ಮೈಸೂರೆನ್ನಿ, ಕನ್ನಡವೆನ್ನಿ,
ಮಲ್ಲಿಗೆಯನ್ನಿ ಒಂದೇ.
ಒಡೆಯರ ಮುಕುಟದ ರತ್ನವಿದೆನ್ನಿ
ಒಡೆಯರ ಕನ್ನಡವೆನ್ನಿ
ಇರುಳನು ಕಾಣದ ಕನ್ನಡವೆನ್ನಿ
ಒಡೆಯದ ಕನ್ನಡವೆನ್ನಿ
ಕವಿಗಳು ಬಳಸುವ ಭಾಷೆಯಿದೆನ್ನಿ
ಒಳಗಿನ ಹೂರಣ ಒಂದೇ.
‘ಮೈಸೂರು ಮಲ್ಲಿಗೆ’ಯ ಕವಿ ಕೆ.ಎಸ್. ನರಸಿಂಹಸ್ವಾಮಿಯವರು ತಮ್ಮ ಕವನಸಂಕಲನದ ಸ್ವಾಗತ ಪುಟದಲ್ಲಿ, ಕನ್ನಡ ಭಾಷೆಯನ್ನು ಬಣ್ಣಿಸುವ ಒಂದು ಪುಟ್ಟ ಕವನವನ್ನು ಬರೆದಿದ್ದಾರೆ. ಆ ಪುಟ್ಟಕವನದಲ್ಲಿ ಅವರು ಕನ್ನಡವನ್ನು ‘ಕವಿಗಳು ಬಳಸುವ ಭಾಷೆ’ ಎಂದು ಕರೆದಿದ್ದಾರೆ. ಕನ್ನಡಕ್ಕೆ ಸಂದಿರಬಹುದಾದ,ಸಲ್ಲಬಹುದಾದ ಅತ್ಯುಚ್ಚ ಪ್ರಶಂಸೆ ಇದು.
ನಮ್ಮ ಕನ್ನಡ ಭಾಷೆ ಅವಿದ್ಯಾವಂತರ ಭಾಷೆ ಅಲ್ಲ. ಇದರಲ್ಲಿ ಅಪಾರ ಪದಸಂಪತ್ತಿದೆ. ಮನಸ್ವಿನಿಯಂತೆ ಬಳುಕಬಲ್ಲ ಸಾಮರ್ಥ್ಯ ಈ ಭಾಷೆಗಿದೆ. ಶಿಷ್ಟರು (elite) ಕಾವ್ಯರಚನೆಗೆ ಬಳಸಲು ಇಷ್ಟಪಡುವ ಭಾಷೆ ಇದು ಎನ್ನುವದು ಕೆ.ಎಸ್. ನರಸಿಂಹಸ್ವಾಮಿಯವರ ಅಭಿಮತ. ಆದರೆ ಈ ಭಾಷೆಯನ್ನು ಶಿಷ್ಟರಷ್ಟೇ ಅಲ್ಲ, ಜಾನಪದ ಕವಿಗಳೂ ಸಹ ಇಷ್ಟಪಟ್ಟೇ ಬಳಸಿದ್ದಾರೆ. ಕನ್ನಡ ಜಾನಪದ ಕಾವ್ಯದ ಮೇಲ್ಮೆ ಶಿಷ್ಟಕಾವ್ಯಕ್ಕಿಂತ ಏನೂ ಕಡಿಮೆ ಇಲ್ಲ.
ಕನ್ನಡ ಭಾಷೆಗೇನೋ ಅಪಾರ ಸಾಮರ್ಥ್ಯವಿದೆ. ಆದರೆ ಬಳಸಿದ ಬಟ್ಟೆಯನ್ನೇ ಬಳಸಿದರೆ ಹಳಸಲು ವಾಸನೆ ಬರಬಹುದು. ಅಲ್ಲದೆ, ಸಾಮಾಜಿಕ ಸ್ಥಿತಿ ಬದಲಾದಂತೆ ಕಾವ್ಯರಚನಾಶೈಲಿಯೂ ಬದಲಾಗಬೇಕಾಗುತ್ತದೆ. ಈ ಬದಲಾವಣೆಯು ಅನೇಕ ಸಲ ಕವಿಯ ಆಂತರಿಕ ಅವಶ್ಯಕತೆಯೂ ಆಗಿರುತ್ತದೆ.
ಸಾವಿರಾರು ವರ್ಷಗಳವರೆಗೆ ಕನ್ನಡ ನಾಡನ್ನು ಆಳುವವರ ಭಾಷೆ ಕನ್ನಡವಾಗಿರಲಿಲ್ಲ. ಹೀಗಾಗಿ ಆ ಕಾಲದಲ್ಲಿ ಸಂಸ್ಕೃತ ಹಾಗೂ ಪ್ರಾಕೃತಗಳೇ ಕವಿಗಳು ಬಳಸುವ ಭಾಷೆಗಳಾಗಿದ್ದವು. ಕನ್ನಡ ನಾಡಿನ ರಾಜರು ಕನ್ನಡವನ್ನು ನುಡಿಯುವವರೇ ಆದಬಳಿಕ ಈ ಪರಿಸ್ಥಿತಿಯು ಬದಲಾಗಲು ಆರಂಭಿಸಿತು. ಕನ್ನಡ ನಾಡಿಗೆ ಸಾಮ್ರಾಜ್ಯದ ಪಟ್ಟ ದೊರೆತ ಕಾಲದಲ್ಲಿ ಕನ್ನಡ ಭಾಷೆಗೂ ರಾಜಭಾಷೆಯ ಸ್ಥಾನಮಾನ ದೊರೆಯಿತು. ಈ ಸಂದರ್ಭದಲ್ಲಿ ಕನ್ನಡ ನಾಡಿನ ಕವಿಗಳು ರಾಜಭಾಷೆಯಾದ ಕನ್ನಡದಲ್ಲಿಯೇ ಕಾವ್ಯರಚನೆಯನ್ನು ಪ್ರಾರಂಭಿಸಿದರು. ಆದರೆ ಕಾವ್ಯಶೈಲಿ ಮಾತ್ರ ಈ ಮೊದಲೇ ಮನ್ನಣೆ ಪಡೆದ ಶಿಷ್ಟಮಾನ್ಯ ಶೈಲಿಯಾಗಿತ್ತು. ಆದುದರಿಂದ ಕನ್ನಡದ ಆದಿಕವಿ ಪಂಪ (ಕ್ರಿ.ಶ.೯೪೦), ಆನಂತರದ ರನ್ನ, ಪೊನ್ನ, ನಾಗಚಂದ್ರ ಮೊದಲಾದವರೆಲ್ಲ ಮಾರ್ಗಶೈಲಿಯಲ್ಲಿಯೇ ಚಂಪೂಕಾವ್ಯರಚನೆ ಮಾಡಿ ಅದ್ಭುತ ಕಾವ್ಯಸೃಷ್ಟಿ ಮಾಡಿದರು. ಕನ್ನಡ ಸಾಮ್ರಾಜ್ಯದ ಉನ್ನತಿಯು ಕನ್ನಡ ಕಾವ್ಯದ ಉನ್ನತಿಗೂ ಕಾರಣವಾಯಿತು. ಈ ಅವಧಿಯನ್ನು ಕನ್ನಡದ Classical Age ಎಂದು ಕರೆಯಬಹುದೇನೊ? ಇಂತಹ ಕಾಲದಲ್ಲಿ ಬರೆದ ಕವಿಗಳು ಮಾರ್ಗ ಶೈಲಿಯಲ್ಲಿಯೇ ಬರೆದರೂ ಸಹ, ಕನ್ನಡದ ದೇಸಿ ಭಾಷೆಯನ್ನು ತಮ್ಮ ಕಾವ್ಯದಲ್ಲಿ ಹದನರಿತು ಬಳಸಿಕೊಂಡಿದ್ದಾರೆ. ಪಂಪನೇ ತನ್ನ ಮಹಾಕಾವ್ಯ ವಿಕ್ರಮಾರ್ಜುನ ವಿಜಯದಲ್ಲಿ ಈ ರೀತಿಯಾಗಿ ಹೇಳಿದ್ದಾನೆ:
“ಬಗೆ ಪೊಸತಪ್ಪುದಾಗಿ ಮೃದು ಬಂಧದೊಳೊಂದುವುದೊಂದಿ ದೇಸಿಯೊಳ್
ಪುಗುವುದು ಪೊಕ್ಕ ಮಾರ್ಗದೊಳೆ ತಳ್ವುದು ತಳ್ತೊಡೆ, ಕಾವ್ಯಬಂಧಮೊ
ಪ್ಪುಗುಮೆಳಮಾವು ಕೆಂದಳಿರ ಪೂವಿನ ಬಿಣ್ಪೊರೆಯಿಂ ಬಳಲ್ದು ತುಂ
ಬಿಗಳಿನೆ ತುಂಬಿ ಕೋಗಿಲೆಯ ಬಗ್ಗಿಸೆ ಸುಗ್ಗಿಯೊಳೊಪ್ಪುವಂತೆವೋಲ್”
ಸಾಮಾಜಿಕ ಹಾಗೂ ವೈಚಾರಿಕ ಕ್ರಾಂತಿಯನ್ನು ಉದ್ದೇಶವಾಗಿಟ್ಟುಕೊಂಡ ಶರಣಚಳವಳಿಯು (ಕ್ರಿಶ.೧೧೫೦) ಕನ್ನಡಕಾವ್ಯದ ಶೈಲಿಯನ್ನೇ ಬದಲಿಸಿತು. ಕವಿಗಳು ಬಳಸುವ ಭಾಷೆಯು ಸಾಮಾನ್ಯರು ಬಳಸುವ ಭಾಷೆಯಾಯಿತು. ಸಾಮಾನ್ಯ ಜನರಿಗಾಗಿ ಬರೆಯುತ್ತಿದ್ದ ಶರಣರು ಆಡುನುಡಿಯಲ್ಲಿಯೇ ತಮ್ಮ ಅಸಾಮಾನ್ಯ ವಚನಗಳನ್ನು ರಚಿಸಿದರು. ಶರಣರ ಅನೇಕ ವಚನಗಳು ಬೋಧನಾತ್ಮಕ ವಚನಗಳಾಗಿದ್ದವು.
ಉದಾಹರಣೆಗೆ: “ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ” ;
“ಛಲ ಬೇಕು ಶರಣಂಗೆ ಪರಧನವನೊಲೆನೆಂಬ” ಇತ್ಯಾದಿ.
ಆದುದರಿಂದಲೆ ಆ ವಚನಕಾರ ಕವಿಗಳ ಭಾಷೆಯೂ ಸಹ ಸರಳ ಹಾಗೂ ನೇರ ಭಾಷೆಯಾಗಿರುತ್ತಿತ್ತು.
ಜೈನಕವಿಗಳಿಗೆ ಶಿಷ್ಟಮಾನ್ಯ ಕಾವ್ಯ ರಚಿಸುವ ಅವಶ್ಯಕತೆ ಇದ್ದರೆ ವೀರಶೈವ ಕವಿಗಳಿಗೆ ಜನಸಾಮಾನ್ಯರಿಗಾಗಿ ಕಾವ್ಯ ರಚಿಸುವ ಅವಶ್ಯಕತೆ ಇತ್ತು. ಹೀಗಾಗಿ ವಚನಕಾರರ ನಂತರ ಬಂದ ವೀರಶೈವ ಕವಿಗಳು ಬಳಸಿದ ಭಾಷೆಯು ಮಾರ್ಗಶೈಲಿಯ ಚಂಪೂರಚನೆಯನ್ನು ತ್ಯಜಿಸಿ ‘ದೇಸಿ ಶೈಲಿ’ಗೆ ಹೊರಳಿತು. ಹರಿಹರ ಹಾಗೂ ರಾಘವಾಂಕರು ಈ ಬದಲಾವಣೆಯ ನೇತಾರರು.
ಶಿವಭಕ್ತರ ಚರಿತ್ರೆಯನ್ನು ಬರೆಯಲು ಹರಿಹರನು (ಕ್ರಿ.ಶ.೧೨೦೦) ರಗಳೆಗಳ ರೂಪವನ್ನು ಬಳಸಿದನು. ಹರಿಹರನ ರಸಾವೇಶದ ಕಥನಕ್ಕೆ, ವರ್ಣನೆಗಳಿಗೆ, ಅನಿಯಮಿತ ಪಾದಸಂಖ್ಯೆಯುಳ್ಳ ರಗಳೆ ಯೋಗ್ಯ ವಾಹನವಾಯಿತು. ಬಸವಣ್ಣನು ಶಿವಪೂಜೆಗೈಯುತ್ತಿರುವಾಗ ಅವನಲ್ಲಿ ಮೂಡಿದ ಸಾತ್ವಿಕ ಆವೇಶವನ್ನು ಹರಿಹರನು ಬಣ್ಣಿಸುವಾಗ ಚಿಕ್ಕ ಚಿಕ್ಕ ಕ್ರಿಯಾಪದಗಳನ್ನೇ ದ್ವಿರುಕ್ತಿಗೊಳಿಸಿ, ಭಾವಾವೇಷವನ್ನು ಸಾಧಿಸುವ ಬಗೆ ಈ ರೀತಿಯಾಗಿದೆ:
ಮಣಿಮಣಿದು ಕುಣಿಕುಣಿದು ಕಲೆಕಲೆದು ನಲಿದಾಡಿ
ತಣಿತಣಿದು ತಕ್ಕೈಸಿ ಮಿಕ್ಕು ಮಲೆಮಲೆದಾಡಿ
ಆಡುತಾಡುತ್ತಲ್ಲಿ ಪೊಗುಳ್ವದೆ ನೆರೆ ಮರೆತು
ನೋಡನೋಡತ್ತಲ್ಲಿ ನೋಟಮಂ ಮಿಗೆ ಮರೆದು
ಕಣ್ಮುಚ್ಚಿ ಗದಗದಿಸಿ ಜೋಲ್ದು ಜೊಂಪಿಸಿ ಬಿದ್ದು
ಉಣ್ಮುವ ಶಿವಾನಂದರಸದ ಹೊನಲೊಳಗಿದ್ದು
ಈಸಾಡಿ ಗಂಗಾಧರನ ಚರಣಮಂ ಪಿಡಿದು
ಲೇಸಾಗಿ ಚಿತ್ತದೊಳು ಸಂಗನಂ ಸೆರೆ ಹಿಡಿದು
ಹರಿಹರನ ಶಿಷ್ಯನಾದ ರಾಘವಾಂಕನಿಗೆ ಷಟ್ಪದಿಗಳ ಮೊದಲಿಗ ಎನ್ನಬಹುದು. ರಾಘವಾಂಕನ ವಿಸ್ತಾರವಾದ ಕಥನಕ್ಕೆ, ನಾಟಕೀಯ ಸಂಭಾಷಣೆಗಳಿಗೆ ವಾರ್ಧಕ ಷಟ್ಪದಿಯೇ ಯೋಗ್ಯವಾದ ಸಾಧನವಾಯಿತು.
ಉದಾಹರಣೆಗಾಗಿ ಹರಿಶ್ಚಂದ್ರಕಾವ್ಯದಲ್ಲಿ ನಕ್ಷತ್ರಿಕನು ವಿಶ್ವಾಮಿತ್ರನಿಗೆ ಹೇಳುವ ಈ ನುಡಿಯೊಂದನ್ನು ನೋಡಿರಿ:
ಬಿಸಿಲಾಗಿ, ಬಿರುಗಾಳಿಯಾಗಿ, ಕಲು ನೆಲವಾಗಿ,
ವಿಷಮಾಗ್ನಿಯಾಗಿ, ನಾನಾ ಕ್ರೂರಮೃಗವಾಗಿ,
ಮಸಗಿ ಘೋರಾರಣ್ಯವಾಗಿ, ಗರ್ಜಿಸಿ ಕವಿದ ಭೂತಬೇತಾಳರಾಗಿ
ಹಸಿವು ನೀರಡಿಕೆ ನಿದ್ರಾಲಸ್ಯವಾಗಿ ಸಂ
ಧಿಸಿ ಹುಂ ಹೊಕ್ಕಲ್ಲಿ ಹೊಕ್ಕು ಧಾವತಿಗೊಳಿಸಿ
ಹುಸಿಗೆ ಹುಂ ಕೊಳಿಸುವೆಂ ಭೂಭೂಜನನೆನ್ನಿಂದ ಬಲ್ಲಿದರಾರೆಂದನು
ಷಟ್ಪದಿಯ ದಾರಿಯಲ್ಲಿ ನಡೆದು, ಆಡುನುಡಿಯ ಭಂಡಾರವನ್ನೇ ಸೂರೆಗೈದವನು ಕುಮಾರವ್ಯಾಸ. (ಕ್ರಿ.ಶ. ೧೪೦೦). ಈತನ ಭಾಷೆಯಲ್ಲಿ ಕನ್ನಡದ ದೇಶಿ ಪದಗಳು ಹಾಗೂ ಕನ್ನಡದಲ್ಲಿ ಬೆರೆತ, ಅರಬಿ, ಪಾರಸಿ ಹಾಗೂ ಮರಾಠಿಯಿಂದ ಬಂದಂತಹ ಅನ್ಯದೇಶಿ ಪದಗಳು ಹೇರಳವಾಗಿವೆ. ರಾಘವಾಂಕನ ವಾರ್ಧಕ ಷಟ್ಪದಿಯು ವಿಸ್ತಾರ ಕಥನಕ್ಕೆ ಯೋಗ್ಯವಾಗುತ್ತಿತ್ತು. ಚುಟುಕಾದ ಪದಗಳಲ್ಲಿ ರಸಸೃಷ್ಟಿಯ ಉದ್ದೇಶವಿಟ್ಟುಕೊಂಡ ಕುಮಾರವ್ಯಾಸನು ಬಳಸಿಕೊಂಡದ್ದು ಭಾಮಿನಿ ಷಟ್ಪದಿಯನ್ನು.
ಆನಂತರದ (ಕ್ರಿ.ಶ. ೧೫೦೦) ವೀರಶೈವ ಕವಿಗಳಾದ ನಿಜಗುಣಿ ಶಿವಯೋಗಿ, ಸರ್ಪಭೂಷಣ ಶಿವಯೋಗಿ ಇವರ ಕಾಲದಲ್ಲಿ ಕನ್ನಡ ಭಾಷೆಯು ಹೊಸಗನ್ನಡಕ್ಕೆ ಹತ್ತಿರವಾಗಿತ್ತು. ಉನ್ನತ ತತ್ವಜ್ಞಾನವನ್ನು ಅವರು ಅಚ್ಚಕನ್ನಡದಲ್ಲಿಯೆ ಸರಳವಾಗಿ ಹೇಳಲು ಶಕ್ತರಾಗಿದ್ದರು. ಮುಪ್ಪಿನ ಷಡಕ್ಷರಿಯವರ ಈ ಗೀತೆ ಅದಕ್ಕೆ ಉದಾಹರಣೆಯಾಗಿದೆ:
ಅವರವರ ದರುಶನಕೆ, ಅವರವರ ವೇಷದಲಿ
ಅವರವರಿಗೆಲ್ಲ ಗುರು ನೀನೊಬ್ಬನೆ
ಅವರವರ ಭಾವಕ್ಕೆ, ಅವರವರ ಭಕ್ತಿಗೆ
ಅವರವರಿಗೆಲ್ಲ ದೇವ ನೀನೊಬ್ಬನೆ
ಹೋರಾಟವಿಕ್ಕಿಸಲು ಬೇರಾದೆಯಲ್ಲದೆ
ಬೇರುಂಟೆ ಜಗದೊಳಗೆ ಎಲೆ ದೇವನೆ!
ಕ್ರಿ.ಶ.೧೭೦೦ರ ಸುಮಾರಿನಲ್ಲಿ ಜೀವಿಸಿದ ಸರ್ವಜ್ಞನು ಲೋಕಹಿತದ ಪದಗಳನು ಬರೆಯುವ ಉದ್ದೇಶದಿಂದ ತನ್ನ ಕಾವ್ಯಕ್ಕೆ ಜನಪದ ಛಂದಸ್ಸಾದ ತ್ರಿಪದಿಯನ್ನು ಬಳಸಿ ಜನಪದ ಕವಿಯೇ ಆದನು. ಇದೇ ಕಾಲದ (ಕ್ರಿ.ಶ.೧೬೭೫) ರಂಗನಾಥನು ಕವಿಗಳು ಬಳಸುವ ಭಾಷೆಯಾದ ಕನ್ನಡದ ಬಗೆಗೆ ಒಂದು ಅಂತಿಮ ನಿರ್ಣಯ ಕೊಟ್ಟಿದ್ದಾನೆ:
ಸುಲಿದ ಬಾಳೆಯ ಹಣ್ಣಿನಂದದಿ
ಕಳೆದ ಸಿಗುರಿನ ಕಬ್ಬಿನಂದದಿ
ಅಳಿದ ಉಷ್ಣದ ಹಾಲಿನಂದದಿ ಸುಲಭವಾಗಿರ್ಪ
ಲಲಿತವಹ ಕನ್ನಡದ ನುಡಿಯಲಿ
ತಿಳಿದು ತನ್ನೊಳು ತನ್ನ ಮೋಕ್ಷವ
ಗಳಿಸಿಕೊಂಡರೆ ಸಾಲದೆ? ಸಂಸ್ಕೃತದಲಿನ್ನೇನು?
ಈ ರೀತಿಯಾಗಿ ಕವಿಗಳು ಬಳಸುವ ಭಾಷೆಯಾದ ಕನ್ನಡವು ಆದಿಕವಿ ಪಂಪನಿಂದ ಸರ್ವಜ್ಞನವರೆಗೆ ವಿವಿಧ ರೀತಿಯಲ್ಲಿ ತನ್ನ ಬೆಡಗನ್ನು ತೋರಿಸಿ ಕನ್ನಡಿಗರನ್ನು ನಲಿಸಿತು. ಹಳೆಗನ್ನಡವು ನಡುಗನ್ನಡಕ್ಕೆ ಹಾಗೂ ನಡುಗನ್ನಡವು ಹೊಸಗನ್ನಡಕ್ಕೆ ಬದಲಾದಂತೆ ಕವಿಗಳಲ್ಲಿ ಕೇವಲ ಭಾಷೆಯ ಬದಲಾವಣೆ ಅಷ್ಟೇ ಅಲ್ಲ, ಸಂಕೇತಗಳಲ್ಲಿಯೂ ಸಹ ಆಶ್ಚರ್ಯಕರ ಬದಲಾವಣೆಗಳಾದವು.
ಉದಾಹರಣೆಗೆ ಮಾರ್ಗಸಂಪ್ರದಾಯದಲ್ಲಿ ವಸಂತ ಋತುವಿನ ಆಗಮನದ ಸಂಕೇತವಾಗಿದ್ದ, ಅಲಂಕಾರಶಾಸ್ತ್ರದ ಪುಟ್ಟ ಒಡವೆಯಾಗಿದ್ದ, ಕನ್ನಡ ಕವಿಗಳಿಗೆ ಪರಮಾಪ್ತವಾದ ಕೋಗಿಲೆಯು, ನಿಜಗುಣಿ ಶಿವಯೋಗಿಗಳ ಕವನದಲ್ಲಿ (“ಕೋಗಿಲೆ, ಚೆಲ್ವ ಕೋಗಿಲೆ”) ಮನಸ್ಸಿನ ಸಂಕೇತವಾಗಿದೆ. ನವೋದಯ ಕಾವ್ಯದಲ್ಲಿ ಬೇಂದ್ರೆಯವರು ತಮ್ಮ ಕವನಗಳಲ್ಲಿ ನಿಜಗುಣಿ ಶಿವಯೋಗಿಗಳನ್ನೇ ಅನುಸರಿಸಿದ್ದಾರೆ. (“ಮನದ ಮಾಮರದ ಕೊನಿಗೆ ಕೋಗಿಲೊಂದು ಕೂಗುತಿತ್ತ”). ಆದರೆ ಕುವೆಂಪು ಕೋಗಿಲೆಯನ್ನು ಕವಿಯ ಸ್ವಾತಂತ್ರ್ಯದ ಸಂಕೇತವಾಗಿ ಬಳಸಿದ್ದಾರೆ. (“ಕೋಗಿಲೆ ಹಾಗು ಸೋವಿಯಟ್ ರಶಿಯಾ”). ನವ್ಯಕಾವ್ಯದಲ್ಲಿ ನಿಸಾರ ಅಹಮದರು ಕಾಗೆಯನ್ನು ಕೋಗಿಲೆಗೆ ಪರ್ಯಾಯ ಸಂಕೇತವಾಗಿ ಬಳಸಿದ್ದಾರೆ. (“ಕಾಗೆ ಕೂಗದ ಮುನ್ನ ಏನಿತ್ತಣ್ಣ ಜಗದಿ?”)
ಹಳೆಯ ಛಂದೋಬದ್ಧ ಕಾವ್ಯಮಾರ್ಗವನ್ನು ತ್ಯಜಿಸಿ, ಕನ್ನಡ ಕಾವ್ಯಕ್ಕೆ ನವೋದಯದ ಮಾರ್ಗವನ್ನು ತೋರಿಸುವ ಅವಶ್ಯಕತೆಯನ್ನು ಕಂಡವರು ಕನ್ನಡದ ಕಣ್ವ ಶ್ರೀ ಬಿ.ಎಮ್. ಶ್ರೀಕಂಠಯ್ಯನವರು. ಇವರ ಸಮಯದಲ್ಲಿ, ಆಂಗ್ಲ ಪ್ರಭುತ್ವವು ತನ್ನ ವಿಚಾರ ಹಾಗು ತನ್ನ ಶಿಕ್ಷಣವನ್ನು ಭಾರತದ ಮೇಲೆ ಹೇರಿತ್ತು. ಹೀಗಾಗಿ ಆಂಗ್ಲ ಸಾಹಿತ್ಯದ ಪ್ರಭಾವವು ಭಾರತೀಯರ ಮೇಲೆ, ಅದರಂತೆ ಕನ್ನಡಿಗರ ಮೇಲೂ ಆಗಿತ್ತು.ಆಂಗ್ಲ ಸಾಹಿತ್ಯದ ಸವಿಯನ್ನು ಉಂಡ ಶ್ರೀಕಂಠಯ್ಯನವರು ಆಂಗ್ಲಭಾಷೆಯ ಭಾವಗೀತೆಗಳ ಸೊಗಸನ್ನು ಕನ್ನಡಕ್ಕೆ ತರಲು ಬಹುವಾಗಿ ಶ್ರಮಿಸಿದರು. ಅವರ ಮಾತಿನಲ್ಲಿಯೇ ಹೇಳುವದಾದರೆ:
“ಅವಳ ಉಡುಗೆ ಇವಳಿಗಿಟ್ಟು ನೋಡಬಯಸಿದೆ,
ಇವಳ ತೊಡುಗೆ ಅವಳಿಗಿಟ್ಟು ಹಾಡಬಯಸಿದೆ.”
ಅದುದರಿಂದ ಇಂದಿನ ಕವಿಗಳು ಬಳಸುವ ಕನ್ನಡ ಭಾಷೆಯು ಶ್ರೀಕಂಠಯ್ಯನವರ ಕೊಡುಗೆ ಎನ್ನಬಹುದು.
ನವೋದಯ ಕಾಲವು ಆದರ್ಶದ ಕಾಲ, ನಿಸರ್ಗಪ್ರೇಮದ ಕಾಲ. ಇದರ ಫಲವಾಗಿ ನವೋದಯದ ಕವಿಗಳು ನಾಡಪ್ರೇಮದ ಬಗೆಗೆ, ನಿಸರ್ಗದ ಬಗೆಗೆ , ಕನ್ನಡದ ಅಭಿಮಾನದ ಬಗೆಗೆ ವಿಪುಲವಾಗಿ ಬರೆದರು. ನವೋದಯ ಕಾಲದ ಪ್ರಮುಖ ಕವಿಗಳೆಂದರೆ ಬೇಂದ್ರೆ, ಕುವೆಂಪು, ಕೆ.ಎಸ್.ನರಸಿಂಹಸ್ವಾಮಿ ಹಾಗೂ ಜಿ.ಪಿ.ರಾಜರತ್ನಮ್. ಈ ನಾಲ್ವರೂ ಕಾವ್ಯರಚನೆಯಲ್ಲಿ ತಮ್ಮ ಅವಶ್ಯಕತೆಗಳಿಗೆ ಅನುಗುಣವಾಗಿ ತಮ್ಮದೇ ಕವಿಭಾಷೆಯನ್ನು ರೂಪಿಸಿದರು. ಈ ಕವಿಗಳಲ್ಲಿ ಬೇಂದ್ರೆಯವರದು ಸರಳ ಭಾಷೆಯಾದರೆ, ಕುವೆಂಪುರವರದು ಅಲಂಕಾರಿಕ ಭಾಷೆ. ನರಸಿಂಹಸ್ವಾಮಿಯವರದು ಆಪ್ತಭಾಷೆ. ರಾಜರತ್ನಮ್ ಅವರದು ಆಡುನುಡಿಯ ವೇಷವನ್ನು ತೊಟ್ಟ ಭಾಷೆ.
ಬೇಂದ್ರೆಯವರದು ಅತ್ಯಂತ inter active ಸ್ವಭಾವ. ಅವರ ಪಾಂಡಿತ್ಯವೂ ಅಗಾಧವಾದದ್ದು. ಅದರೊಡನೆ ಅವರಿಗೆ ಒಲಿದ ಬಂದ ಮಾತಿನ ಚತುರತೆ. ಹಾಗೆಂದು ಅವರು ಬರೆಯುವವದು ಪಂಡಿತರಿಗಾಗಿ ಅಲ್ಲ. ಸಂತೆಯಲ್ಲಿಯ ಸಾಮಾನ್ಯ ಮನುಷ್ಯನನ್ನು ಗೆಳೆಯನಂತೆ ಗಣಿಸಿ ಹರಟೆ ಹೊಡೆಯುವ ರೀತಿಯ ಕಾವ್ಯಭಾಷೆ ಅವರದು. ಇವೆಲ್ಲಾ ಒಟ್ಟುಗೂಡಿ ಅವರ ಕವನದ ಭಾಷೆಯನ್ನು ರೂಪಿಸಿವೆ.
ಬೇಂದ್ರೆ ಕಾವ್ಯವು ಜನಪದ ಸತ್ವವನ್ನು ಹೀರಿದ ಕಾವ್ಯ. ಅವರು ತಮ್ಮ ಕೇಳುಗರಿಂದ ಬಯಸುತ್ತಿದ್ದದ್ದು ಶ್ರಾವಕನ ಸಹ-ಅನುಭೂತಿಯನ್ನು.
“ಎನ್ನ ಪಾಡೆನಗಿರಲಿ ಅದರ ಹಾಡನ್ನಷ್ಟೆ ನೀಡುವೆನು ರಸಿಕ ನಿನಗೆ
ಕಲ್ಲುಸಕ್ಕರೆಯಂಥ ನಿನ್ನೆದೆಯು ಕರಗಿದರೆ, ಆ ಸವಿಯ ಹಣಿಸು ನನಗೆ.”, ಎನ್ನುತ್ತಾರೆ ಬೇಂದ್ರೆ.
ಈ ತರಹದ ಕಾವ್ಯದ ಅತ್ಯುತ್ತಮ ಉದಾಹರಣೆಗಳೆಂದರೆ ‘ಬೆಳದಿಂಗಳ ನೋಡs’, ‘ಇನ್ನೂ ಯಾಕ ಬರಲಿಲ್ಲವ್ವಾ ಹುಬ್ಬಳ್ಳಿಯಾವಾ’ ಇತ್ಯಾದಿ.
ಆದರೆ ಈ ಕಾರಣದಿಂದಲೇ ಅವರ ಭಾಷೆ ಕೆಲವೊಮ್ಮೆ ಅತಿ ಸರಳವಾಗಿ ಬಿಡುತ್ತದೆ. ಒಳಗಿನ ಭಾವ ಎಷ್ಟೇ ಸಂಕೀರ್ಣವಾಗಿರಲಿ, ಹೊರಗಿನ ಮುಖಮುದ್ರೆ ಅತಿ ಸರಳ.
ಇದು ಅವರ ಕಾವ್ಯಭಾಷೆಯ ದೋಷವೆಂದೇ ಹೇಳಬೇಕಾಗುತ್ತದೆ.
ಉದಾಹರಣೆಗೆ, ‘ಕರಡಿ ಕುಣಿತ’ವೆನ್ನುವ ಅವರ ಕವನದ ಈ ನುಡಿಯನ್ನು ನೋಡಿರಿ:
“ಯಾವ ಕಾಡಡವಿಯಲಿ ಜೇನುಂಡು ಬೆಳೆದಿದ್ದ
ಜಾಂಬುವಂತನ ಹಿಡಿದು ತಂದಾನೊ
ಧಣಿಯರ ಮನೆ ಮುಂದೆ ಕಾವಲು ಮಾಡಣ್ಣ
ಧಣಿ ದಾನ ಕೊಡುವನು ಎಂದಾನೊ.”
ಕರಡಿ ಕುಣಿಸುವವನ ಸಾಧಾರಣ ಮಾತುಗಳಂತೆ ತೋರುವ ಈ ಸಾಲುಗಳಲ್ಲಿ ಹುದುಗಿದ ಅರ್ಥ ಅಸಾಧಾರಣವಾದದ್ದು. ಕಾಡಾಡಿಯಾದ ಮಾನವನು, ತನ್ನ ಆದಿಮಾನವನ ಅವಸ್ಥೆಯಲ್ಲಿ ಸ್ವತಂತ್ರವಾಗಿ ಜೀವಿಸುತ್ತಿದ್ದವನು, ನಾಗರಿಕತೆ ಬೆಳೆದಂತೆ feudal ವ್ಯವಸ್ಥೆಗೆ ಹೇಗೆ ಬಲಿಯಾದನು ಎನ್ನುವ ವರ್ಣನೆ ಇಲ್ಲಿದೆ.
ಈ ಆದಿಮಾನವ ಸಮಾಜ ಎಷ್ಟು ಹಳೆಯದು ಆತ ಎಷ್ಟು ಸ್ವಚ್ಛಂದವಾಗಿ ಬದಕುತ್ತಿದ್ದ ಎನ್ನುವದನ್ನು ಈ ಮತ್ತೊಂದು ನುಡಿಯಲ್ಲಿ ನೋಡಬಹುದು:
“ತ್ರೇತಾಯುಗ ರಾಮನ್ನ, ದ್ವಾಪರದ ಕೃಷ್ಣನ್ನ
ಕಲಿಯುಗದ ಕಲ್ಕೀನ ಕಂಡಾನೋ
ಜಂಬೂನದಿ ದಂಡೀಯ ಜಾಂಬುನೀರಲ ಹಣ್ಣು
ಕಲಿಯುಗದ ಕೊನೆಗೀವ ಉಂಡಾನೋ”
(ಜಾಂಬುವಂತ ಎನ್ನುವ communityಯು ಭಾರತದ ಅತ್ಯಂತ ಹಳೆಯ communityಗಳಲ್ಲಿ ಒಂದು ಎನ್ನುವದನ್ನು ಗಮನಿಸಬೇಕು.)
ಈ ವಿಶೇಷ ಅರ್ಥವು ಕವನದ ಸರಳ ಭಾಷೆಯಲ್ಲಿ ಎದ್ದು ಕಾಣುವದಿಲ್ಲ.
“ಕರಿಮರಿ ನಾಯಿ” ಎನ್ನುವ ಅವರ ಮತ್ತೊಂದು ಕವನದಲ್ಲಿಯೂ ಈ ದೋಷವನ್ನು ಕಾಣಬಹುದು.
“ಕರಿಮರಿ ನಾಯಿ ಕುಂಯ್ ಗುಡುತಿತ್ತು
ಭಟ್ಟರ ಬಾಯಿ ಒಟಗುಡತಿತ್ತು
ಬೆಚ್ಚನ ಮನೆಯ ಹೊಚ್ಚಲದೊಳಗೆ
ನಿಂತರು ಭಟ್ಟರು ಹಣಕುತ ಹೊರಗೆ”
ಈ ನುಡಿಯಲ್ಲಿಯ ‘ಭಟ್ಟರ ಬಾಯಿ ಒಟಗುಡತಿತ್ತು’ ಎನ್ನುವ ಸಾಲಿನಲ್ಲಿ ಅರ್ಥಹೀನ ಪುರೋಹಿತಶಾಹಿಯ ಪ್ರಾಬಲ್ಯವನ್ನೂ, ‘ಬೆಚ್ಚನ ಮನೆಯ ಹೊಚ್ಚಲದೊಳಗೆ’ ಎನ್ನುವ ಸಾಲಿನಲ್ಲಿ ಸುಭದ್ರ ಜೀವನದ ವರ್ಣನೆಯನ್ನೂ ಕಾಣಬಹುದು. ಆದರೆ ‘ಬಂಡಾಯಗಾರರ’ ಕಣ್ಣಿಗೆ ಈ ಸರಳ ಸಾಲುಗಳಲ್ಲಿಯ ವೈಚಾರಿಕತೆ ಕಾಣದೇ ಹೋಗುತ್ತದೆ.
ನವೋದಯ ಯುಗದ ಮತ್ತೊಬ್ಬ ಮಹತ್ವದ ಕವಿ ಎಂದರೆ ಕುವೆಂಪು. ಕುವೆಂಪುರವರ ಕಾವ್ಯಭಾಷೆಯ ವೈಶಿಷ್ಟ್ಯಗಳೆಂದರೆ ಸಂಸ್ಕೃತಭೂಯಿಷ್ಠವಾದ, ವಾಗಾಡಂಬರದ ಪದಸಂಯೋಜನೆ ಹಾಗೂ ಆದೇಶಶೈಲಿ. ಇಂತಹ ಕಾವ್ಯಭಾಷೆಯನ್ನು ಬಳಸಲು ಅವರಿಗಿದ್ದ ಕಾರಣಗಳೇನು? ಅವರ ಕವನಗಳಲ್ಲಿ ಸಂಸ್ಕೃತಪದಗಳ ಬಾಹುಲ್ಯಕ್ಕೆ ಮೂರು ಕಾರಣಗಳಿವೆ. ಮೊದಲನೆಯದು ಕರ್ಣಮಧುರ ಪದಸಂಯೋಜನೆಯ ಉದ್ದೇಶ. ಎರಡನೆಯ ಉದ್ದೇಶವೆಂದರೆ ಕುವೆಂಪುರವರ ಒಂದು ವೈಯುಕ್ತಿಕ ಮನೋಧರ್ಮ. ಅವರ ಕಾದಂಬರಿ (ಕಾನೂರು ಸುಬ್ಬಮ್ಮ ಹೆಗ್ಗಡಿತಿ)ಯ ನಾಯಕನಾದ ಹೂವಯ್ಯನು ಕುವೆಂಪುರವರ ಪ್ರತ್ಯಾತ್ಮ (alter ego)ನಾಗಿದ್ದಾನೆ ಎನ್ನಲಾಗುತ್ತದೆ. ಸಾಮಾನ್ಯ ಜನತೆಯಿಂದ ಹೂವಯ್ಯನು ಮಾನಸಿಕವಾಗಿ ಎಷ್ಟು ದೂರವಿದ್ದನೋ, ಕುವೆಂಪು ಸಹ ಮಾನಸಿಕವಾಗಿ ಅಷ್ಟೇ ದೂರವಿದ್ದರು ಎನ್ನಬಹುದು. ಹೀಗಾಗಿ ಕುವೆಂಪುರವರು ಎಷ್ಟೇ ಜನಪರ ಕವಿಯಾಗಿದ್ದರೂ ಸಹ ಜನತೆಯಿಂದ ಒಂದು ವಿಶಿಷ್ಟ ದೂರವನ್ನು ಕಾಯ್ದುಕೊಳ್ಳಲು ಬಯಸುತ್ತಿದ್ದರು. ಹೀಗಾಗಿ ಆಡುನುಡಿಯ ಶೈಲಿ ಅವರ ಕಾವ್ಯದಲ್ಲಿ ಸಹಸಾ ಕಂಡುಬರುವದಿಲ್ಲ. ಮೂರನೆಯ ಉದ್ದೇಶವೆಂದರೆ ಕುವೆಂಪು ತಮ್ಮ ಕವನಗಳ ಮೂಲಕ ಓದುಗರಿಗೆ ಒಂದು ವಿಚಾರವನ್ನು ತಲುಪಿಸಲು ಬಯಸುತ್ತಿದ್ದರು. ಆದರೆ ಈ ವಿಚಾರವನ್ನು ಸರಳವಾದ ಭಾಷೆಯಲ್ಲಿ ನೀಡುವದು ಸಾಧ್ಯವಿರಲಿಲ್ಲ. ಸರಳವಾದ ಭಾಷೆಯಲ್ಲಿ ವಿಚಾರವನ್ನು ಮಂಡಿಸಿದ ಬೇಂದ್ರೆಯವರ ಕವನಗಳು ಅಯಶಸ್ವಿಯಾಗಿದ್ದನ್ನು ನಾವು ನೋಡಿದ್ದೇವೆ. ಇಂತಹ ತಪ್ಪನ್ನು ಕುವೆಂಪು ಮಾಡಲಿಲ್ಲ.
ಇದಕ್ಕೆ ಉದಾಹರಣೆಯಾಗಿ ಕುವೆಂಪು ಅವರ ಕವನವೊಂದರ ಈ ಸಾಲನ್ನು ನೋಡಿ:
“ಬಾಗಿಲಲಿ ಕೈ ಮುಗಿದು ಒಳಗೆ ಬಾ ಯಾತ್ರಿಕನೆ,
ಶಿಲೆಯಲ್ಲವೀ ಗುಡಿಯು ಕಲೆಯ ಬಲೆಯು ”
ಈ ಸಾಲುಗಳಲ್ಲಿ ಕವಿ ಓದುಗನಿಗೆ ‘ನೀನು ಭಾರತೀಯ ಪರಂಪರೆಯ ಈ ಕಲೆಯನ್ನು ಗೌರವಿಸು’ ಎಂದು ಹೇಳಬಯಸುತ್ತಾನೆ. ಆದರೆ ಈ ಆದೇಶವನ್ನು ನೇರನುಡಿಯಲ್ಲಿ, ಆಡುಮಾತಿನಲ್ಲಿ ಹೇಳಲು ಇಷ್ಟಪಡದ ಕವಿ ಸಂಸ್ಕೃತ ಭೂಯಿಷ್ಠ ಭಾಷೆಯ ಮೂಲಕ ಸುತ್ತು ಬಳಸಿ ಹೇಳುತ್ತಿದ್ದಾರೆ.
ಇದರಂತೆ ಅವರ ಮತ್ತೊಂದು ಕವನದ ಕೆಲವು ಸಾಲುಗಳನ್ನು ನೋಡಿರಿ:
“ಓ ನನ್ನ ಚೇತನಾ, ಆಗು ನೀ ಅನಿಕೇತನಾ!”
ತಮ್ಮನ್ನೇ ಸಂಬೋಧಿಸುತ್ತಿರುವಂತೆ ತೋರುವ ಈ ಸಾಲಿನಲ್ಲಿ ಕುವೆಂಪು , ಒಂದು ಸಾರ್ವಜನಿಕ ಕರೆಯನ್ನೇ ನೀಡುತ್ತಿದ್ದಾರೆ: “ನಿಮ್ಮ ಪರಿಮಿತ ಹಾಗೂ ಸ್ವಾರ್ಥಪೂರ್ಣ ಉಪಾಧಿಗಳನ್ನು ತ್ಯಜಿಸಿರಿ” ಎಂದು.
ಹಾಗೆಂದು ಅವರ ಸಂಸ್ಕೃತ ಭೂಯಿಷ್ಠ ಆದೇಶಗಳು ಯಾವಾಗಲೂ ಯಶಸ್ವಿಯಾಗಿವೆ ಅಂತಲ್ಲ.
ಉದಾಹರಣೆಗೆ ಈ ಕವನವನ್ನು ನೋಡಿರಿ:
“ ಪ್ರಿಯ ಬಂಧು ಇದೆ ಹೊತ್ತು ಧ್ಯಾನಕ್ಕೆ: ಹೃದ್ಗ್ರಂಥ
ಪ್ರಳಯಕ್ಕೆ; ಏಳು ಸಮಾಧಿಸ್ಥಾ ವಿಶ್ವದಲ್ಲಿ
ತಲ್ಲೀನವಾಗುವಂ ಛವಿ ಕವಿಯೊಳಾಗುವಂತೆ”.
ಇಲ್ಲಿ ಕವಿ ಬಳಸಿದ ಸಂಸ್ಕೃತ ಭಾಷೆಯೇ ಕೃತಕವಾಗುತ್ತದೆ. ತಲ್ಲೀನತೆ ತಾನಾಗಿ ಬರಬೇಕಲ್ಲದೆ, ಅದನ್ನು ಆಹ್ವಾನಿಸಲಾಗದು.
ಆಡುನುಡಿಯಲ್ಲಿ, ಸರಳ ಕನ್ನಡದಲ್ಲಿ ಆದೇಶವನ್ನು ನೀಡಿದಂತಹ ಕುವೆಂಪುರವರ ಕವನಗಳೂ ಸಹ ಅಯಶಸ್ವಿಯಾಗಿವೆ. ಉದಾಹರಣೆಗೆ ಈ ಕವನವನ್ನು ನೋಡಿರಿ:
“ಬೃಂದಾವನಕೆ ಹಾಲನು ಮಾರಲು ಹೋಗುವ ಬಾರೆ, ಬೇಗ ಸಖಿ
ಬೃಂದಾವನದಿ ಹಾಲನು ಕೊಳ್ಳುವರಾರಿಹರೆ ಹೇಳಿಂದುಮುಖಿ”
ಭಾರತದ ಕೋಗಿಲೆ ಎಂದು ಹೆಸರಾದ ಶ್ರೀಮತಿ ಸರೋಜಿನಿ ನಾಯಡು ಅವರು ಬರೆದ ಕವನವೊಂದನ್ನು ಈ ಕವನವು ಹೋಲುತ್ತದೆ. ಸರೋಜಿನಿ ನಾಯಡು ಅವರ ಆ ಮನೋಹರ ಕವನದಲ್ಲಿ, ಹಾಲು ಮಾರುವ ಗೋಪಿಕಾ ಸ್ತ್ರೀಯಲ್ಲಿ ಕಂಡು ಬರುವುದು ಆತ್ಮಸಮರ್ಪಣೆ ಹಾಗೂ ಸತತ ಕೃಷ್ಣಧ್ಯಾನ. ಆದರೆ ಕುವೆಂಪುರವರ ಕವನದಲ್ಲಿ ಕಂಡುಬರುವದು ದೈಹಿಕ ಶೃಂಗಾರ ಲೋಲುಪತೆ ಹಾಗೂ ಆದೇಶಶೈಲಿ. ಕುವೆಂಪುರವರ ಕವನದ ಗೋಪಸ್ತ್ರೀ ತನ್ನ ಸಖಿಗೆ ಹೇಳುವದು ಹೀಗೆ:
“ತೊಂಡೆಯ ಹಣ್ಣನು ತುಟಿಗಳು ನಗಲಿ,
ವದನವು ಮೀರಲಿ ತಾವರೆಯ”.
‘ಕೃಷ್ಣದರ್ಶನಕ್ಕೆ ಹೋಗುವಾಗ ನಿನ್ನ ತುಟಿಗಳು ತೊಂಡೆಯ ಹಣ್ಣುಗಳಂತೆ ಕೆಂಪಾಗಿ ಕಾಣಿಸಲಿ’ ಎಂದು ಗೋಪಸ್ತ್ರೀ ತನ್ನ ಸಖಿಗೆ ಆದೇಶ ನೀಡುತ್ತಿದ್ದಾಳೆ. ಈ ಆದೇಶದಲ್ಲಿ ಮಹತ್ವವಿರುವದು ದೈಹಿಕ ಸೌಂದರ್ಯಕ್ಕೆ!
ದೈಹಿಕ ಸೌಂದರ್ಯದ ಆರಾಧನೆ ಕುವೆಂಪುರವರ ಕವನಗಳ ಮತ್ತೊಂದು ಲಕ್ಷಣ. ಅವರ ಜನಪ್ರಿಯ ಕವನವಾದ “ದೋಣಿ ಸಾಗಲಿ, ಮುಂದೆ ಹೋಗಲಿ, ದೂರ ತೀರವ ಸೇರಲಿ” ಇದರ ಈ ಸಾಲುಗಳನ್ನು ಗಮನಿಸಿರಿ:
“ನೋಡಿ ಮೂಡಣದಾ ದಿಗಂತದಿ ಮೂಡುವೆಣ್ಣಿನ ಮೈಸಿರಿ
ರಂಜಿಸುತ್ತಿದೆ, ಚೆಲುವೆಯಾಕೆಗೆ ಸುಪ್ರಭಾತವ ಬಯಸಿರಿ.”
ಈ ಸಾಲುಗಳಲ್ಲಿ “ಮೂಡುವೆಣ್ಣಿನ ಮೈಸಿರಿ ರಂಜಿಸುತ್ತಿದೆ” ಎನ್ನುವ ಪದಗಳು ಸೂಕ್ಷ್ಮಜ್ಞ ಓದುಗನಲ್ಲಿ ತಟಕ್ಕನೆ ಒಂದು ತರಹದ ಅರುಚಿಯನ್ನು ಹುಟ್ಟಿಸುತ್ತವೆ. ‘ಮೂಡುವೆಣ್ಣಿ’ಗೆ ಸರೂಪವಾದ ‘ಬೆಲೆವೆಣ್ಣು’ ಎನ್ನುವ ಪದ ಮಿಂಚಿನಂತೆ ಮನಸ್ಸಿನಲ್ಲಿ ಹೊಳೆದು ಹೋಗುತ್ತದೆ. ಮತ್ತು ಇಂತಹ ಒಂದು ಕಾರಣಕ್ಕಾಗಿ “ಆಕೆಗೆ ಸುಪ್ರಭಾತವ ಬಯಸಿರಿ” ಎನ್ನುವ ಆದೇಶ ಓದುಗನಲ್ಲಿ ಹುಟ್ಟಿದ ಅರುಚಿಯನ್ನು ಇನ್ನೂ ಹೆಚ್ಚಿಸುತ್ತದೆ. ಕವನದ ಕೊನೆಯ ಸಾಲೂ ಸಹ ಆದೇಶದಲ್ಲಿಯೇ ಕೊನೆಯಾಗುತ್ತದೆ: “ನಿನ್ನೆ ನಿನ್ನೆಗೆ, ನಾಳೆ ನಾಳೆಗೆ, ಇರಲಿ ಈದಿನ ಇಂದಿಗೆ.”
ಸೂಕ್ಷ್ಮಗ್ರಾಹಿ ಓದುಗನಿಗೆ ಇಂತಹ ಅದೇಶಶೈಲಿ ಹಾಗೂ ದೈಹಿಕ ಶೃಂಗಾರ ಲೋಲುಪತೆ ಸರಿ ತೋರದು. ಇಲ್ಲಿಯೂ ಸಹ ಆಡುನುಡಿಯ ಬಳಕೆಯೇ ಈ ವ್ಯತ್ಯಸ್ತ ಪರಿಸ್ಥಿತಿಗೆ ಕಾರಣವಾಗಿರಬಹುದು. ಆದರೂ ಸಹ ಕುವೆಂಪುರವರ ಈ ಕವನ ತುಂಬ ಜನಪ್ರಿಯವಾಗಿದೆ. ಈ ಕವನದ ಕರ್ಣಮಧುರತೆಯೇ ಅದಕ್ಕೆ ಕಾರಣವಾಗಿರಬಹುದು.
ಅನೇಕ ಸಲ ಕುವೆಂಪುರವರ ಸಂಸ್ಕೃತಭೂಯಿಷ್ಠ ವಾಗಾಡಾಂಬರದ ಭಾಷೆಯು ಅನುಕೂಲಕರ ಪರಿಣಾಮವನ್ನೇ ಉಂಟು ಮಾಡುತ್ತದೆ. ಈ ಭಾಷೆಯ ಅನುಕೂಲವೆಂದರೆ ಸಾಧಾರಣ ಕಾವ್ಯವೂ ಅಸಾಧಾರಣವಾಗಿಯೇ ತೋರುವದು. ಕವನದಲ್ಲಿ ವೈಚಾರಿಕತೆ ಇದ್ದಂತೆ ಭಾಸವಾಗುವದು. ಈ ವಾಗಾಡಂಬರದ (high sounding) ಶಬ್ದಜಾಲದಲ್ಲಿ ಕಾವ್ಯದ ವಾಗರ್ಥವು ಅಳಿಸಿ ಹೋದರೆ ಆಶ್ಚರ್ಯವಿಲ್ಲ. ಇದಕ್ಕೆ ಉದಾಹರಣೆಯಾಗಿ ಈ ಮೊದಲು ಉದ್ಧರಿಸಿದ ಅವರ ಕವನವೊಂದರ ಸಾಲುಗಳನ್ನೇ ಮತ್ತೊಮ್ಮೆ ನೋಡಿರಿ:
“ಬಾಗಿಲಲಿ ಕೈ ಮುಗಿದು ಒಳಗೆ ಬಾ ಯಾತ್ರಿಕನೆ,
ಶಿಲೆಯಲ್ಲವೀ ಗುಡಿಯು ಕಲೆಯ ಬಲೆಯು ”
“ಶಿಲೆಯಲ್ಲವೀ ಗುಡಿಯು ಕಲೆಯ ಬಲೆಯು ” ಎಂದು ಹೇಳುವಾಗ ಕುವೆಂಪು ಪ್ರಾಸದ ಬಲೆಗೆ ಸಿಕ್ಕು ಬಿದ್ದಿರುವರೆಂದು ಅನ್ನಿಸದೇ ಇರದು. ಅಲ್ಲದೆ ‘ಕಲೆಯ ಬಲೆಯು’ ಅನ್ನುವಾಗ ಕಲೆಯು ಬಲೆಯಾಗಲು ಹೇಗೆ ಸಾಧ್ಯ ಎನ್ನುವ ಸಂದೇಹ ಬಾರದಿರದು. ಈ ದೋಷಗಳ ಹೊರತಾಗಿಯೂ ಸಹ ಈ ಕವನ ಜನಪ್ರಿಯವಾಗಲು ಕಾರಣವೆಂದರೆ (೧) ಕರ್ಣಮಧುರ ಭಾಷೆ (೨) ಆದೇಶಶೈಲಿ (೩) ಹಾಗೂ ವಾಗಾಡಂಬರ.
ತಮ್ಮ ಕಾವ್ಯದಲ್ಲಿ ಇಂತಹ ಭಾಷೆಯನ್ನು ಬಳಸಿದ ಕುವೆಂಪು ತಮ್ಮ ಕಾದಂಬರಿಯಲ್ಲಿ ಬಳಸುವ ಭಾಷೆಯೇ ಬೇರೆ.
ಅವರ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿ ಕನ್ನಡದ ಶ್ರೇಷ್ಠ ಕಾದಂಬರಿಗಳಲ್ಲಿ ಒಂದು. ನಿಸರ್ಗದ ಮಡಿಲಲ್ಲಿಯೇ ಬೆಳೆದ ಒಂದು ಗಂಡು,ಅಂತಹದೇ ಒಂದು ಹೆಣ್ಣಿನ ಜೊತೆಗೆ ನಿಸರ್ಗದಲ್ಲಿಯೇ ಕೂಡುವ ಒಂದು ಸಂದರ್ಭವನ್ನು ಕುವೆಂಪು ಇಲ್ಲಿ ಬರೆದಿದ್ದಾರೆ. ಇಲ್ಲಿ ಬಳಸಿದ ಭಾಷೆ ಅಚ್ಚಕನ್ನಡ. ಅದಕ್ಕೆ ಕಾರಣವೆಂದರೆ ಕುವೆಂಪು ಯಾವುದು ಸಹಜವೋ ಅದನ್ನು ಸಹಜವೆನ್ನುವಂತೆ ತೋರಿಸಲು ಬಯಸುತ್ತಾರೆ. ಇಲ್ಲಿ ಸಂಸ್ಕೃತ ಭಾಷೆಯ ಪದಗಳನ್ನು ಬಳಸಿದ್ದರೆ, ಈ ಕೂಟವು ಸಹಜಕ್ರಿಯೆ ಆಗುತ್ತಿರಲಿಲ್ಲ. ಬದಲು ಶೃಂಗಾರವರ್ಣನೆ ಆಗುತ್ತಿತ್ತು. ಆದುದರಿಂದ ಇಲ್ಲಿಯ ರತಿಕ್ರೀಡೆಯ ವರ್ಣನೆಯನ್ನು ಓದಿದಾಗ ಅದು ಸಹಜಕ್ರಿಯೆಯಂತೆಯೇ ಭಾಸವಾಗುತ್ತದೆ. ನಿಸರ್ಗದ ಮಕ್ಕಳ ಸಹಜ ಮನಸ್ಸಿನ ಸಹಜಭಾವವು ಅತ್ಯಂತ ಸಹಜವಾಗಿಯೇ ವ್ಯಕ್ತವಾಗುತ್ತದೆ.
ನವ್ಯಕಾವ್ಯದ ಜನಕರಾದ ಗೋಪಾಲಕೃಷ್ಣ ಅಡಿಗರ ನವ್ಯಕಾವ್ಯಭಾಷೆಯು ಬೇಂದ್ರೆಯವರ ಸರಳಭಾಷೆಗೆ ಅತ್ಯಂತ ವಿರುದ್ಧವಾದ ಭಾಷೆ. ಅಡಿಗರು ತಮ್ಮ ಕವನಗಳಲ್ಲಿ ಇಂಗ್ಲಿಶ್, ಸಂಸ್ಕೃತ ಹಾಗೂ ಉರ್ದು/ಹಿಂದಿ ಪದಗಳನ್ನು ಮೋಹಕವಾಗಿ ಪೋಣಿಸುತ್ತಾರೆ.
ಉದಾಹರಣೆಗಳು:
“ಈಡಿಪಸ್ಸಿನ ಗೂಢಪಾಪಲೇಪಿತ ನಾನು;
ಟ್ರ್ಯಾಕ್ಟರನ್ನೇರಿದೆನು; ಉತ್ತೆ, ಸಿಗಿದೆ.
ಬಿತ್ತಿದೆನು, ಬೆಳೆದೆ ಅಟಂಬಾಂಬು ಕಾಳುಗಳ:
ಮಾರಕ ಕ್ರಿಮಿಪೈರ ಗೋರಿ ನಲಿದೆ.”
“ಕುಡಿದು ಬಿಟ್ಟಿದೆ ಕಣೊ ಕಡಲ ಪಡಖಾನೆಯಲಿ
ನೊರೆಗರೆವ ವ್ಹಿಸ್ಕಿ ಸೋಡಾ”
“ಮಣ್ಣಿನಣುಗಿಯ ಸೆಳವಿನಲ್ಲಿ ಲಂಕೆಗೆ ಬೆಂಕಿ;
ಸುಟ್ಟಲ್ಲದೆಯೆ ಮುಟ್ಟೆನೆಂಬುಡಾಫೆ”.
ಆದರೆ, ಬೇಂದ್ರೆಯವರಿಗೆ ಹಾಗೂ ಅಡಿಗರಿಗೆ ಇರುವ ಮುಖ್ಯ ವ್ಯತ್ಯಾಸವು ಭಾಷೆಯ ಶೈಲಿಯಲ್ಲಿ ಇರದೆ, ಕಾವ್ಯೋದ್ದೇಶದಲ್ಲಿ ಇದೆ. ಬೇಂದ್ರೆಯವರ ಕಾವ್ಯಾಂತರಂಗದಲ್ಲಿ ಇರುವದು mystical ಅನುಭವ. ಅಡಿಗರ ಕವನಗಳಲ್ಲಿ ಇರುವದು intellectual revelation. ಬೇಂದ್ರೆಯವರು ತಮ್ಮ ಕಾವ್ಯವನ್ನು mystify ಮಾಡುತ್ತಾರೆ. ಅಡಿಗರು ತಮ್ಮ ಕವನಗಳನ್ನು demystify ಮಾಡುತ್ತಾರೆ.
ನವೋದಯ ಕಾಲದ ಮತ್ತೊಬ್ಬ ಪ್ರಮುಖ ಕವಿ ಎಂದರೆ ಕೆ.ಎಸ್. ನರಸಿಂಹಸ್ವಾಮಿ. ಇವರ ಕಾವ್ಯಕ್ಕೆ ಒಲವೇ ಮೂಲಸ್ರೋತ. ಕನ್ನಡವನ್ನು ‘ಕವಿಗಳು ಬಳಸುವ ಭಾಷೆ’ ಎಂದು ಕರೆದ ಇವರ ಭಾಷೆ ಸುಕೋಮಲ ಭಾಷೆ, ಮೈಸೂರು ಮಲ್ಲಿಗೆಯ ಹಾಗೆ. ಅಡಿಗರು ನರಸಿಂಹಸ್ವಾಮಿಗಳ ಕಾವ್ಯವನ್ನು ‘ತೆಳು ಅನುಭವದ ಕಾವ್ಯ’ ಎಂದು ಟೀಕಿಸಿದ್ದು ದೊಡ್ಡ ತಪ್ಪು ಹಾಗೂ ನರಸಿಂಹಸ್ವಾಮಿಗಳಿಗೆ ಮಾಡಿದ ಅನ್ಯಾಯ. ಇದಕ್ಕೆ ಉತ್ತರವಾಗಿ ನರಸಿಂಹಸ್ವಾಮಿಗಳು ತಮ್ಮ ಭಾಷೆಯು “ಇಬ್ಬರು ಆಪ್ತಮಿತ್ರರು ಸಂಜೆಯ ಸಮಯದಲ್ಲಿ ಜೊತೆಯಾಗಿ ಕುಳಿತು ಮಾತನಾಡಿದಂತೆ” ಎಂದು ತಮ್ಮ ಕವನವೊಂದರಲ್ಲಿ ವರ್ಣಿಸಿದ್ದಾರೆ. ಅಲ್ಲದೆ ಅಡಿಗರ ಕವನವನ್ನು “ಯಕ್ಷಗಾನದ ಅಬ್ಬರ” ಎಂದು ಕರೆದಿದ್ದಾರೆ.
“ರತ್ನನ ಪದಗಳು” ಮೂಲಕ ರಾಜರತ್ನಮ್ ಪ್ರಸಿದ್ಧರಾದರು. ತಮ್ಮ ಕವನಗಳಲ್ಲಿ ಬಳಸಿದ ‘ಕುಡುಕನ ಆಡುಭಾಷೆ’ಯನ್ನು ಅರಿತುಕೊಳ್ಳುವ ಉದ್ದೇಶದಿಂದ ತಾವು ವೇಷ ಮರೆಸಿಕೊಂಡು ಕುಡುಕರ ಅಡ್ಡಾಗಳ ಸುತ್ತಮುತ್ತ ಸುಳಿದದ್ದಾಗಿ ರಾಜರತ್ನಮ್ ಹೇಳುತ್ತಾರೆ. ಆದರೆ, "ರಾಜರತ್ನಮ್ ಅವರ ಭಾಷೆ ನಿಜವಾಗಿಯೂ ಕುಡುಕರ ಆಡುಭಾಷೆ ಅಲ್ಲ, ಇದೊಂದು ಕೃತಕ ಭಾಷೆ" ಎಂದು ಲಂಕೇಶರವರು ಟೀಕಿಸಿದ್ದಾರೆ. ಇದೊಂದು ತುಂಬ ಅನುದಾರವಾದ ಟೀಕೆ.
ನೇರವಾಗಿ ಹೇಳಲಾಗದ್ದನ್ನು ಕುವೆಂಪು ಸಂಸ್ಕೃತಭೂಯಿಷ್ಠ ಭಾಷೆಯನ್ನು ಬಳಸಿ ಹೇಳಿದರು. ರಾಜರತ್ನಮ್ ಸಹ ಅದೇ ಕಾರಣಕ್ಕಾಗಿ ನೇರವಾಗಿ ಹೇಳಲಾಗದ್ದನ್ನು ಕೃತಕ ಆಡುನುಡಿಯ ಮೂಲಕ ಹೇಳಿದರು.
ಬುದ್ಧಿವಂತ ನಾಗರಿಕನು ಹೇಳಿದರೆ ಯಾವುದು ಆಭಾಸವಾಗಿ ಕಾಣುತ್ತದೆಯೊ ಅದನ್ನು ವಿದ್ಯೆಯಿಲ್ಲದ ಕುಡುಕನೇ ಹೇಳಬೇಕಷ್ಟೆ. ನಿಜ ಹೇಳಬೇಕೆಂದರೆ ರತ್ನನ ಪದಗಳ ಭಾಷೆ ಕುಡುಕನ ಭಾಷೆ ಅಲ್ಲ; ಇದೂ ಸಹ ಕವಿಗಳು ಬಳಸುವ ಭಾಷೆಯೇ.
ರಾಜರತ್ನಮ್ ಅವರ ಕವನವೊಂದನ್ನು ನಿದರ್ಶನವೆಂದು ಹಾಗೂ ಈ ಲೇಖನದ ಮಂಗಳಗೀತೆಯೆಂದು ಇಲ್ಲಿ ಕೊಡುತ್ತಿದ್ದೇನೆ.
ಯೆಂಡಾ, ಯೆಡ್ತಿ, ಕನ್ನಡ ಪದಗೋಳ್
ಅಂದ್ರೆ ರತ್ನಂಗ್ ಪ್ರಾಣಾ!
ಬುಂಡೇನ್ ಎತ್ತಿ ಕುಡದ್ಬುಟ್ಟಾಂದ್ರೆ
ತಕ್ಕೊ ಪದಗೋಳ್ ಬಾಣಾ!
ಬಗವಂತ್ ಏನಾರ್ ಬೂಮಿಗಿಳ್ದು
ನನ್ತಾಕ್ ಬಂದಾಂತ್ ಅನ್ನು;
ಪರ್ ಗಿರೀಕ್ಸೆ ಮಾಡ್ತಾನ್ ಅವ್ನು
ಬಕ್ತನ್ ಮೇಲ್ ಅವನ್ ಕಣ್ಣು.
‘ಯೆಂಡಾ ಕುಡಿಯಾದ್ ಬುಟ್ಬುಡ್ ರತ್ನಾ’
ಅಂತ ಅವನೇನಾರಂದ್ರೆ
ಮೂಗ್ ಮೂರ್ ಚೂರಾಗ್ ಮುರಸ್ಕೊಂತೀನಿ
ದೇವರ ಮಾತ್ಗಡ್ ಬಂದ್ರೆ!
‘ಯೆಂಡಾ ಬುಟ್ಟೆ, ಎಡ್ತೀನ್ ಬುಟ್ ಬುಡ್’
ಅಂತವನೇನಾರಂದ್ರೆ
ಕಳೆದೊಯ್ತಂತಾ ಕುಣದಾಡ್ತೀನಿ
ದೊಡ್ ಒಂದ್ ಕಾಟಾ ತೊಂದ್ರೆ!
‘ಕನ್ನಡ ಪದಗೋಳ್ನ್ ಆಡೋದ್ನೆಲ್ಲಾ
ನಿಲ್ಲಿಸ್ ಬುಡ್ಬೇಕ ರತ್ನಾ’
ಅಂತವನಂದ್ರೆ ದೇವ್ರಾದ್ರೇನು
ಮಾಡ್ತೇನ್ ಅವಂಗೆ ಖತ್ನಾ
ಆಗ್ನೆ ಮಾಡೋ ಅಯ್ಗೋಳೆಲ್ಲಾ
ದೇವ್ರೆ ಆಗ್ಲಿ ಎಲ್ಲಾ
ಕನ್ನಡ ಸುದ್ದಿಗ್ ಏನಾರ್ ಬಂದ್ರೆ
ಮಾನಾ ಉಳಿಸಾಕಿಲ್ಲ
ನರಕಕ್ ಇಳ್ಸಿ, ನಾಲ್ಗೆ ಸೀಳ್ಸಿ
ಬಾಯ್ ಒಲಿಸಾಕಿದ್ರೂನೂ
ಮೂಗ್ನಲ್ ಕನ್ನಡ ಪದವಾಡ್ತೀನಿ
ನನ್ ಮನಸನ್ ನೀ ಕಾಣೆ!
ಯೆಂಡಾ ಓಗ್ಲಿ, ಯೆಡ್ತಿ ಓಗ್ಲಿ
ಎಲ್ಲಾ ಕೊಚ್ಕೊಂಡ್ ಓಗ್ಲಿ
ಪರ್ಪಂಚ್ ಇರೋ ತನಕಾ ಮುಂದೆ
ಕನ್ನಡ ಪದಗೋಳ್ ನುಗ್ಲಿ!
ಶಿಷ್ಟಮಾರ್ಗದಲ್ಲಿಯೇ ಆಗಲಿ, ದೇಸಿ ರೂಪದಲ್ಲಿಯೇ ಆಗಲಿ, ಜನಪದ ಹಾಡುಗಬ್ಬವೇ ಆಗಲಿ, ಅಥವಾ ಆಧುನಿಕ ಕಾವ್ಯವೇ ಆಗಲಿ ಕನ್ನಡವು ‘ಕವಿಗಳು ಬಳಸುವ ಭಾಷೆ’ಯಾಗಿ ತನ್ನ ಚೆಲವನ್ನು ಮೆರೆದಿದೆ.
Saturday, September 5, 2009
Saturday, August 22, 2009
ಬೇಂದ್ರೆಯವರ ‘ಬೆಳಗು’--ಇದು ಬರಿ ಹಾಡಲ್ಲೋ ಅಣ್ಣಾ!
ಬೇಂದ್ರೆಯವರ ಕವನಗಳನ್ನು ಪ್ರತಿ ಸಲ ಓದಿದಾಗಲೂ ಹೊಸ ಅರ್ಥ ‘ಹೊಳೆ’ಯುತ್ತಿರುತ್ತದೆ ಅವರ ಕವನಗಳನ್ನು ಈ ಹೊತ್ತು ನಾವು ಪೂರ್ಣವಾಗಿ ಅರಿತುಕೊಂಡಿದ್ದೇವೆ ಎಂದು ಹೇಳುವದು ಸಾಧ್ಯವಲ್ಲದ ಮಾತು. ಅವರ ಕವನಗಳಲ್ಲಿ ಅರ್ಥವಲ್ಲದೇ ಪರಮಾರ್ಥವೂ ಇರುತ್ತದೆ. ಉದಾಹರಣೆಗೆ ಅವರ ‘ಬೆಳಗು’ ಕವನವನ್ನೇ ತೆಗೆದುಕೊಳ್ಳಿರಿ. ಈ ಕವನದ ಕೊನೆಯ ನುಡಿಯ ಬಗೆಗೆ ಶ್ರೀ ವ್ಯಾಸ ದೇಶಪಾಂಡೆಯವರು ಇದೀಗ ಹೆಚ್ಚಿನ ವಿವರಣೆಯನ್ನು ಈ ರೀತಿಯಾಗಿ ಕೊಟ್ಟಿದ್ದಾರೆ.
ಕವನದ ಕೊನೆಯ ನುಡಿ ಹೀಗಿದೆ:
“ ಅರಿಯದು ಅಳವು ತಿಳಿಯದು ಮನವು
ಕಾಣsದೋ ಬಣ್ಣಾ
ಕಣ್ಣಿಗೆ—ಕಾಣsದೋ ಬಣ್ಣಾ
ಶಾಂತೀರಸವೇ ಪ್ರೀತೀಯಿಂದಾ
ಮೈದೋರಿತಣ್ಣಾ
ಇದು ಬರಿ—ಬೆಳಗಲ್ಲೋ ಅಣ್ಣಾ”
ಕವನದ ಮೊದಲಿನ ಐದು ನುಡಿಗಳಲ್ಲಿ ಬೇಂದ್ರೆಯವರು ತಮ್ಮ ಪಂಚೇಂದ್ರಿಯಗಳಿಗಾದ ವಿಸ್ಮಯಭರಿತ ಅನುಭವವನ್ನು ವರ್ಣಿಸಿದ್ದಾರೆ. ಪಂಚೇಂದ್ರಿಯಗಳ ಆ ಅನುಭವವು ಮನಸ್ಸನ್ನು ಹೇಗೆ ‘ವಿಶ್ವಾತ್ಮ’ನಲ್ಲಿ ತನ್ಮಯಗೊಳಿಸಿತು ಎನ್ನುವದನ್ನೂ ಹೇಳಿದ್ದಾರೆ. (‘ದೇವರದೀ—ಮನಸಿನ ಗೇಹಾ’).
ಈ ಕೊನೆಯ ನುಡಿಯಲ್ಲಿ ಅವರು “ಅರಿಯದು ಅಳವು ತಿಳಿಯದು ಮನವು” ಎಂದು ಹೇಳುತ್ತಾರೆ. “ಅಳವು” ಅಂದರೆ ಸಾಮರ್ಥ್ಯ. ಬೇಂದ್ರೆಯವರು ‘ಬೆಳಗಿ’ ನ ಪೂರ್ಣ ಅನುಭವವು ತಮ್ಮ ಪಂಚೇಂದ್ರಿಯಗಳ ಅಳವಿಗೆ ಹೊರತಾದದ್ದು ಎಂದು ಹೇಳುತ್ತಿದ್ದಾರೆ. ಇದು ಮನುಷ್ಯನ ಪಂಚೇಂದ್ರಿಯಗಳ ಸಾಮರ್ಥ್ಯವನ್ನು ಮೀರಿದ್ದು. ಆದುದರಿಂದಲೇ ‘ತಿಳಿಯದು ಮನವು’. ತನ್ನ ಪಂಚೇಂದ್ರಿಯಗಳ ಸಂವೇದನೆಯಿಂದಲೇ ಲೋಕವನ್ನು ತಿಳಿಯುವ ಮನಸ್ಸಿಗೆ ‘ಬೆಳಗಿ’ನ ಪೂರ್ಣ ಅನುಭವವನ್ನು ತಿಳಿಯಲು ಸಾಧ್ಯವಾಗುವದಿಲ್ಲ. ಈ ಅನುಭವದ ಬಣ್ಣ ಹೊರಗಣ್ಣಿಗಾಗಲೀ ಒಳಗಣ್ಣಿಗಾಗಲೀ ಕಾಣದು. ಉದಾಹರಣೆಗೆ ಹೊರಗಣ್ಣಿಗೆ ಕಾಣುವದು ಕೇವಲ ಏಳೇ ಬಣ್ಣಗಳು. ಈ ಬಣ್ಣಗಳ ತರಂಗಾಂತರದ ಹೊರಗಿನ ಬಣ್ಣಗಳನ್ನು ನಮ್ಮ ಹೊರಗಣ್ಣು ಗ್ರಹಿಸಲಾರದು. ಆ ಕಾರಣದಿಂದ ನಮ್ಮ ಮನಸ್ಸೂ ಸಹ ಅದನ್ನು ಗ್ರಹಿಸಲಾರದು. ಅದರಂತೆ ಈ ಅನುಭವವೂ ಸಹ ಪಂಚೇಂದ್ರಿಯಗಳ ಹೊರಗಿನ ‘ಅಲೌಕಿಕ’ ಅನುಭವ.
ಉಪನಿಷತ್ತಿನಲ್ಲಿ ಭಗವಂತನನ್ನು ‘ಅತ್ಯತ್ತಿಷ್ಠದ್ದಶಾಂಗುಲಮ್’ ಎಂದು ವರ್ಣಿಸಲಾಗಿದೆ. ಭಗವಂತನು ತನ್ನ ಸೃಷ್ಟಿಯ ಒಳಗಲ್ಲದೆ, ಹೊರಗೂ ಸಹ ಹತ್ತು ಅಂಗುಲದವರೆಗೆ ವ್ಯಾಪಿಸಿದ್ದಾನೆ. ಅದರಂತೆ ಈ ಅನುಭವವೂ ಸಹ ಮನುಷ್ಯನ ಸಂವೇದನೆಯ ಅಳವಿನ ಹೊರಗೂ ವ್ಯಾಪಿಸಿದೆ. ಈ ಅಲೌಕಿಕ ವಿಸ್ಮಯವನ್ನು ಬಣ್ಣಿಸಲೇ ಬೇಕಾದರೆ, “ಶಾಂತೀರಸವೇ ಪ್ರೀತೀಯಿಂದಾ ಮೈದೋರಿತಣ್ಣಾ” ಎಂದಷ್ಟೇ ಹೇಳಬಹುದು.
ಭಗವಂತನು ಶಾಂತಿರಸದ ಅನಂತಸಮುದ್ರವಿದ್ದಂತೆ. ಅವನಲ್ಲಿ ಇರುವ ಪ್ರೀತಿಯೇ ಸೃಷ್ಟಿಯ ರೂಪವಾಗಿ ಮೈದೋರುತ್ತದೆ. ಈ ಮಾಂತ್ರಿಕನ ಪ್ರೀತಿಯ ಜಾದೂದಿಂದಲೇ ಸೃಷ್ಟಿಯ ರೂಪಗಳು ವ್ಯಕ್ತವಾಗುತ್ತವೆ. ಆದುದರಿಂದ ಈ ಬೆಳಗೆನ್ನುವದು ಭಗವಚ್ಚೈತನ್ಯದ ರೂಪ. ಹೀಗಾಗಿ ‘ಇದು ಬರಿ ಬೆಳಗಲ್ಲೊ ಅಣ್ಣಾ!’ ಎಂದು ಬೇಂದ್ರೆಯವರು ಹಾಡುತ್ತಾರೆ.
ಅದೇ ರೀತಿಯಾಗಿ ಬೇಂದ್ರೆಯವರ ಕವನದ ಬಗೆಗೆ ನಾವೂ ಹೇಳಬಹುದಲ್ಲವೆ :
“ಇದು ಬರಿ ಹಾಡಲ್ಲೋ ಅಣ್ಣಾ!”
(ಶ್ರೀ ವ್ಯಾಸ ದೇಶಪಾಂಡೆಯವರಿಗೆ ಕೃತಜ್ಞತೆಗಳು.)
ಕವನದ ಕೊನೆಯ ನುಡಿ ಹೀಗಿದೆ:
“ ಅರಿಯದು ಅಳವು ತಿಳಿಯದು ಮನವು
ಕಾಣsದೋ ಬಣ್ಣಾ
ಕಣ್ಣಿಗೆ—ಕಾಣsದೋ ಬಣ್ಣಾ
ಶಾಂತೀರಸವೇ ಪ್ರೀತೀಯಿಂದಾ
ಮೈದೋರಿತಣ್ಣಾ
ಇದು ಬರಿ—ಬೆಳಗಲ್ಲೋ ಅಣ್ಣಾ”
ಕವನದ ಮೊದಲಿನ ಐದು ನುಡಿಗಳಲ್ಲಿ ಬೇಂದ್ರೆಯವರು ತಮ್ಮ ಪಂಚೇಂದ್ರಿಯಗಳಿಗಾದ ವಿಸ್ಮಯಭರಿತ ಅನುಭವವನ್ನು ವರ್ಣಿಸಿದ್ದಾರೆ. ಪಂಚೇಂದ್ರಿಯಗಳ ಆ ಅನುಭವವು ಮನಸ್ಸನ್ನು ಹೇಗೆ ‘ವಿಶ್ವಾತ್ಮ’ನಲ್ಲಿ ತನ್ಮಯಗೊಳಿಸಿತು ಎನ್ನುವದನ್ನೂ ಹೇಳಿದ್ದಾರೆ. (‘ದೇವರದೀ—ಮನಸಿನ ಗೇಹಾ’).
ಈ ಕೊನೆಯ ನುಡಿಯಲ್ಲಿ ಅವರು “ಅರಿಯದು ಅಳವು ತಿಳಿಯದು ಮನವು” ಎಂದು ಹೇಳುತ್ತಾರೆ. “ಅಳವು” ಅಂದರೆ ಸಾಮರ್ಥ್ಯ. ಬೇಂದ್ರೆಯವರು ‘ಬೆಳಗಿ’ ನ ಪೂರ್ಣ ಅನುಭವವು ತಮ್ಮ ಪಂಚೇಂದ್ರಿಯಗಳ ಅಳವಿಗೆ ಹೊರತಾದದ್ದು ಎಂದು ಹೇಳುತ್ತಿದ್ದಾರೆ. ಇದು ಮನುಷ್ಯನ ಪಂಚೇಂದ್ರಿಯಗಳ ಸಾಮರ್ಥ್ಯವನ್ನು ಮೀರಿದ್ದು. ಆದುದರಿಂದಲೇ ‘ತಿಳಿಯದು ಮನವು’. ತನ್ನ ಪಂಚೇಂದ್ರಿಯಗಳ ಸಂವೇದನೆಯಿಂದಲೇ ಲೋಕವನ್ನು ತಿಳಿಯುವ ಮನಸ್ಸಿಗೆ ‘ಬೆಳಗಿ’ನ ಪೂರ್ಣ ಅನುಭವವನ್ನು ತಿಳಿಯಲು ಸಾಧ್ಯವಾಗುವದಿಲ್ಲ. ಈ ಅನುಭವದ ಬಣ್ಣ ಹೊರಗಣ್ಣಿಗಾಗಲೀ ಒಳಗಣ್ಣಿಗಾಗಲೀ ಕಾಣದು. ಉದಾಹರಣೆಗೆ ಹೊರಗಣ್ಣಿಗೆ ಕಾಣುವದು ಕೇವಲ ಏಳೇ ಬಣ್ಣಗಳು. ಈ ಬಣ್ಣಗಳ ತರಂಗಾಂತರದ ಹೊರಗಿನ ಬಣ್ಣಗಳನ್ನು ನಮ್ಮ ಹೊರಗಣ್ಣು ಗ್ರಹಿಸಲಾರದು. ಆ ಕಾರಣದಿಂದ ನಮ್ಮ ಮನಸ್ಸೂ ಸಹ ಅದನ್ನು ಗ್ರಹಿಸಲಾರದು. ಅದರಂತೆ ಈ ಅನುಭವವೂ ಸಹ ಪಂಚೇಂದ್ರಿಯಗಳ ಹೊರಗಿನ ‘ಅಲೌಕಿಕ’ ಅನುಭವ.
ಉಪನಿಷತ್ತಿನಲ್ಲಿ ಭಗವಂತನನ್ನು ‘ಅತ್ಯತ್ತಿಷ್ಠದ್ದಶಾಂಗುಲಮ್’ ಎಂದು ವರ್ಣಿಸಲಾಗಿದೆ. ಭಗವಂತನು ತನ್ನ ಸೃಷ್ಟಿಯ ಒಳಗಲ್ಲದೆ, ಹೊರಗೂ ಸಹ ಹತ್ತು ಅಂಗುಲದವರೆಗೆ ವ್ಯಾಪಿಸಿದ್ದಾನೆ. ಅದರಂತೆ ಈ ಅನುಭವವೂ ಸಹ ಮನುಷ್ಯನ ಸಂವೇದನೆಯ ಅಳವಿನ ಹೊರಗೂ ವ್ಯಾಪಿಸಿದೆ. ಈ ಅಲೌಕಿಕ ವಿಸ್ಮಯವನ್ನು ಬಣ್ಣಿಸಲೇ ಬೇಕಾದರೆ, “ಶಾಂತೀರಸವೇ ಪ್ರೀತೀಯಿಂದಾ ಮೈದೋರಿತಣ್ಣಾ” ಎಂದಷ್ಟೇ ಹೇಳಬಹುದು.
ಭಗವಂತನು ಶಾಂತಿರಸದ ಅನಂತಸಮುದ್ರವಿದ್ದಂತೆ. ಅವನಲ್ಲಿ ಇರುವ ಪ್ರೀತಿಯೇ ಸೃಷ್ಟಿಯ ರೂಪವಾಗಿ ಮೈದೋರುತ್ತದೆ. ಈ ಮಾಂತ್ರಿಕನ ಪ್ರೀತಿಯ ಜಾದೂದಿಂದಲೇ ಸೃಷ್ಟಿಯ ರೂಪಗಳು ವ್ಯಕ್ತವಾಗುತ್ತವೆ. ಆದುದರಿಂದ ಈ ಬೆಳಗೆನ್ನುವದು ಭಗವಚ್ಚೈತನ್ಯದ ರೂಪ. ಹೀಗಾಗಿ ‘ಇದು ಬರಿ ಬೆಳಗಲ್ಲೊ ಅಣ್ಣಾ!’ ಎಂದು ಬೇಂದ್ರೆಯವರು ಹಾಡುತ್ತಾರೆ.
ಅದೇ ರೀತಿಯಾಗಿ ಬೇಂದ್ರೆಯವರ ಕವನದ ಬಗೆಗೆ ನಾವೂ ಹೇಳಬಹುದಲ್ಲವೆ :
“ಇದು ಬರಿ ಹಾಡಲ್ಲೋ ಅಣ್ಣಾ!”
(ಶ್ರೀ ವ್ಯಾಸ ದೇಶಪಾಂಡೆಯವರಿಗೆ ಕೃತಜ್ಞತೆಗಳು.)
Monday, August 17, 2009
ಕಾವ್ಯದಲ್ಲಿ ವಿಸ್ಮಯರಸ
ಸಹೃದಯ ಓದುಗನ ಮನಸ್ಸನ್ನು ಪರವಶಗೊಳಿಸುವದೇ ವಿಸ್ಮಯರಸದ ಪ್ರಯೋಜನವೆನ್ನಬಹುದು. ಭಾರತೀಯ ಕಾವ್ಯದಲ್ಲಿ ವಿಸ್ಮಯರಸದ ಉಗಮವನ್ನು ಹುಡುಕಿದರೆ, ಅದು ನಮ್ಮ ಪ್ರಪ್ರಥಮ ಮಹಾಕಾವ್ಯದಲ್ಲಿಯೇ ದೊರೆಯುತ್ತದೆ. ಆದಿಕವಿ ವಾಲ್ಮೀಕಿ ರಚಿಸಿದ ರಾಮಾಯಣದಲ್ಲಿ ಹನುಮಂತನು ಸಮುದ್ರಲಂಘನೆ ಮಾಡುವದು ಹಾಗು ಲಂಕೆಯಲ್ಲಿ ಅವನು ಮಾಡುವ ಸಾಹಸಗಳು ವಿಸ್ಮಯರಸದ ಉಜ್ವಲ ನಿದರ್ಶನಗಳಾಗಿವೆ.
ನಡುಗನ್ನಡ ಕನ್ನಡಸಾಹಿತ್ಯವನ್ನು ಅವಲೋಕಿಸಿದಾಗ, ಶರಣರ ವಚನಗಳಲ್ಲಿ ವಿಸ್ಮಯರಸದ ಅನೇಕ ನಿದರ್ಶನಗಳು ದೊರೆಯುತ್ತವೆ.
ಬಸವಣ್ಣನವರ ಈ ವಚನವನ್ನೇ ಉದಾಹರಣೆಗೆ ತೆಗೆದುಕೊಳ್ಳಿರಿ:
“ಜಗದಗಲ ಮುಗಿಲಗಲ ಮಿಗೆಯಗಲ ನಿಮ್ಮಗಲ,
ಪಾತಾಲದಿಂದತ್ತತ್ತ ನಿಮ್ಮ ಶ್ರೀಚರಣ,
ಬ್ರಹ್ಮಾಂಡದಿಂದತ್ತತ್ತ ನಿಮ್ಮ ಶ್ರೀಮುಕುಟ,
ಅಗಮ್ಯ ಅಗೋಚರ ಅಪ್ರತಿಮ ಲಿಂಗವೆ, ಕೂಡಲ ಸಂಗಮ ದೇವಯ್ಯಾ,
ಎನ್ನ ಕರಸ್ಥಲಕ್ಕೆ ಬಂದು ಚುಳುಕಾದಿರಯ್ಯಾ!”
ಭಗವಂತನ ಮಹತಿಗೆ ಬೆರಗಾದ ಭಕ್ತನ ಉದ್ಗಾರವನ್ನು ನಾವು ಈ ವಚನದಲ್ಲಿ ಕಾಣುತ್ತೇವೆ.
ಈ ವಿಸ್ಮಯರಸದ ಬಗೆಗೆ ಇತ್ತೀಚೆಗೆ ಕನ್ನಡದ ಖ್ಯಾತ ನಾಟಕಕಾರ ವ್ಯಾಸ ದೇಶಪಾಂಡೆಯವರ ಜೊತೆಗೆ ಚರ್ಚೆ ನಡೆದಾಗ, ಅವರು ಸರ್ವಜ್ಞನ ವಚನವೊಂದರ ವಿವರಣೆಯನ್ನು ನೀಡಿದರು.
ಆ ವಚನ ಹಾಗು ಅವರ ವಿವರಣೆ ಹೀಗಿದೆ:
“ ಎಲುವಿಲ್ಲ ನಾಲಗೆಗೆ, ಬಲವಿಲ್ಲ ಬಡವಂಗೆ
ತೊಲೆ ಕಂಬವಿಲ್ಲ ಗಗನಕ್ಕೆ, ದೇವರಲಿ
ಕುಲ ಗೋತ್ರವಿಲ್ಲ ಸರ್ವಜ್ಞ”
ನಾಲಿಗೆಗೆ ಎಲುವಿಲ್ಲ ಎನ್ನುವದು ಎಲ್ಲರ ಅನುಭವಕ್ಕೂ ಬರುವ ಭೌತಿಕ ಸತ್ಯ. ಅದರಂತೆ ಬಡವನಿಗೆ ಬಲವಿಲ್ಲ ಎನ್ನುವದು ಒಂದು ಲೌಕಿಕ ಸತ್ಯ. ಮೊದಲಿಗೆ ಈ ಎರಡು ಅನುಭವವೇದ್ಯ ಸತ್ಯಗಳನ್ನು ಹೇಳುವ ಸರ್ವಜ್ಞ, ಆ ಬಳಿಕ ’ತೊಲೆ ಕಂಬವಿಲ್ಲ ಗಗನಕ್ಕೆ’ ಎಂದು ಹೇಳುವ ಮೂಲಕ ಒಂದು meta physical ಸತ್ಯವನ್ನು ಹೇಳುತ್ತಾನೆ. ಆ ಬಳಿಕ ‘ಕುಲ ಗೋತ್ರವಿಲ್ಲ ದೇವರಲಿ’ ಎನ್ನುವ ‘ಅ--ಲೌಕಿಕ’ ಸತ್ಯವನ್ನು ಉಸುರುವ ಮೂಲಕ ಕೇಳುಗರನ್ನು ಪ್ರಭಾವಿತರನ್ನಾಗಿ ಮಾಡುತ್ತಾನೆ. ಇದು ವಿಸ್ಮಯರಸದ ಪ್ರಯೋಜನ.
ಕನಕದಾಸರ ಕೀರ್ತನೆಯಲ್ಲಿಯೂ ಸಹ ಇದೇ ರೀತಿಯ ವಿಸ್ಮಯರಚನೆ ಇದೆ:
“ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ
ನೀ ದೇಹದೊಳಗೊ ನಿನ್ನೊಳೊ ದೇಹವೊ ಹರಿಯೆ”
ದೇಹವನ್ನು ಸೃಷ್ಟಿಸಿದವನು ಭಗವಂತ. ಆದುದರಿಂದ ಭಗವಂತನಲ್ಲಿ ದೇಹವಿದೆ. ಆದರೆ ಅದೇ ದೇಹದಲ್ಲಿ ಭಗವಂತನೂ ಇದ್ದಾನೆ. ಕನಕದಾಸರು ಭಗವಂತನ ಮಹತಿಯನ್ನು ಅನುಭವಿಸಲು, ಅನುಭವಿಸಿದ್ದನ್ನು ಸಾರಲು ಈ ರೀತಿಯಾಗಿ ವಿಸ್ಮಯವನ್ನು ಪ್ರದರ್ಶಿಸುತ್ತಾರೆ.
ಇದೇ ರೀತಿಯಲ್ಲಿ ಪುರಂದರದಾಸರ ಕೆಲವು ಕೀರ್ತನೆಗಳಲ್ಲಿಯೂ ವಿಸ್ಮಯಭಾವನೆಯು ಕಾಣಸಿಗುತ್ತದೆ.
ಉದಾಹರಣೆಗೆ ಅವರ ಈ ಕೀರ್ತನೆಯನ್ನು ನೋಡಿರಿ:
“ರಂಗ ಕೊಳಲನೂದಲಾಗಿ ಮಂಗಳಮಯವಾಯ್ತು ಧರೆ ಜ-
ಗಂಗಳು ಚೈತನ್ಯ ಮರೆದು ಅಂಗಪರವಶವಾದವು ||ಪಲ್ಲ||
ತೀಡಿದ ಮಾರುತ ಮಂದಗತಿಗೈಯೆ ಬಾಡಿದ ಅರಲು ಫಲಗೊಂಚಲು ಬಿಡೆ
ಪಾಡಲೊಲ್ಲವಳಿಕುಲಗಳು ಬಾಡಿದ ಮಾಮರ ಚಿಗುರೊಡೆಯೆ
................................."
ಕೃಷ್ಣನು ಕೊಳಲು ಊದಿದೊಡನೆ, ಪ್ರಕೃತಿಯು ಹೇಗೆ ಪರವಶವಾಯಿತು ಎನ್ನುವದನ್ನು ಪುರಂದರದಾಸರು ಇಲ್ಲಿ ತೋರಿಸಿದ್ದಾರೆ.
ದೈವೀ ಚೈತನ್ಯದಿಂದ ಜರಗುವ ವಿಸ್ಮಯಸಾಧನೆಯ ವರ್ಣನೆ ಇಲ್ಲಿದೆ.
ಕನ್ನಡದ ನವೋದಯ ಕಾವ್ಯದಲ್ಲಂತೂ ವಿಸ್ಮಯರಸವು ಹೇರಳವಾಗಿ ಸಿಗುತ್ತದೆ. ಜಿ.ಪಿ.ರಾಜರತ್ನಮ್ ಅವರ ಸೃಷ್ಟಿಯಾದ ಯೆಂಡ್ಕುಡುಕ ರತ್ನನ ಈ ಉದ್ಗಾರವನ್ನು ನೋಡಿರಿ:
“ಎಲೆಲೆ ರಸ್ತೆ,
ಏನು ಅವ್ಯವಸ್ಥೆ!”
ಇಲ್ಲಿ ಅವ್ಯವಸ್ಥೆಯಾಗಿರುವದು ಯೆಂಡ್ಕುಡುಕನ ಬುದ್ಧಿ.
ತೋಲಾಡುತ್ತಿರುವ ಅವನಿಗೆ ರಸ್ತೆಯೇ ಅಡ್ಡಾದಿಡ್ಡಿಯಾಗಿ ಕಾಣುತ್ತದೆ.
ಕೆ.ಎಸ್. ನರಸಿಂಹಸ್ವಾಮಿಯವರ ದಾಂಪತ್ಯಗೀತೆಗಳಲ್ಲೂ ಸಹ ವಿಸ್ಮಯರಸದ ಸುರಸ ಸೃಷ್ಟಿಯಾಗಿದೆ.
ಪತಿಪತ್ನಿಯರ ಪರಸ್ಪರ ಒಲವು ನರಸಿಂಹಸ್ವಾಮಿಯವರಿಗೆ ಯಾವಾಗಲೂ ಕಾವ್ಯಸ್ಫೂರ್ತಿಯನ್ನು ಒದಗಿಸಿದೆ.
“ ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ,
ನನಗದುವೆ ಕೋಟಿ ರೂಪಾಯಿ”
ಎನ್ನುವ ಸಾಲುಗಳು ಕೊನೆಯ ಪಕ್ಷ ಹೆಂಗಸರಲ್ಲಾದರೂ ವಿಸ್ಮಯ ಹುಟ್ಟಿಸಲಾರವೆ?
ನರಸಿಂಹಸ್ವಾಮಿಯವರ ಮತ್ತೊಂದು ಕವನವನ್ನು ನೋಡಿರಿ:
“ಇವಳು ಯಾರು ಬಲ್ಲೆ ಏನು?
ಇವಳ ದನಿಗೆ ತಿರುಗಲೇನು?
ಇವಳ ಹೆಸರ ಹೇಳಲೇನು?
ಇವಳು ಏತಕೊ, ಎನ್ನ ಬಳಿಗೆ ಸುಳಿದಳು!”
ಈ ಕವನದಲ್ಲಿಯ “ಇವಳು” ಬೇರೆ ಯಾರೂ ಅಲ್ಲ. ಇವಳು ನರಸಿಂಹಸ್ವಾಮಿಯವರ ಹೆಂಡತಿಯೇ.
ಇಲ್ಲಿ ಕವಿಗೆ ವಿಸ್ಮಯವನ್ನು ಹುಟ್ಟಿಸುತ್ತಿರುವದು ಗಂಡಹೆಂಡಿರ ನಡುವಿನ ಒಲವಿನ ಶಕ್ತಿ.
“ಅಂತಿಂಥ ಹೆಣ್ಣು ನೀನಲ್ಲ,
ನಿನ್ನಂಥ ಹೆಣ್ಣು ಇನ್ನಿಲ್ಲ”,
ಎನ್ನುವಾಗಲೂ ಕವಿಯಲ್ಲಿ ಇರುವದು ಬೆರಗಿನ ಭಾವನೆಯೇ.
ಬೇಂದ್ರೆಯವರ ಅನೇಕ ಕವನಗಳನ್ನು ಮನೋಜ್ಞವಾಗಿಸುವ ವಿಶಿಷ್ಟ ಗುಣವೆಂದರೆ ಆ ಕವನಗಳಲ್ಲಿರುವ ವಿಸ್ಮಯಭಾವ.ಬೇಂದ್ರೆಯವರ ಅತ್ಯಂತ ಸರಳ ಕವನದ ಉದಾಹರಣೆಯನ್ನೇ ತೆಗೆದುಕೊಳ್ಳಿರಿ:
‘ಪಾತರಗಿತ್ತಿ ಪಕ್ಕಾ
ನೋಡೀದೇನ ಅಕ್ಕಾ!’
ಈ ಮೊದಲೆರಡು ಸಾಲುಗಳೇ ಕವಿ ಅನುಭವಿಸುತ್ತಿರುವ ಬೆರಗನ್ನು ಓದುಗನಿಗೆ ಹೃದಯಾಂತರಿಸುತ್ತವೆ.
ಕವನದಲ್ಲಿ ಮುಂದುವರೆದಂತೆ ಬೆರಗು ಹುಟ್ಟಿಸುವ ಸಾಲುಗಳಿಗೆ ಏನೂ ಕೊರತೆಯಿಲ್ಲ.
“ ಗಾಳೀ ಕೇನೀಲೇನs
ಮಾಡಿದ್ದಾರ ತಾನ!
ನೂರು ಆರು ಪಾರು
ಯಾರು ಮಾಡಿದ್ದಾರು!”
ಇಂತಹ ಸಾಲುಗಳು ಬೆರಗನ್ನು ಹೆಚ್ಚಿಸುತ್ತಲೇ ಹೋಗುತ್ತವೆ.
ವಿಸ್ಮಯಭಾವವು ಬೇಂದ್ರೆಯವರ ನಿಸರ್ಗಕವನಗಳಿಗೆ ಮಾತ್ರ ಸೀಮಿತವಾಗಿಲ್ಲ.
ಮಕ್ಕಳಾಟವು ಬೇಂದ್ರೆಯವರಲ್ಲಿ ಸಹಜವಾಗಿಯೇ ವಿಸ್ಮಯವನ್ನು ಹುಟ್ಟಿಸುತ್ತಿತ್ತು.
ಆ ಬೆರಗನ್ನು ಅವರು ಸಹೃದಯರೊಡನೆ ಹಂಚಿಕೊಳ್ಳುತ್ತಿದ್ದರು.
“ ಯಾರವ್ವಾ ಇವ ಚೆಲುವಾ
ತನ್ನಷ್ಟಕ್ಕs
ತಾನs ನೋಡಿ ನಲಿವಾ!”
ಎಂದು ಬೇಂದ್ರೆ ನಲಿದಾಡುವ ಶಿಶುವನ್ನು ಕಂಡು ಬೆರಗುಬಡುತ್ತಿದ್ದರು.
ಬೇಂದ್ರೆಯವರ ಪುಟ್ಟ ಮಗಳು ಮಂಗಲಾ ನೀರು ತರಲು ಹೋದಾಗ, ಬೇಲಿಯ ಬದಿಗೆ ಬೆಳೆದಿದ್ದ ಹೂವಿನ ಬಳ್ಳಿಗಳು ಅಚ್ಚರಿಪಟ್ಟವಂತೆ.
ಅವು ಬೆರಗುಗೊಂಡು ತಮ್ಮತಮ್ಮಲ್ಲಿಯೆ ಮಾತನಾಡುವದನ್ನು ಕೇಳಿರಿ :
“ಗುಲಬಾಕ್ಷಿ-ಮಲ್ಲಿಗೆ | ಕೇಳತಾವ ಕಲ್ಲಿಗೆ |
ಕಳಿಸೋದೆ ನೀರಿಗೆ | ಇಂಥ ಸುಕುಮಾರಿಗೆ ||”
ಗೊಂಬೆಯಾಟವಾಡಿ ದಣಿದು ಮಲಗಿಕೊಂಡ ಮಗಳನ್ನು ಕಂಡಾಗ ಬೇಂದ್ರೆಯವರು ವಿಸ್ಮಯಪಡುತ್ತಿದ್ದದ್ದು ಹೀಗೆ:
“ಆಟದ ಗೊಂಬಿ, ನಿಜವೆಂದು ನಂಬಿ
ಮಗ್ಗಲಲಿ ಮಲಗಿಸಿಕೊಂಡ ದಿನವೇಸೊ!”
ವೈರುಧ್ಯಗುಣಗಳುಳ್ಳ ವಸ್ತುಗಳನ್ನು ಒಂದೇ ಕಡೆಯಲ್ಲಿ ಪೋಣಿಸುವದರ ಮೂಲಕ ವಿಸ್ಮಯವನ್ನು ಸೃಷ್ಟಿಸುವದು ವರಕವಿಗಳ ಅಪೂರ್ವ ಸಿದ್ಧಿಗಳಲ್ಲೊಂದು. ಉದಾಹರಣೆಗೆ ಅವರ ‘ಬಾರೊ ಸಾಧನಕೇರಿಗೆ’ ಕವನದಲ್ಲಿ ‘ ಬೇಲಿಗೂ ಹೂ ಬೆರಳಿದೆ ’ ಎನ್ನುವ ಸಾಲು ಬರುತ್ತದೆ.
ಬೇಲಿಯ ಕೆಲಸವೇನು? Job of fence is defense. ಆದುದರಿಂದ ಬೇಲಿಗೆ ಇರಬೇಕಾದದ್ದು ಮುಳ್ಳು. ಆದರೆ ಇಲ್ಲಿ ಬೇಲಿಗೆ ಇದ್ದದ್ದು ‘ ಹೂ ಬೆರಳು ’. ಅಂದರೆ ಇಲ್ಲಿ ಬೇಲಿಯು ನಮ್ಮನ್ನು ಸ್ವಾಗತಿಸುತ್ತಿದೆಯೇ ಹೊರತು ಹೊರಗಿಡುತ್ತಿಲ್ಲ. ಇದು ಬೆರಗನ್ನು ಹುಟ್ಟಿಸುವ ಬೇಂದ್ರೆ ಪರಿ.
ಬೇಂದ್ರೆಯವರ ‘ಬೆಳುದಿಂಗಳ ನೋಡs ’ ಕವನವು ವಿಸ್ಮಯಸೃಷ್ಟಿಯ ಅದ್ಭುತ ಕವನ. ಆ ಕವನದ ಕೆಲವು ಸಾಲುಗಳು ಹೀಗಿವೆ:
“ಮರ ಮರದ ಗೊನೀಗೆ ಕೂತು
ಹಾರಿ ಮೈ ಸೋತು
ತೆಪ್ಪಗs ಗಾsಳಿs
ತೆಪ್ಪಗs ಗಾಳಿ||
ತೂಕಡಸತsದ ತಾನೀಗ
ಜಂಪು ಬಂಧಾಂಗ
ಜಂಪು ಬಂಧಾಂsಗs
ಇದು ಅದರ ತುಪ್ಪಳದ ಗೂsಡs
ಬೆಳುದಿಂಗಳ ನೋಡs ||”
ಈ ಕವನದಲ್ಲಿ ಗಾಳಿಯು ಬೆಳದಿಂಗಳಿನಲ್ಲಿ ಸಮರಸವಾದಂತಹ ಒಂದು ಸಜೀವವಾದ ವಸ್ತುವಾಗುತ್ತದೆ. ಬೆಳದಿಂಗಳು ಈ ಗಾಳಿಯ ತುಪ್ಪಳದ ಗೂಡಾಗುತ್ತದೆ. ನಿರ್ಜೀವ ವಸ್ತುಗಳನ್ನು ಸಜೀವವಾಗಿಸುವ ಮೂಲಕ ಬೇಂದ್ರೆಯವರು ವಿಸ್ಮಯದ ಪರಾಕಾಷ್ಠೆಯನ್ನು ತಲಪುತ್ತಾರೆ.
ವಿಸ್ಮಯಭಾವವನ್ನು ಕವನದಲ್ಲಿ ಹಾಸುಹೊಕ್ಕಾಗಿ ನೇಯ್ದಂತಹ ಅವರ ಉತ್ಕೃಷ್ಟ ಕವನವೆಂದರೆ ‘ಬೆಳಗು’.
ಈ ಕವನದ ಮೊದಲ ಎರಡು ನುಡಿಗಳಲ್ಲಿ ಸೂರ್ಯೋದಯವಾಗುತ್ತಿರುವ ವರ್ಣನೆ ಇದೆ. ಮುಂದಿನ ಮೂರು ನುಡಿಗಳಲ್ಲಿ ಸೂರ್ಯೋದಯದ ಸಮಯದಲ್ಲಿಯ ನಿಸರ್ಗದ ವರ್ಣನೆ ಇದೆ. ಕೊನೆಯ ಎರಡು ನುಡಿಗಳಲ್ಲಿ ಕವಿಯ ಮನಸ್ಸಿನ ಮೇಲಾದ ಪರಿಣಾಮದ ವರ್ಣನೆ ಇದೆ.
ಈ ಕವನದ ಮೊದಲ ಎರಡು ನುಡಿಗಳನ್ನು ನೋಡಿರಿ:
==೧==
ಮೂಡಲ ಮನೆಯಾ ಮುತ್ತಿನ ನೀರಿನ
ಎರಕsವ ಹೊಯ್ದಾ
ನುಣ್ಣ-ನ್ನೆರಕsವ ಹೊಯ್ದಾ
ಬಾಗಿಲು ತೆರೆದೂ ಬೆಳಕು ಹರಿದೂ
ಜಗವೆಲ್ಲಾ ತೊಯ್ದಾ
ಹೋಯ್ತೋ-ಜಗವೆಲ್ಲಾ ತೊಯ್ದಾ
==೨==
ರತ್ನದ ರಸದಾ ಕಾರಂಜೀಯೂ
ಪುಟಪುಟನೇ ಪುಟಿದು
ತಾನೇ-ಪುಟಪುಟನೇ ಪುಟಿದು
ಮಘಮಘಿಸುವಾ ಮುಗಿದ ಮೊಗ್ಗೀ
ಪಟಪಟನೇ ಒಡೆದು
ತಾನೇ-ಪಟಪಟನೇ ಒಡೆದು
ನಿದ್ರಿಸುತ್ತಿರುವ ಜಗವು ತನ್ನ ಬಾಗಿಲನ್ನು ತೆರೆದಾಗ, ಬೆಳಕು ಹರಿದು ಬಂದು ಇಡಿ ಜಗತ್ತೇ ಆ ಬೆಳಕಿನಿಂದ ತೊಯ್ದು ಹೋಯಿತು ಎಂದು ಬೇಂದ್ರೆ ಹೇಳುತ್ತಾರೆ. ಬೇಂದ್ರೆಯವರು ತಾನು ಅನುಭವಿಸಿದ ಅಚ್ಚರಿಯನ್ನು ಓದುಗರಿಗೂ ಈ ರೀತಿಯಲ್ಲಿ ನೀಡುತ್ತಿದ್ದಾರೆ.
ಮೊದಲ ನುಡಿಯಲ್ಲಿ ಬೆಳಕು ಮುತ್ತಿನ ನೀರಿನಂತೆ ಸೌಮ್ಯವಾಗಿದ್ದರೆ, ಎರಡನೆಯ ನುಡಿಯಲ್ಲಿ ಅದು ರತ್ನದ ರಸದಂತೆ ಪ್ರಖರವಾಗಿದೆ. ಬೇಂದ್ರೆಯವರು ವಾಸ್ತವತೆಗೆ ಬದ್ಧರಾಗಿರುತ್ತಾರೆ ಎನ್ನುವದಕ್ಕೆ ಇದೊಂದು ನಿದರ್ಶನ.
ಈ ಬೆಳಕು ಹರಡುವ ಕ್ರಮವನ್ನು ಬೇಂದ್ರೆ “ಮುಗಿದ ಮೊಗ್ಗಿ ಪಟಪಟನೆ ಒಡೆದು” ಎಂದು ಬಣ್ಣಿಸುತ್ತಾರೆ.
ಅಂದರೆ ಬೆಳಕು ಕ್ಷಣಕ್ಷಣಕ್ಕೆ ಹೆಚ್ಚುತ್ತಿರುವದರ ವರ್ಣನೆ ಇದು. ವಿಶ್ವನಿಯಾಮಕ ಭಗವಂತನಿಗೆ ಕೈಮುಗಿದು ಹುಟ್ಟುತ್ತಿರುವ ಸೂರ್ಯನು “ಮುಗಿದ ಮೊಗ್ಗಿ” ಇದ್ದಂತೆ. ಹೂವು ತನ್ನ ಪಕಳೆಗಳನ್ನು ಬಿಚ್ಚುವಂತೆ (unfolding in quick succession) ಆತನು ಪಟಪಟನೆ ಒಡೆದು ಬೆಳಕನ್ನು ನೀಡುತ್ತಾನೆ. ಅದ್ಭುತವಾದ ಕ್ರಿಯೆಯನ್ನು ಅದ್ಭುತವಾಗಿ ವರ್ಣಿಸುವ ಈ ಸಾಲುಗಳು ಓದುಗನಲ್ಲಿ ಬೆರಗನ್ನು ಹುಟ್ಟಿಸುತ್ತವೆ.
[ಟಿಪ್ಪಣಿ: ಶ್ರೀ ಪ್ರಭುಶಂಕರ ಅವರು ಕನ್ನಡದ ಖ್ಯಾತ ವಿಮರ್ಶಕರು. ಯಾಕೋ ಏನೊ ಅವರಿಗೆ “ಪಟಪಟನೆ ಒಡೆದು” ಎನ್ನುವ ಸಾಲುಗಳು ಅರ್ಥವಾಗಲಿಲ್ಲ. ಅವರು ತಮ್ಮ ಗುರುಗಳಾದ ಕುವೆಂಪು ಅವರ ಬಳಿಗೆ ಹೋಗಿ “ಬೇಂದ್ರೆಯವರು ‘ಪಟಪಟನೆ ಒಡೆದು’ ಎಂದು ಬರೆದಿದ್ದಾರಲ್ಲ ; ಸೂರ್ಯೋದಯದ ವೇಳೆಗೆ ಪಟಪಟ ಎನ್ನುವ ಶಬ್ದವಾಗುತ್ತದೆಯೆ?” ಎಂದು ಟೀಕಿಸಿದರು. ಅದಕ್ಕೆ ಕುವೆಂಪುರವರು “ದೊಡ್ಡ ಕವಿಗಳಿಗೆ ಹಾಗೆಲ್ಲ ಅನ್ನಬೇಡಿರಿ; ಅದರ ಅರ್ಥ ನಿಮಗೆ ಆಗುವದಿಲ್ಲ” ಎಂದು ಹೇಳಿ ಕಳಿಸಿದರು. ಪ್ರಭುಶಂಕರರು ಹಿರಿಯ ವಿಮರ್ಶಕರು. ಅಂಥವರಿಗೆ ‘ಪಟಪಟನೆ ಒಡೆದು= unfolding in quick succession’ ಎಂದು ಇಂಗ್ಲೀಶಿನಲ್ಲಿ ತಿಳಿಸಬೇಕಾದದ್ದು ಕನ್ನಡಿಗರ ದೌರ್ಭಾಗ್ಯ! ]
‘ಬೆಳಗು’ ಕವನದ ಮೂರನೆಯ ನುಡಿಯನ್ನು ನೋಡಿರಿ:
==೩==
“ಎಲೆಗಳ ಮೇಲೇ ಹೂಗಳ ಒಳಗೇ
ಅಮೃತsದ ಬಿಂದು
ಕಂಡವು-ಅಮೃತsದ ಬಿಂದು
ಯಾರಿರಿಸಿರುವರು ಮುಗಿಲs ಮೇಲಿಂ-
ದಿಲ್ಲಿಗೇ ತಂದು
ಈಗ-ಇಲ್ಲಿಗೇ ತಂದು.”
ಎಲೆಗಳ ಮೇಲೆ ಹಾಗೂ ಹೂವುಗಳ ಒಳಗೆ ಕಾಣುವ ಇಬ್ಬನಿಗಳು ಕ್ಷಣಾರ್ಧದಲ್ಲಿ ಮಾಯವಾಗಿ ಹೋಗುವ ವಸ್ತುಗಳು. ಇವು ಕವಿಗೆ ಅಮೃತದ ಬಿಂದುಗಳಂತೆ ಅಂದರೆ ಶಾಶ್ವತವಾದ ವಸ್ತುಗಳಂತೆ ಕಾಣುವವು. ಇಂತಹ ವೈರುಧ್ಯವು ಕವಿಯಲ್ಲಿ ಪ್ರಕೃತಿಯಲ್ಲಿಯ ಬೆರಗನ್ನು ತೋರಿಸುತ್ತದೆ. ಇದು ದೃಶ್ಯದ ಅನುಭವ.
ಇದರ ಮುಂದಿನ ನುಡಿಯಲ್ಲಿ ಸ್ಪರ್ಶದ ಹಾಗೂ ಗಂಧದ ಅನುಭವವಿದೆ.
=೪=
ತಂಗಾಳೀಯಾ ಕೈಯೊಳಗಿರಿಸೀ
ಎಸಳೀನಾ ಚವರಿ
ಹೂವಿನ-ಎಸಳೀನಾ ಚವರಿ
ಹಾರಿಸಿಬಿಟ್ಟರು ತುಂಬಿಯ ದಂಡು
ಮೈಯೆಲ್ಲಾ ಸವರಿ
ಗಂಧಾ-ಮೈಯೆಲ್ಲಾ ಸವರಿ.
ಮುಂಜಾವಿನ ತಂಗಾಳಿ ಬೀಸಿದಾಗ ಹೂವು ಅಲುಗಾಡುತ್ತವೆ. ಇದು ಕವಿಯ ಕಣ್ಣಿಗೆ ಚಾಮರವನ್ನು ಬೀಸಿದಂತೆ ಕಾಣುತ್ತದೆ.
ಹೂವು ಅಲುಗಾಡಿದಾಗ ಅಲ್ಲಿ ಕುಳಿತ ತುಂಬಿಗಳು ಹಾರಿ ಬಿಡುತ್ತವೆ.
ತುಂಬಿಗಳ ಮೈಗೆ ಗಂಧ ಸವರಿ ಹಾರಿಸಿಬಿಟ್ಟರು ಎಂದು ಬೇಂದ್ರೆಯವರು ಹೇಳುತ್ತಾರೆ.
ಹೀಗೆ ಹಾರಿಸಿಬಿಟ್ಟವರು ಯಾರು? ಅದು ನಿಸರ್ಗಚೈತನ್ಯ. ಆ ಚೈತನ್ಯವನ್ನು ಭಗವಂತ ಎಂದು ಕರೆಯಬಹುದು.
ಈ ರೀತಿಯಾಗಿ ನಿಸರ್ಗಚೈತನ್ಯದ ಬಗೆಗೆ ಬೆರಗಿನ ಭಾವವನ್ನು ಬೇಂದ್ರೆಯವರು ಓದುಗನಲ್ಲಿ ಹುಟ್ಟಿಸುತ್ತಾರೆ.
ಇದೇ ರೀತಿಯಲ್ಲಿ ಇದರ ಮುಂದಿನ ನುಡಿಯಲ್ಲಿ ಶ್ರವಣದ ಅನುಭವವಿದೆ:
==೫==
“ಗಿಡಗಂಟೆಯಾ ಕೊರಳೊಳಗಿಂದ
ಹಕ್ಕೀಗಳ ಹಾಡು
ಹೊರಟಿತು-ಹಕ್ಕೀಗಳ ಹಾಡು
ಗಂಧರ್ವರಾ ಸೀಮೆಯಾಯಿತು
ಕಾಡಿನಾ ನಾಡು
ಕ್ಷಣದೊಳು-ಕಾಡಿನಾ ನಾಡು ”
ಹಕ್ಕಿಗಳ ಹಾಡು ಗಿಡಗಂಟೆಗಳ ಕೊರಳೊಳಗಿಂದ ಹೊರಟಿತು ಎಂದು ಹೇಳುವ ಮೂಲಕ ಬೇಂದ್ರೆಯವರು ಚರಾಚರ ಪ್ರಕೃತಿಯು ಸಜೀವವಾಗಿ ಎದ್ದು ಬರುವದನ್ನು ಅನುಭವಿಸುತ್ತಾರೆ ಹಾಗು ಹಾಡುತ್ತಾರೆ.
ಈ ರೀತಿಯಲ್ಲಿ ಪಂಚೇಂದ್ರಿಯಗಳ ಅನುಭವವು ಕಾಡಿನ ನಾಡನ್ನು ಗಂಧರ್ವರ ನಾಡನ್ನಾಗಿ ಮಾರ್ಪಡಿಸುತ್ತದೆ. ಆದರೆ ಈ ಎಲ್ಲ ಅನುಭವಗಳನ್ನು ಅನುಭವಿಸಬೇಕಾದದ್ದು ಮನಸ್ಸೇ ತಾನೆ? ಅದು ಎಂತಹ ಮನಸ್ಸು? ದೇವರು ನೀಡಿದ ಮನಸ್ಸು. ಆ ಅನುಭವವು ಆರನೆಯ ನುಡಿಯಲ್ಲಿದೆ.
==೬==
ಕಂಡಿತು ಕಣ್ಣು ಸವಿದಿತು ನಾಲಗೆ
ಪಡೆದೀತೀ ದೇಹ
ಸ್ಪರ್ಶಾ-ಪಡೆದೀತೀ ದೇಹ
ಕೇಳಿತು ಕಿವಿಯು ಮೂಸಿತು ಮೂಗು
ತನ್ಮಯವೀ ಗೇಹಾ
ದೇವರ-ದೀ ಮನಸಿನ ಗೇಹಾ.
ಈ ರೀತಿಯಾಗಿ ಪಂಚೇಂದ್ರಿಯಗಳ ಮೂಲಕ ಪಡೆದ ಲೌಕಿಕ ಅನುಭವವು ‘ಅ--ಲೌಕಿಕ’ ಅನುಭವವಾಗಿ ಮಾರ್ಪಡುವ ವಿಸ್ಮಯಜನಕ ಕ್ರಿಯೆಯನ್ನು ಕವಿಯು ಅನುಭವಿಸುತ್ತಾನೆ ಹಾಗು ಸಹೃದಯ ಓದುಗರೊಡನೆ ಹಂಚಿಕೊಳ್ಳುತ್ತಾನೆ.
ಆ ‘ಅಲೌಕಿಕತೆ’ಯ ವರ್ಣನೆ ಮುಂದಿನ ನುಡಿಯಲ್ಲಿದೆ.
==೬==
ಅರಿಯದು ಅಳವು ತಿಳಿಯದು ಮನವು
ಕಾಣsದೋ ಬಣ್ಣಾ
ಕಣ್ಣಿಗೆ-ಕಾಣsದೋ ಬಣ್ಣಾ.
ಶಾಂತೀರಸವೇ ಪ್ರೀತೀಯಿಂದಾ
ಮೈದೋರಿತಣ್ಣಾ
ಇದು ಬರಿ-ಬೆಳಗಲ್ಲೋ ಅಣ್ಣಾ.
ಈ ರೀತಿಯಾಗಿ ಪ್ರಕೃತಿಯಲ್ಲಿಯ ವಿಸ್ಮಯರಸವನ್ನು ತಾವು ಅನುಭವಿಸಿ, ತಮ್ಮ ಕವನದ ಮೂಲಕ ಸಹೃದಯ ಓದುಗನಲ್ಲಿ ರಸಾನುಭವ ಹುಟ್ಟಿಸುವದರ ಮೂಲಕ ಬೇಂದ್ರೆಯವರು ಕನ್ನಡ ಕಾವ್ಯಕ್ಕೆ ಅಪೂರ್ವ ಕಾಣಿಕೆಯನ್ನಿತ್ತಿದ್ದಾರೆಂದು ಹೇಳಬಹುದು.
ಕನ್ನಡ ಕವಿಗಳು ತಮ್ಮ ಕಾವ್ಯದಲ್ಲಿ ವಿಸ್ಮಯರಸವನ್ನು ಬಳಸಿಕೊಂಡು ಸಹೃದಯ ಓದುಗನ ಮನಸ್ಸನ್ನು ಪರವಶಗೊಳಿಸಿದ್ದಾರೆ ಹಾಗೂ ಕನ್ನಡ ಕಾವ್ಯಕ್ಕೆ ವೈಭವ ತಂದುಕೊಟ್ಟಿದ್ದಾರೆ ಎನ್ನಬಹುದು.
(ನನ್ನೊಡನೆ ಚರ್ಚಿಸಿ, ಈ ಲೇಖನಕ್ಕೆ ಕಾರಣರಾದ ಶ್ರೀ ವ್ಯಾಸ ದೇಶಪಾಂಡೆಯವರಿಗೆ ಹಾಗು ಲೇಖನ ಸಿದ್ಧಪಡಿಸುವಾಗ ನೆರವು ನೀಡಿದ ನನ್ನ ನಿರಂತರ ವಿಮರ್ಶಕಿಯಾದ ನನ್ನ ಅರ್ಧಾಂಗಿನಿ ಶ್ರೀಮತಿ ವನಮಾಲಾ ಇವರಿಗೆ ಕೃತಜ್ಞನಾಗಿದ್ದೇನೆ.)
ನಡುಗನ್ನಡ ಕನ್ನಡಸಾಹಿತ್ಯವನ್ನು ಅವಲೋಕಿಸಿದಾಗ, ಶರಣರ ವಚನಗಳಲ್ಲಿ ವಿಸ್ಮಯರಸದ ಅನೇಕ ನಿದರ್ಶನಗಳು ದೊರೆಯುತ್ತವೆ.
ಬಸವಣ್ಣನವರ ಈ ವಚನವನ್ನೇ ಉದಾಹರಣೆಗೆ ತೆಗೆದುಕೊಳ್ಳಿರಿ:
“ಜಗದಗಲ ಮುಗಿಲಗಲ ಮಿಗೆಯಗಲ ನಿಮ್ಮಗಲ,
ಪಾತಾಲದಿಂದತ್ತತ್ತ ನಿಮ್ಮ ಶ್ರೀಚರಣ,
ಬ್ರಹ್ಮಾಂಡದಿಂದತ್ತತ್ತ ನಿಮ್ಮ ಶ್ರೀಮುಕುಟ,
ಅಗಮ್ಯ ಅಗೋಚರ ಅಪ್ರತಿಮ ಲಿಂಗವೆ, ಕೂಡಲ ಸಂಗಮ ದೇವಯ್ಯಾ,
ಎನ್ನ ಕರಸ್ಥಲಕ್ಕೆ ಬಂದು ಚುಳುಕಾದಿರಯ್ಯಾ!”
ಭಗವಂತನ ಮಹತಿಗೆ ಬೆರಗಾದ ಭಕ್ತನ ಉದ್ಗಾರವನ್ನು ನಾವು ಈ ವಚನದಲ್ಲಿ ಕಾಣುತ್ತೇವೆ.
ಈ ವಿಸ್ಮಯರಸದ ಬಗೆಗೆ ಇತ್ತೀಚೆಗೆ ಕನ್ನಡದ ಖ್ಯಾತ ನಾಟಕಕಾರ ವ್ಯಾಸ ದೇಶಪಾಂಡೆಯವರ ಜೊತೆಗೆ ಚರ್ಚೆ ನಡೆದಾಗ, ಅವರು ಸರ್ವಜ್ಞನ ವಚನವೊಂದರ ವಿವರಣೆಯನ್ನು ನೀಡಿದರು.
ಆ ವಚನ ಹಾಗು ಅವರ ವಿವರಣೆ ಹೀಗಿದೆ:
“ ಎಲುವಿಲ್ಲ ನಾಲಗೆಗೆ, ಬಲವಿಲ್ಲ ಬಡವಂಗೆ
ತೊಲೆ ಕಂಬವಿಲ್ಲ ಗಗನಕ್ಕೆ, ದೇವರಲಿ
ಕುಲ ಗೋತ್ರವಿಲ್ಲ ಸರ್ವಜ್ಞ”
ನಾಲಿಗೆಗೆ ಎಲುವಿಲ್ಲ ಎನ್ನುವದು ಎಲ್ಲರ ಅನುಭವಕ್ಕೂ ಬರುವ ಭೌತಿಕ ಸತ್ಯ. ಅದರಂತೆ ಬಡವನಿಗೆ ಬಲವಿಲ್ಲ ಎನ್ನುವದು ಒಂದು ಲೌಕಿಕ ಸತ್ಯ. ಮೊದಲಿಗೆ ಈ ಎರಡು ಅನುಭವವೇದ್ಯ ಸತ್ಯಗಳನ್ನು ಹೇಳುವ ಸರ್ವಜ್ಞ, ಆ ಬಳಿಕ ’ತೊಲೆ ಕಂಬವಿಲ್ಲ ಗಗನಕ್ಕೆ’ ಎಂದು ಹೇಳುವ ಮೂಲಕ ಒಂದು meta physical ಸತ್ಯವನ್ನು ಹೇಳುತ್ತಾನೆ. ಆ ಬಳಿಕ ‘ಕುಲ ಗೋತ್ರವಿಲ್ಲ ದೇವರಲಿ’ ಎನ್ನುವ ‘ಅ--ಲೌಕಿಕ’ ಸತ್ಯವನ್ನು ಉಸುರುವ ಮೂಲಕ ಕೇಳುಗರನ್ನು ಪ್ರಭಾವಿತರನ್ನಾಗಿ ಮಾಡುತ್ತಾನೆ. ಇದು ವಿಸ್ಮಯರಸದ ಪ್ರಯೋಜನ.
ಕನಕದಾಸರ ಕೀರ್ತನೆಯಲ್ಲಿಯೂ ಸಹ ಇದೇ ರೀತಿಯ ವಿಸ್ಮಯರಚನೆ ಇದೆ:
“ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ
ನೀ ದೇಹದೊಳಗೊ ನಿನ್ನೊಳೊ ದೇಹವೊ ಹರಿಯೆ”
ದೇಹವನ್ನು ಸೃಷ್ಟಿಸಿದವನು ಭಗವಂತ. ಆದುದರಿಂದ ಭಗವಂತನಲ್ಲಿ ದೇಹವಿದೆ. ಆದರೆ ಅದೇ ದೇಹದಲ್ಲಿ ಭಗವಂತನೂ ಇದ್ದಾನೆ. ಕನಕದಾಸರು ಭಗವಂತನ ಮಹತಿಯನ್ನು ಅನುಭವಿಸಲು, ಅನುಭವಿಸಿದ್ದನ್ನು ಸಾರಲು ಈ ರೀತಿಯಾಗಿ ವಿಸ್ಮಯವನ್ನು ಪ್ರದರ್ಶಿಸುತ್ತಾರೆ.
ಇದೇ ರೀತಿಯಲ್ಲಿ ಪುರಂದರದಾಸರ ಕೆಲವು ಕೀರ್ತನೆಗಳಲ್ಲಿಯೂ ವಿಸ್ಮಯಭಾವನೆಯು ಕಾಣಸಿಗುತ್ತದೆ.
ಉದಾಹರಣೆಗೆ ಅವರ ಈ ಕೀರ್ತನೆಯನ್ನು ನೋಡಿರಿ:
“ರಂಗ ಕೊಳಲನೂದಲಾಗಿ ಮಂಗಳಮಯವಾಯ್ತು ಧರೆ ಜ-
ಗಂಗಳು ಚೈತನ್ಯ ಮರೆದು ಅಂಗಪರವಶವಾದವು ||ಪಲ್ಲ||
ತೀಡಿದ ಮಾರುತ ಮಂದಗತಿಗೈಯೆ ಬಾಡಿದ ಅರಲು ಫಲಗೊಂಚಲು ಬಿಡೆ
ಪಾಡಲೊಲ್ಲವಳಿಕುಲಗಳು ಬಾಡಿದ ಮಾಮರ ಚಿಗುರೊಡೆಯೆ
................................."
ಕೃಷ್ಣನು ಕೊಳಲು ಊದಿದೊಡನೆ, ಪ್ರಕೃತಿಯು ಹೇಗೆ ಪರವಶವಾಯಿತು ಎನ್ನುವದನ್ನು ಪುರಂದರದಾಸರು ಇಲ್ಲಿ ತೋರಿಸಿದ್ದಾರೆ.
ದೈವೀ ಚೈತನ್ಯದಿಂದ ಜರಗುವ ವಿಸ್ಮಯಸಾಧನೆಯ ವರ್ಣನೆ ಇಲ್ಲಿದೆ.
ಕನ್ನಡದ ನವೋದಯ ಕಾವ್ಯದಲ್ಲಂತೂ ವಿಸ್ಮಯರಸವು ಹೇರಳವಾಗಿ ಸಿಗುತ್ತದೆ. ಜಿ.ಪಿ.ರಾಜರತ್ನಮ್ ಅವರ ಸೃಷ್ಟಿಯಾದ ಯೆಂಡ್ಕುಡುಕ ರತ್ನನ ಈ ಉದ್ಗಾರವನ್ನು ನೋಡಿರಿ:
“ಎಲೆಲೆ ರಸ್ತೆ,
ಏನು ಅವ್ಯವಸ್ಥೆ!”
ಇಲ್ಲಿ ಅವ್ಯವಸ್ಥೆಯಾಗಿರುವದು ಯೆಂಡ್ಕುಡುಕನ ಬುದ್ಧಿ.
ತೋಲಾಡುತ್ತಿರುವ ಅವನಿಗೆ ರಸ್ತೆಯೇ ಅಡ್ಡಾದಿಡ್ಡಿಯಾಗಿ ಕಾಣುತ್ತದೆ.
ಕೆ.ಎಸ್. ನರಸಿಂಹಸ್ವಾಮಿಯವರ ದಾಂಪತ್ಯಗೀತೆಗಳಲ್ಲೂ ಸಹ ವಿಸ್ಮಯರಸದ ಸುರಸ ಸೃಷ್ಟಿಯಾಗಿದೆ.
ಪತಿಪತ್ನಿಯರ ಪರಸ್ಪರ ಒಲವು ನರಸಿಂಹಸ್ವಾಮಿಯವರಿಗೆ ಯಾವಾಗಲೂ ಕಾವ್ಯಸ್ಫೂರ್ತಿಯನ್ನು ಒದಗಿಸಿದೆ.
“ ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ,
ನನಗದುವೆ ಕೋಟಿ ರೂಪಾಯಿ”
ಎನ್ನುವ ಸಾಲುಗಳು ಕೊನೆಯ ಪಕ್ಷ ಹೆಂಗಸರಲ್ಲಾದರೂ ವಿಸ್ಮಯ ಹುಟ್ಟಿಸಲಾರವೆ?
ನರಸಿಂಹಸ್ವಾಮಿಯವರ ಮತ್ತೊಂದು ಕವನವನ್ನು ನೋಡಿರಿ:
“ಇವಳು ಯಾರು ಬಲ್ಲೆ ಏನು?
ಇವಳ ದನಿಗೆ ತಿರುಗಲೇನು?
ಇವಳ ಹೆಸರ ಹೇಳಲೇನು?
ಇವಳು ಏತಕೊ, ಎನ್ನ ಬಳಿಗೆ ಸುಳಿದಳು!”
ಈ ಕವನದಲ್ಲಿಯ “ಇವಳು” ಬೇರೆ ಯಾರೂ ಅಲ್ಲ. ಇವಳು ನರಸಿಂಹಸ್ವಾಮಿಯವರ ಹೆಂಡತಿಯೇ.
ಇಲ್ಲಿ ಕವಿಗೆ ವಿಸ್ಮಯವನ್ನು ಹುಟ್ಟಿಸುತ್ತಿರುವದು ಗಂಡಹೆಂಡಿರ ನಡುವಿನ ಒಲವಿನ ಶಕ್ತಿ.
“ಅಂತಿಂಥ ಹೆಣ್ಣು ನೀನಲ್ಲ,
ನಿನ್ನಂಥ ಹೆಣ್ಣು ಇನ್ನಿಲ್ಲ”,
ಎನ್ನುವಾಗಲೂ ಕವಿಯಲ್ಲಿ ಇರುವದು ಬೆರಗಿನ ಭಾವನೆಯೇ.
ಬೇಂದ್ರೆಯವರ ಅನೇಕ ಕವನಗಳನ್ನು ಮನೋಜ್ಞವಾಗಿಸುವ ವಿಶಿಷ್ಟ ಗುಣವೆಂದರೆ ಆ ಕವನಗಳಲ್ಲಿರುವ ವಿಸ್ಮಯಭಾವ.ಬೇಂದ್ರೆಯವರ ಅತ್ಯಂತ ಸರಳ ಕವನದ ಉದಾಹರಣೆಯನ್ನೇ ತೆಗೆದುಕೊಳ್ಳಿರಿ:
‘ಪಾತರಗಿತ್ತಿ ಪಕ್ಕಾ
ನೋಡೀದೇನ ಅಕ್ಕಾ!’
ಈ ಮೊದಲೆರಡು ಸಾಲುಗಳೇ ಕವಿ ಅನುಭವಿಸುತ್ತಿರುವ ಬೆರಗನ್ನು ಓದುಗನಿಗೆ ಹೃದಯಾಂತರಿಸುತ್ತವೆ.
ಕವನದಲ್ಲಿ ಮುಂದುವರೆದಂತೆ ಬೆರಗು ಹುಟ್ಟಿಸುವ ಸಾಲುಗಳಿಗೆ ಏನೂ ಕೊರತೆಯಿಲ್ಲ.
“ ಗಾಳೀ ಕೇನೀಲೇನs
ಮಾಡಿದ್ದಾರ ತಾನ!
ನೂರು ಆರು ಪಾರು
ಯಾರು ಮಾಡಿದ್ದಾರು!”
ಇಂತಹ ಸಾಲುಗಳು ಬೆರಗನ್ನು ಹೆಚ್ಚಿಸುತ್ತಲೇ ಹೋಗುತ್ತವೆ.
ವಿಸ್ಮಯಭಾವವು ಬೇಂದ್ರೆಯವರ ನಿಸರ್ಗಕವನಗಳಿಗೆ ಮಾತ್ರ ಸೀಮಿತವಾಗಿಲ್ಲ.
ಮಕ್ಕಳಾಟವು ಬೇಂದ್ರೆಯವರಲ್ಲಿ ಸಹಜವಾಗಿಯೇ ವಿಸ್ಮಯವನ್ನು ಹುಟ್ಟಿಸುತ್ತಿತ್ತು.
ಆ ಬೆರಗನ್ನು ಅವರು ಸಹೃದಯರೊಡನೆ ಹಂಚಿಕೊಳ್ಳುತ್ತಿದ್ದರು.
“ ಯಾರವ್ವಾ ಇವ ಚೆಲುವಾ
ತನ್ನಷ್ಟಕ್ಕs
ತಾನs ನೋಡಿ ನಲಿವಾ!”
ಎಂದು ಬೇಂದ್ರೆ ನಲಿದಾಡುವ ಶಿಶುವನ್ನು ಕಂಡು ಬೆರಗುಬಡುತ್ತಿದ್ದರು.
ಬೇಂದ್ರೆಯವರ ಪುಟ್ಟ ಮಗಳು ಮಂಗಲಾ ನೀರು ತರಲು ಹೋದಾಗ, ಬೇಲಿಯ ಬದಿಗೆ ಬೆಳೆದಿದ್ದ ಹೂವಿನ ಬಳ್ಳಿಗಳು ಅಚ್ಚರಿಪಟ್ಟವಂತೆ.
ಅವು ಬೆರಗುಗೊಂಡು ತಮ್ಮತಮ್ಮಲ್ಲಿಯೆ ಮಾತನಾಡುವದನ್ನು ಕೇಳಿರಿ :
“ಗುಲಬಾಕ್ಷಿ-ಮಲ್ಲಿಗೆ | ಕೇಳತಾವ ಕಲ್ಲಿಗೆ |
ಕಳಿಸೋದೆ ನೀರಿಗೆ | ಇಂಥ ಸುಕುಮಾರಿಗೆ ||”
ಗೊಂಬೆಯಾಟವಾಡಿ ದಣಿದು ಮಲಗಿಕೊಂಡ ಮಗಳನ್ನು ಕಂಡಾಗ ಬೇಂದ್ರೆಯವರು ವಿಸ್ಮಯಪಡುತ್ತಿದ್ದದ್ದು ಹೀಗೆ:
“ಆಟದ ಗೊಂಬಿ, ನಿಜವೆಂದು ನಂಬಿ
ಮಗ್ಗಲಲಿ ಮಲಗಿಸಿಕೊಂಡ ದಿನವೇಸೊ!”
ವೈರುಧ್ಯಗುಣಗಳುಳ್ಳ ವಸ್ತುಗಳನ್ನು ಒಂದೇ ಕಡೆಯಲ್ಲಿ ಪೋಣಿಸುವದರ ಮೂಲಕ ವಿಸ್ಮಯವನ್ನು ಸೃಷ್ಟಿಸುವದು ವರಕವಿಗಳ ಅಪೂರ್ವ ಸಿದ್ಧಿಗಳಲ್ಲೊಂದು. ಉದಾಹರಣೆಗೆ ಅವರ ‘ಬಾರೊ ಸಾಧನಕೇರಿಗೆ’ ಕವನದಲ್ಲಿ ‘ ಬೇಲಿಗೂ ಹೂ ಬೆರಳಿದೆ ’ ಎನ್ನುವ ಸಾಲು ಬರುತ್ತದೆ.
ಬೇಲಿಯ ಕೆಲಸವೇನು? Job of fence is defense. ಆದುದರಿಂದ ಬೇಲಿಗೆ ಇರಬೇಕಾದದ್ದು ಮುಳ್ಳು. ಆದರೆ ಇಲ್ಲಿ ಬೇಲಿಗೆ ಇದ್ದದ್ದು ‘ ಹೂ ಬೆರಳು ’. ಅಂದರೆ ಇಲ್ಲಿ ಬೇಲಿಯು ನಮ್ಮನ್ನು ಸ್ವಾಗತಿಸುತ್ತಿದೆಯೇ ಹೊರತು ಹೊರಗಿಡುತ್ತಿಲ್ಲ. ಇದು ಬೆರಗನ್ನು ಹುಟ್ಟಿಸುವ ಬೇಂದ್ರೆ ಪರಿ.
ಬೇಂದ್ರೆಯವರ ‘ಬೆಳುದಿಂಗಳ ನೋಡs ’ ಕವನವು ವಿಸ್ಮಯಸೃಷ್ಟಿಯ ಅದ್ಭುತ ಕವನ. ಆ ಕವನದ ಕೆಲವು ಸಾಲುಗಳು ಹೀಗಿವೆ:
“ಮರ ಮರದ ಗೊನೀಗೆ ಕೂತು
ಹಾರಿ ಮೈ ಸೋತು
ತೆಪ್ಪಗs ಗಾsಳಿs
ತೆಪ್ಪಗs ಗಾಳಿ||
ತೂಕಡಸತsದ ತಾನೀಗ
ಜಂಪು ಬಂಧಾಂಗ
ಜಂಪು ಬಂಧಾಂsಗs
ಇದು ಅದರ ತುಪ್ಪಳದ ಗೂsಡs
ಬೆಳುದಿಂಗಳ ನೋಡs ||”
ಈ ಕವನದಲ್ಲಿ ಗಾಳಿಯು ಬೆಳದಿಂಗಳಿನಲ್ಲಿ ಸಮರಸವಾದಂತಹ ಒಂದು ಸಜೀವವಾದ ವಸ್ತುವಾಗುತ್ತದೆ. ಬೆಳದಿಂಗಳು ಈ ಗಾಳಿಯ ತುಪ್ಪಳದ ಗೂಡಾಗುತ್ತದೆ. ನಿರ್ಜೀವ ವಸ್ತುಗಳನ್ನು ಸಜೀವವಾಗಿಸುವ ಮೂಲಕ ಬೇಂದ್ರೆಯವರು ವಿಸ್ಮಯದ ಪರಾಕಾಷ್ಠೆಯನ್ನು ತಲಪುತ್ತಾರೆ.
ವಿಸ್ಮಯಭಾವವನ್ನು ಕವನದಲ್ಲಿ ಹಾಸುಹೊಕ್ಕಾಗಿ ನೇಯ್ದಂತಹ ಅವರ ಉತ್ಕೃಷ್ಟ ಕವನವೆಂದರೆ ‘ಬೆಳಗು’.
ಈ ಕವನದ ಮೊದಲ ಎರಡು ನುಡಿಗಳಲ್ಲಿ ಸೂರ್ಯೋದಯವಾಗುತ್ತಿರುವ ವರ್ಣನೆ ಇದೆ. ಮುಂದಿನ ಮೂರು ನುಡಿಗಳಲ್ಲಿ ಸೂರ್ಯೋದಯದ ಸಮಯದಲ್ಲಿಯ ನಿಸರ್ಗದ ವರ್ಣನೆ ಇದೆ. ಕೊನೆಯ ಎರಡು ನುಡಿಗಳಲ್ಲಿ ಕವಿಯ ಮನಸ್ಸಿನ ಮೇಲಾದ ಪರಿಣಾಮದ ವರ್ಣನೆ ಇದೆ.
ಈ ಕವನದ ಮೊದಲ ಎರಡು ನುಡಿಗಳನ್ನು ನೋಡಿರಿ:
==೧==
ಮೂಡಲ ಮನೆಯಾ ಮುತ್ತಿನ ನೀರಿನ
ಎರಕsವ ಹೊಯ್ದಾ
ನುಣ್ಣ-ನ್ನೆರಕsವ ಹೊಯ್ದಾ
ಬಾಗಿಲು ತೆರೆದೂ ಬೆಳಕು ಹರಿದೂ
ಜಗವೆಲ್ಲಾ ತೊಯ್ದಾ
ಹೋಯ್ತೋ-ಜಗವೆಲ್ಲಾ ತೊಯ್ದಾ
==೨==
ರತ್ನದ ರಸದಾ ಕಾರಂಜೀಯೂ
ಪುಟಪುಟನೇ ಪುಟಿದು
ತಾನೇ-ಪುಟಪುಟನೇ ಪುಟಿದು
ಮಘಮಘಿಸುವಾ ಮುಗಿದ ಮೊಗ್ಗೀ
ಪಟಪಟನೇ ಒಡೆದು
ತಾನೇ-ಪಟಪಟನೇ ಒಡೆದು
ನಿದ್ರಿಸುತ್ತಿರುವ ಜಗವು ತನ್ನ ಬಾಗಿಲನ್ನು ತೆರೆದಾಗ, ಬೆಳಕು ಹರಿದು ಬಂದು ಇಡಿ ಜಗತ್ತೇ ಆ ಬೆಳಕಿನಿಂದ ತೊಯ್ದು ಹೋಯಿತು ಎಂದು ಬೇಂದ್ರೆ ಹೇಳುತ್ತಾರೆ. ಬೇಂದ್ರೆಯವರು ತಾನು ಅನುಭವಿಸಿದ ಅಚ್ಚರಿಯನ್ನು ಓದುಗರಿಗೂ ಈ ರೀತಿಯಲ್ಲಿ ನೀಡುತ್ತಿದ್ದಾರೆ.
ಮೊದಲ ನುಡಿಯಲ್ಲಿ ಬೆಳಕು ಮುತ್ತಿನ ನೀರಿನಂತೆ ಸೌಮ್ಯವಾಗಿದ್ದರೆ, ಎರಡನೆಯ ನುಡಿಯಲ್ಲಿ ಅದು ರತ್ನದ ರಸದಂತೆ ಪ್ರಖರವಾಗಿದೆ. ಬೇಂದ್ರೆಯವರು ವಾಸ್ತವತೆಗೆ ಬದ್ಧರಾಗಿರುತ್ತಾರೆ ಎನ್ನುವದಕ್ಕೆ ಇದೊಂದು ನಿದರ್ಶನ.
ಈ ಬೆಳಕು ಹರಡುವ ಕ್ರಮವನ್ನು ಬೇಂದ್ರೆ “ಮುಗಿದ ಮೊಗ್ಗಿ ಪಟಪಟನೆ ಒಡೆದು” ಎಂದು ಬಣ್ಣಿಸುತ್ತಾರೆ.
ಅಂದರೆ ಬೆಳಕು ಕ್ಷಣಕ್ಷಣಕ್ಕೆ ಹೆಚ್ಚುತ್ತಿರುವದರ ವರ್ಣನೆ ಇದು. ವಿಶ್ವನಿಯಾಮಕ ಭಗವಂತನಿಗೆ ಕೈಮುಗಿದು ಹುಟ್ಟುತ್ತಿರುವ ಸೂರ್ಯನು “ಮುಗಿದ ಮೊಗ್ಗಿ” ಇದ್ದಂತೆ. ಹೂವು ತನ್ನ ಪಕಳೆಗಳನ್ನು ಬಿಚ್ಚುವಂತೆ (unfolding in quick succession) ಆತನು ಪಟಪಟನೆ ಒಡೆದು ಬೆಳಕನ್ನು ನೀಡುತ್ತಾನೆ. ಅದ್ಭುತವಾದ ಕ್ರಿಯೆಯನ್ನು ಅದ್ಭುತವಾಗಿ ವರ್ಣಿಸುವ ಈ ಸಾಲುಗಳು ಓದುಗನಲ್ಲಿ ಬೆರಗನ್ನು ಹುಟ್ಟಿಸುತ್ತವೆ.
[ಟಿಪ್ಪಣಿ: ಶ್ರೀ ಪ್ರಭುಶಂಕರ ಅವರು ಕನ್ನಡದ ಖ್ಯಾತ ವಿಮರ್ಶಕರು. ಯಾಕೋ ಏನೊ ಅವರಿಗೆ “ಪಟಪಟನೆ ಒಡೆದು” ಎನ್ನುವ ಸಾಲುಗಳು ಅರ್ಥವಾಗಲಿಲ್ಲ. ಅವರು ತಮ್ಮ ಗುರುಗಳಾದ ಕುವೆಂಪು ಅವರ ಬಳಿಗೆ ಹೋಗಿ “ಬೇಂದ್ರೆಯವರು ‘ಪಟಪಟನೆ ಒಡೆದು’ ಎಂದು ಬರೆದಿದ್ದಾರಲ್ಲ ; ಸೂರ್ಯೋದಯದ ವೇಳೆಗೆ ಪಟಪಟ ಎನ್ನುವ ಶಬ್ದವಾಗುತ್ತದೆಯೆ?” ಎಂದು ಟೀಕಿಸಿದರು. ಅದಕ್ಕೆ ಕುವೆಂಪುರವರು “ದೊಡ್ಡ ಕವಿಗಳಿಗೆ ಹಾಗೆಲ್ಲ ಅನ್ನಬೇಡಿರಿ; ಅದರ ಅರ್ಥ ನಿಮಗೆ ಆಗುವದಿಲ್ಲ” ಎಂದು ಹೇಳಿ ಕಳಿಸಿದರು. ಪ್ರಭುಶಂಕರರು ಹಿರಿಯ ವಿಮರ್ಶಕರು. ಅಂಥವರಿಗೆ ‘ಪಟಪಟನೆ ಒಡೆದು= unfolding in quick succession’ ಎಂದು ಇಂಗ್ಲೀಶಿನಲ್ಲಿ ತಿಳಿಸಬೇಕಾದದ್ದು ಕನ್ನಡಿಗರ ದೌರ್ಭಾಗ್ಯ! ]
‘ಬೆಳಗು’ ಕವನದ ಮೂರನೆಯ ನುಡಿಯನ್ನು ನೋಡಿರಿ:
==೩==
“ಎಲೆಗಳ ಮೇಲೇ ಹೂಗಳ ಒಳಗೇ
ಅಮೃತsದ ಬಿಂದು
ಕಂಡವು-ಅಮೃತsದ ಬಿಂದು
ಯಾರಿರಿಸಿರುವರು ಮುಗಿಲs ಮೇಲಿಂ-
ದಿಲ್ಲಿಗೇ ತಂದು
ಈಗ-ಇಲ್ಲಿಗೇ ತಂದು.”
ಎಲೆಗಳ ಮೇಲೆ ಹಾಗೂ ಹೂವುಗಳ ಒಳಗೆ ಕಾಣುವ ಇಬ್ಬನಿಗಳು ಕ್ಷಣಾರ್ಧದಲ್ಲಿ ಮಾಯವಾಗಿ ಹೋಗುವ ವಸ್ತುಗಳು. ಇವು ಕವಿಗೆ ಅಮೃತದ ಬಿಂದುಗಳಂತೆ ಅಂದರೆ ಶಾಶ್ವತವಾದ ವಸ್ತುಗಳಂತೆ ಕಾಣುವವು. ಇಂತಹ ವೈರುಧ್ಯವು ಕವಿಯಲ್ಲಿ ಪ್ರಕೃತಿಯಲ್ಲಿಯ ಬೆರಗನ್ನು ತೋರಿಸುತ್ತದೆ. ಇದು ದೃಶ್ಯದ ಅನುಭವ.
ಇದರ ಮುಂದಿನ ನುಡಿಯಲ್ಲಿ ಸ್ಪರ್ಶದ ಹಾಗೂ ಗಂಧದ ಅನುಭವವಿದೆ.
=೪=
ತಂಗಾಳೀಯಾ ಕೈಯೊಳಗಿರಿಸೀ
ಎಸಳೀನಾ ಚವರಿ
ಹೂವಿನ-ಎಸಳೀನಾ ಚವರಿ
ಹಾರಿಸಿಬಿಟ್ಟರು ತುಂಬಿಯ ದಂಡು
ಮೈಯೆಲ್ಲಾ ಸವರಿ
ಗಂಧಾ-ಮೈಯೆಲ್ಲಾ ಸವರಿ.
ಮುಂಜಾವಿನ ತಂಗಾಳಿ ಬೀಸಿದಾಗ ಹೂವು ಅಲುಗಾಡುತ್ತವೆ. ಇದು ಕವಿಯ ಕಣ್ಣಿಗೆ ಚಾಮರವನ್ನು ಬೀಸಿದಂತೆ ಕಾಣುತ್ತದೆ.
ಹೂವು ಅಲುಗಾಡಿದಾಗ ಅಲ್ಲಿ ಕುಳಿತ ತುಂಬಿಗಳು ಹಾರಿ ಬಿಡುತ್ತವೆ.
ತುಂಬಿಗಳ ಮೈಗೆ ಗಂಧ ಸವರಿ ಹಾರಿಸಿಬಿಟ್ಟರು ಎಂದು ಬೇಂದ್ರೆಯವರು ಹೇಳುತ್ತಾರೆ.
ಹೀಗೆ ಹಾರಿಸಿಬಿಟ್ಟವರು ಯಾರು? ಅದು ನಿಸರ್ಗಚೈತನ್ಯ. ಆ ಚೈತನ್ಯವನ್ನು ಭಗವಂತ ಎಂದು ಕರೆಯಬಹುದು.
ಈ ರೀತಿಯಾಗಿ ನಿಸರ್ಗಚೈತನ್ಯದ ಬಗೆಗೆ ಬೆರಗಿನ ಭಾವವನ್ನು ಬೇಂದ್ರೆಯವರು ಓದುಗನಲ್ಲಿ ಹುಟ್ಟಿಸುತ್ತಾರೆ.
ಇದೇ ರೀತಿಯಲ್ಲಿ ಇದರ ಮುಂದಿನ ನುಡಿಯಲ್ಲಿ ಶ್ರವಣದ ಅನುಭವವಿದೆ:
==೫==
“ಗಿಡಗಂಟೆಯಾ ಕೊರಳೊಳಗಿಂದ
ಹಕ್ಕೀಗಳ ಹಾಡು
ಹೊರಟಿತು-ಹಕ್ಕೀಗಳ ಹಾಡು
ಗಂಧರ್ವರಾ ಸೀಮೆಯಾಯಿತು
ಕಾಡಿನಾ ನಾಡು
ಕ್ಷಣದೊಳು-ಕಾಡಿನಾ ನಾಡು ”
ಹಕ್ಕಿಗಳ ಹಾಡು ಗಿಡಗಂಟೆಗಳ ಕೊರಳೊಳಗಿಂದ ಹೊರಟಿತು ಎಂದು ಹೇಳುವ ಮೂಲಕ ಬೇಂದ್ರೆಯವರು ಚರಾಚರ ಪ್ರಕೃತಿಯು ಸಜೀವವಾಗಿ ಎದ್ದು ಬರುವದನ್ನು ಅನುಭವಿಸುತ್ತಾರೆ ಹಾಗು ಹಾಡುತ್ತಾರೆ.
ಈ ರೀತಿಯಲ್ಲಿ ಪಂಚೇಂದ್ರಿಯಗಳ ಅನುಭವವು ಕಾಡಿನ ನಾಡನ್ನು ಗಂಧರ್ವರ ನಾಡನ್ನಾಗಿ ಮಾರ್ಪಡಿಸುತ್ತದೆ. ಆದರೆ ಈ ಎಲ್ಲ ಅನುಭವಗಳನ್ನು ಅನುಭವಿಸಬೇಕಾದದ್ದು ಮನಸ್ಸೇ ತಾನೆ? ಅದು ಎಂತಹ ಮನಸ್ಸು? ದೇವರು ನೀಡಿದ ಮನಸ್ಸು. ಆ ಅನುಭವವು ಆರನೆಯ ನುಡಿಯಲ್ಲಿದೆ.
==೬==
ಕಂಡಿತು ಕಣ್ಣು ಸವಿದಿತು ನಾಲಗೆ
ಪಡೆದೀತೀ ದೇಹ
ಸ್ಪರ್ಶಾ-ಪಡೆದೀತೀ ದೇಹ
ಕೇಳಿತು ಕಿವಿಯು ಮೂಸಿತು ಮೂಗು
ತನ್ಮಯವೀ ಗೇಹಾ
ದೇವರ-ದೀ ಮನಸಿನ ಗೇಹಾ.
ಈ ರೀತಿಯಾಗಿ ಪಂಚೇಂದ್ರಿಯಗಳ ಮೂಲಕ ಪಡೆದ ಲೌಕಿಕ ಅನುಭವವು ‘ಅ--ಲೌಕಿಕ’ ಅನುಭವವಾಗಿ ಮಾರ್ಪಡುವ ವಿಸ್ಮಯಜನಕ ಕ್ರಿಯೆಯನ್ನು ಕವಿಯು ಅನುಭವಿಸುತ್ತಾನೆ ಹಾಗು ಸಹೃದಯ ಓದುಗರೊಡನೆ ಹಂಚಿಕೊಳ್ಳುತ್ತಾನೆ.
ಆ ‘ಅಲೌಕಿಕತೆ’ಯ ವರ್ಣನೆ ಮುಂದಿನ ನುಡಿಯಲ್ಲಿದೆ.
==೬==
ಅರಿಯದು ಅಳವು ತಿಳಿಯದು ಮನವು
ಕಾಣsದೋ ಬಣ್ಣಾ
ಕಣ್ಣಿಗೆ-ಕಾಣsದೋ ಬಣ್ಣಾ.
ಶಾಂತೀರಸವೇ ಪ್ರೀತೀಯಿಂದಾ
ಮೈದೋರಿತಣ್ಣಾ
ಇದು ಬರಿ-ಬೆಳಗಲ್ಲೋ ಅಣ್ಣಾ.
ಈ ರೀತಿಯಾಗಿ ಪ್ರಕೃತಿಯಲ್ಲಿಯ ವಿಸ್ಮಯರಸವನ್ನು ತಾವು ಅನುಭವಿಸಿ, ತಮ್ಮ ಕವನದ ಮೂಲಕ ಸಹೃದಯ ಓದುಗನಲ್ಲಿ ರಸಾನುಭವ ಹುಟ್ಟಿಸುವದರ ಮೂಲಕ ಬೇಂದ್ರೆಯವರು ಕನ್ನಡ ಕಾವ್ಯಕ್ಕೆ ಅಪೂರ್ವ ಕಾಣಿಕೆಯನ್ನಿತ್ತಿದ್ದಾರೆಂದು ಹೇಳಬಹುದು.
ಕನ್ನಡ ಕವಿಗಳು ತಮ್ಮ ಕಾವ್ಯದಲ್ಲಿ ವಿಸ್ಮಯರಸವನ್ನು ಬಳಸಿಕೊಂಡು ಸಹೃದಯ ಓದುಗನ ಮನಸ್ಸನ್ನು ಪರವಶಗೊಳಿಸಿದ್ದಾರೆ ಹಾಗೂ ಕನ್ನಡ ಕಾವ್ಯಕ್ಕೆ ವೈಭವ ತಂದುಕೊಟ್ಟಿದ್ದಾರೆ ಎನ್ನಬಹುದು.
(ನನ್ನೊಡನೆ ಚರ್ಚಿಸಿ, ಈ ಲೇಖನಕ್ಕೆ ಕಾರಣರಾದ ಶ್ರೀ ವ್ಯಾಸ ದೇಶಪಾಂಡೆಯವರಿಗೆ ಹಾಗು ಲೇಖನ ಸಿದ್ಧಪಡಿಸುವಾಗ ನೆರವು ನೀಡಿದ ನನ್ನ ನಿರಂತರ ವಿಮರ್ಶಕಿಯಾದ ನನ್ನ ಅರ್ಧಾಂಗಿನಿ ಶ್ರೀಮತಿ ವನಮಾಲಾ ಇವರಿಗೆ ಕೃತಜ್ಞನಾಗಿದ್ದೇನೆ.)
Wednesday, August 5, 2009
ಗೋಪಾಲಕೃಷ್ಣ ಅಡಿಗರ ‘ಭೂತ’
ಕ್ರಿ.ಶ. ೧೯೫೦ರಲ್ಲಿ ವಿನಾಯಕ ಕೃಷ್ಣ ಗೋಕಾಕರು ‘ನವ್ಯ ಕವಿತೆಗಳು’ ಎನ್ನುವ ಕವನಸಂಕಲನವನ್ನು ಹೊರತಂದರು. ೧೯೫೧ರಲ್ಲಿ ಮುಂಬಯಿಯಲ್ಲಿ ಜರುಗಿದ ಕನ್ನಡ ಸಾಹಿತ್ಯಸಮ್ಮೇಳನದಲ್ಲಿ ನವ್ಯಕಾವ್ಯದ ಲಕ್ಷಣಗಳನ್ನು ವಿವರಿಸಿ, ತಮ್ಮ ಕವಿತೆಗಳನ್ನು ನವ್ಯಕಾವ್ಯವೆಂದು ಘೋಷಿಸಿದರು. ಆದರೆ ಈ ಕವನಗಳು ಕೇವಲ ತಮ್ಮ ವಸ್ತುವಿನಲ್ಲಿ ಮಾತ್ರ ಆಧುನಿಕವಾಗಿದ್ದವೇ ಹೊರತು, ಭಾವನೆಯಲ್ಲಿ ಅಲ್ಲ. In fact ಈ ಕವನಗಳನ್ನು ಬಾಲಿಶ ಕವನಗಳೆಂದು ಕರೆಯುವದೇ ಯೋಗ್ಯವಾದೀತು.
ಗೋಕಾಕರ ‘ನವ್ಯ ಕವಿತೆಗಳು’ ಸಂಕಲನದಲ್ಲಿಯ ‘ರೇಡಿಯೋ’ ಕವನವು ಬಾಲಿಶತನಕ್ಕೊಂದು ಉತ್ತಮ ಉದಾಹರಣೆ. ಅದರ ಮೊದಲ ನುಡಿ ಹೀಗಿದೆ:
“ಕಾಡಿಯೊ, ಬೇಡಿಯೊ,
ತಂದೆನೊಂದು ರೇಡಿಯೊ;
ಮನೆ ತುಂಬಿಸಿಕೊಂಡ ಸೊಸೆ,
ಇಲ್ಲಿದೆ ಬಾ ಹೀಗೆ ಹಸೆ.”
ಇಲ್ಲಿಯವರೆಗೆ ನಿಸರ್ಗ, ದೇಶಪ್ರೇಮ, ಗೆಳೆತನ, ಆದರ್ಶ ಮೊದಲಾದ ವಸ್ತುಗಳ ಬಗೆಗೆ ಕವನಗಳು ಬರುತ್ತಿದ್ದು, ಈಗ ‘ರೇಡಿಯೊ’ ಎನ್ನುವ ಆಧುನಿಕ ವಸ್ತುವಿನ ಬಗೆಗೆ ಗೋಕಾಕರು ಕವನವನ್ನು ಬರೆದರು. ಆದರೆ ಈ ಕವನದ ಭಾವ ಹಾಗು ರಚನೆಗಳು ಭಾವಗೀತೆಯ ಭಾವ ಹಾಗು ರಚನೆಗಿಂತ ಬೇರೆಯಾಗಿಲ್ಲ. ಗೋಕಾಕರಲ್ಲಿ self-appreciation ಬಹಳ. ಹೀಗಾಗಿ ಅವರ ಸಾಹಿತ್ಯದಲ್ಲಿಯೂ ಸಹ ಅವರ ಈ ಮನೋಭಾವ ವ್ಯಕ್ತವಾಗುತ್ತಿರುತ್ತದೆ.
ಕನ್ನಡದ ಹೆಸರಾತ ವಿಮರ್ಶಕ ಕೀರ್ತಿನಾಥ ಕುರ್ತಕೋಟಿಯವರು, “ಸೂಕ್ಷ್ಮವಾಗಿ ನೋಡಿದರೆ ನಮ್ಮಲ್ಲಿ ನವ್ಯತೆ ಇಟಲಿಯ ನೃತ್ಯಮಂದಿರದಲ್ಲಿ ಹುಟ್ಟಿದ ಪೇಜಾವರ ಸದಾಶಿವರಾಯರ ಕಾವ್ಯದಿಂದ ಪ್ರಾರಂಭವಾಯಿತೆನ್ನಬಹುದು” ಎಂದು ಹೇಳುತ್ತಾರೆ. ಪೇಜಾವರ ಸದಾಶಿವರಾಯರ ಆ ಕವನ “ನಾಟ್ಯೋತ್ಸವ” ಹೀಗಿದೆ:
“ಲೋರೆನ್ಸೊ ಇಲ್ ಮನ್ನೀಫಿಕೊ
ಹಾಡನರ್ಪಿಸಿಹೆನು ತಕೊ!
. . . . . . . . . . . . . .
. . . . . . . . . . . . . .
ಕಾಯದಲ್ಲಿ ಕದನದಿಚ್ಛೆ
ಆದರದನು ಕೊಂಚ ಮುಚ್ಚೆ
ಅರಳುತಿರುವ ಮುಗುಳು ನಗೆ
ಸಾವಿರ ಸಿಗರೇಟ ಹೊಗೆ;
ಮಧುವಿನಲ್ಲಿ ಮಿಂದ ಮುದವು
ಮನಸ ಕೆದರಿದೆ!
. . . . . .. . . . . . . . . . . .
. . . . . . . . . . . . . . . . . ”
ಪೇಜಾವರರ ಈ ಕವನವು ಪಾಶ್ಚಾತ್ಯ ಮನೋವೃತ್ತಿಯ ವಿಜೃಂಭಣೆಯಂತೆ ಕಂಡು ಬರುತ್ತದೆ. ಕವನದ ರಚನೆಯೂ ಸಹ ಭಾವಗೀತೆಯ ರಚನೆಯನ್ನು ಬಿಟ್ಟು ಮುಕ್ತತೆಯ ಕಡೆಗೆ ವಾಲಿದೆ. ಇಷ್ಟರ ಮಟ್ಟಿಗೆ ಇದಕ್ಕೆ ನವ್ಯಕಾವ್ಯವೆನ್ನಬಹುದು.
ಬೇಂದ್ರೆಯವರನ್ನು ಬಿಟ್ಟರೆ, ನವೋದಯ ಕಾವ್ಯಪ್ರಕಾರದಲ್ಲಿ ಅತ್ಯುತ್ತಮ ಸಿದ್ಧಿಯನ್ನು ಮಾಡಿದವರು ಗೋಪಾಲಕೃಷ್ಣ ಅಡಿಗರು.
“ಕಟ್ಟುವೆವು ನಾವು ನಾಡೊಂದನು
ರಸದ ಬೀಡೊಂದನು” ಎನ್ನುವ ಅವರ ಕವನದ ಸಾಲುಗಳನ್ನು ರಾಜಕಾರಣಿಗಳೂ ಸಹ, ಇಂದಿಗೂ quote ಮಾಡುತ್ತಲೇ ಇರುತ್ತಾರೆ.
“ಯಾವ ಮೋಹನ ಮುರಲಿ ಕರೆಯಿತು, ದೂರ ತೀರಕೆ ನಿನ್ನನು?” ಎನ್ನುವ ಕವನವಂತೂ ಅವರ ಅತ್ಯಂತ ಜನಪ್ರಿಯ ಕವನವಾಗಿ ಉಳಿದಿದೆ.
ಆದರೆ ಸ್ವಾತಂತ್ರ್ಯಾನಂತರ ಆದರ್ಶವಾದಿ ಪರಿಸರವು ಶೀಘ್ರವಾಗಿ ಕುಸಿದು ಬೀಳುತ್ತಿದ್ದನ್ನು ಕಂಡು, ಅವರಲ್ಲಿ ಸಾಮಾಜಿಕ ಹಾಗೂ ರಾಜಕೀಯ ಭ್ರಮನಿರಸನವಾಯಿತು. ಬದಲಾಗುತ್ತಿರುವ ಸಂಸ್ಕೃತಿಯು ವ್ಯಕ್ತಿಯ ಮೇಲೆ ಮಾಡುತ್ತಿರುವ ಪರಿಣಾಮಗಳು, ಅದರಲ್ಲಿ ಯಾವುದು ಸರಿ ಯಾವುದು ತಪ್ಪು, ಯಾವುದು ಶ್ರೇಯಸ್ಸು, ಯಾವುದು ಪ್ರೇಯಸ್ಸು ಎನ್ನುವ ವೈಯಕ್ತಿಕ ತಳಮಳವು ಅಡಿಗರಲ್ಲಿ ಪ್ರಾರಂಭವಾಯಿತು. ಈ ತಳಮಳದ ಪರಿಣಾಮವು ಅವರ ಕಾವ್ಯಮಾರ್ಗದ ಮೇಲೂ ಆದದ್ದನ್ನು ನೋಡಬಹುದು. ನವೋದಯದ ಭಾವಗೀತೆಯ ಮಾರ್ಗವನ್ನು ಕಿತ್ತೆಸೆದು, ಅಡಿಗರು ನವ್ಯ ಮಾರ್ಗದಲ್ಲಿ ಚರಿಸಿದರು. ಅವರ ‘ಭೂಮಿಗೀತ’ ಕವನದಲ್ಲಿ ಬರುವ ಈ ಸಾಲುಗಳು ಅವರ ಕಾವ್ಯಮಾರ್ಗಕ್ಕೂ ಹೊಂದುತ್ತವೆ ಎನ್ನಬಹುದು:
“ತೆಗೆದುಕೊ ನೀ ಕೊಟ್ಟ ವಸ್ತ್ರವಿಲಾಸ, ಈ ಶರಟು, ಈ ಶರಾಯಿ,
ಈ ಭಗ್ನ ಜೋಪಡಿಯೂ ನಿನ್ನದೇ.
ಬತ್ತಲಾಗದೆ ಬಯಲು ಸಿಕ್ಕದಿಲ್ಲಿ!”
ಈ ಕಾರಣಗಳಿಂದಾಗಿ ಗೋಪಾಲಕೃಷ್ಣ ಅಡಿಗರನ್ನೇ ಕನ್ನಡದ ನವ್ಯಕಾವ್ಯ ಪ್ರವರ್ತಕರೆಂದು ಕರೆಯುವದು ಸರಿಯಾದ ಮಾತು. ಆದರೆ ಅಡಿಗರಿಂದ ಪ್ರಭಾವಿತರಾಗಿ ನವ್ಯಮಾರ್ಗವನ್ನು ಅನುಸರಿಸಿದ ಯಾವ ಕವಿಯೂ ಅಡಿಗರು ಏರಿದ ಎತ್ತರವನ್ನು ಮುಟ್ಟಿಲ್ಲ.
ಅಡಿಗರ ‘ಭೂತ’ ಕವನವು ೧೯೫೯ರಲ್ಲಿ ಪ್ರಕಟವಾಯಿತು. ಆ ಕವನದ ಪೂರ್ತಿಪಾಠ ಹೀಗಿದೆ :
ಭೂತ
--೧--
ಕಾಡುತ್ತಿವೆ ಭೂತಕಾಲದ ಭ್ರೂಣಗೂಢಗಳು :
ಹುಗಿದ ಹಳಬಾವಿಯೊಳ ಕತ್ತಲ ಹಳಸುಗಾಳಿ
ಅಂಬೆಗಾಲಿಟ್ಟು ತಲೆಕೆಳಗು ತೆವಳುತ್ತೇರಿ
ಅಳ್ಳಳ್ಳಾಯಿ ಜಪಿಸುವ ಬಿಸಿಲಕೋಲಿಗೇರಿ ತೆಕ್ಕಾಮುಕ್ಕಿ
ಹಾಯುತ್ತಿದೆ ಆಗಾಗ್ಗೆ ತುಳಸಿವೃಂದಾವನದ ಹೊದರಿಗೂ.
ತೊಟ್ಟು ಕಳಚಿದ ಹೊಕ್ಕುಳಿನ ಬಳ್ಳಿ ದಡದಲ್ಲಿ
ಕತ್ತರಿಸಿದಿಲಿಬಾಲ ಮಿಡುಕುತ್ತದೆ.
ಕತ್ತಲಲ್ಲೇ ಕಣ್ಣುನೆಟ್ಟು ತಡಕುವ ನನಗೆ
ಹೊಳೆವುದು ಹಠಾತ್ತನೊಂದು ಚಿನ್ನದ ಗೆರೆ :
ಅಮವಾಸ್ಯೆ ಕಂದಕಗಳಲ್ಲಿ ಹೇಗೋ ಬಿದ್ದು ಒದ್ದಾಡುತ್ತಿರುವ ಗರಿ ಸುಟ್ಟ ತಾರೆ.
--೨--
ವರ್ತಮಾನಪತ್ರಿಕೆಯ ತುಂಬ ಭೂತದ ಸುದ್ದಿ :
ನೀರ ಮೇಲಕ್ಕೊಂದು ಮಡಿ, ಕೆಳಕ್ಕೇಳು ಮಂಜಿನ ಶಿಖರಿ ;
ಇದ್ದಕ್ಕಿದ್ದಂತಕಸ್ಮಾತ್ತಗ್ನಿನುಡಿಯುಗಿದ
ಮಂಜು ಮುಸುಕಿದ ಮುಗ್ಧ ಜ್ವಾಲಾಮುಖಿ.
ಪತ್ರಿಕೆಯ ಮುಚ್ಚಿದರು----
ಸದ್ದಿರದ ಖಾಲಿಕಂಕಾಲ ಕೋಣೆಗಳಲ್ಲಿ
ತಾಳವಿಲ್ಲದೆ ಮೂಕಸನ್ನೆ ಮುಲುಕುವ ತಿರುಗುಮುರುಗು ಪಾದದ ಪರಿಷೆ
ಅಂತರಾಳಗಲ್ಲಿ ನಿಂತ ನೀರುಗಳಲ್ಲಿ
ಕಂತಿ ಕೈಬಡೆವ ಬೀಜಾಣುಜಾಲ ;
ಕಾಳರಂಗಸ್ಥಳದ ಫರದೆ ಮುರಿಮರೆಯಲ್ಲಿ
ಮಾತು ಹೆಕ್ಕುವ ಮಿಣುಕು ಮೊನೆಯ ಬಾಲ----- ಇವು
ಬಯಸವೆ ಹೊರಂಗಳದ ರಂಗುರಂಗಿನ ಬಳ್ಳಿ ಹೂವು ಹೊದರ ?
---೩—
ನೀರು ನೆಲೆಯಿಲ್ಲದವರು ಪಿತೃಪಿತಾಮಹರು,
ಗಾಳಿಹೆದ್ದೆರೆಲಾಳಿಗಂಟಿ ನೆಲಸಿಕ್ಕಿಯೂ ದಕ್ಕದವರು.
ಉಚ್ಛಾಟನೆಯ, ತರ್ಪಣದ ತಂತ್ರ ಬಲ್ಲೆ ; ಆದರು ಮಂತ್ರ ಮರೆತೆ ;
ಬರಿದೇ ಹೀಗೆ ಆಡಿಸುತ್ತಿದ್ದೇನೆ ಮಂತ್ರದಂಡ.
ಪುರೋಹಿತರ ನೆಚ್ಚಿ ಪಶ್ಚಿಮಬುದ್ಧಿಯಾದೆವೋ ;
ಇನ್ನಾದರೂ ಪೂರ್ವಮೀಮಾಂಸೆ ಕರ್ಮಕಾಂಡಗಳನ್ನು ಬಗೆಯಬೇಕು.
ಅಗೆವಾಗ್ಗೆ ಮೊದಲು ಕೋಶಾವಸ್ಥೆ ಮಣ್ಣು ;
ಕೆಳಕ್ಕೆ ತಳಕ್ಕೆ ಗುದ್ದಲಿಯೊತ್ತಿ ಕುಕ್ಕಿದರೆ
ಕಂಡೀತು ಗೆರೆ ಮಿರಿವ ಚಿನ್ನದದಿರು,
ಹೊರತೆಗೆದು ಸುಟ್ಟು ಸೋಸುವಪರಂಜಿ ವಿದ್ಯೆಗಳ
ಇನ್ನಾದರೂ ಕೊಂಚ ಕಲಿಯಬೇಕು :
ಹೊನ್ನ ಕಾಯಿಸಿ ಹಿಡಿದು ಬಡಿದಿಷ್ಟದೇವತಾ---
ವಿಗ್ರಹಕ್ಕೊಗ್ಗಿಸುವ ಅಸಲು ಕಸಬು.
--೪—
ಬಾವಿಯೊಳಗಡೆ ಕೊಳೆವ ನೀರು ; ಮೇಲಕ್ಕಾವಿ ;
ಆಕಾಶದುದ್ದವೂ ಅದರ ಕಾರಣ ಬೀದಿ ;
ಕಾರ್ಮುಗಿಲ ಖಾಲಿಕೋಣೆಯ ಅಗೋಚರ ಬಿಂದು
ನವಮಾಸವೂ ಕಾವ ಭ್ರೂಣರೂಪಿ---
ಅಂತರಪಿಶಾಚಿ ಗುಡುಗಾಟ, ಸಿಡಿಲಿನ ಕಾಟ---
ಭೂತರೂಪಕ್ಕೆ ಮಳೆ ವರ್ತಮಾನ ;
ಅಗೆದುತ್ತ ಗದ್ದೆಗಳ ಕರ್ಮಭೂಮಿಯ ವರಣ ;
ಭತ್ತಗೋಧುವೆ ಹಣ್ಣುಬಿಟ್ಟ ವೃಂದಾವನ,
ಗುಡಿಗೋಪುರಗಳ ಬಂಗಾರ ಶಿಖರ.
………………………………………………………………………………
ಈ ಕವನದಲ್ಲಿ ಬರುವ ಭೂತ ಪದಕ್ಕೆ ಎರಡು ಅರ್ಥಗಳನ್ನು ಮಾಡಬಹುದು. ಒಂದು past ; ಎರಡನೆಯದು ghost. ಕವಿ ತನ್ನ ಭೂತಕಾಲವನ್ನು ಅಂದರೆ ತನ್ನ ಪೂರ್ವಸಂಸ್ಕಾರಗಳನ್ನು, ಪೂರ್ವಪರಂಪರೆಯನ್ನು ಮರೆತಿದ್ದಾನೆ.ಇದು ವರ್ತಮಾನದ ಪರಿಣಾಮವಾಗಿರಬಹುದು; ಪರಸಂಸ್ಕೃತಿಯ ಆಕರ್ಷಣೆಯ ಪರಿಣಾಮವಾಗಿರಬಹುದು. ಇದರಿಂದ ಕವಿಯ ಮೇಲೆ Alienation Effect ಅಂತೂ ಆಗಿದೆ. ಕವಿಯು ಇಲ್ಲಿ ತನ್ನ ಜನಾಂಗದ ಪ್ರತಿನಿಧಿಯೂ ಹೌದು. ಆದುದರಿಂದ ಒಂದು ಜನಾಂಗವೇ ತನ್ನ ಪರಂಪರೆಯ ವಿಸ್ಮರಣೆಗೆ ಒಳಗಾಗಿದ್ದನ್ನು ಕವಿಯು ವೈಯಕ್ತಿಕವಾಗಿ ಅನುಭವಿಸುತ್ತಿದ್ದಾನೆ. ಆದರೆ ಓರ್ವ ವ್ಯಕ್ತಿಯ ಅಥವಾ ಒಂದು ಜನಾಂಗದ ಸುಪ್ತಪ್ರಜ್ಞೆಯಲ್ಲಿರುವ ಪರಂಪರೆಯ ನೆನಪಿನ ಗ್ರಂಥಿಗಳು ಸುಲಭವಾಗಿ ನಾಶವಾಗುವದಿಲ್ಲ. ಅವು ಒಂದಿಲ್ಲ ಒಂದು ರೀತಿಯಲ್ಲಿ ತಮ್ಮ ಇರುವಿಕೆಯನ್ನು ವ್ಯಕ್ತಪಡಿಸುತ್ತವೆ. ಆದುದರಿಂದಲೇ ಕವಿಯು ಇವುಗಳನ್ನು ‘ಭೂತಕಾಲದ ಭ್ರೂಣ ಗೂಢಗಳು ’ ಎಂದು ಹೇಳುತ್ತಿದ್ದಾನೆ. ಪರಂಪರೆಯ ನೆನಪಿನ ಈ ಗ್ರಂಥಿಗಳು ಕವಿಗೂ ಸಹ ಗೂಢವಾಗಿಯೇ ಇವೆ. ಅವುಗಳನ್ನು ಗುರುತಿಸಲು ಆತ ಶಕ್ತನಾಗುತ್ತಿಲ್ಲ. ಆದರೆ ಅವು ನಿರ್ಜೀವ ಗೂಢಗಳಲ್ಲ. ಅವು ಭ್ರೂಣಾವಸ್ಥೆಯಲ್ಲಿವೆ. ಅಂದರೆ ಅವುಗಳಲ್ಲಿ ಜೀವವಿದೆ. ಅವು ಕವಿಯ ಸುಪ್ತ ಪ್ರಜ್ಞೆಯಿಂದ ಅವನ ಜಾಗೃತ ಪ್ರಜ್ಞೆಗೆ ಅಂದರೆ ಅವನ ಸಂಕಲ್ಪಾತ್ಮಕ ಪ್ರಜ್ಞೆಗೆ (Determining mind) ಬರಲು ತವಕಿಸುತ್ತವೆ. ಶಾಸ್ತ್ರೀಯ ಮನೋವಿಜ್ಞಾನದ ಪಿತಾಮಹನಾದ ಫ್ರಾ^ಯ್ಡನ ಭಾಷೆಯಲ್ಲಿ ಈ ಭ್ರೂಣಗೂಢಗಳು ಅಂದರೆ complexes in subconscious mind ಎಂದು ಹೇಳಬಹುದು. ಮತ್ತೊಬ್ಬ ಮನೋವಿಜ್ಞಾನಿ ಯೂಂಗನ ಭಾಷೆಯಲ್ಲಿ ಇವನ್ನು ಜನಾಂಗೀಯ ಪ್ರಜ್ಞೆಯ ಗ್ರಂಥಿಗಳು ಎಂದೂ ಹೇಳಬಹುದು. ಒಟ್ಟಿನಲ್ಲಿ ಈ ಭ್ರೂಣಗೂಢಗಳಿಂದಾಗಿ ಕವಿಯ ಮನಸ್ಸು ತೀವ್ರ ತಳಮಳಕ್ಕೊಳಗಾಗಿದೆ.
ಕವನದ ಮೊದಲ ಭಾಗದಲ್ಲಿ ಈ ಅಸ್ವಸ್ಥತೆಯ ವರ್ಣನೆ ಇದೆ. ಎರಡನೆಯ ಭಾಗದಲ್ಲಿ ಗುರುತಿಸಲಾಗದ ಈ ಭೂತಗಳ ವರ್ಣನೆ ಇದೆ. ಮೂರನೆಯ ಭಾಗದಲ್ಲಿ ಕವಿಯ ಸಂಕಲ್ಪವರ್ಣನೆ ಇದೆ. ನಾಲ್ಕನೆಯ ಭಾಗದಲ್ಲಿ ಆಶೆಯ ಮುನ್ನೋಟದ ಸಂಕೇತವಿದೆ. ನಿರಾಶೆಯಿಂದಲೇ ಪ್ರಾರಂಭವಾದ ಕವನವು ಸಂಕಲ್ಪದಲ್ಲಿ ಹಾಗೂ ಆಶಾವಾದದಲ್ಲಿ ಮುಕ್ತಾಯವಾಗುತ್ತದೆ.
--೧—
ಮೊದಲ ಭಾಗ ಹೀಗಿದೆ:
ಕಾಡುತ್ತಿವೆ ಭೂತಕಾಲದ ಭ್ರೂಣಗೂಢಗಳು :
ಹುಗಿದ ಹಳಬಾವಿಯೊಳ ಕತ್ತಲ ಹಳಸುಗಾಳಿ
ಅಂಬೆಗಾಲಿಟ್ಟು ತಲೆಕೆಳಗು ತೆವಳುತ್ತೇರಿ
ಅಳ್ಳಳ್ಳಾಯಿ ಜಪಿಸುವ ಬಿಸಿಲಕೋಲಿಗೇರಿ ತೆಕ್ಕಾಮುಕ್ಕಿ
ಹಾಯುತ್ತಿದೆ ಆಗಾಗ್ಗೆ ತುಳಸಿವೃಂದಾವನದ ಹೊದರಿಗೂ.
ತೊಟ್ಟು ಕಳಚಿದ ಹೊಕ್ಕುಳಿನ ಬಳ್ಳಿ ದಡದಲ್ಲಿ
ಕತ್ತರಿಸಿದಿಲಿಬಾಲ ಮಿಡುಕುತ್ತದೆ.
ಕತ್ತಲಲ್ಲೇ ಕಣ್ಣುನೆಟ್ಟು ತಡಕುವ ನನಗೆ
ಹೊಳೆವುದು ಹಠಾತ್ತನೊಂದು ಚಿನ್ನದ ಗೆರೆ :
ಅಮವಾಸ್ಯೆ ಕಂದಕಗಳಲ್ಲಿ ಹೇಗೋ ಬಿದ್ದು ಒದ್ದಾಡುತ್ತಿರುವ ಗರಿ ಸುಟ್ಟ ತಾರೆ.
ತನ್ನ ಸುಪ್ತಪ್ರಜ್ಞೆಯನ್ನು ಕವಿ ‘ಹುಗಿದ ಹಳಬಾವಿಯೊಳ ಕತ್ತಲ ಹಳಸುಗಾಳಿ’ ಎಂದು ಸಂಕೇತಿಸುತ್ತಾನೆ. ತಾಯಗರ್ಭದಲ್ಲಿರುವ ಭ್ರೂಣವು ಹೇಗೆ ತಲೆ ಕೆಳಗೆ ಮಾಡಿಕೊಂಡೇ ಹೊರಗೆ ಬರಲು ಪ್ರಯತ್ನಿಸುವದೋ, ಅದೇ ರೀತಿಯಲ್ಲಿ, ಈ ಭೂತಕಾಲದ ಗೂಢಭ್ರೂಣಗಳೂ ಸಹ ತಲೆಕೆಳಗು ಮಾಡಿಕೊಂಡು ತೆವಳುತ್ತ ಹೊರಬರಲು ಪ್ರಯತ್ನಿಸುತ್ತಿವೆ. ಅವುಗಳ ಪ್ರಯತ್ನಕ್ಕೆ ಅಲ್ಲೊಂದು ಆಶಾಕಿರಣವಿದೆ. ಅದೇ ಹೊರಪ್ರಜ್ಞೆಯಲ್ಲಿರುವ ’ಬಿಸಿಲುಕೋಲು’. ಆ ಬಿಸಿಲಕೋಲನ್ನು ಹಿಡಿದುಕೊಂಡು ಇವು ಹೊರಬಂದರೆ ಇವಕ್ಕೆ ಸಿಗುವದು ಜೀವನವನ್ನು ಪಾವನಗೊಳಿಸುವ ತುಳಸಿವೃಂದಾವನ !
ಆದರೆ ಈ ಪ್ರಯಾಣ ಸುಖಕರವಾಗಿಲ್ಲ. ಗೂಢಪ್ರಜ್ಞೆಯ ಗರ್ಭದಿಂದ ಹೊರಬಂದಾಗ ಇವು ಗರ್ಭದ ಜೊತೆಗೆ ಸಂಬಂಧ ನೀಡಿದ ಹೊಕ್ಕಳಹುರಿಯನ್ನು ಕಳಚಿಕೊಳ್ಳುತ್ತವೆ, ಕತ್ತರಿಸಿದ ಇಲಿಬಾಲ ಮಿಡುಕುವಂತೆ. ಇದು pain of separation ಅನ್ನು ಸೂಚಿಸುತ್ತದೆ.
ಈ ರೀತಿಯಾಗಿ ಗೂಢಭ್ರೂಣವು ಹೊರಗೆ ಪ್ರತ್ಯಕ್ಷವಾದಾಗ, ಅದನ್ನು ಗುರುತಿಸಲು ಕತ್ತಲಲ್ಲಿ ತಡಕಾಡುತ್ತಿರುವ ಕವಿಯ ಕಣ್ಣಿಗೆ ಮಿಂಚೊಂದು ಹೊಳೆದು ಅದು ಕಾಣುತ್ತದೆ. ಆ ಮಿಂಚಿನಲ್ಲಿ ಕವಿ ಕಾಣುವದು ಏನನ್ನು? ಈ ಭ್ರೂಣದ ಸ್ಥಿತಿಯನ್ನು :ಅದೊಂದು ಗರಿ ಸುಟ್ಟ ತಾರೆ ! ಅದು ತಾರೆಯೇನೋ ನಿಜ. ಆದರೆ ಅದರ ಗರಿ ಸುಟ್ಟಿದೆ. ಅದು ಹಾರಲಾರದೇ ಒದ್ದಾಡುತ್ತಿದೆ. ನಾವು ಕಳೆದುಕೊಂಡಿರುವ ನಮ್ಮ ಪರಂಪರೆಯ ಅಂಶಗಳು ಗರಿಸುಟ್ಟ ತಾರೆಯಂತಾಗಿವೆ ಎನ್ನುವದು ಕವಿಯ ಭಾವ.
ಈ ರೀತಿಯಾಗಿ ಮೊದಲ ಭಾಗದಲ್ಲಿ ಕವಿ ಸುಪ್ತಪ್ರಜ್ಞೆಯಲ್ಲಿರುವ ಪಾರಂಪರಿಕ ಅಂಶಗಳ ವಸ್ತುಸ್ಥಿತಿಯನ್ನು ಹಾಗೂ ಕವಿಯ ಜೊತೆಗೆ ಅವುಗಳಿಗಿರುವ ಸಂಬಂಧವನ್ನು ವರ್ಣಿಸಿದ್ದಾನೆ.
--೨—
ಎರಡನೆಯ ಭಾಗ ಹೀಗಿದೆ:
ವರ್ತಮಾನಪತ್ರಿಕೆಯ ತುಂಬ ಭೂತದ ಸುದ್ದಿ :
ನೀರ ಮೇಲಕ್ಕೊಂದು ಮಡಿ, ಕೆಳಕ್ಕೇಳು ಮಂಜಿನ ಶಿಖರಿ ;
ಇದ್ದಕ್ಕಿದ್ದಂತಕಸ್ಮಾತ್ತಗ್ನಿನುಡಿಯುಗಿದ
ಮಂಜು ಮುಸುಕಿದ ಮುಗ್ಧ ಜ್ವಾಲಾಮುಖಿ.
ಪತ್ರಿಕೆಯ ಮುಚ್ಚಿದರು----
ಸದ್ದಿರದ ಖಾಲಿಕಂಕಾಲ ಕೋಣೆಗಳಲ್ಲಿ
ತಾಳವಿಲ್ಲದೆ ಮೂಕಸನ್ನೆ ಮುಲುಕುವ ತಿರುಗುಮುರುಗು ಪಾದದ ಪರಿಷೆ
ಅಂತರಾಳಗಲ್ಲಿ ನಿಂತ ನೀರುಗಳಲ್ಲಿ
ಕಂತಿ ಕೈಬಡೆವ ಬೀಜಾಣುಜಾಲ ;
ಕಾಳರಂಗಸ್ಥಳದ ಫರದೆ ಮುರಿಮರೆಯಲ್ಲಿ
ಮಾತು ಹೆಕ್ಕುವ ಮಿಣುಕು ಮೊನೆಯ ಬಾಲ----- ಇವು
ಬಯಸವೆ ಹೊರಂಗಳದ ರಂಗುರಂಗಿನ ಬಳ್ಳಿ ಹೂವು ಹೊದರ ?
ಎರಡನೆಯ ಭಾಗದಲ್ಲಿ ಕವಿ ತನ್ನ --(ಅಂದರೆ ತನ್ನ ಜನಾಂಗದ ಎನ್ನುವ ಅರ್ಥವೂ ಇಲ್ಲಿದೆ)—ವರ್ತಮಾನ ಸ್ಥಿತಿಗೂ ಹಾಗೂ ತನ್ನ ಪರಂಪರೆಗೂ ಇರುವ ಗಾಢ ಸಂಬಂಧವನ್ನು ವಿವರಿಸುತ್ತಾನೆ.
ವರ್ತಮಾನ ಪತ್ರಿಕೆ ಅಂದರೆ news paper. ಅದು ಜಗತ್ತಿನಲ್ಲಿ ಸದ್ಯಕ್ಕೆ ನಡೆಯುತ್ತಿರುವದನ್ನು (=ವರ್ತಮಾನವನ್ನು=present stateಅನ್ನು) ತಿಳಿಸಬೇಕು. ಆದರೆ ಈ ವರ್ತಮಾನ ಪತ್ರಿಕೆಯಲ್ಲಿ ಬಂದಿರುವದು ಸದ್ಯದ ಸುದ್ದಿಯಲ್ಲ ; ಅಲ್ಲಿರುವದು ಕೇವಲ ಭೂತದ ಸುದ್ದಿ.
ಅರ್ಥಾತ್ ವರ್ತಮಾನವನ್ನು ಭೂತಕಾಲವು control ಮಾಡುತ್ತಿದೆ.
ಇದರ ಕಾರಣವು ಖ್ಯಾತ ಮನೋವಿಜ್ಞಾನಿ ಫ್ರಾ^ಯ್ಡನ ಥಿಯರಿಯಲ್ಲಿ ಸಿಗುತ್ತದೆ.
ಮನಸ್ಸಿನಲ್ಲಿ ಮೇಲೆ ಕಾಣುವ ಜಾಗ್ರತ ಭಾಗ ಒಂದು ಮಡಿಯಾದರೆ, ಸುಪ್ತ ಭಾಗವು ಏಳು ಮಡಿಯಷ್ಟಿರುತ್ತದೆ. ಈ ಸುಪ್ತಭಾಗವು ಮಂಜು ಮುಸುಕಿದ, ತಣ್ಣನೆಯ ಜ್ವಾಲಾಮುಖಿ. ಯಾವದೋ ಸಂದರ್ಭದಲ್ಲಿ ಇದು ಸಿಡಿದೇಳಬಹುದು!
ಭೂತದ ಸುದ್ದಿಯನ್ನೇ ಹೇಳುವ ಈ ವರ್ತಮಾನ ಪತ್ರಿಕೆಯನ್ನು ಈಗ ಮುಚ್ಚಿ ಹಾಕಿದ್ದಾರೆ.
ಸರಿ, ಪತ್ರಿಕಾಲಯದ ಒಳಗಿನ ಖಾಲಿ ಕೋಣೆಗಳಲ್ಲಿ ಈಗ ಕಾಣುವದೇನು?
ಅಲ್ಲೂ ಭೂತಚಲನೆ !
ಆದರೆ, ವರ್ತಮಾನವು ಮಾಡುವಂತೆ, ಭೂತವು ಸದ್ದು ಮಾಡಲಾರದು, ಇದು ನಿಶ್ಶಬ್ದ ಜೀವಿ ! ಇದರದು ಏನಿದ್ದರೂ silent operation ! ಅದಕ್ಕೆಂದೇ ‘ಸದ್ದಿರದ ಕಂಕಾಲ (=skeleton)ಕೋಣೆ ಎಂದು ಕವಿ ಸುಪ್ತಪ್ರಜ್ಞೆಯನ್ನು ಬಣ್ಣಿಸುತ್ತಾನೆ. ಅಲ್ಲಿ ತಿರುಗು ಮುರುಗು ಪಾದವುಳ್ಳ (= ಭೂತಗಳ) ಪರಿಷೆ ಅಂದರೆ ಜಾತ್ರೆ ನಡೆದಿದೆ. ಅವು ತಾಳವಿಲ್ಲದ ಬೇತಾಳಗಳಾಗಿ, ಮೂಕಸನ್ನೆ ಮಾಡುತ್ತ ಚರಿಸುತ್ತಿವೆ. ಭೂತಗಳ ಪಾದಗಳು ತಿರುಗುಮುರುಗಾಗಿ ಇರುವದರಿಂದ ಅವು ಹಿಂದೆ ನಡೆದರೂ ಸಹ, ಅವುಗಳ ಚಲನೆ ಮುಂದಿನ ದಿಕ್ಕಿನಲ್ಲಿರುತ್ತದೆ. ಅರ್ಥಾತ್ ಅವು ಹೊರಬರಲು ಪ್ರಯತ್ನಿಸುತ್ತಿವೆ.
ಈ ಭೂತಗಳು ಜೀವ ಪಡೆಯಲು ಪ್ರಯತ್ನಿಸುತ್ತಿವೆ. ಆದುದರಿಂದ ಕವಿಯು ಇವುಗಳನ್ನು ಬೀಜಾಣುಜಾಲಕ್ಕೆ(=sperms) ಹೋಲಿಸುತ್ತಾನೆ. ಈ spermಗಳು ಇರುವ ಸುಪ್ತಪ್ರಜ್ಞೆಯ ಗರ್ಭ ಎಂತಹದು? ಅದು ನಿಂತ ನೀರು, stagnant pond. ಕವಿಯ ಅಂತರಾಳವು stagnant pond ಯಾಕೆ ಅನ್ನುವ ಪ್ರಶ್ನೆ ಇಲ್ಲಿ ಬರುತ್ತದೆ. ಕವಿಯು ಪೂರ್ವಪರಂಪರೆಯನ್ನು ಪೂರ್ಣವಾಗಿ ತ್ಯಜಿಸಿ ಪರಸಂಸ್ಕೃತಿಯನ್ನು ಅಪ್ಪಿಕೊಂಡದ್ದರಿಂದಲೇ, ಅವನ ಪರಂಪರೆಯು ನಿಂತ ನೀರಾಯಿತು. ಈಗ ಆ ನಿಂತ ನೀರಿನಲ್ಲಿಯೇ ಈ ಬೀಜಾಣುಗಳು ಕೈಬಡೆಯುತ್ತ ಚಲಿಸುತ್ತಿವೆ, ಹೊಸ ಜನ್ಮ ಪಡೆಯುವ ಉದ್ದೇಶದಿಂದ. ಭ್ರೂಣಾವಸ್ಥೆಗೆ ಬಂದು, ಆಬಳಿಕ ಜಾಗೃತ ಪ್ರಜ್ಞೆಗೆ ನುಗ್ಗುವ ಉದ್ದೇಶದಿಂದ ಅವು ನಿಂತ ನೀರಿನಲ್ಲಿಯೇ ಕೈಬಡೆಯುತ್ತ ಚಲಿಸುತ್ತಿವೆ.
ಕವಿ ಈಗ ಮತ್ತೆ ಕತ್ತರಿಸಿದಿಲಿಬಾಲವನ್ನು ನೆನಪಿಸುತ್ತಾನೆ. ಈ ಇಲಿಬಾಲವು ಕಾಳ(=dark;time)ರಂಗಸ್ಥಳದ ಪರದೆಯ ಹಿಂದಿರುವ ಇಲಿಬಾಲವಾಗಿದೆ. ಇದು ಮಾತನ್ನು ಹೆಕ್ಕುತ್ತಿದೆ. ಯಾವ ರೀತಿಯಲ್ಲಿ ರಂಗಸ್ಥಳದಲ್ಲಿ ಇರುವ ಪಾತ್ರಗಳು ಪರದೆಯ ಹಿಂದಿನಿಂದ ಬರುವ prompting ಅಂದರೆ ಸೂಚನಾಪದಗಳನ್ನು ಅನುಸರಿಸಿ ಮಾತನಾಡುತ್ತವೆಯೊ, ಅದೇ ರೀತಿಯಲ್ಲಿ ಈ ಭ್ರೂಣಗಳು ರಂಗಸ್ಥಳದ (=ಜಾಗೃತಾವಸ್ಥೆಯ) ಹಿಂದಿರುವ ಸುಪ್ತಪ್ರಜ್ಞೆಯಿಂದ ಸೂಚನೆಗಳನ್ನು ಅನುಸರಿಸುತ್ತವೆ.
ಈ ಎಲ್ಲ ಪ್ರಯತ್ನಗಳೊಂದಿಗೆ, ಈ ಎಲ್ಲ ಅವಸ್ಥೆಗಳನ್ನು ದಾಟಿ ಈ ಪಾರಂಪರಿಕ ಭ್ರೂಣಗೂಢಗಳು ಜಾಗೃತ ಪ್ರಜ್ಞೆಗೆ ಬರಲು ಬಯಸುತ್ತವೆ. ಅವುಗಳಿಗೆ ಅಲ್ಲಿ ಕಾಣಸಿಗುವುದು : ಹೊರ ಅಂಗಳದ(=ಜಾಗೃತ ಪ್ರಜ್ಞೆಯಲ್ಲಿ) ಇರುವ ಬಣ್ಣ ಬಣ್ಣದ ಹೂವು, ಪೊದರುಗಳು!
--೩—
ಮೂರನೆಯ ಭಾಗ ಹೀಗಿದೆ:
ನೀರು ನೆಲೆಯಿಲ್ಲದವರು ಪಿತೃಪಿತಾಮಹರು,
ಗಾಳಿಹೆದ್ದೆರೆಲಾಳಿಗಂಟಿ ನೆಲಸಿಕ್ಕಿಯೂ ದಕ್ಕದವರು.
ಉಚ್ಚಾಟನೆಯ, ತರ್ಪಣದ ತಂತ್ರ ಬಲ್ಲೆ ; ಆದರು ಮಂತ್ರ ಮರೆತೆ ;
ಬರಿದೇ ಹೀಗೆ ಆಡಿಸುತ್ತಿದ್ದೇನೆ ಮಂತ್ರದಂಡ.
ಪುರೋಹಿತರ ನೆಚ್ಚಿ ಪಶ್ಚಿಮಬುದ್ಧಿಯಾದೆವೋ ;
ಇನ್ನಾದರೂ ಪೂರ್ವಮೀಮಾಂಸೆ ಕರ್ಮಕಾಂಡಗಳನ್ನು ಬಗೆಯಬೇಕು.
ಅಗೆವಾಗ್ಗೆ ಮೊದಲು ಕೋಶಾವಸ್ಥೆ ಮಣ್ಣು ;
ಕೆಳಕ್ಕೆ ತಳಕ್ಕೆ ಗುದ್ದಲಿಯೊತ್ತಿ ಕುಕ್ಕಿದರೆ
ಕಂಡೀತು ಗೆರೆ ಮಿರಿವ ಚಿನ್ನದದಿರು,
ಹೊರತೆಗೆದು ಸುಟ್ಟು ಸೋಸುವಪರಂಜಿ ವಿದ್ಯೆಗಳ
ಇನ್ನಾದರೂ ಕೊಂಚ ಕಲಿಯಬೇಕು :
ಹೊನ್ನ ಕಾಯಿಸಿ ಹಿಡಿದು ಬಡಿದಿಷ್ಟದೇವತಾ---
ವಿಗ್ರಹಕ್ಕೊಗ್ಗಿಸುವ ಅಸಲು ಕಸಬು.
ಮೊದಲನೆಯ ಭಾಗದಲ್ಲಿ ಭ್ರೂಣಗೂಢಗಳ ಸ್ಥಿತಿಯನ್ನು ಹಾಗು ಎರಡನೆಯ ಭಾಗದಲ್ಲಿ ಅವುಗಳ ಚಲನಯತ್ನವನ್ನು ಸಾರಿದ ಕವಿ, ಮೂರನೆಯ ಭಾಗದಲ್ಲಿ ತನ್ನ ಅಂತರಂಗದ ( ಅಂದರೆ ಸಂಕಲ್ಪಪ್ರಜ್ಞೆಯ) ವಿಮರ್ಶೆಯಲ್ಲಿ ತೊಡಗಿದ್ದಾನೆ.
ತನ್ನ ಪಿತೃ ಪಿತಾಮಹರು ನೀರು, ನೆಲೆಯಿಲ್ಲದವರು. ಏಕೆಂದರೆ ತಾನು ಅವರ ಶ್ರಾದ್ಧಕರ್ಮಗಳನ್ನು ಮಾಡಿಲ್ಲ. ಏಕೆಂದರೆ ಪರಂಪರೆಯಲ್ಲಿ ತನಗೆ ಶ್ರದ್ಧೆ ಇಲ್ಲ.
(ಟಿಪ್ಪಣಿ: ಶ್ರದ್ಧೆಯಿಂದ ಶ್ರಾದ್ಧ ಪದ ಬಂದಿದೆ.)
ಕವಿಗೆ ಎರಡೂ ತರಹದ ತಂತ್ರಗಳು ಗೊತ್ತು. ಅಂದರೆ ಆತ ಈ ಪಿತೃಗಳ ಉಚ್ಚಾಟನೆಯನ್ನೂ ಮಾಡಬಲ್ಲ ಅಥವಾ ಅವರಿಗೆ ತರ್ಪಣವನ್ನೂ ಸಲ್ಲಿಸಬಲ್ಲ. ಆದರೆ ತಂತ್ರವನ್ನು (ಅಂದರೆ ಹೊರಗಿನ proceduresಗಳನ್ನು) ತಿಳಿದ ಕವಿ ಮಂತ್ರವನ್ನು (ಅಂದರೆ ಅಂತರಂಗ ರಹಸ್ಯವನ್ನು) ಮರೆತು ಬಿಟ್ಟಿದ್ದಾನೆ. ಬರಿದೆ ಮಂತ್ರದಂಡವನ್ನು ಆಡಿಸುತ್ತಿದ್ದಾನೆ. ಇದಕ್ಕೆ ಕಾರಣವೇನು? ಕವಿ ಇದಕ್ಕೆ ಪುರೋಹಿತರನ್ನು ದೂರುತ್ತಿದ್ದಾನೆ. ಪುರೋಹಿತರು ಓರ್ವ ವ್ಯಕ್ತಿಯ ಲೌಕಿಕ ಹಾಗು ಪಾರಲೌಕಿಕ ಶ್ರೇಯಸ್ಸಿಗೆ lead ಮಾಡುವಂಥವರು. ಆದರೆ ಈ ಪುರೋಹಿತರು ಕೇವಲ ಪಶ್ಚಿಮಬುದ್ಧಿಯನ್ನು ಕಲಿಸಿದ್ದಾರೆ. ಪಶ್ಚಿಮಬುದ್ಧಿ ಅಂದರೆ : Western thoughts, western culture.
ಇದನ್ನು ಕಲಿಸಿದವರು ಬ್ರಿಟಿಶ್ ಭಾರತದ rationalists. ಪಶ್ಚಿಮಬುದ್ಧಿಗೆ ಇನ್ನೂ ಒಂದು ಅರ್ಥವಿದೆ. ಪೂರ್ವಬುದ್ಧಿ ಎಂದರೆ ‘ಮೊದಲು ಇದ್ದಂತಹ ಬುದ್ಧಿ’ಅಂದರೆ ಪಾರಂಪರಿಕ ಬುದ್ಧಿ . ಪಶ್ಚಿಮಬುದ್ಧಿ ಎಂದರೆ ‘ಆ ಮೇಲೆ ಬಂದಂತಹ ಬುದ್ಧಿ’. ನಮ್ಮ ಪರಂಪರೆಯನ್ನು ಬಿಟ್ಟುಕೊಟ್ಟು , ಮತ್ತೊಂದು ಸಂಸ್ಕೃತಿಯನ್ನು ಅಪ್ಪಿಕೊಂಡಾಗ ಬಂದಂತಹ ಬುದ್ಧಿ. ಇನ್ನು ಮೇಲಾದರೂ ಸಹ ಪೂರ್ವಮೀಮಾಂಸೆ ಅಂದರ ನಮ್ಮ ಪಾರಂಪರಿಕ ಜ್ಞಾನವನ್ನು ನಾವು ತಿಳಿದುಕೊಳ್ಳಬೇಕು ಎಂದು ಕವಿ ಹೇಳುತ್ತಾನೆ.
ಈ ಕಾರ್ಯ ಹಗುರವಾದ ಕಾರ್ಯವೇನಲ್ಲ. ಈ ಪಾರಂಪರಿಕ ಜ್ಞಾನ ‘ಭೂತ’ದಲ್ಲಿ ಹುಗಿದು ಹೋಗಿದೆ. ಗುದ್ದಲಿಯೊತ್ತಿ, ಅದನ್ನು ಹೊರತೆಗೆಯಲು ಪ್ರಯತ್ನಿಸಿದರೆ, ‘ಚಿನ್ನದ ಅದಿರು’ ಕಂಡೀತು. ಆದರೆ ಇದು ಸುತ್ತಲೂ ಕಲ್ಮಶ ಮೆತ್ತಿದ ಅದಿರು ಮಾತ್ರ. ಆ ಅದಿರನ್ನು ಶೋಧಿಸಿ, ಚೊಕ್ಕ ಬಂಗಾರವನ್ನು ಮಾಡುವ ವಿದ್ಯೆಯನ್ನೂ ಕಲಿಯಬೇಕು. ಬಂಗಾರವನ್ನು ಶೋಧಿಸಿದ ಬಳಿಕ, ಆ ಬಂಗಾರದಿಂದ ಮಾಡುವದೇನು?----- ಇಷ್ಟದೇವತೆಯ ವಿಗ್ರಹವನ್ನು!
ಈ ಭಾಗದಲ್ಲಿ ಕಾಣುವ ಆತ್ಮವಿಮರ್ಶೆ ಹಾಗು ಸಮಾಧಾನಪೂರ್ಣ ಸಂಕಲ್ಪ ಇವು ಕವನಕ್ಕೆ ಶಿಖರಪ್ರಾಯವಾಗಿವೆ ಎನ್ನಬಹುದು.
--೪—
ಕವನದ ಕೊನೆಯ ಭಾಗ ಹೀಗಿದೆ:
ಬಾವಿಯೊಳಗಡೆ ಕೊಳೆವ ನೀರು ; ಮೇಲಕ್ಕಾವಿ ;
ಆಕಾಶದುದ್ದವೂ ಅದರ ಕಾರಣ ಬೀದಿ ;
ಕಾರ್ಮುಗಿಲ ಖಾಲಿಕೋಣೆಯ ಅಗೋಚರ ಬಿಂದು
ನವಮಾಸವೂ ಕಾವ ಭ್ರೂಣರೂಪಿ---
ಅಂತರಪಿಶಾಚಿ ಗುಡುಗಾಟ, ಸಿಡಿಲಿನ ಕಾಟ---
ಭೂತರೂಪಕ್ಕೆ ಮಳೆ ವರ್ತಮಾನ ;
ಅಗೆದುತ್ತ ಗದ್ದೆಗಳ ಕರ್ಮಭೂಮಿಯ ವರಣ ;
ಭತ್ತಗೋಧುವೆ ಹಣ್ಣುಬಿಟ್ಟ ವೃಂದಾವನ,
ಗುಡಿಗೋಪುರಗಳ ಬಂಗಾರ ಶಿಖರ.
ಈ ನಾಲ್ಕನೆಯ ಭಾಗದಲ್ಲಿ ಒಂದೂ ಕ್ರಿಯಾಪದವು ಇಲ್ಲವೆನ್ನುವದನ್ನು ಗಮನಿಸಬೇಕು. ಯಾಕೆಂದರೆ ಈಗ ಕ್ರಿಯೆ ನಡೆಯುತ್ತಿರುವದು ಕವಿಯ ಒಳನೋಟದಲ್ಲಿ.
ಬಾವಿಯ ಕೆಳಗಡೆಗೆ ಇರುವ ಭೂಗತ ಜಲವು ಕೊಳವಿಯಿಂದ ಬಾವಿಯಲ್ಲಿ ಬರುತ್ತದೆ. ಅದು ಆವಿಯಾಗಿ ಮೇಲಕ್ಕೆ ಹೋಗುತ್ತದೆ. ಆಕಾಶವು ಅದಕ್ಕೆ ಮೇಘರೂಪವನ್ನು ಕೊಡುವ ಕಾರಣಪಥ. ಭೂಗತವೆನ್ನುವದು unconscious mind ಅನ್ನೂ, ಬಾವಿಯು conscious mind ಅನ್ನೂ ಪ್ರತಿನಿಧಿಸಿದರೆ ಆಕಾಶವೆನ್ನುವದು superconscious mind ಅನ್ನು ಅಂದರೆ ವಿವೇಕಪ್ರಜ್ಞೆಯನ್ನು ಪ್ರತಿನಿಧಿಸುತ್ತದೆ. ಸುಪ್ತಪ್ರಜ್ಞೆಯ ಗೂಢಗಳಿಗೆ ವಿವೇಕಪ್ರಜ್ಞೆಯು ಸರಿಯಾದ ರೂಪವನ್ನು ಕೊಡಬೇಕೆನ್ನುವದು ಕವಿಯ ಆಶಯ. ಆಕಾಶಕ್ಕೇರಿದ ಈ ಸುಪ್ತಪ್ರಜ್ಞೆಯ ಗೂಢಗಳು ಅಲ್ಲಿ ಅಂತರಪಿಶಾಚಿಯಾಗಿ ನವಮಾಸಗಳವರೆಗೆ ಅಂದರೆ ಪರಿಪೂರ್ಣ ರೂಪವನ್ನು ಪಡೆಯುವವರೆಗೆ ಕಾಯಬೇಕು. ಗುಡುಗು ಸಿಡಿಲಿನ ಕಾಟವನ್ನು ಅಂದರೆ ವಿಭಿನ್ನ ವಿಚಾರಗಳ ಕಾಟವನ್ನು ಸೋಸಬೇಕು. ಆಗಲೇ ಈ ಭೂತರೂಪವು ಮಳೆಯಾಗಿ ವರ್ತಮಾನವನ್ನು ಅಂದರೆ ಜಾಗೃತ ಪ್ರಜ್ಞೆಯನ್ನು ತೋಯಿಸುವದು.
ಇನ್ನು ಮುಂದಿನ ಕಾರ್ಯ ಸಂಕಲ್ಪ ಪ್ರಜ್ಞೆಯದು. ತನ್ನೆದುರಿಗಿನ ಭೂಮಿಯನ್ನು (=ಕರ್ಮಭೂಮಿಯನ್ನು) ಅಗೆದು, ಉತ್ತಿ, ಉತ್ತಮ ಬೀಜಗಳನ್ನು ಬಿತ್ತಿದರೆ ಅಲ್ಲಿ ದೊರೆಯುವದು ಸುಧಾನ್ಯ, ಸುಫಲ ಹಾಗೂ ತನ್ನ ಜನಾಂಗದ ಪರಂಪರೆಯ ಪ್ರತೀಕವಾದ, aspirationಗಳ ಪ್ರತೀಕವಾದ ಗುಡಿಗೋಪುರಗಳ ಬಂಗಾರದ ಶಿಖರಗಳು.
……………………………………………………………
ಆಧುನಿಕ ವಿಚಾರಗಳಿಂದ ಹಾಗೂ ಶಾಸ್ತ್ರೀಯ ಮನೋವಿಜ್ಞಾನದಿಂದ ಪ್ರಭಾವಿತವಾದ ನವ್ಯಕಾವ್ಯವು ಸಂಪ್ರದಾಯವಿರೋಧಿಯಾಗಿದೆ ಎನ್ನುವದು ಸಾಮಾನ್ಯ ಗ್ರಹಿಕೆಯಾಗಿದೆ. ನವ್ಯಕಾವ್ಯದ ಬಹುತೇಕ ಕವಿಗಳು ಅಂತಹದೇ ಕವನಗಳನ್ನು ರಚಿಸಿದರು. ಕೆಲವು ಕವಿಗಳು sex ಬಗೆಗೆ ಬಿಚ್ಚಿ ಬರೆಯುವದೇ ನವ್ಯಕಾವ್ಯವೆಂದು ತಿಳಿದರು. ಈ ತಪ್ಪು ತಿಳಿವಳಿಕೆಯನ್ನು ಹೊತ್ತ ಗಂಗಾಧರ ಚಿತ್ತಾಳರು ತಮ್ಮ ‘ಕಾಮಸೂತ್ರ’ದಲ್ಲಿ ರತಿಕ್ರಿಯೆಯನ್ನು ಬಿಚ್ಚು ಬಿಚ್ಚಾಗಿ ವರ್ಣಿಸಿದ್ದಾರೆ. ಆದರೆ ಕನ್ನಡ ಪದಗಳ ಬದಲಾಗಿ ಅಲ್ಲಿ ಸಂಸ್ಕೃತ ಪದಗಳ ಬಳಕೆ ಇದೆ, ಅಷ್ಟೇ!
ಕನ್ನಡ ಪದಗಳನ್ನೇ ಬಳಸಿದ್ದರೆ ಚಿತ್ತಾಳರ ಕವನಗಳು ಹೋಳಿ ಹುಣ್ಣಿವೆಯ ಪೋಲಿ ಕವನಗಳಾಗುತ್ತಿದ್ದವು.
(ಈ ಕವನವನ್ನು ೨೦೦೭ ನವೆಂಬರ ೧೪ರ "ಮೋಟುಗೋಡೆಯಾಚೆ ಇಣುಕಿದಲ್ಲಿ" blogದಲ್ಲಿ(http://motugode.blogspot.com) ಓದಬಹುದು.)
ನವ್ಯಕಾವ್ಯದ ಮನೋಧರ್ಮವನ್ನು ಅರಿಯಲು ಅಡಿಗರ ಕವನಗಳನ್ನು ಓದಬೇಕು. ಅವರ ‘ಪ್ರಾರ್ಥನೆ’ ಕವನದಲ್ಲಿರುವದು ಒಬ್ಬ ಪ್ರಾಮಾಣಿಕನ, ಒಬ್ಬ ಆದರ್ಶವಾದಿಯ ತಳಮಳ. ಅದಕ್ಕೆಂದೇ, ಆ ಕವನದಲ್ಲಿ ಬರುವ ಅಂತಿಮ ಘೋಷಣೆ : “ತಕ್ಕ ತೊಡೆಗಳ ನಡುವೆ ಧಾತುಸ್ಖಲನದೆಚ್ಚರವ ” ಎನ್ನುವದು ಪೋಲಿ ಮಾತಾಗದೆ, ಪ್ರಾಮಾಣಿಕನ, ಆದರ್ಶವಾದಿಯ ಎಚ್ಚರಿಕೆಯ ಮಾತಾಗುತ್ತದೆ.
(ಈ ಕವನವನ್ನು ೨೦೦೯ ಜೂನ್ ೨೫ರ "ಮೋಟುಗೋಡೆಯಾಚೆ ಇಣುಕಿದಲ್ಲಿ" blogದಲ್ಲಿ(http://motugode.blogspot.com) ಓದಬಹುದು.)
ಅಡಿಗರೇ ತಮ್ಮ ಮತ್ತೊಂದು ಕವನದಲ್ಲಿ “ಗುರುವಿನ ಸಮಾನನಾಗುವತನಕ ದೊರೆಯದಣ್ಣ ಮುಕುತಿ” ಎಂದಿದ್ದಾರೆ. ಹೀಗೆನ್ನುವಾಗ “ಗುರುವಿನ ಗುಲಾಮರಾಗುವ ತನಕ ದೊರೆಯದಣ್ಣ ಮುಕುತಿ” ಎನ್ನುವ ಪುರಂದರದಾಸರ ಅವಹೇಳನ ಮಾಡುತ್ತಿಲ್ಲ. ಆದರೆ ದಾಸ ಮನೋಭೂಮಿಕೆಯನ್ನು ಬಿಡಬೇಕು, ಕುರುಡು ವಿಚಾರಗಳನ್ನು ವಿರೋಧಿಸಬೇಕು ಎನ್ನುವ ವೈಚಾರಿಕ ಮನೋಭಾವವನ್ನು ತೋರಿಸುತ್ತಿದ್ದಾರೆ.
ಹಾಗೆಂದು ಅಡಿಗರು ಸತ್-ಪರಂಪರೆಯ ವಿರೋಧಿಯಲ್ಲ. ಪಾಶ್ಚಾತ್ಯರ ಅಂಧಾನುಕರಣೆಯಿಂದ ನಮ್ಮ ಜನಜೀವನ ಹಾಳಾಗುತ್ತಿರುವದನ್ನು ಕಂಡಿದ್ದರಿಂದಲೇ ಅವರು ಈ ಸತ್-ಪರಂಪರೆಯ ಅಂಶಗಳನ್ನು ಮತ್ತೊಮ್ಮೆ ನಮ್ಮಲ್ಲಿ ಅಳವಡಿಸಿಕೊಳ್ಳುವದರ ಅವಶ್ಯಕತೆಯನ್ನು ಈ ಕವನದಲ್ಲಿ ತೋರುತ್ತಿದ್ದಾರೆ. ಆದರೆ ಅವರ ಎಲ್ಲ ಕವನಗಳಲ್ಲಿಯೂ ಅವರ ಸಾಮಾಜಿಕ, ಸಾಂಸ್ಕೃತಿಕ ತೊಳಲಾಟವು ಅವರ ವೈಯಕ್ತಿಕ ತೊಳಲಾಟವಾಗಿ ಬಿಂಬಿತವಾಗುತ್ತದೆ.
ಇದೇ ಅವರ ಪ್ರಾಮಾಣಿಕತೆಯ ಪ್ರತೀಕವಲ್ಲವೆ?!
ಆಡಿಗರ ಭಾಷೆಯು ಕನ್ನಡಕಾವ್ಯದಲ್ಲಿಯೇ ಅತ್ಯಂತ ಸುಂದರವಾದ ಭಾಷೆ. ಅವರ ಭಾಷೆಯನ್ನು ಅಪ್ಸರೆಯ ಚೆಲುವಿಗೆ ಹೋಲಿಸಬಹುದು. ಅವರ ನವೋದಯ ಮಾರ್ಗದ “ಯಾವ ಮೋಹನ ಮುರಲಿ ಕರೆಯಿತು…” ಕವನವೇ ಆಗಲಿ, ಅಥವಾ ನವ್ಯಮಾರ್ಗದ ‘ಭೂತ’ ಕವನವೇ ಆಗಲಿ, ನಮ್ಮ ಮನಸ್ಸನ್ನು ತಕ್ಷಣವೇ ಸೆರೆ ಹಿಡಿಯುವದು ಆ ಭಾಷೆಯ ಚೆಲುವಿನಿಂದ.
ಗೋಕಾಕರ ‘ನವ್ಯ ಕವಿತೆಗಳು’ ಸಂಕಲನದಲ್ಲಿಯ ‘ರೇಡಿಯೋ’ ಕವನವು ಬಾಲಿಶತನಕ್ಕೊಂದು ಉತ್ತಮ ಉದಾಹರಣೆ. ಅದರ ಮೊದಲ ನುಡಿ ಹೀಗಿದೆ:
“ಕಾಡಿಯೊ, ಬೇಡಿಯೊ,
ತಂದೆನೊಂದು ರೇಡಿಯೊ;
ಮನೆ ತುಂಬಿಸಿಕೊಂಡ ಸೊಸೆ,
ಇಲ್ಲಿದೆ ಬಾ ಹೀಗೆ ಹಸೆ.”
ಇಲ್ಲಿಯವರೆಗೆ ನಿಸರ್ಗ, ದೇಶಪ್ರೇಮ, ಗೆಳೆತನ, ಆದರ್ಶ ಮೊದಲಾದ ವಸ್ತುಗಳ ಬಗೆಗೆ ಕವನಗಳು ಬರುತ್ತಿದ್ದು, ಈಗ ‘ರೇಡಿಯೊ’ ಎನ್ನುವ ಆಧುನಿಕ ವಸ್ತುವಿನ ಬಗೆಗೆ ಗೋಕಾಕರು ಕವನವನ್ನು ಬರೆದರು. ಆದರೆ ಈ ಕವನದ ಭಾವ ಹಾಗು ರಚನೆಗಳು ಭಾವಗೀತೆಯ ಭಾವ ಹಾಗು ರಚನೆಗಿಂತ ಬೇರೆಯಾಗಿಲ್ಲ. ಗೋಕಾಕರಲ್ಲಿ self-appreciation ಬಹಳ. ಹೀಗಾಗಿ ಅವರ ಸಾಹಿತ್ಯದಲ್ಲಿಯೂ ಸಹ ಅವರ ಈ ಮನೋಭಾವ ವ್ಯಕ್ತವಾಗುತ್ತಿರುತ್ತದೆ.
ಕನ್ನಡದ ಹೆಸರಾತ ವಿಮರ್ಶಕ ಕೀರ್ತಿನಾಥ ಕುರ್ತಕೋಟಿಯವರು, “ಸೂಕ್ಷ್ಮವಾಗಿ ನೋಡಿದರೆ ನಮ್ಮಲ್ಲಿ ನವ್ಯತೆ ಇಟಲಿಯ ನೃತ್ಯಮಂದಿರದಲ್ಲಿ ಹುಟ್ಟಿದ ಪೇಜಾವರ ಸದಾಶಿವರಾಯರ ಕಾವ್ಯದಿಂದ ಪ್ರಾರಂಭವಾಯಿತೆನ್ನಬಹುದು” ಎಂದು ಹೇಳುತ್ತಾರೆ. ಪೇಜಾವರ ಸದಾಶಿವರಾಯರ ಆ ಕವನ “ನಾಟ್ಯೋತ್ಸವ” ಹೀಗಿದೆ:
“ಲೋರೆನ್ಸೊ ಇಲ್ ಮನ್ನೀಫಿಕೊ
ಹಾಡನರ್ಪಿಸಿಹೆನು ತಕೊ!
. . . . . . . . . . . . . .
. . . . . . . . . . . . . .
ಕಾಯದಲ್ಲಿ ಕದನದಿಚ್ಛೆ
ಆದರದನು ಕೊಂಚ ಮುಚ್ಚೆ
ಅರಳುತಿರುವ ಮುಗುಳು ನಗೆ
ಸಾವಿರ ಸಿಗರೇಟ ಹೊಗೆ;
ಮಧುವಿನಲ್ಲಿ ಮಿಂದ ಮುದವು
ಮನಸ ಕೆದರಿದೆ!
. . . . . .. . . . . . . . . . . .
. . . . . . . . . . . . . . . . . ”
ಪೇಜಾವರರ ಈ ಕವನವು ಪಾಶ್ಚಾತ್ಯ ಮನೋವೃತ್ತಿಯ ವಿಜೃಂಭಣೆಯಂತೆ ಕಂಡು ಬರುತ್ತದೆ. ಕವನದ ರಚನೆಯೂ ಸಹ ಭಾವಗೀತೆಯ ರಚನೆಯನ್ನು ಬಿಟ್ಟು ಮುಕ್ತತೆಯ ಕಡೆಗೆ ವಾಲಿದೆ. ಇಷ್ಟರ ಮಟ್ಟಿಗೆ ಇದಕ್ಕೆ ನವ್ಯಕಾವ್ಯವೆನ್ನಬಹುದು.
ಬೇಂದ್ರೆಯವರನ್ನು ಬಿಟ್ಟರೆ, ನವೋದಯ ಕಾವ್ಯಪ್ರಕಾರದಲ್ಲಿ ಅತ್ಯುತ್ತಮ ಸಿದ್ಧಿಯನ್ನು ಮಾಡಿದವರು ಗೋಪಾಲಕೃಷ್ಣ ಅಡಿಗರು.
“ಕಟ್ಟುವೆವು ನಾವು ನಾಡೊಂದನು
ರಸದ ಬೀಡೊಂದನು” ಎನ್ನುವ ಅವರ ಕವನದ ಸಾಲುಗಳನ್ನು ರಾಜಕಾರಣಿಗಳೂ ಸಹ, ಇಂದಿಗೂ quote ಮಾಡುತ್ತಲೇ ಇರುತ್ತಾರೆ.
“ಯಾವ ಮೋಹನ ಮುರಲಿ ಕರೆಯಿತು, ದೂರ ತೀರಕೆ ನಿನ್ನನು?” ಎನ್ನುವ ಕವನವಂತೂ ಅವರ ಅತ್ಯಂತ ಜನಪ್ರಿಯ ಕವನವಾಗಿ ಉಳಿದಿದೆ.
ಆದರೆ ಸ್ವಾತಂತ್ರ್ಯಾನಂತರ ಆದರ್ಶವಾದಿ ಪರಿಸರವು ಶೀಘ್ರವಾಗಿ ಕುಸಿದು ಬೀಳುತ್ತಿದ್ದನ್ನು ಕಂಡು, ಅವರಲ್ಲಿ ಸಾಮಾಜಿಕ ಹಾಗೂ ರಾಜಕೀಯ ಭ್ರಮನಿರಸನವಾಯಿತು. ಬದಲಾಗುತ್ತಿರುವ ಸಂಸ್ಕೃತಿಯು ವ್ಯಕ್ತಿಯ ಮೇಲೆ ಮಾಡುತ್ತಿರುವ ಪರಿಣಾಮಗಳು, ಅದರಲ್ಲಿ ಯಾವುದು ಸರಿ ಯಾವುದು ತಪ್ಪು, ಯಾವುದು ಶ್ರೇಯಸ್ಸು, ಯಾವುದು ಪ್ರೇಯಸ್ಸು ಎನ್ನುವ ವೈಯಕ್ತಿಕ ತಳಮಳವು ಅಡಿಗರಲ್ಲಿ ಪ್ರಾರಂಭವಾಯಿತು. ಈ ತಳಮಳದ ಪರಿಣಾಮವು ಅವರ ಕಾವ್ಯಮಾರ್ಗದ ಮೇಲೂ ಆದದ್ದನ್ನು ನೋಡಬಹುದು. ನವೋದಯದ ಭಾವಗೀತೆಯ ಮಾರ್ಗವನ್ನು ಕಿತ್ತೆಸೆದು, ಅಡಿಗರು ನವ್ಯ ಮಾರ್ಗದಲ್ಲಿ ಚರಿಸಿದರು. ಅವರ ‘ಭೂಮಿಗೀತ’ ಕವನದಲ್ಲಿ ಬರುವ ಈ ಸಾಲುಗಳು ಅವರ ಕಾವ್ಯಮಾರ್ಗಕ್ಕೂ ಹೊಂದುತ್ತವೆ ಎನ್ನಬಹುದು:
“ತೆಗೆದುಕೊ ನೀ ಕೊಟ್ಟ ವಸ್ತ್ರವಿಲಾಸ, ಈ ಶರಟು, ಈ ಶರಾಯಿ,
ಈ ಭಗ್ನ ಜೋಪಡಿಯೂ ನಿನ್ನದೇ.
ಬತ್ತಲಾಗದೆ ಬಯಲು ಸಿಕ್ಕದಿಲ್ಲಿ!”
ಈ ಕಾರಣಗಳಿಂದಾಗಿ ಗೋಪಾಲಕೃಷ್ಣ ಅಡಿಗರನ್ನೇ ಕನ್ನಡದ ನವ್ಯಕಾವ್ಯ ಪ್ರವರ್ತಕರೆಂದು ಕರೆಯುವದು ಸರಿಯಾದ ಮಾತು. ಆದರೆ ಅಡಿಗರಿಂದ ಪ್ರಭಾವಿತರಾಗಿ ನವ್ಯಮಾರ್ಗವನ್ನು ಅನುಸರಿಸಿದ ಯಾವ ಕವಿಯೂ ಅಡಿಗರು ಏರಿದ ಎತ್ತರವನ್ನು ಮುಟ್ಟಿಲ್ಲ.
ಅಡಿಗರ ‘ಭೂತ’ ಕವನವು ೧೯೫೯ರಲ್ಲಿ ಪ್ರಕಟವಾಯಿತು. ಆ ಕವನದ ಪೂರ್ತಿಪಾಠ ಹೀಗಿದೆ :
ಭೂತ
--೧--
ಕಾಡುತ್ತಿವೆ ಭೂತಕಾಲದ ಭ್ರೂಣಗೂಢಗಳು :
ಹುಗಿದ ಹಳಬಾವಿಯೊಳ ಕತ್ತಲ ಹಳಸುಗಾಳಿ
ಅಂಬೆಗಾಲಿಟ್ಟು ತಲೆಕೆಳಗು ತೆವಳುತ್ತೇರಿ
ಅಳ್ಳಳ್ಳಾಯಿ ಜಪಿಸುವ ಬಿಸಿಲಕೋಲಿಗೇರಿ ತೆಕ್ಕಾಮುಕ್ಕಿ
ಹಾಯುತ್ತಿದೆ ಆಗಾಗ್ಗೆ ತುಳಸಿವೃಂದಾವನದ ಹೊದರಿಗೂ.
ತೊಟ್ಟು ಕಳಚಿದ ಹೊಕ್ಕುಳಿನ ಬಳ್ಳಿ ದಡದಲ್ಲಿ
ಕತ್ತರಿಸಿದಿಲಿಬಾಲ ಮಿಡುಕುತ್ತದೆ.
ಕತ್ತಲಲ್ಲೇ ಕಣ್ಣುನೆಟ್ಟು ತಡಕುವ ನನಗೆ
ಹೊಳೆವುದು ಹಠಾತ್ತನೊಂದು ಚಿನ್ನದ ಗೆರೆ :
ಅಮವಾಸ್ಯೆ ಕಂದಕಗಳಲ್ಲಿ ಹೇಗೋ ಬಿದ್ದು ಒದ್ದಾಡುತ್ತಿರುವ ಗರಿ ಸುಟ್ಟ ತಾರೆ.
--೨--
ವರ್ತಮಾನಪತ್ರಿಕೆಯ ತುಂಬ ಭೂತದ ಸುದ್ದಿ :
ನೀರ ಮೇಲಕ್ಕೊಂದು ಮಡಿ, ಕೆಳಕ್ಕೇಳು ಮಂಜಿನ ಶಿಖರಿ ;
ಇದ್ದಕ್ಕಿದ್ದಂತಕಸ್ಮಾತ್ತಗ್ನಿನುಡಿಯುಗಿದ
ಮಂಜು ಮುಸುಕಿದ ಮುಗ್ಧ ಜ್ವಾಲಾಮುಖಿ.
ಪತ್ರಿಕೆಯ ಮುಚ್ಚಿದರು----
ಸದ್ದಿರದ ಖಾಲಿಕಂಕಾಲ ಕೋಣೆಗಳಲ್ಲಿ
ತಾಳವಿಲ್ಲದೆ ಮೂಕಸನ್ನೆ ಮುಲುಕುವ ತಿರುಗುಮುರುಗು ಪಾದದ ಪರಿಷೆ
ಅಂತರಾಳಗಲ್ಲಿ ನಿಂತ ನೀರುಗಳಲ್ಲಿ
ಕಂತಿ ಕೈಬಡೆವ ಬೀಜಾಣುಜಾಲ ;
ಕಾಳರಂಗಸ್ಥಳದ ಫರದೆ ಮುರಿಮರೆಯಲ್ಲಿ
ಮಾತು ಹೆಕ್ಕುವ ಮಿಣುಕು ಮೊನೆಯ ಬಾಲ----- ಇವು
ಬಯಸವೆ ಹೊರಂಗಳದ ರಂಗುರಂಗಿನ ಬಳ್ಳಿ ಹೂವು ಹೊದರ ?
---೩—
ನೀರು ನೆಲೆಯಿಲ್ಲದವರು ಪಿತೃಪಿತಾಮಹರು,
ಗಾಳಿಹೆದ್ದೆರೆಲಾಳಿಗಂಟಿ ನೆಲಸಿಕ್ಕಿಯೂ ದಕ್ಕದವರು.
ಉಚ್ಛಾಟನೆಯ, ತರ್ಪಣದ ತಂತ್ರ ಬಲ್ಲೆ ; ಆದರು ಮಂತ್ರ ಮರೆತೆ ;
ಬರಿದೇ ಹೀಗೆ ಆಡಿಸುತ್ತಿದ್ದೇನೆ ಮಂತ್ರದಂಡ.
ಪುರೋಹಿತರ ನೆಚ್ಚಿ ಪಶ್ಚಿಮಬುದ್ಧಿಯಾದೆವೋ ;
ಇನ್ನಾದರೂ ಪೂರ್ವಮೀಮಾಂಸೆ ಕರ್ಮಕಾಂಡಗಳನ್ನು ಬಗೆಯಬೇಕು.
ಅಗೆವಾಗ್ಗೆ ಮೊದಲು ಕೋಶಾವಸ್ಥೆ ಮಣ್ಣು ;
ಕೆಳಕ್ಕೆ ತಳಕ್ಕೆ ಗುದ್ದಲಿಯೊತ್ತಿ ಕುಕ್ಕಿದರೆ
ಕಂಡೀತು ಗೆರೆ ಮಿರಿವ ಚಿನ್ನದದಿರು,
ಹೊರತೆಗೆದು ಸುಟ್ಟು ಸೋಸುವಪರಂಜಿ ವಿದ್ಯೆಗಳ
ಇನ್ನಾದರೂ ಕೊಂಚ ಕಲಿಯಬೇಕು :
ಹೊನ್ನ ಕಾಯಿಸಿ ಹಿಡಿದು ಬಡಿದಿಷ್ಟದೇವತಾ---
ವಿಗ್ರಹಕ್ಕೊಗ್ಗಿಸುವ ಅಸಲು ಕಸಬು.
--೪—
ಬಾವಿಯೊಳಗಡೆ ಕೊಳೆವ ನೀರು ; ಮೇಲಕ್ಕಾವಿ ;
ಆಕಾಶದುದ್ದವೂ ಅದರ ಕಾರಣ ಬೀದಿ ;
ಕಾರ್ಮುಗಿಲ ಖಾಲಿಕೋಣೆಯ ಅಗೋಚರ ಬಿಂದು
ನವಮಾಸವೂ ಕಾವ ಭ್ರೂಣರೂಪಿ---
ಅಂತರಪಿಶಾಚಿ ಗುಡುಗಾಟ, ಸಿಡಿಲಿನ ಕಾಟ---
ಭೂತರೂಪಕ್ಕೆ ಮಳೆ ವರ್ತಮಾನ ;
ಅಗೆದುತ್ತ ಗದ್ದೆಗಳ ಕರ್ಮಭೂಮಿಯ ವರಣ ;
ಭತ್ತಗೋಧುವೆ ಹಣ್ಣುಬಿಟ್ಟ ವೃಂದಾವನ,
ಗುಡಿಗೋಪುರಗಳ ಬಂಗಾರ ಶಿಖರ.
………………………………………………………………………………
ಈ ಕವನದಲ್ಲಿ ಬರುವ ಭೂತ ಪದಕ್ಕೆ ಎರಡು ಅರ್ಥಗಳನ್ನು ಮಾಡಬಹುದು. ಒಂದು past ; ಎರಡನೆಯದು ghost. ಕವಿ ತನ್ನ ಭೂತಕಾಲವನ್ನು ಅಂದರೆ ತನ್ನ ಪೂರ್ವಸಂಸ್ಕಾರಗಳನ್ನು, ಪೂರ್ವಪರಂಪರೆಯನ್ನು ಮರೆತಿದ್ದಾನೆ.ಇದು ವರ್ತಮಾನದ ಪರಿಣಾಮವಾಗಿರಬಹುದು; ಪರಸಂಸ್ಕೃತಿಯ ಆಕರ್ಷಣೆಯ ಪರಿಣಾಮವಾಗಿರಬಹುದು. ಇದರಿಂದ ಕವಿಯ ಮೇಲೆ Alienation Effect ಅಂತೂ ಆಗಿದೆ. ಕವಿಯು ಇಲ್ಲಿ ತನ್ನ ಜನಾಂಗದ ಪ್ರತಿನಿಧಿಯೂ ಹೌದು. ಆದುದರಿಂದ ಒಂದು ಜನಾಂಗವೇ ತನ್ನ ಪರಂಪರೆಯ ವಿಸ್ಮರಣೆಗೆ ಒಳಗಾಗಿದ್ದನ್ನು ಕವಿಯು ವೈಯಕ್ತಿಕವಾಗಿ ಅನುಭವಿಸುತ್ತಿದ್ದಾನೆ. ಆದರೆ ಓರ್ವ ವ್ಯಕ್ತಿಯ ಅಥವಾ ಒಂದು ಜನಾಂಗದ ಸುಪ್ತಪ್ರಜ್ಞೆಯಲ್ಲಿರುವ ಪರಂಪರೆಯ ನೆನಪಿನ ಗ್ರಂಥಿಗಳು ಸುಲಭವಾಗಿ ನಾಶವಾಗುವದಿಲ್ಲ. ಅವು ಒಂದಿಲ್ಲ ಒಂದು ರೀತಿಯಲ್ಲಿ ತಮ್ಮ ಇರುವಿಕೆಯನ್ನು ವ್ಯಕ್ತಪಡಿಸುತ್ತವೆ. ಆದುದರಿಂದಲೇ ಕವಿಯು ಇವುಗಳನ್ನು ‘ಭೂತಕಾಲದ ಭ್ರೂಣ ಗೂಢಗಳು ’ ಎಂದು ಹೇಳುತ್ತಿದ್ದಾನೆ. ಪರಂಪರೆಯ ನೆನಪಿನ ಈ ಗ್ರಂಥಿಗಳು ಕವಿಗೂ ಸಹ ಗೂಢವಾಗಿಯೇ ಇವೆ. ಅವುಗಳನ್ನು ಗುರುತಿಸಲು ಆತ ಶಕ್ತನಾಗುತ್ತಿಲ್ಲ. ಆದರೆ ಅವು ನಿರ್ಜೀವ ಗೂಢಗಳಲ್ಲ. ಅವು ಭ್ರೂಣಾವಸ್ಥೆಯಲ್ಲಿವೆ. ಅಂದರೆ ಅವುಗಳಲ್ಲಿ ಜೀವವಿದೆ. ಅವು ಕವಿಯ ಸುಪ್ತ ಪ್ರಜ್ಞೆಯಿಂದ ಅವನ ಜಾಗೃತ ಪ್ರಜ್ಞೆಗೆ ಅಂದರೆ ಅವನ ಸಂಕಲ್ಪಾತ್ಮಕ ಪ್ರಜ್ಞೆಗೆ (Determining mind) ಬರಲು ತವಕಿಸುತ್ತವೆ. ಶಾಸ್ತ್ರೀಯ ಮನೋವಿಜ್ಞಾನದ ಪಿತಾಮಹನಾದ ಫ್ರಾ^ಯ್ಡನ ಭಾಷೆಯಲ್ಲಿ ಈ ಭ್ರೂಣಗೂಢಗಳು ಅಂದರೆ complexes in subconscious mind ಎಂದು ಹೇಳಬಹುದು. ಮತ್ತೊಬ್ಬ ಮನೋವಿಜ್ಞಾನಿ ಯೂಂಗನ ಭಾಷೆಯಲ್ಲಿ ಇವನ್ನು ಜನಾಂಗೀಯ ಪ್ರಜ್ಞೆಯ ಗ್ರಂಥಿಗಳು ಎಂದೂ ಹೇಳಬಹುದು. ಒಟ್ಟಿನಲ್ಲಿ ಈ ಭ್ರೂಣಗೂಢಗಳಿಂದಾಗಿ ಕವಿಯ ಮನಸ್ಸು ತೀವ್ರ ತಳಮಳಕ್ಕೊಳಗಾಗಿದೆ.
ಕವನದ ಮೊದಲ ಭಾಗದಲ್ಲಿ ಈ ಅಸ್ವಸ್ಥತೆಯ ವರ್ಣನೆ ಇದೆ. ಎರಡನೆಯ ಭಾಗದಲ್ಲಿ ಗುರುತಿಸಲಾಗದ ಈ ಭೂತಗಳ ವರ್ಣನೆ ಇದೆ. ಮೂರನೆಯ ಭಾಗದಲ್ಲಿ ಕವಿಯ ಸಂಕಲ್ಪವರ್ಣನೆ ಇದೆ. ನಾಲ್ಕನೆಯ ಭಾಗದಲ್ಲಿ ಆಶೆಯ ಮುನ್ನೋಟದ ಸಂಕೇತವಿದೆ. ನಿರಾಶೆಯಿಂದಲೇ ಪ್ರಾರಂಭವಾದ ಕವನವು ಸಂಕಲ್ಪದಲ್ಲಿ ಹಾಗೂ ಆಶಾವಾದದಲ್ಲಿ ಮುಕ್ತಾಯವಾಗುತ್ತದೆ.
--೧—
ಮೊದಲ ಭಾಗ ಹೀಗಿದೆ:
ಕಾಡುತ್ತಿವೆ ಭೂತಕಾಲದ ಭ್ರೂಣಗೂಢಗಳು :
ಹುಗಿದ ಹಳಬಾವಿಯೊಳ ಕತ್ತಲ ಹಳಸುಗಾಳಿ
ಅಂಬೆಗಾಲಿಟ್ಟು ತಲೆಕೆಳಗು ತೆವಳುತ್ತೇರಿ
ಅಳ್ಳಳ್ಳಾಯಿ ಜಪಿಸುವ ಬಿಸಿಲಕೋಲಿಗೇರಿ ತೆಕ್ಕಾಮುಕ್ಕಿ
ಹಾಯುತ್ತಿದೆ ಆಗಾಗ್ಗೆ ತುಳಸಿವೃಂದಾವನದ ಹೊದರಿಗೂ.
ತೊಟ್ಟು ಕಳಚಿದ ಹೊಕ್ಕುಳಿನ ಬಳ್ಳಿ ದಡದಲ್ಲಿ
ಕತ್ತರಿಸಿದಿಲಿಬಾಲ ಮಿಡುಕುತ್ತದೆ.
ಕತ್ತಲಲ್ಲೇ ಕಣ್ಣುನೆಟ್ಟು ತಡಕುವ ನನಗೆ
ಹೊಳೆವುದು ಹಠಾತ್ತನೊಂದು ಚಿನ್ನದ ಗೆರೆ :
ಅಮವಾಸ್ಯೆ ಕಂದಕಗಳಲ್ಲಿ ಹೇಗೋ ಬಿದ್ದು ಒದ್ದಾಡುತ್ತಿರುವ ಗರಿ ಸುಟ್ಟ ತಾರೆ.
ತನ್ನ ಸುಪ್ತಪ್ರಜ್ಞೆಯನ್ನು ಕವಿ ‘ಹುಗಿದ ಹಳಬಾವಿಯೊಳ ಕತ್ತಲ ಹಳಸುಗಾಳಿ’ ಎಂದು ಸಂಕೇತಿಸುತ್ತಾನೆ. ತಾಯಗರ್ಭದಲ್ಲಿರುವ ಭ್ರೂಣವು ಹೇಗೆ ತಲೆ ಕೆಳಗೆ ಮಾಡಿಕೊಂಡೇ ಹೊರಗೆ ಬರಲು ಪ್ರಯತ್ನಿಸುವದೋ, ಅದೇ ರೀತಿಯಲ್ಲಿ, ಈ ಭೂತಕಾಲದ ಗೂಢಭ್ರೂಣಗಳೂ ಸಹ ತಲೆಕೆಳಗು ಮಾಡಿಕೊಂಡು ತೆವಳುತ್ತ ಹೊರಬರಲು ಪ್ರಯತ್ನಿಸುತ್ತಿವೆ. ಅವುಗಳ ಪ್ರಯತ್ನಕ್ಕೆ ಅಲ್ಲೊಂದು ಆಶಾಕಿರಣವಿದೆ. ಅದೇ ಹೊರಪ್ರಜ್ಞೆಯಲ್ಲಿರುವ ’ಬಿಸಿಲುಕೋಲು’. ಆ ಬಿಸಿಲಕೋಲನ್ನು ಹಿಡಿದುಕೊಂಡು ಇವು ಹೊರಬಂದರೆ ಇವಕ್ಕೆ ಸಿಗುವದು ಜೀವನವನ್ನು ಪಾವನಗೊಳಿಸುವ ತುಳಸಿವೃಂದಾವನ !
ಆದರೆ ಈ ಪ್ರಯಾಣ ಸುಖಕರವಾಗಿಲ್ಲ. ಗೂಢಪ್ರಜ್ಞೆಯ ಗರ್ಭದಿಂದ ಹೊರಬಂದಾಗ ಇವು ಗರ್ಭದ ಜೊತೆಗೆ ಸಂಬಂಧ ನೀಡಿದ ಹೊಕ್ಕಳಹುರಿಯನ್ನು ಕಳಚಿಕೊಳ್ಳುತ್ತವೆ, ಕತ್ತರಿಸಿದ ಇಲಿಬಾಲ ಮಿಡುಕುವಂತೆ. ಇದು pain of separation ಅನ್ನು ಸೂಚಿಸುತ್ತದೆ.
ಈ ರೀತಿಯಾಗಿ ಗೂಢಭ್ರೂಣವು ಹೊರಗೆ ಪ್ರತ್ಯಕ್ಷವಾದಾಗ, ಅದನ್ನು ಗುರುತಿಸಲು ಕತ್ತಲಲ್ಲಿ ತಡಕಾಡುತ್ತಿರುವ ಕವಿಯ ಕಣ್ಣಿಗೆ ಮಿಂಚೊಂದು ಹೊಳೆದು ಅದು ಕಾಣುತ್ತದೆ. ಆ ಮಿಂಚಿನಲ್ಲಿ ಕವಿ ಕಾಣುವದು ಏನನ್ನು? ಈ ಭ್ರೂಣದ ಸ್ಥಿತಿಯನ್ನು :ಅದೊಂದು ಗರಿ ಸುಟ್ಟ ತಾರೆ ! ಅದು ತಾರೆಯೇನೋ ನಿಜ. ಆದರೆ ಅದರ ಗರಿ ಸುಟ್ಟಿದೆ. ಅದು ಹಾರಲಾರದೇ ಒದ್ದಾಡುತ್ತಿದೆ. ನಾವು ಕಳೆದುಕೊಂಡಿರುವ ನಮ್ಮ ಪರಂಪರೆಯ ಅಂಶಗಳು ಗರಿಸುಟ್ಟ ತಾರೆಯಂತಾಗಿವೆ ಎನ್ನುವದು ಕವಿಯ ಭಾವ.
ಈ ರೀತಿಯಾಗಿ ಮೊದಲ ಭಾಗದಲ್ಲಿ ಕವಿ ಸುಪ್ತಪ್ರಜ್ಞೆಯಲ್ಲಿರುವ ಪಾರಂಪರಿಕ ಅಂಶಗಳ ವಸ್ತುಸ್ಥಿತಿಯನ್ನು ಹಾಗೂ ಕವಿಯ ಜೊತೆಗೆ ಅವುಗಳಿಗಿರುವ ಸಂಬಂಧವನ್ನು ವರ್ಣಿಸಿದ್ದಾನೆ.
--೨—
ಎರಡನೆಯ ಭಾಗ ಹೀಗಿದೆ:
ವರ್ತಮಾನಪತ್ರಿಕೆಯ ತುಂಬ ಭೂತದ ಸುದ್ದಿ :
ನೀರ ಮೇಲಕ್ಕೊಂದು ಮಡಿ, ಕೆಳಕ್ಕೇಳು ಮಂಜಿನ ಶಿಖರಿ ;
ಇದ್ದಕ್ಕಿದ್ದಂತಕಸ್ಮಾತ್ತಗ್ನಿನುಡಿಯುಗಿದ
ಮಂಜು ಮುಸುಕಿದ ಮುಗ್ಧ ಜ್ವಾಲಾಮುಖಿ.
ಪತ್ರಿಕೆಯ ಮುಚ್ಚಿದರು----
ಸದ್ದಿರದ ಖಾಲಿಕಂಕಾಲ ಕೋಣೆಗಳಲ್ಲಿ
ತಾಳವಿಲ್ಲದೆ ಮೂಕಸನ್ನೆ ಮುಲುಕುವ ತಿರುಗುಮುರುಗು ಪಾದದ ಪರಿಷೆ
ಅಂತರಾಳಗಲ್ಲಿ ನಿಂತ ನೀರುಗಳಲ್ಲಿ
ಕಂತಿ ಕೈಬಡೆವ ಬೀಜಾಣುಜಾಲ ;
ಕಾಳರಂಗಸ್ಥಳದ ಫರದೆ ಮುರಿಮರೆಯಲ್ಲಿ
ಮಾತು ಹೆಕ್ಕುವ ಮಿಣುಕು ಮೊನೆಯ ಬಾಲ----- ಇವು
ಬಯಸವೆ ಹೊರಂಗಳದ ರಂಗುರಂಗಿನ ಬಳ್ಳಿ ಹೂವು ಹೊದರ ?
ಎರಡನೆಯ ಭಾಗದಲ್ಲಿ ಕವಿ ತನ್ನ --(ಅಂದರೆ ತನ್ನ ಜನಾಂಗದ ಎನ್ನುವ ಅರ್ಥವೂ ಇಲ್ಲಿದೆ)—ವರ್ತಮಾನ ಸ್ಥಿತಿಗೂ ಹಾಗೂ ತನ್ನ ಪರಂಪರೆಗೂ ಇರುವ ಗಾಢ ಸಂಬಂಧವನ್ನು ವಿವರಿಸುತ್ತಾನೆ.
ವರ್ತಮಾನ ಪತ್ರಿಕೆ ಅಂದರೆ news paper. ಅದು ಜಗತ್ತಿನಲ್ಲಿ ಸದ್ಯಕ್ಕೆ ನಡೆಯುತ್ತಿರುವದನ್ನು (=ವರ್ತಮಾನವನ್ನು=present stateಅನ್ನು) ತಿಳಿಸಬೇಕು. ಆದರೆ ಈ ವರ್ತಮಾನ ಪತ್ರಿಕೆಯಲ್ಲಿ ಬಂದಿರುವದು ಸದ್ಯದ ಸುದ್ದಿಯಲ್ಲ ; ಅಲ್ಲಿರುವದು ಕೇವಲ ಭೂತದ ಸುದ್ದಿ.
ಅರ್ಥಾತ್ ವರ್ತಮಾನವನ್ನು ಭೂತಕಾಲವು control ಮಾಡುತ್ತಿದೆ.
ಇದರ ಕಾರಣವು ಖ್ಯಾತ ಮನೋವಿಜ್ಞಾನಿ ಫ್ರಾ^ಯ್ಡನ ಥಿಯರಿಯಲ್ಲಿ ಸಿಗುತ್ತದೆ.
ಮನಸ್ಸಿನಲ್ಲಿ ಮೇಲೆ ಕಾಣುವ ಜಾಗ್ರತ ಭಾಗ ಒಂದು ಮಡಿಯಾದರೆ, ಸುಪ್ತ ಭಾಗವು ಏಳು ಮಡಿಯಷ್ಟಿರುತ್ತದೆ. ಈ ಸುಪ್ತಭಾಗವು ಮಂಜು ಮುಸುಕಿದ, ತಣ್ಣನೆಯ ಜ್ವಾಲಾಮುಖಿ. ಯಾವದೋ ಸಂದರ್ಭದಲ್ಲಿ ಇದು ಸಿಡಿದೇಳಬಹುದು!
ಭೂತದ ಸುದ್ದಿಯನ್ನೇ ಹೇಳುವ ಈ ವರ್ತಮಾನ ಪತ್ರಿಕೆಯನ್ನು ಈಗ ಮುಚ್ಚಿ ಹಾಕಿದ್ದಾರೆ.
ಸರಿ, ಪತ್ರಿಕಾಲಯದ ಒಳಗಿನ ಖಾಲಿ ಕೋಣೆಗಳಲ್ಲಿ ಈಗ ಕಾಣುವದೇನು?
ಅಲ್ಲೂ ಭೂತಚಲನೆ !
ಆದರೆ, ವರ್ತಮಾನವು ಮಾಡುವಂತೆ, ಭೂತವು ಸದ್ದು ಮಾಡಲಾರದು, ಇದು ನಿಶ್ಶಬ್ದ ಜೀವಿ ! ಇದರದು ಏನಿದ್ದರೂ silent operation ! ಅದಕ್ಕೆಂದೇ ‘ಸದ್ದಿರದ ಕಂಕಾಲ (=skeleton)ಕೋಣೆ ಎಂದು ಕವಿ ಸುಪ್ತಪ್ರಜ್ಞೆಯನ್ನು ಬಣ್ಣಿಸುತ್ತಾನೆ. ಅಲ್ಲಿ ತಿರುಗು ಮುರುಗು ಪಾದವುಳ್ಳ (= ಭೂತಗಳ) ಪರಿಷೆ ಅಂದರೆ ಜಾತ್ರೆ ನಡೆದಿದೆ. ಅವು ತಾಳವಿಲ್ಲದ ಬೇತಾಳಗಳಾಗಿ, ಮೂಕಸನ್ನೆ ಮಾಡುತ್ತ ಚರಿಸುತ್ತಿವೆ. ಭೂತಗಳ ಪಾದಗಳು ತಿರುಗುಮುರುಗಾಗಿ ಇರುವದರಿಂದ ಅವು ಹಿಂದೆ ನಡೆದರೂ ಸಹ, ಅವುಗಳ ಚಲನೆ ಮುಂದಿನ ದಿಕ್ಕಿನಲ್ಲಿರುತ್ತದೆ. ಅರ್ಥಾತ್ ಅವು ಹೊರಬರಲು ಪ್ರಯತ್ನಿಸುತ್ತಿವೆ.
ಈ ಭೂತಗಳು ಜೀವ ಪಡೆಯಲು ಪ್ರಯತ್ನಿಸುತ್ತಿವೆ. ಆದುದರಿಂದ ಕವಿಯು ಇವುಗಳನ್ನು ಬೀಜಾಣುಜಾಲಕ್ಕೆ(=sperms) ಹೋಲಿಸುತ್ತಾನೆ. ಈ spermಗಳು ಇರುವ ಸುಪ್ತಪ್ರಜ್ಞೆಯ ಗರ್ಭ ಎಂತಹದು? ಅದು ನಿಂತ ನೀರು, stagnant pond. ಕವಿಯ ಅಂತರಾಳವು stagnant pond ಯಾಕೆ ಅನ್ನುವ ಪ್ರಶ್ನೆ ಇಲ್ಲಿ ಬರುತ್ತದೆ. ಕವಿಯು ಪೂರ್ವಪರಂಪರೆಯನ್ನು ಪೂರ್ಣವಾಗಿ ತ್ಯಜಿಸಿ ಪರಸಂಸ್ಕೃತಿಯನ್ನು ಅಪ್ಪಿಕೊಂಡದ್ದರಿಂದಲೇ, ಅವನ ಪರಂಪರೆಯು ನಿಂತ ನೀರಾಯಿತು. ಈಗ ಆ ನಿಂತ ನೀರಿನಲ್ಲಿಯೇ ಈ ಬೀಜಾಣುಗಳು ಕೈಬಡೆಯುತ್ತ ಚಲಿಸುತ್ತಿವೆ, ಹೊಸ ಜನ್ಮ ಪಡೆಯುವ ಉದ್ದೇಶದಿಂದ. ಭ್ರೂಣಾವಸ್ಥೆಗೆ ಬಂದು, ಆಬಳಿಕ ಜಾಗೃತ ಪ್ರಜ್ಞೆಗೆ ನುಗ್ಗುವ ಉದ್ದೇಶದಿಂದ ಅವು ನಿಂತ ನೀರಿನಲ್ಲಿಯೇ ಕೈಬಡೆಯುತ್ತ ಚಲಿಸುತ್ತಿವೆ.
ಕವಿ ಈಗ ಮತ್ತೆ ಕತ್ತರಿಸಿದಿಲಿಬಾಲವನ್ನು ನೆನಪಿಸುತ್ತಾನೆ. ಈ ಇಲಿಬಾಲವು ಕಾಳ(=dark;time)ರಂಗಸ್ಥಳದ ಪರದೆಯ ಹಿಂದಿರುವ ಇಲಿಬಾಲವಾಗಿದೆ. ಇದು ಮಾತನ್ನು ಹೆಕ್ಕುತ್ತಿದೆ. ಯಾವ ರೀತಿಯಲ್ಲಿ ರಂಗಸ್ಥಳದಲ್ಲಿ ಇರುವ ಪಾತ್ರಗಳು ಪರದೆಯ ಹಿಂದಿನಿಂದ ಬರುವ prompting ಅಂದರೆ ಸೂಚನಾಪದಗಳನ್ನು ಅನುಸರಿಸಿ ಮಾತನಾಡುತ್ತವೆಯೊ, ಅದೇ ರೀತಿಯಲ್ಲಿ ಈ ಭ್ರೂಣಗಳು ರಂಗಸ್ಥಳದ (=ಜಾಗೃತಾವಸ್ಥೆಯ) ಹಿಂದಿರುವ ಸುಪ್ತಪ್ರಜ್ಞೆಯಿಂದ ಸೂಚನೆಗಳನ್ನು ಅನುಸರಿಸುತ್ತವೆ.
ಈ ಎಲ್ಲ ಪ್ರಯತ್ನಗಳೊಂದಿಗೆ, ಈ ಎಲ್ಲ ಅವಸ್ಥೆಗಳನ್ನು ದಾಟಿ ಈ ಪಾರಂಪರಿಕ ಭ್ರೂಣಗೂಢಗಳು ಜಾಗೃತ ಪ್ರಜ್ಞೆಗೆ ಬರಲು ಬಯಸುತ್ತವೆ. ಅವುಗಳಿಗೆ ಅಲ್ಲಿ ಕಾಣಸಿಗುವುದು : ಹೊರ ಅಂಗಳದ(=ಜಾಗೃತ ಪ್ರಜ್ಞೆಯಲ್ಲಿ) ಇರುವ ಬಣ್ಣ ಬಣ್ಣದ ಹೂವು, ಪೊದರುಗಳು!
--೩—
ಮೂರನೆಯ ಭಾಗ ಹೀಗಿದೆ:
ನೀರು ನೆಲೆಯಿಲ್ಲದವರು ಪಿತೃಪಿತಾಮಹರು,
ಗಾಳಿಹೆದ್ದೆರೆಲಾಳಿಗಂಟಿ ನೆಲಸಿಕ್ಕಿಯೂ ದಕ್ಕದವರು.
ಉಚ್ಚಾಟನೆಯ, ತರ್ಪಣದ ತಂತ್ರ ಬಲ್ಲೆ ; ಆದರು ಮಂತ್ರ ಮರೆತೆ ;
ಬರಿದೇ ಹೀಗೆ ಆಡಿಸುತ್ತಿದ್ದೇನೆ ಮಂತ್ರದಂಡ.
ಪುರೋಹಿತರ ನೆಚ್ಚಿ ಪಶ್ಚಿಮಬುದ್ಧಿಯಾದೆವೋ ;
ಇನ್ನಾದರೂ ಪೂರ್ವಮೀಮಾಂಸೆ ಕರ್ಮಕಾಂಡಗಳನ್ನು ಬಗೆಯಬೇಕು.
ಅಗೆವಾಗ್ಗೆ ಮೊದಲು ಕೋಶಾವಸ್ಥೆ ಮಣ್ಣು ;
ಕೆಳಕ್ಕೆ ತಳಕ್ಕೆ ಗುದ್ದಲಿಯೊತ್ತಿ ಕುಕ್ಕಿದರೆ
ಕಂಡೀತು ಗೆರೆ ಮಿರಿವ ಚಿನ್ನದದಿರು,
ಹೊರತೆಗೆದು ಸುಟ್ಟು ಸೋಸುವಪರಂಜಿ ವಿದ್ಯೆಗಳ
ಇನ್ನಾದರೂ ಕೊಂಚ ಕಲಿಯಬೇಕು :
ಹೊನ್ನ ಕಾಯಿಸಿ ಹಿಡಿದು ಬಡಿದಿಷ್ಟದೇವತಾ---
ವಿಗ್ರಹಕ್ಕೊಗ್ಗಿಸುವ ಅಸಲು ಕಸಬು.
ಮೊದಲನೆಯ ಭಾಗದಲ್ಲಿ ಭ್ರೂಣಗೂಢಗಳ ಸ್ಥಿತಿಯನ್ನು ಹಾಗು ಎರಡನೆಯ ಭಾಗದಲ್ಲಿ ಅವುಗಳ ಚಲನಯತ್ನವನ್ನು ಸಾರಿದ ಕವಿ, ಮೂರನೆಯ ಭಾಗದಲ್ಲಿ ತನ್ನ ಅಂತರಂಗದ ( ಅಂದರೆ ಸಂಕಲ್ಪಪ್ರಜ್ಞೆಯ) ವಿಮರ್ಶೆಯಲ್ಲಿ ತೊಡಗಿದ್ದಾನೆ.
ತನ್ನ ಪಿತೃ ಪಿತಾಮಹರು ನೀರು, ನೆಲೆಯಿಲ್ಲದವರು. ಏಕೆಂದರೆ ತಾನು ಅವರ ಶ್ರಾದ್ಧಕರ್ಮಗಳನ್ನು ಮಾಡಿಲ್ಲ. ಏಕೆಂದರೆ ಪರಂಪರೆಯಲ್ಲಿ ತನಗೆ ಶ್ರದ್ಧೆ ಇಲ್ಲ.
(ಟಿಪ್ಪಣಿ: ಶ್ರದ್ಧೆಯಿಂದ ಶ್ರಾದ್ಧ ಪದ ಬಂದಿದೆ.)
ಕವಿಗೆ ಎರಡೂ ತರಹದ ತಂತ್ರಗಳು ಗೊತ್ತು. ಅಂದರೆ ಆತ ಈ ಪಿತೃಗಳ ಉಚ್ಚಾಟನೆಯನ್ನೂ ಮಾಡಬಲ್ಲ ಅಥವಾ ಅವರಿಗೆ ತರ್ಪಣವನ್ನೂ ಸಲ್ಲಿಸಬಲ್ಲ. ಆದರೆ ತಂತ್ರವನ್ನು (ಅಂದರೆ ಹೊರಗಿನ proceduresಗಳನ್ನು) ತಿಳಿದ ಕವಿ ಮಂತ್ರವನ್ನು (ಅಂದರೆ ಅಂತರಂಗ ರಹಸ್ಯವನ್ನು) ಮರೆತು ಬಿಟ್ಟಿದ್ದಾನೆ. ಬರಿದೆ ಮಂತ್ರದಂಡವನ್ನು ಆಡಿಸುತ್ತಿದ್ದಾನೆ. ಇದಕ್ಕೆ ಕಾರಣವೇನು? ಕವಿ ಇದಕ್ಕೆ ಪುರೋಹಿತರನ್ನು ದೂರುತ್ತಿದ್ದಾನೆ. ಪುರೋಹಿತರು ಓರ್ವ ವ್ಯಕ್ತಿಯ ಲೌಕಿಕ ಹಾಗು ಪಾರಲೌಕಿಕ ಶ್ರೇಯಸ್ಸಿಗೆ lead ಮಾಡುವಂಥವರು. ಆದರೆ ಈ ಪುರೋಹಿತರು ಕೇವಲ ಪಶ್ಚಿಮಬುದ್ಧಿಯನ್ನು ಕಲಿಸಿದ್ದಾರೆ. ಪಶ್ಚಿಮಬುದ್ಧಿ ಅಂದರೆ : Western thoughts, western culture.
ಇದನ್ನು ಕಲಿಸಿದವರು ಬ್ರಿಟಿಶ್ ಭಾರತದ rationalists. ಪಶ್ಚಿಮಬುದ್ಧಿಗೆ ಇನ್ನೂ ಒಂದು ಅರ್ಥವಿದೆ. ಪೂರ್ವಬುದ್ಧಿ ಎಂದರೆ ‘ಮೊದಲು ಇದ್ದಂತಹ ಬುದ್ಧಿ’ಅಂದರೆ ಪಾರಂಪರಿಕ ಬುದ್ಧಿ . ಪಶ್ಚಿಮಬುದ್ಧಿ ಎಂದರೆ ‘ಆ ಮೇಲೆ ಬಂದಂತಹ ಬುದ್ಧಿ’. ನಮ್ಮ ಪರಂಪರೆಯನ್ನು ಬಿಟ್ಟುಕೊಟ್ಟು , ಮತ್ತೊಂದು ಸಂಸ್ಕೃತಿಯನ್ನು ಅಪ್ಪಿಕೊಂಡಾಗ ಬಂದಂತಹ ಬುದ್ಧಿ. ಇನ್ನು ಮೇಲಾದರೂ ಸಹ ಪೂರ್ವಮೀಮಾಂಸೆ ಅಂದರ ನಮ್ಮ ಪಾರಂಪರಿಕ ಜ್ಞಾನವನ್ನು ನಾವು ತಿಳಿದುಕೊಳ್ಳಬೇಕು ಎಂದು ಕವಿ ಹೇಳುತ್ತಾನೆ.
ಈ ಕಾರ್ಯ ಹಗುರವಾದ ಕಾರ್ಯವೇನಲ್ಲ. ಈ ಪಾರಂಪರಿಕ ಜ್ಞಾನ ‘ಭೂತ’ದಲ್ಲಿ ಹುಗಿದು ಹೋಗಿದೆ. ಗುದ್ದಲಿಯೊತ್ತಿ, ಅದನ್ನು ಹೊರತೆಗೆಯಲು ಪ್ರಯತ್ನಿಸಿದರೆ, ‘ಚಿನ್ನದ ಅದಿರು’ ಕಂಡೀತು. ಆದರೆ ಇದು ಸುತ್ತಲೂ ಕಲ್ಮಶ ಮೆತ್ತಿದ ಅದಿರು ಮಾತ್ರ. ಆ ಅದಿರನ್ನು ಶೋಧಿಸಿ, ಚೊಕ್ಕ ಬಂಗಾರವನ್ನು ಮಾಡುವ ವಿದ್ಯೆಯನ್ನೂ ಕಲಿಯಬೇಕು. ಬಂಗಾರವನ್ನು ಶೋಧಿಸಿದ ಬಳಿಕ, ಆ ಬಂಗಾರದಿಂದ ಮಾಡುವದೇನು?----- ಇಷ್ಟದೇವತೆಯ ವಿಗ್ರಹವನ್ನು!
ಈ ಭಾಗದಲ್ಲಿ ಕಾಣುವ ಆತ್ಮವಿಮರ್ಶೆ ಹಾಗು ಸಮಾಧಾನಪೂರ್ಣ ಸಂಕಲ್ಪ ಇವು ಕವನಕ್ಕೆ ಶಿಖರಪ್ರಾಯವಾಗಿವೆ ಎನ್ನಬಹುದು.
--೪—
ಕವನದ ಕೊನೆಯ ಭಾಗ ಹೀಗಿದೆ:
ಬಾವಿಯೊಳಗಡೆ ಕೊಳೆವ ನೀರು ; ಮೇಲಕ್ಕಾವಿ ;
ಆಕಾಶದುದ್ದವೂ ಅದರ ಕಾರಣ ಬೀದಿ ;
ಕಾರ್ಮುಗಿಲ ಖಾಲಿಕೋಣೆಯ ಅಗೋಚರ ಬಿಂದು
ನವಮಾಸವೂ ಕಾವ ಭ್ರೂಣರೂಪಿ---
ಅಂತರಪಿಶಾಚಿ ಗುಡುಗಾಟ, ಸಿಡಿಲಿನ ಕಾಟ---
ಭೂತರೂಪಕ್ಕೆ ಮಳೆ ವರ್ತಮಾನ ;
ಅಗೆದುತ್ತ ಗದ್ದೆಗಳ ಕರ್ಮಭೂಮಿಯ ವರಣ ;
ಭತ್ತಗೋಧುವೆ ಹಣ್ಣುಬಿಟ್ಟ ವೃಂದಾವನ,
ಗುಡಿಗೋಪುರಗಳ ಬಂಗಾರ ಶಿಖರ.
ಈ ನಾಲ್ಕನೆಯ ಭಾಗದಲ್ಲಿ ಒಂದೂ ಕ್ರಿಯಾಪದವು ಇಲ್ಲವೆನ್ನುವದನ್ನು ಗಮನಿಸಬೇಕು. ಯಾಕೆಂದರೆ ಈಗ ಕ್ರಿಯೆ ನಡೆಯುತ್ತಿರುವದು ಕವಿಯ ಒಳನೋಟದಲ್ಲಿ.
ಬಾವಿಯ ಕೆಳಗಡೆಗೆ ಇರುವ ಭೂಗತ ಜಲವು ಕೊಳವಿಯಿಂದ ಬಾವಿಯಲ್ಲಿ ಬರುತ್ತದೆ. ಅದು ಆವಿಯಾಗಿ ಮೇಲಕ್ಕೆ ಹೋಗುತ್ತದೆ. ಆಕಾಶವು ಅದಕ್ಕೆ ಮೇಘರೂಪವನ್ನು ಕೊಡುವ ಕಾರಣಪಥ. ಭೂಗತವೆನ್ನುವದು unconscious mind ಅನ್ನೂ, ಬಾವಿಯು conscious mind ಅನ್ನೂ ಪ್ರತಿನಿಧಿಸಿದರೆ ಆಕಾಶವೆನ್ನುವದು superconscious mind ಅನ್ನು ಅಂದರೆ ವಿವೇಕಪ್ರಜ್ಞೆಯನ್ನು ಪ್ರತಿನಿಧಿಸುತ್ತದೆ. ಸುಪ್ತಪ್ರಜ್ಞೆಯ ಗೂಢಗಳಿಗೆ ವಿವೇಕಪ್ರಜ್ಞೆಯು ಸರಿಯಾದ ರೂಪವನ್ನು ಕೊಡಬೇಕೆನ್ನುವದು ಕವಿಯ ಆಶಯ. ಆಕಾಶಕ್ಕೇರಿದ ಈ ಸುಪ್ತಪ್ರಜ್ಞೆಯ ಗೂಢಗಳು ಅಲ್ಲಿ ಅಂತರಪಿಶಾಚಿಯಾಗಿ ನವಮಾಸಗಳವರೆಗೆ ಅಂದರೆ ಪರಿಪೂರ್ಣ ರೂಪವನ್ನು ಪಡೆಯುವವರೆಗೆ ಕಾಯಬೇಕು. ಗುಡುಗು ಸಿಡಿಲಿನ ಕಾಟವನ್ನು ಅಂದರೆ ವಿಭಿನ್ನ ವಿಚಾರಗಳ ಕಾಟವನ್ನು ಸೋಸಬೇಕು. ಆಗಲೇ ಈ ಭೂತರೂಪವು ಮಳೆಯಾಗಿ ವರ್ತಮಾನವನ್ನು ಅಂದರೆ ಜಾಗೃತ ಪ್ರಜ್ಞೆಯನ್ನು ತೋಯಿಸುವದು.
ಇನ್ನು ಮುಂದಿನ ಕಾರ್ಯ ಸಂಕಲ್ಪ ಪ್ರಜ್ಞೆಯದು. ತನ್ನೆದುರಿಗಿನ ಭೂಮಿಯನ್ನು (=ಕರ್ಮಭೂಮಿಯನ್ನು) ಅಗೆದು, ಉತ್ತಿ, ಉತ್ತಮ ಬೀಜಗಳನ್ನು ಬಿತ್ತಿದರೆ ಅಲ್ಲಿ ದೊರೆಯುವದು ಸುಧಾನ್ಯ, ಸುಫಲ ಹಾಗೂ ತನ್ನ ಜನಾಂಗದ ಪರಂಪರೆಯ ಪ್ರತೀಕವಾದ, aspirationಗಳ ಪ್ರತೀಕವಾದ ಗುಡಿಗೋಪುರಗಳ ಬಂಗಾರದ ಶಿಖರಗಳು.
……………………………………………………………
ಆಧುನಿಕ ವಿಚಾರಗಳಿಂದ ಹಾಗೂ ಶಾಸ್ತ್ರೀಯ ಮನೋವಿಜ್ಞಾನದಿಂದ ಪ್ರಭಾವಿತವಾದ ನವ್ಯಕಾವ್ಯವು ಸಂಪ್ರದಾಯವಿರೋಧಿಯಾಗಿದೆ ಎನ್ನುವದು ಸಾಮಾನ್ಯ ಗ್ರಹಿಕೆಯಾಗಿದೆ. ನವ್ಯಕಾವ್ಯದ ಬಹುತೇಕ ಕವಿಗಳು ಅಂತಹದೇ ಕವನಗಳನ್ನು ರಚಿಸಿದರು. ಕೆಲವು ಕವಿಗಳು sex ಬಗೆಗೆ ಬಿಚ್ಚಿ ಬರೆಯುವದೇ ನವ್ಯಕಾವ್ಯವೆಂದು ತಿಳಿದರು. ಈ ತಪ್ಪು ತಿಳಿವಳಿಕೆಯನ್ನು ಹೊತ್ತ ಗಂಗಾಧರ ಚಿತ್ತಾಳರು ತಮ್ಮ ‘ಕಾಮಸೂತ್ರ’ದಲ್ಲಿ ರತಿಕ್ರಿಯೆಯನ್ನು ಬಿಚ್ಚು ಬಿಚ್ಚಾಗಿ ವರ್ಣಿಸಿದ್ದಾರೆ. ಆದರೆ ಕನ್ನಡ ಪದಗಳ ಬದಲಾಗಿ ಅಲ್ಲಿ ಸಂಸ್ಕೃತ ಪದಗಳ ಬಳಕೆ ಇದೆ, ಅಷ್ಟೇ!
ಕನ್ನಡ ಪದಗಳನ್ನೇ ಬಳಸಿದ್ದರೆ ಚಿತ್ತಾಳರ ಕವನಗಳು ಹೋಳಿ ಹುಣ್ಣಿವೆಯ ಪೋಲಿ ಕವನಗಳಾಗುತ್ತಿದ್ದವು.
(ಈ ಕವನವನ್ನು ೨೦೦೭ ನವೆಂಬರ ೧೪ರ "ಮೋಟುಗೋಡೆಯಾಚೆ ಇಣುಕಿದಲ್ಲಿ" blogದಲ್ಲಿ(http://motugode.blogspot.com) ಓದಬಹುದು.)
ನವ್ಯಕಾವ್ಯದ ಮನೋಧರ್ಮವನ್ನು ಅರಿಯಲು ಅಡಿಗರ ಕವನಗಳನ್ನು ಓದಬೇಕು. ಅವರ ‘ಪ್ರಾರ್ಥನೆ’ ಕವನದಲ್ಲಿರುವದು ಒಬ್ಬ ಪ್ರಾಮಾಣಿಕನ, ಒಬ್ಬ ಆದರ್ಶವಾದಿಯ ತಳಮಳ. ಅದಕ್ಕೆಂದೇ, ಆ ಕವನದಲ್ಲಿ ಬರುವ ಅಂತಿಮ ಘೋಷಣೆ : “ತಕ್ಕ ತೊಡೆಗಳ ನಡುವೆ ಧಾತುಸ್ಖಲನದೆಚ್ಚರವ ” ಎನ್ನುವದು ಪೋಲಿ ಮಾತಾಗದೆ, ಪ್ರಾಮಾಣಿಕನ, ಆದರ್ಶವಾದಿಯ ಎಚ್ಚರಿಕೆಯ ಮಾತಾಗುತ್ತದೆ.
(ಈ ಕವನವನ್ನು ೨೦೦೯ ಜೂನ್ ೨೫ರ "ಮೋಟುಗೋಡೆಯಾಚೆ ಇಣುಕಿದಲ್ಲಿ" blogದಲ್ಲಿ(http://motugode.blogspot.com) ಓದಬಹುದು.)
ಅಡಿಗರೇ ತಮ್ಮ ಮತ್ತೊಂದು ಕವನದಲ್ಲಿ “ಗುರುವಿನ ಸಮಾನನಾಗುವತನಕ ದೊರೆಯದಣ್ಣ ಮುಕುತಿ” ಎಂದಿದ್ದಾರೆ. ಹೀಗೆನ್ನುವಾಗ “ಗುರುವಿನ ಗುಲಾಮರಾಗುವ ತನಕ ದೊರೆಯದಣ್ಣ ಮುಕುತಿ” ಎನ್ನುವ ಪುರಂದರದಾಸರ ಅವಹೇಳನ ಮಾಡುತ್ತಿಲ್ಲ. ಆದರೆ ದಾಸ ಮನೋಭೂಮಿಕೆಯನ್ನು ಬಿಡಬೇಕು, ಕುರುಡು ವಿಚಾರಗಳನ್ನು ವಿರೋಧಿಸಬೇಕು ಎನ್ನುವ ವೈಚಾರಿಕ ಮನೋಭಾವವನ್ನು ತೋರಿಸುತ್ತಿದ್ದಾರೆ.
ಹಾಗೆಂದು ಅಡಿಗರು ಸತ್-ಪರಂಪರೆಯ ವಿರೋಧಿಯಲ್ಲ. ಪಾಶ್ಚಾತ್ಯರ ಅಂಧಾನುಕರಣೆಯಿಂದ ನಮ್ಮ ಜನಜೀವನ ಹಾಳಾಗುತ್ತಿರುವದನ್ನು ಕಂಡಿದ್ದರಿಂದಲೇ ಅವರು ಈ ಸತ್-ಪರಂಪರೆಯ ಅಂಶಗಳನ್ನು ಮತ್ತೊಮ್ಮೆ ನಮ್ಮಲ್ಲಿ ಅಳವಡಿಸಿಕೊಳ್ಳುವದರ ಅವಶ್ಯಕತೆಯನ್ನು ಈ ಕವನದಲ್ಲಿ ತೋರುತ್ತಿದ್ದಾರೆ. ಆದರೆ ಅವರ ಎಲ್ಲ ಕವನಗಳಲ್ಲಿಯೂ ಅವರ ಸಾಮಾಜಿಕ, ಸಾಂಸ್ಕೃತಿಕ ತೊಳಲಾಟವು ಅವರ ವೈಯಕ್ತಿಕ ತೊಳಲಾಟವಾಗಿ ಬಿಂಬಿತವಾಗುತ್ತದೆ.
ಇದೇ ಅವರ ಪ್ರಾಮಾಣಿಕತೆಯ ಪ್ರತೀಕವಲ್ಲವೆ?!
ಆಡಿಗರ ಭಾಷೆಯು ಕನ್ನಡಕಾವ್ಯದಲ್ಲಿಯೇ ಅತ್ಯಂತ ಸುಂದರವಾದ ಭಾಷೆ. ಅವರ ಭಾಷೆಯನ್ನು ಅಪ್ಸರೆಯ ಚೆಲುವಿಗೆ ಹೋಲಿಸಬಹುದು. ಅವರ ನವೋದಯ ಮಾರ್ಗದ “ಯಾವ ಮೋಹನ ಮುರಲಿ ಕರೆಯಿತು…” ಕವನವೇ ಆಗಲಿ, ಅಥವಾ ನವ್ಯಮಾರ್ಗದ ‘ಭೂತ’ ಕವನವೇ ಆಗಲಿ, ನಮ್ಮ ಮನಸ್ಸನ್ನು ತಕ್ಷಣವೇ ಸೆರೆ ಹಿಡಿಯುವದು ಆ ಭಾಷೆಯ ಚೆಲುವಿನಿಂದ.
Saturday, July 25, 2009
ಗ್ರಹಣರಹಸ್ಯ
“ಸೂರ್ಯ, ಚಂದ್ರ, ಮಂಗಳ, ಬುಧ, ಗುರು, ಶುಕ್ರ ಹಾಗೂ ಶನಿ ಇವರು ಆಕಾಶದಲ್ಲಿ ಸಂಚರಿಸುವ ದೇವತೆಗಳು ; ರಾಹು ಹಾಗೂ ಕೇತು ಇವರು ರಾಕ್ಷಸರು. ಇವರಲ್ಲಿ ಒಬ್ಬನಿಗೆ ರುಂಡ ಮಾತ್ರ ಇದೆ. ಮತ್ತೊಬ್ಬನಿಗೆ ಮುಂಡ ಮಾತ್ರ ಇದೆ. ಗ್ರಹಣಕಾಲದಲ್ಲಿ ಸೂರ್ಯನನ್ನು ಅಥವಾ ಚಂದ್ರನನ್ನು ಈ ರಾಕ್ಷಸರಲ್ಲಿ ಒಬ್ಬನು ಹಿಡಿದುಕೊಳ್ಳುತ್ತಾನೆ ಎನ್ನುವ ಪಾರಂಪರಿಕ ನಂಬಿಕೆ ಭಾರತೀಯರಲ್ಲಿ ಇದೆ.”
ಆದುದರಿಂದ ಭಾರತೀಯರು ಮೂಢರು ಎನ್ನುವ ಒಂದು ಗ್ರಹಿಕೆ ಪಾಶ್ಚಾತ್ಯರಲ್ಲಿ ಹಾಗೂ ಅನೇಕ ಭಾರತೀಯರಲ್ಲಿ ಇದೆ. ಆದರೆ ಈ ಗ್ರಹಿಕೆ ಪೂರ್ವಾಗ್ರಹಪೀಡಿತವಾದಂತಹ ಗ್ರಹಿಕೆ.
ಭಾರತೀಯರ ಈ ನಂಬಿಕೆಯನ್ನು ಸ್ವಲ್ಪ ಲಕ್ಷ್ಯಗೊಟ್ಟು ಪರೀಕ್ಷಿಸಿರಿ. ಗ್ರಹಣಸಮಯದಲ್ಲಿ ಸೂರ್ಯನನ್ನು ಅಥವಾ ಚಂದ್ರನನ್ನು ರಾಹು ಅಥವಾ ಕೇತು ಎನ್ನುವ ರಾಕ್ಷಸನು ಹಿಡಿಯುತ್ತಾನೆ ಎನ್ನುವದು ಇಲ್ಲಿರುವ ನಂಬಿಕೆ. ಭಾರತೀಯರಲ್ಲಿ ಮೂಢನಂಬಿಕೆಯೆ ಇದ್ದರೆ, ಒಬ್ಬನೇ ರಾಕ್ಷಸನು ಇವರನ್ನು ಬೆನ್ನಟ್ಟಬಹುದಿತ್ತಲ್ಲ? ಇಬ್ಬರು ಯಾಕೆ ಬೇಕು ಎನ್ನುವ ಪ್ರಶ್ನೆ ಬರುತ್ತದೆ. ಅಲ್ಲದೆ, ಯಾವ ಗ್ರಹಣದಲ್ಲಿ ಯಾವ ರಾಕ್ಷಸನು ಈ ಬೆನ್ನಟ್ಟುವ ಕಾರ್ಯ ಮಾಡುತ್ತಾನೆ, ಅವನು ರಾಹುವೊ ಅಥವಾ ಕೇತುವೊ ಎನ್ನುವದನ್ನು ಭಾರತೀಯ ಪಂಚಾಂಗಗಳಲ್ಲಿ ನಿಖರವಾದ ಕಾಲಮಾನದೊಡನೆ ಹೇಳಲಾಗುತ್ತದೆ. ಅರ್ಥಾತ್ ಭಾರತೀಯರಿಗೆ ಈ ರಾಕ್ಷಸರು ಯಾರು ಅನ್ನುವ ಕಲ್ಪನೆ ಸ್ಪಷ್ಟವಾಗಿತ್ತು.
ಖಗೋಲಶಾಸ್ತ್ರವು ಸಾವಿರಾರು ವರ್ಷಗಳಷ್ಟು ಹಳೆಯದು. ಭೂಮಿ ಹಾಗೂ ಇತರ ಗ್ರಹಗಳು ಸೂರ್ಯನ ಸುತ್ತಲೂ ಪರಿಭ್ರಮಿಸುತ್ತವೆ ಎನ್ನುವ ಮಾತನ್ನು ಮೊದಲು ದಾಖಲಿಸಿದವನು ಮೊದಲನೆಯ ಆರ್ಯಭಟನು (ಕ್ರಿ.ಶ. ೪೭೬-೫೫೦). ಭೂಮಿಯ ಸುತ್ತಳತೆ ಹಾಗೂ ಸೂರ್ಯನಿಂದ ಭೂಮಿಯ ದೂರವನ್ನು ಆರ್ಯಭಟನು ಅತ್ಯಂತ ನಿಖರವಾಗಿ ತಿಳಿಸಿದ್ದಾನೆ.
ಆರ್ಯಭಟನ ನಂತರ ಒಂದು ಸಾವಿರ ವರ್ಷಗಳ ಬಳಿಕ ಕೋಪರ್ನಿಕಸ್(ಕ್ರಿ.ಶ. ೧೪೭೩- ಕ್ರಿ.ಶ. ೧೫೪೩) ಎನ್ನುವ ಪೋಲ್ಯಾಂಡಿನ ಶಾಸ್ತ್ರಜ್ಞನು ಭೂಮಿಯ ಪರಿಭ್ರಮಣವನ್ನು ಯುರೋಪಿನಲ್ಲಿ ಸಾರಿದನು.
ಖಗೋಲಶಾಸ್ತ್ರದ ವಿದ್ಯಾರ್ಥಿಗಳಿಗೆಲ್ಲ ಗೊತ್ತಿರುವಂತೆ, ಚಂದ್ರನು ಭೂಮಿಯ ಸುತ್ತಲೂ ತಿರುಗುವ ಕಕ್ಷೆಯು, ಭೂಮಿಯು ಸೂರ್ಯನ ಸುತ್ತಲೂ ತಿರುಗುವ ಕಕ್ಷೆಯನ್ನು, ಎರಡು ಬಿಂದುಗಳಲ್ಲಿ ಛೇದಿಸುತ್ತದೆ. ಇವೆರಡೂ ಕಾಲ್ಪನಿಕ ಬಿಂದುಗಳು. ಪರಿಭ್ರಮಣೆ ಮುಂದುವರೆದಂತೆಲ್ಲ, ಈ ಬಿಂದುಗಳೂ ಸಹ ಸರಿಯುತ್ತಲೆ ಹೋಗುತ್ತವೆ. ಭೂಮಿಯು ಸೂರ್ಯನ ಸುತ್ತಲೂ ತಿರುಗುವ ದಿಕ್ಕಿಗೆ ವಿರುದ್ಧವಾದ ದಿಕ್ಕಿನಲ್ಲಿ ಈ ಬಿಂದುಗಳು ಸರಿಯುತ್ತವೆ.
ಈಗ ಈ ಬಿಂದುಗಳಲ್ಲಿ ಮೊದಲನೆಯ ಬಿಂದುವಿಗೆ ನಮ್ಮ ಶಾಸ್ತ್ರಜ್ಞರು ಕೊಟ್ಟ ಹೆಸರು ರಾಹು ; ಎರಡನೆಯ ಬಿಂದುವಿನ ಹೆಸರು ಕೇತು. ‘ಈ ಬಿಂದುಗಳು ರಾಕ್ಷಸರು ಏಕೆ?’ ಎನ್ನುವ ಪ್ರಶ್ನೆಗೆ ಅನೇಕ ಉತ್ತರಗಳಿವೆ. ಉತ್ತರವನ್ನು ಹುಡುಕುವ ಮೊದಲು ನಾವು ಇನ್ನಿಷ್ಟು ಮಾಹಿತಿಗಳನ್ನು ಗಮನಿಸೋಣ.
ಮೊದಲನೆಯದಾಗಿ ಈ ಬಿಂದುಗಳ ಹೆಸರುಗಳನ್ನು ಪರೀಕ್ಷಿಸೋಣ. ಮೊದಲನೆಯ ಬಿಂದುವಿಗೆ ರಾಹು ಎಂದು ಕರೆದಿದ್ದಾರೆ. ರಾಹು ಈ ಪದದ ಅರ್ಥ Lock. ಗ್ರಹಣಸಮಯದಲ್ಲಿ ಈ ಬಿಂದುವಿನಲ್ಲಿ ಸೂರ್ಯ ಅಥವಾ ಚಂದ್ರರ ಚೈತನ್ಯಕ್ಕೆ ತಡೆ ಬೀಳುವದರಿಂದ ಈ ಬಿಂದುವಿನ ಹೆಸರು Lock ಅಥವಾ ರಾಹು.
ಎರಡನೆಯ ಬಿಂದುವಿನ ಹೆಸರು ಕೇತು. ಕೇತು ಅಂದರೆ Flag. ಮೊದಲನೆಯ ಬಿಂದುವಿಗೆ Flag ಎಂದು ಕರೆಯದೆ ಎರಡನೆಯ ಬಿಂದುವಿಗೆ Flag ಎಂದು ಕರೆಯುವ ಕಾರಣವೇನು? ಯಾಕೆಂದರೆ, ಈ ಬಿಂದುಗಳು ವಿರುದ್ಧ ದಿಕ್ಕಿನಲ್ಲಿ ಚಲಿಸುವದರಿಂದ, ಮೊದಲನೆಯ ಬಿಂದು ಹಿಂದಿನಿಂದ ಚಲಿಸುತ್ತದೆ ಹಾಗೂ ಎರಡನೆಯ ಬಿಂದು ಮುಂದಿನಿಂದ ಚಲಿಸುತ್ತದೆ. ಎರಡನೆಯ ಬಿಂದುವೇ ಇಲ್ಲಿ Flag bearer. ಆದುದರಿಂದ ಇದರ ಹೆಸರು ಕೇತು ಅರ್ಥಾತ್ Flag!
ಮತ್ತೊಂದು ವಿಷಯವೆಂದರೆ ರಾಹುವಿಗೆ ರುಂಡವಿಲ್ಲ ಹಾಗೂ ಕೇತುವಿಗೆ ಮುಂಡವಿಲ್ಲ. ಈ ಎರಡೂ ಬಿಂದುಗಳು ಒಂದರ್ಥದಲ್ಲಿ Supplementary ಬಿಂದುಗಳು. ಆದುದರಿಂದಲೇ ಇವು ಅರ್ಧದೇಹಿಗಳು.
ಪಾಶ್ಚಾತ್ಯರಿಗಿಂತ ಸಾವಿರ ವರ್ಷಕ್ಕೂ ಮೊದಲೇ ಭಾರತೀಯ ಖಗೋಲವಿಜ್ಞಾನಿಗಳು ತಿಳಿದ ವಿಷಯ ಇದು. ಆದರೆ, ಯುರೋಪ ಖಂಡವು ಏಶಿಯಾ ಖಂಡವನ್ನು ತನ್ನ ಆಳ್ವಿಕೆಗೆ ಒಳಪಡಿಸಿದ್ದರಿಂದ, ಭಾರತೀಯ ಖಗೋಲಶಾಸ್ತ್ರಜ್ಞರ ಜ್ಞಾನಕ್ಕೆ ಮನ್ನಣೆ ಸಿಗದೆ, ಈ ದೇಶವನ್ನು ಗೆದ್ದವರೇ ಪಂಡಿತರಾಗಿ ಮನ್ನಣೆ ಪಡೆದದ್ದು ಅನಿವಾರ್ಯವಾಯಿತು.
ಈ ಜಗತ್ತಿಗೆ ಅತ್ಯಂತ ಮಹತ್ವದ ಜ್ಞಾನವನ್ನು ನೀಡಿದ ವಿಷಯ ಯಾವದು ಎಂದು ಕೇಳಿದರೆ ಪಾಶ್ಚಾತ್ಯರು ಒಕ್ಕೊರಲಿನಿಂದ ಐನ್ಸ್ಟೈನನ ಸಾಪೇಕ್ಷವಾದವೆಂದು ಘೋಷಿಸುತ್ತಾರೆ. ಆದರೆ ಅಂಕಗಣಿತದಲ್ಲಿಯ Place value position ಹಾಗೂ ಶೂನ್ಯಸಂಕೇತ ಇವೇ ಅತ್ಯಂತ ಮಹತ್ವದ ಜ್ಞಾನಗಳು. ಇದರ ಸಂಶೋಧಕರು ಭಾರತೀಯರು. ಆದರೆ ಜಗತ್ತಿಗೆ ಅತ್ಯಂತ ಮಹತ್ವದ ಜ್ಞಾನ ನೀಡಿದ ಸಂಶೋಧನೆ ಎಂದು ಇವಕ್ಕೆ ಯಾರೂ ಕರೆಯುವದಿಲ್ಲ. ಒಂದು ವೇಳೆ ಭಾರತೀಯ ಗಣಿತಜ್ಞರು ಶೂನ್ಯಸಂಶೋಧನೆಯನ್ನು ಮಾಡಿರದಿದ್ದರೆ, ವಿಜ್ಞಾನದ ಪ್ರಗತಿಯು ಸಾಧ್ಯವಿರಲಿಲ್ಲ.
ಇವತ್ತು ಯಾವುದೇ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗೆ, “ನೂರು-ಐವತ್ತು” ಎಂದು ಕೇಳಿದರೆ (೧೦೦-೫೦) ಎಂದು ಬರೆದುಕೊಂಡು ೫೦ ಎನ್ನುವ ಉತ್ತರವನ್ನು ಥಟ್ಟನೆ ನೀಡುತ್ತಾನೆ. ಆದರೆ ಭಾರತೀಯ ಗಣಿತವು ಯುರೋಪಿಗೆ ತಲುಪುವ ಮೊದಲು “ನೂರು-ಐವತ್ತು” ಇದನ್ನು ಅಲ್ಲಿಯ ಗಣಿತ ಪಂಡಿತರು “C-L” ಎಂದು ಬರೆದುಕೊಳ್ಳುತ್ತಿದ್ದರು. ಆ ಬಳಿಕ ಒಂದುನೂರು ಗುಂಡುಗಳನ್ನು ಎಣಿಸಿ ತೆಗೆದುಕೊಂಡು, ಅದರಲ್ಲಿ ಐವತ್ತು ಗುಂಡುಗಳನ್ನು ಎಣಿಸಿ ಪಕ್ಕಕ್ಕಿಡುತ್ತಿದ್ದರು. ಬಳಿಕ ಉಳಿದ ಗುಂಡುಗಳನ್ನು ಎಣಿಸಿ, ಐವತ್ತು ಎನ್ನುವ ಉತ್ತರವನ್ನು ಕೊಡುತ್ತಿದ್ದರು.
ವಿಜ್ಞಾನದಲ್ಲಿ ಇಷ್ಟೆಲ್ಲ ಮುಂದುವರಿದಿದ್ದ ಭಾರತೀಯರು ರಾಹು ಹಾಗೂ ಕೇತು ಎನ್ನುವ ಬಿಂದುಗಳನ್ನು ರಾಕ್ಷಸರು ಎಂದು ಕರೆದಿದ್ದೇಕೆ? ಇದಕ್ಕೆ ಉತ್ತರ ಬಹುಶಃ ಹೀಗಿರಬಹುದು. ನಮ್ಮ ವಿಜ್ಞಾನಿಗಳು ಆಕಾಶಕಾಯಗಳನ್ನು ದೇವತೆಗಳು ಎಂದು ಭಾವಿಸಿದ್ದರು. ಈ ದೇವತೆಗಳನ್ನು ಮರೆಮಾಡುವಂತಹ ವಸ್ತು ಯಾವುದೇ ಇದ್ದರೂ ಅದು ರಾಕ್ಷಸಸಮಾನ. ಆದುದರಿಂದ ಈ ಬಿಂದುಗಳು ರಾಕ್ಷಸರು.
ಆಕಾಶಕಾಯಗಳನ್ನು ದೇವತೆಗಳು ಎಂದು ಭಾವಿಸುವದು ತಪ್ಪೆನ್ನುತ್ತೀರಾ? ಭೌತಿಕ ಅರ್ಥದಲ್ಲಿ ಅದು ತಪ್ಪಾಗಿರಬಹುದು. ಆದರೆ ಪುರಾತನ ಭಾರತೀಯರು ಅತ್ಯಂತ ಧಾರ್ಮಿಕ ಮನೋಭಾವದವರಾಗಿದ್ದರು. ಈ ಸೃಷ್ಟಿಯಲ್ಲಿಯ ಪ್ರತಿಯೊಂದು ವಸ್ತುವೂ ಭಗವಂತನ ರೂಪವೇ (form) ಆಗಿದೆ. ಇತರರಿಗೆ ಒಳ್ಳೆಯದನ್ನು ಮಾಡುತ್ತಿದ್ದರೆ ಅದೊಂದು ದೇವತೆ ; ದೇವತೆಗೆ ವಿರೋಧವಾಗಿರುವದು ರಾಕ್ಷಸ. ಇದು ನಮ್ಮ ಪುರಾತನರ ಭಾವನೆ.
ಆದುದರಿಂದಲೇ ಅವರು ಸೂರ್ಯ ಹಾಗು ಚಂದ್ರರನ್ನು ದೇವತೆಗಳೆಂದು ಭಾವಿಸಿದರು ; ರಾಹು ಹಾಗು ಕೇತು ಎನ್ನುವ ಕಾಲ್ಪನಿಕ ಖಗೋಲ ಬಿಂದುಗಳನ್ನು ರಾಕ್ಷಸರೆಂದು ಕರೆದರು. ತಮ್ಮ ಖಗೋಲ ಜ್ಞಾನದ ಮೂಲಕ ಗ್ರಹಣದ ಸಮಯ ಹಾಗೂ ಅವಧಿಯನ್ನು ಕಂಡು ಹಿಡಿಯುತ್ತದ್ದಿಂತೆಯೇ, ಆ ಅವಧಿಯಲ್ಲಿ ನದಿಯಲ್ಲಿ ಮುಳುಗು ಹಾಕಿ ದೇವರ ಧ್ಯಾನವನ್ನು ಮಾಡುತ್ತಿದ್ದರು! ಇದು ಅವರ ಪ್ರಾಮಾಣಿಕ ಮನೋಧರ್ಮ. ಇದರಲ್ಲಿ ಯಾವುದೇ ವಿರೋಧಾಭಾಸ ಇಲ್ಲ!
ಆದುದರಿಂದ ಭಾರತೀಯರು ಮೂಢರು ಎನ್ನುವ ಒಂದು ಗ್ರಹಿಕೆ ಪಾಶ್ಚಾತ್ಯರಲ್ಲಿ ಹಾಗೂ ಅನೇಕ ಭಾರತೀಯರಲ್ಲಿ ಇದೆ. ಆದರೆ ಈ ಗ್ರಹಿಕೆ ಪೂರ್ವಾಗ್ರಹಪೀಡಿತವಾದಂತಹ ಗ್ರಹಿಕೆ.
ಭಾರತೀಯರ ಈ ನಂಬಿಕೆಯನ್ನು ಸ್ವಲ್ಪ ಲಕ್ಷ್ಯಗೊಟ್ಟು ಪರೀಕ್ಷಿಸಿರಿ. ಗ್ರಹಣಸಮಯದಲ್ಲಿ ಸೂರ್ಯನನ್ನು ಅಥವಾ ಚಂದ್ರನನ್ನು ರಾಹು ಅಥವಾ ಕೇತು ಎನ್ನುವ ರಾಕ್ಷಸನು ಹಿಡಿಯುತ್ತಾನೆ ಎನ್ನುವದು ಇಲ್ಲಿರುವ ನಂಬಿಕೆ. ಭಾರತೀಯರಲ್ಲಿ ಮೂಢನಂಬಿಕೆಯೆ ಇದ್ದರೆ, ಒಬ್ಬನೇ ರಾಕ್ಷಸನು ಇವರನ್ನು ಬೆನ್ನಟ್ಟಬಹುದಿತ್ತಲ್ಲ? ಇಬ್ಬರು ಯಾಕೆ ಬೇಕು ಎನ್ನುವ ಪ್ರಶ್ನೆ ಬರುತ್ತದೆ. ಅಲ್ಲದೆ, ಯಾವ ಗ್ರಹಣದಲ್ಲಿ ಯಾವ ರಾಕ್ಷಸನು ಈ ಬೆನ್ನಟ್ಟುವ ಕಾರ್ಯ ಮಾಡುತ್ತಾನೆ, ಅವನು ರಾಹುವೊ ಅಥವಾ ಕೇತುವೊ ಎನ್ನುವದನ್ನು ಭಾರತೀಯ ಪಂಚಾಂಗಗಳಲ್ಲಿ ನಿಖರವಾದ ಕಾಲಮಾನದೊಡನೆ ಹೇಳಲಾಗುತ್ತದೆ. ಅರ್ಥಾತ್ ಭಾರತೀಯರಿಗೆ ಈ ರಾಕ್ಷಸರು ಯಾರು ಅನ್ನುವ ಕಲ್ಪನೆ ಸ್ಪಷ್ಟವಾಗಿತ್ತು.
ಖಗೋಲಶಾಸ್ತ್ರವು ಸಾವಿರಾರು ವರ್ಷಗಳಷ್ಟು ಹಳೆಯದು. ಭೂಮಿ ಹಾಗೂ ಇತರ ಗ್ರಹಗಳು ಸೂರ್ಯನ ಸುತ್ತಲೂ ಪರಿಭ್ರಮಿಸುತ್ತವೆ ಎನ್ನುವ ಮಾತನ್ನು ಮೊದಲು ದಾಖಲಿಸಿದವನು ಮೊದಲನೆಯ ಆರ್ಯಭಟನು (ಕ್ರಿ.ಶ. ೪೭೬-೫೫೦). ಭೂಮಿಯ ಸುತ್ತಳತೆ ಹಾಗೂ ಸೂರ್ಯನಿಂದ ಭೂಮಿಯ ದೂರವನ್ನು ಆರ್ಯಭಟನು ಅತ್ಯಂತ ನಿಖರವಾಗಿ ತಿಳಿಸಿದ್ದಾನೆ.
ಆರ್ಯಭಟನ ನಂತರ ಒಂದು ಸಾವಿರ ವರ್ಷಗಳ ಬಳಿಕ ಕೋಪರ್ನಿಕಸ್(ಕ್ರಿ.ಶ. ೧೪೭೩- ಕ್ರಿ.ಶ. ೧೫೪೩) ಎನ್ನುವ ಪೋಲ್ಯಾಂಡಿನ ಶಾಸ್ತ್ರಜ್ಞನು ಭೂಮಿಯ ಪರಿಭ್ರಮಣವನ್ನು ಯುರೋಪಿನಲ್ಲಿ ಸಾರಿದನು.
ಖಗೋಲಶಾಸ್ತ್ರದ ವಿದ್ಯಾರ್ಥಿಗಳಿಗೆಲ್ಲ ಗೊತ್ತಿರುವಂತೆ, ಚಂದ್ರನು ಭೂಮಿಯ ಸುತ್ತಲೂ ತಿರುಗುವ ಕಕ್ಷೆಯು, ಭೂಮಿಯು ಸೂರ್ಯನ ಸುತ್ತಲೂ ತಿರುಗುವ ಕಕ್ಷೆಯನ್ನು, ಎರಡು ಬಿಂದುಗಳಲ್ಲಿ ಛೇದಿಸುತ್ತದೆ. ಇವೆರಡೂ ಕಾಲ್ಪನಿಕ ಬಿಂದುಗಳು. ಪರಿಭ್ರಮಣೆ ಮುಂದುವರೆದಂತೆಲ್ಲ, ಈ ಬಿಂದುಗಳೂ ಸಹ ಸರಿಯುತ್ತಲೆ ಹೋಗುತ್ತವೆ. ಭೂಮಿಯು ಸೂರ್ಯನ ಸುತ್ತಲೂ ತಿರುಗುವ ದಿಕ್ಕಿಗೆ ವಿರುದ್ಧವಾದ ದಿಕ್ಕಿನಲ್ಲಿ ಈ ಬಿಂದುಗಳು ಸರಿಯುತ್ತವೆ.
ಈಗ ಈ ಬಿಂದುಗಳಲ್ಲಿ ಮೊದಲನೆಯ ಬಿಂದುವಿಗೆ ನಮ್ಮ ಶಾಸ್ತ್ರಜ್ಞರು ಕೊಟ್ಟ ಹೆಸರು ರಾಹು ; ಎರಡನೆಯ ಬಿಂದುವಿನ ಹೆಸರು ಕೇತು. ‘ಈ ಬಿಂದುಗಳು ರಾಕ್ಷಸರು ಏಕೆ?’ ಎನ್ನುವ ಪ್ರಶ್ನೆಗೆ ಅನೇಕ ಉತ್ತರಗಳಿವೆ. ಉತ್ತರವನ್ನು ಹುಡುಕುವ ಮೊದಲು ನಾವು ಇನ್ನಿಷ್ಟು ಮಾಹಿತಿಗಳನ್ನು ಗಮನಿಸೋಣ.
ಮೊದಲನೆಯದಾಗಿ ಈ ಬಿಂದುಗಳ ಹೆಸರುಗಳನ್ನು ಪರೀಕ್ಷಿಸೋಣ. ಮೊದಲನೆಯ ಬಿಂದುವಿಗೆ ರಾಹು ಎಂದು ಕರೆದಿದ್ದಾರೆ. ರಾಹು ಈ ಪದದ ಅರ್ಥ Lock. ಗ್ರಹಣಸಮಯದಲ್ಲಿ ಈ ಬಿಂದುವಿನಲ್ಲಿ ಸೂರ್ಯ ಅಥವಾ ಚಂದ್ರರ ಚೈತನ್ಯಕ್ಕೆ ತಡೆ ಬೀಳುವದರಿಂದ ಈ ಬಿಂದುವಿನ ಹೆಸರು Lock ಅಥವಾ ರಾಹು.
ಎರಡನೆಯ ಬಿಂದುವಿನ ಹೆಸರು ಕೇತು. ಕೇತು ಅಂದರೆ Flag. ಮೊದಲನೆಯ ಬಿಂದುವಿಗೆ Flag ಎಂದು ಕರೆಯದೆ ಎರಡನೆಯ ಬಿಂದುವಿಗೆ Flag ಎಂದು ಕರೆಯುವ ಕಾರಣವೇನು? ಯಾಕೆಂದರೆ, ಈ ಬಿಂದುಗಳು ವಿರುದ್ಧ ದಿಕ್ಕಿನಲ್ಲಿ ಚಲಿಸುವದರಿಂದ, ಮೊದಲನೆಯ ಬಿಂದು ಹಿಂದಿನಿಂದ ಚಲಿಸುತ್ತದೆ ಹಾಗೂ ಎರಡನೆಯ ಬಿಂದು ಮುಂದಿನಿಂದ ಚಲಿಸುತ್ತದೆ. ಎರಡನೆಯ ಬಿಂದುವೇ ಇಲ್ಲಿ Flag bearer. ಆದುದರಿಂದ ಇದರ ಹೆಸರು ಕೇತು ಅರ್ಥಾತ್ Flag!
ಮತ್ತೊಂದು ವಿಷಯವೆಂದರೆ ರಾಹುವಿಗೆ ರುಂಡವಿಲ್ಲ ಹಾಗೂ ಕೇತುವಿಗೆ ಮುಂಡವಿಲ್ಲ. ಈ ಎರಡೂ ಬಿಂದುಗಳು ಒಂದರ್ಥದಲ್ಲಿ Supplementary ಬಿಂದುಗಳು. ಆದುದರಿಂದಲೇ ಇವು ಅರ್ಧದೇಹಿಗಳು.
ಪಾಶ್ಚಾತ್ಯರಿಗಿಂತ ಸಾವಿರ ವರ್ಷಕ್ಕೂ ಮೊದಲೇ ಭಾರತೀಯ ಖಗೋಲವಿಜ್ಞಾನಿಗಳು ತಿಳಿದ ವಿಷಯ ಇದು. ಆದರೆ, ಯುರೋಪ ಖಂಡವು ಏಶಿಯಾ ಖಂಡವನ್ನು ತನ್ನ ಆಳ್ವಿಕೆಗೆ ಒಳಪಡಿಸಿದ್ದರಿಂದ, ಭಾರತೀಯ ಖಗೋಲಶಾಸ್ತ್ರಜ್ಞರ ಜ್ಞಾನಕ್ಕೆ ಮನ್ನಣೆ ಸಿಗದೆ, ಈ ದೇಶವನ್ನು ಗೆದ್ದವರೇ ಪಂಡಿತರಾಗಿ ಮನ್ನಣೆ ಪಡೆದದ್ದು ಅನಿವಾರ್ಯವಾಯಿತು.
ಈ ಜಗತ್ತಿಗೆ ಅತ್ಯಂತ ಮಹತ್ವದ ಜ್ಞಾನವನ್ನು ನೀಡಿದ ವಿಷಯ ಯಾವದು ಎಂದು ಕೇಳಿದರೆ ಪಾಶ್ಚಾತ್ಯರು ಒಕ್ಕೊರಲಿನಿಂದ ಐನ್ಸ್ಟೈನನ ಸಾಪೇಕ್ಷವಾದವೆಂದು ಘೋಷಿಸುತ್ತಾರೆ. ಆದರೆ ಅಂಕಗಣಿತದಲ್ಲಿಯ Place value position ಹಾಗೂ ಶೂನ್ಯಸಂಕೇತ ಇವೇ ಅತ್ಯಂತ ಮಹತ್ವದ ಜ್ಞಾನಗಳು. ಇದರ ಸಂಶೋಧಕರು ಭಾರತೀಯರು. ಆದರೆ ಜಗತ್ತಿಗೆ ಅತ್ಯಂತ ಮಹತ್ವದ ಜ್ಞಾನ ನೀಡಿದ ಸಂಶೋಧನೆ ಎಂದು ಇವಕ್ಕೆ ಯಾರೂ ಕರೆಯುವದಿಲ್ಲ. ಒಂದು ವೇಳೆ ಭಾರತೀಯ ಗಣಿತಜ್ಞರು ಶೂನ್ಯಸಂಶೋಧನೆಯನ್ನು ಮಾಡಿರದಿದ್ದರೆ, ವಿಜ್ಞಾನದ ಪ್ರಗತಿಯು ಸಾಧ್ಯವಿರಲಿಲ್ಲ.
ಇವತ್ತು ಯಾವುದೇ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗೆ, “ನೂರು-ಐವತ್ತು” ಎಂದು ಕೇಳಿದರೆ (೧೦೦-೫೦) ಎಂದು ಬರೆದುಕೊಂಡು ೫೦ ಎನ್ನುವ ಉತ್ತರವನ್ನು ಥಟ್ಟನೆ ನೀಡುತ್ತಾನೆ. ಆದರೆ ಭಾರತೀಯ ಗಣಿತವು ಯುರೋಪಿಗೆ ತಲುಪುವ ಮೊದಲು “ನೂರು-ಐವತ್ತು” ಇದನ್ನು ಅಲ್ಲಿಯ ಗಣಿತ ಪಂಡಿತರು “C-L” ಎಂದು ಬರೆದುಕೊಳ್ಳುತ್ತಿದ್ದರು. ಆ ಬಳಿಕ ಒಂದುನೂರು ಗುಂಡುಗಳನ್ನು ಎಣಿಸಿ ತೆಗೆದುಕೊಂಡು, ಅದರಲ್ಲಿ ಐವತ್ತು ಗುಂಡುಗಳನ್ನು ಎಣಿಸಿ ಪಕ್ಕಕ್ಕಿಡುತ್ತಿದ್ದರು. ಬಳಿಕ ಉಳಿದ ಗುಂಡುಗಳನ್ನು ಎಣಿಸಿ, ಐವತ್ತು ಎನ್ನುವ ಉತ್ತರವನ್ನು ಕೊಡುತ್ತಿದ್ದರು.
ವಿಜ್ಞಾನದಲ್ಲಿ ಇಷ್ಟೆಲ್ಲ ಮುಂದುವರಿದಿದ್ದ ಭಾರತೀಯರು ರಾಹು ಹಾಗೂ ಕೇತು ಎನ್ನುವ ಬಿಂದುಗಳನ್ನು ರಾಕ್ಷಸರು ಎಂದು ಕರೆದಿದ್ದೇಕೆ? ಇದಕ್ಕೆ ಉತ್ತರ ಬಹುಶಃ ಹೀಗಿರಬಹುದು. ನಮ್ಮ ವಿಜ್ಞಾನಿಗಳು ಆಕಾಶಕಾಯಗಳನ್ನು ದೇವತೆಗಳು ಎಂದು ಭಾವಿಸಿದ್ದರು. ಈ ದೇವತೆಗಳನ್ನು ಮರೆಮಾಡುವಂತಹ ವಸ್ತು ಯಾವುದೇ ಇದ್ದರೂ ಅದು ರಾಕ್ಷಸಸಮಾನ. ಆದುದರಿಂದ ಈ ಬಿಂದುಗಳು ರಾಕ್ಷಸರು.
ಆಕಾಶಕಾಯಗಳನ್ನು ದೇವತೆಗಳು ಎಂದು ಭಾವಿಸುವದು ತಪ್ಪೆನ್ನುತ್ತೀರಾ? ಭೌತಿಕ ಅರ್ಥದಲ್ಲಿ ಅದು ತಪ್ಪಾಗಿರಬಹುದು. ಆದರೆ ಪುರಾತನ ಭಾರತೀಯರು ಅತ್ಯಂತ ಧಾರ್ಮಿಕ ಮನೋಭಾವದವರಾಗಿದ್ದರು. ಈ ಸೃಷ್ಟಿಯಲ್ಲಿಯ ಪ್ರತಿಯೊಂದು ವಸ್ತುವೂ ಭಗವಂತನ ರೂಪವೇ (form) ಆಗಿದೆ. ಇತರರಿಗೆ ಒಳ್ಳೆಯದನ್ನು ಮಾಡುತ್ತಿದ್ದರೆ ಅದೊಂದು ದೇವತೆ ; ದೇವತೆಗೆ ವಿರೋಧವಾಗಿರುವದು ರಾಕ್ಷಸ. ಇದು ನಮ್ಮ ಪುರಾತನರ ಭಾವನೆ.
ಆದುದರಿಂದಲೇ ಅವರು ಸೂರ್ಯ ಹಾಗು ಚಂದ್ರರನ್ನು ದೇವತೆಗಳೆಂದು ಭಾವಿಸಿದರು ; ರಾಹು ಹಾಗು ಕೇತು ಎನ್ನುವ ಕಾಲ್ಪನಿಕ ಖಗೋಲ ಬಿಂದುಗಳನ್ನು ರಾಕ್ಷಸರೆಂದು ಕರೆದರು. ತಮ್ಮ ಖಗೋಲ ಜ್ಞಾನದ ಮೂಲಕ ಗ್ರಹಣದ ಸಮಯ ಹಾಗೂ ಅವಧಿಯನ್ನು ಕಂಡು ಹಿಡಿಯುತ್ತದ್ದಿಂತೆಯೇ, ಆ ಅವಧಿಯಲ್ಲಿ ನದಿಯಲ್ಲಿ ಮುಳುಗು ಹಾಕಿ ದೇವರ ಧ್ಯಾನವನ್ನು ಮಾಡುತ್ತಿದ್ದರು! ಇದು ಅವರ ಪ್ರಾಮಾಣಿಕ ಮನೋಧರ್ಮ. ಇದರಲ್ಲಿ ಯಾವುದೇ ವಿರೋಧಾಭಾಸ ಇಲ್ಲ!
Sunday, July 12, 2009
ಬೆಕ್ಕು ಹಾರುತಿದೆ ನೋಡಿದಿರಾ?
ಬೇಂದ್ರೆಯವರ ಪ್ರತಿಭೆ ಕೇವಲ ಗಂಭೀರ ಸಾಹಿತ್ಯಕ್ಕೆ ಮಾತ್ರ ಮೀಸಲಾಗಿರಲಿಲ್ಲ. ವಿನೋದಸಾಹಿತ್ಯದಲ್ಲೂ ಅವರು ಕುಶಲರೇ. ಅವರ ಅಣಕುವಾಡುಗಳು ಹಾಗೂ ಅವರ ‘ಸಾಯೋ ಆಟ’ ನಾಟಕವು ಅವರ ಈ ಪ್ರತಿಭೆಗೆ ಉದಾಹರಣೆಗಳಾಗಿವೆ.
‘ಹಕ್ಕಿ ಹಾರುತಿದೆ ನೋಡಿದಿರಾ?’ ಕವನವನ್ನು ಬರೆದು, ಹಾಡಿ, ಕನ್ನಡಿಗರನ್ನು ಮೋಡಿ ಮಾಡಿದ ಬೇಂದ್ರೆಯವರು ಇದೇ ಹಾಡನ್ನು ಅಣಗಿಸಿ ‘ಬೆಕ್ಕು ಹಾರುತಿದೆ ನೋಡಿದಿರಾ?’ ಎನ್ನುವ ಕವನವನ್ನು ಬರೆದರು. ಇಂತಹ ಕವನಗಳಿಗೆ ‘ಅಣಕುವಾಡು’ ಎಂದು ಕರೆದರು. ‘ಒರದಾ ತಗಣಿ ಒರದಾ’ ಎನ್ನುವದು ಅವರ ಇನ್ನೊಂದು ಅಣಕುವಾಡು. ಇದು ‘ವರದಾ ಕಂಚಿ ವರದಾ’ ಎನ್ನುವ ದಾಸರ ಹಾಡಿನ ಮೇಲೆ ರೂಪಿತವಾಗಿದೆ.
‘ಬೆಕ್ಕು ಹಾರುತಿದೆ ನೋಡಿದಿರಾ?’ ಕವನವನ್ನು ಓದಿದಾಗ, ಬೇಂದ್ರೆಯವರ ವೈನೋದಿಕ ಕಲ್ಪನಾಸಾಮರ್ಥ್ಯದ ಅರಿವಾಗುವದು. ‘ಹಕ್ಕಿ ಹಾರುತಿದೆ ನೋಡಿದಿರಾ?’ ಕವನದಲ್ಲಿ ಆಟವಾಡಿದ ಕಲ್ಪನೆಯೇ ಈ ಕವನದಲ್ಲಿಯೂ ಆಟವಾಡಿದೆ. ಭಾಷೆ, ಛಂದಸ್ಸು ಎಲ್ಲವೂ ಮೂಲಕವನದ ಅನುಕರಣೆಗಳು. ಅಲ್ಲದೆ, ಪ್ರತಿಯೊಂದು ಸಾಲಿನಲ್ಲಿಯೂ ಮೂಲಕವನದ ಅಣಕನ್ನು ಕಾಣಬಹುದು.
‘ಬೆಕ್ಕು ಹಾರುತಿದೆ ನೋಡಿದಿರಾ?’ ಕವನದ ಪೂರ್ತಿಪಾಠ ಹೀಗಿದೆ:
ಈರುಳ್ಳ್ಯುರುಳಲು ಮಾಡವು ಬೆಳಗೆ
ಅತ್ತಲೆತ್ತಲು ಕತ್ತಲೆಯೊಳಗೆ
ಯಾವುದ ! ಯಾವುದ ! ಯಾವುದ ಎಂದು
ಕೇಳುವ ಹೇಳುವ ಹೊತ್ತಿನ ಒಳಗೆ
ಬೆಕ್ಕು ಹಾರುತಿದೆ ನೋಡಿದಿರಾ? ||೧||
ಕರಿ-ನೆರೆ ಬಣ್ಣದ ಮೊಸಡೆಯ ಗಂಟು
ಬಿಳಿ-ಹೊಳೆ ಬಣ್ಣದ ಮೀಸೆಗಳೆಂಟು
ಹಚ್ಚನ ಬೆಚ್ಚನ ಪಚ್ಚೆಯ ಪೈರಿನ
ಬಣ್ಣದ ಕಣ್ಣು ಕಿವಿ ಬದಿಗುಂಟು
ಬೆಕ್ಕು ಹಾರುತಿದೆ ನೋಡಿದಿರಾ? ||೨||
ಕಾಡಿಗೆಗಿಂತಲು ಕಪ್ಪೋ ಬಣ್ಣಾ
ಕತ್ತಲಕೇ ಕಾಲೊಡೆದವೊ ಅಣ್ಣಾ
ಕೂದಲ ಕೂದಲ ನಿಗುರಿಸಿಕೊಂಡು
ಸೂರ್ಯ-ಚಂದ್ರರೊಲು ಮಾಡಿದೆ ಕಣ್ಣಾ
ಬೆಕ್ಕು ಹಾರುತಿದೆ ನೋಡಿದಿರಾ? ||೩||
ರಾಜ್ಯದ ಹೆಗ್ಗಣಗಳ ತಾನೊಕ್ಕಿ
ಜೊಂಡಿಗದಾ ಹುಲುಗಡಣವ ಮುಕ್ಕಿ
ಹಾರಿಸಿ ಹೇಂಟೆಯ ಹಿಂಡುಹಿಂಡುಗಳ
ಜಂಭದ ಕೋಳಿಯ ನೆತ್ತಿಯ ಕುಕ್ಕಿ
ಬೆಕ್ಕು ಹಾರುತಿದೆ ನೋಡಿದಿರಾ? ||೪||
ಹಾಲಿನ ಗಡಿಗೆಯ ತಳವನು ಒರಸಿ
ಮೊಸರಿನ ಮಡಿಕೆಯ ಮುಚ್ಚಳ ಸರಿಸಿ
ಉರುಳಿಸಿ ಹೊರಳಿಸಿ ಭಾಂಡ ಭಾಂಡಗಳ
ಬಿಸಿ ಹಾಲಲಿ ತುಸು ಮಜ್ಜಿಗೆ ಬೆರಸಿ
ಬೆಕ್ಕು ಹಾರುತಿದೆ ನೋಡಿದಿರಾ? ||೫||
ಇಲಿಗಳು ಬೆಳ್ಳಗೆ ಇದ್ದರು ಬಿಡದು
ಬೆಳ್ಳಗಿದ್ದದನು ಕುಡಿದೂ ಕುಡಿದೂ
ನೋಡಿ ಚಂದ್ರನನು ಬೆಣ್ಣೆಯದೆಂದೊ
ಮುಗಿಲಿನಂಗಳಕೆ ಸಿಟ್ಟನೆ ಸಿಡಿದು
ಬೆಕ್ಕು ಹಾರುತಿದೆ ನೋಡಿದಿರಾ? ||೬||
ಹಿಂದಕೆ ಮುಂದಕೆ ಚಾಚಿದೆ ಕಾಲ
ಉಬ್ಬಿಸೆಬ್ಬಿಸಿದೆ ಜೊಂಡಿನ ಬಾಲ
ಬೆಳುದಿಂಗಳ ಹಾಲೆನೆ ತಿಳುಕೊಂಡೊ
ಬಲ್ಲರು ಯಾರಿವರಪ್ಪನ ಸಾಲ!
ಬೆಕ್ಕು ಹಾರುತಿದೆ ನೋಡಿದಿರಾ? ||೭||
…………………………………………………………….
‘ಹಕ್ಕಿ ಹಾರುತಿದೆ ನೋಡಿದಿರಾ?’ ಮೂಲಕವನದ ಪೂರ್ತಿಪಾಠ ಹೀಗಿದೆ:
ಇರುಳಿರುಳಳಿದು ದಿನ ದಿನ ಬೆಳಗೆ
ಸುತ್ತುಮುತ್ತಲೂ ಮೇಲಕೆ ಕೆಳಗೆ
ಗಾವುದ ಗಾವುದ ಗಾವುದ ಮುಂದೆ
ಎವೆ ತೆರೆದಿಕ್ಕುವ ಹೊತ್ತಿನ ಒಳಗೆ
ಹಕ್ಕಿ ಹಾರುತಿದೆ ನೋಡಿದಿರಾ? ||೧||
ಕರಿನೆರೆ ಬಣ್ಣದ ಪುಚ್ಚಗಳುಂಟು
ಬಿಳಿ-ಹೊಳೆ ಬಣ್ಣದ ಗರಿ-ಗರಿಯುಂಟು
ಕೆನ್ನನ ಹೊನ್ನನ ಬಣ್ಣಬಣ್ಣಗಳ
ರೆಕ್ಕೆಗಳೆರಡೂ ಪಕ್ಕದಲುಂಟು
ಹಕ್ಕಿ ಹಾರುತಿದೆ ನೋಡಿದಿರಾ? ||೨||
ನೀಲಮೇಘಮಂಡಲ-ಸಮ ಬಣ್ಣ !
ಮುಗಿಲಿಗೆ ರೆಕ್ಕೆಗಳೊಡೆದವೊ ಅಣ್ಣಾ !
ಚಿಕ್ಕೆಯ ಮಾಲೆಯ ಸೆಕ್ಕಿಸಿಕೊಂಡು
ಸೂರ್ಯ-ಚಂದ್ರರನು ಮಾಡಿದೆ ಕಣ್ಣಾ
ಹಕ್ಕಿ ಹಾರುತಿದೆ ನೋಡಿದಿರಾ? ||೩||
ರಾಜ್ಯದ ಸಾಮ್ರಾಜ್ಯದ ತೆನೆ ಒಕ್ಕಿ
ಮಂಡಲ-ಗಿಂಡಲಗಳ ಗಡ ಮುಕ್ಕಿ
ತೇಲಿಸಿ ಮುಳುಗಿಸಿ ಖಂಡ-ಖಂಡಗಳ
ಸಾರ್ವಭೌಮರಾ ನೆತ್ತಿಯ ಕುಕ್ಕಿ
ಹಕ್ಕಿ ಹಾರುತಿದೆ ನೋಡಿದಿರಾ? ||೪||
ಯುಗ-ಯುಗಗಳ ಹಣೆಬರಹವ ಒರಸಿ
ಮನ್ವಂತರಗಳ ಭಾಗ್ಯವ ತೆರೆಸಿ
ರೆಕ್ಕೆಯ ಬೀಸುತ ಚೇತನೆಗೊಳಿಸಿ
ಹೊಸಗಾಲದ ಹಸುಮಕ್ಕಳ ಹರಸಿ
ಹಕ್ಕಿ ಹಾರುತಿದೆ ನೋಡಿದಿರಾ? ||೫||
ಬೆಳ್ಳಿಯ ಹಳ್ಳಿಯ ಮೇರೆಯ ಮೀರಿ
ತಿಂಗಳೂರಿನ ನೀರನು ಹೀರಿ
ಆಡಲು ಹಾಡಲು ತಾ ಹಾರಾಡಲು
ಮಂಗಳಲೋಕದ ಅಂಗಳಕೇರಿ
ಹಕ್ಕಿ ಹಾರುತಿದೆ ನೋಡಿದಿರಾ? ||೬||
ಮುಟ್ಟಿದೆ ದಿಗ್ಮಂಡಲಗಳ ಅಂಚ
ಆಚೆಗೆ ಚಾಚಿದೆ ತನ್ನಯ ಚುಂಚ
ಬ್ರಹ್ಮಾಂಡಗಳನು ಒಡೆಯಲು ಎಂದೊ
ಬಲ್ಲರು ಯಾರಾ ಹಾಕಿದ ಹೊಂಚ
ಹಕ್ಕಿ ಹಾರುತಿದೆ ನೋಡಿದಿರಾ? ||೭||
………………………………………………………………………………….................
‘ಹಕ್ಕಿ ಹಾರುತಿದೆ ನೋಡಿದಿರಾ?’ ಕವನದ ಮೊದಲ ನುಡಿಯನ್ನು ನೋಡಿರಿ:
ಇರುಳಿರುಳಳಿದು ದಿನ ದಿನ ಬೆಳಗೆ
ಸುತ್ತುಮುತ್ತಲೂ ಮೇಲಕೆ ಕೆಳಗೆ
ಗಾವುದ ಗಾವುದ ಗಾವುದ ಮುಂದೆ
ಎವೆ ತೆರೆದಿಕ್ಕುವ ಹೊತ್ತಿನ ಒಳಗೆ
ಹಕ್ಕಿ ಹಾರುತಿದೆ ನೋಡಿದಿರಾ? ||೧||
ಈಗ ‘ಬೆಕ್ಕು ಹಾರುತಿದೆ ನೋಡಿದಿರಾ?’ ಕವನದ ಮೊದಲ ನುಡಿಯನ್ನು ನೋಡಿರಿ:
ಈರುಳ್ಳ್ಯುರುಳಲು ಮಾಡವು ಬೆಳಗೆ
ಅತ್ತಲೆತ್ತಲು ಕತ್ತಲೆಯೊಳಗೆ
ಯಾವುದ ! ಯಾವುದ ! ಯಾವುದ ಎಂದು
ಕೇಳುವ ಹೇಳುವ ಹೊತ್ತಿನ ಒಳಗೆ
ಬೆಕ್ಕು ಹಾರುತಿದೆ ನೋಡಿದಿರಾ? ||೧||
ಮೂಲಕವನದ ಮೊದಲ ಸಾಲಿನಲ್ಲಿ ‘ಇರುಳಿರುಳಳಿದು ದಿನ ದಿನ ಬೆಳಗೆ’ ಎನ್ನುವ ವಾಕ್ಯವಿದ್ದರೆ, ಅಣಕುಕವನದಲ್ಲಿ ‘ಈರುಳ್ಳ್ಯುರುಳಲು ಮಾಡವು ಬೆಳಗೆ’ ಎನ್ನುವ ಸಾಲಿದೆ.
ಇವೆರಡೂ ಸಾಲುಗಳು ಶ್ರವಣಕ್ಕೆ ಒಂದೇ ತೆರನಾಗಿವೆ. ಆದರೆ ಮೂಲಕವನದ ಸಾಲು ಹಕ್ಕಿಯ ಬೆಳಗಿನ ಹಾರಾಟದೊಂದಿಗೆ ಕಾರ್ಯಾರಂಭ ಮಾಡಿದರೆ, ಅಣಕುವಾಡಿನ ಸಾಲು ಕತ್ತಲೆಯಲ್ಲಿ ಬೆಕ್ಕು ಮಾಡುವ ಹಾರಾಟವನ್ನು ಚಿತ್ರಿಸುತ್ತದೆ.
ಈ ಬೆಕ್ಕು ಮಾಡಕ್ಕೆ ಜಿಗಿದು ಅಲ್ಲಿ ಇಟ್ಟ ಈರುಳ್ಳಿಗಳನ್ನೆಲ್ಲ ಉರುಳಿಸುವದರೊಂದಿಗೆ ಕವನ ಪ್ರಾರಂಭವಾಗುತ್ತದೆ.
ಮೂಲಕವನದ ಮುಂದಿನ ಸಾಲುಗಳಲ್ಲಿ
‘ಗಾವುದ ಗಾವುದ ಗಾವುದ ಮುಂದೆ,
ಎವೆ ತೆರೆದಿಕ್ಕುವ ಹೊತ್ತಿನ ಒಳಗೆ ’
ಎನ್ನುವ ವರ್ಣನೆ ಇದ್ದರೆ, ಅಣಕವಾಡಿನಲ್ಲಿ
‘ಯಾವುದ ! ಯಾವುದ ! ಯಾವುದ ಎಂದು,
ಕೇಳುವ ಹೇಳುವ ಹೊತ್ತಿನ ಒಳಗೆ’
ಎನ್ನುವ ವರ್ಣನೆ ಇದೆ.
ಈ ರೀತಿಯಾಗಿ, ಬೇಂದ್ರೆ ಮೂಲಕವನದ ಸಾಲುಗಳ ಅನುರಣನವನ್ನು ಅಣಕುವಾಡಿನಲ್ಲಿ ಅನುಸರಿಸಿದ್ದಾರೆ.
ಮೂಲಕವನವದ ಎರಡನೆಯ ನುಡಿಯಲ್ಲಿ ಹಕ್ಕಿಯ ಗರಿಗಳನ್ನು ವರ್ಣಿಸಲಾಗಿದೆ:
ಕರಿನೆರೆ ಬಣ್ಣದ ಪುಚ್ಚಗಳುಂಟು
ಬಿಳಿ-ಹೊಳೆ ಬಣ್ಣದ ಗರಿ-ಗರಿಯುಂಟು
ಕೆನ್ನನ ಹೊನ್ನನ ಬಣ್ಣಬಣ್ಣಗಳ
ರೆಕ್ಕೆಗಳೆರಡೂ ಪಕ್ಕದಲುಂಟು
ಹಕ್ಕಿ ಹಾರುತಿದೆ ನೋಡಿದಿರಾ? ||೨||
ಅಣಕುವಾಡಿನಲ್ಲಿ ಬೆಕ್ಕಿನ ಮುಖವರ್ಣನೆ ಇದೆ.
ಕರಿ-ನೆರೆ ಬಣ್ಣದ ಮೊಸಡೆಯ ಗಂಟು
ಬಿಳಿ-ಹೊಳೆ ಬಣ್ಣದ ಮೀಸೆಗಳೆಂಟು
ಹಚ್ಚನ ಬೆಚ್ಚನ ಪಚ್ಚೆಯ ಪೈರಿನ
ಬಣ್ಣದ ಕಣ್ಣು ಕಿವಿ ಬದಿಗುಂಟು
ಬೆಕ್ಕು ಹಾರುತಿದೆ ನೋಡಿದಿರಾ? ||೨||
ಮೂಲಕವನದ ಮೂರನೆಯ ನುಡಿ ಹೀಗಿದೆ:
ನೀಲಮೇಘಮಂಡಲ-ಸಮ ಬಣ್ಣ !
ಮುಗಿಲಿಗೆ ರೆಕ್ಕೆಗಳೊಡೆದವೊ ಅಣ್ಣಾ !
ಚಿಕ್ಕೆಯ ಮಾಲೆಯ ಸೆಕ್ಕಿಸಿಕೊಂಡು
ಸೂರ್ಯ-ಚಂದ್ರರನು ಮಾಡಿದೆ ಕಣ್ಣಾ
ಹಕ್ಕಿ ಹಾರುತಿದೆ ನೋಡಿದಿರಾ? ||೩||
ಅಣಕುವಾಡಿನ ಮೂರನೆಯ ನುಡಿಯೂ ಸಹ ಬೆಕ್ಕಿನ ಬಣ್ಣದ ಬಣ್ಣನೆಯನ್ನು ಮಾಡುತ್ತದೆ.
ಕಾಡಿಗೆಗಿಂತಲು ಕಪ್ಪೋ ಬಣ್ಣಾ
ಕತ್ತಲಕೇ ಕಾಲೊಡೆದವೊ ಅಣ್ಣಾ
ಕೂದಲ ಕೂದಲ ನಿಗುರಿಸಿಕೊಂಡು
ಸೂರ್ಯ-ಚಂದ್ರರೊಲು ಮಾಡಿದೆ ಕಣ್ಣಾ
ಬೆಕ್ಕು ಹಾರುತಿದೆ ನೋಡಿದಿರಾ? ||೩||
ಮೂಲಕವನದಲ್ಲಿ ಹಕ್ಕಿಗೆ ಮಾಡಲಾದ ವರ್ಣನೆಯ ಸಮಾಂತರ ವರ್ಣನೆ ಅಣಕುವಾಡಿನಲ್ಲಿಯೂ ಇದೆ. ಅಲ್ಲದೆ ‘ಕತ್ತಲಕೇ ಕಾಲೊಡೆದವೊ ಅಣ್ಣಾ’
ಎನ್ನುವ ಸಾಲು ನಗುವನ್ನು ಉಕ್ಕಿಸುತ್ತದೆ.
ಮೂಲಕವನದ ನಾಲ್ಕನೆಯ ನುಡಿ ಕಾಲಪಕ್ಷಿಯ ಗಂಭೀರ-ಭಯಂಕರ ಕಾರ್ಯವನ್ನು ವರ್ಣಿಸುತ್ತದೆ:
ರಾಜ್ಯದ ಸಾಮ್ರಾಜ್ಯದ ತೆನೆ ಒಕ್ಕಿ
ಮಂಡಲ-ಗಿಂಡಲಗಳ ಗಡ ಮುಕ್ಕಿ
ತೇಲಿಸಿ ಮುಳುಗಿಸಿ ಖಂಡ-ಖಂಡಗಳ
ಸಾರ್ವಭೌಮರಾ ನೆತ್ತಿಯ ಕುಕ್ಕಿ
ಹಕ್ಕಿ ಹಾರುತಿದೆ ನೋಡಿದಿರಾ? ||೪||
ಅಣಕುವಾಡಿನಲ್ಲಿ ಬೆಕ್ಕು ಮಾಡುವ ಭಯಂಕರ ಕಾರ್ಯ(!)ಗಳ ವರ್ಣನೆ ಇದೆ:
ರಾಜ್ಯದ ಹೆಗ್ಗಣಗಳ ತಾನೊಕ್ಕಿ
ಜೊಂಡಿಗದಾ ಹುಲುಗಡಣವ ಮುಕ್ಕಿ
ಹಾರಿಸಿ ಹೇಂಟೆಯ ಹಿಂಡುಹಿಂಡುಗಳ
ಜಂಭದ ಕೋಳಿಯ ನೆತ್ತಿಯ ಕುಕ್ಕಿ
ಬೆಕ್ಕು ಹಾರುತಿದೆ ನೋಡಿದಿರಾ? ||೪||
ಕಾಲಪಕ್ಷಿ ಹಾಗೂ ಬೆಕ್ಕು ಇವುಗಳ ಘನತೆ ಬೇರೆಯಾಗಿರಬಹುದು. ಇವುಗಳ ಕಾರ್ಯರಂಗಗಳು ಬೇರೆಯಾಗಿರಬಹುದು. ಬೆಕ್ಕು ಮಾಡುವ ಕಾರ್ಯ ಹಾಸ್ಯವಾಗಿ ಕಾಣಲೂಬಹುದು. ಆದರೆ ಈ ಎರಡೂ ಕಾರ್ಯಗಳಲ್ಲಿಯ ಅಂತರಂಗ ಒಂದೇ ಆಗಿದೆ.
ಸಮಾಂತರವಾಗಿ ಚಲಿಸುತ್ತಿದ್ದ ಈ ಎರಡೂ ಕವನಗಳು ಇನ್ನು ಮುಂದಿನ ನುಡಿಗಳಲ್ಲಿ ಸ್ವಲ್ಪ ಬೇರೆಯಾಗಿ ಸಾಗುತ್ತವೆ.
ಮೂಲಕವನದ ಐದನೆಯ ನುಡಿ ಹೀಗಿದೆ:
ಯುಗ-ಯುಗಗಳ ಹಣೆಬರಹವ ಒರಸಿ
ಮನ್ವಂತರಗಳ ಭಾಗ್ಯವ ತೆರೆಸಿ
ರೆಕ್ಕೆಯ ಬೀಸುತ ಚೇತನೆಗೊಳಿಸಿ
ಹೊಸಗಾಲದ ಹಸುಮಕ್ಕಳ ಹರಸಿ
ಹಕ್ಕಿ ಹಾರುತಿದೆ ನೋಡಿದಿರಾ? ||೫||
ಮೂಲಕವನವು ಇಲ್ಲಿ ಶುಭ ಕೋರುವ ಕಾಲಪಕ್ಷಿಯಾಗಿದೆ. ಆದರೆ ಬೆಕ್ಕು ಮಾತ್ರ ತನ್ನ ಚಾಳಿಯನ್ನು ಬಿಡದು:
ಹಾಲಿನ ಗಡಿಗೆಯ ತಳವನು ಒರಸಿ
ಮೊಸರಿನ ಮಡಿಕೆಯ ಮುಚ್ಚಳ ಸರಿಸಿ
ಉರುಳಿಸಿ ಹೊರಳಿಸಿ ಭಾಂಡ ಭಾಂಡಗಳ
ಬಿಸಿ ಹಾಲಲಿ ತುಸು ಮಜ್ಜಿಗೆ ಬೆರಸಿ
ಬೆಕ್ಕು ಹಾರುತಿದೆ ನೋಡಿದಿರಾ? ||೫||
ಹಾಲಿನ ಗಡಿಗೆಯನ್ನು ಸ್ವಚ್ಛ ಮಾಡುವ ಈ ಬೆಕ್ಕು ಮೊಸರನ್ನೂ ಸಹ ನೆಕ್ಕುತ್ತದೆ. ಅಲ್ಲಿರುವ ಪಾತ್ರೆಗಳನ್ನೆಲ್ಲ ಉರುಳಿಸುತ್ತದೆ. ಇಷ್ಟಕ್ಕೆ ಇದರ ಕಿಡಿಗೇಡಿತನ ನಿಲ್ಲುವದಿಲ್ಲ. ಮನೆಯವರು ತೆಗೆದಿಟ್ಟ ಬಿಸಿ ಹಾಲಿನಲ್ಲಿ ತುಸು ಮಜ್ಜಿಗೆ ಬೆರಸಿಬಿಡುತ್ತದೆ. ಬೇಂದ್ರೆಯವರ ವಿನೋದಸೃಷ್ಟಿಗೆ ಈ ಸಾಲು ಅತ್ಯುತ್ತಮ ಉದಾಹರಣೆಯಾಗಿದೆ.
ಆರನೆಯ ನುಡಿಗಳಲ್ಲಿ ರಚನಾ ಸಾದೃಶ್ಯವಿದೆ.
ಮೂಲಕವನ ಹೀಗಿದೆ:
ಬೆಳ್ಳಿಯ ಹಳ್ಳಿಯ ಮೇರೆಯ ಮೀರಿ
ತಿಂಗಳೂರಿನ ನೀರನು ಹೀರಿ
ಆಡಲು ಹಾಡಲು ತಾ ಹಾರಾಡಲು
ಮಂಗಳಲೋಕದ ಅಂಗಳಕೇರಿ
ಹಕ್ಕಿ ಹಾರುತಿದೆ ನೋಡಿದಿರಾ? ||೬||
ಅಣಕುವಾಡು ಹೀಗಿದೆ:
ಇಲಿಗಳು ಬೆಳ್ಳಗೆ ಇದ್ದರು ಬಿಡದು
ಬೆಳ್ಳಗಿದ್ದದನು ಕುಡಿದೂ ಕುಡಿದೂ
ನೋಡಿ ಚಂದ್ರನನು ಬೆಣ್ಣೆಯದೆಂದೊ
ಮುಗಿಲಿನಂಗಳಕೆ ಸಿಟ್ಟನೆ ಸಿಡಿದು
ಬೆಕ್ಕು ಹಾರುತಿದೆ ನೋಡಿದಿರಾ? ||೬||
ಕಾಲಪಕ್ಷಿ ಮುಗಿಲಿನಲ್ಲಿ ಹಾರಾಡಿದರೆ, ಈ ಬೆಕ್ಕು ತಾನೂ ಸಹ ಮುಗಿಲಿನಲ್ಲಿರುವ ಚಂದ್ರನನ್ನು ಹಿಡಿಯಲು ಜಿಗಿಯುತ್ತದೆ, ಬೆಣ್ಣೆಯೆಂದು ತಿಳಿದು!
ಮೂಲಕವನದ ಏಳನೆಯ ನುಡಿಯಲ್ಲಿ ಕಾಲಪಕ್ಷಿಯ ಭವಿಷ್ಯತ್ ಯೋಜನೆಗಳ ಹೊಳಹು ಇದೆ:
ಮುಟ್ಟಿದೆ ದಿಗ್ಮಂಡಲಗಳ ಅಂಚ
ಆಚೆಗೆ ಚಾಚಿದೆ ತನ್ನಯ ಚುಂಚ
ಬ್ರಹ್ಮಾಂಡಗಳನು ಒಡೆಯಲು ಎಂದೊ
ಬಲ್ಲರು ಯಾರಾ ಹಾಕಿದ ಹೊಂಚ
ಹಕ್ಕಿ ಹಾರುತಿದೆ ನೋಡಿದಿರಾ? ||೭||
ಅಣಕುವಾಡಿನಲ್ಲಿಯೂ ಸಹ ಬೆಕ್ಕು ತನ್ನ ಭವಿಷ್ಯದ ಕಾರ್ಯಗಳಿಗಾಗಿ ಹೊಂಚಿ ನಿಂತಿರುವ ವರ್ಣನೆ ಇದೆ:
ಹಿಂದಕೆ ಮುಂದಕೆ ಚಾಚಿದೆ ಕಾಲ
ಉಬ್ಬಿಸೆಬ್ಬಿಸಿದೆ ಜೊಂಡಿನ ಬಾಲ
ಬೆಳುದಿಂಗಳ ಹಾಲೆನೆ ತಿಳುಕೊಂಡೊ
ಬಲ್ಲರು ಯಾರಿವರಪ್ಪನ ಸಾಲ!
ಬೆಕ್ಕು ಹಾರುತಿದೆ ನೋಡಿದಿರಾ? ||೭||
ಈ ರೀತಿಯಾಗಿ ಮೂಲಕವನದ ತದ್ವತ್ ಅನುಕರಣೆಯನ್ನು ಈ ಅಣಕುವಾಡು ಮಾಡುತ್ತದೆ.
ಮೂಲಕವನವು ಬೇಂದ್ರೆಯವರ ದಾರ್ಶನಿಕ ಪ್ರತಿಭೆಯನ್ನು ತೋರಿಸಿದರೆ, ಅಣಕುವಾಡು ಅವರ ವಿನೋದಸೃಷ್ಟಿಯ ಪ್ರತಿಭೆಯನ್ನು ತೋರಿಸುತ್ತದೆ. ಆದರೆ, ಈ ಎರಡೂ ರಚನೆಗಳಲ್ಲಿ ಕಂಡುಬರುವ ಕಾವ್ಯರಚನಾ ಕೌಶಲ್ಯವು ಅಪ್ರತಿಮವಾಗಿದೆ.
‘ಬೆಕ್ಕು ಹಾರುತಿದೆ ನೋಡಿದಿರಾ?’ ಕವನವನ್ನು ಸ್ವತಂತ್ರ ಕವನವೆಂದು ಓದಿದರೂ ಸಹ , ಇದು ಅಷ್ಟೇ ಸ್ವಾರಸ್ಯಪೂರ್ಣವಾದ ಕವನವಾಗಿದೆ.
‘ಹಕ್ಕಿ ಹಾರುತಿದೆ ನೋಡಿದಿರಾ?’ ಕವನವನ್ನು ಬರೆದು, ಹಾಡಿ, ಕನ್ನಡಿಗರನ್ನು ಮೋಡಿ ಮಾಡಿದ ಬೇಂದ್ರೆಯವರು ಇದೇ ಹಾಡನ್ನು ಅಣಗಿಸಿ ‘ಬೆಕ್ಕು ಹಾರುತಿದೆ ನೋಡಿದಿರಾ?’ ಎನ್ನುವ ಕವನವನ್ನು ಬರೆದರು. ಇಂತಹ ಕವನಗಳಿಗೆ ‘ಅಣಕುವಾಡು’ ಎಂದು ಕರೆದರು. ‘ಒರದಾ ತಗಣಿ ಒರದಾ’ ಎನ್ನುವದು ಅವರ ಇನ್ನೊಂದು ಅಣಕುವಾಡು. ಇದು ‘ವರದಾ ಕಂಚಿ ವರದಾ’ ಎನ್ನುವ ದಾಸರ ಹಾಡಿನ ಮೇಲೆ ರೂಪಿತವಾಗಿದೆ.
‘ಬೆಕ್ಕು ಹಾರುತಿದೆ ನೋಡಿದಿರಾ?’ ಕವನವನ್ನು ಓದಿದಾಗ, ಬೇಂದ್ರೆಯವರ ವೈನೋದಿಕ ಕಲ್ಪನಾಸಾಮರ್ಥ್ಯದ ಅರಿವಾಗುವದು. ‘ಹಕ್ಕಿ ಹಾರುತಿದೆ ನೋಡಿದಿರಾ?’ ಕವನದಲ್ಲಿ ಆಟವಾಡಿದ ಕಲ್ಪನೆಯೇ ಈ ಕವನದಲ್ಲಿಯೂ ಆಟವಾಡಿದೆ. ಭಾಷೆ, ಛಂದಸ್ಸು ಎಲ್ಲವೂ ಮೂಲಕವನದ ಅನುಕರಣೆಗಳು. ಅಲ್ಲದೆ, ಪ್ರತಿಯೊಂದು ಸಾಲಿನಲ್ಲಿಯೂ ಮೂಲಕವನದ ಅಣಕನ್ನು ಕಾಣಬಹುದು.
‘ಬೆಕ್ಕು ಹಾರುತಿದೆ ನೋಡಿದಿರಾ?’ ಕವನದ ಪೂರ್ತಿಪಾಠ ಹೀಗಿದೆ:
ಈರುಳ್ಳ್ಯುರುಳಲು ಮಾಡವು ಬೆಳಗೆ
ಅತ್ತಲೆತ್ತಲು ಕತ್ತಲೆಯೊಳಗೆ
ಯಾವುದ ! ಯಾವುದ ! ಯಾವುದ ಎಂದು
ಕೇಳುವ ಹೇಳುವ ಹೊತ್ತಿನ ಒಳಗೆ
ಬೆಕ್ಕು ಹಾರುತಿದೆ ನೋಡಿದಿರಾ? ||೧||
ಕರಿ-ನೆರೆ ಬಣ್ಣದ ಮೊಸಡೆಯ ಗಂಟು
ಬಿಳಿ-ಹೊಳೆ ಬಣ್ಣದ ಮೀಸೆಗಳೆಂಟು
ಹಚ್ಚನ ಬೆಚ್ಚನ ಪಚ್ಚೆಯ ಪೈರಿನ
ಬಣ್ಣದ ಕಣ್ಣು ಕಿವಿ ಬದಿಗುಂಟು
ಬೆಕ್ಕು ಹಾರುತಿದೆ ನೋಡಿದಿರಾ? ||೨||
ಕಾಡಿಗೆಗಿಂತಲು ಕಪ್ಪೋ ಬಣ್ಣಾ
ಕತ್ತಲಕೇ ಕಾಲೊಡೆದವೊ ಅಣ್ಣಾ
ಕೂದಲ ಕೂದಲ ನಿಗುರಿಸಿಕೊಂಡು
ಸೂರ್ಯ-ಚಂದ್ರರೊಲು ಮಾಡಿದೆ ಕಣ್ಣಾ
ಬೆಕ್ಕು ಹಾರುತಿದೆ ನೋಡಿದಿರಾ? ||೩||
ರಾಜ್ಯದ ಹೆಗ್ಗಣಗಳ ತಾನೊಕ್ಕಿ
ಜೊಂಡಿಗದಾ ಹುಲುಗಡಣವ ಮುಕ್ಕಿ
ಹಾರಿಸಿ ಹೇಂಟೆಯ ಹಿಂಡುಹಿಂಡುಗಳ
ಜಂಭದ ಕೋಳಿಯ ನೆತ್ತಿಯ ಕುಕ್ಕಿ
ಬೆಕ್ಕು ಹಾರುತಿದೆ ನೋಡಿದಿರಾ? ||೪||
ಹಾಲಿನ ಗಡಿಗೆಯ ತಳವನು ಒರಸಿ
ಮೊಸರಿನ ಮಡಿಕೆಯ ಮುಚ್ಚಳ ಸರಿಸಿ
ಉರುಳಿಸಿ ಹೊರಳಿಸಿ ಭಾಂಡ ಭಾಂಡಗಳ
ಬಿಸಿ ಹಾಲಲಿ ತುಸು ಮಜ್ಜಿಗೆ ಬೆರಸಿ
ಬೆಕ್ಕು ಹಾರುತಿದೆ ನೋಡಿದಿರಾ? ||೫||
ಇಲಿಗಳು ಬೆಳ್ಳಗೆ ಇದ್ದರು ಬಿಡದು
ಬೆಳ್ಳಗಿದ್ದದನು ಕುಡಿದೂ ಕುಡಿದೂ
ನೋಡಿ ಚಂದ್ರನನು ಬೆಣ್ಣೆಯದೆಂದೊ
ಮುಗಿಲಿನಂಗಳಕೆ ಸಿಟ್ಟನೆ ಸಿಡಿದು
ಬೆಕ್ಕು ಹಾರುತಿದೆ ನೋಡಿದಿರಾ? ||೬||
ಹಿಂದಕೆ ಮುಂದಕೆ ಚಾಚಿದೆ ಕಾಲ
ಉಬ್ಬಿಸೆಬ್ಬಿಸಿದೆ ಜೊಂಡಿನ ಬಾಲ
ಬೆಳುದಿಂಗಳ ಹಾಲೆನೆ ತಿಳುಕೊಂಡೊ
ಬಲ್ಲರು ಯಾರಿವರಪ್ಪನ ಸಾಲ!
ಬೆಕ್ಕು ಹಾರುತಿದೆ ನೋಡಿದಿರಾ? ||೭||
…………………………………………………………….
‘ಹಕ್ಕಿ ಹಾರುತಿದೆ ನೋಡಿದಿರಾ?’ ಮೂಲಕವನದ ಪೂರ್ತಿಪಾಠ ಹೀಗಿದೆ:
ಇರುಳಿರುಳಳಿದು ದಿನ ದಿನ ಬೆಳಗೆ
ಸುತ್ತುಮುತ್ತಲೂ ಮೇಲಕೆ ಕೆಳಗೆ
ಗಾವುದ ಗಾವುದ ಗಾವುದ ಮುಂದೆ
ಎವೆ ತೆರೆದಿಕ್ಕುವ ಹೊತ್ತಿನ ಒಳಗೆ
ಹಕ್ಕಿ ಹಾರುತಿದೆ ನೋಡಿದಿರಾ? ||೧||
ಕರಿನೆರೆ ಬಣ್ಣದ ಪುಚ್ಚಗಳುಂಟು
ಬಿಳಿ-ಹೊಳೆ ಬಣ್ಣದ ಗರಿ-ಗರಿಯುಂಟು
ಕೆನ್ನನ ಹೊನ್ನನ ಬಣ್ಣಬಣ್ಣಗಳ
ರೆಕ್ಕೆಗಳೆರಡೂ ಪಕ್ಕದಲುಂಟು
ಹಕ್ಕಿ ಹಾರುತಿದೆ ನೋಡಿದಿರಾ? ||೨||
ನೀಲಮೇಘಮಂಡಲ-ಸಮ ಬಣ್ಣ !
ಮುಗಿಲಿಗೆ ರೆಕ್ಕೆಗಳೊಡೆದವೊ ಅಣ್ಣಾ !
ಚಿಕ್ಕೆಯ ಮಾಲೆಯ ಸೆಕ್ಕಿಸಿಕೊಂಡು
ಸೂರ್ಯ-ಚಂದ್ರರನು ಮಾಡಿದೆ ಕಣ್ಣಾ
ಹಕ್ಕಿ ಹಾರುತಿದೆ ನೋಡಿದಿರಾ? ||೩||
ರಾಜ್ಯದ ಸಾಮ್ರಾಜ್ಯದ ತೆನೆ ಒಕ್ಕಿ
ಮಂಡಲ-ಗಿಂಡಲಗಳ ಗಡ ಮುಕ್ಕಿ
ತೇಲಿಸಿ ಮುಳುಗಿಸಿ ಖಂಡ-ಖಂಡಗಳ
ಸಾರ್ವಭೌಮರಾ ನೆತ್ತಿಯ ಕುಕ್ಕಿ
ಹಕ್ಕಿ ಹಾರುತಿದೆ ನೋಡಿದಿರಾ? ||೪||
ಯುಗ-ಯುಗಗಳ ಹಣೆಬರಹವ ಒರಸಿ
ಮನ್ವಂತರಗಳ ಭಾಗ್ಯವ ತೆರೆಸಿ
ರೆಕ್ಕೆಯ ಬೀಸುತ ಚೇತನೆಗೊಳಿಸಿ
ಹೊಸಗಾಲದ ಹಸುಮಕ್ಕಳ ಹರಸಿ
ಹಕ್ಕಿ ಹಾರುತಿದೆ ನೋಡಿದಿರಾ? ||೫||
ಬೆಳ್ಳಿಯ ಹಳ್ಳಿಯ ಮೇರೆಯ ಮೀರಿ
ತಿಂಗಳೂರಿನ ನೀರನು ಹೀರಿ
ಆಡಲು ಹಾಡಲು ತಾ ಹಾರಾಡಲು
ಮಂಗಳಲೋಕದ ಅಂಗಳಕೇರಿ
ಹಕ್ಕಿ ಹಾರುತಿದೆ ನೋಡಿದಿರಾ? ||೬||
ಮುಟ್ಟಿದೆ ದಿಗ್ಮಂಡಲಗಳ ಅಂಚ
ಆಚೆಗೆ ಚಾಚಿದೆ ತನ್ನಯ ಚುಂಚ
ಬ್ರಹ್ಮಾಂಡಗಳನು ಒಡೆಯಲು ಎಂದೊ
ಬಲ್ಲರು ಯಾರಾ ಹಾಕಿದ ಹೊಂಚ
ಹಕ್ಕಿ ಹಾರುತಿದೆ ನೋಡಿದಿರಾ? ||೭||
………………………………………………………………………………….................
‘ಹಕ್ಕಿ ಹಾರುತಿದೆ ನೋಡಿದಿರಾ?’ ಕವನದ ಮೊದಲ ನುಡಿಯನ್ನು ನೋಡಿರಿ:
ಇರುಳಿರುಳಳಿದು ದಿನ ದಿನ ಬೆಳಗೆ
ಸುತ್ತುಮುತ್ತಲೂ ಮೇಲಕೆ ಕೆಳಗೆ
ಗಾವುದ ಗಾವುದ ಗಾವುದ ಮುಂದೆ
ಎವೆ ತೆರೆದಿಕ್ಕುವ ಹೊತ್ತಿನ ಒಳಗೆ
ಹಕ್ಕಿ ಹಾರುತಿದೆ ನೋಡಿದಿರಾ? ||೧||
ಈಗ ‘ಬೆಕ್ಕು ಹಾರುತಿದೆ ನೋಡಿದಿರಾ?’ ಕವನದ ಮೊದಲ ನುಡಿಯನ್ನು ನೋಡಿರಿ:
ಈರುಳ್ಳ್ಯುರುಳಲು ಮಾಡವು ಬೆಳಗೆ
ಅತ್ತಲೆತ್ತಲು ಕತ್ತಲೆಯೊಳಗೆ
ಯಾವುದ ! ಯಾವುದ ! ಯಾವುದ ಎಂದು
ಕೇಳುವ ಹೇಳುವ ಹೊತ್ತಿನ ಒಳಗೆ
ಬೆಕ್ಕು ಹಾರುತಿದೆ ನೋಡಿದಿರಾ? ||೧||
ಮೂಲಕವನದ ಮೊದಲ ಸಾಲಿನಲ್ಲಿ ‘ಇರುಳಿರುಳಳಿದು ದಿನ ದಿನ ಬೆಳಗೆ’ ಎನ್ನುವ ವಾಕ್ಯವಿದ್ದರೆ, ಅಣಕುಕವನದಲ್ಲಿ ‘ಈರುಳ್ಳ್ಯುರುಳಲು ಮಾಡವು ಬೆಳಗೆ’ ಎನ್ನುವ ಸಾಲಿದೆ.
ಇವೆರಡೂ ಸಾಲುಗಳು ಶ್ರವಣಕ್ಕೆ ಒಂದೇ ತೆರನಾಗಿವೆ. ಆದರೆ ಮೂಲಕವನದ ಸಾಲು ಹಕ್ಕಿಯ ಬೆಳಗಿನ ಹಾರಾಟದೊಂದಿಗೆ ಕಾರ್ಯಾರಂಭ ಮಾಡಿದರೆ, ಅಣಕುವಾಡಿನ ಸಾಲು ಕತ್ತಲೆಯಲ್ಲಿ ಬೆಕ್ಕು ಮಾಡುವ ಹಾರಾಟವನ್ನು ಚಿತ್ರಿಸುತ್ತದೆ.
ಈ ಬೆಕ್ಕು ಮಾಡಕ್ಕೆ ಜಿಗಿದು ಅಲ್ಲಿ ಇಟ್ಟ ಈರುಳ್ಳಿಗಳನ್ನೆಲ್ಲ ಉರುಳಿಸುವದರೊಂದಿಗೆ ಕವನ ಪ್ರಾರಂಭವಾಗುತ್ತದೆ.
ಮೂಲಕವನದ ಮುಂದಿನ ಸಾಲುಗಳಲ್ಲಿ
‘ಗಾವುದ ಗಾವುದ ಗಾವುದ ಮುಂದೆ,
ಎವೆ ತೆರೆದಿಕ್ಕುವ ಹೊತ್ತಿನ ಒಳಗೆ ’
ಎನ್ನುವ ವರ್ಣನೆ ಇದ್ದರೆ, ಅಣಕವಾಡಿನಲ್ಲಿ
‘ಯಾವುದ ! ಯಾವುದ ! ಯಾವುದ ಎಂದು,
ಕೇಳುವ ಹೇಳುವ ಹೊತ್ತಿನ ಒಳಗೆ’
ಎನ್ನುವ ವರ್ಣನೆ ಇದೆ.
ಈ ರೀತಿಯಾಗಿ, ಬೇಂದ್ರೆ ಮೂಲಕವನದ ಸಾಲುಗಳ ಅನುರಣನವನ್ನು ಅಣಕುವಾಡಿನಲ್ಲಿ ಅನುಸರಿಸಿದ್ದಾರೆ.
ಮೂಲಕವನವದ ಎರಡನೆಯ ನುಡಿಯಲ್ಲಿ ಹಕ್ಕಿಯ ಗರಿಗಳನ್ನು ವರ್ಣಿಸಲಾಗಿದೆ:
ಕರಿನೆರೆ ಬಣ್ಣದ ಪುಚ್ಚಗಳುಂಟು
ಬಿಳಿ-ಹೊಳೆ ಬಣ್ಣದ ಗರಿ-ಗರಿಯುಂಟು
ಕೆನ್ನನ ಹೊನ್ನನ ಬಣ್ಣಬಣ್ಣಗಳ
ರೆಕ್ಕೆಗಳೆರಡೂ ಪಕ್ಕದಲುಂಟು
ಹಕ್ಕಿ ಹಾರುತಿದೆ ನೋಡಿದಿರಾ? ||೨||
ಅಣಕುವಾಡಿನಲ್ಲಿ ಬೆಕ್ಕಿನ ಮುಖವರ್ಣನೆ ಇದೆ.
ಕರಿ-ನೆರೆ ಬಣ್ಣದ ಮೊಸಡೆಯ ಗಂಟು
ಬಿಳಿ-ಹೊಳೆ ಬಣ್ಣದ ಮೀಸೆಗಳೆಂಟು
ಹಚ್ಚನ ಬೆಚ್ಚನ ಪಚ್ಚೆಯ ಪೈರಿನ
ಬಣ್ಣದ ಕಣ್ಣು ಕಿವಿ ಬದಿಗುಂಟು
ಬೆಕ್ಕು ಹಾರುತಿದೆ ನೋಡಿದಿರಾ? ||೨||
ಮೂಲಕವನದ ಮೂರನೆಯ ನುಡಿ ಹೀಗಿದೆ:
ನೀಲಮೇಘಮಂಡಲ-ಸಮ ಬಣ್ಣ !
ಮುಗಿಲಿಗೆ ರೆಕ್ಕೆಗಳೊಡೆದವೊ ಅಣ್ಣಾ !
ಚಿಕ್ಕೆಯ ಮಾಲೆಯ ಸೆಕ್ಕಿಸಿಕೊಂಡು
ಸೂರ್ಯ-ಚಂದ್ರರನು ಮಾಡಿದೆ ಕಣ್ಣಾ
ಹಕ್ಕಿ ಹಾರುತಿದೆ ನೋಡಿದಿರಾ? ||೩||
ಅಣಕುವಾಡಿನ ಮೂರನೆಯ ನುಡಿಯೂ ಸಹ ಬೆಕ್ಕಿನ ಬಣ್ಣದ ಬಣ್ಣನೆಯನ್ನು ಮಾಡುತ್ತದೆ.
ಕಾಡಿಗೆಗಿಂತಲು ಕಪ್ಪೋ ಬಣ್ಣಾ
ಕತ್ತಲಕೇ ಕಾಲೊಡೆದವೊ ಅಣ್ಣಾ
ಕೂದಲ ಕೂದಲ ನಿಗುರಿಸಿಕೊಂಡು
ಸೂರ್ಯ-ಚಂದ್ರರೊಲು ಮಾಡಿದೆ ಕಣ್ಣಾ
ಬೆಕ್ಕು ಹಾರುತಿದೆ ನೋಡಿದಿರಾ? ||೩||
ಮೂಲಕವನದಲ್ಲಿ ಹಕ್ಕಿಗೆ ಮಾಡಲಾದ ವರ್ಣನೆಯ ಸಮಾಂತರ ವರ್ಣನೆ ಅಣಕುವಾಡಿನಲ್ಲಿಯೂ ಇದೆ. ಅಲ್ಲದೆ ‘ಕತ್ತಲಕೇ ಕಾಲೊಡೆದವೊ ಅಣ್ಣಾ’
ಎನ್ನುವ ಸಾಲು ನಗುವನ್ನು ಉಕ್ಕಿಸುತ್ತದೆ.
ಮೂಲಕವನದ ನಾಲ್ಕನೆಯ ನುಡಿ ಕಾಲಪಕ್ಷಿಯ ಗಂಭೀರ-ಭಯಂಕರ ಕಾರ್ಯವನ್ನು ವರ್ಣಿಸುತ್ತದೆ:
ರಾಜ್ಯದ ಸಾಮ್ರಾಜ್ಯದ ತೆನೆ ಒಕ್ಕಿ
ಮಂಡಲ-ಗಿಂಡಲಗಳ ಗಡ ಮುಕ್ಕಿ
ತೇಲಿಸಿ ಮುಳುಗಿಸಿ ಖಂಡ-ಖಂಡಗಳ
ಸಾರ್ವಭೌಮರಾ ನೆತ್ತಿಯ ಕುಕ್ಕಿ
ಹಕ್ಕಿ ಹಾರುತಿದೆ ನೋಡಿದಿರಾ? ||೪||
ಅಣಕುವಾಡಿನಲ್ಲಿ ಬೆಕ್ಕು ಮಾಡುವ ಭಯಂಕರ ಕಾರ್ಯ(!)ಗಳ ವರ್ಣನೆ ಇದೆ:
ರಾಜ್ಯದ ಹೆಗ್ಗಣಗಳ ತಾನೊಕ್ಕಿ
ಜೊಂಡಿಗದಾ ಹುಲುಗಡಣವ ಮುಕ್ಕಿ
ಹಾರಿಸಿ ಹೇಂಟೆಯ ಹಿಂಡುಹಿಂಡುಗಳ
ಜಂಭದ ಕೋಳಿಯ ನೆತ್ತಿಯ ಕುಕ್ಕಿ
ಬೆಕ್ಕು ಹಾರುತಿದೆ ನೋಡಿದಿರಾ? ||೪||
ಕಾಲಪಕ್ಷಿ ಹಾಗೂ ಬೆಕ್ಕು ಇವುಗಳ ಘನತೆ ಬೇರೆಯಾಗಿರಬಹುದು. ಇವುಗಳ ಕಾರ್ಯರಂಗಗಳು ಬೇರೆಯಾಗಿರಬಹುದು. ಬೆಕ್ಕು ಮಾಡುವ ಕಾರ್ಯ ಹಾಸ್ಯವಾಗಿ ಕಾಣಲೂಬಹುದು. ಆದರೆ ಈ ಎರಡೂ ಕಾರ್ಯಗಳಲ್ಲಿಯ ಅಂತರಂಗ ಒಂದೇ ಆಗಿದೆ.
ಸಮಾಂತರವಾಗಿ ಚಲಿಸುತ್ತಿದ್ದ ಈ ಎರಡೂ ಕವನಗಳು ಇನ್ನು ಮುಂದಿನ ನುಡಿಗಳಲ್ಲಿ ಸ್ವಲ್ಪ ಬೇರೆಯಾಗಿ ಸಾಗುತ್ತವೆ.
ಮೂಲಕವನದ ಐದನೆಯ ನುಡಿ ಹೀಗಿದೆ:
ಯುಗ-ಯುಗಗಳ ಹಣೆಬರಹವ ಒರಸಿ
ಮನ್ವಂತರಗಳ ಭಾಗ್ಯವ ತೆರೆಸಿ
ರೆಕ್ಕೆಯ ಬೀಸುತ ಚೇತನೆಗೊಳಿಸಿ
ಹೊಸಗಾಲದ ಹಸುಮಕ್ಕಳ ಹರಸಿ
ಹಕ್ಕಿ ಹಾರುತಿದೆ ನೋಡಿದಿರಾ? ||೫||
ಮೂಲಕವನವು ಇಲ್ಲಿ ಶುಭ ಕೋರುವ ಕಾಲಪಕ್ಷಿಯಾಗಿದೆ. ಆದರೆ ಬೆಕ್ಕು ಮಾತ್ರ ತನ್ನ ಚಾಳಿಯನ್ನು ಬಿಡದು:
ಹಾಲಿನ ಗಡಿಗೆಯ ತಳವನು ಒರಸಿ
ಮೊಸರಿನ ಮಡಿಕೆಯ ಮುಚ್ಚಳ ಸರಿಸಿ
ಉರುಳಿಸಿ ಹೊರಳಿಸಿ ಭಾಂಡ ಭಾಂಡಗಳ
ಬಿಸಿ ಹಾಲಲಿ ತುಸು ಮಜ್ಜಿಗೆ ಬೆರಸಿ
ಬೆಕ್ಕು ಹಾರುತಿದೆ ನೋಡಿದಿರಾ? ||೫||
ಹಾಲಿನ ಗಡಿಗೆಯನ್ನು ಸ್ವಚ್ಛ ಮಾಡುವ ಈ ಬೆಕ್ಕು ಮೊಸರನ್ನೂ ಸಹ ನೆಕ್ಕುತ್ತದೆ. ಅಲ್ಲಿರುವ ಪಾತ್ರೆಗಳನ್ನೆಲ್ಲ ಉರುಳಿಸುತ್ತದೆ. ಇಷ್ಟಕ್ಕೆ ಇದರ ಕಿಡಿಗೇಡಿತನ ನಿಲ್ಲುವದಿಲ್ಲ. ಮನೆಯವರು ತೆಗೆದಿಟ್ಟ ಬಿಸಿ ಹಾಲಿನಲ್ಲಿ ತುಸು ಮಜ್ಜಿಗೆ ಬೆರಸಿಬಿಡುತ್ತದೆ. ಬೇಂದ್ರೆಯವರ ವಿನೋದಸೃಷ್ಟಿಗೆ ಈ ಸಾಲು ಅತ್ಯುತ್ತಮ ಉದಾಹರಣೆಯಾಗಿದೆ.
ಆರನೆಯ ನುಡಿಗಳಲ್ಲಿ ರಚನಾ ಸಾದೃಶ್ಯವಿದೆ.
ಮೂಲಕವನ ಹೀಗಿದೆ:
ಬೆಳ್ಳಿಯ ಹಳ್ಳಿಯ ಮೇರೆಯ ಮೀರಿ
ತಿಂಗಳೂರಿನ ನೀರನು ಹೀರಿ
ಆಡಲು ಹಾಡಲು ತಾ ಹಾರಾಡಲು
ಮಂಗಳಲೋಕದ ಅಂಗಳಕೇರಿ
ಹಕ್ಕಿ ಹಾರುತಿದೆ ನೋಡಿದಿರಾ? ||೬||
ಅಣಕುವಾಡು ಹೀಗಿದೆ:
ಇಲಿಗಳು ಬೆಳ್ಳಗೆ ಇದ್ದರು ಬಿಡದು
ಬೆಳ್ಳಗಿದ್ದದನು ಕುಡಿದೂ ಕುಡಿದೂ
ನೋಡಿ ಚಂದ್ರನನು ಬೆಣ್ಣೆಯದೆಂದೊ
ಮುಗಿಲಿನಂಗಳಕೆ ಸಿಟ್ಟನೆ ಸಿಡಿದು
ಬೆಕ್ಕು ಹಾರುತಿದೆ ನೋಡಿದಿರಾ? ||೬||
ಕಾಲಪಕ್ಷಿ ಮುಗಿಲಿನಲ್ಲಿ ಹಾರಾಡಿದರೆ, ಈ ಬೆಕ್ಕು ತಾನೂ ಸಹ ಮುಗಿಲಿನಲ್ಲಿರುವ ಚಂದ್ರನನ್ನು ಹಿಡಿಯಲು ಜಿಗಿಯುತ್ತದೆ, ಬೆಣ್ಣೆಯೆಂದು ತಿಳಿದು!
ಮೂಲಕವನದ ಏಳನೆಯ ನುಡಿಯಲ್ಲಿ ಕಾಲಪಕ್ಷಿಯ ಭವಿಷ್ಯತ್ ಯೋಜನೆಗಳ ಹೊಳಹು ಇದೆ:
ಮುಟ್ಟಿದೆ ದಿಗ್ಮಂಡಲಗಳ ಅಂಚ
ಆಚೆಗೆ ಚಾಚಿದೆ ತನ್ನಯ ಚುಂಚ
ಬ್ರಹ್ಮಾಂಡಗಳನು ಒಡೆಯಲು ಎಂದೊ
ಬಲ್ಲರು ಯಾರಾ ಹಾಕಿದ ಹೊಂಚ
ಹಕ್ಕಿ ಹಾರುತಿದೆ ನೋಡಿದಿರಾ? ||೭||
ಅಣಕುವಾಡಿನಲ್ಲಿಯೂ ಸಹ ಬೆಕ್ಕು ತನ್ನ ಭವಿಷ್ಯದ ಕಾರ್ಯಗಳಿಗಾಗಿ ಹೊಂಚಿ ನಿಂತಿರುವ ವರ್ಣನೆ ಇದೆ:
ಹಿಂದಕೆ ಮುಂದಕೆ ಚಾಚಿದೆ ಕಾಲ
ಉಬ್ಬಿಸೆಬ್ಬಿಸಿದೆ ಜೊಂಡಿನ ಬಾಲ
ಬೆಳುದಿಂಗಳ ಹಾಲೆನೆ ತಿಳುಕೊಂಡೊ
ಬಲ್ಲರು ಯಾರಿವರಪ್ಪನ ಸಾಲ!
ಬೆಕ್ಕು ಹಾರುತಿದೆ ನೋಡಿದಿರಾ? ||೭||
ಈ ರೀತಿಯಾಗಿ ಮೂಲಕವನದ ತದ್ವತ್ ಅನುಕರಣೆಯನ್ನು ಈ ಅಣಕುವಾಡು ಮಾಡುತ್ತದೆ.
ಮೂಲಕವನವು ಬೇಂದ್ರೆಯವರ ದಾರ್ಶನಿಕ ಪ್ರತಿಭೆಯನ್ನು ತೋರಿಸಿದರೆ, ಅಣಕುವಾಡು ಅವರ ವಿನೋದಸೃಷ್ಟಿಯ ಪ್ರತಿಭೆಯನ್ನು ತೋರಿಸುತ್ತದೆ. ಆದರೆ, ಈ ಎರಡೂ ರಚನೆಗಳಲ್ಲಿ ಕಂಡುಬರುವ ಕಾವ್ಯರಚನಾ ಕೌಶಲ್ಯವು ಅಪ್ರತಿಮವಾಗಿದೆ.
‘ಬೆಕ್ಕು ಹಾರುತಿದೆ ನೋಡಿದಿರಾ?’ ಕವನವನ್ನು ಸ್ವತಂತ್ರ ಕವನವೆಂದು ಓದಿದರೂ ಸಹ , ಇದು ಅಷ್ಟೇ ಸ್ವಾರಸ್ಯಪೂರ್ಣವಾದ ಕವನವಾಗಿದೆ.
Friday, July 3, 2009
ಚೋಳ ಕಡಿತು, ನನಗೊಂದು ಚೋಳ ಕಡಿತು
‘ಚೋಳ ಕಡಿತು, ನನಗೊಂದು ಚೋಳ ಕಡಿತು’ – ಇದು ಶರೀಫರು ರಚಿಸಿದ ಗೀತೆ.
ಸಾಮಾನ್ಯವಾಗಿ ಕುಂಡಲಿನಿ ಶಕ್ತಿಯನ್ನು ಅಂದರೆ ಮನುಷ್ಯನಲ್ಲಿ ನಿಹಿತವಾದ ದೈವಿ ಶಕ್ತಿಯನ್ನು ಸರ್ಪರೂಪವಾಗಿ ಕಲ್ಪಿಸುತ್ತಾರೆ. ಈ ಕವನದಲ್ಲಿ ಶರೀಫರು ತಮ್ಮ ಬದುಕನ್ನು ಬದಲಾಯಿಸಿದ ಘಟನೆಯನ್ನು, ಅದಕ್ಕೆ ಕಾರಣವಾದ ಶಕ್ತಿಯನ್ನು ಚೋಳಿನ ರೂಪದಲ್ಲಿ ಬಣ್ಣಿಸಿದ್ದಾರೆ. ಶರೀಫರ ಗೀತೆಯ ಪೂರ್ಣಪಾಠ ಹೀಗಿದೆ:
ಚೋಳ ಕಡಿತು ನನಗೊಂದು ಚೋಳ ಕಡಿತು
ಕಾಳಕತ್ತಲದೊಳಗೆ ಕೂತಿತ್ತು, ನನಕಂಡ ಬಂತು ||ಪಲ್ಲ||
ಎಷ್ಟು ದಿನದ ಸಿಟ್ಟು ಇಟ್ಟಿತ್ತು, ತೀರಿಸಿ ಬಿಟ್ಟಿತು
ಯಾರಿಗೆ ಹೇಳಿದರ ಏನ ಆದೀತು
ಗುರುತಾತು ಈ ಮಾತು
ಹುಟ್ಟಿದ ಮಗಳ ಕಂಡಿದ್ದಿಲ್ಲ
ಇದರ ಕಷ್ಟ ಶಿವನೇ ಬಲ್ಲ
ಘಟ್ಟಿಯಾಗಿ ಮುಳ್ಳು ಚುಚ್ಚಿತ್ತು ಮಾಯವಾಗಿ ಹೋತು ||೧||
ಮೂರು ದೇಹದೊಳಗ ತಾನಿತ್ತ
ಪರಮಾತ್ಮನಾದದೊಳು ತಾನು ಬೆಳೆದಿತ್ತ
ಸಾರಿಬಂದು ಎನ್ನ ನೋಡುತ
ಮೂರು ಲೋಕ ಬೆಳಗು ಮೇಲು ಮೀರಿದುನ್ಮನಿ ಹಾರಿ ನಿಂತಿತು ||೨||
ದೇವರಮನಿ ಮೂಲೆಯೊಳಗಿತ್ತು
ಆಧಾರ ಹಿಡಿದು ಊರ್ಧ್ವಮುಖದಿ ಕೊಂಡಿ ಮಾಡಿತ್ತು
ಕಾಲ ಕಳೆದು ಸ್ಥೂಲದೇಹದೊಳಗೆ ಮಲಗಿತ್ತು
ಕಲಿಕರ್ಮ ನುಂಗಿತ್ತು
ದೇವಶಿಶುನಾಳಧೀಶನ ಧ್ಯಾನದೊಳಗಾ ಚೋಳು ಇತ್ತು
ಕಚ್ಚುತಿರಲು ಎಚ್ಚರಾದಿತು, ಹುಚ್ಚು ಹಿಡಿದಂಗಾತು ||೩||
ಆಧ್ಯಾತ್ಮಪಥದಲ್ಲಿ ಸಾಗಿದವರ ಜೀವನದಲ್ಲಿ ನಡೆಯುವ ಒಂದೆರಡು ಘಟನೆಗಳಿಂದಾಗಿ ಅವರ ಜೀವನವೇ ಬದಲಾಗಿ ಬಿಡುತ್ತದೆ. ಇಂತಹ ಸಂದರ್ಭವನ್ನು ಅನೇಕ ಸಾಧಕರು ಕಾವ್ಯದ ಮೂಲಕ ವರ್ಣಿಸಿದ್ದೂ ಉಂಟು.
ತಮ್ಮ ಬದುಕಿನಲ್ಲಿಯ ಇಂತಹ ಘಟನೆಯೊಂದನ್ನು ಶರೀಫರು “ಚೋಳ ಕಡಿತು ನನಗೊಂದು ಚೋಳ ಕಡಿತು”.
ಎನ್ನುವ ಚಿಕ್ಕ ಗೀತೆಯಲ್ಲಿ ಬಣ್ಣಿಸಿದ್ದಾರೆ.
ಯಾವ ಜೀವಿಗೂ ತನ್ನ ಮುಂದಿನ ಕ್ಷಣದ ಭವಿಷ್ಯದ ಅರಿವಿರುವದಿಲ್ಲ. ಭವಿಷ್ಯವೆಂದರೆ ಕಪ್ಪುಕತ್ತಲೆಯೇ ಸೈ. ಇಂತಹ ಕಪ್ಪು ಕತ್ತಲೆಯಲ್ಲಿ ತನ್ನ ಬಲಿಯನ್ನು ಜಪ್ಪಿಸಿಕೊಂಡು ಈ ಚೋಳು ಕೂತಿರುತ್ತದೆ. ಬಲಿಗೆ ಚೋಳು ಕಾಣಲಿಕ್ಕಿಲ್ಲ. ಆದರೆ ಚೋಳಿಗೆ ಬಲಿಯು ಸುಸ್ಪಷ್ಟ.
ಆದುದರಿಂದ ಇದನ್ನು “ಕಾಳಕತ್ತಲದೊಳಗೆ ಕೂತಿತ್ತು, ನನಕಂಡ ಬಂತು” ಎಂದು ಶರೀಫರು ಬಣ್ಣಿಸುತ್ತಾರೆ.
ಈ ಚೋಳು ಅಕಸ್ಮಾತ್ತಾಗಿ ಶರೀಫರನ್ನು ಕಂಡದ್ದಲ್ಲ. ಅದು ಎಷ್ಟೋ ದಿನದಿಂದ ಇವರ ಮೇಲೆ ಸಿಟ್ಟು ಇಟ್ಟುಕೊಂಡು ಕಾಯುತ್ತ ಕೂತಿದೆ. ಆದುದರಿಂದಲೇ ಚೋಳು ಕಚ್ಚಿಸಿಕೊಂಡ ಬಳಿಕ ಶರೀಫರು ವಿಸ್ಮಯಗೊಳ್ಳುತ್ತಾರೆ. “ಎಷ್ಟು ದಿನದ ಸಿಟ್ಟು ಇಟ್ಟಿತ್ತು, ಈಗ ತೀರಿಸಿ ಬಿಟ್ಟಿತು”, ಎನ್ನುತ್ತಾರೆ.
ಈ ಚೋಳಿಗೆ ಶರೀಫರ ಮೇಲೆ ದೀರ್ಘಕಾಲದ ಸಿಟ್ಟು ಯಾಕೆ ಎನ್ನುವ ಪ್ರಶ್ನೆ ಬರುತ್ತದೆ.
ಶರೀಫರ ಜನ್ಮಾಂತರಗಳ ಕರ್ಮಫಲವೇ ಈ ಚೋಳು. ಆದುದರಿಂದ ಅದರ ಸಿಟ್ಟು ಎಷ್ಟೋ ಜನ್ಮಗಳ ಸಿಟ್ಟು. ಈ ಚೋಳು ಕಡಿದ ಸಂಗತಿಯನ್ನು ಅಥವಾ ಅದರ ನೋವನ್ನು ಯಾರಿಗೆ ಹೇಳಿದರೂ ಪ್ರಯೋಜನವಿಲ್ಲ, ಕರ್ಮಫಲವನ್ನು ಬದಲಿಸಲು ಯಾರೂ ತಮಗೆ ಸಹಾಯ ಮಾಡಲಾರರು ಎನ್ನುವದು ಶರೀಫರ ಮನಸ್ಸಿಗೆ ಅನುಭವವಾಗುತ್ತದೆ. ಅದಕ್ಕೇ ಸ್ವಗತದಲ್ಲಿ ಎಂಬಂತೆ ಶರೀಫರು ನುಡಿಯುತ್ತಾರೆ:
“ಯಾರಿಗೆ ಹೇಳಿದರ ಏನ ಆದೀತು
ಗುರುತಾತು ಈ ಮಾತು”.
ಚೋಳಿನ ಕಡಿತದಷ್ಟು ಶರೀಫರ ಮನಸ್ಸಿಗೆ ಆಘಾತ ಕೊಡುವ ಯಾವ ಘಟನೆ ನಡೆದಿರಬಹುದೆನ್ನುವ ಸೂಚನೆ ಮುಂದಿನ ಸಾಲಿನಲ್ಲಿ ಸಿಗುತ್ತದೆ:
“ಹುಟ್ಟಿದ ಮಗಳ ಕಂಡಿದ್ದಿಲ್ಲ
ಇದರ ಕಷ್ಟ ಶಿವನೇ ಬಲ್ಲ
ಘಟ್ಟಿಯಾಗಿ ಮುಳ್ಳು ಚುಚ್ಚಿತ್ತು ಮಾಯವಾಗಿ ಹೋತು ”
ಶರೀಫರ ಮೊದಲ ಹಾಗೂ ಒಂದೇ ಸಂತತಿಯಾದ ಹೆಣ್ಣು ಕೂಸು, ಅವರ ಹೆಂಡತಿಯ ತವರು ಮನೆಯಲ್ಲಿ ಜನಿಸಿ, ಸ್ವಲ್ಪೇ ದಿನಗಳಲ್ಲಿ ತೀರಿಕೊಳ್ಳುತ್ತದೆ. ಇದೊಂದು ತೀವ್ರ ದುಃಖದ ಅನುಭವ. ಅದಕ್ಕೇ ‘ಇದರ ಕಷ್ಟ ಶಿವನೇ ಬಲ್ಲ’ ಎಂದು ಶರೀಫರು ದುಃಖದಿಂದ ಹೇಳುತ್ತಾರೆ. ಇದು ಎದೆಯಲ್ಲಿ ಮುಳ್ಳು ಚುಚ್ಚಿದಂತಹ ಅನುಭವವಾಗಿರಬೇಕು. ಆ ಸಮಯದಲ್ಲಿ ಅಧ್ಯಾತ್ಮದ ಕಡೆಗೆ ಹೆಚ್ಚೆಚ್ಚಾಗಿ ತಿರುಗಿದ ಶರೀಫರು ‘ಮಾಯವಾಗಿ ಹೋತು’ ಎಂದು ಹೇಳುತ್ತಾರೆ.
ಈ ‘ಮಾಯವಾಗಿ ಹೋತು’ ಎನ್ನುವ ವಾಕ್ಯ ಅನೇಕ ಅರ್ಥಗಳಿಂದ ಕೂಡಿದೆ. ಇದೀಗ ಹುಟ್ಟಿದ ಕೂಸು ಕೆಲವೇ ದಿನಗಳಲ್ಲಿ ಮಾಯವಾಗಿ ಹೋಯಿತು ಎನ್ನುವದು ಒಂದು ಅರ್ಥ. ಚುಚ್ಚಿದ ಮುಳ್ಳು ಮಾಯವಾಗಿ ಹೋಯಿತು ಎಂದು ತಿಳಿದರೆ ಸಂಸಾರದಲ್ಲಿ ಯಾವದೂ ಶಾಶ್ವತವಲ್ಲ; ಸುಖ ಹಾಗೂ ದುಃಖಗಳು ಬರುತ್ತವೆ ಹಾಗೂ ಹೋಗುತ್ತವೆ ಎನ್ನುವದು ಮತ್ತೊಂದುಅರ್ಥ. ಸಂಸಾರದಲ್ಲಿ ಮುಳುಗಿದ ಶರೀಫರಿಗೆ ಕವಿದ ಮೋಹದ ಮಾಯೆ ಮಾಯವಾಗಿ ಹೋಯಿತು ಎನ್ನುವದು ಮೂರನೆಯ ಅರ್ಥ.
ಇಂತಹ ದುಃಖದ ಅನುಭವದ ನಂತರ ಶರೀಫರು ಇದೀಗ ಕಣ್ಣು ತೆರೆದ ವ್ಯಕ್ತಿ. ಹೀಗಾಗಿ ಆ ಚೋಳನ್ನು ಕೇವಲ ಆಘಾತ ನೀಡುವ ಕರ್ಮಫಲವೆಂದು ತಿಳಿಯದೆ, ಜ್ಞಾನದ ಬೆಳಕು ನೀಡುವ ಶಕ್ತಿಯೆಂದು ಅವರು ಭಾವಿಸುತ್ತಾರೆ. ಈ ಚೋಳು ಕೇವಲ ಕಷ್ಟ ಕೊಡುವ ಚೋಳಲ್ಲ, ಕಷ್ಟದ ಮೂಲಕ ಪರಮಜ್ಞಾನದ ಕಡೆಗೆ ಮನಸ್ಸನ್ನು ತಿರುಗಿಸುವ ಚೋಳು ಎನ್ನುವದು ಅವರಿಗೆ ಅರಿವಾಗುತ್ತದೆ. ಅದರ ನಿಜಸ್ವರೂಪ ಅವರಿಗೆ ಈಗ ನಿಚ್ಚಳವಾಗತೊಡಗಿದೆ. ಈ ಗೂಢಾರ್ಥ ಅವರ ಮುಂದಿನ ನುಡಿಗಳಲ್ಲಿ ಸ್ಪಷ್ಟವಾಗಿದೆ.
“ಮೂರು ದೇಹದೊಳಗ ತಾನಿತ್ತ
ಪರಮಾತ್ಮನಾದದೊಳು ತಾನು ಬೆಳೆದಿತ್ತ
ಸಾರಿಬಂದು ಎನ್ನ ನೋಡುತ
ಮೂರು ಲೋಕ ಬೆಳಗು ಮೇಲು ಮೀರಿದುನ್ಮನಿ ಹಾರಿ ನಿಂತಿತು”
ಈ ಚೋಳು ಇರುವ ಮೂರು ದೇಹಗಳು ಅಂದರೆ ಸ್ಥೂಲ ಶರೀರ, ಸೂಕ್ಷ್ಮ ಶರೀರ ಹಾಗೂ ಕಾರಣಶರೀರಗಳು. ಸ್ಥೂಲಶರೀರವೆಂದರೆ ಯಾವುದೇ ಒಂದು ಜನ್ಮದಲ್ಲಿ ನಮಗಿರುವ ದೇಹ. ಸೂಕ್ಷ್ಮಶರೀರವೆಂದರೆ ವಾಸನಾಶರೀರ. ಇದು ಸ್ಥೂಲಶರೀರವು ನಾಶವಾದ ನಂತರವೂ ಉಳಿದಿರುವ ವಾಸನೆಗಳ ಹಾಗೂ ಕರ್ಮಫಲಗಳ ಶರೀರ. ಕಾರಣಶರೀರವೆಂದರೆ ಆತ್ಮವು ದೇಹವನ್ನು ಧರಿಸಲು ಬೇಕಾಗುವ ಮೂಲ ಪ್ರೇರಣಾ ಶರೀರ. ಈ ಮೂರೂ ದೇಹಗಳಲ್ಲಿ ಈ ಚೋಳು ಇರುತ್ತದೆ ಎಂದು ಶರೀಫರು ಹೇಳುತ್ತಾರೆ. ಅಂದರೆ, ಈ ಚೋಳು ನಮಗೆ ಹೊರಗಿನದಲ್ಲ, ನಮ್ಮಲ್ಲೇ ಸದಾಕಾಲ ಇರುವಂಥಾದ್ದು. ನಮ್ಮನ್ನು ತಪ್ಪು ಮಾರ್ಗದಿಂದ ಬಿಡಿಸಿ ಸನ್ಮಾರ್ಗಕ್ಕೆ ಹಚ್ಚುವಂಥಾದ್ದು. ಈ ಚೋಳಿಗೆ ಇರುವ ಸ್ವಭಾವ ಯಾವುದು ಎಂದರೆ ‘ಪರಮಾತ್ಮನಾದದೊಳು ತಾನು ಬೆಳೆದಿತ್ತ’.
ಯಾವಾಗಲೂ ಪರಮಾತ್ಮನನ್ನು ಚಿಂತಿಸುತ್ತ ಅದೇ ನಾದದಲ್ಲಿ, ಅದೇ ಧ್ಯಾನದಲ್ಲಿ ಇರುವ ಜೀವಿ ಇದು. ಹಾಗಿದ್ದರೆ ಇದಕ್ಕೆ ನೋವು ಕೊಡುವ ಕೊಂಡಿ ಏಕೆ ಇದೆ ಎಂದು ಕೇಳಬಹುದು. ಮನುಷ್ಯನಿಗೆ ನೋವಿನ ಅನುಭವವಾಗದೇ ಅವನ ಮನಸ್ಸು ಪರಮಾರ್ಥದ ಕಡೆಗೆ ಹೊರಳದು. ಆದುದರಿಂದ ನಮ್ಮ ಒಳಗೇ ಇರುವ ಈ ಜ್ಞಾನಶಕ್ತಿಯು ಚೋಳಿನ ರೂಪ ಧರಿಸಿರುತ್ತದೆ. ಸಕಾಲದಲ್ಲಿ ನೋವಿನ ಕೊಂಡಿಯಿಂದ ಚುಚ್ಚಿ, ನಮ್ಮನ್ನು ಎಚ್ಚರಕ್ಕೆ ತರುತ್ತದೆ. ಸರಿಯಾದ ಸಮಯದಲ್ಲಿ ಇದು ಸಾರಿ ಬಂದು ಅಂದರೆ ಧಾವಿಸಿ ಬಂದು, ಶರೀಫರನ್ನು ನೋಡಿತು. ಆ ಚೋಳು ನೋಡಿದ್ದೇ ಒಂದು ಅನುಗ್ರಹ! ಆ ಚೋಳಿನಲ್ಲಿರುವ ಬೆಳಕು ಎಂತಹದಂದರೆ, ಮೂರು ಲೋಕಗಳನ್ನೂ ಬೆಳಗುವ ಬೆಳಕು ಅದು. ಮೂರು ಲೋಕಗಳೆಂದರೆ ಸ್ವರ್ಗ, ಮರ್ತ್ಯ ಹಾಗೂ ಪಾತಾಳ. ಆತ್ಮವು ತನ್ನ ವಿವಿಧ ಅವಸ್ಥೆಗಳಲ್ಲಿ ಈ ಲೋಕಗಳಲ್ಲಿ ವಾಸಿಸುತ್ತದೆ. ಯಾವುದೇ ಲೋಕದಲ್ಲಿರಲಿ, ಅಲ್ಲಿ ಈ ಎಚ್ಚರಿಕೆ ನೀಡುವ ಚೋಳು ಆತ್ಮವನ್ನು ದಿಟ್ಟಿಸುತ್ತಲೇ ಇರುತ್ತದೆ. ಹಾಗು ಈ ಮೂರೂ ಲೋಕಗಳ ಮೇಲಿರುವ ಉನ್ಮನಿ ಅವಸ್ಥೆಯಲ್ಲಿ ಈ ಚೋಳು ಹಾರಿ ಐಕ್ಯವಾಗುತ್ತದೆ. (ಉನ್ಮನಿ ಅವಸ್ಥೆ ಎಂದರೆ ಸಾಧನೆಯ ಒಂದು ಅವಸ್ಥೆ. ಈ ಅವಸ್ಥೆಯಲ್ಲಿ ಸಾಧಕನ ಪ್ರಜ್ಞೆಯು ಲೋಕಸಾಮಾನ್ಯ ಸ್ಥಿತಿಯಲ್ಲಿ ಇರುವದಿಲ್ಲ. ಹೀಗಾಗಿ ಆ ವ್ಯಕ್ತಿಯು ಜನರ ಕಣ್ಣಿಗೆ ಹುಚ್ಚನಂತೆ ಕಾಣಬಹುದು. ರಾಮಕೃಷ್ಣ ಪರಮಹಂಸರು ಈ ಅವಸ್ಥೆಯಲ್ಲಿ ಇದ್ದಾಗ ಹುಚ್ಚರಂತೆ ವರ್ತಿಸುತ್ತಿದ್ದರು ಎಂದು ಹೇಳಲಾಗುತ್ತದೆ.)
ಈಗಿನ ಆಧುನಿಕ ಮನೆಗಳಲ್ಲಿ ಚೋಳು ಕಾಣಸಿಗುವದಿಲ್ಲ. ಆದರೆ ಮೊದಲು ಹಳ್ಳಿಗಳಲ್ಲಿ ಕಟ್ಟಿರುತ್ತಿದ್ದ ಮಣ್ಣಿನ ಮನೆಗಳಲ್ಲಿ ಇವು ಸಾಮಾನ್ಯವಾಗಿರುತ್ತಿದ್ದವು. ಮನೆಯ ಕೋಣೆಗಳ ಮೂಲೆಗಳಲ್ಲಿ ಇವು ಸಿಗುತ್ತಿದ್ದವು. ಶರೀಫರು ತಮ್ಮ ಈ ಚೋಳು ದೇವರ ಕೋಣೆಯ ಮೂಲೆಯೊಳಗಿತ್ತು ಎಂದು ಹೇಳುತ್ತಾರೆ. ಅಂದರೆ ಈ ಚೋಳನ್ನು ನೀವು ಕಾಣಬೇಕಾದರೆ ಅಥವಾ ಈ ಚೋಳಿನಿಂದ ಕಡಿಸಿಕೊಳ್ಳಬೇಕಾದರೆ, ದೇವರ ಕೋಣೆಯೊಳಗೆ ನೀವು ಪ್ರವೇಶಿಸಬೇಕು ಅರ್ಥಾತ್ ನಿಮ್ಮ ಮನಸ್ಸು ಪರಮಾತ್ಮದ ಕಡೆಗೆ ತಿರುಗಬೇಕು! ದೇವರ ಮನೆ ಎಂದರೆ ಮನುಷ್ಯನ ಮನಸ್ಸು ಎಂದೂ ಅರ್ಥವಾಗಬಹುದು. ಅಲ್ಲಿ ಈ ಚೋಳು ಆಧಾರ ಹಿಡಿದು ಕೊಂಡಿಯನ್ನು ಮೇಲ್ಮುಖವಾಗಿ ಮಾಡಿಕೊಂಡಿತ್ತು.
“ದೇವರಮನಿ ಮೂಲೆಯೊಳಗಿತ್ತು
ಆಧಾರ ಹಿಡಿದು ಊರ್ಧ್ವಮುಖದಿ ಕೊಂಡಿ ಮಾಡಿತ್ತು
ಕಾಲ ಕಳೆದು ಸ್ಥೂಲದೇಹದೊಳಗೆ ಮಲಗಿತ್ತು
ಕಲಿಕರ್ಮ ನುಂಗಿತ್ತು
ದೇವಶಿಶುನಾಳಧೀಶನ ಧ್ಯಾನದೊಳಗಾ ಚೋಳು ಇತ್ತು
ಕಚ್ಚುತಿರಲು ಎಚ್ಚರಾದಿತು, ಹುಚ್ಚು ಹಿಡಿದಂಗಾತು ”
ಶರೀಫರು ಈ ಸಾಲಿನಲ್ಲಿ ಯೋಗಸಾಧನೆಯ ಪರಿಭಾಷೆಯನ್ನು ಬಳಸುತ್ತಾರೆ. ಆಧಾರ ಎಂದರೆ ಮೂಲಾಧಾರ ಚಕ್ರ. ಅಲ್ಲಿ ಈ ಚೋಳು ಊರ್ಧ್ವಮುಖಿಯಾಗಿತ್ತು ಅಂದರೆ ಇದರ ಗಮನ ಮೂಲಾಧಾರದ ಮೇಲಿರುವ ಚಕ್ರಗಳತ್ತ ಇದೆ. (ಮೂಲಾಧಾರದ ಮೇಲಿನ ಚಕ್ರಗಳು ಹೀಗಿವೆ: ಸ್ವಾಧಿಸ್ಠಾನ, ಮಣಿಪೂರ, ಅನಾಹತ, ವಿಶುದ್ಧಿ ಹಾಗೂ ಆಜ್ಞಾಚಕ್ರ.) ಸಾಧಕನನ್ನು ಮೇಲ್ಮುಖವಾಗಿ ಕರೆದೊಯ್ಯುವ ಶಕ್ತಿ ಇದು. ತನ್ನ ಸಮಯ ಬರುವವರೆಗೆ ಇದು ಸ್ಥೂಲದೇಹದಲ್ಲಿ ಅಂದರೆ ಜ್ಞಾನವಿಹೀನ ದೇಹದಲ್ಲಿ ನಿದ್ರಿಸುತ್ತಿರುತ್ತದೆ. (ಕುಂಡಲಿನಿ ಶಕ್ತಿಯು ಮೂಲಾಧಾರದಲ್ಲಿ ಸರ್ಪರೂಪದಲ್ಲಿ ಮಲಗಿರುತ್ತದೆ ಎನ್ನುವದು ಯೋಗಶಾಸ್ತ್ರದ ಪರಿಭಾಷೆ.) ಹಾಗೂ ಕಲಿಕರ್ಮವನ್ನು ಅಂದರೆ ದುಷ್ಕರ್ಮಗಳನ್ನು ನುಂಗುತ್ತ ತಕ್ಕ ಸಮಯಕ್ಕಾಗಿ ಕಾಯುತ್ತಿತ್ತು. ಸಮಯ ಬರುವ ವರೆಗೂ ಈ ಚೋಳು ಪರಮಾತ್ಮನ ಧ್ಯಾನದಲ್ಲಿಯೇ ಮಗ್ನವಾಗಿತ್ತು. ಅರ್ಥಾತ್ ಪರಮಾತ್ಮನ ಹೊರತಾಗಿ ಈ ಶಕ್ತಿಗೆ ಮತ್ತೇನೂ ಬೇಕಾಗಿಲ್ಲ. ಅಂತಹ ಚೈತನ್ಯ ವು ಕುಟುಕಿದಾಗ, ಶರೀಫರು ತಮಗೆ ಎಚ್ಚರಾಯಿತು, ಅಷ್ಟೇ ಅಲ್ಲ ಹುಚ್ಚು ಹಿಡಿದ ಹಾಗಾಯಿತು ಎಂದು ಹೇಳುತ್ತಾರೆ.
ಪರಮಾರ್ಥದ ಜ್ಞಾನ ದೊರೆತ ಬಳಿಕ ಜೀವಿಯು ಪರಮಾತ್ಮನ ಹುಚ್ಚಿನಲ್ಲಿ ಮುಳುಗುವದು ಸಹಜವೇ ಆಗಿದೆ!
[ಟಿಪ್ಪಣಿ:
ಪರಮಾರ್ಥದ ಜ್ಞಾನಕ್ಕಾಗಿ ನೋವಿನ ಅನುಭವ ಅನಿವಾರ್ಯವೇನೊ? ಕರ್ನಾಟಕದ ಇನ್ನಿಬ್ಬರು ಸಂತರ ಬಾಳಿನಲ್ಲಿಯೂ ಇಂತಹ ವಿಷಾದಕರ ಘಟನೆಗಳು ನಡೆದಿವೆ. ಮೊದಲನೆಯವರು ಬಸವಣ್ಣ. ತಮ್ಮ ಮಗ ಸಂಗಬಸವಣ್ಣ ನಿಧನ ಹೊಂದಿದಾಗ ಅವರು ಉದ್ಗರಿಸಿದ ವಚನ ಹೀಗಿದೆ:
“ಪಕ್ವವಾದ ಫಲವಿರಲು ಕಸುಕಾಯನೆತ್ತಿಕೊಂಡನು ಶಿವನು”.
ಪರಮಾತ್ಮನು ವಯಸ್ಸಾದ ತನಗೆ ಸಾವು ಕೊಡುವ ಬದಲು ಚಿಕ್ಕ ಬಾಲಕನಿಗೆ ಸಾವು ಕೊಟ್ಟನಲ್ಲ ಎನ್ನುವ ಈ ವಚನದಲ್ಲಿ ವ್ಯಕ್ತವಾಗುವ anguish ಹಾಗೂ resignation to God’s will ಇವು ಬೇರೆ ಯಾವ ಭಾಷೆಯ ಸಾಹಿತ್ಯದಲ್ಲೂ ಸಿಗಲಿಕ್ಕಿಲ್ಲ.
ಎರಡನೆಯವರು ಪುರಂದರದಾಸರು. ತಮ್ಮ ಮಗನ ಮರಣದ ಸಂದರ್ಭದಲ್ಲಿ ಇವರು ಹಾಡಿದ ಗೀತೆಯೂ ಸಹ ಶೋಕರಸದ ಅನನ್ಯ ಗೀತೆಯಾಗಿದೆ:
“ಗಿಳಿಯು ಪಂಜರದೊಳಿಲ್ಲ
ಬರಿದೆ ಪಂಜರವಾಯಿತಲ್ಲ!”]
ಸಾಮಾನ್ಯವಾಗಿ ಕುಂಡಲಿನಿ ಶಕ್ತಿಯನ್ನು ಅಂದರೆ ಮನುಷ್ಯನಲ್ಲಿ ನಿಹಿತವಾದ ದೈವಿ ಶಕ್ತಿಯನ್ನು ಸರ್ಪರೂಪವಾಗಿ ಕಲ್ಪಿಸುತ್ತಾರೆ. ಈ ಕವನದಲ್ಲಿ ಶರೀಫರು ತಮ್ಮ ಬದುಕನ್ನು ಬದಲಾಯಿಸಿದ ಘಟನೆಯನ್ನು, ಅದಕ್ಕೆ ಕಾರಣವಾದ ಶಕ್ತಿಯನ್ನು ಚೋಳಿನ ರೂಪದಲ್ಲಿ ಬಣ್ಣಿಸಿದ್ದಾರೆ. ಶರೀಫರ ಗೀತೆಯ ಪೂರ್ಣಪಾಠ ಹೀಗಿದೆ:
ಚೋಳ ಕಡಿತು ನನಗೊಂದು ಚೋಳ ಕಡಿತು
ಕಾಳಕತ್ತಲದೊಳಗೆ ಕೂತಿತ್ತು, ನನಕಂಡ ಬಂತು ||ಪಲ್ಲ||
ಎಷ್ಟು ದಿನದ ಸಿಟ್ಟು ಇಟ್ಟಿತ್ತು, ತೀರಿಸಿ ಬಿಟ್ಟಿತು
ಯಾರಿಗೆ ಹೇಳಿದರ ಏನ ಆದೀತು
ಗುರುತಾತು ಈ ಮಾತು
ಹುಟ್ಟಿದ ಮಗಳ ಕಂಡಿದ್ದಿಲ್ಲ
ಇದರ ಕಷ್ಟ ಶಿವನೇ ಬಲ್ಲ
ಘಟ್ಟಿಯಾಗಿ ಮುಳ್ಳು ಚುಚ್ಚಿತ್ತು ಮಾಯವಾಗಿ ಹೋತು ||೧||
ಮೂರು ದೇಹದೊಳಗ ತಾನಿತ್ತ
ಪರಮಾತ್ಮನಾದದೊಳು ತಾನು ಬೆಳೆದಿತ್ತ
ಸಾರಿಬಂದು ಎನ್ನ ನೋಡುತ
ಮೂರು ಲೋಕ ಬೆಳಗು ಮೇಲು ಮೀರಿದುನ್ಮನಿ ಹಾರಿ ನಿಂತಿತು ||೨||
ದೇವರಮನಿ ಮೂಲೆಯೊಳಗಿತ್ತು
ಆಧಾರ ಹಿಡಿದು ಊರ್ಧ್ವಮುಖದಿ ಕೊಂಡಿ ಮಾಡಿತ್ತು
ಕಾಲ ಕಳೆದು ಸ್ಥೂಲದೇಹದೊಳಗೆ ಮಲಗಿತ್ತು
ಕಲಿಕರ್ಮ ನುಂಗಿತ್ತು
ದೇವಶಿಶುನಾಳಧೀಶನ ಧ್ಯಾನದೊಳಗಾ ಚೋಳು ಇತ್ತು
ಕಚ್ಚುತಿರಲು ಎಚ್ಚರಾದಿತು, ಹುಚ್ಚು ಹಿಡಿದಂಗಾತು ||೩||
ಆಧ್ಯಾತ್ಮಪಥದಲ್ಲಿ ಸಾಗಿದವರ ಜೀವನದಲ್ಲಿ ನಡೆಯುವ ಒಂದೆರಡು ಘಟನೆಗಳಿಂದಾಗಿ ಅವರ ಜೀವನವೇ ಬದಲಾಗಿ ಬಿಡುತ್ತದೆ. ಇಂತಹ ಸಂದರ್ಭವನ್ನು ಅನೇಕ ಸಾಧಕರು ಕಾವ್ಯದ ಮೂಲಕ ವರ್ಣಿಸಿದ್ದೂ ಉಂಟು.
ತಮ್ಮ ಬದುಕಿನಲ್ಲಿಯ ಇಂತಹ ಘಟನೆಯೊಂದನ್ನು ಶರೀಫರು “ಚೋಳ ಕಡಿತು ನನಗೊಂದು ಚೋಳ ಕಡಿತು”.
ಎನ್ನುವ ಚಿಕ್ಕ ಗೀತೆಯಲ್ಲಿ ಬಣ್ಣಿಸಿದ್ದಾರೆ.
ಯಾವ ಜೀವಿಗೂ ತನ್ನ ಮುಂದಿನ ಕ್ಷಣದ ಭವಿಷ್ಯದ ಅರಿವಿರುವದಿಲ್ಲ. ಭವಿಷ್ಯವೆಂದರೆ ಕಪ್ಪುಕತ್ತಲೆಯೇ ಸೈ. ಇಂತಹ ಕಪ್ಪು ಕತ್ತಲೆಯಲ್ಲಿ ತನ್ನ ಬಲಿಯನ್ನು ಜಪ್ಪಿಸಿಕೊಂಡು ಈ ಚೋಳು ಕೂತಿರುತ್ತದೆ. ಬಲಿಗೆ ಚೋಳು ಕಾಣಲಿಕ್ಕಿಲ್ಲ. ಆದರೆ ಚೋಳಿಗೆ ಬಲಿಯು ಸುಸ್ಪಷ್ಟ.
ಆದುದರಿಂದ ಇದನ್ನು “ಕಾಳಕತ್ತಲದೊಳಗೆ ಕೂತಿತ್ತು, ನನಕಂಡ ಬಂತು” ಎಂದು ಶರೀಫರು ಬಣ್ಣಿಸುತ್ತಾರೆ.
ಈ ಚೋಳು ಅಕಸ್ಮಾತ್ತಾಗಿ ಶರೀಫರನ್ನು ಕಂಡದ್ದಲ್ಲ. ಅದು ಎಷ್ಟೋ ದಿನದಿಂದ ಇವರ ಮೇಲೆ ಸಿಟ್ಟು ಇಟ್ಟುಕೊಂಡು ಕಾಯುತ್ತ ಕೂತಿದೆ. ಆದುದರಿಂದಲೇ ಚೋಳು ಕಚ್ಚಿಸಿಕೊಂಡ ಬಳಿಕ ಶರೀಫರು ವಿಸ್ಮಯಗೊಳ್ಳುತ್ತಾರೆ. “ಎಷ್ಟು ದಿನದ ಸಿಟ್ಟು ಇಟ್ಟಿತ್ತು, ಈಗ ತೀರಿಸಿ ಬಿಟ್ಟಿತು”, ಎನ್ನುತ್ತಾರೆ.
ಈ ಚೋಳಿಗೆ ಶರೀಫರ ಮೇಲೆ ದೀರ್ಘಕಾಲದ ಸಿಟ್ಟು ಯಾಕೆ ಎನ್ನುವ ಪ್ರಶ್ನೆ ಬರುತ್ತದೆ.
ಶರೀಫರ ಜನ್ಮಾಂತರಗಳ ಕರ್ಮಫಲವೇ ಈ ಚೋಳು. ಆದುದರಿಂದ ಅದರ ಸಿಟ್ಟು ಎಷ್ಟೋ ಜನ್ಮಗಳ ಸಿಟ್ಟು. ಈ ಚೋಳು ಕಡಿದ ಸಂಗತಿಯನ್ನು ಅಥವಾ ಅದರ ನೋವನ್ನು ಯಾರಿಗೆ ಹೇಳಿದರೂ ಪ್ರಯೋಜನವಿಲ್ಲ, ಕರ್ಮಫಲವನ್ನು ಬದಲಿಸಲು ಯಾರೂ ತಮಗೆ ಸಹಾಯ ಮಾಡಲಾರರು ಎನ್ನುವದು ಶರೀಫರ ಮನಸ್ಸಿಗೆ ಅನುಭವವಾಗುತ್ತದೆ. ಅದಕ್ಕೇ ಸ್ವಗತದಲ್ಲಿ ಎಂಬಂತೆ ಶರೀಫರು ನುಡಿಯುತ್ತಾರೆ:
“ಯಾರಿಗೆ ಹೇಳಿದರ ಏನ ಆದೀತು
ಗುರುತಾತು ಈ ಮಾತು”.
ಚೋಳಿನ ಕಡಿತದಷ್ಟು ಶರೀಫರ ಮನಸ್ಸಿಗೆ ಆಘಾತ ಕೊಡುವ ಯಾವ ಘಟನೆ ನಡೆದಿರಬಹುದೆನ್ನುವ ಸೂಚನೆ ಮುಂದಿನ ಸಾಲಿನಲ್ಲಿ ಸಿಗುತ್ತದೆ:
“ಹುಟ್ಟಿದ ಮಗಳ ಕಂಡಿದ್ದಿಲ್ಲ
ಇದರ ಕಷ್ಟ ಶಿವನೇ ಬಲ್ಲ
ಘಟ್ಟಿಯಾಗಿ ಮುಳ್ಳು ಚುಚ್ಚಿತ್ತು ಮಾಯವಾಗಿ ಹೋತು ”
ಶರೀಫರ ಮೊದಲ ಹಾಗೂ ಒಂದೇ ಸಂತತಿಯಾದ ಹೆಣ್ಣು ಕೂಸು, ಅವರ ಹೆಂಡತಿಯ ತವರು ಮನೆಯಲ್ಲಿ ಜನಿಸಿ, ಸ್ವಲ್ಪೇ ದಿನಗಳಲ್ಲಿ ತೀರಿಕೊಳ್ಳುತ್ತದೆ. ಇದೊಂದು ತೀವ್ರ ದುಃಖದ ಅನುಭವ. ಅದಕ್ಕೇ ‘ಇದರ ಕಷ್ಟ ಶಿವನೇ ಬಲ್ಲ’ ಎಂದು ಶರೀಫರು ದುಃಖದಿಂದ ಹೇಳುತ್ತಾರೆ. ಇದು ಎದೆಯಲ್ಲಿ ಮುಳ್ಳು ಚುಚ್ಚಿದಂತಹ ಅನುಭವವಾಗಿರಬೇಕು. ಆ ಸಮಯದಲ್ಲಿ ಅಧ್ಯಾತ್ಮದ ಕಡೆಗೆ ಹೆಚ್ಚೆಚ್ಚಾಗಿ ತಿರುಗಿದ ಶರೀಫರು ‘ಮಾಯವಾಗಿ ಹೋತು’ ಎಂದು ಹೇಳುತ್ತಾರೆ.
ಈ ‘ಮಾಯವಾಗಿ ಹೋತು’ ಎನ್ನುವ ವಾಕ್ಯ ಅನೇಕ ಅರ್ಥಗಳಿಂದ ಕೂಡಿದೆ. ಇದೀಗ ಹುಟ್ಟಿದ ಕೂಸು ಕೆಲವೇ ದಿನಗಳಲ್ಲಿ ಮಾಯವಾಗಿ ಹೋಯಿತು ಎನ್ನುವದು ಒಂದು ಅರ್ಥ. ಚುಚ್ಚಿದ ಮುಳ್ಳು ಮಾಯವಾಗಿ ಹೋಯಿತು ಎಂದು ತಿಳಿದರೆ ಸಂಸಾರದಲ್ಲಿ ಯಾವದೂ ಶಾಶ್ವತವಲ್ಲ; ಸುಖ ಹಾಗೂ ದುಃಖಗಳು ಬರುತ್ತವೆ ಹಾಗೂ ಹೋಗುತ್ತವೆ ಎನ್ನುವದು ಮತ್ತೊಂದುಅರ್ಥ. ಸಂಸಾರದಲ್ಲಿ ಮುಳುಗಿದ ಶರೀಫರಿಗೆ ಕವಿದ ಮೋಹದ ಮಾಯೆ ಮಾಯವಾಗಿ ಹೋಯಿತು ಎನ್ನುವದು ಮೂರನೆಯ ಅರ್ಥ.
ಇಂತಹ ದುಃಖದ ಅನುಭವದ ನಂತರ ಶರೀಫರು ಇದೀಗ ಕಣ್ಣು ತೆರೆದ ವ್ಯಕ್ತಿ. ಹೀಗಾಗಿ ಆ ಚೋಳನ್ನು ಕೇವಲ ಆಘಾತ ನೀಡುವ ಕರ್ಮಫಲವೆಂದು ತಿಳಿಯದೆ, ಜ್ಞಾನದ ಬೆಳಕು ನೀಡುವ ಶಕ್ತಿಯೆಂದು ಅವರು ಭಾವಿಸುತ್ತಾರೆ. ಈ ಚೋಳು ಕೇವಲ ಕಷ್ಟ ಕೊಡುವ ಚೋಳಲ್ಲ, ಕಷ್ಟದ ಮೂಲಕ ಪರಮಜ್ಞಾನದ ಕಡೆಗೆ ಮನಸ್ಸನ್ನು ತಿರುಗಿಸುವ ಚೋಳು ಎನ್ನುವದು ಅವರಿಗೆ ಅರಿವಾಗುತ್ತದೆ. ಅದರ ನಿಜಸ್ವರೂಪ ಅವರಿಗೆ ಈಗ ನಿಚ್ಚಳವಾಗತೊಡಗಿದೆ. ಈ ಗೂಢಾರ್ಥ ಅವರ ಮುಂದಿನ ನುಡಿಗಳಲ್ಲಿ ಸ್ಪಷ್ಟವಾಗಿದೆ.
“ಮೂರು ದೇಹದೊಳಗ ತಾನಿತ್ತ
ಪರಮಾತ್ಮನಾದದೊಳು ತಾನು ಬೆಳೆದಿತ್ತ
ಸಾರಿಬಂದು ಎನ್ನ ನೋಡುತ
ಮೂರು ಲೋಕ ಬೆಳಗು ಮೇಲು ಮೀರಿದುನ್ಮನಿ ಹಾರಿ ನಿಂತಿತು”
ಈ ಚೋಳು ಇರುವ ಮೂರು ದೇಹಗಳು ಅಂದರೆ ಸ್ಥೂಲ ಶರೀರ, ಸೂಕ್ಷ್ಮ ಶರೀರ ಹಾಗೂ ಕಾರಣಶರೀರಗಳು. ಸ್ಥೂಲಶರೀರವೆಂದರೆ ಯಾವುದೇ ಒಂದು ಜನ್ಮದಲ್ಲಿ ನಮಗಿರುವ ದೇಹ. ಸೂಕ್ಷ್ಮಶರೀರವೆಂದರೆ ವಾಸನಾಶರೀರ. ಇದು ಸ್ಥೂಲಶರೀರವು ನಾಶವಾದ ನಂತರವೂ ಉಳಿದಿರುವ ವಾಸನೆಗಳ ಹಾಗೂ ಕರ್ಮಫಲಗಳ ಶರೀರ. ಕಾರಣಶರೀರವೆಂದರೆ ಆತ್ಮವು ದೇಹವನ್ನು ಧರಿಸಲು ಬೇಕಾಗುವ ಮೂಲ ಪ್ರೇರಣಾ ಶರೀರ. ಈ ಮೂರೂ ದೇಹಗಳಲ್ಲಿ ಈ ಚೋಳು ಇರುತ್ತದೆ ಎಂದು ಶರೀಫರು ಹೇಳುತ್ತಾರೆ. ಅಂದರೆ, ಈ ಚೋಳು ನಮಗೆ ಹೊರಗಿನದಲ್ಲ, ನಮ್ಮಲ್ಲೇ ಸದಾಕಾಲ ಇರುವಂಥಾದ್ದು. ನಮ್ಮನ್ನು ತಪ್ಪು ಮಾರ್ಗದಿಂದ ಬಿಡಿಸಿ ಸನ್ಮಾರ್ಗಕ್ಕೆ ಹಚ್ಚುವಂಥಾದ್ದು. ಈ ಚೋಳಿಗೆ ಇರುವ ಸ್ವಭಾವ ಯಾವುದು ಎಂದರೆ ‘ಪರಮಾತ್ಮನಾದದೊಳು ತಾನು ಬೆಳೆದಿತ್ತ’.
ಯಾವಾಗಲೂ ಪರಮಾತ್ಮನನ್ನು ಚಿಂತಿಸುತ್ತ ಅದೇ ನಾದದಲ್ಲಿ, ಅದೇ ಧ್ಯಾನದಲ್ಲಿ ಇರುವ ಜೀವಿ ಇದು. ಹಾಗಿದ್ದರೆ ಇದಕ್ಕೆ ನೋವು ಕೊಡುವ ಕೊಂಡಿ ಏಕೆ ಇದೆ ಎಂದು ಕೇಳಬಹುದು. ಮನುಷ್ಯನಿಗೆ ನೋವಿನ ಅನುಭವವಾಗದೇ ಅವನ ಮನಸ್ಸು ಪರಮಾರ್ಥದ ಕಡೆಗೆ ಹೊರಳದು. ಆದುದರಿಂದ ನಮ್ಮ ಒಳಗೇ ಇರುವ ಈ ಜ್ಞಾನಶಕ್ತಿಯು ಚೋಳಿನ ರೂಪ ಧರಿಸಿರುತ್ತದೆ. ಸಕಾಲದಲ್ಲಿ ನೋವಿನ ಕೊಂಡಿಯಿಂದ ಚುಚ್ಚಿ, ನಮ್ಮನ್ನು ಎಚ್ಚರಕ್ಕೆ ತರುತ್ತದೆ. ಸರಿಯಾದ ಸಮಯದಲ್ಲಿ ಇದು ಸಾರಿ ಬಂದು ಅಂದರೆ ಧಾವಿಸಿ ಬಂದು, ಶರೀಫರನ್ನು ನೋಡಿತು. ಆ ಚೋಳು ನೋಡಿದ್ದೇ ಒಂದು ಅನುಗ್ರಹ! ಆ ಚೋಳಿನಲ್ಲಿರುವ ಬೆಳಕು ಎಂತಹದಂದರೆ, ಮೂರು ಲೋಕಗಳನ್ನೂ ಬೆಳಗುವ ಬೆಳಕು ಅದು. ಮೂರು ಲೋಕಗಳೆಂದರೆ ಸ್ವರ್ಗ, ಮರ್ತ್ಯ ಹಾಗೂ ಪಾತಾಳ. ಆತ್ಮವು ತನ್ನ ವಿವಿಧ ಅವಸ್ಥೆಗಳಲ್ಲಿ ಈ ಲೋಕಗಳಲ್ಲಿ ವಾಸಿಸುತ್ತದೆ. ಯಾವುದೇ ಲೋಕದಲ್ಲಿರಲಿ, ಅಲ್ಲಿ ಈ ಎಚ್ಚರಿಕೆ ನೀಡುವ ಚೋಳು ಆತ್ಮವನ್ನು ದಿಟ್ಟಿಸುತ್ತಲೇ ಇರುತ್ತದೆ. ಹಾಗು ಈ ಮೂರೂ ಲೋಕಗಳ ಮೇಲಿರುವ ಉನ್ಮನಿ ಅವಸ್ಥೆಯಲ್ಲಿ ಈ ಚೋಳು ಹಾರಿ ಐಕ್ಯವಾಗುತ್ತದೆ. (ಉನ್ಮನಿ ಅವಸ್ಥೆ ಎಂದರೆ ಸಾಧನೆಯ ಒಂದು ಅವಸ್ಥೆ. ಈ ಅವಸ್ಥೆಯಲ್ಲಿ ಸಾಧಕನ ಪ್ರಜ್ಞೆಯು ಲೋಕಸಾಮಾನ್ಯ ಸ್ಥಿತಿಯಲ್ಲಿ ಇರುವದಿಲ್ಲ. ಹೀಗಾಗಿ ಆ ವ್ಯಕ್ತಿಯು ಜನರ ಕಣ್ಣಿಗೆ ಹುಚ್ಚನಂತೆ ಕಾಣಬಹುದು. ರಾಮಕೃಷ್ಣ ಪರಮಹಂಸರು ಈ ಅವಸ್ಥೆಯಲ್ಲಿ ಇದ್ದಾಗ ಹುಚ್ಚರಂತೆ ವರ್ತಿಸುತ್ತಿದ್ದರು ಎಂದು ಹೇಳಲಾಗುತ್ತದೆ.)
ಈಗಿನ ಆಧುನಿಕ ಮನೆಗಳಲ್ಲಿ ಚೋಳು ಕಾಣಸಿಗುವದಿಲ್ಲ. ಆದರೆ ಮೊದಲು ಹಳ್ಳಿಗಳಲ್ಲಿ ಕಟ್ಟಿರುತ್ತಿದ್ದ ಮಣ್ಣಿನ ಮನೆಗಳಲ್ಲಿ ಇವು ಸಾಮಾನ್ಯವಾಗಿರುತ್ತಿದ್ದವು. ಮನೆಯ ಕೋಣೆಗಳ ಮೂಲೆಗಳಲ್ಲಿ ಇವು ಸಿಗುತ್ತಿದ್ದವು. ಶರೀಫರು ತಮ್ಮ ಈ ಚೋಳು ದೇವರ ಕೋಣೆಯ ಮೂಲೆಯೊಳಗಿತ್ತು ಎಂದು ಹೇಳುತ್ತಾರೆ. ಅಂದರೆ ಈ ಚೋಳನ್ನು ನೀವು ಕಾಣಬೇಕಾದರೆ ಅಥವಾ ಈ ಚೋಳಿನಿಂದ ಕಡಿಸಿಕೊಳ್ಳಬೇಕಾದರೆ, ದೇವರ ಕೋಣೆಯೊಳಗೆ ನೀವು ಪ್ರವೇಶಿಸಬೇಕು ಅರ್ಥಾತ್ ನಿಮ್ಮ ಮನಸ್ಸು ಪರಮಾತ್ಮದ ಕಡೆಗೆ ತಿರುಗಬೇಕು! ದೇವರ ಮನೆ ಎಂದರೆ ಮನುಷ್ಯನ ಮನಸ್ಸು ಎಂದೂ ಅರ್ಥವಾಗಬಹುದು. ಅಲ್ಲಿ ಈ ಚೋಳು ಆಧಾರ ಹಿಡಿದು ಕೊಂಡಿಯನ್ನು ಮೇಲ್ಮುಖವಾಗಿ ಮಾಡಿಕೊಂಡಿತ್ತು.
“ದೇವರಮನಿ ಮೂಲೆಯೊಳಗಿತ್ತು
ಆಧಾರ ಹಿಡಿದು ಊರ್ಧ್ವಮುಖದಿ ಕೊಂಡಿ ಮಾಡಿತ್ತು
ಕಾಲ ಕಳೆದು ಸ್ಥೂಲದೇಹದೊಳಗೆ ಮಲಗಿತ್ತು
ಕಲಿಕರ್ಮ ನುಂಗಿತ್ತು
ದೇವಶಿಶುನಾಳಧೀಶನ ಧ್ಯಾನದೊಳಗಾ ಚೋಳು ಇತ್ತು
ಕಚ್ಚುತಿರಲು ಎಚ್ಚರಾದಿತು, ಹುಚ್ಚು ಹಿಡಿದಂಗಾತು ”
ಶರೀಫರು ಈ ಸಾಲಿನಲ್ಲಿ ಯೋಗಸಾಧನೆಯ ಪರಿಭಾಷೆಯನ್ನು ಬಳಸುತ್ತಾರೆ. ಆಧಾರ ಎಂದರೆ ಮೂಲಾಧಾರ ಚಕ್ರ. ಅಲ್ಲಿ ಈ ಚೋಳು ಊರ್ಧ್ವಮುಖಿಯಾಗಿತ್ತು ಅಂದರೆ ಇದರ ಗಮನ ಮೂಲಾಧಾರದ ಮೇಲಿರುವ ಚಕ್ರಗಳತ್ತ ಇದೆ. (ಮೂಲಾಧಾರದ ಮೇಲಿನ ಚಕ್ರಗಳು ಹೀಗಿವೆ: ಸ್ವಾಧಿಸ್ಠಾನ, ಮಣಿಪೂರ, ಅನಾಹತ, ವಿಶುದ್ಧಿ ಹಾಗೂ ಆಜ್ಞಾಚಕ್ರ.) ಸಾಧಕನನ್ನು ಮೇಲ್ಮುಖವಾಗಿ ಕರೆದೊಯ್ಯುವ ಶಕ್ತಿ ಇದು. ತನ್ನ ಸಮಯ ಬರುವವರೆಗೆ ಇದು ಸ್ಥೂಲದೇಹದಲ್ಲಿ ಅಂದರೆ ಜ್ಞಾನವಿಹೀನ ದೇಹದಲ್ಲಿ ನಿದ್ರಿಸುತ್ತಿರುತ್ತದೆ. (ಕುಂಡಲಿನಿ ಶಕ್ತಿಯು ಮೂಲಾಧಾರದಲ್ಲಿ ಸರ್ಪರೂಪದಲ್ಲಿ ಮಲಗಿರುತ್ತದೆ ಎನ್ನುವದು ಯೋಗಶಾಸ್ತ್ರದ ಪರಿಭಾಷೆ.) ಹಾಗೂ ಕಲಿಕರ್ಮವನ್ನು ಅಂದರೆ ದುಷ್ಕರ್ಮಗಳನ್ನು ನುಂಗುತ್ತ ತಕ್ಕ ಸಮಯಕ್ಕಾಗಿ ಕಾಯುತ್ತಿತ್ತು. ಸಮಯ ಬರುವ ವರೆಗೂ ಈ ಚೋಳು ಪರಮಾತ್ಮನ ಧ್ಯಾನದಲ್ಲಿಯೇ ಮಗ್ನವಾಗಿತ್ತು. ಅರ್ಥಾತ್ ಪರಮಾತ್ಮನ ಹೊರತಾಗಿ ಈ ಶಕ್ತಿಗೆ ಮತ್ತೇನೂ ಬೇಕಾಗಿಲ್ಲ. ಅಂತಹ ಚೈತನ್ಯ ವು ಕುಟುಕಿದಾಗ, ಶರೀಫರು ತಮಗೆ ಎಚ್ಚರಾಯಿತು, ಅಷ್ಟೇ ಅಲ್ಲ ಹುಚ್ಚು ಹಿಡಿದ ಹಾಗಾಯಿತು ಎಂದು ಹೇಳುತ್ತಾರೆ.
ಪರಮಾರ್ಥದ ಜ್ಞಾನ ದೊರೆತ ಬಳಿಕ ಜೀವಿಯು ಪರಮಾತ್ಮನ ಹುಚ್ಚಿನಲ್ಲಿ ಮುಳುಗುವದು ಸಹಜವೇ ಆಗಿದೆ!
[ಟಿಪ್ಪಣಿ:
ಪರಮಾರ್ಥದ ಜ್ಞಾನಕ್ಕಾಗಿ ನೋವಿನ ಅನುಭವ ಅನಿವಾರ್ಯವೇನೊ? ಕರ್ನಾಟಕದ ಇನ್ನಿಬ್ಬರು ಸಂತರ ಬಾಳಿನಲ್ಲಿಯೂ ಇಂತಹ ವಿಷಾದಕರ ಘಟನೆಗಳು ನಡೆದಿವೆ. ಮೊದಲನೆಯವರು ಬಸವಣ್ಣ. ತಮ್ಮ ಮಗ ಸಂಗಬಸವಣ್ಣ ನಿಧನ ಹೊಂದಿದಾಗ ಅವರು ಉದ್ಗರಿಸಿದ ವಚನ ಹೀಗಿದೆ:
“ಪಕ್ವವಾದ ಫಲವಿರಲು ಕಸುಕಾಯನೆತ್ತಿಕೊಂಡನು ಶಿವನು”.
ಪರಮಾತ್ಮನು ವಯಸ್ಸಾದ ತನಗೆ ಸಾವು ಕೊಡುವ ಬದಲು ಚಿಕ್ಕ ಬಾಲಕನಿಗೆ ಸಾವು ಕೊಟ್ಟನಲ್ಲ ಎನ್ನುವ ಈ ವಚನದಲ್ಲಿ ವ್ಯಕ್ತವಾಗುವ anguish ಹಾಗೂ resignation to God’s will ಇವು ಬೇರೆ ಯಾವ ಭಾಷೆಯ ಸಾಹಿತ್ಯದಲ್ಲೂ ಸಿಗಲಿಕ್ಕಿಲ್ಲ.
ಎರಡನೆಯವರು ಪುರಂದರದಾಸರು. ತಮ್ಮ ಮಗನ ಮರಣದ ಸಂದರ್ಭದಲ್ಲಿ ಇವರು ಹಾಡಿದ ಗೀತೆಯೂ ಸಹ ಶೋಕರಸದ ಅನನ್ಯ ಗೀತೆಯಾಗಿದೆ:
“ಗಿಳಿಯು ಪಂಜರದೊಳಿಲ್ಲ
ಬರಿದೆ ಪಂಜರವಾಯಿತಲ್ಲ!”]
Subscribe to:
Posts (Atom)