಹೆಜ್ಜೆಗಳ ತಾಳಕ್ಕೆ ತಕ್ಕಂತೆ ಅವರ ಮನದಲ್ಲಿ ಕವನ ಮೂಡುತ್ತಿದೆ.
ಕವನದ ಪೂರ್ತಿಪಾಠ ಇಂತಿದೆ:
ಮಂಗಲೆಯೊಂದಿಗೆ | ಹಿಗ್ಗಾಯ್ತು ತಂದೆಗೆ ||
ಕುಣಿಸ್ಯಾಡಿ ಕೂಸಿಗೆ | ಅರಳಿಸಿ ಆಸೆಗೆ ||
ರಾಗದ ಸಾಟಿಗೆ | ತೂಗ್ಯಾಡೊ ಧಾಟಿಗೆ ||
ಒಲಿದಾಡೊ ರೀತಿಗೆ | ಹಾಡ್ಯಾನೊ ಗೀತಿಗೆ ||
ಸಂಜೀಯ ಜಾವಿಗೆ | ಹೊರಟೀದಿ ಬಾವಿಗೆ ||
ಸಂಜೆಯ ಜಾವಿಗೆ | ಹೊರಟೀದಿ ಬಾವಿಗೆ ||
ಕಿರಗೀಯ ನೀರಿಗೆ | ಒದೆಯೂತ ದಾರಿಗೆ ||
ಗೆಜ್ಜೀಯು ಗೆಜ್ಜಿಗೆ | ತಾಕ್ಯಾವ ಹೆಜ್ಜಿಗೆ ||
ಏನಾರ ನಡಿಗೆ | ಯಾವೂರ ಹುಡಿಗೆ ||
ಸಂಜೆಯ ಜಾವಿಗೆ | ಹೊರಟಾಳ ಬಾವಿಗೆ ||
ಎರಡೂನು ಸಾಲಿಗೆ | ಹಾದ್ಯುದ್ದ ಬೇಲಿಗೆ ||
ಗುಲಬಾಕ್ಷಿ ಮಲ್ಲಿಗೆ | ಕೇಳತಾವ ಕಲ್ಲಿಗೆ ||
“ ಕಳಸೋದೆ ನೀರಿಗೆ | ಇಂಥ ಸುಕುಮಾರಿಗೆ ||
ಚಾಚ್ಯಾವಂಗಾಲಿಗೆ | ಮುಚ್ಚಂಜಿ ನಾಲಿಗೆ ” ||
ಸಂಜೀಯ ಜಾವಿಗೆ | ಬಂದ್ಯಲ್ಲ ಬಾವಿಗೆ ||
ಮಾತೀಗು ಆಚೆಗೆ | ಮೀರಿದ್ದ ನಾಚಿಗೆ ||
ಮುಸುಕ್ಯಾವ ಹೂವಿಗೆ | ಬಂದೀಯೆ ಬಾವಿಗೆ ||
ಗಿಲುಕೆಂಬೊ ಬಳಿಗೆ | ಕೆಲಸೊಂದೊ ಗಳಿಗೆ ||
ಗೆಳತೇರ ಒಂದಿದೆ | ಸೇದಿದೆ ಬಿಂದಿಗೆ ||
ಸಂಜೀಯ ಜಾವಿಗೆ | ಬಂದೀಯೆ ಬಾವಿಗೆ ||
ಮೂಗಿನ ನೇರಿಗೆ | ಹೊರಳೀದೆ ಊರಿಗೆ ||
ತಲಿಮ್ಯಾಲ ಬಿಂದಿಗೆ | ಕಾಲಾಗ ಅಂದಿಗೆ ||
ತುಂ ತುಮುಕು ತುಂಬಿದೆ | ಬಿಂದೀಗೆ ಅಂತಿದೆ ||
ಝಣ್ಝಣ ಅಂದಿಗೆ | ಅಂದಾವ ಹೊಂದಿಗೆ ||
ಸಂಜೀಯ ಜಾವಿಗೆ | ಹೋಗಿದ್ದೆ ಬಾವಿಗೆ ||
ಒಂದೇನೆ ಬಾರಿಗೆ | ಹೋದೆ ಸೀ-ನೀರಿಗೆ ||
ಬೆವರೀನ ಸಾರಿಗೆ | ತಂದೀದಿ ಯಾರಿಗೆ ||
ಇಬ್ಬನಿ ಹೂವಿಗೆ | ನಸುಕಿನ ಜಾವಿಗೆ ||
ಮುತ್ತ್ಹನಿ ಮಾರಿಗೆ | ಮುತ್ತ್ಯಾವೊ ನಾರಿಗೆ ||
ಸಂಜೀಯ ಜಾವಿಗೆ | ಹೋಗಿಯು ಬಾವಿಗೆ ||
ಕೆಲಸಾನ ಆಟಿಗೆ | ಮಾಡುವ ಸೂಟಿಗೆ |
ಹಸನಾದ ಧರತಿಗೆ | ಮೆಚ್ಚಿದೆ ಗರತಿಗೆ ||
ಕುಣಿಸಿದೆ ಇಂದಿಗೆ | ಕಣ್ಬಿಟ್ಟ ಮಂದಿಗೆ ||
ನೀವಾಳಿ ದಿಟ್ಟಿಗೆ | ಕಣ್ಣೆಲ್ಲ ಒಟ್ಟಿಗೆ ||
ಸಂಜೀಯ ಜಾವಿಗೆ | ಹೋಗಿದ್ದ್ಯೆ ಬಾವಿಗೆ ||
ಮಂಗಲೆಯೊಂದಿಗೆ | ಹಿಗ್ಗಾಯ್ತು ತಂದೆಗೆ ||
ಕುಣಿಸ್ಯಾಡಿ ಕೂಸಿಗೆ | ಅರಳಿಸಿ ಆಸೆಗೆ ||
ರಾಗದ ಸಾಟಿಗೆ | ತೂಗ್ಯಾಡೊ ಧಾಟಿಗೆ ||
ಒಲಿದಾಡೊ ರೀತಿಗೆ | ಹಾಡ್ಯಾನ ಗೀತಿಗೆ ||
ಸಂಜೀಯ ಜಾವಿಗೆ | ಹೊರಟೀದಿ ಬಾವಿಗೆ ||
vvvvvvvvvvvvvvvvvvvvvvvvvvvvvvvvvvvvvvvvvvvvvvv
ಪುಟ್ಟ ಮಂಗಲೆಯನ್ನು ಎತ್ತಿಕೊಂಡು ಆಡುವದರಿಂದ ತಂದೆಗೆ ಸಂತೋಷ ಉಕ್ಕುತ್ತದೆ. ಅವಳನ್ನು ಆತ ಎತ್ತಿ ಎತ್ತಿ ಕುಣಿಸುತ್ತಾನೆ. ಇಬ್ಬರ ಮನಸ್ಸೂ ಆನಂದದ ಆಸೆಯಲ್ಲಿ ಅರಳುತ್ತದೆ. ಕುಣಿಸುವಾಗ ಈತ ಮಾಡುವ ‘ಊ ಊ’ ರಾಗದ ದನಿಗೆ ತಕ್ಕಂತೆ ಅವಳು ತೂಗುತ್ತಾಳೆ. ಒಬ್ಬರಿಗೊಬ್ಬರು ಮಮತೆಯಿಂದ ಸ್ಪಂದಿಸುತ್ತಾರೆ. ಈ ಸ್ಪಂದನದಿಂದ ಉದ್ದೀಪ್ತನಾದ ಕವಿಯಲ್ಲಿ ಹಾಡು ಮೂಡುತ್ತದೆ.
“ಮಂಗಲೆಯೊಂದಿಗೆ | ಹಿಗ್ಗಾಯ್ತು ತಂದೆಗೆ ||
ಕುಣಿಸ್ಯಾಡಿ ಕೂಸಿಗೆ | ಅರಳಿಸಿ ಆಸೆಗೆ ||
ರಾಗದ ಸಾಟಿಗೆ | ತೂಗ್ಯಾಡೊ ಧಾಟಿಗೆ ||
ಒಲಿದಾಡೊ ರೀತಿಗೆ | ಹಾಡ್ಯಾನೊ ಗೀತಿಗೆ ||
ಸಂಜೀಯ ಜಾವಿಗೆ | ಹೊರಟೀದಿ ಬಾವಿಗೆ ||”
ಇಂತಹ ಕಾವ್ಯೋದ್ದೀಪನಕ್ಕೆ ಕಾರಣಳಾಗುವ ಈ ಮಗಳು , ಮಂಗಳೆ ಇದೀಗ ಮೂರೂಸಂಜೆಯ ಹೊತ್ತಿನಲ್ಲಿ ನೀರು ತರಲು ಬಾವಿಗೆ ಹೊರಟಿದ್ದಾಳೆ.
ಈ ಪುಟ್ಟ ಬಾಲೆ ನಡೆಯುತ್ತಿರುವ ಪರಿಯಾದರೂ ಎಂತಹದು? ಅವಸರದಲ್ಲಿ ಧಾವಿಸುತ್ತಿರುವದರಿಂದ ತಾನು ಉಟ್ಟುಕೊಂಡ ಕಿರಿಗೆ (=ಸಣ್ಣ ಸೀರೆ)ಯ ನಿರಿಗೆಗಳನ್ನು ಅವಳು ಚಿಮ್ಮುತ್ತಿದ್ದಾಳೆ. ಈ ಕಿರಿಗೆ ಸಹ ಅವಳಿಗೆ ದೊಡ್ಡದೇ ಆಗಿದೆ. ಅದು ಅವಳ ಅಂಗಾಲುಗಳನ್ನು ದಾಟಿ, ನೆಲವನ್ನು ಸ್ಪರ್ಷಿಸುತ್ತದೆ. ಆದುದರಿಂದ ಕವಿ ಇದನ್ನು ‘ಒದೆಯೂತ ದಾರಿಗೆ’ ಎಂದು ಬಣ್ಣಿಸುತ್ತಾನೆ.
“ಸಂಜೆಯ ಜಾವಿಗೆ | ಹೊರಟೀದಿ ಬಾವಿಗೆ ||
ಕಿರಗೀಯ ನೀರಿಗೆ | ಒದೆಯೂತ ದಾರಿಗೆ ||
ಗೆಜ್ಜೀಯು ಗೆಜ್ಜಿಗೆ | ತಾಕ್ಯಾವ ಹೆಜ್ಜಿಗೆ ||
ಏನಾರ ನಡಿಗೆ | ಯಾವೂರ ಹುಡಿಗೆ ||
ಸಂಜೆಯ ಜಾವಿಗೆ | ಹೊರಟಾಳ ಬಾವಿಗೆ ||”
ಅದರಂತೆ ಅವಳ ಗೆಜ್ಜೆಗಳು ಅವಳ ಹೆಜ್ಜೆಗೆ ತಾಕುತ್ತಿವೆ. ಈ ಪುಟ್ಟ ಚೆಲುವಿಯನ್ನು ಕಂಡ ಕವಿಗೆ ತನ್ನ ಮಗಳಲ್ಲಿಯೇ ಹೊಸದೊಂದು ಸೌಂದರ್ಯ ಕಾಣುತ್ತದೆ. She appears to him as a beautiful stranger! ಅಗಾಧಪಟ್ಟುಕೊಂಡ ಕವಿ, “ಏನಾರ ನಡಿಗೆ, ಯಾವೂರ ಹುಡಿಗೆ!” ಎಂದು ಉದ್ಗಾರವೆತ್ತುತ್ತಾನೆ.
ಇವಳು ಹೋಗುತ್ತಿರುವ ಕಿರುದಾರಿಯ ಎರಡೂ ಬದಿಗೆ ಬೇಲಿ ಹಬ್ಬಿದೆ. ಆ ಬೇಲಿಯಲ್ಲಿ , ಬಾವಿಯ ಸನಿಹದಲ್ಲಿ ಗುಲಬಾಕ್ಷಿ ಹಾಗು ಕಾಡುಮಲ್ಲಿಗೆ ಬೆಳೆದಿವೆ. ಅವೂ ಸಹ ಈ ಬಾಲೆಯನ್ನು ನೋಡುತ್ತವೆ. ತಂದೆಯಲ್ಲಿ ಕೌತುಕವನ್ನು ಹುಟ್ಟಿಸಿದ ಈ ದೃಶ್ಯವು ಹೂವುಗಳಲ್ಲಿ ಕನಿಕರವನ್ನು ಹುಟ್ಟಿಸಿದೆ. ನೈಸರ್ಗಿಕ ವಸ್ತುಗಳಲ್ಲಿ ಹುಟ್ಟುವ ಅನುಕಂಪ ಭಾವನೆಯು, ಮನುಷ್ಯರಲ್ಲಿ ಹುಟ್ಟಲಾರದೇನೊ?
“ಎರಡೂನು ಸಾಲಿಗೆ | ಹಾದ್ಯುದ್ದ ಬೇಲಿಗೆ ||
ಗುಲಬಾಕ್ಷಿ ಮಲ್ಲಿಗೆ | ಕೇಳತಾವ ಕಲ್ಲಿಗೆ ||
“ ಕಳಸೋದೆ ನೀರಿಗೆ | ಇಂಥ ಸುಕುಮಾರಿಗೆ ||
ಚಾಚ್ಯಾವಂಗಾಲಿಗೆ | ಮುಚ್ಚಂಜಿ ನಾಲಿಗೆ ” ||
ಸಂಜೀಯ ಜಾವಿಗೆ | ಬಂದ್ಯಲ್ಲ ಬಾವಿಗೆ || ”
ಹೂವು ಮೃದುತ್ವದ ಪ್ರತೀಕ. ಕಲ್ಲು ಕಾಠಿಣ್ಯದ ಪ್ರತೀಕ.
(‘ವಜ್ರಾದಪಿ ಕಠೋರಾಣಿ, ಮೃದೂನಿ ಕುಸುಮಾದಪಿ’ ಎನ್ನುವ ಕಾಳಿದಾಸನ ವಾಕ್ಯವನ್ನು ನೆನಪಿಸಿಕೊಳ್ಳಿ.) ಕಲ್ಲುಮನಸ್ಸಿನ ಕಲ್ಲನ್ನೇ ಈ ಹೂವುಗಳು ಕೇಳುತ್ತವೆ:
“ ಕಳಸೋದೆ ನೀರಿಗೆ , ಇಂಥ ಸುಕುಮಾರಿಗೆ ? ಅದೂ ಸಹ ಇಂತಹ ಮುಚ್ಚಂಜೆಯ ವೇಳೆಯಲ್ಲಿ? ”
ಈ ಪ್ರಶ್ನೆಗೆ ಆ ಕಲ್ಲು ಸಹ ಕರಗಿರಬಹುದೆ?
ಕಾಲವನ್ನು ಗುರುತಿಸಲು ಮನುಷ್ಯರಿಗೆ ಕಾಲಯಂತ್ರವೆನ್ನುವ ಸಾಧನವಿದೆ. ಮರ, ಗಿಡ, ಹೂವು ಮೊದಲಾದ ನೈಸರ್ಗಿಕ ವಸ್ತುಗಳು ಕಾಲವನ್ನು ಹೇಗೆ ಗುರುತಿಸುತ್ತಿವೆ?
“ಚಾಚ್ಯಾವಂಗಾಲಿಗೆ | ಮುಚ್ಚಂಜಿ ನಾಲಿಗೆ ” ||
ಮೂರೂಸಂಜೆಯ ನಾಲಿಗೆ (=ಮುಳುಗುತ್ತಿರುವ ಸೂರ್ಯಕಿರಣಗಳು) ಇವಳ ಅಂಗಾಲನ್ನು ಸ್ಪರ್ಶಿಸುತ್ತಿವೆ. ಇದು ಹೊತ್ತು ಮುಳುಗುವ ಸಮಯ. ಇಂತಹ ಸಮಯದಲ್ಲಿ ಯಾರಾದರೂ ಇಂತಹ ಪುಟ್ಟ ಹುಡುಗೆಯನ್ನು ನೀರು ತರಲು ಕಳಿಸಬಹುದೆ?
ತಮ್ಮ ಪ್ರಶ್ನೆಗೆ ಉತ್ತರಿಸುವರಾರೂ ಇಲ್ಲವೆಂದು ಆ ಹೂವುಗಳು ಆ ಹುಡುಗೆಯನ್ನೇ ಕೇಳುತ್ತವೆ:
“ಯಾಕವ್ವಾ, ಸಂಜೀಯ ಜಾವಿಗೆ ಬಂದ್ಯಲ್ಲ ಬಾವಿಗೆ ? ”
ಯಾರಿಂದಲೂ ಉತ್ತರ ಸಿಗದಿದ್ದಾಗ, ಆ ಹೂವುಗಳು ತಮ್ಮ ಮಾತಿಗಾಗಿ ತಾವೇ ನಾಚಿಕೊಳ್ಳುತ್ತವೆ. (ಹೂವುಗಳು ನಾಚಿಕೊಳ್ಳುವದೆಂದರೇನು? ಕೆಲವು ಹೂವುಗಳು ಸಂಜೆಯಾದಾಗ ಮುಚ್ಚಿಕೊಳ್ಳುತ್ತವೆ.) ಮೃದು ಸ್ವಭಾವದ ಆ ಹೂವುಗಳ ನಾಚಿಗೆಯ ಭಾವನೆಯು ಮಾತಿನಲ್ಲಿ ಹೇಳಲು ಸಾಧ್ಯವಾಗದಂತಹದು. (ಅದಕ್ಕಾಗಿಯೇ ಅವು ಮುಚ್ಚಿಕೊಳ್ಳುವದು.)
“ಮಾತೀಗು ಆಚೆಗೆ | ಮೀರಿದ್ದ ನಾಚಿಗೆ ||
ಮುಸುಕ್ಯಾವ ಹೂವಿಗೆ | ಬಂದೀಯೆ ಬಾವಿಗೆ ||
ಗಿಲುಕೆಂಬೊ ಬಳಿಗೆ | ಕೆಲಸೊಂದೊ ಗಳಿಗೆ ||
ಗೆಳತೇರ ಒಂದಿದೆ | ಸೇದಿದೆ ಬಿಂದಿಗೆ ||
ಸಂಜೀಯ ಜಾವಿಗೆ | ಬಂದೀಯೆ ಬಾವಿಗೆ ||”
ಈ ಬಾಲೆಯಾದರೊ ಬಳೆಗಳನ್ನು ಗಿಲುಕೆನ್ನಿಸುತ್ತ, ಒಂದೇ ಗಳಿಗೆಯಲ್ಲಿ ತನ್ನ ಜೊತೆಗಾತಿಯರೊಡನೆ ನೀರು ಸೇದಿಕೊಂಡು, ತನ್ನ ಬಿಂದಿಗೆಯನ್ನು ತುಂಬಿಕೊಂಡು ಈಗ ಮರಳಿ ಹೋಗುತ್ತಿದ್ದಾಳೆ !
“ಮೂಗಿನ ನೇರಿಗೆ | ಹೊರಳೀದೆ ಊರಿಗೆ ||
ತಲಿಮ್ಯಾಲ ಬಿಂದಿಗೆ | ಕಾಲಾಗ ಅಂದಿಗೆ ||
ತುಂ ತುಮುಕು ತುಂಬಿದೆ | ಬಿಂದೀಗೆ ಅಂತಿದೆ ||
ಝಣ್ಝಣ ಅಂದಿಗೆ | ಅಂದಾವ ಹೊಂದಿಗೆ ||
ಸಂಜೀಯ ಜಾವಿಗೆ | ಹೋಗಿದ್ದೆ ಬಾವಿಗೆ || ”
ಮರಳುತ್ತಿರುವ ಈ ಬಾಲೆಯ ತಲೆಯ ಮೇಲೆ ಇರುವದು ಬಿಂದಿಗೆ
ಹಾಗೂ ಕಾಲಲ್ಲಿ ಇರುವದು ಅಂದಿಗೆ ; ಈ ವರ್ಣನೆಯನ್ನು ಆಪಾದಮಸ್ತಕ ವರ್ಣನೆ ಎನ್ನಬಹುದಲ್ಲವೆ?
ತಲೆಯ ಮೇಲಿನ ಬಿಂದಿಗೆಯು ತುಂ ತುಂ ಎಂದು ಧ್ವನಿಸುತ್ತಿದ್ದರೆ, ಕಾಲೊಳಗಿನ ಅಂದಿಗೆಗಳು ಝಣ್ ಝಣ್ ಎನ್ನುತ್ತಿವೆ. ಬಿಂದಿಗೆಯ ಹಾಗೂ ಅಂದಿಗೆಯ ಧ್ವನಿಗಳು ಸಮತಾಳದಲ್ಲಿ ಸಂವಾದಿಯಾಗಿ ಹೊಂದಿಕೊಂಡಿವೆ !
ಕುಡಿಯಲು ಸಿಹಿನೀರು ತರಲು ಹೋದ ಬಾಲೆ ಒಂದು ಸಾರಿಗೆ ನೀರು ತಂದಳು. ಅಷ್ಟೇ ಸಾಕು, ಅವಳ ಮುಖದ ಮೇಲೆಲ್ಲ ಬೆವರಿನ ಹನಿಗಳು ಮೂಡಿವೆ. ತಂದೆಯ ಕಣ್ಣಿಗೆ ಇದು ಮುಂಜಾವಿನಲ್ಲಿ ಹೂವಿಗೆ ಮುಸುಕಿದ ಇಬ್ಬನಿಯಂತೆ ಕಾಣುವದು. ಈ ಬೆವರಿನ ಹನಿಗಳು ಮುತ್ತಿನ ಹನಿಗಳಂತೆ ಅವನಿಗೆ ಕಾಣುವವು.
“ಒಂದೇನೆ ಬಾರಿಗೆ | ಹೋದೆ ಸೀ-ನೀರಿಗೆ ||
ಬೆವರೀನ ಸಾರಿಗೆ | ತಂದೀದಿ ಯಾರಿಗೆ ||
ಇಬ್ಬನಿ ಹೂವಿಗೆ | ನಸುಕಿನ ಜಾವಿಗೆ ||
ಮುತ್ತ್ಹನಿ ಮಾರಿಗೆ | ಮುತ್ತ್ಯಾವೊ ನಾರಿಗೆ ||
ಸಂಜೀಯ ಜಾವಿಗೆ | ಹೋಗಿಯು ಬಾವಿಗೆ ||”
ಸಂಜೆಯ ಸಮಯದಲ್ಲಿ ನೀರು ತಂದರೂ ಸಹ, ಮುಂಜಾನೆಯ ಇಬ್ಬನಿಗಳು ಮುಖದಲ್ಲಿ ಕಾಣುತ್ತಿವೆಯಲ್ಲ ಎಂದು ಅವನಿಗೆ ಅಚ್ಚರಿಯಾಗುತ್ತಿದೆ. ತನ್ನ ಮಗಳ ಮೊಗವು ಮುಂಜಾನೆಯ ಹೂವಿನಂತೆ ಯಾವಾಗಲೂ fresh ಆಗಿಯೇ ಇರುವದು ಎಂದು ಅವನ ಭಾವನೆಯೆ?
ಆಟವಾಡುವ ವಯಸ್ಸಿನ ಬಾಲೆ ಇವಳು. ಇವಳಿಗೆ ಕೆಲಸವೆಲ್ಲವೂ ಆಟವೇ! ಈ ಪುಟ್ಟ ಗರತಿಯ ಇಂತಹ ಅಚ್ಚುಕಟ್ಟಾದ ವಿಧಾನವನ್ನು ತಂದೆ ಮೆಚ್ಚಿಕೊಳ್ಳುತ್ತಾನೆ. ಅವನ ಮನಸ್ಸು ಕುಣಿಯುತ್ತದೆ. ಈ ಆಟವನ್ನು ನೋಡಿದ ಜನರೂ ಅನೇಕರು. ಅವರ ‘ಕಣ್ಣು’ ಇವಳಿಗೆ ತಾಕಬಾರದಲ್ಲ ! ಅದಕ್ಕಾಗಿ ತಂದೆ ಇವಳಿಗೆ ನೀವಾಳಿಸುತ್ತಾನೆ.
“ಕೆಲಸಾನ ಆಟಿಗೆ | ಮಾಡುವ ಸೂಟಿಗೆ |
ಹಸನಾದ ಧರತಿಗೆ | ಮೆಚ್ಚಿದೆ ಗರತಿಗೆ ||
ಕುಣಿಸಿದೆ ಇಂದಿಗೆ | ಕಣ್ಬಿಟ್ಟ ಮಂದಿಗೆ ||
ನೀವಾಳಿ ದಿಟ್ಟಿಗೆ | ಕಣ್ಣೆಲ್ಲ ಒಟ್ಟಿಗೆ ||
ಸಂಜೀಯ ಜಾವಿಗೆ | ಹೋಗಿದ್ದ್ಯೆ ಬಾವಿಗೆ ||”
ಕವಿ ತನ್ನ ಸವಿ ಅನುಭವವನ್ನು ಮತ್ತೆ ನೆನಪಿಸಿಕೊಳ್ಳುತ್ತಾನೆ.
“ಮಂಗಲೆಯೊಂದಿಗೆ | ಹಿಗ್ಗಾಯ್ತು ತಂದೆಗೆ ||
ಕುಣಿಸ್ಯಾಡಿ ಕೂಸಿಗೆ | ಅರಳಿಸಿ ಆಸೆಗೆ ||
ರಾಗದ ಸಾಟಿಗೆ | ತೂಗ್ಯಾಡೊ ಧಾಟಿಗೆ ||
ಒಲಿದಾಡೊ ರೀತಿಗೆ | ಹಾಡ್ಯಾನ ಗೀತಿಗೆ ||
ಸಂಜೀಯ ಜಾವಿಗೆ | ಹೊರಟೀದಿ ಬಾವಿಗೆ ||”
ಮೊದಲನೆಯ ನುಡಿಯು ಕೊನೆಯ ನುಡಿಯಂತೆಯೇ ಕಾಣುತ್ತಿದೆ. ಆದರೆ ಮೊದಲನೆಯ ನುಡಿಯ ನಾಲ್ಕನೆಯ ಸಾಲಿನಲ್ಲಿ “ ಹಾಡ್ಯಾನೊ ಗೀತಿಗೆ ” ಎನ್ನುವ ಉಲ್ಲಾಸಮಯ ಪ್ರಾರಂಭವಿದ್ದರೆ, ಕೊನೆಯ ನುಡಿಯ ನಾಲ್ಕನೆಯ ಸಾಲಿನಲ್ಲಿ “ ಹಾಡ್ಯಾನ ಗೀತಿಗೆ ” ಎನ್ನುವ ಮಂಗಲಮುಕ್ತಾಯವಿದೆ.
ಬೇಂದ್ರೆಯವರ ಈ ಕವನದ ಎರಡು ವೈಶಿಷ್ಟ್ಯಗಳನ್ನು ಇಲ್ಲಿ ಗಮನಿಸಬಹುದು.
ಮೊದಲನೆಯದು ಸಹಜ ಛಂದಸ್ಸು , ಅಂದರೆ ಕಾವ್ಯದ contentಗೆ ಹೊಂದಿಕೊಳ್ಳುವ metre.
ಎರಡನೆಯದು, ನಿಸರ್ಗದ ವಸ್ತುಗಳಾದ ಹೂವು , ಕಲ್ಲು ಇತ್ಯಾದಿಗಳೊಡನೆ ಕವನ ಹೊಂದಿದ ತಾದಾತ್ಮ್ಯ.
ಈ ಕವನವು ಕೇವಲ ಪುಟ್ಟ ಬಾಲೆಯ ಬಗೆಗಿನ ಕವನವಲ್ಲ. ಇದು ನಿಸರ್ಗವಸ್ತುಗಳ ಬಗೆಗಿನ ಕವನವೂ ಹೌದು.
ಅಂತೆಯೇ ಕವನ ಮುಗಿದ ಬಳಿಕವೂ ಸಹ ಕೆಳಗಿನ ಸಾಲುಗಳು ನಮ್ಮ ಮನಸ್ಸಿನಲ್ಲಿ ರಿಂಗಣಿಸುತ್ತಲೇ ಉಳಿದು ಬಿಡುತ್ತವೆ:
“ಗುಲಬಾಕ್ಷಿ, ಮಲ್ಲಿಗೆ ಕೇಳತಾವ ಕಲ್ಲಿಗೆ
ಕಳಸೋದೆ ನೀರಿಗೆ, ಇಂಥ ಸುಕುಮಾರಿಗೆ ?”
Subscribe to:
Posts (Atom)