ಕನಸುಗಳಿಗಾಗಿಯೇ ಮೀಸಲಾಗಿಟ್ಟ ಕನ್ನಡ ತಾಣವೆಂದರೆ ಸುಷ್ಮಸಿಂಧುರವರ
ಕಂಡೆನೊಂದು ಕನಸು.
ಹಾಗೆಂದು ಇದು ಹಗಲುಗನಸಿನ ತಾಣವಲ್ಲ. ಅವರ ನೈಜ ಕನಸುಗಳ ತಾಣವಿದು.
ಕನಸುಗಳ ವೈಜ್ಞಾನಿಕ ಸಂಶೋಧನೆ ಖ್ಯಾತ ಮನೋವಿಜ್ಞಾನಿ ಫ್ರಾಯ್ಡ್ನಿಂದ ಆರಂಭವಾಯಿತೆನ್ನಬಹುದು. ಮನದ ಆಳದಲ್ಲಿ ಸರಿಸಿದ (repressed) ಅಥವಾ ಹುದುಗಿದ (suppressed) ಭಾವನೆಗಳು ಕನಸುಗಳನ್ನು ಹೇಗೆ ರಚಿಸುತ್ತವೆ ಎನ್ನುವದಕ್ಕೆ ಫ್ರಾಯ್ಡ್ ಅನೇಕ ವಿವರಣೆಗಳನ್ನು ನೀಡಿದರು.
ಸುಷ್ಮಸಿಂಧುರವರ ಕನಸುಗಳು ಸಾಮಾನ್ಯ ಕನಸುಗಳಿಗಿಂತ ಭಿನ್ನವಾಗಿವೆ ಎನ್ನುವದನ್ನು ಅವರ ತಾಣಕ್ಕೆ ಭೆಟ್ಟಿಯಿತ್ತವರೆಲ್ಲ ಕಂಡಿದ್ದಾರೆ.
ಈ ಕನಸುಗಳನ್ನು ಆಧರಿಸಿ, ಸುಷ್ಮಸಿಂಧುರವರು “ಪಯಣ ಸಾಗಿದಂತೆ” ಎನ್ನುವ ಒಂದು ಕಥಾಸಂಕಲನವನ್ನೇ ಬರೆದರು (೨೦೦೫).
ಇಲ್ಲಿಯ ಕತೆಗಳೂ ಸಹ ಸಾಮಾನ್ಯ ಕತೆಗಳಿಗಿಂತ ಭಿನ್ನವಾಗಿಯೇ ಇವೆ.
ಈ ಕತೆಗಳನ್ನು ನಾನು ‘ಅಂತರಂಗದ ತೊಳಲಾಟದ ಕತೆಗಳು’ ಎಂದು ಕರೆಯಲು ಬಯಸುತ್ತೇನೆ.
ಪ್ರತಿವ್ಯಕ್ತಿಯ ಮನಸ್ಸಿನಲ್ಲಿಯೂ ಅನೇಕ ದ್ವಂದ್ವಗಳು ಉದ್ಭವಿಸುತ್ತವೆ.
ಈ ದ್ವಂದ್ವಗಳು ಜೊತೆಜೊತೆಯಾಗಿಯೇ ಸಹವಾಸ ಮಾಡುತ್ತವೆ, ಹೋರಾಡುತ್ತವೆ;
ಕೆಲವೊಮ್ಮೆ ಒಂದು normal ಭಾವನೆಯ ಕೈ ಮೇಲಾಗಬಹುದು, ಕೆಲವೊಮ್ಮೆ ಅಸ್ವಾಭಾವಿಕ ಭಾವನೆಯೇ ಮೇಲೇರಬಹುದು.
ಈ ಭಾವನೆಗಳಿಗೆ ವ್ಯಕ್ತಿರೂಪ ನೀಡಿ ಬರೆದ ಕತೆಗಳು ಈ ಸಂಕಲನದಲ್ಲಿವೆ.
ಈ ಸಂಕಲನದ ಮೊದಲ ಕತೆ “ಅನ್ಯ” ಕಸ್ತೂರಿ ಮಾಸಪತ್ರಿಕೆಯಲ್ಲಿ ಪ್ರಕಟವಾಗಿತ್ತು.
ಶವಾಗಾರದ ರಾತ್ರಿ-ಕಾವಲುಗಾರನೊಬ್ಬನ ಕತೆಯಿದು.
ಈ ಕಾವಲುಗಾರನ inter action ಇರುವದು ಅಲ್ಲಿಯ ಶವಗಳ ಜೊತೆಗೆ ಮಾತ್ರ.
ಆತನಿಗೆ real ವ್ಯಕ್ತಿಗಳ ಜೊತೆಗೆ ಸಂಬಂಧ ಸಾಧ್ಯವಿಲ್ಲ.
ತನ್ನ ಅಂತರಂಗದಲ್ಲಿಯೇ ಬಂದಿಯಾದ ವ್ಯಕ್ತಿಯ ಚಿತ್ರಣ ಇಲ್ಲಿ ಸಮರ್ಥವಾಗಿ ಬಂದಿದೆ.
“ಬೆಳಕನ್ನರಸುತ್ತಾ” ಹಾಗು “ಶೋಧನಾ” ಕತೆಗಳಲ್ಲಿ ಕಾಣುವ ಮನೋಸ್ಥಿತಿ ಬೇರೆ ಬಗೆಯದು.
ಅಂತಿಮ ಸತ್ಯ ಏನು ಎನ್ನುವದನ್ನು ಅರಿತುಕೊಳ್ಳಲು ಸಿದ್ಧಾರ್ಥನು ಮಧ್ಯರಾತ್ರಿಯಲ್ಲಿ ಎದ್ದು ಹೋದನಲ್ಲ----ಆ ಬಗೆಯ ತೊಳಲಾಟದ ಕತೆಗಳಿವು.
ಈ ಕಥಾಸಂಕಲನದ ವಿವಿಧ ಕತೆಗಳಲ್ಲಿ ನಾವು ಕಾಣುವದು ಈ ತೊಳಲಾಟವನ್ನು ;
ಪಂಜರದಲ್ಲಿ ಸಿಲುಕಿದ ಹಕ್ಕಿ ಹೊರಹಾರಲೆಂದು ರೆಕ್ಕೆ ಬಡೆಯುವ ಯತ್ನವನ್ನು.
ಉತ್ತಮ ಲೇಖಕಿಯೂ ಆದ ಸುಷ್ಮಸಿಂಧು ತಮ್ಮ ಕನಸುಗಳಿಂದಾಗಿ ನಮ್ಮೆಲ್ಲರ ಕುತೂಹಲ ಕೆರಳಿಸಿದ್ದಾರೆ.
ಅವರ ಮನೋಪಕ್ಷಿಯ ಪಯಣ ಸಫಲವಾಗಲಿ.
Friday, October 24, 2008
Wednesday, October 15, 2008
ವಸುಧೇಂದ್ರರ ಸಂವೇದನಾ ಲೋಕ
ವಸುಧೇಂದ್ರರು ಈವರೆಗೆ ಮೂರು ಕಥಾಸಂಕಲನಗಳನ್ನು ಪ್ರಕಟಿಸಿದ್ದಾರೆ:
(೧) ಮನೀಷೆ
(೨) ಚೇಳು
(೩) ಯುಗಾದಿ.
ಈ ಮೂರು ಕಥಾಸಂಕಲನಗಳಲ್ಲಿ ಒಟ್ಟು ೩೭ ಕಥೆಗಳಿವೆ.
ಈ ಮೂವತ್ತೇಳೂ ಕತೆಗಳನ್ನು ಓದಿದಾಗ ಅವುಗಳಲ್ಲಿ ಮೂರು ಮೂಲಲಕ್ಷಣಗಳನ್ನು ಗುರುತಿಸಬಹುದು:
(೧) ವಸುಧೇಂದ್ರರ ಕತೆಗಳಲ್ಲಿ ಬರುವ ಸಮಾಜಗಳು ಎರಡು ತರಹದವು . ಒಂದು ಸಾಂಪ್ರದಾಯಕ ಸಮಾಜ; ಮತ್ತೊಂದು ಆಧುನಿಕ ಸಮಾಜ. ಇವೆರಡೂ ಸಮಾಜಗಳಲ್ಲಿ ವಸುಧೇಂದ್ರರು ಗುರುತಿಸುವ ಸಾಮಾನ್ಯ ಅಂಶವೆಂದರೆ ನಿಷ್ಕರುಣಿಯಾದ ಸಮಾಜವ್ಯವಸ್ಥೆ. ಕತೆಯ ಹಿನ್ನೆಲೆ ಸಾಂಪ್ರದಾಯಕ ಸಮಾಜದ್ದೇ ಇರಲಿ ಅಥವಾ ಆಧುನಿಕ ಸಮಾಜದ್ದೇ ಇರಲಿ, ಈ ಸಮಾಜವ್ಯವಸ್ಥೆಯು ಎಷ್ಟು ನಿರ್ದಯದಿಂದ ಅಸಹಾಯಕರನ್ನು ಹೊಸಕಿ ಹಾಕುತ್ತದೆ ಎನ್ನುವದು ಇಲ್ಲಿಯ ಕತೆಗಳ ಒಂದು ಮೂಲ ಲಕ್ಷಣ.
(೨) ಸಾಂಪ್ರದಾಯಕ ಸಮಾಜದ ಇಂತಹ ವ್ಯವಸ್ಥೆಯಲ್ಲಿ ತೊಳಲಾಡುತ್ತಿರುವ ಅಸಹಾಯಕ ಜೀವಿಗಳಲ್ಲಿ ಉಳಿದಿರುವ ಮೌಲ್ಯನಿಷ್ಠೆಯ ಚಿತ್ರಣವು ಇಲ್ಲಿಯ ಕತೆಗಳ ಎರಡನೆಯ ಮೂಲಲಕ್ಷಣ.
(೩) ಮೂರನೆಯದಾಗಿ ಇಂತಹ ವ್ಯವಸ್ಥೆಯ ಯಲ್ಲಿ ಸಿಲುಕಿ ನಲುಗುತ್ತಿರುವ ಅಸಹಾಯಕ ಜೀವಿಗಳ ಬಗೆಗೆ ವಸುಧೇಂದ್ರರಿಗೆ ಇರುವ ಅನುಕಂಪ.
ಅಸಹಾಯಕರ ಕತೆಗಳನ್ನು ಬರೆದಿರುವವರಲ್ಲಿ ವಸುಧೇಂದ್ರರು ಮೊದಲಿಗರೇನೂ ಅಲ್ಲ. ಕನ್ನಡದ ಶ್ರೇಷ್ಠ ಕತೆಗಾರರಾದ ದೇವನೂರು ಮಹಾದೇವ ಸಹ feudal ಸಮಾಜವ್ಯವಸ್ಥೆಯಲ್ಲಿ ಸಿಲುಕಿ ನಲುಗುತ್ತಿರುವ ಪಾತ್ರಗಳನ್ನು ಸೃಷ್ಟಿಸಿದ್ದಾರೆ. ಅವರ “ಮಾರಿಕೊಂಡವರು” ಕತೆ ವಿಶ್ವದ ಅತ್ಯುತ್ತಮ ಕತೆಗಳಲ್ಲಿ ಒಂದು ಎಂದು ಹೇಳಬಹುದು. ಆದರೆ ಈ ಕತೆ ಸಾಮಾಜಿಕ ವ್ಯವಸ್ಥೆ ನಿರ್ಮಿಸಿದ ಶೋಷಣೆಯನ್ನು ನಿರುದ್ವಿಗ್ನವಾಗಿ ಹೇಳುವ ಕತೆ. ಅಮರೇಶ ನುಗಡೋಣಿಯವರ ಕತೆಗಳನ್ನೂ ಸಹ ಇದೇ ವರ್ಗದಲ್ಲಿ ಸೇರಿಸಬಹುದು.
ಇನ್ನು ರಾಘವೇಂದ್ರ ಖಾಸನೀಸರು ಸಹ ತಮ್ಮ ಎಲ್ಲ ಕತೆಗಳಲ್ಲಿಯೂ ಅಸಹಾಯಕ ಜೀವಿಗಳನ್ನೇ ಮುಖ್ಯ ಪಾತ್ರಗಳನ್ನಾಗಿ ಮಾಡಿದ್ದಾರೆ. ಆದರೆ ಅವರ ಬಹುತೇಕ ಕತೆಗಳಲ್ಲಿ ವೈಯಕ್ತಿಕ ಅಥವಾ ಕೌಟಂಬಿಕ ಸಮಸ್ಯೆಯೇ ಅಸಹಾಯಕತೆಯ ಕಾರಣವಾಗಿದೆ. ಅವರ ಕತೆಗಳಲ್ಲಿ ಕಾಣುವದು ಕರುಣರಸವೇ ಹೊರತು ಸಹಾನುಭೂತಿಯಲ್ಲ.
ದೇವನೂರ ಮಹಾದೇವ, ಅಮರೇಶ ನುಗಡೋಣಿ ಹಾಗು ರಾಘವೇಂದ್ರ ಖಾಸನೀಸರ ಕತೆಗಳಿಗೂ ಮತ್ತು ವಸುಧೇಂದ್ರರ ಕತೆಗಳಿಗೂ ಇರುವ ಮುಖ್ಯ ವ್ಯತ್ಯಾಸವೆಂದರೆ ಸಮಾಜದ ವ್ಯವಸ್ಥೆಯಲ್ಲಿ ಬಲಿಪಶುಗಳಾದವರಿಗೆ ವಸುಧೇಂದ್ರರ ಹೃದಯದಲ್ಲಿ ಉಕ್ಕುತ್ತಿರುವ ಸಹಾನುಭೂತಿ; ಹೀಗಾಗಿ ಅವರ ಕತೆಗಳಲ್ಲಿ ಅನುಕಂಪವೇ ಪ್ರಧಾನ ರಸವಾಗುತ್ತದೆ.
ಈ ಮೇಲಿನ ಮೂರು ಕಥಾಸಂಕಲನಗಳಲ್ಲಿ, ವಸುಧೇಂದ್ರರು ಮೊದಲು ಒಂದು ಸಾಂಪ್ರದಾಯಕ ಸಮಾಜದ ಕತೆಯನ್ನು, ಆನಂತರ ಒಂದು ಆಧುನಿಕ ಸಮಾಜದ ಕತೆಯನ್ನು ಕೊಡುತ್ತಾ ಹೋಗಿದ್ದಾರೆ. ಈ ರೀತಿಯಾಗಿ ತಮ್ಮ ಸಂಕಲನಗಳಲ್ಲಿ ಒಂದು ರೀತಿಯ ಸಮತೋಲನವನ್ನು ಸಾಧಿಸಲು ಯತ್ನಿಸಿದ್ದಾರೆ. ಆದರೆ ಅವರ ಬಹುತೇಕ ಕತೆಗಳಲ್ಲಿ ಸಂಕಟಪಡುವ ಪಾತ್ರವೆಂದರೆ ಒಬ್ಬ ಅಸಹಾಯಕ ಹೆಣ್ಣು ಮಗಳು.
“ಮನೀಷೆ” ಕಥಾಸಂಕಲನದ ಮೊದಲ ಕಥೆಯಾದ “ನಮ್ಮ ವಾಜೀನ್ನೂ ಆಟಕ್ಕೆ ಸೇರಿಸ್ಕೊಳ್ರೋ” ಕತೆಯನ್ನು ಉದಾಹರಣೆಗೆ ತೆಗೆದುಕೊಳ್ಳಬಹುದು. ಒಂದು ಹಳೆಯ ಕಾಲಘಟ್ಟದ ಬ್ರಾಹ್ಮಣ ಸಮಾಜದ ಚಿತ್ರಣ ಇಲ್ಲಿದೆ.
ಮೈಗೆ ಅಲ್ಲಲ್ಲಿ ಬಿಳುಪು ಹತ್ತುತ್ತಿರುವ ತನ್ನ ಮಗನ ಭವಿಷ್ಯದ ಬಗೆಗೆ ಹೌಹಾರಿದ ವಿಧವೆಯ ಕತೆ ಇದು.
ಮಗನ ರೋಗಶಮನಕ್ಕಾಗಿ ಇವಳಿಗೆ ರಾಘವೇಂದ್ರಸ್ವಾಮಿಗಳ ಹರಕೆಯೇ ದಿವ್ಯೌಷಧ.
ನಡು ವಯಸ್ಸಿನಲ್ಲಿಯೆ ಗಂಡನನ್ನು ಕಳೆದುಕೊಂಡ ಬ್ರಾಹ್ಮಣ ಹೆಣ್ಣುಮಗಳೊಬ್ಬಳು ತನ್ನ ಹಾಗು ತನ್ನ ಚಿಕ್ಕ ಮಗನ ಹೊಟ್ಟೆ ತುಂಬಿಸಲು ಅಡುಗೆ ಕೆಲಸವನ್ನಲ್ಲದೆ ಬೇರಾವ ಕೆಲಸ ಮಾಡಬಲ್ಲಳು? ಇವಳಿಗೆ ಅಣ್ಣನೊಬ್ಬನಿದ್ದಾನೆ. ಆದರೆ ಎಲ್ಲ ಅಣ್ಣಂದಿರಂತೆ ಇವಳ ಅಣ್ಣನೂ ಸಹ ತನ್ನ ಹೆಂಡತಿಯ ಕೈಗೊಂಬೆ. ಅವನಿಗೆ ಇವಳ ಮೇಲೆ, ಇವಳ ಮಗನ ಮೇಲೆ ಕನಿಕರವಿರಬಹುದು. ಆದರೆ ಅದು ಪ್ರಯೋಜನಕ್ಕೆ ಬಾರದ ಕನಿಕರ. ಅಲ್ಲದೆ ಬ್ರಾಹ್ಮಣ ಸಮಾಜದ ಕ್ರೂರ ಕಟ್ಟಳೆಗಳು ಬೇರೆ. ಹೀಗಾಗಿ ಅವನೂ ಅಸಹಾಯಕ.
ಈ ಕತೆಯಲ್ಲಿಯ ಬ್ರಾಹ್ಮಣ ಸಮಾಜ ಕೊಳೆಯುತ್ತಿರುವ ಸಮಾಜವಲ್ಲ ; ಈಗಾಗಲೇ ಕೊಳೆತು ಹೋದ ಸಮಾಜ.
ಬಿಳುಪು ಕಾಣುತ್ತಿರುವ ತನ್ನ ಚಿಕ್ಕ ಮಗನಿಗೆ ಬ್ರಾಹ್ಮಣಸಮಾಜದಲ್ಲಿ acceptance ಕೊಡಿಸಲು ಈ ವಿಧವೆ ಸಂಕಟಪಡುತ್ತಿದ್ದಾಳೆ. ಮಠದ ಸ್ವಾಮಿಗಳ ಸಮಾರಂಭದಲ್ಲಿ, ತಾನು ಅಡುಗೆ ಮಾಡಿ, ತನ್ನ ಮಗನ ಕೈಯಿಂದ ನೀರು ಬಡಿಸಲು ಇವಳು ಶತಪ್ರಯತ್ನ ಮಾಡುತ್ತಾಳೆ. ಆದರೆ, ಕೊನೆಗೂ ಸ್ವಾಮಿಗಳ ಬಾಯಿಂದ ಛೀತ್ಕಾರ:
“ ದೇವರ ಪೂಜೆ ಮಾಡುವ ಈ ಕೈಗಳಿಗೆ, ಈ ತೊನ್ನು ಹತ್ತಿದವನ ಸ್ಪರ್ಷವೇ! ತೊಲಗಿಸಿರಿ ಇವನನ್ನು ಇಲ್ಲಿಂದ!”
ಬಹುಶ: ಈ ಮಾತನ್ನು ಈ ಕತೆಯ climax ಎನ್ನಬಹುದು.
(‘ದಯವೇ ಧರ್ಮದ ಮೂಲವಯ್ಯ’ ಎನ್ನುವ ಬಸವಣ್ಣನವರ ಮಾತು ಅಪ್ರಯತ್ನವಾಗಿ ಓದುಗನ ಮನಸ್ಸಿನಲ್ಲಿ ಆಗ ಸುಳಿಯದಿರದು.)
ಆದರೆ ಕತೆಯ ಹೆಚ್ಚುಗಾರಿಕೆ ಕೇವಲ ಈ climaxನಲ್ಲಿ ಮಾತ್ರವಿಲ್ಲ.
ಈ ಭರ್ತ್ಸನೆಯ ನಂತರವೂ ಆ ವಿಧವೆ ಎದೆಗುಂದುವದಿಲ್ಲ. ತನ್ನ ಮಗನ ಒಳಿತಿಗಾಗಿ ಅವಳ ಹೋರಾಟ ನಿಲ್ಲುವದಿಲ್ಲ.
ಕತೆಯ ಹೆಚ್ಚುಗಾರಿಕೆ ಇರುವದು ಇಂತಹ ಪರಾಭವದಲ್ಲೂ ಆ ವಿಧವೆ ತೋರಿಸುವ ಧೈರ್ಯದಲ್ಲಿದೆ. ಸಾಂಪ್ರದಾಯಕ ಸಮಾಜದ ಮೌಲ್ಯಗಳು ಒಬ್ಬ ಅಸಹಾಯಕ ವಿಧವೆಯಲ್ಲಿ ತುಂಬಬಹುದಾದ ಕೆಚ್ಚನ್ನು ತೋರಿಸುವದರಲ್ಲಿ ಈ ಕತೆಯ ಹೆಚ್ಚುಗಾರಿಕೆ ಇದೆ.
ಸಮಾಜದಿಂದ ಹಾಗೂ ತನ್ನ ಸ್ವಂತ ಗಂಡನಿಂದ ಅನ್ಯಾಯಕ್ಕೊಳಗಾಗಿಯೂ, ಕೆಚ್ಚಿನಿಂದ ಬದುಕು ಸಾಗಿಸಿದ ಹೆಣ್ಣು ಮಗಳ ಚಿತ್ರಣ ಸಿಗುವದು “ಚೇಳು” ಕತೆಯಲ್ಲಿ.
ತನ್ನ ಹೆಂಡತಿಗೆ ಮಕ್ಕಳಾಗಲೆಂದು ಭೈರವ ಬಾಬಾನ ಆಶೀರ್ವಾದ ಪಡೆಯಲು, ಮನಸ್ಸಿಲ್ಲದ ಹೆಂಡತಿಯನ್ನು ಕುರಿಯಂತೆ ನೂಕಿದ ಗಂಡ, ಬಾಬಾನ ಕಾಮಲೀಲೆಯನ್ನು ಕಂಡಾಗ, ಸಾರ್ವಜನಿಕವಾಗಿ ಹೆಂಡತಿಯ ಮಾನ ತೆಗೆಯಲು ಹೇಸುವದಿಲ್ಲ. ಅವಳ ತವರುಮನೆಯವರೂ ಸಹ ಈ ‘ಪತಿತೆ’ಯನ್ನು ತಿರಸ್ಕರಿಸುತ್ತಾರೆ. ಆದರೆ ಬಾಬಾ ತಾನು ಮಾಡಿದ ತಪ್ಪನ್ನು ಅರಿತು, ಈ ಅಸಹಾಯಕ ಹೆಣ್ಣು ಮಗಳಿಗೆ ಚೇಳಿನ ಮಂತ್ರವನ್ನು ಅನುಗ್ರಹಿಸಿ ಹೋಗುತ್ತಾನೆ. ಅವಳ ಬದುಕು ಈ ಚೇಳಿನ ಮಂತ್ರದ ಸಹಾಯದಿಂದ ಹೇಗೋ ಸಾಗುತ್ತಿರುತ್ತದೆ. ಆ ಸಮಯದಲ್ಲಿ ಆಧುನಿಕ ವೈಜ್ಞಾನಿಕ ಅನ್ವೇಷಣೆ ಅವಳ ಬದುಕಿಗೆ ಕುಠಾರವಾಗಿ ಬರುತ್ತದೆ. ಈ ಸಮಸ್ಯೆಗೆ ಅವಳು ಕಂಡುಕೊಳ್ಳುವ ಪರಿಹಾರವು ಅಸಹಾಯಕ ಜೀವಿಗಳು ಮೊರೆ ಹೋಗುವ ಏಕೈಕ ಮಾರ್ಗವಾಗಿದೆ. ಇಂತಹ ದುರಂತ ಕತೆಯನ್ನು ಸಹನೀಯವಾಗಿ ಮಾಡುವದು ವಸುಧೇಂದ್ರರ ವಿನೋದಪೂರ್ಣ ಶೈಲಿ.
ವಸುಧೇಂದ್ರರು ಬರೆದ ಇಂತಹ ಸಾಂಪ್ರದಾಯಿಕ ಸಮಾಜದ ಕತೆಗಳಲ್ಲಿಯೇ ಶ್ರೇಷ್ಠವಾದದ್ದು ‘ಚೇಳು’ ಕಥಾಸಂಕಲನದಲ್ಲಿಯ ಕತೆ: “ ಹೊಟ್ಟೆಯೊಳಗಿನ ಗುಟ್ಟು”.
ವಿಧವೆಯೊಬ್ಬಳು ಬ್ರಾಹ್ಮಣ ಕುಟುಂಬವೊಂದರಲ್ಲಿ ಮನೆಕೆಲಸ ಮಾಡುತ್ತ ಬದುಕು ಸಾಗಿಸುತ್ತಿದ್ದಾಳೆ. ದೀರ್ಘ ಕಾಲದ ನಂತರ ಅವಳ ಯಜಮಾನಿಯೂ ಸಹ ವಿಧವೆಯಾಗಿದ್ದಾಳೆ. ಇದಿಷ್ಟು ಕತೆಯಲ್ಲಿ ಬರೆಯದೆ ಇದ್ದ ಹಿನ್ನೆಲೆ.
ಇದೀಗ, ಯಜಮಾನಿಯ ಶ್ರಾದ್ಧದ ಕೊನೆಯ ವಿಧಿಯಾದ ಕಾಕಪಿಂಡದಿಂದ ಕತೆ ಪ್ರಾರಂಭವಾಗುತ್ತದೆ.
ನಗರದಲ್ಲಿ ವಾಸಿಸುತ್ತಿರುವ ಅವಳ ಮಗ ಶ್ರಾದ್ಧಕರ್ಮಕ್ಕಾಗಿ ಮನೆಗೆ ಬಂದಿದ್ದಾನೆ. ಕಾಕಪಿಂಡ ಆಗುತ್ತಿಲ್ಲ.
ಅಲ್ಲಿರುವ ಸಂಬಂಧಿಕರೆಲ್ಲರೂ ಪ್ರಯತ್ನಿಸುತ್ತಾರೆ. ಆದರೂ ಕಾಕಪಿಂಡ ಆಗುವದಿಲ್ಲ.
ಕೊನೆಗೊಮ್ಮೆ ಈ ಮನೆಕೆಲಸದ ಮುದಿ ವಿಧವೆಯಿಂದ ಕಾಕಪಿಂಡ ಆಗುತ್ತದೆ.
ಅವಳು ತನ್ನ ಯಜಮಾನಿಯ ಪಿಂಡಕ್ಕೆ ಹೇಳಿದ್ದೇನು?
ಅದು ಕತೆಯ ಮುಕ್ತಾಯದಲ್ಲಿಯೂ ಗುಟ್ಟಾಗಿಯೇ ಉಳಿಯುತ್ತದೆ.
ಈ ಕತೆಯಲ್ಲಿ, ಈ ಮನೆಗೆಲಸದ ವಿಧವೆಯ ಸಂಕಷ್ಟಗಳ ಬಗೆಗೆ ಎಲ್ಲಿಯೂ ಪ್ರತ್ಯಕ್ಷವಾಗಿ ಹೇಳಿಲ್ಲ. ಆದರೆ ಓರ್ವ ಅಸಹಾಯಕ ವಿಧವೆಯನ್ನು ಅವಳ ಆಶ್ರಯದಾತರು ಹಾಗೂ ಸಮಾಜ ಯಾವ ರೀತಿಯಲ್ಲಿ ಶೋಷಿಸಿರಬಹುದು, ಅವಳ ತಾಪಗಳಿಗೆ ಅವರು ಎಷ್ಟರ ಮಟ್ಟಿಗೆ insensitive ಆಗಿರಬಹುದು ಎನ್ನುವ ಕಲ್ಪನೆ ಓದುಗನ ಚಿತ್ತದಲ್ಲಿ ಕ್ಷಣಮಾತ್ರಕ್ಕೆ ಮಿಂಚುತ್ತದೆ. ಇಷ್ಟಾಗಿಯೂ ದೈಹಿಕವಾಗಿ ಹಾಗೂ ಆರ್ಥಿಕವಾಗಿ ಶೋಷಿತಳಾದ ಆ ಮುದಿ ವಿಧವೆಯ ಹೃದಯದಲ್ಲಿ ಮಿಣುಕುತ್ತಿರುವ ಸಾಂಪ್ರದಾಯಕ ಮೌಲ್ಯಗಳನ್ನು ತೋರಿಸುವದೇ ವಸುಧೇಂದ್ರರ ಮುಖ್ಯ ಗುರಿಯಾಗಿದೆ.
ಅಸಹಾಯಕತೆಯ ಪರಮಾವಧಿಯನ್ನು ನೋಡಬೇಕಾದರೆ , “ ಹುಲಿಗೆ ಕಾಡೇ ರಕ್ಷೆ, ಕಾಡಿಗೆ ಹುಲಿಯೇ ರಕ್ಷೆ ” ಕತೆಯನ್ನು ಓದಬೇಕು. ಈ ಕತೆಯಲ್ಲಿ ಮನೆಯ ಯಜಮಾನ ಮಾನಸಿಕವಾಗಿ ಅತ್ಯಂತ ಬಲಹೀನ ಮನುಷ್ಯ. ಆತನ ಕುಟುಂಬಕ್ಕೆ ಅವನ ಹೆಂಡತಿಯೇ ಧೈರ್ಯದ ಆಧಾರ. ಆದರೆ, ಸಮಾಜದ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಹೋರಾಡುವ ಸಾಮರ್ಥ್ಯ ಅವರಲ್ಲಿ ಇಲ್ಲ. ಆದರೆ ಶೋಷಣೆಗೆ ಒಳಗಾಗಿಯೂ, ಗಂಡನಲ್ಲಿ ಹಾಗು ಮಕ್ಕಳಲ್ಲಿ ಧೈರ್ಯವನ್ನು ತುಂಬುವವಳು, ಕುಟುಂಬವನ್ನು ಸಂಬಾಳಿಸಿಕೊಂಡು ಹೋಗುವವಳು ಹೆಂಡತಿಯೇ.
ಸಾಂಪ್ರದಾಯಕ ಸಮಾಜದಲ್ಲಿಯ ಅಸಹಾಯಕ ಹೆಣ್ಣುಮಗಳ ಶ್ರೇಷ್ಠ ಕತೆ ಎಂದರೆ “ಸೀಳು ಲೋಟ”. ಈ ಕತೆ ಇಲ್ಲಿ ತೋರಿಸಿದ ಮೂರು ಸಂಕಲನಗಳಲ್ಲಿ ಇಲ್ಲ. ಇದನ್ನು ಓದಬಯಸುವವರು ದಯವಿಟ್ಟು
ಇಲ್ಲಿನೋಡಿರಿ.
ಈ ಕತೆಯಲ್ಲಿಯೂ ಸಹ ಬಲಹೀನ ಗಂಡ, ಅಸಹಾಯಕ ಅಣ್ಣ ಹಾಗು ನೆರೆಹೊರೆಯವರ ಔದಾರ್ಯದ ಮೇಲೆ ಬದುಕು ಸಾಗಿಸಬೇಕಾದಂತಹ ಹೆಂಗಸಿನ ಕತೆ ಇದು.
ಇಷ್ಟೆಲ್ಲ ಕಾರ್ಪಣ್ಯಗಳ ನಡುವೆಯೂ ಆಕೆ ಸಾಂಪ್ರದಾಯಿಕ ಸಮಾಜ ನೀಡಿದ ಸಂಸ್ಕಾರದ ಮೌಲ್ಯಗಳನ್ನು ಬಿಟ್ಟಿಲ್ಲ. ಕತೆಯ ಕೊನೆಕೊನೆಯಲ್ಲಿ ಅವಳು ತನ್ನ ಮಗನಿಂದ ಆಣೆ ಹಾಕಿಸಿಕೊಳ್ಳುವ ಭಾಗವು ಕತೆಯ ಪರಾಕಾಷ್ಠೆ ಎನ್ನಬಹುದು.
ಫ್ರಾನ್ಸ್ ದೇಶದ ಕತೆಗಾರ ಮೊಪಾಸಾನ ಕತೆಗಳನ್ನು ನೆನಪಿಸುವ ಈ ಕತೆ ಕನ್ನಡದ ಒಂದು ಶ್ರೇಷ್ಠ ಕತೆಯಾಗಿದೆ.
ಈ ಎಲ್ಲ ಕತೆಗಳಲ್ಲಿಬರುವ ಹೆಣ್ಣುಮಕ್ಕಳು ಸಮಾಜದ ನೀತಿಯನ್ನು ಒಪ್ಪಿಕೊಂಡಂತಹ ಸಾಮಾನ್ಯ ಜೀವಿಗಳು. ಸಮಾಜದ ವಿಧಿಗಳನ್ನು ದಾಟದಯೇ, ಕೆಚ್ಚಿನಿಂದ ಬದುಕು ಮಾಡಿದವರು. ಸ್ವತಃ ಶೋಷಣೆಗೆ ಒಳಗಾಗಿದ್ದರೂ, ಮಾನವೀಯತೆಯನ್ನು ಮರೆತವರಲ್ಲ. ಅರ್ಥಾತ್, ಇವಳು ಸಾಮಾನ್ಯ ಭಾರತೀಯ ಹೆಣ್ಣು ಮಗಳು. ತನ್ನ ದುಗುಡ ದುಮ್ಮಾನಗಳು ಏನೇ ಇರಲಿ, ಸಂಪ್ರದಾಯವು ತನಗೆ ಚಿಕ್ಕಂದಿನಿಂದ ಕಲಿಸಿದ ಮೌಲ್ಯಗಳನ್ನು ಬಾಳಿನಲ್ಲಿ ಅರಗಿಸಿಕೊಂಡ ಭಾರತೀಯ ಹೆಣ್ಣುಮಗಳು.
ವಸುಧೇಂದ್ರರು ಆಧುನಿಕ ಸಮಾಜದಲ್ಲಿಯ ಅಸಹಾಯಕರ ಕತೆಗಳನ್ನೂ ಸಹ ಕೊಟ್ಟಿದ್ದಾರೆ. “ ಕ್ಷಿತಿಜ ಹಿಡಿಯ ಹೊರಟವರಾರು, ಹೆಡ್ ಹಂಟರ, ಕಣ್ತೆರದು ನೋಡಲ್ಲಿ ಗೆದ್ದಲು ಮರ ಕೆಡವಲಿದೆ, ಗುಳ್ಳೆ ” ಮುಂತಾದವು ಆಧುನಿಕ ಸಮಾಜದಲ್ಲಿಯ ಅಸಹಾಯಕರ ಕತೆಗಳು. ಆಧುನಿಕ ಸಮಾಜದ ಆರ್ಥಿಕ ಆಸೆಬುರುಕತನ ಈ ಎಲ್ಲ ಕತೆಗಳಿಗೆ ಹಿನ್ನೆಲೆಯಾಗಿದೆ.
ಇವಲ್ಲದೆ, ಮತ್ತೊಂದು ವರ್ಗದ ಅಸಹಾಯಕ ಜೀವಿಗಳ ಕತೆಯೂ ಇಲ್ಲಿವೆ. ಸಮಾಜದ ಚೌಕಟ್ಟಿಗೆ ಸಂಬಂಧವಿರದೆ, ತನ್ನೊಳಗಿನ ವೈಯಕ್ತಿಕ ಅಥವಾ ಆರ್ಥಿಕ ಕಾರಣದಿಂದಾಗಿ ಕಷ್ಟಪಡುತ್ತಿರುವ ಅಸಹಾಯಕ ಜೀವಿಗಳ ಕತೆಗಳಿವು.
“ ಅಪಸ್ವರದಲ್ಲೊಂದು ಆರ್ತನಾದ ” ಕತೆಯಲ್ಲಿ ಮನೆಯ ಪರಿಸ್ಥಿತಿಯಿಂದಾಗಿ, ಮದುವೆಯಾಗದೇ ಇರುವ ಒಬ್ಬಳು ಹುಡುಗಿ ಹಾಗೂ ಅವಳ ವಿಧವೆ ಅಮ್ಮನ ತೊಳಲಾಟಗಳ ಚಿತ್ರಣವಿದೆ.
“ ಅನಘ ” ಕತೆಯಲ್ಲಿ ಹಳ್ಳಿಯಲ್ಲಿರುವ transvestite ಹುಡುಗನೊಬ್ಬನ ಸಮಸ್ಯೆಯ ಚಿತ್ರಣವಿದೆ. ಈ ಕತೆಯಲ್ಲಿ ಹುಡುಗನ ಬಲಹೀನತೆ ಹಾಗು ಅವನ ಅಪ್ಪನ ಪೌರುಷಗಳಿಗೆ ಮುಖಾಮುಖಿಯಾಗಿ ನಿಲ್ಲುವದು ಸೂಳೆಯೊಬ್ಬಳಲ್ಲಿ ಮಿನಗುತ್ತಿರುವ ಮಾನವೀಯತೆ.
“ಯುಗಾದಿ” ಕತೆಯಲ್ಲಿ ಬದಲಾದ ಸಾಮಾಜಿಕ ಮೌಲ್ಯಗಳಿಂದಾಗಿ ಒದ್ದಾಡುತ್ತಿರುವ ಹಿರಿಯ ಜೀವಿಯೊಬ್ಬನ ಅಸಹಾಯಕತೆಯ ಚಿತ್ರಣವಿದೆ. ಇಲ್ಲಿಯೂ ಸಹ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಕೆಳಸ್ತರದಲ್ಲಿರುವ ವ್ಯಕ್ತಿಗಳು ಉಳಿಸಿಕೊಂಡು ಬಂದಿರುವ ಸಾಂಪ್ರದಾಯಕ ಮೌಲ್ಯಗಳೇ ಕತೆಯ ತಿರುಳಾಗಿವೆ.
ಹಾಗಾದರೆ, ವಸುಧೇಂದ್ರರ ಕತೆಗಳು ಕೇವಲ ಅಸಹಾಯಕರ ಕತೆಗಳೇ ಎನ್ನುವ ಸಂದೇಹ ಬರಬಹುದು.
ನಿಜ ಹೇಳಬೇಕೆಂದರೆ, ವಸುಧೇಂದ್ರರ ಕತೆಗಳು ಮೌಲ್ಯವನ್ನು ಹುಡುಕುತ್ತಿರುವ ಕತೆಗಳು.
ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಬಲಹೀನರಾದವರಲ್ಲಿಯೇ ಅಂದರೆ ಶೋಷಣೆಗೆ ಒಳಗಾದವರಲ್ಲಿಯೇ ಈ ಮೌಲ್ಯಗಳು ಉಳಿದುಕೊಂಡಿರುವದು ಈ ಕತೆಗಳಲ್ಲಿಯ ವೈಶಿಷ್ಟ್ಯ.
ವಸುಧೇಂದ್ರರು ಮೌಲ್ಯಗಳನ್ನು ಹುಡುಕಲು ಬಲಹೀನರನ್ನೇ ಆರಿಸಿಕೊಳ್ಳುತ್ತಾರೆಯೇ ಎನ್ನುವ ಪ್ರಶ್ನೆಯೂ ಬರಬಹುದು. ಆದರೆ ಇದು ಕೇವಲ ಸಾಂದರ್ಭಿಕ. ವಸುಧೇಂದ್ರರರದು ಸೂಕ್ಷ್ಮ ಸಂವೇದನಾ ಮನಸ್ಸು. ಎಲ್ಲೇ ಸಂತಾಪ ಕಾಣಲಿ, ಅವರ ಮನ ಮಿಡಿಯುತ್ತದೆ. ಅದರ ಫಲವೇ ಈ ಕತೆಗಳು.
ವಸುಧೇಂದ್ರರ ಕತೆಗಳು ಅವರ ಆಪ್ತ ಪರಿಸರದಿಂದ ಹೊಮ್ಮಿವೆ. ಸಾಂಪ್ರದಾಯಕ ಸಮಾಜದ ಕತೆಗಳೆಲ್ಲ ಸಂಡೂರಿನ ಸುತ್ತಮುತ್ತಲಿನ ಕತೆಗಳು. ಇಲ್ಲಿಯ ಪರಿಸರವನ್ನು ವಿನೋದಪೂರ್ಣವಾಗಿ ಕಟ್ಟಿಕೊಡುವದರಲ್ಲಿ ವಸುಧೇಂದ್ರರು ಯಶಸ್ವಿಯಾಗಿದ್ದಾರೆ. ಈ ಕತೆಗಳು ಸಾಂಪ್ರದಾಯಕ ಸಮಾಜದ ಕೊಳಕನ್ನು ತೋರಿಸುವಂತೆಯೇ, ಆ ಸಮಾಜವು ನೀಡಿದ ಮೌಲ್ಯಗಳನ್ನೂ ತೋರಿಸುತ್ತವೆ.
ಆಧುನಿಕ ಸಮಾಜದ ಕತೆಗಳೆಲ್ಲ ಬೆಂಗಳೂರು ನಗರದ ಕತೆಗಳು. ದುಡ್ಡೇ ದೊಡ್ಡಪ್ಪ ಎನ್ನುವದೇ ಇಲ್ಲಿಯ ಮೌಲ್ಯ.
ತೆಳುವಿನೋದದ ತಿಳಿಲೇಪನವಿರುವದರಿಂದ ವಸುಧೇಂದ್ರರ ಕತೆಗಳಲ್ಲಿಯ ಸಂಕಟವು ಸಹನೀಯವಾಗಿದೆ.
(೧) ಮನೀಷೆ
(೨) ಚೇಳು
(೩) ಯುಗಾದಿ.
ಈ ಮೂರು ಕಥಾಸಂಕಲನಗಳಲ್ಲಿ ಒಟ್ಟು ೩೭ ಕಥೆಗಳಿವೆ.
ಈ ಮೂವತ್ತೇಳೂ ಕತೆಗಳನ್ನು ಓದಿದಾಗ ಅವುಗಳಲ್ಲಿ ಮೂರು ಮೂಲಲಕ್ಷಣಗಳನ್ನು ಗುರುತಿಸಬಹುದು:
(೧) ವಸುಧೇಂದ್ರರ ಕತೆಗಳಲ್ಲಿ ಬರುವ ಸಮಾಜಗಳು ಎರಡು ತರಹದವು . ಒಂದು ಸಾಂಪ್ರದಾಯಕ ಸಮಾಜ; ಮತ್ತೊಂದು ಆಧುನಿಕ ಸಮಾಜ. ಇವೆರಡೂ ಸಮಾಜಗಳಲ್ಲಿ ವಸುಧೇಂದ್ರರು ಗುರುತಿಸುವ ಸಾಮಾನ್ಯ ಅಂಶವೆಂದರೆ ನಿಷ್ಕರುಣಿಯಾದ ಸಮಾಜವ್ಯವಸ್ಥೆ. ಕತೆಯ ಹಿನ್ನೆಲೆ ಸಾಂಪ್ರದಾಯಕ ಸಮಾಜದ್ದೇ ಇರಲಿ ಅಥವಾ ಆಧುನಿಕ ಸಮಾಜದ್ದೇ ಇರಲಿ, ಈ ಸಮಾಜವ್ಯವಸ್ಥೆಯು ಎಷ್ಟು ನಿರ್ದಯದಿಂದ ಅಸಹಾಯಕರನ್ನು ಹೊಸಕಿ ಹಾಕುತ್ತದೆ ಎನ್ನುವದು ಇಲ್ಲಿಯ ಕತೆಗಳ ಒಂದು ಮೂಲ ಲಕ್ಷಣ.
(೨) ಸಾಂಪ್ರದಾಯಕ ಸಮಾಜದ ಇಂತಹ ವ್ಯವಸ್ಥೆಯಲ್ಲಿ ತೊಳಲಾಡುತ್ತಿರುವ ಅಸಹಾಯಕ ಜೀವಿಗಳಲ್ಲಿ ಉಳಿದಿರುವ ಮೌಲ್ಯನಿಷ್ಠೆಯ ಚಿತ್ರಣವು ಇಲ್ಲಿಯ ಕತೆಗಳ ಎರಡನೆಯ ಮೂಲಲಕ್ಷಣ.
(೩) ಮೂರನೆಯದಾಗಿ ಇಂತಹ ವ್ಯವಸ್ಥೆಯ ಯಲ್ಲಿ ಸಿಲುಕಿ ನಲುಗುತ್ತಿರುವ ಅಸಹಾಯಕ ಜೀವಿಗಳ ಬಗೆಗೆ ವಸುಧೇಂದ್ರರಿಗೆ ಇರುವ ಅನುಕಂಪ.
ಅಸಹಾಯಕರ ಕತೆಗಳನ್ನು ಬರೆದಿರುವವರಲ್ಲಿ ವಸುಧೇಂದ್ರರು ಮೊದಲಿಗರೇನೂ ಅಲ್ಲ. ಕನ್ನಡದ ಶ್ರೇಷ್ಠ ಕತೆಗಾರರಾದ ದೇವನೂರು ಮಹಾದೇವ ಸಹ feudal ಸಮಾಜವ್ಯವಸ್ಥೆಯಲ್ಲಿ ಸಿಲುಕಿ ನಲುಗುತ್ತಿರುವ ಪಾತ್ರಗಳನ್ನು ಸೃಷ್ಟಿಸಿದ್ದಾರೆ. ಅವರ “ಮಾರಿಕೊಂಡವರು” ಕತೆ ವಿಶ್ವದ ಅತ್ಯುತ್ತಮ ಕತೆಗಳಲ್ಲಿ ಒಂದು ಎಂದು ಹೇಳಬಹುದು. ಆದರೆ ಈ ಕತೆ ಸಾಮಾಜಿಕ ವ್ಯವಸ್ಥೆ ನಿರ್ಮಿಸಿದ ಶೋಷಣೆಯನ್ನು ನಿರುದ್ವಿಗ್ನವಾಗಿ ಹೇಳುವ ಕತೆ. ಅಮರೇಶ ನುಗಡೋಣಿಯವರ ಕತೆಗಳನ್ನೂ ಸಹ ಇದೇ ವರ್ಗದಲ್ಲಿ ಸೇರಿಸಬಹುದು.
ಇನ್ನು ರಾಘವೇಂದ್ರ ಖಾಸನೀಸರು ಸಹ ತಮ್ಮ ಎಲ್ಲ ಕತೆಗಳಲ್ಲಿಯೂ ಅಸಹಾಯಕ ಜೀವಿಗಳನ್ನೇ ಮುಖ್ಯ ಪಾತ್ರಗಳನ್ನಾಗಿ ಮಾಡಿದ್ದಾರೆ. ಆದರೆ ಅವರ ಬಹುತೇಕ ಕತೆಗಳಲ್ಲಿ ವೈಯಕ್ತಿಕ ಅಥವಾ ಕೌಟಂಬಿಕ ಸಮಸ್ಯೆಯೇ ಅಸಹಾಯಕತೆಯ ಕಾರಣವಾಗಿದೆ. ಅವರ ಕತೆಗಳಲ್ಲಿ ಕಾಣುವದು ಕರುಣರಸವೇ ಹೊರತು ಸಹಾನುಭೂತಿಯಲ್ಲ.
ದೇವನೂರ ಮಹಾದೇವ, ಅಮರೇಶ ನುಗಡೋಣಿ ಹಾಗು ರಾಘವೇಂದ್ರ ಖಾಸನೀಸರ ಕತೆಗಳಿಗೂ ಮತ್ತು ವಸುಧೇಂದ್ರರ ಕತೆಗಳಿಗೂ ಇರುವ ಮುಖ್ಯ ವ್ಯತ್ಯಾಸವೆಂದರೆ ಸಮಾಜದ ವ್ಯವಸ್ಥೆಯಲ್ಲಿ ಬಲಿಪಶುಗಳಾದವರಿಗೆ ವಸುಧೇಂದ್ರರ ಹೃದಯದಲ್ಲಿ ಉಕ್ಕುತ್ತಿರುವ ಸಹಾನುಭೂತಿ; ಹೀಗಾಗಿ ಅವರ ಕತೆಗಳಲ್ಲಿ ಅನುಕಂಪವೇ ಪ್ರಧಾನ ರಸವಾಗುತ್ತದೆ.
ಈ ಮೇಲಿನ ಮೂರು ಕಥಾಸಂಕಲನಗಳಲ್ಲಿ, ವಸುಧೇಂದ್ರರು ಮೊದಲು ಒಂದು ಸಾಂಪ್ರದಾಯಕ ಸಮಾಜದ ಕತೆಯನ್ನು, ಆನಂತರ ಒಂದು ಆಧುನಿಕ ಸಮಾಜದ ಕತೆಯನ್ನು ಕೊಡುತ್ತಾ ಹೋಗಿದ್ದಾರೆ. ಈ ರೀತಿಯಾಗಿ ತಮ್ಮ ಸಂಕಲನಗಳಲ್ಲಿ ಒಂದು ರೀತಿಯ ಸಮತೋಲನವನ್ನು ಸಾಧಿಸಲು ಯತ್ನಿಸಿದ್ದಾರೆ. ಆದರೆ ಅವರ ಬಹುತೇಕ ಕತೆಗಳಲ್ಲಿ ಸಂಕಟಪಡುವ ಪಾತ್ರವೆಂದರೆ ಒಬ್ಬ ಅಸಹಾಯಕ ಹೆಣ್ಣು ಮಗಳು.
“ಮನೀಷೆ” ಕಥಾಸಂಕಲನದ ಮೊದಲ ಕಥೆಯಾದ “ನಮ್ಮ ವಾಜೀನ್ನೂ ಆಟಕ್ಕೆ ಸೇರಿಸ್ಕೊಳ್ರೋ” ಕತೆಯನ್ನು ಉದಾಹರಣೆಗೆ ತೆಗೆದುಕೊಳ್ಳಬಹುದು. ಒಂದು ಹಳೆಯ ಕಾಲಘಟ್ಟದ ಬ್ರಾಹ್ಮಣ ಸಮಾಜದ ಚಿತ್ರಣ ಇಲ್ಲಿದೆ.
ಮೈಗೆ ಅಲ್ಲಲ್ಲಿ ಬಿಳುಪು ಹತ್ತುತ್ತಿರುವ ತನ್ನ ಮಗನ ಭವಿಷ್ಯದ ಬಗೆಗೆ ಹೌಹಾರಿದ ವಿಧವೆಯ ಕತೆ ಇದು.
ಮಗನ ರೋಗಶಮನಕ್ಕಾಗಿ ಇವಳಿಗೆ ರಾಘವೇಂದ್ರಸ್ವಾಮಿಗಳ ಹರಕೆಯೇ ದಿವ್ಯೌಷಧ.
ನಡು ವಯಸ್ಸಿನಲ್ಲಿಯೆ ಗಂಡನನ್ನು ಕಳೆದುಕೊಂಡ ಬ್ರಾಹ್ಮಣ ಹೆಣ್ಣುಮಗಳೊಬ್ಬಳು ತನ್ನ ಹಾಗು ತನ್ನ ಚಿಕ್ಕ ಮಗನ ಹೊಟ್ಟೆ ತುಂಬಿಸಲು ಅಡುಗೆ ಕೆಲಸವನ್ನಲ್ಲದೆ ಬೇರಾವ ಕೆಲಸ ಮಾಡಬಲ್ಲಳು? ಇವಳಿಗೆ ಅಣ್ಣನೊಬ್ಬನಿದ್ದಾನೆ. ಆದರೆ ಎಲ್ಲ ಅಣ್ಣಂದಿರಂತೆ ಇವಳ ಅಣ್ಣನೂ ಸಹ ತನ್ನ ಹೆಂಡತಿಯ ಕೈಗೊಂಬೆ. ಅವನಿಗೆ ಇವಳ ಮೇಲೆ, ಇವಳ ಮಗನ ಮೇಲೆ ಕನಿಕರವಿರಬಹುದು. ಆದರೆ ಅದು ಪ್ರಯೋಜನಕ್ಕೆ ಬಾರದ ಕನಿಕರ. ಅಲ್ಲದೆ ಬ್ರಾಹ್ಮಣ ಸಮಾಜದ ಕ್ರೂರ ಕಟ್ಟಳೆಗಳು ಬೇರೆ. ಹೀಗಾಗಿ ಅವನೂ ಅಸಹಾಯಕ.
ಈ ಕತೆಯಲ್ಲಿಯ ಬ್ರಾಹ್ಮಣ ಸಮಾಜ ಕೊಳೆಯುತ್ತಿರುವ ಸಮಾಜವಲ್ಲ ; ಈಗಾಗಲೇ ಕೊಳೆತು ಹೋದ ಸಮಾಜ.
ಬಿಳುಪು ಕಾಣುತ್ತಿರುವ ತನ್ನ ಚಿಕ್ಕ ಮಗನಿಗೆ ಬ್ರಾಹ್ಮಣಸಮಾಜದಲ್ಲಿ acceptance ಕೊಡಿಸಲು ಈ ವಿಧವೆ ಸಂಕಟಪಡುತ್ತಿದ್ದಾಳೆ. ಮಠದ ಸ್ವಾಮಿಗಳ ಸಮಾರಂಭದಲ್ಲಿ, ತಾನು ಅಡುಗೆ ಮಾಡಿ, ತನ್ನ ಮಗನ ಕೈಯಿಂದ ನೀರು ಬಡಿಸಲು ಇವಳು ಶತಪ್ರಯತ್ನ ಮಾಡುತ್ತಾಳೆ. ಆದರೆ, ಕೊನೆಗೂ ಸ್ವಾಮಿಗಳ ಬಾಯಿಂದ ಛೀತ್ಕಾರ:
“ ದೇವರ ಪೂಜೆ ಮಾಡುವ ಈ ಕೈಗಳಿಗೆ, ಈ ತೊನ್ನು ಹತ್ತಿದವನ ಸ್ಪರ್ಷವೇ! ತೊಲಗಿಸಿರಿ ಇವನನ್ನು ಇಲ್ಲಿಂದ!”
ಬಹುಶ: ಈ ಮಾತನ್ನು ಈ ಕತೆಯ climax ಎನ್ನಬಹುದು.
(‘ದಯವೇ ಧರ್ಮದ ಮೂಲವಯ್ಯ’ ಎನ್ನುವ ಬಸವಣ್ಣನವರ ಮಾತು ಅಪ್ರಯತ್ನವಾಗಿ ಓದುಗನ ಮನಸ್ಸಿನಲ್ಲಿ ಆಗ ಸುಳಿಯದಿರದು.)
ಆದರೆ ಕತೆಯ ಹೆಚ್ಚುಗಾರಿಕೆ ಕೇವಲ ಈ climaxನಲ್ಲಿ ಮಾತ್ರವಿಲ್ಲ.
ಈ ಭರ್ತ್ಸನೆಯ ನಂತರವೂ ಆ ವಿಧವೆ ಎದೆಗುಂದುವದಿಲ್ಲ. ತನ್ನ ಮಗನ ಒಳಿತಿಗಾಗಿ ಅವಳ ಹೋರಾಟ ನಿಲ್ಲುವದಿಲ್ಲ.
ಕತೆಯ ಹೆಚ್ಚುಗಾರಿಕೆ ಇರುವದು ಇಂತಹ ಪರಾಭವದಲ್ಲೂ ಆ ವಿಧವೆ ತೋರಿಸುವ ಧೈರ್ಯದಲ್ಲಿದೆ. ಸಾಂಪ್ರದಾಯಕ ಸಮಾಜದ ಮೌಲ್ಯಗಳು ಒಬ್ಬ ಅಸಹಾಯಕ ವಿಧವೆಯಲ್ಲಿ ತುಂಬಬಹುದಾದ ಕೆಚ್ಚನ್ನು ತೋರಿಸುವದರಲ್ಲಿ ಈ ಕತೆಯ ಹೆಚ್ಚುಗಾರಿಕೆ ಇದೆ.
ಸಮಾಜದಿಂದ ಹಾಗೂ ತನ್ನ ಸ್ವಂತ ಗಂಡನಿಂದ ಅನ್ಯಾಯಕ್ಕೊಳಗಾಗಿಯೂ, ಕೆಚ್ಚಿನಿಂದ ಬದುಕು ಸಾಗಿಸಿದ ಹೆಣ್ಣು ಮಗಳ ಚಿತ್ರಣ ಸಿಗುವದು “ಚೇಳು” ಕತೆಯಲ್ಲಿ.
ತನ್ನ ಹೆಂಡತಿಗೆ ಮಕ್ಕಳಾಗಲೆಂದು ಭೈರವ ಬಾಬಾನ ಆಶೀರ್ವಾದ ಪಡೆಯಲು, ಮನಸ್ಸಿಲ್ಲದ ಹೆಂಡತಿಯನ್ನು ಕುರಿಯಂತೆ ನೂಕಿದ ಗಂಡ, ಬಾಬಾನ ಕಾಮಲೀಲೆಯನ್ನು ಕಂಡಾಗ, ಸಾರ್ವಜನಿಕವಾಗಿ ಹೆಂಡತಿಯ ಮಾನ ತೆಗೆಯಲು ಹೇಸುವದಿಲ್ಲ. ಅವಳ ತವರುಮನೆಯವರೂ ಸಹ ಈ ‘ಪತಿತೆ’ಯನ್ನು ತಿರಸ್ಕರಿಸುತ್ತಾರೆ. ಆದರೆ ಬಾಬಾ ತಾನು ಮಾಡಿದ ತಪ್ಪನ್ನು ಅರಿತು, ಈ ಅಸಹಾಯಕ ಹೆಣ್ಣು ಮಗಳಿಗೆ ಚೇಳಿನ ಮಂತ್ರವನ್ನು ಅನುಗ್ರಹಿಸಿ ಹೋಗುತ್ತಾನೆ. ಅವಳ ಬದುಕು ಈ ಚೇಳಿನ ಮಂತ್ರದ ಸಹಾಯದಿಂದ ಹೇಗೋ ಸಾಗುತ್ತಿರುತ್ತದೆ. ಆ ಸಮಯದಲ್ಲಿ ಆಧುನಿಕ ವೈಜ್ಞಾನಿಕ ಅನ್ವೇಷಣೆ ಅವಳ ಬದುಕಿಗೆ ಕುಠಾರವಾಗಿ ಬರುತ್ತದೆ. ಈ ಸಮಸ್ಯೆಗೆ ಅವಳು ಕಂಡುಕೊಳ್ಳುವ ಪರಿಹಾರವು ಅಸಹಾಯಕ ಜೀವಿಗಳು ಮೊರೆ ಹೋಗುವ ಏಕೈಕ ಮಾರ್ಗವಾಗಿದೆ. ಇಂತಹ ದುರಂತ ಕತೆಯನ್ನು ಸಹನೀಯವಾಗಿ ಮಾಡುವದು ವಸುಧೇಂದ್ರರ ವಿನೋದಪೂರ್ಣ ಶೈಲಿ.
ವಸುಧೇಂದ್ರರು ಬರೆದ ಇಂತಹ ಸಾಂಪ್ರದಾಯಿಕ ಸಮಾಜದ ಕತೆಗಳಲ್ಲಿಯೇ ಶ್ರೇಷ್ಠವಾದದ್ದು ‘ಚೇಳು’ ಕಥಾಸಂಕಲನದಲ್ಲಿಯ ಕತೆ: “ ಹೊಟ್ಟೆಯೊಳಗಿನ ಗುಟ್ಟು”.
ವಿಧವೆಯೊಬ್ಬಳು ಬ್ರಾಹ್ಮಣ ಕುಟುಂಬವೊಂದರಲ್ಲಿ ಮನೆಕೆಲಸ ಮಾಡುತ್ತ ಬದುಕು ಸಾಗಿಸುತ್ತಿದ್ದಾಳೆ. ದೀರ್ಘ ಕಾಲದ ನಂತರ ಅವಳ ಯಜಮಾನಿಯೂ ಸಹ ವಿಧವೆಯಾಗಿದ್ದಾಳೆ. ಇದಿಷ್ಟು ಕತೆಯಲ್ಲಿ ಬರೆಯದೆ ಇದ್ದ ಹಿನ್ನೆಲೆ.
ಇದೀಗ, ಯಜಮಾನಿಯ ಶ್ರಾದ್ಧದ ಕೊನೆಯ ವಿಧಿಯಾದ ಕಾಕಪಿಂಡದಿಂದ ಕತೆ ಪ್ರಾರಂಭವಾಗುತ್ತದೆ.
ನಗರದಲ್ಲಿ ವಾಸಿಸುತ್ತಿರುವ ಅವಳ ಮಗ ಶ್ರಾದ್ಧಕರ್ಮಕ್ಕಾಗಿ ಮನೆಗೆ ಬಂದಿದ್ದಾನೆ. ಕಾಕಪಿಂಡ ಆಗುತ್ತಿಲ್ಲ.
ಅಲ್ಲಿರುವ ಸಂಬಂಧಿಕರೆಲ್ಲರೂ ಪ್ರಯತ್ನಿಸುತ್ತಾರೆ. ಆದರೂ ಕಾಕಪಿಂಡ ಆಗುವದಿಲ್ಲ.
ಕೊನೆಗೊಮ್ಮೆ ಈ ಮನೆಕೆಲಸದ ಮುದಿ ವಿಧವೆಯಿಂದ ಕಾಕಪಿಂಡ ಆಗುತ್ತದೆ.
ಅವಳು ತನ್ನ ಯಜಮಾನಿಯ ಪಿಂಡಕ್ಕೆ ಹೇಳಿದ್ದೇನು?
ಅದು ಕತೆಯ ಮುಕ್ತಾಯದಲ್ಲಿಯೂ ಗುಟ್ಟಾಗಿಯೇ ಉಳಿಯುತ್ತದೆ.
ಈ ಕತೆಯಲ್ಲಿ, ಈ ಮನೆಗೆಲಸದ ವಿಧವೆಯ ಸಂಕಷ್ಟಗಳ ಬಗೆಗೆ ಎಲ್ಲಿಯೂ ಪ್ರತ್ಯಕ್ಷವಾಗಿ ಹೇಳಿಲ್ಲ. ಆದರೆ ಓರ್ವ ಅಸಹಾಯಕ ವಿಧವೆಯನ್ನು ಅವಳ ಆಶ್ರಯದಾತರು ಹಾಗೂ ಸಮಾಜ ಯಾವ ರೀತಿಯಲ್ಲಿ ಶೋಷಿಸಿರಬಹುದು, ಅವಳ ತಾಪಗಳಿಗೆ ಅವರು ಎಷ್ಟರ ಮಟ್ಟಿಗೆ insensitive ಆಗಿರಬಹುದು ಎನ್ನುವ ಕಲ್ಪನೆ ಓದುಗನ ಚಿತ್ತದಲ್ಲಿ ಕ್ಷಣಮಾತ್ರಕ್ಕೆ ಮಿಂಚುತ್ತದೆ. ಇಷ್ಟಾಗಿಯೂ ದೈಹಿಕವಾಗಿ ಹಾಗೂ ಆರ್ಥಿಕವಾಗಿ ಶೋಷಿತಳಾದ ಆ ಮುದಿ ವಿಧವೆಯ ಹೃದಯದಲ್ಲಿ ಮಿಣುಕುತ್ತಿರುವ ಸಾಂಪ್ರದಾಯಕ ಮೌಲ್ಯಗಳನ್ನು ತೋರಿಸುವದೇ ವಸುಧೇಂದ್ರರ ಮುಖ್ಯ ಗುರಿಯಾಗಿದೆ.
ಅಸಹಾಯಕತೆಯ ಪರಮಾವಧಿಯನ್ನು ನೋಡಬೇಕಾದರೆ , “ ಹುಲಿಗೆ ಕಾಡೇ ರಕ್ಷೆ, ಕಾಡಿಗೆ ಹುಲಿಯೇ ರಕ್ಷೆ ” ಕತೆಯನ್ನು ಓದಬೇಕು. ಈ ಕತೆಯಲ್ಲಿ ಮನೆಯ ಯಜಮಾನ ಮಾನಸಿಕವಾಗಿ ಅತ್ಯಂತ ಬಲಹೀನ ಮನುಷ್ಯ. ಆತನ ಕುಟುಂಬಕ್ಕೆ ಅವನ ಹೆಂಡತಿಯೇ ಧೈರ್ಯದ ಆಧಾರ. ಆದರೆ, ಸಮಾಜದ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಹೋರಾಡುವ ಸಾಮರ್ಥ್ಯ ಅವರಲ್ಲಿ ಇಲ್ಲ. ಆದರೆ ಶೋಷಣೆಗೆ ಒಳಗಾಗಿಯೂ, ಗಂಡನಲ್ಲಿ ಹಾಗು ಮಕ್ಕಳಲ್ಲಿ ಧೈರ್ಯವನ್ನು ತುಂಬುವವಳು, ಕುಟುಂಬವನ್ನು ಸಂಬಾಳಿಸಿಕೊಂಡು ಹೋಗುವವಳು ಹೆಂಡತಿಯೇ.
ಸಾಂಪ್ರದಾಯಕ ಸಮಾಜದಲ್ಲಿಯ ಅಸಹಾಯಕ ಹೆಣ್ಣುಮಗಳ ಶ್ರೇಷ್ಠ ಕತೆ ಎಂದರೆ “ಸೀಳು ಲೋಟ”. ಈ ಕತೆ ಇಲ್ಲಿ ತೋರಿಸಿದ ಮೂರು ಸಂಕಲನಗಳಲ್ಲಿ ಇಲ್ಲ. ಇದನ್ನು ಓದಬಯಸುವವರು ದಯವಿಟ್ಟು
ಇಲ್ಲಿನೋಡಿರಿ.
ಈ ಕತೆಯಲ್ಲಿಯೂ ಸಹ ಬಲಹೀನ ಗಂಡ, ಅಸಹಾಯಕ ಅಣ್ಣ ಹಾಗು ನೆರೆಹೊರೆಯವರ ಔದಾರ್ಯದ ಮೇಲೆ ಬದುಕು ಸಾಗಿಸಬೇಕಾದಂತಹ ಹೆಂಗಸಿನ ಕತೆ ಇದು.
ಇಷ್ಟೆಲ್ಲ ಕಾರ್ಪಣ್ಯಗಳ ನಡುವೆಯೂ ಆಕೆ ಸಾಂಪ್ರದಾಯಿಕ ಸಮಾಜ ನೀಡಿದ ಸಂಸ್ಕಾರದ ಮೌಲ್ಯಗಳನ್ನು ಬಿಟ್ಟಿಲ್ಲ. ಕತೆಯ ಕೊನೆಕೊನೆಯಲ್ಲಿ ಅವಳು ತನ್ನ ಮಗನಿಂದ ಆಣೆ ಹಾಕಿಸಿಕೊಳ್ಳುವ ಭಾಗವು ಕತೆಯ ಪರಾಕಾಷ್ಠೆ ಎನ್ನಬಹುದು.
ಫ್ರಾನ್ಸ್ ದೇಶದ ಕತೆಗಾರ ಮೊಪಾಸಾನ ಕತೆಗಳನ್ನು ನೆನಪಿಸುವ ಈ ಕತೆ ಕನ್ನಡದ ಒಂದು ಶ್ರೇಷ್ಠ ಕತೆಯಾಗಿದೆ.
ಈ ಎಲ್ಲ ಕತೆಗಳಲ್ಲಿಬರುವ ಹೆಣ್ಣುಮಕ್ಕಳು ಸಮಾಜದ ನೀತಿಯನ್ನು ಒಪ್ಪಿಕೊಂಡಂತಹ ಸಾಮಾನ್ಯ ಜೀವಿಗಳು. ಸಮಾಜದ ವಿಧಿಗಳನ್ನು ದಾಟದಯೇ, ಕೆಚ್ಚಿನಿಂದ ಬದುಕು ಮಾಡಿದವರು. ಸ್ವತಃ ಶೋಷಣೆಗೆ ಒಳಗಾಗಿದ್ದರೂ, ಮಾನವೀಯತೆಯನ್ನು ಮರೆತವರಲ್ಲ. ಅರ್ಥಾತ್, ಇವಳು ಸಾಮಾನ್ಯ ಭಾರತೀಯ ಹೆಣ್ಣು ಮಗಳು. ತನ್ನ ದುಗುಡ ದುಮ್ಮಾನಗಳು ಏನೇ ಇರಲಿ, ಸಂಪ್ರದಾಯವು ತನಗೆ ಚಿಕ್ಕಂದಿನಿಂದ ಕಲಿಸಿದ ಮೌಲ್ಯಗಳನ್ನು ಬಾಳಿನಲ್ಲಿ ಅರಗಿಸಿಕೊಂಡ ಭಾರತೀಯ ಹೆಣ್ಣುಮಗಳು.
ವಸುಧೇಂದ್ರರು ಆಧುನಿಕ ಸಮಾಜದಲ್ಲಿಯ ಅಸಹಾಯಕರ ಕತೆಗಳನ್ನೂ ಸಹ ಕೊಟ್ಟಿದ್ದಾರೆ. “ ಕ್ಷಿತಿಜ ಹಿಡಿಯ ಹೊರಟವರಾರು, ಹೆಡ್ ಹಂಟರ, ಕಣ್ತೆರದು ನೋಡಲ್ಲಿ ಗೆದ್ದಲು ಮರ ಕೆಡವಲಿದೆ, ಗುಳ್ಳೆ ” ಮುಂತಾದವು ಆಧುನಿಕ ಸಮಾಜದಲ್ಲಿಯ ಅಸಹಾಯಕರ ಕತೆಗಳು. ಆಧುನಿಕ ಸಮಾಜದ ಆರ್ಥಿಕ ಆಸೆಬುರುಕತನ ಈ ಎಲ್ಲ ಕತೆಗಳಿಗೆ ಹಿನ್ನೆಲೆಯಾಗಿದೆ.
ಇವಲ್ಲದೆ, ಮತ್ತೊಂದು ವರ್ಗದ ಅಸಹಾಯಕ ಜೀವಿಗಳ ಕತೆಯೂ ಇಲ್ಲಿವೆ. ಸಮಾಜದ ಚೌಕಟ್ಟಿಗೆ ಸಂಬಂಧವಿರದೆ, ತನ್ನೊಳಗಿನ ವೈಯಕ್ತಿಕ ಅಥವಾ ಆರ್ಥಿಕ ಕಾರಣದಿಂದಾಗಿ ಕಷ್ಟಪಡುತ್ತಿರುವ ಅಸಹಾಯಕ ಜೀವಿಗಳ ಕತೆಗಳಿವು.
“ ಅಪಸ್ವರದಲ್ಲೊಂದು ಆರ್ತನಾದ ” ಕತೆಯಲ್ಲಿ ಮನೆಯ ಪರಿಸ್ಥಿತಿಯಿಂದಾಗಿ, ಮದುವೆಯಾಗದೇ ಇರುವ ಒಬ್ಬಳು ಹುಡುಗಿ ಹಾಗೂ ಅವಳ ವಿಧವೆ ಅಮ್ಮನ ತೊಳಲಾಟಗಳ ಚಿತ್ರಣವಿದೆ.
“ ಅನಘ ” ಕತೆಯಲ್ಲಿ ಹಳ್ಳಿಯಲ್ಲಿರುವ transvestite ಹುಡುಗನೊಬ್ಬನ ಸಮಸ್ಯೆಯ ಚಿತ್ರಣವಿದೆ. ಈ ಕತೆಯಲ್ಲಿ ಹುಡುಗನ ಬಲಹೀನತೆ ಹಾಗು ಅವನ ಅಪ್ಪನ ಪೌರುಷಗಳಿಗೆ ಮುಖಾಮುಖಿಯಾಗಿ ನಿಲ್ಲುವದು ಸೂಳೆಯೊಬ್ಬಳಲ್ಲಿ ಮಿನಗುತ್ತಿರುವ ಮಾನವೀಯತೆ.
“ಯುಗಾದಿ” ಕತೆಯಲ್ಲಿ ಬದಲಾದ ಸಾಮಾಜಿಕ ಮೌಲ್ಯಗಳಿಂದಾಗಿ ಒದ್ದಾಡುತ್ತಿರುವ ಹಿರಿಯ ಜೀವಿಯೊಬ್ಬನ ಅಸಹಾಯಕತೆಯ ಚಿತ್ರಣವಿದೆ. ಇಲ್ಲಿಯೂ ಸಹ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಕೆಳಸ್ತರದಲ್ಲಿರುವ ವ್ಯಕ್ತಿಗಳು ಉಳಿಸಿಕೊಂಡು ಬಂದಿರುವ ಸಾಂಪ್ರದಾಯಕ ಮೌಲ್ಯಗಳೇ ಕತೆಯ ತಿರುಳಾಗಿವೆ.
ಹಾಗಾದರೆ, ವಸುಧೇಂದ್ರರ ಕತೆಗಳು ಕೇವಲ ಅಸಹಾಯಕರ ಕತೆಗಳೇ ಎನ್ನುವ ಸಂದೇಹ ಬರಬಹುದು.
ನಿಜ ಹೇಳಬೇಕೆಂದರೆ, ವಸುಧೇಂದ್ರರ ಕತೆಗಳು ಮೌಲ್ಯವನ್ನು ಹುಡುಕುತ್ತಿರುವ ಕತೆಗಳು.
ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಬಲಹೀನರಾದವರಲ್ಲಿಯೇ ಅಂದರೆ ಶೋಷಣೆಗೆ ಒಳಗಾದವರಲ್ಲಿಯೇ ಈ ಮೌಲ್ಯಗಳು ಉಳಿದುಕೊಂಡಿರುವದು ಈ ಕತೆಗಳಲ್ಲಿಯ ವೈಶಿಷ್ಟ್ಯ.
ವಸುಧೇಂದ್ರರು ಮೌಲ್ಯಗಳನ್ನು ಹುಡುಕಲು ಬಲಹೀನರನ್ನೇ ಆರಿಸಿಕೊಳ್ಳುತ್ತಾರೆಯೇ ಎನ್ನುವ ಪ್ರಶ್ನೆಯೂ ಬರಬಹುದು. ಆದರೆ ಇದು ಕೇವಲ ಸಾಂದರ್ಭಿಕ. ವಸುಧೇಂದ್ರರರದು ಸೂಕ್ಷ್ಮ ಸಂವೇದನಾ ಮನಸ್ಸು. ಎಲ್ಲೇ ಸಂತಾಪ ಕಾಣಲಿ, ಅವರ ಮನ ಮಿಡಿಯುತ್ತದೆ. ಅದರ ಫಲವೇ ಈ ಕತೆಗಳು.
ವಸುಧೇಂದ್ರರ ಕತೆಗಳು ಅವರ ಆಪ್ತ ಪರಿಸರದಿಂದ ಹೊಮ್ಮಿವೆ. ಸಾಂಪ್ರದಾಯಕ ಸಮಾಜದ ಕತೆಗಳೆಲ್ಲ ಸಂಡೂರಿನ ಸುತ್ತಮುತ್ತಲಿನ ಕತೆಗಳು. ಇಲ್ಲಿಯ ಪರಿಸರವನ್ನು ವಿನೋದಪೂರ್ಣವಾಗಿ ಕಟ್ಟಿಕೊಡುವದರಲ್ಲಿ ವಸುಧೇಂದ್ರರು ಯಶಸ್ವಿಯಾಗಿದ್ದಾರೆ. ಈ ಕತೆಗಳು ಸಾಂಪ್ರದಾಯಕ ಸಮಾಜದ ಕೊಳಕನ್ನು ತೋರಿಸುವಂತೆಯೇ, ಆ ಸಮಾಜವು ನೀಡಿದ ಮೌಲ್ಯಗಳನ್ನೂ ತೋರಿಸುತ್ತವೆ.
ಆಧುನಿಕ ಸಮಾಜದ ಕತೆಗಳೆಲ್ಲ ಬೆಂಗಳೂರು ನಗರದ ಕತೆಗಳು. ದುಡ್ಡೇ ದೊಡ್ಡಪ್ಪ ಎನ್ನುವದೇ ಇಲ್ಲಿಯ ಮೌಲ್ಯ.
ತೆಳುವಿನೋದದ ತಿಳಿಲೇಪನವಿರುವದರಿಂದ ವಸುಧೇಂದ್ರರ ಕತೆಗಳಲ್ಲಿಯ ಸಂಕಟವು ಸಹನೀಯವಾಗಿದೆ.
Tuesday, October 7, 2008
ಕೋಡಗನ್ನ ಕೋಳಿ ನುಂಗಿತ
‘ಕೋಡಗನ್ನ ಕೋಳಿ ನುಂಗಿತ’ ಇದು ಶರೀಫರ ಒಡಪಿನ ಅಥವಾ ಬೆಡಗಿನ ಹಾಡು.
ಇಂತಹ ಹಾಡುಗಳನ್ನು ಶರೀಫರಲ್ಲದೆ, ಕನಕದಾಸರು ಹಾಗೂ ಪುರಂದರದಾಸರೂ ಸಹ ರಚಿಸಿದ್ದಾರೆ.
‘ಬಯಲು ಆಲಯದೊಳಗೊ ಆಲಯವು ಬಯಲೊಳಗೊ
ಬಯಲು ಆಲಯವೆರಡು ನಿನ್ನ ಒಳಗೊ’ ಎನ್ನುವ ಕನಕದಾಸರ ಹಾಡನ್ನು ಉದಾಹರಣೆಗೆ ನೋಡಬಹುದು.
ಅದರಂತೆ ಪುರಂದರದಾಸರ ಈ ರಚನೆ ಸಹ ಪ್ರಸಿದ್ಧವಿದೆ:
“ಸುಳ್ಳು ನಮ್ಮಲ್ಲಿಲ್ಲವಯ್ಯಾ
ಸುಳ್ಳೆ ನಮ್ಮನಿ ದೇವರು”.
………………………………………………………….
‘ಕೋಡಗನ್ನ ಕೋಳಿ ನುಂಗಿತ’ ಎನ್ನುವ ಪದದಲ್ಲಿ ಶರಿಫರು ಮನಸ್ಸನ್ನು ಮರ್ಕಟಕ್ಕೆ ಹಾಗು ಜ್ಞಾನೋದಯವನ್ನು ಕೋಳಿಗೆ ಹೋಲಿಸಿ ಹಾಡಿದ್ದಾರೆ. ಸಂಸಾರವೆಂಬ ವೃಕ್ಷಕ್ಕೆ ವಿಷಯಗಳು ಟೊಂಗೆಗಳಿದ್ದಂತೆ. ಮನಸ್ಸೆಂಬ ಮಂಗವು ಸಂಸಾರದಲ್ಲಿ ವಿಷಯದಿಂದ ವಿಷಯಕ್ಕೆ ಹಾರುತ್ತ ಸುಖಪಡುತ್ತದೆ.
ಕೋಳಿಯ ಕೂಗು ಬೆಳಗಿನ ಸೂಚನೆ. ಶರೀಫರ ಹಾಡಿನಲ್ಲಿ ಇದು ಆಧ್ಯಾತ್ಮಿಕ ಬೆಳಗನ್ನು ಸೂಚಿಸುವ ಕೋಳಿ. ಆಧ್ಯಾತ್ಮಿಕ ಜ್ಞಾನೋದಯವು ಕೋಡಗದಂತಿರುವ ಮನಸ್ಸನ್ನು ನುಂಗಿ ಹಾಕುತ್ತದೆ ಎಂದು ಶರೀಫರು ಹೇಳುತ್ತಾರೆ.
ಪುರಂದರದಾಸರೂ ಸಹ ತಮ್ಮ ಒಂದು ರಚನೆಯಲ್ಲಿ ಮರ್ಕಟದಂತಿರುವ ಮನಸ್ಸನ್ನು ಡೊಂಕು ಬಾಲದ ನಾಯಿಗೆ ಹೋಲಿಸಿದ್ದಾರೆ. ತಿದ್ದಲು ಎಷ್ಟೇ ಪ್ರಯತ್ನಿಸಿದರೂ ಸಹ ಈ ಮನಸ್ಸು ನಾಯಿಯ ಬಾಲದಂತೆ ಡೊಂಕಾಗಿಯೇ ಉಳಿಯುತ್ತದೆ. ಅರ್ಥಾತ್ ಈ ಮನಸ್ಸಿಗೆ ಜ್ಞಾನೋದಯವಿನ್ನೂ ಆಗಿಲ್ಲ. ಪುರಂದರದಾಸರ ಈ ಹಾಡಿನಲ್ಲಿ ಒಂದು ವಿಶೇಷತೆ ಇದೆ. ಹಾಡಿನ ಪಲ್ಲವನ್ನು ನೋಡೋಣ:
“ಡೊಂಕು ಬಾಲದ ನಾಯಕರೆ,
ನೀವೇನೂಟವ ಮಾಡಿದಿರಿ?” ||ಪಲ್ಲ||
ಡೊಂಕು ಬಾಲದ ನಾಯಕರು ಎಂದರೆ ‘ನಾಯಿ’ ಎನ್ನುವದು ತಿಳಿದ ವಿಷಯವೇ.
ಆದರೆ ‘ನಾಯಕರು’ ಎನ್ನುವಲ್ಲಿ ಒಂದು ಹೆಚ್ಚಿನ ಅರ್ಥವಿದೆ.
ಪುರಂದರದಾಸರ ಪೂರ್ವಾಶ್ರಮದ ಹೆಸರು: ಶ್ರೀನಿವಾಸ ನಾಯಕ.
ದಾಸರು “ಡೊಂಕು ಬಾಲದ ನಾಯಕರೆ” ಎನ್ನುವಾಗ ತಮ್ಮನ್ನೇ ಸಂಬೋಧಿಸಿಕೊಳ್ಳುತ್ತಿದ್ದಾರೆ !
. . .. .. . . . . . . .. . . . . . . . . . .. . . . . . . .
ಶರೀಫರ ರಚನೆಯ ಪೂರ್ತಿ ಪಾಠ ಹೀಗಿದೆ:
ಕೋಡಗನ್ನ ಕೋಳಿ ನುಂಗಿತ
ನೋಡವ್ವ ತಂಗಿ ||ಪಲ್ಲ||
ಆಡು ಆನೆಯ ನುಂಗಿ
ಗೋಡೆ ಸುಣ್ಣವ ನುಂಗಿ
ಆಡಲು ಬಂದ ಪಾತರದವಳ ಮದ್ಲಿ ನುಂಗಿತ ||೧||
ಒಳ್ಳು ಒನಕಿಯ ನುಂಗಿ
ಬೀಸುಕಲ್ಲು ಗೂಟವ ನುಂಗಿ
ಕುಟ್ಟಲಿಕೆ ಬಂದ ಮುದುಕಿಯ ನೊಣವು ನುಂಗಿತ ||೨||
ಹಗ್ಗ ಮಗ್ಗವ ನುಂಗಿ
ಮಗ್ಗವ ಲಾಳಿ ನುಂಗಿ
ಮಗ್ಗದಾಗಿರುವ ಅಣ್ಣನ ಕುಣಿಯು ನುಂಗಿತ ||೩||
ಎತ್ತು ಜತ್ತಗಿ ನುಂಗಿ
ಬತ್ತ ಬಾನವ ನುಂಗಿ
ಮುಕ್ಕಟ ತಿರುವೊ ಅಣ್ಣನ ಮೇಳಿ ನುಂಗಿತ ||೪||
ಗುಡ್ಡ ಗಂವ್ಹರ ನುಂಗಿ
ಗಂವ್ಹರ ಇರಿವೆ ನುಂಗಿ
ಗುರುಗೋವಿಂದನ ಪಾದ ಆತ್ಮ ನುಂಗಿತ ||೫||
. . .. . . . . .. . . . . . . .. . . . . . . . .. . .
ಶರೀಫರು ಆಧುನಿಕ ಕಾಲದ ಕವಿಗಳಂತೆ, ಮುಚ್ಚಿದ ಕೋಣೆಯಲ್ಲಿ ಕುಳಿತು, ಪೆನ್ನು ಅಥವಾ ಪೆನ್ಸಿಲಿನಿಂದ ಕವನ ಬರೆಯುವ ಕವಿ ಅಲ್ಲ. ತಮ್ಮ ಸುತ್ತ ನೆರೆದಿರುವ ಜನಸಮುದಾಯದ ಎದುರಿಗೆ ಸ್ಫೂರ್ತಿಯುತವಾಗಿ ಕವನ ಹಾಡುವದು ಅವರ ಪದ್ಧತಿ. ಜನಸಮುದಾಯಕ್ಕೆ ಜ್ಞಾನದ ಬೆಳಕು ಸಿಗಲಿ ಎನ್ನುವದು ಅದರ ಉದ್ದೇಶ.
ಹೀಗಾಗಿ ಇವರ ಕವನಗಳ ರಚನೆಯನ್ನು ಗಮನಿಸಿದಾಗ, ಕೆಲವೊಂದು ಕವನದ ಸಾಲುಗಳಲ್ಲಿ repetitiveness ಕಾಣುವದು ಸಹಜ.
‘ಕೋಡಗನ್ನ ಕೋಳಿ ನುಂಗಿತ’ ಕವನದ ಎಲ್ಲಾ ನುಡಿಗಳಲ್ಲಿ ಕಂಡು ಬರುವದು ಒಂದೇ ಅರ್ಥ.
ಮೊದಲ ನುಡಿಯ ನಂತರ, ಕವನ ಮುಂದೆ ಸಾಗಿದಂತೆ ಅರ್ಥದ ಬೆಳವಣಿಗೆ ಸಾಗುವದಿಲ್ಲ.
ಆದರೆ ಆ ಕಾರಣಕ್ಕಾಗಿ ಕವನದ ಸೌಂದರ್ಯವೇನೂ ಕಡಿಮೆಯಾಗಿಲ್ಲ.
ಕವನದ ಪಲ್ಲದಲ್ಲಿ ಕವಿಯು ‘ಕೋಳಿ ಅಂದರೆ ಆಧ್ಯಾತ್ಮಿಕ ಜ್ಞಾನೋದಯವು ಕೋಡಗವನ್ನು ಅಂದರೆ ಮಂಗನಂತಿರುವ ಮನಸ್ಸನ್ನು ತಿಂದು ಹಾಕಿದೆ’ ಎಂದು ಹೇಳುತ್ತಾರೆ. ಇದೇ ಮಾತನ್ನು ಮುಂದಿನ ನುಡಿಯಲ್ಲಿ, ವಿಭಿನ್ನ ರೂಪಕಗಳ ಮೂಲಕ ಮತ್ತೆ ಮತ್ತೆ ಸ್ಪಷ್ಟ ಪಡಿಸುತ್ತಾರೆ:
ಆಡು ಆನೆಯ ನುಂಗಿ
ಗೋಡೆ ಸುಣ್ಣವ ನುಂಗಿ
ಆಡಲು ಬಂದ ಪಾತರದವಳ ಮದ್ಲಿ ನುಂಗಿತ ||೧||
ಆಡು ಅಂದರೆ ಜ್ಞಾನ. ಇದು ಸಣ್ಣದು . ಸಂಸಾರದ ಆಸೆಗಳಿಗೋ ಆನೆಯ ಬಲ.
ಇಂತಹ ಆನೆಯನ್ನು ಆಡಿನಂತಿರುವ ಜ್ಞಾನ ತಿಂದು ಹಾಕಿಬಿಡುತ್ತದೆ ಎಂದು ಶರೀಫರು ಹಾಡುತ್ತಾರೆ.
(ಈ ಸಂದರ್ಭದಲ್ಲಿ ಬಸವಣ್ಣನವರ ವಚನವೊಂದನ್ನು ನೆನಪಿಸಿಕೊಳ್ಳಬಹುದು:
“ತಮಂಧ ಘನ, ಜ್ಯೋತಿ ಕಿರಿದೆನ್ನಬಹುದೆ?” )
ಗೋಡೆ ಎಂದರೆ ಮನಸ್ಸಿನ ಭಿತ್ತಿ. ಜ್ಞಾನೋದಯದ ನಂತರ, ಈ ಗೋಡೆಯ ಮೇಲೆ, ಎಷ್ಟೇ ಸುಣ್ಣ ಹಚ್ಚಲಿ, ಯಾವುದೇ ಬಣ್ಣ ಹಚ್ಚಲಿ, ಅದನ್ನು ಗೋಡೆಯೇ ತಿಂದು ಹಾಕಿ ಬಿಡುತ್ತದೆ. ಗೋಡೆಯ surface ಮತ್ತೂ ನಿರ್ವರ್ಣವಾಗಿ, ಶುಭ್ರವಾಗಿಯೇ ಉಳಿಯುತ್ತದೆ.
ಆಡಲು ಬಂದ ಪಾತರದವಳು ಅಂದರೆ ಕುಣಿಯಲು ಬಂದ ನರ್ತಕಿ, ಅರ್ಥಾತ್ ಸಂಸಾರದಲ್ಲಿ ಆಡಲು ಬಂದ ಜೀವಾತ್ಮ. ಮದ್ದಲೆ ಅಂದರೆ ಪರಮಾತ್ಮ ಬಾರಿಸುತ್ತಿರುವ ಜ್ಞಾನದ ಮದ್ದಲೆ.
ಈ ರೂಪಕಕ್ಕೆ ಒಂದು ವಿಶಿಷ್ಟ ಹಿನ್ನೆಲೆ ಇದೆ. ಚಾಮರಸ ಬರೆದ ‘ಪ್ರಭುಲಿಂಗ ಲೀಲೆ’ ಕಾವ್ಯದಲ್ಲಿ ಅಲ್ಲಮನಿಗೂ, ಮಾಯಾದೇವಿಗೂ ಸ್ಪರ್ಧೆ ಏರ್ಪಡುತ್ತದೆ. ಅಲ್ಲಮ ಮದ್ದಲೆ ಬಾರಿಸುತ್ತಿದ್ದಂತೆ, ಅದರ ತಾಳಕ್ಕೆ ತಕ್ಕಂತೆ ಕುಣಿಯಲು ಮಾಯಾದೇವಿಗೆ ಸಾಧ್ಯವಾಗುವದಿಲ್ಲ. ಅವಳು ಸೋಲೊಪ್ಪಿಕೊಳ್ಳುತ್ತಾಳೆ.
‘ಪ್ರಭುಲಿಂಗ ಲೀಲೆ’ ಶರೀಫರಿಗೆ ಪ್ರಿಯವಾದ ಕಾವ್ಯ.
ತಾವೇ ಮಾಡಿಕೊಂಡ ಇದರ ಹಸ್ತಪ್ರತಿಯೊಂದನ್ನು ಅವರು ಯಾವಾಗಲೂ ತಮ್ಮ ಬಳಿಯಲ್ಲಿಯೇ ಇಟ್ಟುಕೊಳ್ಳುತ್ತಿದ್ದರಂತೆ.
ಎರಡನೆಯ ನುಡಿಯಲ್ಲಿ ಶರೀಫರು ಸಂಸಾರದಲ್ಲಿರುವ ಸಾಧಕನ ಪ್ರಗತಿಯ ರೀತಿಯನ್ನು ವರ್ಣಿಸಿದ್ದಾರೆ:
ಒಳ್ಳು ಒನಕಿಯ ನುಂಗಿ
ಬೀಸುಕಲ್ಲು ಗೂಟವ ನುಂಗಿ
ಕುಟ್ಟಲಿಕೆ ಬಂದ ಮುದುಕಿಯ ನೊಣವು ನುಂಗಿತ ||೨||
ಒಳ್ಳು ಹಾಗೂ ಬೀಸುವ ಕಲ್ಲುಗಳನ್ನು ಶರೀಫರು ಸಂಸಾರಕ್ಕೂ, ಒನಕೆ ಹಾಗೂ ಬೀಸುವ ಕಲ್ಲಿನ ಗೂಟವನ್ನು ಸಾಧಕನ ಕರ್ಮಗಳಿಗೂ ಹೋಲಿಸಿದ್ದಾರೆ. ಕುಟ್ಟಲಿಕೆ ಬಂದ ಮುದುಕಿ ಅಂದರೆ ಈ ಸಂಸಾರದಲ್ಲಿ ಬಂದು, ಕರ್ಮಗಳಿಂದ ಪಕ್ವವಾದ ಜೀವಾತ್ಮ.
ಈ ಜೀವಾತ್ಮ is hammered on the anvil of life.
ಆದರೆ ಆತ ಪಕ್ವವಾದಾಗ, ಆತನ ಕರ್ಮಗಳು ಕರಗಿ ಹೋಗುತ್ತವೆ.
ಇಂತಹ ಜೀವಾತ್ಮನನ್ನು ನೊಣದಷ್ಟು ಸಣ್ಣಗಿನ ಜ್ಞಾನ ತಿಂದು ಹಾಕುತ್ತದೆ.
ಮೂರನೆಯ ನುಡಿಯಲ್ಲಿ ಶರೀಫರು ಸಂಸಾರ ಹಾಗೂ ಕರ್ಮಗಳನ್ನು ಬೇರೊಂದು ರೀತಿಯಲ್ಲಿ ವರ್ಣಿಸುತ್ತಾರೆ:
ಹಗ್ಗ ಮಗ್ಗವ ನುಂಗಿ
ಮಗ್ಗವ ಲಾಳಿ ನುಂಗಿ
ಮಗ್ಗದಾಗಿರುವ ಅಣ್ಣನ ಕುಣಿಯು ನುಂಗಿತ
ಮಗ್ಗವೆಂದರೆ ಸಂಸಾರ. ಮಗ್ಗವನ್ನು ಕಟ್ಟಿರುವ ಹಗ್ಗವೆಂದರೆ ಸಂಸಾರಕ್ಕೆ ಜೋತು ಬೀಳುವ ಮನಸ್ಸು.
ಮಗ್ಗದಲ್ಲಿ ಒಮ್ಮೆ ಅತ್ತ(=ಒಳ್ಳೆಯದರತ್ತ) ಒಮ್ಮೆ ಇತ್ತ(=ಕೆಡುಕಿನತ್ತ) ಸರಿಯುವ ಲಾಳಿ ಎಂದರೆ ಜೀವಾತ್ಮನೆಸಗುವ ಕರ್ಮಗಳು.
ಜ್ಞಾನವನ್ನು ಬಯಸುವ ಸಾಧಕನು ಈ ಸಂಸಾರದಲ್ಲಿ ಸಿಲುಕಲಾರ.
ಆತನ ಮನಸ್ಸು ಈ ಸಂಸಾರವನ್ನು ತಿಂದು ಹಾಕುತ್ತದೆ ಅಂದರೆ ನಾಶ ಮಾಡುತ್ತದೆ ಎಂದು ಶರೀಫರು ಹೇಳುತ್ತಾರೆ.
ಇದಾದ ಮೇಲೆ ಸಂಸಾರವೆನ್ನುವ ಮಗ್ಗದಲ್ಲಿ ನೇಯಲು ಕುಳಿತ ಅಣ್ಣನನ್ನು ಅಂದರೆ ಜೀವಾತ್ಮನನ್ನು ಮಗ್ಗದ ಕೆಳಗಿರುವ ಕುಣಿ (=space excavated below the loom for footwork) ನುಂಗಿ ಹಾಕುತ್ತದೆ.
ಅಂದರೆ ಆತನಿಗೆ ಜ್ಞಾನೋದಯವಾಗುತ್ತದೆ !
ನಾಲ್ಕನೆಯ ನುಡಿಯಲ್ಲಿಯೂ ಸಹ ಇದೇ ವಿಷಯವನ್ನು ಶರೀಫರು ಬೇರೆ ರೂಪಕಗಳ ಮೂಲಕ ವಿವರಿಸುತ್ತಾರೆ:
ಎತ್ತು ಜತ್ತಗಿ ನುಂಗಿ
ಬತ್ತ ಬಾನವ ನುಂಗಿ
ಮುಕ್ಕಟ ತಿರುವೊ ಅಣ್ಣನ ಮೇಳಿ ನುಂಗಿತ
ಹೊಲವನ್ನು ಊಳಲು ಎತ್ತಿನ ಕೊರಳಿಗೆ ಜತ್ತಗಿ (=ನೊಗಕ್ಕೆ ಹಾಗು ಎತ್ತಿನ ಕೊರಳಿಗೆ ಕಟ್ಟುವ ಪಟ್ಟಿ) ಕಟ್ಟಿರುತ್ತಾರೆ.
ಸಂಸಾರವೆಂಬ ಹೊಲವನ್ನು ಊಳಲು ಬಂದ ಎತ್ತು ಇದು.
ಇದು ತನ್ನನ್ನು ನೊಗಕ್ಕೆ ಅಂದರೆ ಕರ್ಮಗಳಿಗೆ ಬಂಧಿಸಿದ ಜತ್ತಗಿ ಅಂದರೆ ಕರ್ಮಪಾಶವನ್ನೆ ತಿಂದು ಹಾಕಿದೆ. (ಸಾಧನೆಯ ಸಹಾಯದಿಂದ).
ಬಾನ ಅಂದರೆ ದೇವರೆದುರಿಗೆ ಇಟ್ಟ ಎಡಿ, ನೈವೇದ್ಯ.
ಹೊಲದಲ್ಲಿ ದೇವರ ಎದುರಿಗೆ ಇಡಲಾದ ಈ ನೈವೇದ್ಯದ ಅನ್ನವನ್ನು ಬತ್ತವೇ ತಿಂದು ಹಾಕಿದೆ.
ಅರ್ಥಾತ್ ಈ ಸಾಧಕನ ಕರ್ಮಪಾಕಗಳು ಶಿಥಿಲವಾಗುತ್ತಿವೆ.
ಈ ಸಾಧಕನು ಮುಕ್ಕಟೆಯಾಗಿ (ಬೇಗ ಬೇಗನೇ), ಹೊಲವನ್ನು ಊಳುತ್ತಿದ್ದಾನೆ. ಅವನನ್ನು ಮೇಳಿ (=?) ನುಂಗಿ ಹಾಕಿದೆ. ಮೇಳಿ ಅಂದರೆ ಒಕ್ಕಲುತನದ ಸಾಧನವಿರಬಹುದು.
ಐದನೆಯ ನುಡಿಯಲ್ಲಿ ಶರೀಫರು ಸಾಧಕನು ಆಧ್ಯಾತ್ಮದ ಕೊನೆ ಮುಟ್ಟಿದ್ದನ್ನು ವಿವರಿಸಿದ್ದಾರೆ:
ಗುಡ್ಡ ಗಂವ್ಹರ ನುಂಗಿ
ಗಂವ್ಹರ ಇರಿವೆ ನುಂಗಿ
ಗುರುಗೋವಿಂದನ ಪಾದ ಆತ್ಮ ನುಂಗಿತ
ಬಹುಶ: ಗುಡ್ಡ ಎಂದರೆ ಅನಾದಿ-ಅನಂತನಾದ ಚಿತ್ ಸ್ವರೂಪನಾದ ಪರಮಾತ್ಮ.
ಈ ಪರಮಾತ್ಮನು ಗುಡ್ಡದಲ್ಲಿಯೆ ಇರುವ ಗಂವ್ಹರವನ್ನು (=ಗವಿಯನ್ನು) ಅಂದರೆ ಅನಾದಿ-ಅನಂತವಾದ ಸಂಸಾರವನ್ನು ನುಂಗಿದ್ದಾನೆ.
ಈ ಸಂಸಾರವು ತನ್ನಲ್ಲಿರುವ ಇರಿವೆಯನ್ನು ಅಂದರೆ ಕಾಲ ದೇಶದಿಂದ ಬಂಧಿತನಾದ ಅಸ್ತಿತ್ವವನ್ನು ಅಂದರೆ ಜೀವಾತ್ಮನನ್ನು ನುಂಗಿ ಹಾಕಿದೆ.
ಇದರರ್ಥವೆಂದರೆ ಪರಮಾತ್ಮನಲ್ಲಿ ಜೀವಾತ್ಮ ಲೀನವಾಗಿದೆ.
ಇದೇ ಮಾತನ್ನು ಶರೀಫರು ಹೀಗೂ ಹೇಳಿದ್ದಾರೆ:
‘ಗುರುಗೋವಿಂದನ ಪಾದ ಆತ್ಮ ನುಂಗಿತ ’.
ಶರೀಫರ ಈ ಒಡಪಿನ ಗೀತೆಯಲ್ಲಿರುವ ಒಂದು ರಚನಾವೈಶಿಷ್ಟ್ಯವನ್ನು ಗಮನಿಸಬೇಕು.
ಪ್ರತಿಯೊಂದು ನುಡಿಯಲ್ಲಿ ಮೊದಲ ಎರಡು ಸಾಲುಗಳು ನಿರ್ಜೀವ ಉಪಕರಣಗಳನ್ನು ಬಣ್ಣಿಸುತ್ತವೆ.
ಉದಾ: ಒಳ್ಳು, ಒನಕೆ, ಬಿಸುವ ಕಲ್ಲು. ಗೋಡೆ, ಹಗ್ಗ, ಮಗ್ಗ ಇತ್ಯಾದಿ.
ಪ್ರತಿ ನುಡಿಯ ಕೊನೆಯ ಸಾಲಿನಲ್ಲಿ ಜೀವಾತ್ಮನ ವರ್ಣನೆ ಇದೆ;
ಉದಾ: ಪಾತರದವಳು, ಮುದಕಿ, ಅಣ್ಣ ಹಾಗು ಆತ್ಮ .
ಈ ರೀತಿಯಾಗಿ, ಸಂಸಾರದಲ್ಲಿಳಿದ ಸಾಧಕನ ಜ್ಞಾನೋದಯವಾಗುತ್ತಿರುವ ಘಟ್ಟದಿಂದ ಪ್ರಾರಂಭಿಸಿ, ಆತ ಪರಮಾತ್ಮನಲ್ಲಿ ಲೀನವಾಗುವ ಘಟ್ಟದವರೆಗಿನ ವರ್ಣನೆ ಇಲ್ಲಿದೆ.
ಆದರೆ, ಕವನದಲ್ಲಿ ಸಾಧಕನ ಹಂತಹಂತದ ಬೆಳವಣಿಗೆಯನ್ನು ತೋರಿಸಿಲ್ಲ.
ವಿಭಿನ್ನ ರೂಪಕಗಳನ್ನು ಉಪಯೋಗಿಸುತ್ತ, ಅದೇ ಸಾರವನ್ನು ಶರೀಫರು ಮತ್ತೆ ಮತ್ತೆ ಹೇಳಿದ್ದಾರೆ.
ಇದರಲ್ಲಿ ತಪ್ಪೇನೂ ಇಲ್ಲ.
ಏಕೆಂದರೆ ಇದು ಕೋಣೆಯಲ್ಲಿ ಕುಳಿತು ರಚಿಸಿದ ಕವನವಲ್ಲ .
ತಮ್ಮ ಎದುರಿಗೆ ನೆರೆದು ನಿಂತಿರುವ ಸಾಮಾನ್ಯ ಹಳ್ಳಿಗರನ್ನು ಉದ್ದೇಶಿಸಿ, ಸ್ಫೂರ್ತಿ ಉಕ್ಕಿದಾಗ ಹಾಡಿದ ಹಾಡಿದು.
ಹಾಡು ಕೇಳುತ್ತಿರುವ ಸಾಮಾನ್ಯ ಹಳ್ಳಿಗನಿಗಾಗಿ ಅವನ ಹೃದಯಕ್ಕೆ ಅರ್ಥವಾಗುವಂತಹ ಭಾಷೆಯಲ್ಲಿ ಹಾಡಿದ ಹಾಡಿದು.
………………………………………………………..
( ಈ ಲೇಖನ ಬರೆಯುವಾಗ ಸಹಾಯ ಮಾಡಿದ ನನ್ನ ಶ್ರೀಮತಿ ವನಮಾಲಾಳಿಗೆ ಋಣಿಯಾಗಿದ್ದೇನೆ.)
ಇಂತಹ ಹಾಡುಗಳನ್ನು ಶರೀಫರಲ್ಲದೆ, ಕನಕದಾಸರು ಹಾಗೂ ಪುರಂದರದಾಸರೂ ಸಹ ರಚಿಸಿದ್ದಾರೆ.
‘ಬಯಲು ಆಲಯದೊಳಗೊ ಆಲಯವು ಬಯಲೊಳಗೊ
ಬಯಲು ಆಲಯವೆರಡು ನಿನ್ನ ಒಳಗೊ’ ಎನ್ನುವ ಕನಕದಾಸರ ಹಾಡನ್ನು ಉದಾಹರಣೆಗೆ ನೋಡಬಹುದು.
ಅದರಂತೆ ಪುರಂದರದಾಸರ ಈ ರಚನೆ ಸಹ ಪ್ರಸಿದ್ಧವಿದೆ:
“ಸುಳ್ಳು ನಮ್ಮಲ್ಲಿಲ್ಲವಯ್ಯಾ
ಸುಳ್ಳೆ ನಮ್ಮನಿ ದೇವರು”.
………………………………………………………….
‘ಕೋಡಗನ್ನ ಕೋಳಿ ನುಂಗಿತ’ ಎನ್ನುವ ಪದದಲ್ಲಿ ಶರಿಫರು ಮನಸ್ಸನ್ನು ಮರ್ಕಟಕ್ಕೆ ಹಾಗು ಜ್ಞಾನೋದಯವನ್ನು ಕೋಳಿಗೆ ಹೋಲಿಸಿ ಹಾಡಿದ್ದಾರೆ. ಸಂಸಾರವೆಂಬ ವೃಕ್ಷಕ್ಕೆ ವಿಷಯಗಳು ಟೊಂಗೆಗಳಿದ್ದಂತೆ. ಮನಸ್ಸೆಂಬ ಮಂಗವು ಸಂಸಾರದಲ್ಲಿ ವಿಷಯದಿಂದ ವಿಷಯಕ್ಕೆ ಹಾರುತ್ತ ಸುಖಪಡುತ್ತದೆ.
ಕೋಳಿಯ ಕೂಗು ಬೆಳಗಿನ ಸೂಚನೆ. ಶರೀಫರ ಹಾಡಿನಲ್ಲಿ ಇದು ಆಧ್ಯಾತ್ಮಿಕ ಬೆಳಗನ್ನು ಸೂಚಿಸುವ ಕೋಳಿ. ಆಧ್ಯಾತ್ಮಿಕ ಜ್ಞಾನೋದಯವು ಕೋಡಗದಂತಿರುವ ಮನಸ್ಸನ್ನು ನುಂಗಿ ಹಾಕುತ್ತದೆ ಎಂದು ಶರೀಫರು ಹೇಳುತ್ತಾರೆ.
ಪುರಂದರದಾಸರೂ ಸಹ ತಮ್ಮ ಒಂದು ರಚನೆಯಲ್ಲಿ ಮರ್ಕಟದಂತಿರುವ ಮನಸ್ಸನ್ನು ಡೊಂಕು ಬಾಲದ ನಾಯಿಗೆ ಹೋಲಿಸಿದ್ದಾರೆ. ತಿದ್ದಲು ಎಷ್ಟೇ ಪ್ರಯತ್ನಿಸಿದರೂ ಸಹ ಈ ಮನಸ್ಸು ನಾಯಿಯ ಬಾಲದಂತೆ ಡೊಂಕಾಗಿಯೇ ಉಳಿಯುತ್ತದೆ. ಅರ್ಥಾತ್ ಈ ಮನಸ್ಸಿಗೆ ಜ್ಞಾನೋದಯವಿನ್ನೂ ಆಗಿಲ್ಲ. ಪುರಂದರದಾಸರ ಈ ಹಾಡಿನಲ್ಲಿ ಒಂದು ವಿಶೇಷತೆ ಇದೆ. ಹಾಡಿನ ಪಲ್ಲವನ್ನು ನೋಡೋಣ:
“ಡೊಂಕು ಬಾಲದ ನಾಯಕರೆ,
ನೀವೇನೂಟವ ಮಾಡಿದಿರಿ?” ||ಪಲ್ಲ||
ಡೊಂಕು ಬಾಲದ ನಾಯಕರು ಎಂದರೆ ‘ನಾಯಿ’ ಎನ್ನುವದು ತಿಳಿದ ವಿಷಯವೇ.
ಆದರೆ ‘ನಾಯಕರು’ ಎನ್ನುವಲ್ಲಿ ಒಂದು ಹೆಚ್ಚಿನ ಅರ್ಥವಿದೆ.
ಪುರಂದರದಾಸರ ಪೂರ್ವಾಶ್ರಮದ ಹೆಸರು: ಶ್ರೀನಿವಾಸ ನಾಯಕ.
ದಾಸರು “ಡೊಂಕು ಬಾಲದ ನಾಯಕರೆ” ಎನ್ನುವಾಗ ತಮ್ಮನ್ನೇ ಸಂಬೋಧಿಸಿಕೊಳ್ಳುತ್ತಿದ್ದಾರೆ !
. . .. .. . . . . . . .. . . . . . . . . . .. . . . . . . .
ಶರೀಫರ ರಚನೆಯ ಪೂರ್ತಿ ಪಾಠ ಹೀಗಿದೆ:
ಕೋಡಗನ್ನ ಕೋಳಿ ನುಂಗಿತ
ನೋಡವ್ವ ತಂಗಿ ||ಪಲ್ಲ||
ಆಡು ಆನೆಯ ನುಂಗಿ
ಗೋಡೆ ಸುಣ್ಣವ ನುಂಗಿ
ಆಡಲು ಬಂದ ಪಾತರದವಳ ಮದ್ಲಿ ನುಂಗಿತ ||೧||
ಒಳ್ಳು ಒನಕಿಯ ನುಂಗಿ
ಬೀಸುಕಲ್ಲು ಗೂಟವ ನುಂಗಿ
ಕುಟ್ಟಲಿಕೆ ಬಂದ ಮುದುಕಿಯ ನೊಣವು ನುಂಗಿತ ||೨||
ಹಗ್ಗ ಮಗ್ಗವ ನುಂಗಿ
ಮಗ್ಗವ ಲಾಳಿ ನುಂಗಿ
ಮಗ್ಗದಾಗಿರುವ ಅಣ್ಣನ ಕುಣಿಯು ನುಂಗಿತ ||೩||
ಎತ್ತು ಜತ್ತಗಿ ನುಂಗಿ
ಬತ್ತ ಬಾನವ ನುಂಗಿ
ಮುಕ್ಕಟ ತಿರುವೊ ಅಣ್ಣನ ಮೇಳಿ ನುಂಗಿತ ||೪||
ಗುಡ್ಡ ಗಂವ್ಹರ ನುಂಗಿ
ಗಂವ್ಹರ ಇರಿವೆ ನುಂಗಿ
ಗುರುಗೋವಿಂದನ ಪಾದ ಆತ್ಮ ನುಂಗಿತ ||೫||
. . .. . . . . .. . . . . . . .. . . . . . . . .. . .
ಶರೀಫರು ಆಧುನಿಕ ಕಾಲದ ಕವಿಗಳಂತೆ, ಮುಚ್ಚಿದ ಕೋಣೆಯಲ್ಲಿ ಕುಳಿತು, ಪೆನ್ನು ಅಥವಾ ಪೆನ್ಸಿಲಿನಿಂದ ಕವನ ಬರೆಯುವ ಕವಿ ಅಲ್ಲ. ತಮ್ಮ ಸುತ್ತ ನೆರೆದಿರುವ ಜನಸಮುದಾಯದ ಎದುರಿಗೆ ಸ್ಫೂರ್ತಿಯುತವಾಗಿ ಕವನ ಹಾಡುವದು ಅವರ ಪದ್ಧತಿ. ಜನಸಮುದಾಯಕ್ಕೆ ಜ್ಞಾನದ ಬೆಳಕು ಸಿಗಲಿ ಎನ್ನುವದು ಅದರ ಉದ್ದೇಶ.
ಹೀಗಾಗಿ ಇವರ ಕವನಗಳ ರಚನೆಯನ್ನು ಗಮನಿಸಿದಾಗ, ಕೆಲವೊಂದು ಕವನದ ಸಾಲುಗಳಲ್ಲಿ repetitiveness ಕಾಣುವದು ಸಹಜ.
‘ಕೋಡಗನ್ನ ಕೋಳಿ ನುಂಗಿತ’ ಕವನದ ಎಲ್ಲಾ ನುಡಿಗಳಲ್ಲಿ ಕಂಡು ಬರುವದು ಒಂದೇ ಅರ್ಥ.
ಮೊದಲ ನುಡಿಯ ನಂತರ, ಕವನ ಮುಂದೆ ಸಾಗಿದಂತೆ ಅರ್ಥದ ಬೆಳವಣಿಗೆ ಸಾಗುವದಿಲ್ಲ.
ಆದರೆ ಆ ಕಾರಣಕ್ಕಾಗಿ ಕವನದ ಸೌಂದರ್ಯವೇನೂ ಕಡಿಮೆಯಾಗಿಲ್ಲ.
ಕವನದ ಪಲ್ಲದಲ್ಲಿ ಕವಿಯು ‘ಕೋಳಿ ಅಂದರೆ ಆಧ್ಯಾತ್ಮಿಕ ಜ್ಞಾನೋದಯವು ಕೋಡಗವನ್ನು ಅಂದರೆ ಮಂಗನಂತಿರುವ ಮನಸ್ಸನ್ನು ತಿಂದು ಹಾಕಿದೆ’ ಎಂದು ಹೇಳುತ್ತಾರೆ. ಇದೇ ಮಾತನ್ನು ಮುಂದಿನ ನುಡಿಯಲ್ಲಿ, ವಿಭಿನ್ನ ರೂಪಕಗಳ ಮೂಲಕ ಮತ್ತೆ ಮತ್ತೆ ಸ್ಪಷ್ಟ ಪಡಿಸುತ್ತಾರೆ:
ಆಡು ಆನೆಯ ನುಂಗಿ
ಗೋಡೆ ಸುಣ್ಣವ ನುಂಗಿ
ಆಡಲು ಬಂದ ಪಾತರದವಳ ಮದ್ಲಿ ನುಂಗಿತ ||೧||
ಆಡು ಅಂದರೆ ಜ್ಞಾನ. ಇದು ಸಣ್ಣದು . ಸಂಸಾರದ ಆಸೆಗಳಿಗೋ ಆನೆಯ ಬಲ.
ಇಂತಹ ಆನೆಯನ್ನು ಆಡಿನಂತಿರುವ ಜ್ಞಾನ ತಿಂದು ಹಾಕಿಬಿಡುತ್ತದೆ ಎಂದು ಶರೀಫರು ಹಾಡುತ್ತಾರೆ.
(ಈ ಸಂದರ್ಭದಲ್ಲಿ ಬಸವಣ್ಣನವರ ವಚನವೊಂದನ್ನು ನೆನಪಿಸಿಕೊಳ್ಳಬಹುದು:
“ತಮಂಧ ಘನ, ಜ್ಯೋತಿ ಕಿರಿದೆನ್ನಬಹುದೆ?” )
ಗೋಡೆ ಎಂದರೆ ಮನಸ್ಸಿನ ಭಿತ್ತಿ. ಜ್ಞಾನೋದಯದ ನಂತರ, ಈ ಗೋಡೆಯ ಮೇಲೆ, ಎಷ್ಟೇ ಸುಣ್ಣ ಹಚ್ಚಲಿ, ಯಾವುದೇ ಬಣ್ಣ ಹಚ್ಚಲಿ, ಅದನ್ನು ಗೋಡೆಯೇ ತಿಂದು ಹಾಕಿ ಬಿಡುತ್ತದೆ. ಗೋಡೆಯ surface ಮತ್ತೂ ನಿರ್ವರ್ಣವಾಗಿ, ಶುಭ್ರವಾಗಿಯೇ ಉಳಿಯುತ್ತದೆ.
ಆಡಲು ಬಂದ ಪಾತರದವಳು ಅಂದರೆ ಕುಣಿಯಲು ಬಂದ ನರ್ತಕಿ, ಅರ್ಥಾತ್ ಸಂಸಾರದಲ್ಲಿ ಆಡಲು ಬಂದ ಜೀವಾತ್ಮ. ಮದ್ದಲೆ ಅಂದರೆ ಪರಮಾತ್ಮ ಬಾರಿಸುತ್ತಿರುವ ಜ್ಞಾನದ ಮದ್ದಲೆ.
ಈ ರೂಪಕಕ್ಕೆ ಒಂದು ವಿಶಿಷ್ಟ ಹಿನ್ನೆಲೆ ಇದೆ. ಚಾಮರಸ ಬರೆದ ‘ಪ್ರಭುಲಿಂಗ ಲೀಲೆ’ ಕಾವ್ಯದಲ್ಲಿ ಅಲ್ಲಮನಿಗೂ, ಮಾಯಾದೇವಿಗೂ ಸ್ಪರ್ಧೆ ಏರ್ಪಡುತ್ತದೆ. ಅಲ್ಲಮ ಮದ್ದಲೆ ಬಾರಿಸುತ್ತಿದ್ದಂತೆ, ಅದರ ತಾಳಕ್ಕೆ ತಕ್ಕಂತೆ ಕುಣಿಯಲು ಮಾಯಾದೇವಿಗೆ ಸಾಧ್ಯವಾಗುವದಿಲ್ಲ. ಅವಳು ಸೋಲೊಪ್ಪಿಕೊಳ್ಳುತ್ತಾಳೆ.
‘ಪ್ರಭುಲಿಂಗ ಲೀಲೆ’ ಶರೀಫರಿಗೆ ಪ್ರಿಯವಾದ ಕಾವ್ಯ.
ತಾವೇ ಮಾಡಿಕೊಂಡ ಇದರ ಹಸ್ತಪ್ರತಿಯೊಂದನ್ನು ಅವರು ಯಾವಾಗಲೂ ತಮ್ಮ ಬಳಿಯಲ್ಲಿಯೇ ಇಟ್ಟುಕೊಳ್ಳುತ್ತಿದ್ದರಂತೆ.
ಎರಡನೆಯ ನುಡಿಯಲ್ಲಿ ಶರೀಫರು ಸಂಸಾರದಲ್ಲಿರುವ ಸಾಧಕನ ಪ್ರಗತಿಯ ರೀತಿಯನ್ನು ವರ್ಣಿಸಿದ್ದಾರೆ:
ಒಳ್ಳು ಒನಕಿಯ ನುಂಗಿ
ಬೀಸುಕಲ್ಲು ಗೂಟವ ನುಂಗಿ
ಕುಟ್ಟಲಿಕೆ ಬಂದ ಮುದುಕಿಯ ನೊಣವು ನುಂಗಿತ ||೨||
ಒಳ್ಳು ಹಾಗೂ ಬೀಸುವ ಕಲ್ಲುಗಳನ್ನು ಶರೀಫರು ಸಂಸಾರಕ್ಕೂ, ಒನಕೆ ಹಾಗೂ ಬೀಸುವ ಕಲ್ಲಿನ ಗೂಟವನ್ನು ಸಾಧಕನ ಕರ್ಮಗಳಿಗೂ ಹೋಲಿಸಿದ್ದಾರೆ. ಕುಟ್ಟಲಿಕೆ ಬಂದ ಮುದುಕಿ ಅಂದರೆ ಈ ಸಂಸಾರದಲ್ಲಿ ಬಂದು, ಕರ್ಮಗಳಿಂದ ಪಕ್ವವಾದ ಜೀವಾತ್ಮ.
ಈ ಜೀವಾತ್ಮ is hammered on the anvil of life.
ಆದರೆ ಆತ ಪಕ್ವವಾದಾಗ, ಆತನ ಕರ್ಮಗಳು ಕರಗಿ ಹೋಗುತ್ತವೆ.
ಇಂತಹ ಜೀವಾತ್ಮನನ್ನು ನೊಣದಷ್ಟು ಸಣ್ಣಗಿನ ಜ್ಞಾನ ತಿಂದು ಹಾಕುತ್ತದೆ.
ಮೂರನೆಯ ನುಡಿಯಲ್ಲಿ ಶರೀಫರು ಸಂಸಾರ ಹಾಗೂ ಕರ್ಮಗಳನ್ನು ಬೇರೊಂದು ರೀತಿಯಲ್ಲಿ ವರ್ಣಿಸುತ್ತಾರೆ:
ಹಗ್ಗ ಮಗ್ಗವ ನುಂಗಿ
ಮಗ್ಗವ ಲಾಳಿ ನುಂಗಿ
ಮಗ್ಗದಾಗಿರುವ ಅಣ್ಣನ ಕುಣಿಯು ನುಂಗಿತ
ಮಗ್ಗವೆಂದರೆ ಸಂಸಾರ. ಮಗ್ಗವನ್ನು ಕಟ್ಟಿರುವ ಹಗ್ಗವೆಂದರೆ ಸಂಸಾರಕ್ಕೆ ಜೋತು ಬೀಳುವ ಮನಸ್ಸು.
ಮಗ್ಗದಲ್ಲಿ ಒಮ್ಮೆ ಅತ್ತ(=ಒಳ್ಳೆಯದರತ್ತ) ಒಮ್ಮೆ ಇತ್ತ(=ಕೆಡುಕಿನತ್ತ) ಸರಿಯುವ ಲಾಳಿ ಎಂದರೆ ಜೀವಾತ್ಮನೆಸಗುವ ಕರ್ಮಗಳು.
ಜ್ಞಾನವನ್ನು ಬಯಸುವ ಸಾಧಕನು ಈ ಸಂಸಾರದಲ್ಲಿ ಸಿಲುಕಲಾರ.
ಆತನ ಮನಸ್ಸು ಈ ಸಂಸಾರವನ್ನು ತಿಂದು ಹಾಕುತ್ತದೆ ಅಂದರೆ ನಾಶ ಮಾಡುತ್ತದೆ ಎಂದು ಶರೀಫರು ಹೇಳುತ್ತಾರೆ.
ಇದಾದ ಮೇಲೆ ಸಂಸಾರವೆನ್ನುವ ಮಗ್ಗದಲ್ಲಿ ನೇಯಲು ಕುಳಿತ ಅಣ್ಣನನ್ನು ಅಂದರೆ ಜೀವಾತ್ಮನನ್ನು ಮಗ್ಗದ ಕೆಳಗಿರುವ ಕುಣಿ (=space excavated below the loom for footwork) ನುಂಗಿ ಹಾಕುತ್ತದೆ.
ಅಂದರೆ ಆತನಿಗೆ ಜ್ಞಾನೋದಯವಾಗುತ್ತದೆ !
ನಾಲ್ಕನೆಯ ನುಡಿಯಲ್ಲಿಯೂ ಸಹ ಇದೇ ವಿಷಯವನ್ನು ಶರೀಫರು ಬೇರೆ ರೂಪಕಗಳ ಮೂಲಕ ವಿವರಿಸುತ್ತಾರೆ:
ಎತ್ತು ಜತ್ತಗಿ ನುಂಗಿ
ಬತ್ತ ಬಾನವ ನುಂಗಿ
ಮುಕ್ಕಟ ತಿರುವೊ ಅಣ್ಣನ ಮೇಳಿ ನುಂಗಿತ
ಹೊಲವನ್ನು ಊಳಲು ಎತ್ತಿನ ಕೊರಳಿಗೆ ಜತ್ತಗಿ (=ನೊಗಕ್ಕೆ ಹಾಗು ಎತ್ತಿನ ಕೊರಳಿಗೆ ಕಟ್ಟುವ ಪಟ್ಟಿ) ಕಟ್ಟಿರುತ್ತಾರೆ.
ಸಂಸಾರವೆಂಬ ಹೊಲವನ್ನು ಊಳಲು ಬಂದ ಎತ್ತು ಇದು.
ಇದು ತನ್ನನ್ನು ನೊಗಕ್ಕೆ ಅಂದರೆ ಕರ್ಮಗಳಿಗೆ ಬಂಧಿಸಿದ ಜತ್ತಗಿ ಅಂದರೆ ಕರ್ಮಪಾಶವನ್ನೆ ತಿಂದು ಹಾಕಿದೆ. (ಸಾಧನೆಯ ಸಹಾಯದಿಂದ).
ಬಾನ ಅಂದರೆ ದೇವರೆದುರಿಗೆ ಇಟ್ಟ ಎಡಿ, ನೈವೇದ್ಯ.
ಹೊಲದಲ್ಲಿ ದೇವರ ಎದುರಿಗೆ ಇಡಲಾದ ಈ ನೈವೇದ್ಯದ ಅನ್ನವನ್ನು ಬತ್ತವೇ ತಿಂದು ಹಾಕಿದೆ.
ಅರ್ಥಾತ್ ಈ ಸಾಧಕನ ಕರ್ಮಪಾಕಗಳು ಶಿಥಿಲವಾಗುತ್ತಿವೆ.
ಈ ಸಾಧಕನು ಮುಕ್ಕಟೆಯಾಗಿ (ಬೇಗ ಬೇಗನೇ), ಹೊಲವನ್ನು ಊಳುತ್ತಿದ್ದಾನೆ. ಅವನನ್ನು ಮೇಳಿ (=?) ನುಂಗಿ ಹಾಕಿದೆ. ಮೇಳಿ ಅಂದರೆ ಒಕ್ಕಲುತನದ ಸಾಧನವಿರಬಹುದು.
ಐದನೆಯ ನುಡಿಯಲ್ಲಿ ಶರೀಫರು ಸಾಧಕನು ಆಧ್ಯಾತ್ಮದ ಕೊನೆ ಮುಟ್ಟಿದ್ದನ್ನು ವಿವರಿಸಿದ್ದಾರೆ:
ಗುಡ್ಡ ಗಂವ್ಹರ ನುಂಗಿ
ಗಂವ್ಹರ ಇರಿವೆ ನುಂಗಿ
ಗುರುಗೋವಿಂದನ ಪಾದ ಆತ್ಮ ನುಂಗಿತ
ಬಹುಶ: ಗುಡ್ಡ ಎಂದರೆ ಅನಾದಿ-ಅನಂತನಾದ ಚಿತ್ ಸ್ವರೂಪನಾದ ಪರಮಾತ್ಮ.
ಈ ಪರಮಾತ್ಮನು ಗುಡ್ಡದಲ್ಲಿಯೆ ಇರುವ ಗಂವ್ಹರವನ್ನು (=ಗವಿಯನ್ನು) ಅಂದರೆ ಅನಾದಿ-ಅನಂತವಾದ ಸಂಸಾರವನ್ನು ನುಂಗಿದ್ದಾನೆ.
ಈ ಸಂಸಾರವು ತನ್ನಲ್ಲಿರುವ ಇರಿವೆಯನ್ನು ಅಂದರೆ ಕಾಲ ದೇಶದಿಂದ ಬಂಧಿತನಾದ ಅಸ್ತಿತ್ವವನ್ನು ಅಂದರೆ ಜೀವಾತ್ಮನನ್ನು ನುಂಗಿ ಹಾಕಿದೆ.
ಇದರರ್ಥವೆಂದರೆ ಪರಮಾತ್ಮನಲ್ಲಿ ಜೀವಾತ್ಮ ಲೀನವಾಗಿದೆ.
ಇದೇ ಮಾತನ್ನು ಶರೀಫರು ಹೀಗೂ ಹೇಳಿದ್ದಾರೆ:
‘ಗುರುಗೋವಿಂದನ ಪಾದ ಆತ್ಮ ನುಂಗಿತ ’.
ಶರೀಫರ ಈ ಒಡಪಿನ ಗೀತೆಯಲ್ಲಿರುವ ಒಂದು ರಚನಾವೈಶಿಷ್ಟ್ಯವನ್ನು ಗಮನಿಸಬೇಕು.
ಪ್ರತಿಯೊಂದು ನುಡಿಯಲ್ಲಿ ಮೊದಲ ಎರಡು ಸಾಲುಗಳು ನಿರ್ಜೀವ ಉಪಕರಣಗಳನ್ನು ಬಣ್ಣಿಸುತ್ತವೆ.
ಉದಾ: ಒಳ್ಳು, ಒನಕೆ, ಬಿಸುವ ಕಲ್ಲು. ಗೋಡೆ, ಹಗ್ಗ, ಮಗ್ಗ ಇತ್ಯಾದಿ.
ಪ್ರತಿ ನುಡಿಯ ಕೊನೆಯ ಸಾಲಿನಲ್ಲಿ ಜೀವಾತ್ಮನ ವರ್ಣನೆ ಇದೆ;
ಉದಾ: ಪಾತರದವಳು, ಮುದಕಿ, ಅಣ್ಣ ಹಾಗು ಆತ್ಮ .
ಈ ರೀತಿಯಾಗಿ, ಸಂಸಾರದಲ್ಲಿಳಿದ ಸಾಧಕನ ಜ್ಞಾನೋದಯವಾಗುತ್ತಿರುವ ಘಟ್ಟದಿಂದ ಪ್ರಾರಂಭಿಸಿ, ಆತ ಪರಮಾತ್ಮನಲ್ಲಿ ಲೀನವಾಗುವ ಘಟ್ಟದವರೆಗಿನ ವರ್ಣನೆ ಇಲ್ಲಿದೆ.
ಆದರೆ, ಕವನದಲ್ಲಿ ಸಾಧಕನ ಹಂತಹಂತದ ಬೆಳವಣಿಗೆಯನ್ನು ತೋರಿಸಿಲ್ಲ.
ವಿಭಿನ್ನ ರೂಪಕಗಳನ್ನು ಉಪಯೋಗಿಸುತ್ತ, ಅದೇ ಸಾರವನ್ನು ಶರೀಫರು ಮತ್ತೆ ಮತ್ತೆ ಹೇಳಿದ್ದಾರೆ.
ಇದರಲ್ಲಿ ತಪ್ಪೇನೂ ಇಲ್ಲ.
ಏಕೆಂದರೆ ಇದು ಕೋಣೆಯಲ್ಲಿ ಕುಳಿತು ರಚಿಸಿದ ಕವನವಲ್ಲ .
ತಮ್ಮ ಎದುರಿಗೆ ನೆರೆದು ನಿಂತಿರುವ ಸಾಮಾನ್ಯ ಹಳ್ಳಿಗರನ್ನು ಉದ್ದೇಶಿಸಿ, ಸ್ಫೂರ್ತಿ ಉಕ್ಕಿದಾಗ ಹಾಡಿದ ಹಾಡಿದು.
ಹಾಡು ಕೇಳುತ್ತಿರುವ ಸಾಮಾನ್ಯ ಹಳ್ಳಿಗನಿಗಾಗಿ ಅವನ ಹೃದಯಕ್ಕೆ ಅರ್ಥವಾಗುವಂತಹ ಭಾಷೆಯಲ್ಲಿ ಹಾಡಿದ ಹಾಡಿದು.
………………………………………………………..
( ಈ ಲೇಖನ ಬರೆಯುವಾಗ ಸಹಾಯ ಮಾಡಿದ ನನ್ನ ಶ್ರೀಮತಿ ವನಮಾಲಾಳಿಗೆ ಋಣಿಯಾಗಿದ್ದೇನೆ.)
Friday, October 3, 2008
ಅಳಬೇಡ ತಂಗಿ ಅಳಬೇಡ
ಶಿಶುನಾಳ ಶರೀಫರು ೪೦೦ಕ್ಕೂ ಹೆಚ್ಚು ಗೀತೆಗಳನ್ನು ರಚಿಸಿದ್ದಾರೆ. ಅವುಗಳಲ್ಲಿ ಅನೇಕ ಗೀತೆಗಳು ಸಂದರ್ಭಾನುಸಾರವಾಗಿ ಹೊರಹೊಮ್ಮಿದ ಹಾಡುಗಳು. ಇಂತಹ ಹಾಡುಗಳಲ್ಲಿ “ಬಿದ್ದೀಯಬೆ ಮುದುಕಿ”, “ಗಿರಣಿ ವಿಸ್ತಾರ ನೋಡಮ್ಮ” , “ಅಳಬೇಡ ತಂಗಿ ಅಳಬೇಡ” ಮೊದಲಾದವು ಪ್ರಸಿದ್ಧವಾದ ಹಾಡುಗಳಾಗಿವೆ.
ಶರೀಫರು ಒಮ್ಮೆ ತಮ್ಮ ಊರಿನಲ್ಲಿ ನಡೆದು ಹೋಗುತ್ತಿದ್ದಾಗ, ಅದೇ ಮದುವೆಯಾದ ಹುಡುಗಿಯನ್ನು ಗಂಡನ ಮನೆಗೆ ಕಳಸಿ ಕೊಡುತ್ತಿರುವ ನೋಟವನ್ನು ನೋಡಿದರು. ಶರೀಫರ ಕಾಲದಲ್ಲಿ ಬಾಲ್ಯವಿವಾಹಗಳೇ ನಡೆಯುತ್ತಿದ್ದವು. ಹೀಗಾಗಿ, ಗಂಡನ ಮನೆಗೆ ಹೋಗುತ್ತಿರುವ ಹುಡುಗಿ ಅಳುವದು ಸಾಮಾನ್ಯ ದೃಶ್ಯವಾಗಿತ್ತು.
ಆಗ ಶರೀಫರ ಬಾಯಿಂದ ಹೊರಹೊಮ್ಮಿದ ಹಾಡು: ಅಳಬೇಡ ತಂಗಿ ಅಳಬೇಡ.
ಆ ಹಾಡು ಹೀಗಿದೆ:
ಅಳಬೇಡ ತಂಗಿ ಅಳಬೇಡ ನಿನ್ನ
ಕಳುಹಬಂದವರಿಲ್ಲಿ ಉಳುಹಿಕೊಂಬುವರಿಲ್ಲ ||ಪಲ್ಲ||
ಖಡೀಕೀಲೆ ಉಡಿಯಕ್ಕಿ ಹಾಕಿದರವ್ವಾ ಒಳ್ಳೆ
ದುಡಕೀಲೆ ಮುಂದಕ ನೂಕಿದರವ್ವಾ
ಮಿಡಕ್ಯಾಡಿ ಮದಿವ್ಯಾದಿ ಮೋಜು ಕಾಣವ್ವ ಮುಂದ
ಹುಡುಕ್ಯಾಡಿ ಮಾಯದ ಮರವೇರಿದೆವ್ವಾ ||೧||
ಮಿಂಡೇರ ಬಳಗವು ಬೆನ್ನ್ಹತ್ತಿ ಬಂದು ನಿನ್ನ
ರಂಡೇರೈವರು ಕೂಡಿ ನಗುತಲಿ ನಿಂದು
ಕಂಡವರ ಕಾಲ್ಬಿದ್ದು ಕೈಮುಗಿದು ನಿಂತರ
ಗಂಡನ ಮನಿ ನಿನಗ ಬಿಡದವ್ವ ತಂಗಿ ||೨||
ರಂಗೀಲಿ ಉಟ್ಟೀದಿ ರೇಶ್ಮಿದಡಿಶೀರಿ ಮತ್ತs
ಹಂಗನೂಲಿನ ಪರವಿ ಮರತೆವ್ವ ನಾರಿ
ಮಂಗಳ ಮೂರುತಿ ಶಿಶುನಾಳಧೀಶನ
ಅಂಗಳಕ ನೀ ಹೊರತಾದೆವ್ವ ಗೌರಿ ||೩||
..................................
ಹಾಡು ಪ್ರಾರಂಭವಾಗುವದು ಸಮಾಧಾನಪಡಿಸುವ ಮಾತುಗಳಿಂದ:
“ತಂಗೆವ್ವಾ, ನೀ ಎಷ್ಟs ಅತ್ತರೂ, ಅದರಿಂದ ಏನೂ ಪ್ರಯೋಜನ ಇಲ್ಲ.
ಇಲ್ಲಿ ಕೂಡಿದವರು ನಿನ್ನನ್ನು ಕಳಸುವವರೇ ಹೊರತು, ಉಳಿಸಿಕೊಳ್ಳೋರಲ್ಲಾ”.
ಈ ಮಾತುಗಳಲ್ಲಿಯ ವ್ಯಂಗ್ಯವನ್ನು ಗಮನಿಸಬೇಕು. ತೊಂದರೆ ಕೊಟ್ಟವನನ್ನು ಅಥವಾ ಅಪಕಾರ ಮಾಡಿದವನನ್ನು ಬೈಯಲು ಉಪಯೋಗಿಸುವ ಪದಪುಂಜವಿದು : “ ಏನಪಾ, ನಮ್ಮನ್ನೇನ ಕಳಸಬೇಕಂತ ಮಾಡಿಯೇನ?”
ಆದರೆ, ಇಲ್ಲಿ ಕಳಿಸುತ್ತಿರುವದು ಗಂಡನ ಮನೆಗೆ, ಅಂದರೆ ಸಂಸಾರವೆಂಬ ಮಾಯಾಲೋಕಕ್ಕೆ. ಇಂತಹ ಮಾಯಾಪ್ರಪಂಚಕ್ಕೆ ಈ ಹುಡುಗಿಯನ್ನು ನೂಕುತ್ತಿರುವವರ ಸಡಗರ ನೋಡಿರಿ:
“ಖಡೀಕೀಲೆ ಉಡಿಯಕ್ಕಿ ಹಾಕಿದರವ್ವಾ ಒಳ್ಳೆ
ದುಡಕೀಲೆ ಮುಂದಕ ನೂಕಿದರವ್ವಾ”.
ಗಂಡನ ಮನೆಗೆ ಕಳಿಸುವಾಗ ಮಗಳ ಉಡಿಯಲ್ಲಿ ಅಕ್ಕಿ ತುಂಬಿ ಕಳಿಸುವ ಸಂಪ್ರದಾಯವಿದೆಯಲ್ಲವೆ?
ಹಾಗಾಗಿ, ಈ ಹುಡುಗಿಯ ಉಡಿಯಲ್ಲಿ ಖಡಕ್ಕಾಗಿ (=full) ಅಕ್ಕಿ ತುಂಬಿ, ಬಳಿಕ ದುಡುಕುತ್ತ(=ಜೋರಿನಿಂದ) ಅವಳನ್ನು ಮುಂದೆ ನೂಕಿದರಂತೆ!
ಇದೆಲ್ಲ ಹುಡುಗಿಗೂ ಬೇಕಾದದ್ದೆ! ಅವಳು ಮಿಡುಕಿ, ಮಿಡುಕಿ ಅಂದರೆ ಹಂಬಲಿಸಿ ಮದುವೆಯಾದವಳು.
ಈ ಮಾಯೆಯ ಸಂಸಾರವನ್ನು ತಾನೇ ಹುಡುಕಿ ಹೊಕ್ಕವಳು.
ಒಮ್ಮೆ ಹೊಕ್ಕ ಮೇಲೆ ಮುಗಿಯಿತು.
ಇನ್ನು ಅವಳಿಗೆ ಮರಳುವ ಮಾರ್ಗವಿಲ್ಲ. This is path of no return.
ಈಗಾಗಲೇ ಅವಳಿಗೆ ಮಿಂಡರು ಗಂಟು ಬಿದ್ದಿದ್ದಾರೆ.
ಮಿಂಡರು ಅಂದರೆ ಮನಸ್ಸನ್ನು ಹಾದಿಗೆಡಿಸುವ ಪ್ರಲೋಭನೆಗಳು.
ತನ್ನಲ್ಲಿ ಸಂಪತ್ತು ಕೂಡಬೇಕು, ತನ್ನ ಅಂತಸ್ತು ಇತರರಿಗಿಂತ ಹೆಚ್ಚಾಗಬೇಕು, ತಾನು ಸರೀಕರೆದುರಿಗೆ ಮೆರೆಯಬೇಕು, ಇಂತಹ ಸಾಮಾನ್ಯ ಅಪೇಕ್ಷೆಗಳು ಮನಸ್ಸನ್ನು ಸನ್ಮಾರ್ಗದಿಂದ ದೂರ ಸರಿಸುವದರಿಂದ ಇವೆಲ್ಲ ಮಿಂಡರಿದ್ದ ಹಾಗೆ.
ದೇವರ ಆಲೋಚನೆ ಅಂದರೆ ಪಾತಿವ್ರತ್ಯ ; ಇತರ ಆಲೋಚನೆಗಳು ಹಾದರ.
ಇಷ್ಟೇ ಅಲ್ಲದೆ, ಇವಕ್ಕೆಲ್ಲ ಪ್ರೋತ್ಸಾಹ ಕೊಡುವ ‘ಐವರು ರಂಡೆಯರು’ ಅಂದರೆ ನಮ್ಮ ಪಂಚ ಇಂದ್ರಿಯಗಳು : ಕಣ್ಣು, ಕಿವಿ, ಮೂಗು,ನಾಲಗೆ ಹಾಗು ಚರ್ಮ.
ಈ ಐದು ಇಂದ್ರಿಯಗಳೂ ಸಹ ಸುಖಾಪೇಕ್ಷೆ ಮಾಡುತ್ತವೆ, ಅಲ್ಲವೆ?
“ಇಷ್ಟೆಲ್ಲ ಬಂಧನಗಳು ಇದ್ದಾಗ, ಇಲ್ಲಿ ಬಂದಿರುವ ಬಂಧುಗಳ ಕಾಲಿಗೆ ಬಿದ್ದರೆ, ನಿನಗೆ ಸದ್ಗತಿ ಹೇಗೆ ಸಿಕ್ಕೀತು, ತಂಗೆವ್ವಾ? ಇನ್ನು ನಿನಗೆ ಮಾಯಾಸಂಸಾರ ತಪ್ಪದು. ಮೋಜು ಬಯಸಿ ಮದಿವ್ಯಾದಿ, ಈಗ ಮೋಜನ್ನು ಅನುಭವಿಸು”, ಎಂದು ಶರೀಫರು ಹೇಳುತ್ತಾರೆ.
ಶರೀಫರು ಆ ಹುಡುಗಿಗೆ ಈ ಮಾಯಾಸಂಸಾರದಲ್ಲಿದ್ದ ಉತ್ಸಾಹವನ್ನು , ಆಸಕ್ತಿಯನ್ನು ಗಮನಿಸಿ ಈ ರೀತಿ ಹೇಳುತ್ತಾರೆ:
“ರಂಗೀಲಿ ಉಟ್ಟೀದಿ ರೇಶ್ಮಿದಡಿಶೀರಿ ”
ದಡಿ ಅಂದರೆ ಅಂಚು. ರಂಗೀಲಿ(=ರಂಗಿನಲ್ಲಿ) ಅಂದರೆ ಉತ್ಸಾಹದಿಂದ ರೇಶಿಮೆ ಸೀರೆ ಉಟ್ಟಿದ್ದಾಳೆ.
ಆದರೆ, ಈ ಹುಡುಗಿ ಹಂಗನೂಲಿನ ಪರವಿಯನ್ನು ಮರೆತು ಬಿಟ್ಟಿದ್ದಾಳೆ.
ಹಂಗನೂಲು ಅಂದರೆ, ಕೈಯಿಂದ ತಯಾರಿಸಿದ ಹತ್ತಿಯ ನೂಲು. ಅದರ ಪರವಿಯನ್ನು ಈ ಹುಡುಗಿ ಮರೆತಿದ್ದಾಳೆ. ಪರವಿ ಅಂದರೆ ಪರವಾಹ್ ಅನ್ನುವ ಉರ್ದು ಪದ ಅಂದರೆ ಕಾಳಜಿ, ಚಿಂತೆ, care, bother.
ಹೇಗೆ ಕೈಮಗ್ಗದ ಹತ್ತಿಯ ಬಟ್ಟೆ ನಿಸರ್ಗಸಹಜವಾಗಿದೆಯೊ ಹಾಗೆಯೇ ದೇವರ ನೆನಪು ನಮ್ಮ ಮನಸ್ಸಿಗೆ ಹತ್ತಿರವಾದದ್ದು. ಕೃತಕ ಹಾಗು ಆಡಂಬರದ ರೇಶಿಮೆ ಸೀರೆ ಎಂದರೆ ಸಂಸಾರದ ವೈಭವ. ಈ ವೈಭವಕ್ಕೆ ನೀನು ಮನಸೋತರೆ, ನೀನು ಮಂಗಳಮೂರುತಿ ದೇವರ ಸಾನ್ನಿಧ್ಯಕ್ಕೆ ಹೊರತಾಗುತ್ತೀ ಎಂದು ಶರೀಫರು ಎಚ್ಚರಿಸುತ್ತಾರೆ.
ಶರೀಫರು ‘ಮಂಗಳಮೂರುತಿ’ ಎನ್ನುವ ಪದವನ್ನು ಉದ್ದೇಶಪೂರ್ವಕವಾಗಿ ಬಳಸಿದ್ದಾರೆ. ಏಕೆಂದರೆ, ultimately ನಮಗೆ ಮಂಗಳವಾಗುವದು ಪಾರಮಾರ್ಥಿಕ ಚಿಂತನೆಯಿಂದಲೇ ಹೊರತು, ಸಾಂಸಾರಿಕ ಆಡಂಬರದಿಂದಲ್ಲ.
ಲೌಕಿಕ ಪ್ರತಿಮೆಗಳಿಗೆ ಆಧ್ಯಾತ್ಮಿಕ ಅರ್ಥವನ್ನು ನೀಡುವದು ಶರೀಫರ ವೈಶಿಷ್ಟ್ಯವಾಗಿದೆ. ಮಿಂಡೇರ ಬಳಗ, ರೇಶಿಮೆ ಸೀರಿ ಮೊದಲಾದ ಪ್ರತಿಮೆಗಳು ಅಚ್ಚ ದೇಸಿ ಪ್ರತಿಮೆಗಳು. ಇದರ ಜೊತೆಗೇ ಮಾಯದ ಮರದಂತಹ ಅಚ್ಚರಿಯ ಪ್ರತಿಮೆಗಳನ್ನೂ ಅವರು ಸಂಯೋಜಿಸುತ್ತಾರೆ. ಈ ರೀತಿಯಲ್ಲಿ ಶರೀಫರು ಲೌಕಿಕವಾಗಿ ಪ್ರಾರಂಭಿಸಿದ ಹಾಡನ್ನು ಆಧ್ಯಾತ್ಮಿಕ ಚಿಂತನೆಗೆ ಅತ್ಯಂತ ಸಹಜವಾಗಿ ತಿರುಗಿಸುತ್ತಾರೆ.
ಶರೀಫರು ಒಮ್ಮೆ ತಮ್ಮ ಊರಿನಲ್ಲಿ ನಡೆದು ಹೋಗುತ್ತಿದ್ದಾಗ, ಅದೇ ಮದುವೆಯಾದ ಹುಡುಗಿಯನ್ನು ಗಂಡನ ಮನೆಗೆ ಕಳಸಿ ಕೊಡುತ್ತಿರುವ ನೋಟವನ್ನು ನೋಡಿದರು. ಶರೀಫರ ಕಾಲದಲ್ಲಿ ಬಾಲ್ಯವಿವಾಹಗಳೇ ನಡೆಯುತ್ತಿದ್ದವು. ಹೀಗಾಗಿ, ಗಂಡನ ಮನೆಗೆ ಹೋಗುತ್ತಿರುವ ಹುಡುಗಿ ಅಳುವದು ಸಾಮಾನ್ಯ ದೃಶ್ಯವಾಗಿತ್ತು.
ಆಗ ಶರೀಫರ ಬಾಯಿಂದ ಹೊರಹೊಮ್ಮಿದ ಹಾಡು: ಅಳಬೇಡ ತಂಗಿ ಅಳಬೇಡ.
ಆ ಹಾಡು ಹೀಗಿದೆ:
ಅಳಬೇಡ ತಂಗಿ ಅಳಬೇಡ ನಿನ್ನ
ಕಳುಹಬಂದವರಿಲ್ಲಿ ಉಳುಹಿಕೊಂಬುವರಿಲ್ಲ ||ಪಲ್ಲ||
ಖಡೀಕೀಲೆ ಉಡಿಯಕ್ಕಿ ಹಾಕಿದರವ್ವಾ ಒಳ್ಳೆ
ದುಡಕೀಲೆ ಮುಂದಕ ನೂಕಿದರವ್ವಾ
ಮಿಡಕ್ಯಾಡಿ ಮದಿವ್ಯಾದಿ ಮೋಜು ಕಾಣವ್ವ ಮುಂದ
ಹುಡುಕ್ಯಾಡಿ ಮಾಯದ ಮರವೇರಿದೆವ್ವಾ ||೧||
ಮಿಂಡೇರ ಬಳಗವು ಬೆನ್ನ್ಹತ್ತಿ ಬಂದು ನಿನ್ನ
ರಂಡೇರೈವರು ಕೂಡಿ ನಗುತಲಿ ನಿಂದು
ಕಂಡವರ ಕಾಲ್ಬಿದ್ದು ಕೈಮುಗಿದು ನಿಂತರ
ಗಂಡನ ಮನಿ ನಿನಗ ಬಿಡದವ್ವ ತಂಗಿ ||೨||
ರಂಗೀಲಿ ಉಟ್ಟೀದಿ ರೇಶ್ಮಿದಡಿಶೀರಿ ಮತ್ತs
ಹಂಗನೂಲಿನ ಪರವಿ ಮರತೆವ್ವ ನಾರಿ
ಮಂಗಳ ಮೂರುತಿ ಶಿಶುನಾಳಧೀಶನ
ಅಂಗಳಕ ನೀ ಹೊರತಾದೆವ್ವ ಗೌರಿ ||೩||
..................................
ಹಾಡು ಪ್ರಾರಂಭವಾಗುವದು ಸಮಾಧಾನಪಡಿಸುವ ಮಾತುಗಳಿಂದ:
“ತಂಗೆವ್ವಾ, ನೀ ಎಷ್ಟs ಅತ್ತರೂ, ಅದರಿಂದ ಏನೂ ಪ್ರಯೋಜನ ಇಲ್ಲ.
ಇಲ್ಲಿ ಕೂಡಿದವರು ನಿನ್ನನ್ನು ಕಳಸುವವರೇ ಹೊರತು, ಉಳಿಸಿಕೊಳ್ಳೋರಲ್ಲಾ”.
ಈ ಮಾತುಗಳಲ್ಲಿಯ ವ್ಯಂಗ್ಯವನ್ನು ಗಮನಿಸಬೇಕು. ತೊಂದರೆ ಕೊಟ್ಟವನನ್ನು ಅಥವಾ ಅಪಕಾರ ಮಾಡಿದವನನ್ನು ಬೈಯಲು ಉಪಯೋಗಿಸುವ ಪದಪುಂಜವಿದು : “ ಏನಪಾ, ನಮ್ಮನ್ನೇನ ಕಳಸಬೇಕಂತ ಮಾಡಿಯೇನ?”
ಆದರೆ, ಇಲ್ಲಿ ಕಳಿಸುತ್ತಿರುವದು ಗಂಡನ ಮನೆಗೆ, ಅಂದರೆ ಸಂಸಾರವೆಂಬ ಮಾಯಾಲೋಕಕ್ಕೆ. ಇಂತಹ ಮಾಯಾಪ್ರಪಂಚಕ್ಕೆ ಈ ಹುಡುಗಿಯನ್ನು ನೂಕುತ್ತಿರುವವರ ಸಡಗರ ನೋಡಿರಿ:
“ಖಡೀಕೀಲೆ ಉಡಿಯಕ್ಕಿ ಹಾಕಿದರವ್ವಾ ಒಳ್ಳೆ
ದುಡಕೀಲೆ ಮುಂದಕ ನೂಕಿದರವ್ವಾ”.
ಗಂಡನ ಮನೆಗೆ ಕಳಿಸುವಾಗ ಮಗಳ ಉಡಿಯಲ್ಲಿ ಅಕ್ಕಿ ತುಂಬಿ ಕಳಿಸುವ ಸಂಪ್ರದಾಯವಿದೆಯಲ್ಲವೆ?
ಹಾಗಾಗಿ, ಈ ಹುಡುಗಿಯ ಉಡಿಯಲ್ಲಿ ಖಡಕ್ಕಾಗಿ (=full) ಅಕ್ಕಿ ತುಂಬಿ, ಬಳಿಕ ದುಡುಕುತ್ತ(=ಜೋರಿನಿಂದ) ಅವಳನ್ನು ಮುಂದೆ ನೂಕಿದರಂತೆ!
ಇದೆಲ್ಲ ಹುಡುಗಿಗೂ ಬೇಕಾದದ್ದೆ! ಅವಳು ಮಿಡುಕಿ, ಮಿಡುಕಿ ಅಂದರೆ ಹಂಬಲಿಸಿ ಮದುವೆಯಾದವಳು.
ಈ ಮಾಯೆಯ ಸಂಸಾರವನ್ನು ತಾನೇ ಹುಡುಕಿ ಹೊಕ್ಕವಳು.
ಒಮ್ಮೆ ಹೊಕ್ಕ ಮೇಲೆ ಮುಗಿಯಿತು.
ಇನ್ನು ಅವಳಿಗೆ ಮರಳುವ ಮಾರ್ಗವಿಲ್ಲ. This is path of no return.
ಈಗಾಗಲೇ ಅವಳಿಗೆ ಮಿಂಡರು ಗಂಟು ಬಿದ್ದಿದ್ದಾರೆ.
ಮಿಂಡರು ಅಂದರೆ ಮನಸ್ಸನ್ನು ಹಾದಿಗೆಡಿಸುವ ಪ್ರಲೋಭನೆಗಳು.
ತನ್ನಲ್ಲಿ ಸಂಪತ್ತು ಕೂಡಬೇಕು, ತನ್ನ ಅಂತಸ್ತು ಇತರರಿಗಿಂತ ಹೆಚ್ಚಾಗಬೇಕು, ತಾನು ಸರೀಕರೆದುರಿಗೆ ಮೆರೆಯಬೇಕು, ಇಂತಹ ಸಾಮಾನ್ಯ ಅಪೇಕ್ಷೆಗಳು ಮನಸ್ಸನ್ನು ಸನ್ಮಾರ್ಗದಿಂದ ದೂರ ಸರಿಸುವದರಿಂದ ಇವೆಲ್ಲ ಮಿಂಡರಿದ್ದ ಹಾಗೆ.
ದೇವರ ಆಲೋಚನೆ ಅಂದರೆ ಪಾತಿವ್ರತ್ಯ ; ಇತರ ಆಲೋಚನೆಗಳು ಹಾದರ.
ಇಷ್ಟೇ ಅಲ್ಲದೆ, ಇವಕ್ಕೆಲ್ಲ ಪ್ರೋತ್ಸಾಹ ಕೊಡುವ ‘ಐವರು ರಂಡೆಯರು’ ಅಂದರೆ ನಮ್ಮ ಪಂಚ ಇಂದ್ರಿಯಗಳು : ಕಣ್ಣು, ಕಿವಿ, ಮೂಗು,ನಾಲಗೆ ಹಾಗು ಚರ್ಮ.
ಈ ಐದು ಇಂದ್ರಿಯಗಳೂ ಸಹ ಸುಖಾಪೇಕ್ಷೆ ಮಾಡುತ್ತವೆ, ಅಲ್ಲವೆ?
“ಇಷ್ಟೆಲ್ಲ ಬಂಧನಗಳು ಇದ್ದಾಗ, ಇಲ್ಲಿ ಬಂದಿರುವ ಬಂಧುಗಳ ಕಾಲಿಗೆ ಬಿದ್ದರೆ, ನಿನಗೆ ಸದ್ಗತಿ ಹೇಗೆ ಸಿಕ್ಕೀತು, ತಂಗೆವ್ವಾ? ಇನ್ನು ನಿನಗೆ ಮಾಯಾಸಂಸಾರ ತಪ್ಪದು. ಮೋಜು ಬಯಸಿ ಮದಿವ್ಯಾದಿ, ಈಗ ಮೋಜನ್ನು ಅನುಭವಿಸು”, ಎಂದು ಶರೀಫರು ಹೇಳುತ್ತಾರೆ.
ಶರೀಫರು ಆ ಹುಡುಗಿಗೆ ಈ ಮಾಯಾಸಂಸಾರದಲ್ಲಿದ್ದ ಉತ್ಸಾಹವನ್ನು , ಆಸಕ್ತಿಯನ್ನು ಗಮನಿಸಿ ಈ ರೀತಿ ಹೇಳುತ್ತಾರೆ:
“ರಂಗೀಲಿ ಉಟ್ಟೀದಿ ರೇಶ್ಮಿದಡಿಶೀರಿ ”
ದಡಿ ಅಂದರೆ ಅಂಚು. ರಂಗೀಲಿ(=ರಂಗಿನಲ್ಲಿ) ಅಂದರೆ ಉತ್ಸಾಹದಿಂದ ರೇಶಿಮೆ ಸೀರೆ ಉಟ್ಟಿದ್ದಾಳೆ.
ಆದರೆ, ಈ ಹುಡುಗಿ ಹಂಗನೂಲಿನ ಪರವಿಯನ್ನು ಮರೆತು ಬಿಟ್ಟಿದ್ದಾಳೆ.
ಹಂಗನೂಲು ಅಂದರೆ, ಕೈಯಿಂದ ತಯಾರಿಸಿದ ಹತ್ತಿಯ ನೂಲು. ಅದರ ಪರವಿಯನ್ನು ಈ ಹುಡುಗಿ ಮರೆತಿದ್ದಾಳೆ. ಪರವಿ ಅಂದರೆ ಪರವಾಹ್ ಅನ್ನುವ ಉರ್ದು ಪದ ಅಂದರೆ ಕಾಳಜಿ, ಚಿಂತೆ, care, bother.
ಹೇಗೆ ಕೈಮಗ್ಗದ ಹತ್ತಿಯ ಬಟ್ಟೆ ನಿಸರ್ಗಸಹಜವಾಗಿದೆಯೊ ಹಾಗೆಯೇ ದೇವರ ನೆನಪು ನಮ್ಮ ಮನಸ್ಸಿಗೆ ಹತ್ತಿರವಾದದ್ದು. ಕೃತಕ ಹಾಗು ಆಡಂಬರದ ರೇಶಿಮೆ ಸೀರೆ ಎಂದರೆ ಸಂಸಾರದ ವೈಭವ. ಈ ವೈಭವಕ್ಕೆ ನೀನು ಮನಸೋತರೆ, ನೀನು ಮಂಗಳಮೂರುತಿ ದೇವರ ಸಾನ್ನಿಧ್ಯಕ್ಕೆ ಹೊರತಾಗುತ್ತೀ ಎಂದು ಶರೀಫರು ಎಚ್ಚರಿಸುತ್ತಾರೆ.
ಶರೀಫರು ‘ಮಂಗಳಮೂರುತಿ’ ಎನ್ನುವ ಪದವನ್ನು ಉದ್ದೇಶಪೂರ್ವಕವಾಗಿ ಬಳಸಿದ್ದಾರೆ. ಏಕೆಂದರೆ, ultimately ನಮಗೆ ಮಂಗಳವಾಗುವದು ಪಾರಮಾರ್ಥಿಕ ಚಿಂತನೆಯಿಂದಲೇ ಹೊರತು, ಸಾಂಸಾರಿಕ ಆಡಂಬರದಿಂದಲ್ಲ.
ಲೌಕಿಕ ಪ್ರತಿಮೆಗಳಿಗೆ ಆಧ್ಯಾತ್ಮಿಕ ಅರ್ಥವನ್ನು ನೀಡುವದು ಶರೀಫರ ವೈಶಿಷ್ಟ್ಯವಾಗಿದೆ. ಮಿಂಡೇರ ಬಳಗ, ರೇಶಿಮೆ ಸೀರಿ ಮೊದಲಾದ ಪ್ರತಿಮೆಗಳು ಅಚ್ಚ ದೇಸಿ ಪ್ರತಿಮೆಗಳು. ಇದರ ಜೊತೆಗೇ ಮಾಯದ ಮರದಂತಹ ಅಚ್ಚರಿಯ ಪ್ರತಿಮೆಗಳನ್ನೂ ಅವರು ಸಂಯೋಜಿಸುತ್ತಾರೆ. ಈ ರೀತಿಯಲ್ಲಿ ಶರೀಫರು ಲೌಕಿಕವಾಗಿ ಪ್ರಾರಂಭಿಸಿದ ಹಾಡನ್ನು ಆಧ್ಯಾತ್ಮಿಕ ಚಿಂತನೆಗೆ ಅತ್ಯಂತ ಸಹಜವಾಗಿ ತಿರುಗಿಸುತ್ತಾರೆ.
Tuesday, September 30, 2008
ಭಾರತದಲ್ಲಿ ಮತಾಂತರದ ಇತಿಹಾಸ ಹಾಗೂ ರಾಜಕೀಯ
ಆರ್ಯ ಜನಾಂಗವು ಭಾರತಕ್ಕೆ ಹೊರಗಿನೆಂದು ಬಂದಿತೆಂದು ಕೆಲವು ಇತಿಹಾಸಕಾರರು ಹೇಳಿದರೆ, ಇನ್ನೂ ಕೆಲವರು ಆರ್ಯ ಜನಾಂಗವು ಭಾರತದ native ಜನಾಂಗವೇ ಆಗಿದೆ ಎಂದು ವಾದಿಸುತ್ತಾರೆ. ಅದೇನೆ ಇರಲಿ, ಪ್ರಾಚೀನ ಕಾಲದಲ್ಲಿ ಭಾರತದಲ್ಲಿ ಅನೇಕ ಜನಾಂಗಗಳು ವಾಸಿಸುತ್ತಿದ್ದವು. ಬಹುಶ: ಇವು ಬೇರೆ ಬೇರೆ ಬುಡಕಟ್ಟಿಗೆ ಸೇರಿದ ಜನಾಂಗಗಳಾಗಿರಬೇಕೆನ್ನುವದು, ಈ ಜನಾಂಗಗಳ ಪ್ರತ್ಯೇಕ ದೈಹಿಕ ಲಕ್ಷಣಗಳಿಂದಲೇ ವ್ಯಕ್ತವಾಗುತ್ತದೆ. ಉದಾಹರಣೆಗೆ ನಾಗಾ ಜನಾಂಗ, ಪಂಜಾಬಿ ಜನಾಂಗ, ಕೊಡವರು, ‘ದ್ರಾವಿಡ’ ಜನಾಂಗ ಇತ್ಯಾದಿ.
ಈ ಜನಾಂಗಗಳಲ್ಲಿ ಅನೇಕ ಜನಾಂಗಗಳು totem ಪೂಜಕರಾಗಿದ್ದವು. ಆರ್ಯಜನಾಂಗದವರೊಡನೆ ನಡೆದ ಹೋರಾಟಗಳಲ್ಲಿ , ಈ ಜನಾಂಗಗಳು ಸೋತ ಬಳಿಕ, ಎಲ್ಲ ಸೋತ ಜನಾಂಗಗಳು ಮಾಡುವಂತೆ ಈ ಆರ್ಯೇತರ ಜನಾಂಗಗಳೂ ಸಹ, ಗೆದ್ದವರ ಸಂಸ್ಕೃತಿಗೆ ಶರಣಾದವು.
ಈ ಸಂಸ್ಕೃತಿಯಲ್ಲಿ ‘ಧರ್ಮ’ವೂ ಒಂದು.
ಭಾರತದಲ್ಲಿ ನಡೆದ ಮೊದಲ ಮತಾಂತರ ಇದಾಗಿರಬಹುದು.
ಹೀಗೆ ಶರಣಾದವರೆಲ್ಲ ಆರ್ಯರ ವೈದಿಕ ಧರ್ಮದ ಅನುಯಾಯಿಗಳಾದರೂ ಸಹ ತಮ್ಮ totemಗಳನ್ನು , ತಮ್ಮ ದೈವಸಂಕೇತಗಳನ್ನು ಸುಲಭದಲ್ಲಿ ಬಿಟ್ಟುಕೊಡಲಿಲ್ಲ. ಅಷ್ಟೇ ಅಲ್ಲ, ತಮ್ಮ ದೈವಸಂಕೇತಗಳನ್ನು ವೇದಗಳಲ್ಲಿ ಸೇರಿಸಲು ಸಮರ್ಥರಾದರು. ವೇದಗಳಲ್ಲಿ ಬರುವ ಜಲದೇವತೆಗಳನ್ನು ಇದಕ್ಕೆ ಉದಾಹರಿಸಬಹುದು.
ಅದರಂತೆ, ‘ಸಾರ್ಪರಾಜ್ಞೀ ಸೂರ್ಯೋವಾ’ ಎನ್ನುವ ವಾಕ್ಯ ಸಹ ಈ ತರಹದ manipulated assimilationದ
ಸಂಕೇತವೆಂದು ಶ್ರೀ ಶಂ. ಬಾ. ಜೋಶಿ ಭಾವಿಸುತ್ತಾರೆ.
ಆರ್ಯರ ವೈದಿಕ ಧರ್ಮವನ್ನು ವಿರೋಧಿಸುವವರಲ್ಲಿ ಶ್ರೀಕೃಷ್ಣನೇ ಮುಂದಾಳು ಎನ್ನಬಹುದು. ಚಿಕ್ಕವನಿದ್ದಾಗಲೇ ಆತ, ವೈದಿಕ ದೇವತೆಯಾದ ಇಂದ್ರನನ್ನು ವಿರೋಧಿಸಿ, ತನ್ನ ಜನರು (ಹಟ್ಟಿಕಾರರು) ಮೊದಲಿನಿಂದಲೂ ಮಾಡುತ್ತಿದ್ದ ‘ಗಿರಿಪೂಜೆ’ಯನ್ನು ಮಾಡಲು ಪ್ರಚೋದಿಸಿದ. ಇದರ ವಿರುದ್ಧ ಪ್ರತಿಕಾರಕ್ಕೆ ಮುಂದಾದ ಇಂದ್ರ ಹಾಗೂ ವರುಣರನ್ನು ಯಶಸ್ವಿಯಾಗಿ ಎದುರಿಸಿದ.
ಅರ್ಜುನನಿಗೆ ಮಾಡಿದ ‘ಗೀತೋಪದೇಶ’ದಲ್ಲಿಯೂ ಸಹ ಶ್ರೀಕೃಷ್ಣನ ಒಲವು ಸ್ಪಷ್ಟವಾಗಿದೆ.
“ತ್ರೈಗುಣ್ಯವಿಷಯಾ ವೇದಾ ನಿಸ್ತ್ರೈಗುಣ್ಯೋ ಭವಾರ್ಜುನ” ಎಂದು ಹೇಳುವಲ್ಲಿಯ ವೇದವಿರೋಧಿ ಧೋರಣೆ ಹಾಗು “ವೃಕ್ಷಗಳಲ್ಲಿ ನಾನು ಬಿಲ್ವವೃಕ್ಷ” ಎಂದು ಹೇಳುವಾಗ, ಅಲ್ಲಿ ತೋರುವ ವೃಕ್ಷಪೂಜೆಯ ಒಲವು ಇವು ಸ್ಪಷ್ಟವಾಗಿ ವೈದಿಕ-ವಿರೋಧಿಯಾಗಿವೆ.
ಏನೇ ಇರಲಿ, ಸೋತವರು ಗೆದ್ದವರ ಧರ್ಮವನ್ನು ಏಕೆ ಸ್ವೀಕರಿಸುತ್ತಾರೆ?
ಹೋರಾಟವನ್ನು ಮುಂದುವರಿಸಲು ಅಸಮರ್ಥರಾದ ಇವರು ಗೆದ್ದವರಿಗೆ ‘ಜೀ’ ಎನ್ನುತ್ತ ಕೈಕಟ್ಟಿ ನಿಲ್ಲುವದು ಅನಿವಾರ್ಯವಷ್ಟೆ. ಕಾಲಕ್ರಮದಲ್ಲಿ ಇವರಲ್ಲಿ ಅನೇಕರು Stockholm syndrome ಕ್ಕೆ ಒಳಗಾಗುತ್ತಾರೆ. ಆಗ ಇವರು ಗೆದ್ದವರ ನಡೆ-ನುಡಿ, ವೇಷ-ಭೂಷಣ ಇವುಗಳನ್ನು ಅನುಕರಿಸಲು ಪ್ರಾರಂಬಿಸುತ್ತಾರೆ. ನಾವು ಕೂಡ ಇಂಗ್ಲೀಶರ ಭಾಷೆ, ವೇಷ-ಭೂಷಣ ಹಾಗು ನಾಗರಿಕತೆಯನ್ನು ನಮ್ಮವೇ ಎನ್ನುವಂತೆ ಅನುಕರಿಸುತ್ತಿಲ್ಲವೆ?
ಭಾಷೆ ಹಾಗು ವೇಷ-ಭೂಷಣ ಇವು ಹೊರಗಿನ, ತೋರಿಕೆಯ ಅಲಂಕಾರಗಳು. ಮನುಷ್ಯನು ಇವನ್ನೆಲ್ಲ ಸುಲಭವಾಗಿ ಬದಲಾಯಿಸಿಕೊಳ್ಳುತ್ತಾನೆ. ಆದರೆ ತನ್ನ ದೈವಿಕ ನಂಬಿಕೆಗಳನ್ನು ಸುಲಭವಾಗಿ ಬಿಟ್ಟುಕೊಡುವದಿಲ್ಲ. ಆದರೆ ಆರ್ಥಿಕ ಹಾಗೂ ಸಾಮಾಜಿಕ ಲಾಭಕ್ಕಾಗಿ ಕೆಲವರು ಧರ್ಮವನ್ನು ಬದಲಾಯಿಸಲು ಸಿದ್ಧರಾಗುತ್ತಾರೆ. ಮೊಗಲರ ಕಾಲದಲ್ಲಿ ಇಸ್ಲಾಮ ಧರ್ಮವನ್ನು ಸ್ವೀಕರಿಸಿದ ಅನೇಕ ದೊಡ್ಡ ಮನುಷ್ಯರನ್ನು ಇದಕ್ಕೆ ಉದಾಹರಣೆ ಎಂದು ಹೇಳಬಹುದು.
ಸುಪ್ರಸಿದ್ಧ ಸಂಗೀತಕಾರ ತಾನಸೇನ ಸಹ, ತನ್ನ ಇಳಿವಯಸ್ಸಿನಲ್ಲಿ ಮುಸಲಮಾನನಾಗಿ ಮತಾಂತರಗೊಂಡ. ಯಾರೂ ಅವನನ್ನು ಮತಾಂತರಕ್ಕಾಗಿ ಬಲಾತ್ಕರಿಸಿರಲಿಕ್ಕಿಲ್ಲ. ಆದರೆ, subtle pressure ಎನ್ನುವದೊಂದು ಇರುತ್ತದೆಯಲ್ಲ!
ಇದರಂತೆಯೆ, ಬ್ರಿಟಿಶರ ಆಡಳಿತದಲ್ಲಿಯೂ ಸಹ Anglo-Indiansರಿಗೆ ಹಾಗೂ ಮತಾಂತರಿತಗೊಂಡ ಕ್ರಿಶ್ಚನ್ನರಿಗೆ ಹೆಚ್ಚಿನ ಅನುಕೂಲತೆಗಳು ಇದ್ದವಲ್ಲವೆ? ಇವನ್ನು ಸಾಮಾಜಿಕ ಕಾರಣಗಳ ಮತಾಂತರ ಎನ್ನಬಹುದು.
ಆರ್ಥಿಕ ಕಾರಣಗಳಿಂದಾದ ಮತಾಂತರವನ್ನು ನಾವು ಪಶ್ಚಿಮ ಕರಾವಳಿಯಲ್ಲಿ ಕಾಣಬಹುದು. ಸುಮಾರು ೭ನೆಯ ಶತಮಾನದಲ್ಲಿ ಭಾರತದ ಪಶ್ಚಿಮ ಕರಾವಳಿಗೆ ಬರುತ್ತಿದ್ದ ಅರಬ ವ್ಯಾಪಾರಿಗಳು ಮನ್ಸೂನ್ ಗಾಳಿಗಳ ಜೊತೆಗೆ ಇಲ್ಲಿ ಬಂದು ತಲುಪುತ್ತಿದ್ದರು. ಮರಳಿ ಹೋಗಲು reverse monsoonಗಾಗಿ ಕಾಯಬೇಕಲ್ಲ. ಅಲ್ಲಿಯವರೆಗೆ ದೈಹಿಕ ಅವಶ್ಯಕತೆಗಳಿಗಾಗಿ ಏನು ಮಾಡುವದು? ಕೆಲವರು ಕರಾವಳಿಯ ಹೆಂಗಸರನ್ನು ಕೊಂಡುಕೊಂಡರು. ಆದರೆ ಮತ್ತೆ ಕೆಲವರು ಕರಾವಳಿಯ ಹೆಂಗಸರ ಜೊತೆಗೆ ಮದುವೆ ಮಾಡಿಕೊಂಡರು.
ಇದು ಆರ್ಥಿಕ ಮತಾಂತರ. ಈ ಅರಬ ವರ್ತಕರ ಸಂತಾನವೇ ಮಲಬಾರದ ‘ಮಾಪಿಳ್ಳೆ’ಗಳು, ‘ಬ್ಯಾರಿಗಳು’ ಹಾಗೂ ಉತ್ತರ ಕನ್ನಡ ಜಿಲ್ಲೆಯ ಭಟಕಳದ ‘ನವಾಯತರು’.
ಈ ಮತಾಂತರಗಳು ಶಾಂತಿಯುತ ಮತಾಂತರಗಳು. ಆರ್ಥಿಕ ಹಾಗು ಸಾಮಾಜಿಕ ಕಾರಣಕ್ಕಾಗಿ ಕರಾವಳಿಯಲ್ಲಿ ನಡೆದ ಮತಾಂತರಗಳು.
ಇಷ್ಟೇ ಆಗಿದ್ದರೆ, ಮತಾಂತರವನ್ನು ಬಹುಶಃ ಯಾರೂ ವಿರೋಧಿಸುತ್ತಿರಲಿಲ್ಲ. ಮತಾಂತರದ ಜೊತೆಗೆ ರಾಷ್ಟ್ರನಿಷ್ಠೆಯೂ ಬದಲಾಗುತ್ತಿತ್ತು ಎನ್ನುವದೇ ಇಲ್ಲಿಯ alarming point.
ಪೋರ್ತುಗೀಜರು ಅರಬ ವರ್ತಕರಂತೆ ಕೇವಲ ವ್ಯಾಪಾರಕ್ಕೆ ತಮ್ಮನ್ನು ಸೀಮಿತಗೊಳಿಸಲಿಲ್ಲ. ಕರಾವಳಿಯ ಮೀನುಗಾರರನ್ನು ಇವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸಲು ಪ್ರಾರಂಭಿಸಿದರು. ಇದನ್ನು ಪ್ರತಿಬಂಧಿಸಿ ವಿಜಯನಗರದ ರಾಜರು ಹಾಗೂ ವಿಜಾಪುರದ ಸುಲ್ತಾನರು, ಪೋರ್ತುಗೀಜರಿಗೆ ಶರತ್ತುಗಳನ್ನು ಹಾಕಿದರು.
ಈ ಶಾಂತಿಯುತ ಮತಾಂತರವನ್ನು ಪ್ರತಿಬಂಧಿಸಲು ಕಾರಣವೇನು ಎಂದು ಯಾರಾದರೂ ಕೇಳಬಹುದು.
ಪೋರ್ತುಗೀಜರು ಕರಾವಳಿ ಪ್ರದೇಶದಲ್ಲಿ ವ್ಯಾಪಾರದ ಹೊರತಾಗಿ, ತಮ್ಮ ಆಡಳಿತ ಸ್ಥಾಪಿಸಲು ಪ್ರಾರಂಭಿಸಿದಾಗ, ವಿಜಯನಗರ ಹಾಗೂ ವಿಜಾಪುರದ ಅರಸರು ಪೋರ್ತುಗೀಜರ ಮೇಲೆ ದಂಡೆತ್ತಿ ಬಂದರು. ಆ ಸಮಯದಲ್ಲಿ ಈ ಮತಾಂತರಿತ ಮೀನುಗಾರರು ಪೋರ್ತುಗೀಜರ ಪರವಾಗಿ ಹೋರಾಡಿದರು. ಅಲ್ಲದೆ, ಇವರಲ್ಲಿ ಅನೇಕರು ಮೀನುಗಾರರಾಗಿದ್ದರಿಂದ, ವಿಜಯನಗರದ ಹಾಗೂ ವಿಜಾಪುರದ ಕಡಲ ಕಾವಲುಪಡೆಯು ನಿರ್ಬಲವಾಗಿ ಹೋಯಿತು.
ಗೋವಾದಲ್ಲಿ ಅಲ್ಬುಕರ್ಕನು ಅನೇಕ ದೇವಾಲಯಗಳನ್ನು ಕೆಡವಿಸಿ ಹಾಕಿದ ; ಮತಾಂತರಕ್ಕೆ ಒಪ್ಪದ ಜನರ ಮೇಲೆ ಘೋರ ಅತ್ಯಾಚಾರವನ್ನು ಎಸಗಿದ. ಇದು ಬಲಾತ್ಕಾರದ ಮತಾಂತರ. ಈ ಎಲ್ಲ ಕೃತ್ಯಗಳಲ್ಲಿ ಮತಾಂತರಿತರು ಪೋರ್ಚುಗೀಜರಿಗೆ ಬೆಂಬಲವಾಗಿ ನಿಂತರು.
ಮತಾಂತರದ ರಾಜಕೀಯ ಉದ್ದೇಶ ಇಲ್ಲಿ ಸ್ಪಷ್ಟವಾಗಿ ಕಾಣುತ್ತದೆ.
ಈ ಕಾರಣದಿಂದಾಗಿಯೇ, ಮಂಗಳೂರನ್ನು ಮುತ್ತಿದ ಟೀಪು ಸುಲ್ತಾನನು ಮತಾಂತರಿತಗೊಂಡ ಮೂರುಸಾವಿರ ಕ್ರಿಶ್ಚನ್ನರನ್ನು, ಸೆರೆಯಾಳಾಗಿ ಕೊಡಗಿಗೆ march ಮಾಡಿಸುತ್ತ ಒಯ್ದ. ಟೀಪುವಿನ ಈ ಕಾರ್ಯಕ್ಕಾಗಿ ಅವನನ್ನು ಮತಾಂಧನೆಂದು ಕರೆಯುವವರು, ಇದರ ಹಿಂದಿನ ರಾಜಕೀಯ ಉದ್ದೇಶವನ್ನು ದಯವಿಟ್ಟು ಗಮನಿಸಬೇಕು.
ಈಗಲೂ ಸಹ ಅಷ್ಟೇ. ಮತಾಂತರದಲ್ಲಿ ತೊಡಗಿದ New Life ಸಂಸ್ಥೆಯ ಕಾರ್ಯಕರ್ತರನ್ನು ಕೆಲವು ರಾಜಕಾರಣಿಗಳು ತಕ್ಷಣವೇ ಬೆಂಬಲಿಸಿ ಹೇಳಿಕೆ ಕೊಟ್ಟರು. ಕ್ರಿಶ್ಚನ್ನರ ಮೇಲೆ ಇವರಿಗೆ ಪ್ರೀತಿ ಬಹಳ ಅಂತಲ್ಲ. ಮತಾಂತರಿತರ ‘ಮತ’ ತಮಗೆ ದೊರೆಯಲಿ ಅನ್ನುವದೊಂದೇ ಇದರ ಹಿಂದಿನ ಉದ್ದೇಶ. So, ಇಲ್ಲಿ ಮತಾಂತರದ ಬೆಂಬಲಕ್ಕೆ ರಾಜಕೀಯ ಉದ್ದೇಶವಿದೆ.
ಕ್ರಿ.ಶ. ೭೦೦ರ ನಂತರ ಭಾರತದ ಮೇಲೆ ದಾಳಿ ಮಾಡಿದ, ತುರುಕರು ಹಾಗೂ ಪರ್ಶಿಯನ್ನರು ಸೆರೆ ಸಿಕ್ಕ ಸೈನಿಕರಿಗೆ ಒಂದು ಶರತ್ತಿನ ಮೇಲೆ ಜೀವದಾನ ಮಾಡುತ್ತಿದ್ದರು: “ನೀವು ಇಸ್ಲಾಮ ಧರ್ಮಕ್ಕೆ ಮತಾಂತರಗೊಳ್ಳಬೇಕು”.
ಇವರ ಉದ್ದೇಶ ಸ್ಪಷ್ಟವಾಗಿದೆ. ಮತಾಂತರಗೊಂಡ ಸೈನಿಕರು ತಮ್ಮ ನಿಷ್ಠೆಯನ್ನು ಬದಲಾಯಿಸುತ್ತಾರೆ. ಇದರ ಜ್ವಲಂತ ಉದಾಹರಣೆ ಎಂದರೆ ಮಲಿಕ ಕಾಫರ. ದಕ್ಷಿಣ ಭಾರತದ ಮೇಲೆ ದಂಡೆತ್ತಿ ಬಂದಾಗ ಈ ಮತಾಂತರಿತನು ಮಾಡಿದ ಅತ್ಯಾಚಾರಗಳು ತುರುಕರ ಹಾಗೂ ಪರ್ಶಿಯನ್ನರ ಅತ್ಯಾಚಾರಗಳಿಗಿಂತ ಘೋರವಾಗಿದ್ದವು. ಆ ಸಮಯದಲ್ಲಿ ಸೋಲುಂಡ ಹೊಯ್ಸಳ ಬಲ್ಲಾಳ ದೊರೆಯು ದಕ್ಷಿಣ ಭಾರತದ ಇತರ ರಾಜರಿಗೆ ಒಂದು ಸಂದೇಶವನ್ನು ನೀಡಿದ. ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಸಂದೇಶವಿದು: “ಮಲಿಕ ಕಾಫರನು ನಮ್ಮ ರಾಜ್ಯಗಳನ್ನಷ್ಟೇ ಅಲ್ಲ, ನಮ್ಮ ಸಂಸ್ಕೃತಿಯನ್ನೇ ನಾಶ ಮಾಡುತ್ತಿದ್ದಾನೆ. ಇದಕ್ಕಿಂತ ಹೆಚ್ಚಿನ ಗಂಡಾಂತರ ಯಾವುದಿದೆ? ನಮ್ಮೆಲ್ಲರ ಬಲವನ್ನು ಒಟ್ಟುಗೂಡಿಸಿ ಹೋರಾಡೋಣ. ನಾನು ನಿಮ್ಮ ಸೈನ್ಯದಲ್ಲಿ ಸಾಮಾನ್ಯ ಸೈನಿಕನಂತೆ ಹೋರಾಡಾಲು ಸಿದ್ಧನಿದ್ದೇನೆ”.
ಆದರೆ ಆಗಲೇ ಇಳಿವಯಸ್ಸಿನಲ್ಲಿದ್ದ ಬಲ್ಲಾಳ ದೊರೆಯ ಇಷ್ಟಾರ್ಥ ಸಿದ್ಧಿಸಲಿಲ್ಲ. ಮದುರೆಯ ಸುಲ್ತಾನನು ಬಲ್ಲಾಳ ದೊರೆಯನ್ನು ಸೆರೆ ಹಿಡಿದು, ಚರ್ಮ ಸುಲಿಸಿ, ತೂಗು ಹಾಕಿದನು. ದಕ್ಷಿಣ ಭಾರತ ಸೋಲುಂಡಿತು. ಸೆರೆಯಾಳುಗಳು ಜೀವ ಉಳಿಸಿಕೊಳ್ಳಲೆಂದು ಇಸ್ಲಾಮ ಧರ್ಮಕ್ಕೆ ಶರಣಾದರು. ಈ ಸೆರೆಯಾಳುಗಳಲ್ಲಿ ಮತಾಂತರಗೊಂಡು ಜೀವ ಉಳಿಸಿಕೊಂಡ ಹುಕ್ಕ ಹಾಗೂ ಬುಕ್ಕರೂ ಇದ್ದರು.
ಶೃಂಗೇರಿ ಪೀಠಾಧಿಪತಿಯಾದ ವಿದ್ಯಾರಣ್ಯರು ಕಾಶಿಯಲ್ಲಿ ಹುಕ್ಕ ಹಾಗೂ ಬುಕ್ಕರನ್ನು ವೈದಿಕ ಧರ್ಮಕ್ಕೆ ಮರು ಮತಾಂತರಿಸಿದರು. ಆರ್ಯಸಮಾಜ ಸ್ಥಾಪಿಸಿದ ದಯಾನಂದ ಸರಸ್ವತಿಯವರು ಮರುಮತಾಂತರವನ್ನು ಪ್ರಾರಂಭಿಸುವದಕ್ಕಿಂತ ೬೦೦ ವರ್ಷಗಳಷ್ಟು ಮೊದಲೇ ವಿದ್ಯಾರಣ್ಯರು ಈ ಕಾರ್ಯ ಮಾಡಿದರು. (ಹಾಗೂ ಈ ಕಾರ್ಯಕ್ಕಾಗಿ ಅವರ ಮೇಲೆ ಬಹಿಷ್ಕಾರ ಹಾಕಲಾಗಿತ್ತು.)
ಹುಕ್ಕ, ಬುಕ್ಕರು ಮರುಮತಾಂತರಗೊಂಡು ವಿಜಯನಗರ ಸ್ಥಾಪಿಸದಿದ್ದರೆ ಏನಾಗುತ್ತಿತ್ತು? ವೈದಿಕ ಧರ್ಮ ನಾಶವಾಗುತ್ತಿತ್ತೆ?
ಧರ್ಮನಾಶಕ್ಕಿಂತ ಹೆಚ್ಚಿನ ನಷ್ಟವೆಂದರೆ ಭಾರತದ ಸಂಸ್ಕೃತಿನಾಶ.
ಕೆಲ ವರ್ಷಗಳ ಬಳಿಕ ಬುಕ್ಕನು ಮದುರೆಯ ಸುಲ್ತಾನನನ್ನು ಸೋಲಿಸಿದ ಬಳಿಕ, ಬುಕ್ಕನ ಸೊಸೆ ಕಂಪಲಾದೇವಿ ಬರೆದ “ಮದುರಾ ವಿಜಯಮ್” ಸಂಸ್ಕೃತ ಕಾವ್ಯದಲ್ಲಿ ಈ ಸಂಸ್ಕೃತಿನಾಶದ ಸ್ಪಷ್ಟ ಚಿತ್ರಣವಿದೆ.
[ “ಯಾವ ರಾಜಮಂದಿರಗಳಲ್ಲಿ ಗಿಳಿಗಳು ಮಧುರವಾಣಿಯಲ್ಲಿ ನುಡಿಯುತ್ತಿದ್ದವೊ, ಅಲ್ಲೀಗ ಗೂಗೆಗಳು ಕರ್ಕಶವಾಗಿ ಕಿರಚುತ್ತಿವೆ.”]
ಭಾರತದ ಮುಸಲ್ಮಾನರು ಧರ್ಮವನ್ನು ಬದಲಿಸಿರಬಹುದು. ಆದರೆ ರಕ್ತವನ್ನು ಬದಲಿಸಿಕೊಂಡಿಲ್ಲವಲ್ಲ. ಭಾರತೀಯ ಪ್ರಾಚೀನ ಸಂಸ್ಕೃತಿಗೆ ಹಿಂದೂಗಳಷ್ಟೇ ಮುಸಲ್ಮಾನರೂ ಸಹ ವಾರಸುದಾರರಾಗಿದ್ದಾರೆ. ಭಾರತದ ಯೋಗ, ವೇದ, ಆಯುರ್ವೇದ, ಭರತನಾಟ್ಯ, ಶಾಸ್ತ್ರೀಯ ಸಂಗೀತ ಇವೆಲ್ಲಕ್ಕೆ ಎಲ್ಲಾ ಭಾರತೀಯರೂ—whatever their religion—ವಾರಸುದಾರರೇ!
ಆದರೆ, ಮತಾಂತರಗೊಂಡವರು ಇವನ್ನೆಲ್ಲ ಮರೆತುಬಿಡುವದೇ, ಮತಾಂತರದ ದುರಂತ.
ಕಾಶ್ಮೀರದ ಮುಸಲ್ಮಾನರಲ್ಲಿಯ ಅನೇಕರ ಹೆಸರುಗಳು ‘ಭಟ್’ ಎಂದು ಇರುವದನ್ನು ಗಮನಿಸಿರಿ. ಮತಾಂತರಿತರಾದ ಈ ಭಟ್ಟರು ಈಗ ಕಟ್ಟಾ ಉಗ್ರಗಾಮಿಗಳಾಗಿರುವದೇ ಮತಾಂತರದ ದುರಂತಕ್ಕೆ ಹಿಡಿದ ಕನ್ನಡಿಯಾಗಿದೆ.
ಆದರೆ, ರಾಜಕೀಯದ ಸ್ವಾರ್ಥಸಾಧನೆಗಾಗಿ ದೇಶವನ್ನು ನಾಶ ಮಾಡಲು ಸಿದ್ಧರಾದ ರಾಜಕಾರಣಿಗಳಿದ್ದಾಗ, ಭಾರತ ದೇಶ ಒಂದು ದೇಶವಾಗಿ ಉಳಿದೀತೆ? ಮುಸ್ಲಿಮ್ ಮತಗಳ ಸಲುವಾಗಿ, ರಾಷ್ಟ್ರದ್ರೋಹಿ ಸಿಮಿ ಕಾರ್ಯಕರ್ತರಿಗೆ ಸರಕಾರದ ಹಣದಲ್ಲಿ
legal aid ಕೊಡಲು ಹೊರಟಿರುವ ಇಂತಹ ರಾಜಕಾರಣಿಗಳಿದ್ದಾಗ, ಭಾರತ ಛಿದ್ರವಾಗದೇ ಉಳಿದೀತೆ?
ಈ ಜನಾಂಗಗಳಲ್ಲಿ ಅನೇಕ ಜನಾಂಗಗಳು totem ಪೂಜಕರಾಗಿದ್ದವು. ಆರ್ಯಜನಾಂಗದವರೊಡನೆ ನಡೆದ ಹೋರಾಟಗಳಲ್ಲಿ , ಈ ಜನಾಂಗಗಳು ಸೋತ ಬಳಿಕ, ಎಲ್ಲ ಸೋತ ಜನಾಂಗಗಳು ಮಾಡುವಂತೆ ಈ ಆರ್ಯೇತರ ಜನಾಂಗಗಳೂ ಸಹ, ಗೆದ್ದವರ ಸಂಸ್ಕೃತಿಗೆ ಶರಣಾದವು.
ಈ ಸಂಸ್ಕೃತಿಯಲ್ಲಿ ‘ಧರ್ಮ’ವೂ ಒಂದು.
ಭಾರತದಲ್ಲಿ ನಡೆದ ಮೊದಲ ಮತಾಂತರ ಇದಾಗಿರಬಹುದು.
ಹೀಗೆ ಶರಣಾದವರೆಲ್ಲ ಆರ್ಯರ ವೈದಿಕ ಧರ್ಮದ ಅನುಯಾಯಿಗಳಾದರೂ ಸಹ ತಮ್ಮ totemಗಳನ್ನು , ತಮ್ಮ ದೈವಸಂಕೇತಗಳನ್ನು ಸುಲಭದಲ್ಲಿ ಬಿಟ್ಟುಕೊಡಲಿಲ್ಲ. ಅಷ್ಟೇ ಅಲ್ಲ, ತಮ್ಮ ದೈವಸಂಕೇತಗಳನ್ನು ವೇದಗಳಲ್ಲಿ ಸೇರಿಸಲು ಸಮರ್ಥರಾದರು. ವೇದಗಳಲ್ಲಿ ಬರುವ ಜಲದೇವತೆಗಳನ್ನು ಇದಕ್ಕೆ ಉದಾಹರಿಸಬಹುದು.
ಅದರಂತೆ, ‘ಸಾರ್ಪರಾಜ್ಞೀ ಸೂರ್ಯೋವಾ’ ಎನ್ನುವ ವಾಕ್ಯ ಸಹ ಈ ತರಹದ manipulated assimilationದ
ಸಂಕೇತವೆಂದು ಶ್ರೀ ಶಂ. ಬಾ. ಜೋಶಿ ಭಾವಿಸುತ್ತಾರೆ.
ಆರ್ಯರ ವೈದಿಕ ಧರ್ಮವನ್ನು ವಿರೋಧಿಸುವವರಲ್ಲಿ ಶ್ರೀಕೃಷ್ಣನೇ ಮುಂದಾಳು ಎನ್ನಬಹುದು. ಚಿಕ್ಕವನಿದ್ದಾಗಲೇ ಆತ, ವೈದಿಕ ದೇವತೆಯಾದ ಇಂದ್ರನನ್ನು ವಿರೋಧಿಸಿ, ತನ್ನ ಜನರು (ಹಟ್ಟಿಕಾರರು) ಮೊದಲಿನಿಂದಲೂ ಮಾಡುತ್ತಿದ್ದ ‘ಗಿರಿಪೂಜೆ’ಯನ್ನು ಮಾಡಲು ಪ್ರಚೋದಿಸಿದ. ಇದರ ವಿರುದ್ಧ ಪ್ರತಿಕಾರಕ್ಕೆ ಮುಂದಾದ ಇಂದ್ರ ಹಾಗೂ ವರುಣರನ್ನು ಯಶಸ್ವಿಯಾಗಿ ಎದುರಿಸಿದ.
ಅರ್ಜುನನಿಗೆ ಮಾಡಿದ ‘ಗೀತೋಪದೇಶ’ದಲ್ಲಿಯೂ ಸಹ ಶ್ರೀಕೃಷ್ಣನ ಒಲವು ಸ್ಪಷ್ಟವಾಗಿದೆ.
“ತ್ರೈಗುಣ್ಯವಿಷಯಾ ವೇದಾ ನಿಸ್ತ್ರೈಗುಣ್ಯೋ ಭವಾರ್ಜುನ” ಎಂದು ಹೇಳುವಲ್ಲಿಯ ವೇದವಿರೋಧಿ ಧೋರಣೆ ಹಾಗು “ವೃಕ್ಷಗಳಲ್ಲಿ ನಾನು ಬಿಲ್ವವೃಕ್ಷ” ಎಂದು ಹೇಳುವಾಗ, ಅಲ್ಲಿ ತೋರುವ ವೃಕ್ಷಪೂಜೆಯ ಒಲವು ಇವು ಸ್ಪಷ್ಟವಾಗಿ ವೈದಿಕ-ವಿರೋಧಿಯಾಗಿವೆ.
ಏನೇ ಇರಲಿ, ಸೋತವರು ಗೆದ್ದವರ ಧರ್ಮವನ್ನು ಏಕೆ ಸ್ವೀಕರಿಸುತ್ತಾರೆ?
ಹೋರಾಟವನ್ನು ಮುಂದುವರಿಸಲು ಅಸಮರ್ಥರಾದ ಇವರು ಗೆದ್ದವರಿಗೆ ‘ಜೀ’ ಎನ್ನುತ್ತ ಕೈಕಟ್ಟಿ ನಿಲ್ಲುವದು ಅನಿವಾರ್ಯವಷ್ಟೆ. ಕಾಲಕ್ರಮದಲ್ಲಿ ಇವರಲ್ಲಿ ಅನೇಕರು Stockholm syndrome ಕ್ಕೆ ಒಳಗಾಗುತ್ತಾರೆ. ಆಗ ಇವರು ಗೆದ್ದವರ ನಡೆ-ನುಡಿ, ವೇಷ-ಭೂಷಣ ಇವುಗಳನ್ನು ಅನುಕರಿಸಲು ಪ್ರಾರಂಬಿಸುತ್ತಾರೆ. ನಾವು ಕೂಡ ಇಂಗ್ಲೀಶರ ಭಾಷೆ, ವೇಷ-ಭೂಷಣ ಹಾಗು ನಾಗರಿಕತೆಯನ್ನು ನಮ್ಮವೇ ಎನ್ನುವಂತೆ ಅನುಕರಿಸುತ್ತಿಲ್ಲವೆ?
ಭಾಷೆ ಹಾಗು ವೇಷ-ಭೂಷಣ ಇವು ಹೊರಗಿನ, ತೋರಿಕೆಯ ಅಲಂಕಾರಗಳು. ಮನುಷ್ಯನು ಇವನ್ನೆಲ್ಲ ಸುಲಭವಾಗಿ ಬದಲಾಯಿಸಿಕೊಳ್ಳುತ್ತಾನೆ. ಆದರೆ ತನ್ನ ದೈವಿಕ ನಂಬಿಕೆಗಳನ್ನು ಸುಲಭವಾಗಿ ಬಿಟ್ಟುಕೊಡುವದಿಲ್ಲ. ಆದರೆ ಆರ್ಥಿಕ ಹಾಗೂ ಸಾಮಾಜಿಕ ಲಾಭಕ್ಕಾಗಿ ಕೆಲವರು ಧರ್ಮವನ್ನು ಬದಲಾಯಿಸಲು ಸಿದ್ಧರಾಗುತ್ತಾರೆ. ಮೊಗಲರ ಕಾಲದಲ್ಲಿ ಇಸ್ಲಾಮ ಧರ್ಮವನ್ನು ಸ್ವೀಕರಿಸಿದ ಅನೇಕ ದೊಡ್ಡ ಮನುಷ್ಯರನ್ನು ಇದಕ್ಕೆ ಉದಾಹರಣೆ ಎಂದು ಹೇಳಬಹುದು.
ಸುಪ್ರಸಿದ್ಧ ಸಂಗೀತಕಾರ ತಾನಸೇನ ಸಹ, ತನ್ನ ಇಳಿವಯಸ್ಸಿನಲ್ಲಿ ಮುಸಲಮಾನನಾಗಿ ಮತಾಂತರಗೊಂಡ. ಯಾರೂ ಅವನನ್ನು ಮತಾಂತರಕ್ಕಾಗಿ ಬಲಾತ್ಕರಿಸಿರಲಿಕ್ಕಿಲ್ಲ. ಆದರೆ, subtle pressure ಎನ್ನುವದೊಂದು ಇರುತ್ತದೆಯಲ್ಲ!
ಇದರಂತೆಯೆ, ಬ್ರಿಟಿಶರ ಆಡಳಿತದಲ್ಲಿಯೂ ಸಹ Anglo-Indiansರಿಗೆ ಹಾಗೂ ಮತಾಂತರಿತಗೊಂಡ ಕ್ರಿಶ್ಚನ್ನರಿಗೆ ಹೆಚ್ಚಿನ ಅನುಕೂಲತೆಗಳು ಇದ್ದವಲ್ಲವೆ? ಇವನ್ನು ಸಾಮಾಜಿಕ ಕಾರಣಗಳ ಮತಾಂತರ ಎನ್ನಬಹುದು.
ಆರ್ಥಿಕ ಕಾರಣಗಳಿಂದಾದ ಮತಾಂತರವನ್ನು ನಾವು ಪಶ್ಚಿಮ ಕರಾವಳಿಯಲ್ಲಿ ಕಾಣಬಹುದು. ಸುಮಾರು ೭ನೆಯ ಶತಮಾನದಲ್ಲಿ ಭಾರತದ ಪಶ್ಚಿಮ ಕರಾವಳಿಗೆ ಬರುತ್ತಿದ್ದ ಅರಬ ವ್ಯಾಪಾರಿಗಳು ಮನ್ಸೂನ್ ಗಾಳಿಗಳ ಜೊತೆಗೆ ಇಲ್ಲಿ ಬಂದು ತಲುಪುತ್ತಿದ್ದರು. ಮರಳಿ ಹೋಗಲು reverse monsoonಗಾಗಿ ಕಾಯಬೇಕಲ್ಲ. ಅಲ್ಲಿಯವರೆಗೆ ದೈಹಿಕ ಅವಶ್ಯಕತೆಗಳಿಗಾಗಿ ಏನು ಮಾಡುವದು? ಕೆಲವರು ಕರಾವಳಿಯ ಹೆಂಗಸರನ್ನು ಕೊಂಡುಕೊಂಡರು. ಆದರೆ ಮತ್ತೆ ಕೆಲವರು ಕರಾವಳಿಯ ಹೆಂಗಸರ ಜೊತೆಗೆ ಮದುವೆ ಮಾಡಿಕೊಂಡರು.
ಇದು ಆರ್ಥಿಕ ಮತಾಂತರ. ಈ ಅರಬ ವರ್ತಕರ ಸಂತಾನವೇ ಮಲಬಾರದ ‘ಮಾಪಿಳ್ಳೆ’ಗಳು, ‘ಬ್ಯಾರಿಗಳು’ ಹಾಗೂ ಉತ್ತರ ಕನ್ನಡ ಜಿಲ್ಲೆಯ ಭಟಕಳದ ‘ನವಾಯತರು’.
ಈ ಮತಾಂತರಗಳು ಶಾಂತಿಯುತ ಮತಾಂತರಗಳು. ಆರ್ಥಿಕ ಹಾಗು ಸಾಮಾಜಿಕ ಕಾರಣಕ್ಕಾಗಿ ಕರಾವಳಿಯಲ್ಲಿ ನಡೆದ ಮತಾಂತರಗಳು.
ಇಷ್ಟೇ ಆಗಿದ್ದರೆ, ಮತಾಂತರವನ್ನು ಬಹುಶಃ ಯಾರೂ ವಿರೋಧಿಸುತ್ತಿರಲಿಲ್ಲ. ಮತಾಂತರದ ಜೊತೆಗೆ ರಾಷ್ಟ್ರನಿಷ್ಠೆಯೂ ಬದಲಾಗುತ್ತಿತ್ತು ಎನ್ನುವದೇ ಇಲ್ಲಿಯ alarming point.
ಪೋರ್ತುಗೀಜರು ಅರಬ ವರ್ತಕರಂತೆ ಕೇವಲ ವ್ಯಾಪಾರಕ್ಕೆ ತಮ್ಮನ್ನು ಸೀಮಿತಗೊಳಿಸಲಿಲ್ಲ. ಕರಾವಳಿಯ ಮೀನುಗಾರರನ್ನು ಇವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸಲು ಪ್ರಾರಂಭಿಸಿದರು. ಇದನ್ನು ಪ್ರತಿಬಂಧಿಸಿ ವಿಜಯನಗರದ ರಾಜರು ಹಾಗೂ ವಿಜಾಪುರದ ಸುಲ್ತಾನರು, ಪೋರ್ತುಗೀಜರಿಗೆ ಶರತ್ತುಗಳನ್ನು ಹಾಕಿದರು.
ಈ ಶಾಂತಿಯುತ ಮತಾಂತರವನ್ನು ಪ್ರತಿಬಂಧಿಸಲು ಕಾರಣವೇನು ಎಂದು ಯಾರಾದರೂ ಕೇಳಬಹುದು.
ಪೋರ್ತುಗೀಜರು ಕರಾವಳಿ ಪ್ರದೇಶದಲ್ಲಿ ವ್ಯಾಪಾರದ ಹೊರತಾಗಿ, ತಮ್ಮ ಆಡಳಿತ ಸ್ಥಾಪಿಸಲು ಪ್ರಾರಂಭಿಸಿದಾಗ, ವಿಜಯನಗರ ಹಾಗೂ ವಿಜಾಪುರದ ಅರಸರು ಪೋರ್ತುಗೀಜರ ಮೇಲೆ ದಂಡೆತ್ತಿ ಬಂದರು. ಆ ಸಮಯದಲ್ಲಿ ಈ ಮತಾಂತರಿತ ಮೀನುಗಾರರು ಪೋರ್ತುಗೀಜರ ಪರವಾಗಿ ಹೋರಾಡಿದರು. ಅಲ್ಲದೆ, ಇವರಲ್ಲಿ ಅನೇಕರು ಮೀನುಗಾರರಾಗಿದ್ದರಿಂದ, ವಿಜಯನಗರದ ಹಾಗೂ ವಿಜಾಪುರದ ಕಡಲ ಕಾವಲುಪಡೆಯು ನಿರ್ಬಲವಾಗಿ ಹೋಯಿತು.
ಗೋವಾದಲ್ಲಿ ಅಲ್ಬುಕರ್ಕನು ಅನೇಕ ದೇವಾಲಯಗಳನ್ನು ಕೆಡವಿಸಿ ಹಾಕಿದ ; ಮತಾಂತರಕ್ಕೆ ಒಪ್ಪದ ಜನರ ಮೇಲೆ ಘೋರ ಅತ್ಯಾಚಾರವನ್ನು ಎಸಗಿದ. ಇದು ಬಲಾತ್ಕಾರದ ಮತಾಂತರ. ಈ ಎಲ್ಲ ಕೃತ್ಯಗಳಲ್ಲಿ ಮತಾಂತರಿತರು ಪೋರ್ಚುಗೀಜರಿಗೆ ಬೆಂಬಲವಾಗಿ ನಿಂತರು.
ಮತಾಂತರದ ರಾಜಕೀಯ ಉದ್ದೇಶ ಇಲ್ಲಿ ಸ್ಪಷ್ಟವಾಗಿ ಕಾಣುತ್ತದೆ.
ಈ ಕಾರಣದಿಂದಾಗಿಯೇ, ಮಂಗಳೂರನ್ನು ಮುತ್ತಿದ ಟೀಪು ಸುಲ್ತಾನನು ಮತಾಂತರಿತಗೊಂಡ ಮೂರುಸಾವಿರ ಕ್ರಿಶ್ಚನ್ನರನ್ನು, ಸೆರೆಯಾಳಾಗಿ ಕೊಡಗಿಗೆ march ಮಾಡಿಸುತ್ತ ಒಯ್ದ. ಟೀಪುವಿನ ಈ ಕಾರ್ಯಕ್ಕಾಗಿ ಅವನನ್ನು ಮತಾಂಧನೆಂದು ಕರೆಯುವವರು, ಇದರ ಹಿಂದಿನ ರಾಜಕೀಯ ಉದ್ದೇಶವನ್ನು ದಯವಿಟ್ಟು ಗಮನಿಸಬೇಕು.
ಈಗಲೂ ಸಹ ಅಷ್ಟೇ. ಮತಾಂತರದಲ್ಲಿ ತೊಡಗಿದ New Life ಸಂಸ್ಥೆಯ ಕಾರ್ಯಕರ್ತರನ್ನು ಕೆಲವು ರಾಜಕಾರಣಿಗಳು ತಕ್ಷಣವೇ ಬೆಂಬಲಿಸಿ ಹೇಳಿಕೆ ಕೊಟ್ಟರು. ಕ್ರಿಶ್ಚನ್ನರ ಮೇಲೆ ಇವರಿಗೆ ಪ್ರೀತಿ ಬಹಳ ಅಂತಲ್ಲ. ಮತಾಂತರಿತರ ‘ಮತ’ ತಮಗೆ ದೊರೆಯಲಿ ಅನ್ನುವದೊಂದೇ ಇದರ ಹಿಂದಿನ ಉದ್ದೇಶ. So, ಇಲ್ಲಿ ಮತಾಂತರದ ಬೆಂಬಲಕ್ಕೆ ರಾಜಕೀಯ ಉದ್ದೇಶವಿದೆ.
ಕ್ರಿ.ಶ. ೭೦೦ರ ನಂತರ ಭಾರತದ ಮೇಲೆ ದಾಳಿ ಮಾಡಿದ, ತುರುಕರು ಹಾಗೂ ಪರ್ಶಿಯನ್ನರು ಸೆರೆ ಸಿಕ್ಕ ಸೈನಿಕರಿಗೆ ಒಂದು ಶರತ್ತಿನ ಮೇಲೆ ಜೀವದಾನ ಮಾಡುತ್ತಿದ್ದರು: “ನೀವು ಇಸ್ಲಾಮ ಧರ್ಮಕ್ಕೆ ಮತಾಂತರಗೊಳ್ಳಬೇಕು”.
ಇವರ ಉದ್ದೇಶ ಸ್ಪಷ್ಟವಾಗಿದೆ. ಮತಾಂತರಗೊಂಡ ಸೈನಿಕರು ತಮ್ಮ ನಿಷ್ಠೆಯನ್ನು ಬದಲಾಯಿಸುತ್ತಾರೆ. ಇದರ ಜ್ವಲಂತ ಉದಾಹರಣೆ ಎಂದರೆ ಮಲಿಕ ಕಾಫರ. ದಕ್ಷಿಣ ಭಾರತದ ಮೇಲೆ ದಂಡೆತ್ತಿ ಬಂದಾಗ ಈ ಮತಾಂತರಿತನು ಮಾಡಿದ ಅತ್ಯಾಚಾರಗಳು ತುರುಕರ ಹಾಗೂ ಪರ್ಶಿಯನ್ನರ ಅತ್ಯಾಚಾರಗಳಿಗಿಂತ ಘೋರವಾಗಿದ್ದವು. ಆ ಸಮಯದಲ್ಲಿ ಸೋಲುಂಡ ಹೊಯ್ಸಳ ಬಲ್ಲಾಳ ದೊರೆಯು ದಕ್ಷಿಣ ಭಾರತದ ಇತರ ರಾಜರಿಗೆ ಒಂದು ಸಂದೇಶವನ್ನು ನೀಡಿದ. ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಸಂದೇಶವಿದು: “ಮಲಿಕ ಕಾಫರನು ನಮ್ಮ ರಾಜ್ಯಗಳನ್ನಷ್ಟೇ ಅಲ್ಲ, ನಮ್ಮ ಸಂಸ್ಕೃತಿಯನ್ನೇ ನಾಶ ಮಾಡುತ್ತಿದ್ದಾನೆ. ಇದಕ್ಕಿಂತ ಹೆಚ್ಚಿನ ಗಂಡಾಂತರ ಯಾವುದಿದೆ? ನಮ್ಮೆಲ್ಲರ ಬಲವನ್ನು ಒಟ್ಟುಗೂಡಿಸಿ ಹೋರಾಡೋಣ. ನಾನು ನಿಮ್ಮ ಸೈನ್ಯದಲ್ಲಿ ಸಾಮಾನ್ಯ ಸೈನಿಕನಂತೆ ಹೋರಾಡಾಲು ಸಿದ್ಧನಿದ್ದೇನೆ”.
ಆದರೆ ಆಗಲೇ ಇಳಿವಯಸ್ಸಿನಲ್ಲಿದ್ದ ಬಲ್ಲಾಳ ದೊರೆಯ ಇಷ್ಟಾರ್ಥ ಸಿದ್ಧಿಸಲಿಲ್ಲ. ಮದುರೆಯ ಸುಲ್ತಾನನು ಬಲ್ಲಾಳ ದೊರೆಯನ್ನು ಸೆರೆ ಹಿಡಿದು, ಚರ್ಮ ಸುಲಿಸಿ, ತೂಗು ಹಾಕಿದನು. ದಕ್ಷಿಣ ಭಾರತ ಸೋಲುಂಡಿತು. ಸೆರೆಯಾಳುಗಳು ಜೀವ ಉಳಿಸಿಕೊಳ್ಳಲೆಂದು ಇಸ್ಲಾಮ ಧರ್ಮಕ್ಕೆ ಶರಣಾದರು. ಈ ಸೆರೆಯಾಳುಗಳಲ್ಲಿ ಮತಾಂತರಗೊಂಡು ಜೀವ ಉಳಿಸಿಕೊಂಡ ಹುಕ್ಕ ಹಾಗೂ ಬುಕ್ಕರೂ ಇದ್ದರು.
ಶೃಂಗೇರಿ ಪೀಠಾಧಿಪತಿಯಾದ ವಿದ್ಯಾರಣ್ಯರು ಕಾಶಿಯಲ್ಲಿ ಹುಕ್ಕ ಹಾಗೂ ಬುಕ್ಕರನ್ನು ವೈದಿಕ ಧರ್ಮಕ್ಕೆ ಮರು ಮತಾಂತರಿಸಿದರು. ಆರ್ಯಸಮಾಜ ಸ್ಥಾಪಿಸಿದ ದಯಾನಂದ ಸರಸ್ವತಿಯವರು ಮರುಮತಾಂತರವನ್ನು ಪ್ರಾರಂಭಿಸುವದಕ್ಕಿಂತ ೬೦೦ ವರ್ಷಗಳಷ್ಟು ಮೊದಲೇ ವಿದ್ಯಾರಣ್ಯರು ಈ ಕಾರ್ಯ ಮಾಡಿದರು. (ಹಾಗೂ ಈ ಕಾರ್ಯಕ್ಕಾಗಿ ಅವರ ಮೇಲೆ ಬಹಿಷ್ಕಾರ ಹಾಕಲಾಗಿತ್ತು.)
ಹುಕ್ಕ, ಬುಕ್ಕರು ಮರುಮತಾಂತರಗೊಂಡು ವಿಜಯನಗರ ಸ್ಥಾಪಿಸದಿದ್ದರೆ ಏನಾಗುತ್ತಿತ್ತು? ವೈದಿಕ ಧರ್ಮ ನಾಶವಾಗುತ್ತಿತ್ತೆ?
ಧರ್ಮನಾಶಕ್ಕಿಂತ ಹೆಚ್ಚಿನ ನಷ್ಟವೆಂದರೆ ಭಾರತದ ಸಂಸ್ಕೃತಿನಾಶ.
ಕೆಲ ವರ್ಷಗಳ ಬಳಿಕ ಬುಕ್ಕನು ಮದುರೆಯ ಸುಲ್ತಾನನನ್ನು ಸೋಲಿಸಿದ ಬಳಿಕ, ಬುಕ್ಕನ ಸೊಸೆ ಕಂಪಲಾದೇವಿ ಬರೆದ “ಮದುರಾ ವಿಜಯಮ್” ಸಂಸ್ಕೃತ ಕಾವ್ಯದಲ್ಲಿ ಈ ಸಂಸ್ಕೃತಿನಾಶದ ಸ್ಪಷ್ಟ ಚಿತ್ರಣವಿದೆ.
[ “ಯಾವ ರಾಜಮಂದಿರಗಳಲ್ಲಿ ಗಿಳಿಗಳು ಮಧುರವಾಣಿಯಲ್ಲಿ ನುಡಿಯುತ್ತಿದ್ದವೊ, ಅಲ್ಲೀಗ ಗೂಗೆಗಳು ಕರ್ಕಶವಾಗಿ ಕಿರಚುತ್ತಿವೆ.”]
ಭಾರತದ ಮುಸಲ್ಮಾನರು ಧರ್ಮವನ್ನು ಬದಲಿಸಿರಬಹುದು. ಆದರೆ ರಕ್ತವನ್ನು ಬದಲಿಸಿಕೊಂಡಿಲ್ಲವಲ್ಲ. ಭಾರತೀಯ ಪ್ರಾಚೀನ ಸಂಸ್ಕೃತಿಗೆ ಹಿಂದೂಗಳಷ್ಟೇ ಮುಸಲ್ಮಾನರೂ ಸಹ ವಾರಸುದಾರರಾಗಿದ್ದಾರೆ. ಭಾರತದ ಯೋಗ, ವೇದ, ಆಯುರ್ವೇದ, ಭರತನಾಟ್ಯ, ಶಾಸ್ತ್ರೀಯ ಸಂಗೀತ ಇವೆಲ್ಲಕ್ಕೆ ಎಲ್ಲಾ ಭಾರತೀಯರೂ—whatever their religion—ವಾರಸುದಾರರೇ!
ಆದರೆ, ಮತಾಂತರಗೊಂಡವರು ಇವನ್ನೆಲ್ಲ ಮರೆತುಬಿಡುವದೇ, ಮತಾಂತರದ ದುರಂತ.
ಕಾಶ್ಮೀರದ ಮುಸಲ್ಮಾನರಲ್ಲಿಯ ಅನೇಕರ ಹೆಸರುಗಳು ‘ಭಟ್’ ಎಂದು ಇರುವದನ್ನು ಗಮನಿಸಿರಿ. ಮತಾಂತರಿತರಾದ ಈ ಭಟ್ಟರು ಈಗ ಕಟ್ಟಾ ಉಗ್ರಗಾಮಿಗಳಾಗಿರುವದೇ ಮತಾಂತರದ ದುರಂತಕ್ಕೆ ಹಿಡಿದ ಕನ್ನಡಿಯಾಗಿದೆ.
ಆದರೆ, ರಾಜಕೀಯದ ಸ್ವಾರ್ಥಸಾಧನೆಗಾಗಿ ದೇಶವನ್ನು ನಾಶ ಮಾಡಲು ಸಿದ್ಧರಾದ ರಾಜಕಾರಣಿಗಳಿದ್ದಾಗ, ಭಾರತ ದೇಶ ಒಂದು ದೇಶವಾಗಿ ಉಳಿದೀತೆ? ಮುಸ್ಲಿಮ್ ಮತಗಳ ಸಲುವಾಗಿ, ರಾಷ್ಟ್ರದ್ರೋಹಿ ಸಿಮಿ ಕಾರ್ಯಕರ್ತರಿಗೆ ಸರಕಾರದ ಹಣದಲ್ಲಿ
legal aid ಕೊಡಲು ಹೊರಟಿರುವ ಇಂತಹ ರಾಜಕಾರಣಿಗಳಿದ್ದಾಗ, ಭಾರತ ಛಿದ್ರವಾಗದೇ ಉಳಿದೀತೆ?
Sunday, September 21, 2008
ಶಿಶುನಾಳ ಶರೀಫರು
ಶಿಶುನಾಳ ಶರೀಫರು ತಮ್ಮ ತತ್ವಪದಗಳಿಂದಾಗಿ ಕರ್ನಾಟಕದ ತುಂಬ ಖ್ಯಾತರಾಗಿದ್ದಾರೆ. ಇವರ ಜೀವನದ ವಿವರಗಳು ಇಂತಿವೆ:
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನಲ್ಲಿರುವ ಶಿಶುನಾಳವು ಈಗಲೂ ಸಹ ಒಂದು ಸಣ್ಣಹಳ್ಳಿ. ಈ ಹಳ್ಳಿಯಲ್ಲಿ ದೇವಕಾರ ಮನೆತನದ ಇಮಾಮ ಹಜರತ್ ಸಾಹೇಬ ಹಾಗು ಅವರ ಹೆಂಡತಿ ಹಜ್ಜೂಮಾ ದಂಪತಿಗಳು ಜೀವಿಸುತ್ತಿದ್ದರು.
ಈ ದಂಪತಿಗಳಿಗೆ ಅನೇಕ ವರ್ಷಗಳವರೆಗೆ ಮಕ್ಕಳಿಲ್ಲದ್ದರಿಂದ, ಹುಲಗೂರಿನಲ್ಲಿದ್ದ ಸಂತ ಖಾದರ ಷಾವಲಿ ಸಮಾಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅದರ ಫಲವಾಗಿ ಕ್ರಿ.ಶ. ೧೮೧೯ನೆಯ ಇಸವಿಯ ಮಾರ್ಚ ತಿಂಗಳಿನ ೭ನೆಯ ದಿನಾಂಕದಂದು ಮಹಮ್ಮದ ಶರೀಫ ಜನಿಸಿದರು.
ಶರೀಫರು ಶಿಶುನಾಳದಲ್ಲಿಯೇ ಇದ್ದ ಕೂಲಿಮಠದಲ್ಲಿ ಕಲಿತು ಮುಲ್ಕಿ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಬಳಿಕ ಶಿಶುನಾಳದ ಅಕ್ಕಪಕ್ಕದಲ್ಲಿದ್ದ ಮಂಡಿಗನಾಳ, ಕ್ಯಾಲಕೊಂಡ, ಪಾಣಿಗಟ್ಟಿ, ಎರಿಬೂದಿಹಾಳ, ಗುಂಜಳ ಹಳ್ಳಿಗಳ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರಾಗಿ ಕೆಲವು ವರ್ಷ ಕೆಲಸ ಮಾಡಿದರು.
ಕೆಲ ಕಾಲಾನಂತರ ಕೆಲಸ ಬಿಟ್ಟ ಶರೀಫರು ತಮ್ಮ ಹಳ್ಳಿಯಲ್ಲಿಯೇ ಆಧ್ಯಾತ್ಮಚಿಂತನೆಯಲ್ಲಿ ಮಗ್ನರಾಗಿದ್ದರು. ತಮ್ಮ ಮನೆಯ ಕಟ್ಟೆಯ ಮೇಲೆ ಕುಳಿತುಕೊಂಡು ಆಧ್ಯಾತ್ಮ ಚರ್ಚೆಯಲ್ಲಿ ತೊಡಗಿರುತ್ತಿದ್ದರು.
ಈ ಸಮಯದಲ್ಲಿ ಅವರಿಗೆ ಕಳಸದ ಗೋವಿಂದ ಭಟ್ಟರ ಭೆಟ್ಟಿಯಾಯಿತು. ಗೋವಿಂದ ಭಟ್ಟರಿಂದ ಶರೀಫರಿಗೆ ಉಪದೇಶವಾಯಿತು. ಸ್ವಜಾತಿ ಬಾಂಧವರಿಗೆ ಇದು ಸರಿ ಬರಲಿಲ್ಲ. ಆದರೆ ಶರೀಫರು ತಮ್ಮ ಗುರುವಿನ ಸಂಗವನ್ನು ಬಿಡಲಿಲ್ಲ.
ತಮ್ಮ ಗುರುವನ್ನು ಶರೀಫರು ಹೀಗೆ ವರ್ಣಿಸುತ್ತಾರೆ:
ಸದ್ಗುರು ನಿನ್ನ ಮಾಯಕ್ಕೆ ಮರುಳಾದೆನೋ ||ಪಲ್ಲ||
ಕರ ಪಿಡಿದು ಎನ್ನ ಕರಣದೊಳಗೆ ಮೊದಲು
ವರಮಂತ್ರ ಬೋಧಿಸಿ ಕರವಿಟ್ಟು ಶಿರದೊಳು ||೧||
ಮಸ್ತಕ ಪಿಡಿದೆತ್ತಿ ಹಸ್ತದಿ ತರ್ಕೈಸಿ
ದುಸ್ತರ ಭವಬಾಧೆ ಕಸ್ತು ಬಿಸಾಕಿದಿ ||೨||
ಗುರುವರ ಗೋವಿಂದ ಪರಮಗಾರುಡಿಗ ನೀ—
ನಿರುತಿಹೆ ತಿಳಿಯದು ನರರಿಗೆ ಪರಿಯಿದು ||೩||
ಕೆಲಕಾಲದ ನಂತರ ಶರೀಫರಿಗೆ ಕುಂದಗೋಳದ ನಾಯಕ ಮನೆತನದ ಫಾತಿಮಾಳೊಡನೆ ಮದುವೆಯಾಯಿತು.
ಶರೀಫರಿಗೆ ತಮ್ಮ ಹೆಂಡತಿಯ ಬಗೆಗಿರುವ ಮರ್ಯಾದೆಯ ಭಾವವು ಅವರು ರಚಿಸಿದ ಈ ಹಾಡಿನಲ್ಲಿ ಕಂಡುಬರುತ್ತದೆ:
ನನ್ನ ಹೇಣ್ತೆ ನನ್ನ ಹೇಣ್ತೆ
ನಿನ್ನ ಹೆಸರೇನ್ಹೇಳಲಿ ಗುಣವಂತೆ ||ಪಲ್ಲ||
ಘನಪ್ರೀತಿಲೆ ಈ ತನುತ್ರಯದೊಳು
ದಿನ ಅನುಗೂಡೂನು ಬಾ ಗುಣವಂತೆ ||ಅನುಪಲ್ಲ||
ಮೊದಲಿಗೆ ತಾಯ್ಯಾದಿ ನನ್ನ ಹೇಣ್ತೆ ಮತ್ತೆ
ಸದನಕ ಸೊಸಿಯಾದಿ ನನ್ನ ಹೇಣ್ತೆ ಮತ್ತೆ
ಮುದದಿಂದ ಮೋಹಿಸಿ ಮದುವ್ಯಾದವನಿಗೆ
ಮಗಳೆಂದೆನಿಸಿದೆ ನನ್ನ ಹೇಣ್ತೆ ||೧||
ಅತ್ತಿಗಿ ನಾದುನಿ ನನ್ನ ಹೇಣ್ತೆ
ನಮ್ಮತ್ಯಾಗಿ ನಡಿದೀಯೇ ನನ್ನ ಹೇಣ್ತೆ
ತುತ್ತು ನೀಡಿ ಎನ್ನೆತ್ತಿ ಆಡಿಸಿದಿ
ಹೆತ್ತವ್ವನೆನಸಿದೆ ನನ್ನ ಹೇಣ್ತೆ
ಚಿಕ್ಕಮ್ಮನ ಸರಿ ನೀ ನನ್ನ ಹೇಣ್ತೆ ಎನಗ
ತಕ್ಕವಳೆನಿಸಿದೆ ನನ್ನ ಹೇಣ್ತೆ ||೨||
ಅಕ್ಕರದಲ್ಲಿ ಅನಂತಕಾಲಾ ನಮ್ಮ
ಅಕ್ಕಾಗಿ ನಡೆದೆಲ್ಲ ನೀ ನನ್ನ ಹೇಣ್ತೆ
ಬಾಳೊಂದು ಚಲ್ವಿಕೆ ನನ್ನ ಹೇಣ್ತೆ
ಆಳಾಪಕೆಳಸಿದೆ ನನ್ನ ಹೇಣ್ತೆ
ಜಾಳಮಾತಲ್ಲವು ಜಗದೊಳು ಮೋಹಿಸಿ
ಸೂಳೆ ಎಂದೆನಿಸಿದೆ ನನ್ನ ಹೇಣ್ತೆ ||೩||
ಮಂಗಳರೂಪಳೆ ನನ್ನ ಹೇಣ್ತೆ
ಅರ್ಧಾಂಗಿಯೆನಿಸಿದೆ ನನ್ನ ಹೇಣ್ತೆ
ಶೃಂಗಾರದಿ ಸವಿ ಸಕ್ಕರೆ ಉಣಿಸುವ
ತಂಗೆಂದೆನಬೇಕ ನನ್ನ ಹೇಣ್ತೆ
ಕುಶಲದಿ ಕೂಡಿದ ನನ್ನ ಹೇಣ್ತೆ
ವಸುಧಿಯೊಳು ಶಿಶುನಾಳಧೀಶನಡಿಗೆ ಹೆಣ್ಣು
ಶಿಶುವಾಗಿ ತೋರಿದಿ ನನ್ನ ಹೇಣ್ತೆ
ನಿನ್ನ ಹೆಸರೇನು ಹೇಳಲಿ ಗುಣವಂತೆ ||೪||
ಶರೀಫರ ಸಂಸಾರದಲ್ಲಿ ಇಷ್ಟು ಚೆನ್ನಾಗಿ ಹೊಂದಿಕೊಂಡದ್ದಷ್ಟೇ ಅಲ್ಲ, ಅವರ ಹೆಂಡತಿ ಅವರ ಆಧ್ಯಾತ್ಮ ಸಾಧನೆಯಲ್ಲಿಯೂ ಅವರಿಗೆ ಜೊತೆಗಾತಿಯಾಗಿರಬಹುದು.
“ಘನಪ್ರೀತಿಲೆ ಈ ತನುತ್ರಯದೊಳು
ದಿನ ಅನುಗೂಡೂನು ಬಾ ಗುಣವಂತೆ” ಎನ್ನುವ ಸಾಲುಗಳು ಸ್ಥೂಲದೇಹಕ್ಕಷ್ಟೇ ಅಲ್ಲ, ಸೂಕ್ಷ್ಮದೇಹ ಹಾಗೂ ಕಾರಣದೇಹಗಳಲ್ಲೂ ತಾವು ಜೊತೆಯಾಗಿರೋಣ ಎಂದು ಶರೀಫರು ತಮ್ಮ ಹೆಂಡತಿಗೆ ಕರೆ ಕೊಡುವದನ್ನು ತೋರಿಸುತ್ತವೆ.
ಕೆಲಕಾಲದ ನಂತರ ಶರೀಫರಿಗೆ ಒಂದು ಹೆಣ್ಣು ಮಗು ಜನಿಸಿ, ಬೇಗನೇ ಮರಣವನ್ನಪ್ಪುತ್ತದೆ. ಅವರ ಹೆಂಡತಿ ಫಾತಿಮಾ ಸಹ ಸ್ವಲ್ಪೇ ದಿನಗಳಲ್ಲಿ ತೀರಿಕೊಳ್ಳುತ್ತಾಳೆ. ಹೆಂಡತಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವರ ಮಾವ ಅವರಿಗೆ ಹೇಳಿ ಕಳಿಸುತ್ತಾರೆ. ಆದರೆ, ಶರೀಫರು ಈಗ ಎಲ್ಲಾ ಮಾಯಾಬಂಧಗಳಿಂದ ಮುಕ್ತರಾಗಿದ್ದರು. ಹೆಂಡತಿಯ ಅಂತ್ಯಕ್ರಿಯೆಯಲ್ಲಿ ಅವರು ಭಾಗವಹಿಸಲಿಲ್ಲ. ಅವರ ಮನೋಭಾವನೆ ಈ ಹಾಡಿನಲ್ಲಿ ವ್ಯಕ್ತವಾಗಿದೆ:
ಮೋಹದ ಹೆಂಡತಿ ಸತ್ತ ಬಳಿಕ
ಮಾವನ ಮನೆಯ ಹಂಗಿನ್ನ್ಯಾಕೋ ||ಪಲ್ಲ||
ಸಾವು ನೋವಿಗೆ ತರುವ ಬೀಗನ
ಮಾತಿನ ಹಂಗೊಂದೆನಗ್ಯಾಕೋ ||ಅನುಪಲ್ಲ||
ಖಂಡವನದಿ ಸೋಂಕಿ ತನ್ನ ಮೈಯೊಳು ತಾಕಿ
ಬಂಡೆದ್ದು ಹೋಗುವದು ಭಯವ್ಯಾಕೋ
ಮಂಡಲನಾಡಿಗೆ ಪಿಂಡದ ಗೂಡಿಗೆ
ಚಂಡಿತನದಿ ಚರಿಸ್ಯಾಡುವದ್ಯಾಕೋ ||೧||
ತಂದೆ ಗುರುಗೋವಿಂದನ ಸೇವಕ
ಕುಂದಗೋಳಕೆ ಬಂದು ನಿಂತಾನ್ಯಾಕೋ
ಬಂಧುರ ಶಿಶುನಾಳಧೀಶನ ದಯದಿಂದ
ಇಂದಿಗೆ ವಿಷಯದ ವ್ಯಸನಗಳ್ಯಾಕೋ ||೨||
ಇನ್ನು ಮುಂದೆ ಶರೀಫರ ಜೀವನವು ಪೂರ್ಣವಾಗಿ ಪಾರಮಾರ್ಥಿಕ ಸಾಧನೆಗೆ ಮೀಸಲಾಯಿತು. ಮಗಳು, ಮಡದಿ, ತಂದೆ,ತಾಯಿ ಹಾಗು ಕೊನೆಗೆ ಗುರು ಗೋವಿಂದ ಭಟ್ಟರ ನಿಧನದ ನಂತರ, ಶರೀಫರು ಪುಣ್ಯಕ್ಷೇತ್ರಗಳ ಯಾತ್ರೆ ಹಾಗು ಪುಣ್ಯಜೀವಿಗಳ ಭೆಟ್ಟಿಯಲ್ಲಿ ಕಾಲ ಕಳೆದರು. ನವಲಗುಂದದ ನಾಗಲಿಂಗಪ್ಪನವರು ಹಾಗೂ ಗರಗದ ಮಡಿವಾಳಪ್ಪನವರು ಶರೀಫರಿಗೆ ಅತ್ಯಂತ ಆಪ್ತರಾಗಿದ್ದರು.
ಆ ಅವಧಿಯಲ್ಲಿ ಇಳಿವಯಸ್ಸಿನಲ್ಲಿದ್ದ ಶ್ರೀ ಚಿದಂಬರ ಸ್ವಾಮಿಗಳ ಹಾಗು ಬಾಲಲೀಲಾ ಮಹಾಂತ ಶಿವಯೋಗಿಗಳ ದರ್ಶನ ಪಡೆದರು.
ಅಲ್ಲದೆ ಸಮಕಾಲೀನರಾದ ಅಗಡಿಯ ಶೇಷಾಚಲ ಸ್ವಾಮಿಗಳು, ಅವರಾದಿ ಫಲಾಹಾರ ಸ್ವಾಮಿಗಳು, ಗುಡಗೇರಿಯ ಕಲ್ಮಠದ ಸಂಗಮೇಶ್ವರರು, ಅಂಕಲಗಿಯ ಶ್ರೀ ಅಡವಿ ಸ್ವಾಮಿಗಳು ಹಾಗು ವಿಶ್ವಕರ್ಮದ ಪ್ರಭುಸ್ವಾಮಿಗಳು ಇವರೆಲ್ಲರ ಸತ್ಸಂಗವನ್ನು ಪಡೆದರು.
ತಮ್ಮ ಕೊನೆಯ ದಿನಗಳಲ್ಲಿ ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮಿಗಳನ್ನು ಸಂದರ್ಶಿಸಿದಾಗ ಸ್ವಾಮಿಗಳಿನ್ನೂ ಚಿಕ್ಕವರಿದ್ದರು.
ಶರೀಫರು ಯಾವುದೇ ಕೆಲಸ ಮಾಡದೆ, ಆತ್ಮಚಿಂತನೆಯಲ್ಲಿ ಮಗ್ನರಾಗಿ ಇರುತ್ತಿದ್ದರಿಂದ ಸಾಕಷ್ಟು ನಿಂದನೆಯನ್ನು ಎದುರಿಸಬೇಕಾಯಿತು. ಸಾಲಗಾರರ ಕಾಟದಿಂದ ಮುಕ್ತರಾಗಲು, ಶಿಶುನಾಳದಲ್ಲಿದ್ದ ತಮ್ಮ ಹೊಲವನ್ನು ಮಾರಬೇಕಾಯಿತು. ಇದೆಲ್ಲವನ್ನೂ ಶರೀಫರು ದೇವರ ದಯವೆಂದೇ ಭಾವಿಸಿದರು:
ಎಂಥಿಂಥಾದೆಲ್ಲಾನು ಬರಲಿ
ಚಿಂತೆಯಂಬೋದು ನಿಜವಾಗಿರಲಿ ||ಪಲ್ಲ||
ಪರಾತ್ಪರನಾದ ಗುರುವಿನ
ಅಂತಃಕರಣ ಒಂದು ಬಿಡದಿರಲಿ ||ಅನುಪಲ್ಲ||
ಬಡತನೆಂಬುದು ಕಡೆತನಕಿರಲಿ
ವಡವಿ ವಸ್ತ ಹಾಳಾಗಿ ಹೋಗಲಿ
ನಡುವಂಥ ದಾರಿಯು ತಪ್ಪಿ
ಅಡವಿ ಸೇರಿದಂತಾಗಿ ಹೋಗಲಿ ||೧||
ಗಂಡಸ್ತಾನ ಇಲ್ಲದಂತಾಗಲಿ
ಹೆಂಡರು ಮಕ್ಕಳು ಬಿಟಗೊಟ್ಟು ಹೋಗಲಿ
ಕುಂಡಿ ಕುಂಡಿ ಸಾಲ್ದವರೊದೆಯಲಿ
ಬಂಡು ಮಾಡಿ ಜನರು ನಗಲಿ ||೨||
ನಂಬಿಗೆ ಎಳ್ಳಷ್ಟಿಲ್ಲದಂತಾಗಲಿ
ಅಂಬಲಿ ಎನಗೆ ಸಿಗದೆ ಹೋಗಲಿ
ಹುಂಬಸುಳೇಮಗನೆಂದು ಬೈಯಲಿ
ಕಂಬಾ ಮುರಕೊಂಡು ಎನ್ನ ಮ್ಯಾಲೆ ಬೀಳಲಿ ||೩||
ವ್ಯಾಪಾರುದ್ಯೋಗ ಇಲ್ಲದಾಂಗಾಗಲಿ
ಬುದ್ಧಿಯೆಂಬುದು ಮಸಣಿಸಿ ಹೋಗಲಿ
ಮದ್ದು ಹಾಕಿ ಎನ್ನನು ಕೊಲ್ಲಲಿ
ಹದ್ದು ಕಾಗಿ ಹರಕೊಂಡು ತಿನ್ನಲಿ ||೪||
ಭಾಷೆ ಪಂಥ ನಡಿದ್ಹಾಂಗಾಗಲಿ
ಹಾಸ್ಯ ಮಾಡಿ ಜನರೆಲ್ಲರು ನಗಲಿ
ಈ ಶಿಶುನಾಳಧೀಶ ಸದ್ಗುರುವಿನ
ಲೇಸಾದ ದಯವೊಂದು ಕಡೆತನಕಿರಲಿ ||೫||
ತಮ್ಮ ಕೊನೆಗಾಲವನ್ನು ಅರಿತ ಶರೀಫರು, ಶರಣರ ಪದ್ಧತಿಯಂತೆ “ವಿಭೂತಿ ವೀಳ್ಯೆ” ಮಾಡಿಸಿಕೊಂಡು ದೇಹತ್ಯಾಗ ಮಾಡಲು ಬಯಸಿದರು. ಈ ವಿಧಾನದ ಪ್ರಕಾರ ಜಂಗಮ ಪಾದಪೂಜೆ ಹಾಗು ಶರೀಫರ ಮಸ್ತಕದ ಮೇಲೆ ಜಂಗಮನ ಪಾದವಿಟ್ಟು ಶಿವಸಾಯುಜ್ಯ ಮಂತ್ರಪಠಣ ಮಾಡುವ ಅವಶ್ಯಕತೆ ಇತ್ತು. ಶರೀಫರ ಹಣೆಯ ಮೇಲೆ ಪಾದವಿಡಲು ಯಾವ ಜಂಗಮ ಒಪ್ಪಿಯಾರು? ಕೊನೆಗೆ ಹಿರೇಮಠದ ಕರಿಬಸವಯ್ಯನವರು ಶರೀಫರ ಇಚ್ಛೆಯನ್ನು ಪೂರ್ಣಗೊಳಿಸಿದರು. ಆ ಕ್ಷಣವೇ ಶರೀಫರು ಓಂಕಾರದಲ್ಲಿ ಲೀನವಾದರು:(ಕ್ರಿ.ಶ.೧೮೮೯ನೆಯ ಮಾರ್ಚ ೭ನೆಯ ದಿನಾಂಕ.)
ಬಿಡತೇನಿ ದೇಹ ಬಿಡತೇನಿ ||ಪಲ್ಲ||
ಬಿಡತೇನಿ ದೇಹವ ಕೊಡತೇನಿ ಭೂಮಿಗೆ
ಇಡತೇನಿ ಮಹಿಮಾದ ನಡತೆ ಹಿಡಿದು ದೇಹಾ ||೧||
ಪಾವಕಾಗುಹುತಿ ಮಾಡಿ ಜೀವನದಸು
ನಾ ಬೇರೆ ಬೈಲು ಬ್ರಹ್ಮದೊಳಾಡುತಲಿ ದೇಹಾ ||೨||
ಅವನಿಯೊಳು ಶಿಶುನಾಳಧೀಶನೆ ಗತಿಯೆಂದು
ಜವನಬಾಧೆಗೆದ್ದು ಶಿವಲೋಕದೊಳು ದೇಹಾ ಬಿಡತೇನಿ ||೩||
ಶರೀಫರ ಅಂತ್ಯಕ್ರಿಯೆಯನ್ನು ಹಿಂದು ಹಾಗು ಮುಸ್ಲಿಮರು ಕೂಡಿಯೇ ಮಾಡಿದರು. ಶರೀಫರ ತಂದೆ,ತಾಯಿಗಳ ಸಮಾಧಿಯ ಪಕ್ಕದಲ್ಲಿಯೇ ಶರೀಫರ ಸಮಾಧಿಯಾಯಿತು. ಈ ಗದ್ದುಗೆಯು ಯಾವುದೇ ಧರ್ಮದ ಮಾದರಿಯಲ್ಲಿ ಇಲ್ಲ. ವಿಶಾಲವಾದ ಕಟ್ಟೆ, ಅದಕ್ಕೆ ನೆರಳು ನೀಡುವ ಮರ ಇವೇ ಅವರ ಗದ್ದುಗೆ.
ಗದ್ದುಗೆಯ ಎಡಭಾಗದಲ್ಲಿ ಮುಸಲ್ಮಾನರು ಹಾಗು ಬಲಭಾಗದಲ್ಲಿ ಹಿಂದೂಗಳು ತಮ್ಮ ಪದ್ಧತಿಯ ಪ್ರಕಾರ ಪೂಜೆ ಸಲ್ಲಿಸುತ್ತಾರೆ.
ಗುಡಿಯ ನೋಡಿರಣ್ಣಾ ದೇಹದ
ಗುಡಿಯ ನೋಡಿರಣ್ಣಾ ||ಪಲ್ಲ||
ಗುಡಿಯ ನೋಡಿರಿದು
ಪೊಡವಿಗೆ ಒಡೆಯನು
ಆಡಗಿಕೊಂಡು ಕಡುಬೆಡಗಿನೊಳಿರುತಿಹ
ಗುಡಿಯ ನೋಡಿರಣ್ಣಾ ||ಅನುಪಲ್ಲ||
ಮೂರು ಮೂಲೆಯ ಕಲ್ಲು ಅದರೊಳು
ಜಾರುತಿರುವ ಕಲ್ಲು
ಧೀರ ನಿರ್ಗುಣನು ಸಾರ ಸಗುಣದಲಿ
ತೋರಿ ಅಡಗಿ ತಾ ಬ್ಯಾರ್ಯಾಗಿರುತಿಹ
ಗುಡಿಯ ನೋಡಿರಣ್ಣಾ ||೧||
ಆರು ಮೂರು ಕಟ್ಟಿ ಮೇಲಕೆ
ಏರಿದನು ಘಟ್ಟಿ
ಭೇರಿ ಕಾಳಿ ಶಂಖ
ಭಾರಿ ಸುನಾದದಿ
ಮೀರಿದಾನಂದ ತೋರಿ ಹೊಳೆಯುತಿಹ
ಗುಡಿಯ ನೋಡಿರಣ್ಣಾ ||೨||
ಸಾಗುತಿಹವು ದಿವಸ ಬಹುದಿನ
ಹೋಗಿ ಮಾಡಿ ಪಾಯ್ಸ
ಯೋಗಿ ರಾಜ ಶಿಶುನಾಳಧೀಶ ತಾ—
ನಾಗಿ ಪರಾತ್ಪರ ಬ್ರಹ್ಮರೂಪನಿಹ
ಗುಡಿಯ ನೋಡಿರಣ್ಣಾ ||೩||
……………………………………………………..
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನಲ್ಲಿರುವ ಶಿಶುನಾಳವು ಈಗಲೂ ಸಹ ಒಂದು ಸಣ್ಣಹಳ್ಳಿ. ಈ ಹಳ್ಳಿಯಲ್ಲಿ ದೇವಕಾರ ಮನೆತನದ ಇಮಾಮ ಹಜರತ್ ಸಾಹೇಬ ಹಾಗು ಅವರ ಹೆಂಡತಿ ಹಜ್ಜೂಮಾ ದಂಪತಿಗಳು ಜೀವಿಸುತ್ತಿದ್ದರು.
ಈ ದಂಪತಿಗಳಿಗೆ ಅನೇಕ ವರ್ಷಗಳವರೆಗೆ ಮಕ್ಕಳಿಲ್ಲದ್ದರಿಂದ, ಹುಲಗೂರಿನಲ್ಲಿದ್ದ ಸಂತ ಖಾದರ ಷಾವಲಿ ಸಮಾಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅದರ ಫಲವಾಗಿ ಕ್ರಿ.ಶ. ೧೮೧೯ನೆಯ ಇಸವಿಯ ಮಾರ್ಚ ತಿಂಗಳಿನ ೭ನೆಯ ದಿನಾಂಕದಂದು ಮಹಮ್ಮದ ಶರೀಫ ಜನಿಸಿದರು.
ಶರೀಫರು ಶಿಶುನಾಳದಲ್ಲಿಯೇ ಇದ್ದ ಕೂಲಿಮಠದಲ್ಲಿ ಕಲಿತು ಮುಲ್ಕಿ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಬಳಿಕ ಶಿಶುನಾಳದ ಅಕ್ಕಪಕ್ಕದಲ್ಲಿದ್ದ ಮಂಡಿಗನಾಳ, ಕ್ಯಾಲಕೊಂಡ, ಪಾಣಿಗಟ್ಟಿ, ಎರಿಬೂದಿಹಾಳ, ಗುಂಜಳ ಹಳ್ಳಿಗಳ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರಾಗಿ ಕೆಲವು ವರ್ಷ ಕೆಲಸ ಮಾಡಿದರು.
ಕೆಲ ಕಾಲಾನಂತರ ಕೆಲಸ ಬಿಟ್ಟ ಶರೀಫರು ತಮ್ಮ ಹಳ್ಳಿಯಲ್ಲಿಯೇ ಆಧ್ಯಾತ್ಮಚಿಂತನೆಯಲ್ಲಿ ಮಗ್ನರಾಗಿದ್ದರು. ತಮ್ಮ ಮನೆಯ ಕಟ್ಟೆಯ ಮೇಲೆ ಕುಳಿತುಕೊಂಡು ಆಧ್ಯಾತ್ಮ ಚರ್ಚೆಯಲ್ಲಿ ತೊಡಗಿರುತ್ತಿದ್ದರು.
ಈ ಸಮಯದಲ್ಲಿ ಅವರಿಗೆ ಕಳಸದ ಗೋವಿಂದ ಭಟ್ಟರ ಭೆಟ್ಟಿಯಾಯಿತು. ಗೋವಿಂದ ಭಟ್ಟರಿಂದ ಶರೀಫರಿಗೆ ಉಪದೇಶವಾಯಿತು. ಸ್ವಜಾತಿ ಬಾಂಧವರಿಗೆ ಇದು ಸರಿ ಬರಲಿಲ್ಲ. ಆದರೆ ಶರೀಫರು ತಮ್ಮ ಗುರುವಿನ ಸಂಗವನ್ನು ಬಿಡಲಿಲ್ಲ.
ತಮ್ಮ ಗುರುವನ್ನು ಶರೀಫರು ಹೀಗೆ ವರ್ಣಿಸುತ್ತಾರೆ:
ಸದ್ಗುರು ನಿನ್ನ ಮಾಯಕ್ಕೆ ಮರುಳಾದೆನೋ ||ಪಲ್ಲ||
ಕರ ಪಿಡಿದು ಎನ್ನ ಕರಣದೊಳಗೆ ಮೊದಲು
ವರಮಂತ್ರ ಬೋಧಿಸಿ ಕರವಿಟ್ಟು ಶಿರದೊಳು ||೧||
ಮಸ್ತಕ ಪಿಡಿದೆತ್ತಿ ಹಸ್ತದಿ ತರ್ಕೈಸಿ
ದುಸ್ತರ ಭವಬಾಧೆ ಕಸ್ತು ಬಿಸಾಕಿದಿ ||೨||
ಗುರುವರ ಗೋವಿಂದ ಪರಮಗಾರುಡಿಗ ನೀ—
ನಿರುತಿಹೆ ತಿಳಿಯದು ನರರಿಗೆ ಪರಿಯಿದು ||೩||
ಕೆಲಕಾಲದ ನಂತರ ಶರೀಫರಿಗೆ ಕುಂದಗೋಳದ ನಾಯಕ ಮನೆತನದ ಫಾತಿಮಾಳೊಡನೆ ಮದುವೆಯಾಯಿತು.
ಶರೀಫರಿಗೆ ತಮ್ಮ ಹೆಂಡತಿಯ ಬಗೆಗಿರುವ ಮರ್ಯಾದೆಯ ಭಾವವು ಅವರು ರಚಿಸಿದ ಈ ಹಾಡಿನಲ್ಲಿ ಕಂಡುಬರುತ್ತದೆ:
ನನ್ನ ಹೇಣ್ತೆ ನನ್ನ ಹೇಣ್ತೆ
ನಿನ್ನ ಹೆಸರೇನ್ಹೇಳಲಿ ಗುಣವಂತೆ ||ಪಲ್ಲ||
ಘನಪ್ರೀತಿಲೆ ಈ ತನುತ್ರಯದೊಳು
ದಿನ ಅನುಗೂಡೂನು ಬಾ ಗುಣವಂತೆ ||ಅನುಪಲ್ಲ||
ಮೊದಲಿಗೆ ತಾಯ್ಯಾದಿ ನನ್ನ ಹೇಣ್ತೆ ಮತ್ತೆ
ಸದನಕ ಸೊಸಿಯಾದಿ ನನ್ನ ಹೇಣ್ತೆ ಮತ್ತೆ
ಮುದದಿಂದ ಮೋಹಿಸಿ ಮದುವ್ಯಾದವನಿಗೆ
ಮಗಳೆಂದೆನಿಸಿದೆ ನನ್ನ ಹೇಣ್ತೆ ||೧||
ಅತ್ತಿಗಿ ನಾದುನಿ ನನ್ನ ಹೇಣ್ತೆ
ನಮ್ಮತ್ಯಾಗಿ ನಡಿದೀಯೇ ನನ್ನ ಹೇಣ್ತೆ
ತುತ್ತು ನೀಡಿ ಎನ್ನೆತ್ತಿ ಆಡಿಸಿದಿ
ಹೆತ್ತವ್ವನೆನಸಿದೆ ನನ್ನ ಹೇಣ್ತೆ
ಚಿಕ್ಕಮ್ಮನ ಸರಿ ನೀ ನನ್ನ ಹೇಣ್ತೆ ಎನಗ
ತಕ್ಕವಳೆನಿಸಿದೆ ನನ್ನ ಹೇಣ್ತೆ ||೨||
ಅಕ್ಕರದಲ್ಲಿ ಅನಂತಕಾಲಾ ನಮ್ಮ
ಅಕ್ಕಾಗಿ ನಡೆದೆಲ್ಲ ನೀ ನನ್ನ ಹೇಣ್ತೆ
ಬಾಳೊಂದು ಚಲ್ವಿಕೆ ನನ್ನ ಹೇಣ್ತೆ
ಆಳಾಪಕೆಳಸಿದೆ ನನ್ನ ಹೇಣ್ತೆ
ಜಾಳಮಾತಲ್ಲವು ಜಗದೊಳು ಮೋಹಿಸಿ
ಸೂಳೆ ಎಂದೆನಿಸಿದೆ ನನ್ನ ಹೇಣ್ತೆ ||೩||
ಮಂಗಳರೂಪಳೆ ನನ್ನ ಹೇಣ್ತೆ
ಅರ್ಧಾಂಗಿಯೆನಿಸಿದೆ ನನ್ನ ಹೇಣ್ತೆ
ಶೃಂಗಾರದಿ ಸವಿ ಸಕ್ಕರೆ ಉಣಿಸುವ
ತಂಗೆಂದೆನಬೇಕ ನನ್ನ ಹೇಣ್ತೆ
ಕುಶಲದಿ ಕೂಡಿದ ನನ್ನ ಹೇಣ್ತೆ
ವಸುಧಿಯೊಳು ಶಿಶುನಾಳಧೀಶನಡಿಗೆ ಹೆಣ್ಣು
ಶಿಶುವಾಗಿ ತೋರಿದಿ ನನ್ನ ಹೇಣ್ತೆ
ನಿನ್ನ ಹೆಸರೇನು ಹೇಳಲಿ ಗುಣವಂತೆ ||೪||
ಶರೀಫರ ಸಂಸಾರದಲ್ಲಿ ಇಷ್ಟು ಚೆನ್ನಾಗಿ ಹೊಂದಿಕೊಂಡದ್ದಷ್ಟೇ ಅಲ್ಲ, ಅವರ ಹೆಂಡತಿ ಅವರ ಆಧ್ಯಾತ್ಮ ಸಾಧನೆಯಲ್ಲಿಯೂ ಅವರಿಗೆ ಜೊತೆಗಾತಿಯಾಗಿರಬಹುದು.
“ಘನಪ್ರೀತಿಲೆ ಈ ತನುತ್ರಯದೊಳು
ದಿನ ಅನುಗೂಡೂನು ಬಾ ಗುಣವಂತೆ” ಎನ್ನುವ ಸಾಲುಗಳು ಸ್ಥೂಲದೇಹಕ್ಕಷ್ಟೇ ಅಲ್ಲ, ಸೂಕ್ಷ್ಮದೇಹ ಹಾಗೂ ಕಾರಣದೇಹಗಳಲ್ಲೂ ತಾವು ಜೊತೆಯಾಗಿರೋಣ ಎಂದು ಶರೀಫರು ತಮ್ಮ ಹೆಂಡತಿಗೆ ಕರೆ ಕೊಡುವದನ್ನು ತೋರಿಸುತ್ತವೆ.
ಕೆಲಕಾಲದ ನಂತರ ಶರೀಫರಿಗೆ ಒಂದು ಹೆಣ್ಣು ಮಗು ಜನಿಸಿ, ಬೇಗನೇ ಮರಣವನ್ನಪ್ಪುತ್ತದೆ. ಅವರ ಹೆಂಡತಿ ಫಾತಿಮಾ ಸಹ ಸ್ವಲ್ಪೇ ದಿನಗಳಲ್ಲಿ ತೀರಿಕೊಳ್ಳುತ್ತಾಳೆ. ಹೆಂಡತಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವರ ಮಾವ ಅವರಿಗೆ ಹೇಳಿ ಕಳಿಸುತ್ತಾರೆ. ಆದರೆ, ಶರೀಫರು ಈಗ ಎಲ್ಲಾ ಮಾಯಾಬಂಧಗಳಿಂದ ಮುಕ್ತರಾಗಿದ್ದರು. ಹೆಂಡತಿಯ ಅಂತ್ಯಕ್ರಿಯೆಯಲ್ಲಿ ಅವರು ಭಾಗವಹಿಸಲಿಲ್ಲ. ಅವರ ಮನೋಭಾವನೆ ಈ ಹಾಡಿನಲ್ಲಿ ವ್ಯಕ್ತವಾಗಿದೆ:
ಮೋಹದ ಹೆಂಡತಿ ಸತ್ತ ಬಳಿಕ
ಮಾವನ ಮನೆಯ ಹಂಗಿನ್ನ್ಯಾಕೋ ||ಪಲ್ಲ||
ಸಾವು ನೋವಿಗೆ ತರುವ ಬೀಗನ
ಮಾತಿನ ಹಂಗೊಂದೆನಗ್ಯಾಕೋ ||ಅನುಪಲ್ಲ||
ಖಂಡವನದಿ ಸೋಂಕಿ ತನ್ನ ಮೈಯೊಳು ತಾಕಿ
ಬಂಡೆದ್ದು ಹೋಗುವದು ಭಯವ್ಯಾಕೋ
ಮಂಡಲನಾಡಿಗೆ ಪಿಂಡದ ಗೂಡಿಗೆ
ಚಂಡಿತನದಿ ಚರಿಸ್ಯಾಡುವದ್ಯಾಕೋ ||೧||
ತಂದೆ ಗುರುಗೋವಿಂದನ ಸೇವಕ
ಕುಂದಗೋಳಕೆ ಬಂದು ನಿಂತಾನ್ಯಾಕೋ
ಬಂಧುರ ಶಿಶುನಾಳಧೀಶನ ದಯದಿಂದ
ಇಂದಿಗೆ ವಿಷಯದ ವ್ಯಸನಗಳ್ಯಾಕೋ ||೨||
ಇನ್ನು ಮುಂದೆ ಶರೀಫರ ಜೀವನವು ಪೂರ್ಣವಾಗಿ ಪಾರಮಾರ್ಥಿಕ ಸಾಧನೆಗೆ ಮೀಸಲಾಯಿತು. ಮಗಳು, ಮಡದಿ, ತಂದೆ,ತಾಯಿ ಹಾಗು ಕೊನೆಗೆ ಗುರು ಗೋವಿಂದ ಭಟ್ಟರ ನಿಧನದ ನಂತರ, ಶರೀಫರು ಪುಣ್ಯಕ್ಷೇತ್ರಗಳ ಯಾತ್ರೆ ಹಾಗು ಪುಣ್ಯಜೀವಿಗಳ ಭೆಟ್ಟಿಯಲ್ಲಿ ಕಾಲ ಕಳೆದರು. ನವಲಗುಂದದ ನಾಗಲಿಂಗಪ್ಪನವರು ಹಾಗೂ ಗರಗದ ಮಡಿವಾಳಪ್ಪನವರು ಶರೀಫರಿಗೆ ಅತ್ಯಂತ ಆಪ್ತರಾಗಿದ್ದರು.
ಆ ಅವಧಿಯಲ್ಲಿ ಇಳಿವಯಸ್ಸಿನಲ್ಲಿದ್ದ ಶ್ರೀ ಚಿದಂಬರ ಸ್ವಾಮಿಗಳ ಹಾಗು ಬಾಲಲೀಲಾ ಮಹಾಂತ ಶಿವಯೋಗಿಗಳ ದರ್ಶನ ಪಡೆದರು.
ಅಲ್ಲದೆ ಸಮಕಾಲೀನರಾದ ಅಗಡಿಯ ಶೇಷಾಚಲ ಸ್ವಾಮಿಗಳು, ಅವರಾದಿ ಫಲಾಹಾರ ಸ್ವಾಮಿಗಳು, ಗುಡಗೇರಿಯ ಕಲ್ಮಠದ ಸಂಗಮೇಶ್ವರರು, ಅಂಕಲಗಿಯ ಶ್ರೀ ಅಡವಿ ಸ್ವಾಮಿಗಳು ಹಾಗು ವಿಶ್ವಕರ್ಮದ ಪ್ರಭುಸ್ವಾಮಿಗಳು ಇವರೆಲ್ಲರ ಸತ್ಸಂಗವನ್ನು ಪಡೆದರು.
ತಮ್ಮ ಕೊನೆಯ ದಿನಗಳಲ್ಲಿ ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮಿಗಳನ್ನು ಸಂದರ್ಶಿಸಿದಾಗ ಸ್ವಾಮಿಗಳಿನ್ನೂ ಚಿಕ್ಕವರಿದ್ದರು.
ಶರೀಫರು ಯಾವುದೇ ಕೆಲಸ ಮಾಡದೆ, ಆತ್ಮಚಿಂತನೆಯಲ್ಲಿ ಮಗ್ನರಾಗಿ ಇರುತ್ತಿದ್ದರಿಂದ ಸಾಕಷ್ಟು ನಿಂದನೆಯನ್ನು ಎದುರಿಸಬೇಕಾಯಿತು. ಸಾಲಗಾರರ ಕಾಟದಿಂದ ಮುಕ್ತರಾಗಲು, ಶಿಶುನಾಳದಲ್ಲಿದ್ದ ತಮ್ಮ ಹೊಲವನ್ನು ಮಾರಬೇಕಾಯಿತು. ಇದೆಲ್ಲವನ್ನೂ ಶರೀಫರು ದೇವರ ದಯವೆಂದೇ ಭಾವಿಸಿದರು:
ಎಂಥಿಂಥಾದೆಲ್ಲಾನು ಬರಲಿ
ಚಿಂತೆಯಂಬೋದು ನಿಜವಾಗಿರಲಿ ||ಪಲ್ಲ||
ಪರಾತ್ಪರನಾದ ಗುರುವಿನ
ಅಂತಃಕರಣ ಒಂದು ಬಿಡದಿರಲಿ ||ಅನುಪಲ್ಲ||
ಬಡತನೆಂಬುದು ಕಡೆತನಕಿರಲಿ
ವಡವಿ ವಸ್ತ ಹಾಳಾಗಿ ಹೋಗಲಿ
ನಡುವಂಥ ದಾರಿಯು ತಪ್ಪಿ
ಅಡವಿ ಸೇರಿದಂತಾಗಿ ಹೋಗಲಿ ||೧||
ಗಂಡಸ್ತಾನ ಇಲ್ಲದಂತಾಗಲಿ
ಹೆಂಡರು ಮಕ್ಕಳು ಬಿಟಗೊಟ್ಟು ಹೋಗಲಿ
ಕುಂಡಿ ಕುಂಡಿ ಸಾಲ್ದವರೊದೆಯಲಿ
ಬಂಡು ಮಾಡಿ ಜನರು ನಗಲಿ ||೨||
ನಂಬಿಗೆ ಎಳ್ಳಷ್ಟಿಲ್ಲದಂತಾಗಲಿ
ಅಂಬಲಿ ಎನಗೆ ಸಿಗದೆ ಹೋಗಲಿ
ಹುಂಬಸುಳೇಮಗನೆಂದು ಬೈಯಲಿ
ಕಂಬಾ ಮುರಕೊಂಡು ಎನ್ನ ಮ್ಯಾಲೆ ಬೀಳಲಿ ||೩||
ವ್ಯಾಪಾರುದ್ಯೋಗ ಇಲ್ಲದಾಂಗಾಗಲಿ
ಬುದ್ಧಿಯೆಂಬುದು ಮಸಣಿಸಿ ಹೋಗಲಿ
ಮದ್ದು ಹಾಕಿ ಎನ್ನನು ಕೊಲ್ಲಲಿ
ಹದ್ದು ಕಾಗಿ ಹರಕೊಂಡು ತಿನ್ನಲಿ ||೪||
ಭಾಷೆ ಪಂಥ ನಡಿದ್ಹಾಂಗಾಗಲಿ
ಹಾಸ್ಯ ಮಾಡಿ ಜನರೆಲ್ಲರು ನಗಲಿ
ಈ ಶಿಶುನಾಳಧೀಶ ಸದ್ಗುರುವಿನ
ಲೇಸಾದ ದಯವೊಂದು ಕಡೆತನಕಿರಲಿ ||೫||
ತಮ್ಮ ಕೊನೆಗಾಲವನ್ನು ಅರಿತ ಶರೀಫರು, ಶರಣರ ಪದ್ಧತಿಯಂತೆ “ವಿಭೂತಿ ವೀಳ್ಯೆ” ಮಾಡಿಸಿಕೊಂಡು ದೇಹತ್ಯಾಗ ಮಾಡಲು ಬಯಸಿದರು. ಈ ವಿಧಾನದ ಪ್ರಕಾರ ಜಂಗಮ ಪಾದಪೂಜೆ ಹಾಗು ಶರೀಫರ ಮಸ್ತಕದ ಮೇಲೆ ಜಂಗಮನ ಪಾದವಿಟ್ಟು ಶಿವಸಾಯುಜ್ಯ ಮಂತ್ರಪಠಣ ಮಾಡುವ ಅವಶ್ಯಕತೆ ಇತ್ತು. ಶರೀಫರ ಹಣೆಯ ಮೇಲೆ ಪಾದವಿಡಲು ಯಾವ ಜಂಗಮ ಒಪ್ಪಿಯಾರು? ಕೊನೆಗೆ ಹಿರೇಮಠದ ಕರಿಬಸವಯ್ಯನವರು ಶರೀಫರ ಇಚ್ಛೆಯನ್ನು ಪೂರ್ಣಗೊಳಿಸಿದರು. ಆ ಕ್ಷಣವೇ ಶರೀಫರು ಓಂಕಾರದಲ್ಲಿ ಲೀನವಾದರು:(ಕ್ರಿ.ಶ.೧೮೮೯ನೆಯ ಮಾರ್ಚ ೭ನೆಯ ದಿನಾಂಕ.)
ಬಿಡತೇನಿ ದೇಹ ಬಿಡತೇನಿ ||ಪಲ್ಲ||
ಬಿಡತೇನಿ ದೇಹವ ಕೊಡತೇನಿ ಭೂಮಿಗೆ
ಇಡತೇನಿ ಮಹಿಮಾದ ನಡತೆ ಹಿಡಿದು ದೇಹಾ ||೧||
ಪಾವಕಾಗುಹುತಿ ಮಾಡಿ ಜೀವನದಸು
ನಾ ಬೇರೆ ಬೈಲು ಬ್ರಹ್ಮದೊಳಾಡುತಲಿ ದೇಹಾ ||೨||
ಅವನಿಯೊಳು ಶಿಶುನಾಳಧೀಶನೆ ಗತಿಯೆಂದು
ಜವನಬಾಧೆಗೆದ್ದು ಶಿವಲೋಕದೊಳು ದೇಹಾ ಬಿಡತೇನಿ ||೩||
ಶರೀಫರ ಅಂತ್ಯಕ್ರಿಯೆಯನ್ನು ಹಿಂದು ಹಾಗು ಮುಸ್ಲಿಮರು ಕೂಡಿಯೇ ಮಾಡಿದರು. ಶರೀಫರ ತಂದೆ,ತಾಯಿಗಳ ಸಮಾಧಿಯ ಪಕ್ಕದಲ್ಲಿಯೇ ಶರೀಫರ ಸಮಾಧಿಯಾಯಿತು. ಈ ಗದ್ದುಗೆಯು ಯಾವುದೇ ಧರ್ಮದ ಮಾದರಿಯಲ್ಲಿ ಇಲ್ಲ. ವಿಶಾಲವಾದ ಕಟ್ಟೆ, ಅದಕ್ಕೆ ನೆರಳು ನೀಡುವ ಮರ ಇವೇ ಅವರ ಗದ್ದುಗೆ.
ಗದ್ದುಗೆಯ ಎಡಭಾಗದಲ್ಲಿ ಮುಸಲ್ಮಾನರು ಹಾಗು ಬಲಭಾಗದಲ್ಲಿ ಹಿಂದೂಗಳು ತಮ್ಮ ಪದ್ಧತಿಯ ಪ್ರಕಾರ ಪೂಜೆ ಸಲ್ಲಿಸುತ್ತಾರೆ.
ಗುಡಿಯ ನೋಡಿರಣ್ಣಾ ದೇಹದ
ಗುಡಿಯ ನೋಡಿರಣ್ಣಾ ||ಪಲ್ಲ||
ಗುಡಿಯ ನೋಡಿರಿದು
ಪೊಡವಿಗೆ ಒಡೆಯನು
ಆಡಗಿಕೊಂಡು ಕಡುಬೆಡಗಿನೊಳಿರುತಿಹ
ಗುಡಿಯ ನೋಡಿರಣ್ಣಾ ||ಅನುಪಲ್ಲ||
ಮೂರು ಮೂಲೆಯ ಕಲ್ಲು ಅದರೊಳು
ಜಾರುತಿರುವ ಕಲ್ಲು
ಧೀರ ನಿರ್ಗುಣನು ಸಾರ ಸಗುಣದಲಿ
ತೋರಿ ಅಡಗಿ ತಾ ಬ್ಯಾರ್ಯಾಗಿರುತಿಹ
ಗುಡಿಯ ನೋಡಿರಣ್ಣಾ ||೧||
ಆರು ಮೂರು ಕಟ್ಟಿ ಮೇಲಕೆ
ಏರಿದನು ಘಟ್ಟಿ
ಭೇರಿ ಕಾಳಿ ಶಂಖ
ಭಾರಿ ಸುನಾದದಿ
ಮೀರಿದಾನಂದ ತೋರಿ ಹೊಳೆಯುತಿಹ
ಗುಡಿಯ ನೋಡಿರಣ್ಣಾ ||೨||
ಸಾಗುತಿಹವು ದಿವಸ ಬಹುದಿನ
ಹೋಗಿ ಮಾಡಿ ಪಾಯ್ಸ
ಯೋಗಿ ರಾಜ ಶಿಶುನಾಳಧೀಶ ತಾ—
ನಾಗಿ ಪರಾತ್ಪರ ಬ್ರಹ್ಮರೂಪನಿಹ
ಗುಡಿಯ ನೋಡಿರಣ್ಣಾ ||೩||
……………………………………………………..
Wednesday, September 10, 2008
ಚಿಗರಿಗಂಗಳ ಚೆಲುವಿ.........ದ.ರಾ.ಬೇಂದ್ರೆ
ವಸುಂಧರಾ ಎನ್ನುವದು ನಮ್ಮ ಪುರಾತನ ಕವಿಗಳು ಭೂಮಿತಾಯಿಗೆ ಕೊಟ್ಟ ಹೆಸರು. ವಸು ಎಂದರೆ ಜೀವಿ.
ಭೂಮಿತಾಯಿಯು ಜೀವಿಗಳನ್ನು ಹೊತ್ತವಳು,
ಆದುದರಿಂದ ಇವಳು ವಸುಂಧರಾ. ಇವಳಲ್ಲಿ ಅಡಗಿರುವ ಅನೇಕ ಹಾಗೂ ಅಮೂಲ್ಯ ಸಂಪತ್ತಿನಿಂದಾಗಿ
ಇವಳನ್ನು ‘ಬಹುರತ್ನಾ ವಸುಂಧರಾ’ ಎಂದು
ಬಣ್ಣಿಸಲಾಗಿದೆ.
ಬೇಂದ್ರೆಯವರು ತಮ್ಮ ಕವನದಲ್ಲಿ ಭೂಮಿತಾಯಿಯನ್ನು ‘ಚಿಗರಿಗಂಗಳ ಚೆಲುವಿ’ ಎಂದು ಕರೆದಿದ್ದಾರೆ. ಚಿಗರಿಯ ಕಣ್ಣುಗಳು ಸೌಂದರ್ಯಕ್ಕೆ ಹೆಸರಾದಂತಹವು. ಸಂಸ್ಕೃತ ಸಾಹಿತ್ಯದಲ್ಲಿಯೂ ಸಹ ಸುಂದರ ಕಣ್ಣುಗಳ ಸ್ತ್ರೀಯನ್ನು ‘ಮೃಗನಯನಿ’ ಎಂದು ಕರೆಯಲಾಗಿದೆ. ಆದರೆ ಈ ಕವನದಲ್ಲಿ ಭೂಮಿತಾಯಿ ಸುಂದರ ಕಣ್ಣುಗಳಿಗಾಗಿ ಚಿಗರಿಗಂಗಳ ಚೆಲುವಿಯಾಗಿಲ್ಲ ; ಅವಳು ಇಲ್ಲಿ ಹೆದರಿದ ಹರಿಣಿ. ಹೆದರಿದ ಹರಿಣಿಯನ್ನು ನೋಡುವವರಿಗೆ ಎದ್ದು ಕಾಣುವ ಸಂಗತಿ ಎಂದರೆ, ಹರಿಣಿಯ ಕಣ್ಣುಗಳು ; ಅತ್ತಿತ್ತ ಚಂಚಲವಾಗಿ ಚಲಿಸುವ ಬೆದರಿದ ಕಣ್ಣುಗಳು.
‘ಚಿಗರಿಗಂಗಳ ಚೆಲುವಿ’ ಈ ಕವನವು ಬೇಂದ್ರೆಯವರ ‘ಸಖೀಗೀತ’ ಕವನಸಂಕಲನದಲ್ಲಿ ಸೇರಿದೆ.
‘ಸಖೀಗೀತ’ವು ೧೯೩೭ರಲ್ಲಿ ಪ್ರಕಟವಾಯಿತು.
………………………………………………………………..
‘ಚಿಗರಿಗಂಗಳ ಚೆಲುವಿ’ ಕವನವು ಮಾನವನ ವಿಕೃತ, ಜೀವಿರೋಧಿ ನಾಗರಿಕತೆಯ ದುರಂತವನ್ನು ಸೂಚಿಸುವ ಕವನ.
ಮಾನವನ ನಾಗರಿಕತೆ ಪ್ರಾರಂಭವಾಗುವ ಮೊದಲು ಈ ಸೃಷ್ಟಿಯು ಒಂದು ಸುಂದರವಾದ ಬನವಾಗಿತ್ತು. ಅಲ್ಲಿರುವ ಸಸ್ಯಸಂಕುಲ ಹಾಗೂ ಪ್ರಾಣಿಸಂಕುಲ ಸಾಮರಸ್ಯದಲ್ಲಿ ಜೀವಿಸುತ್ತಿದ್ದವು.
ನಾಗರಿಕತೆ ಪ್ರಾರಂಭವಾದಾಗಿನಿಂದ, ನಿಸರ್ಗದಲ್ಲಿದ್ದ ಸಾಮರಸ್ಯ ಹಾಳಾಯಿತೆನ್ನಬಹುದು.
ಮಾನವನ ಸ್ವಾರ್ಥ ಹಾಗೂ ದುರಾಸೆಯ ಮೊದಲ ಪೆಟ್ಟು ಬಿದ್ದದ್ದು ಸಸ್ಯಸಂಕುಲಕ್ಕೆ ಹಾಗೂ ಇತರ ಪ್ರಾಣಿಗಳಿಗೆ. ಬಳಿಕ ಮನುಷ್ಯವರ್ಗದಲ್ಲಿಯೇ ನಡೆದ ಆಂತರಿಕ ಕಲಹಗಳಿಂದಾಗಿ, ಸಂಕಷ್ಟಗಳ ಸರಪಳಿಯೇ ಪ್ರಾರಂಭವಾಯಿತು. ಇದನ್ನು ಈ ಕವನದಲ್ಲಿ ಹಂತ ಹಂತವಾಗಿ ವರ್ಣಿಸಲಾಗಿದೆ.
ಬೇಂದ್ರೆಯವರ ಕವನಗಳೆಂದರೆ, ಕವಿಯು ತನ್ನ ಭಾವನೆಗಳನ್ನು, ತನ್ನ ಸುಖ, ದುಃಖಗಳನ್ನು, ತನ್ನ ಅನುಭವಗಳನ್ನು ಎಲ್ಲರೊಡನೆ ಹಂಚಿಕೊಳ್ಳುವ ಕವನಗಳು. “ಚಿಗರಿಗಂಗಳ ಚೆಲುವಿ” ಕವನದಲ್ಲಿಯೂ ಸಹ ಕವಿಯು ತನ್ನ ದುಃಖವನ್ನು, ತನ್ನ ಆಕ್ರೋಶವನ್ನು ತನ್ನ ಗೆಳೆಯನೆದುರಿಗೆ ಹೇಳಿಕೊಳ್ಳುತ್ತಿದ್ದಾನೆ.
ಕವನದ ಪೂರ್ತಿಪಾಠ ಹೀಗಿದೆ:
………………………………………………………………
ಚಿಗರಿಗಂಗಳ ಚೆಲುವಿ ಚೆದsರಿ ನಿಂತಾಳ ನೋಡೋ
ಬೆದsರಿ ನಿಂತಾಳ ||ಪಲ್ಲವಿ||
೧
ಹೊಳಿಹಳ್ಳ ತೊರೆದಾವೋ
ಗೆಣೆಹಕ್ಕಿ ಬೆರೆದಾವೋ
ಆಗದವರ ಹೊಟ್ಟಿ ಉರದಾವೋ
ಗೆಣೆಯಾ ಉರದಾವs
ಅಂಥವರ ದಿಟ್ಟಿ ಮನಿ ಮುರದಾವ;
ಅದನ ತಾ ಕಂಡು ಕೊರಗ್ಯಾsಳೊ
ಮರುಗ್ಯಾsಳೊ
ಸೊರಗ್ಯಾsಳೋ
ಹೂ ಕಾಯಿ ಹಣ್ಣು ತುಂಬಿದ ಬನದಾsಗ || ಚಿಗರಿಗಂಗಳ. . . .
೨
ಬ್ಯಾಟಿ ನಾಯೊದರ್ಯಾವೋ
ಹಸುಜೀವ ಬೆದರ್ಯಾವೋ
ಗಳಗಳನೆ ಗಿಡದೇಲಿ ಉದರ್ಯಾವೋ
ಗೆಣೆಯಾ ಉದರ್ಯಾವs
ದಿನ್ನಿ ಮಡ್ಡಿ ಗುಡ್ಡ ಅದರ್ಯಾವ;
ಅದನ ತಾ ಕಂಡು ನೊಂದಾsಳೊ
ಬೆಂದಾsಳೊ
ಅಂದಾsಳೋ
‘ಇದು ಎಂಥಾ ಜೀವದ ಬ್ಯಾಟಿ ಹಾಡೇ ಹಗಲs’ || ಚಿಗರಿಗಂಗಳ. . .
೩
ಆಳುಗಳ ಹೋರಾಟ
ಆಳುವವರಿಗೆ ಆಟ
ಗಾಳಕ್ಕ ಸಿಕ್ಕ ಮೀನದ ಗೋಳಾಟೊ
ಗೆಣೆಯಾ ಗೋಳಾಟೋ
ಗೆದ್ದವರ ಇದ್ದವರ ಹಾರಾಟ;
ಅರೆಸತ್ತ ಜೀವಾ ಕೊಳೆತಾsವೊ
ಹುಳತಾsವೊ
ಅಳತಾsವೋ
ಹಸುಗೂಸು ತಿರುಗಿ ಹೊಟ್ಟ್ಯಾಗ ಹುಗಿಧ್ಹಾಂಗ || ಚಿಗರಿಗಂಗಳ. . .
೪
ತನ್ನ ತಾ ಸುತ್ತ್ಯಾಳೊ
ಹೊತ್ತಿನ ಬೆನ್ಹತ್ತ್ಯಾಳೊ
ತಿಂಗಳನ ಬಗಲಾಗೆತ್ತ್ಯಾಳೊ
ಗೆಣೆಯಾ ಎತ್ತ್ಯಾಳೊ
ಉಕ್ಕುಕ್ಕುವ ದುಃಖ ಒಳಗೊತ್ತ್ಯಾಳೊ;
ನಿಂತ ನೆಲವೆಂದು ಕಡಿಲಾsಕೊ
ಬಡಿಲಾsಕೊ
ಒಡಿಲಾsಕೊ
ಒಡವ್ಯಲ್ಲೋ ಮಗನೇ ಉಸಿರಿದ್ದೊಡಲಂತಾsಳೋ || ಚಿಗರಿಗಂಗಳ. . .
…………………………………………………………….
ಕವನದ ಮೊದಲ ನುಡಿ ಹೀಗಿದೆ:
ಹೊಳಿಹಳ್ಳ ತೊರೆದಾವೋ
ಗೆಣೆಹಕ್ಕಿ ಬೆರೆದಾವೋ
ಆಗದವರ ಹೊಟ್ಟಿ ಉರದಾವೋ
ಗೆಣೆಯಾ ಉರದಾವs
ಅಂಥವರ ದಿಟ್ಟಿ ಮನಿ ಮುರದಾವ;
ಅದನ ತಾ ಕಂಡು ಕೊರಗ್ಯಾsಳೊ
ಮರುಗ್ಯಾsಳೊ
ಸೊರಗ್ಯಾsಳೋ
ಹೂ ಕಾಯಿ ಹಣ್ಣು ತುಂಬಿದ ಬನದಾsಗ || ಚಿಗರಿಗಂಗಳ. . . .
ಈ ನುಡಿ ಪ್ರಾರಂಭವಾಗುವದು ಸಾಮರಸ್ಯದಿಂದ ಕೂಡಿದ ಸಮೃದ್ಧ ನಿಸರ್ಗದ ವರ್ಣನೆಯೊಂದಿಗೆ :
“ಹೊಳಿಹಳ್ಳ ತೊರೆದಾವೋ
ಗೆಣೆಹಕ್ಕಿ ಬೆರೆದಾವೋ ”
ನಿಸರ್ಗದ ಸಂಪನ್ಮೂಲಗಳಾದ ಹಾಗೂ ಜೀವರಾಶಿಯ ಬೆಳವಣಿಗೆಗೆ ಅವಶ್ಯವಿರುವ ಹೊಳೆಹಳ್ಳಗಳು ತೊರೆಯುತ್ತಿವೆ ಅಂದರೆ ತುಂಬಿಕೊಂಡು ಸಮೃದ್ಧವಾಗಿ ಹರಿಯುತ್ತಿವೆ. ಈ ಸಂಪನ್ಮೂಲಗಳನ್ನು ಭೋಗಿಸುವ ಜೀವರಾಶಿಯಾದ ಹಕ್ಕಿಗಳು ಬೆರೆದಿವೆ ಅಂದರೆ ಹೊಸ ಸೃಷ್ಟಿಯ ಕ್ರಿಯೆಯಲ್ಲಿ ತೊಡಗಿಕೊಂಡಿವೆ. ಇದೆಲ್ಲ ಮನಸ್ಸನ್ನು ಮುದಗೊಳಿಸುವ ನೋಟ.
ಆದರೆ ಈ ಸಾಮರಸ್ಯದ ಪರಿಸ್ಥಿತಿಗೆ ಈಗ ಭಂಗ ಬಂದಿದೆ.
ಯಾಕೆಂದರೆ:
“ಆಗದವರ ಹೊಟ್ಟಿ ಉರದಾವೋ
ಗೆಣೆಯಾ ಉರದಾವs
ಅಂಥವರ ದಿಟ್ಟಿ ಮನಿ ಮುರದಾವ ”
ನಿಸರ್ಗದ ಈ ಸಾಮರಸ್ಯವನ್ನು ಸಹಿಸಲಾರದ ಜೀವಿ ಇಲ್ಲೊಂದಿದೆ. ಅದು ಮಾನವ ಜೀವಿ. ಮಾನವನ ಹೊರತಾಗಿ ಉಳಿದೆಲ್ಲ ಪಶು, ಪಕ್ಷಿಗಳನ್ನು ನಾವು ಆದಿವರ್ಗದ ಜೀವಿಗಳು ಎನ್ನಬಹುದು. ಈ ಅಮಾಯಕ ಜೀವಿಗಳು ನಿಸರ್ಗದೊಡನೆ ಒಂದಾಗಿ ಬಾಳುತ್ತಿವೆ. ಆದರೆ, ಮಾನವ ಎನ್ನುವ ಈ ಜೀವಿಗೆ ದುರಾಸೆ ಬಹಳ. ನಿಸರ್ಗದ ಸಂಪತ್ತನ್ನೆಲ್ಲ ತಾನೇ ಭೋಗಿಸುವ ಸ್ವಾರ್ಥ ಈ ಜೀವಿಗೆ. ಈ ಜೀವಿಗೆ ಬೇರೆ ಜೀವಿಗಳ ಸೌಖ್ಯವನ್ನು ಕಂಡರೆ ಸಹಿಸಲಾಗುವದಿಲ್ಲ. ಇವನಿಗೆ ಉಳಿದ ಜೀವಿಗಳ ಮೇಲೆ ಹೊಟ್ಟೆಕಿಚ್ಚು. ಅದಕ್ಕೆ ಬೇಂದ್ರೆ ಹೇಳುತ್ತಾರೆ:
“ಆಗದವರ ಹೊಟ್ಟಿ ಉರದಾವೋ
ಗೆಣೆಯಾ ಉರದಾವs”
ಇಷ್ಟೇ ಅಲ್ಲ, ಇಂಥವರ ಕೆಟ್ಟ ದೃಷ್ಟಿಯಿಂದಾಗಿ (evil eye) ‘ಮನಿ ಮುರದಾವ’. ಇಲ್ಲಿಯವರೆಗೆ, ಒಂದು ಕ್ರಮದಿಂದ ನಡೆಯುತ್ತಿದ್ದಂತಹ ಸಂಸ್ಥೆ , ಎಲ್ಲ ಜೀವಿಗಳಿಗೆ ನೆಲೆಯಾದ ನಿಸರ್ಗದ ಆಶ್ರಯ (=ಮನಿ) ಈಗ ಭಗ್ನವಾಗುತ್ತಿದೆ.
ಆದರೆ ಭೂಮಿತಾಯಿ ನಿಸ್ಸಹಾಯಕಳು. ತನ್ನ ಒಡಲೆಲ್ಲ ಹೂ,ಕಾಯಿ ಹಾಗು ಹಣ್ಣುಗಳಿಂದ ತುಂಬಿದೆ. ಅದನ್ನೆಲ್ಲ ದುರಾಸೆಯಿಂದ ದೋಚುತ್ತಿರುವವರನ್ನು ಅವಳು ತಡೆಯುವದೆಂತು?
ಹೀಗಾಗಿ, ಅವಳು ಕೊರಗುತ್ತಿದ್ದಾಳೆ (ಪರಿಸ್ಥಿತಿಯ ಬಗೆಗೆ),
ಮರಗುತ್ತಿದ್ದಾಳೆ (ದುರ್ಬಲರ ಬಗೆಗೆ),
ಹಾಗೂ ಈ ಶೋಷಣೆಯಿಂದಾಗಿ ಸೊರಗುತ್ತಿದ್ದಾಳೆ (ಸ್ವತಃ).
“ಅದನ ತಾ ಕಂಡು ಕೊರಗ್ಯಾsಳೊ
ಮರುಗ್ಯಾsಳೊ
ಸೊರಗ್ಯಾsಳೋ
ಹೂ ಕಾಯಿ ಹಣ್ಣು ತುಂಬಿದ ಬನದಾsಗ || ಚಿಗರಿಗಂಗಳ. . . . .”
ಈ ದುರಾಕ್ರಮಣಕ್ಕೆ ಹೆದರಿದ ಅವಳು ಸ್ಥೈರ್ಯವನ್ನು ಕಳೆದುಕೊಂಡಿದ್ದಾಳೆ. ಆದುದರಿಂದ ಧಾವಿಸಲು ಯತ್ನಿಸುವ ಹರಿಣಿಯಂತೆ ಚೆದರಿ, ಚಂಚಲವಾಗಿ ನಿಂತಿದ್ದಾಳೆ. ಯಾವ ಗಳಿಗೆಯಲ್ಲಿ ಯಾರು ಆಕ್ರಮಣ ಮಾಡುತ್ತಾರೊ ಎಂದು ಬೆದರಿ ನಿಂತಿದ್ದಾಳೆ. ಸ್ಥೈರ್ಯ ಹಾಗು ಧೈರ್ಯವನ್ನು ಕಳೆದುಕೊಂಡ ಹರಿಣಿ ಇವಳು. ಇದು ಈ ಕವನದ ಪಲ್ಲವಿ, ಅಂದರೆ ಆವರ್ತಿಸುವ ವಿಷಯ.
“ಚಿಗರಿಗಂಗಳ ಚೆಲುವಿ ಚೆದsರಿ ನಿಂತಾಳ ನೋಡೋ
ಬೆದsರಿ ನಿಂತಾಳ .”
………………………………………………………………
ಮೊದಲನೆಯ ನುಡಿಯಲ್ಲಿ ಒಂದು ಸ್ತಬ್ದ ಚಿತ್ರವಿದೆ. ತಾನು ಸಮೃದ್ಧವಾದ ಬನದಲ್ಲಿದ್ದೂ, ಮನೆಮುರುಕರ ದುರಾಸೆಯ ‘ಕೆಟ್ಟ ಕಣ್ಣಿ’ನಿಂದ ಹೆದರಿದ, ಎಲ್ಲಿ ಓಡಬೇಕೊ ತಿಳಿಯದ ಅಸಹಾಯಕ ಹರಿಣಿಯ ಚಿತ್ರವಿದೆ. ಎರಡನೆಯ ನುಡಿಯಲ್ಲಿ ಆಕ್ರಮಣದ ಚಿತ್ರವಿದೆ.
ಬ್ಯಾಟಿ ನಾಯೊದರ್ಯಾವೋ
ಹಸುಜೀವ ಬೆದರ್ಯಾವೋ
ಗಳಗಳನೆ ಗಿಡದೇಲಿ ಉದರ್ಯಾವೋ
ಗೆಣೆಯಾ ಉದರ್ಯಾವs
ದಿನ್ನಿ ಮಡ್ಡಿ ಗುಡ್ಡ ಅದರ್ಯಾವ;
ಅದನ ತಾ ಕಂಡು ನೊಂದಾsಳೊ
ಬೆಂದಾsಳೊ
ಅಂದಾsಳೋ
‘ಇದು ಎಂಥಾ ಜೀವದ ಬ್ಯಾಟಿ ಹಾಡೇ ಹಗಲs’ || ಚಿಗರಿಗಂಗಳ. . .
ಬೇಂದ್ರೆ ಈ ನುಡಿಯಲ್ಲಿ ಪಳಗಿಸಿದ ಬೇಟೆಯ ನಾಯಿಗಳ ಸಂಕೇತವನ್ನು ಬಳಸುತ್ತಿದ್ದಾರೆ. ಮಾನವನ ನಾಗರಿಕತೆಯಲ್ಲಿ ಜರುಗಿದ ಮೊದಲ ಹಂತದ, ಅಂದರೆ ಬೇಟೆಯಾಡುವ ಹಂತದ ಚಿತ್ರವಿದು. ಬೇಟೆಯಾಡುವ ಪ್ರಾಣಿಗಳನ್ನು ಈಲು ಮಾಡಿ, ಅವುಗಳಿಂದ ಬೇಟೆಯಾಡಿಸುವ ಮಾನವ ಬುದ್ಧಿಯ ಚಿತ್ರವಿಲ್ಲಿದೆ. ಈ ಬೇಟೆಗೆ ‘ಹಸುಜೀವ’ ಬೆದರ್ಯಾವೊ. ಹಸು ಇದು ಪಶು ಪದದ ತದ್ಭವವಾಗಿದ್ದರೂ ಸಹ, ರೂಢಿಯಲ್ಲಿ ಹಸು ಅಂದರೆ ಆಕಳು ; ಆದುದರಿಂದ ಹಸುಜೀವ ಅಂದರೆ ಸಾಧು ಪ್ರಾಣಿಗಳು.
ಅಪ್ರತ್ಯಕ್ಷವಾಗಿ ಇದು ಆಕ್ರಮಣಕಾರರ ಹಾಗು ಪರಾಜಿತ ಜನಾಂಗದವರನ್ನೂ ಸಹ ಸೂಚಿಸುತ್ತಿದೆ.
ಭಾರತ ದೇಶವನ್ನೇ ಉದಾಹರಣೆಗೆ ತೆಗೆದುಕೊಳ್ಳಬಹುದು. ಪ್ರಾಚೀನ ಕಾಲದಿಂದಲೂ ಈ ದೇಶದ ಮೇಲೆ ಆಕ್ರಮಣಗಳು ನಡೆಯುತ್ತಲೆ ಇವೆ. ಸುಸಂಸ್ಕೃತರಾದ ಹಾಗು ಆ ಕಾರಣದಿಂದಲೇ ದುರ್ಬಲರಾದ ಇಲ್ಲಿಯ ಜನತೆ, ಅನಾಗರಿಕ ಆಕ್ರಮಣಕಾರರಿಂದ ಅತ್ಯಾಚಾರಕ್ಕೊಳಗಾಗುತ್ತಲೆ ಬಂದಿದ್ದಾರೆ.
ಈ ಅತ್ಯಾಚಾರದಿಂದ ಪ್ರಕೃತಿಯೂ ಸಹ ಕಂಪಿಸಿದೆ ; ಗಿಡದ ಎಲೆಗಳು ಗಳಗಳನೆ ಉದರಿವೆ. ಅಷ್ಟೇ ಏಕೆ, ನಿರ್ಜೀವ ವಸ್ತುವಾದ ದಿನ್ನಿ, ಮಡ್ಡಿ, ಗುಡ್ಡ ಸಹ ನಡುಗಿವೆ.
ಬೇಂದ್ರೆಯವರು ಈ ವರ್ಣನೆಗಳಲ್ಲಿ ಶ್ರೇಣೀಕರಣದ ಬಳಕೆಯಾಗಿರುವದನ್ನು ಗಮನಿಸಬೇಕು.
ಮೊದಲು ಸಾಧುಪ್ರಾಣಿಗಳಿಗಾದ ಆಘಾತ ವರ್ಣಿಸಿ, ಆ ಬಳಿಕ ಸಸ್ಯಗಳಿಗಾದ ಆಘಾತವನ್ನು ಬಣ್ಣಿಸಲಾಗಿದೆ. ಆ ಬಳಿಕ ನಿರ್ಜೀವ ವಸ್ತುಗಳಿಗಾದ ಆಘಾತ ಬಣ್ಣಿಸಲಾಗಿದೆ. ಅಲ್ಲೂ ಸಹ, ಮೊದಲು ‘ದಿನ್ನಿ’, ಬಳಿಕ ಅದಕ್ಕಿಂತ ದೊಡ್ಡದಾದ ‘ಮಡ್ಡಿ’, ಬಳಿಕ ಅದಕ್ಕೂ ದೊಡ್ಡ ವಸ್ತುವಾದ ‘ಗುಡ್ಡ’ವನ್ನು ಬಣ್ಣಿಸಲಾಗಿದೆ.
ಈ ರೀತಿಯಾಗಿ ಕಲ್ಪನೆಯಲ್ಲೂ ಸಹ ಕ್ರಮಬದ್ಧತೆಯನ್ನು ಅನುಸರಿಸುವದು ಬೇಂದ್ರೆಯವರ ವೈಶಿಷ್ಟ್ಯವಾಗಿದೆ.
ಮೊದಲನೆಯ ನುಡಿಯ ಎರಡನೆಯ ಭಾಗದಲ್ಲಿ ಭೂಮಿತಾಯಿ ಮರುಗಿದಂತೆ, ಇಲ್ಲೂ ಸಹ ಅವಳು ಸಂಕಟಪಡುವ ಚಿತ್ರವಿದೆ:
ಅದನ ತಾ ಕಂಡು ನೊಂದಾsಳೊ
ಬೆಂದಾsಳೊ
ಅಂದಾsಳೋ
‘ಇದು ಎಂಥಾ ಜೀವದ ಬ್ಯಾಟಿ ಹಾಡೇ ಹಗಲs’ || ಚಿಗರಿಗಂಗಳ. . .
ವಸುಂಧರೆಗೆ ಪ್ರತಿ ಜೀವಿಯೂ (-- ಸಸ್ಯವೇ ಇರಲಿ ಅಥವಾ ಚಿಕ್ಕ ಪ್ರಾಣಿಯೇ ಇರಲಿ--) ತನ್ನ ಮಗುವೆ. ಹೀಗಾಗಿ ಇಲ್ಲಿ ನಡೆಯುತ್ತಿರುವ ‘ಜೀವದ ಬೇಟೆ’ಯನ್ನು ಕಂಡು ಅವಳು ಶೋಕಿಸುತ್ತಿದ್ದಾಳೆ.
ಮೂರನೆಯ ನುಡಿಯಲ್ಲಿ, ಮಾನವನ `ನಾಗರಿಕತೆ’ಯ ಬೆಳವಣಿಗೆ ಇನ್ನೂ ಮೇಲಕ್ಕೇರಿದೆ. ಇದೀಗ ಆತ ರಾಜ್ಯಗಳನ್ನು ಕಟ್ಟಿಕೊಂಡಿದ್ದಾನೆ. ಪರರಾಜ್ಯಗಳನ್ನು ಆಕ್ರಮಿಸಿ ಚಕ್ರವರ್ತಿಯಾಗುತ್ತಿದ್ದಾನೆ. ಆದರೆ, ನಾಗರಿಕತೆಯ ಈ ಆಟದಲ್ಲಿ ಸ್ವತಃ ಮಾನವನೇ ಬಲಿಯಾಗುತ್ತಿದ್ದಾನೆ.
ಆಳುಗಳ ಹೋರಾಟ
ಆಳುವವರಿಗೆ ಆಟ
ಗಾಳಕ್ಕ ಸಿಕ್ಕ ಮೀನದ ಗೋಳಾಟೊ
ಗೆಣೆಯಾ ಗೋಳಾಟೋ
ಗೆದ್ದವರ ಇದ್ದವರ ಹಾರಾಟ;
ಅರೆಸತ್ತ ಜೀವಾ ಕೊಳೆತಾsವೊ
ಹುಳತಾsವೊ
ಅಳತಾsವೋ
ಹಸುಗೂಸು ತಿರುಗಿ ಹೊಟ್ಟ್ಯಾಗ ಹುಗಿಧ್ಹಾಂಗ || ಚಿಗರಿಗಂಗಳ. . .
ಹೋರಾಟವೆನ್ನುವದು, ರಾಜ್ಯವಿಸ್ತಾರ ಎನ್ನುವದು ಇವೆಲ್ಲ ಆಳುವವರಿಗೆ ಒಂದು ಆಟ. ಆದರೆ ಹೋರಾಟದಲ್ಲಿ ತೊಡಗಿದ ಆಳುಗಳಿಗೆ ಹಾಗೂ ಅಮಾಯಕ ಪ್ರಜೆಗಳಿಗೆ ಈ ಹೋರಾಟವೆನ್ನುವದು ಒಂದು ದುಃಸ್ವಪ್ನವಿದ್ದಂತೆ. ಕೌರವ-ಪಾಂಡವರ ಯುದ್ಧವೇ ಆಗಲಿ, ಜಾಗತಿಕ ಯುದ್ಧವೇ ಆಗಲಿ, ಸಾಮಾನ್ಯ ಜನತೆಗೆ ಅದು ಬೇಕಾಗಿಲ್ಲದ ಯುದ್ಧ. ಅವರು ಗಾಳಕ್ಕೆ ಸಿಕ್ಕ ಮೀನಿನಂತೆ ಚಡಪಡಿಸುತ್ತಾರೆ. ಎಷ್ಟೇ ಕಣ್ಣೀರು ಹಾಕಿದರೇನು, ಗಾಳವು ಮೀನಿಗೆ ದಯೆ ತೋರುವದೆ?
ಈ ಹೋರಾಟದಲ್ಲಿ ಗೆದ್ದವರು ಹಾಗು ಬದುಕಿದ್ದವರು ಸತ್ತವರ ಮೇಲೆ ಬಾವುಟ ಹಾರಿಸುತ್ತಾರೆ. ಸೋತು ಬದುಕುಳಿದವರ ಪಾಡು ನಾಯಿಪಾಡು. ಅವರು ಅರೆಸತ್ತಂತವರು. ಅವರ ಬದುಕು ಕೊಳೆತು ಹೋಗುತ್ತದೆ, ಹುಳತು ಹೋಗುತ್ತದೆ, ಅಳುವುದೊಂದೇ ಅವರಿಗೆ ಉಳಿದ ಬದುಕು.
ಇದನ್ನು ಕಂಡ ಭೂಮಿತಾಯಿಗೆ ಹೇಗೆ ಅನಿಸುತ್ತದೆ?
ನಾನಾ ಜೀವಿಗಳಿಗೆ ಜನ್ಮ ಕೊಡುತ್ತಿರುವ, ಅನ್ನ ಕೊಡುತ್ತಿರುವ, ತಾಯಿ ವಸುಂಧರೆಗೆ ಹೇಗೆನ್ನಿಸುತ್ತದೆ?
‘ಹಸುಗೂಸು ತಿರುಗಿ ಹೊಟ್ಟ್ಯಾಗ ಹುಗಿಧ್ಹಾಂಗ.’
Her womb is a burial ground for her babies.
ಬೇಂದ್ರೆಯವರ ಉಪಮೆಗಳಲ್ಲಿ ಅತಿ ಕಠೋರವಾದ ಉಪಮೆ ಇದು ಎಂದು ಹೇಳಬಹುದು. ಅವರ ಮತ್ತೊಂದು ರಚನೆ ‘ನೀ ಹೀಂಗ ನೋಡಬ್ಯಾಡ ನನ್ನ’ ಕವನದಲ್ಲಿ ಸಹ ಶೋಕರಸದ ಉನ್ನತ ಉಪಮೆಯೊಂದಿದೆ:
“ಹುಣ್ಣವಿ ಚಂದಿರನ ಹೆಣಾ ಬಂತೊ ಮುಗಿಲಾಗ ತೇಲುತ ಹಗಲs”.
ಆದರೆ ಈ ಉಪಮೆಯಲ್ಲಿ ಶೋಕವಷ್ಟೇ ಅಲ್ಲದೆ, ಕ್ರೌರ್ಯವಿದೆ.
ಕೊನೆಯ ನುಡಿಯಲ್ಲಿ, ಭೂಮಿತಾಯಿಯ ಈ ಬವಣೆ, ಕೊನೆಯಿಲ್ಲದ ಬವಣೆ ಎನ್ನುವ ಭಾವನೆಯನ್ನು ಕವಿ ವ್ಯಕ್ತಪಡಿಸುತ್ತಾರೆ:
ತನ್ನ ತಾ ಸುತ್ತ್ಯಾಳೊ
ಹೊತ್ತಿನ ಬೆನ್ಹತ್ತ್ಯಾಳೊ
ತಿಂಗಳನ ಬಗಲಾಗೆತ್ತ್ಯಾಳೊ
ಗೆಣೆಯಾ ಎತ್ತ್ಯಾಳೊ
ಉಕ್ಕುಕ್ಕುವ ದುಃಖ ಒಳಗೊತ್ತ್ಯಾಳೊ;
ನಿಂತ ನೆಲವೆಂದು ಕಡಿಲಾsಕೊ
ಬಡಿಲಾsಕೊ
ಒಡಿಲಾsಕೊ
ಒಡವ್ಯಲ್ಲೋ ಮಗನೇ ಉಸಿರಿದ್ದೊಡಲಂತಾsಳೋ || ಚಿಗರಿಗಂಗಳ. . . .
ವಾಸ್ತವತೆ ಹಾಗು ಕಲ್ಪನೆಗಳನ್ನು ಕರಗಿಸಿ ಒಂದಾಗಿಸುವ ಬೇಂದ್ರೆ ಪ್ರತಿಭೆ ಇಲ್ಲಿ ಮತ್ತೊಮ್ಮೆ ಕಾಣುತ್ತದೆ.
ಓರ್ವ ಅಸಹಾಯಕ ಸ್ತ್ರೀ, ಸಂಕಟಗಳಿಂದ ಪಾರಾಗಲು ತನ್ನ ಸೀಮಿತ ಪರಿಧಿಯಲ್ಲಿ ಸುತ್ತುವಳು ಎನ್ನುವ ಅರ್ಥವನ್ನು ಕೊಡುವ ಮೊದಲ ಸಾಲು, ಭೂಮಿಯು ತನ್ನ ಅಕ್ಷದ ಸುತ್ತಲೂ ತಿರುಗುವ ವಾಸ್ತವವನ್ನೂ ಹೇಳುತ್ತದೆ. ಅದರಂತೆ ‘ಹೊತ್ತಿನ ಬೆನ್ಹತ್ತ್ಯಾಳೊ’ ಎನ್ನುವ ಸಾಲು ಅವಳು ತನ್ನ ದುಃಖಗಳನ್ನು ನಿವಾರಿಸಲು ಕಾಲವನ್ನು ಕಾಯುತ್ತಿದ್ದಾಳೆ ಎನ್ನುವ ಅರ್ಥದ ಜೊತೆಗೇ, ಸೂರ್ಯನ (=ಹೊತ್ತಿನ) ಸುತ್ತಲೂ ತಿರುಗುವ ಭೂಮಿಯನ್ನೂ ಸಹ ಸೂಚಿಸುತ್ತದೆ. ‘ತಿಂಗಳನ ಬಗಲಾಗೆತ್ತ್ಯಾಳೊ’ ಎನ್ನುವ ಸಾಲು ಹಸುಗೂಸನ್ನು ಎತ್ತಿಕೊಂಡ ಹೆಂಗಸಿನ ಚಿತ್ರವನ್ನು ಕೊಡುತ್ತದೆ; ಅದರಂತೆಯೇ ಚಂದ್ರನು (=ತಿಂಗಳನು) ಭೂಮಿಯ ಸುತ್ತಲೂ ತಿರುಗುತ್ತಿರುವ ವಾಸ್ತವವನ್ನೂ ಒಳಗೊಂಡಿದೆ.
ಇಂತಹ ಭೂಮಿತಾಯಿ ತನ್ನ ದುಃಖವನ್ನು ತನ್ನೊಳಗೇ ಒತ್ತಿ ಹಿಡಿದುಕೊಂಡು, ತನ್ನ ಬುದ್ಧಿಶಾಲಿ (!) ಮಕ್ಕಳಿಗೆ ಅಂದರೆ ಮಾನವರಿಗೆ ಅಂಗಲಾಚುತ್ತಿದ್ದಾಳೆ:
ನಿಂತ ನೆಲವೆಂದು ಕಡಿಲಾsಕೊ
ಬಡಿಲಾsಕೊ
ಒಡಿಲಾsಕೊ
ಒಡವ್ಯಲ್ಲೋ ಮಗನೇ ಉಸಿರಿದ್ದೊಡಲಂತಾsಳೋ.
ಆಳುವವರಿಗೆ ಹೆಣ್ಣು, ಹೊನ್ನು, ಮಣ್ಣು ಇವು ತಮ್ಮ ಘನತೆಯನ್ನು ಸಾರುವ ಆಭರಣಗಳು ;
ದೊಡ್ಡಸ್ತಿಕೆ ತೋರುವ ಸಂಕೇತಗಳು.
ನವಾಬನ ಜನಾನಾ ದೊಡ್ಡದಿದ್ದಷ್ಟೂ ಆತ ದೊಡ್ಡ ನವಾಬ.
ಆದರೆ, ಆತನ ದೊಡ್ಡಸ್ತಿಕೆಗಾಗಿ ಬಲಿಯಾಗುವ ಜನರ ಕಣ್ಣೀರನ್ನು ಆತ ಗಮನಿಸುವದಿಲ್ಲ.
ಇದನ್ನೇ ಭೂತಾಯಿ ಹೀಗೆ ಹೇಳುತ್ತಾಳೆ:
ನನ್ನನ್ನು ನಿರ್ಜೀವ ನೆಲವೆಂದು ತಿಳಿದು ಕಡಿಯಬೇಡ; ನಾನು ಕೇವಲ ಒಡವೆ ಅಲ್ಲ, ನಾನು ಉಸಿರಿರುವ ಒಡಲು; ಯಾಕೆಂದರೆ ನನ್ನ ಉಸಿರಿನಿಂದಲೆ ಬದಕುತ್ತಿವೆ ನನ್ನಲ್ಲಿಯ ಕೋಟಿ ಕೋಟಿ ಜೀವಿಗಳು.
‘ಒಡವ್ಯಲ್ಲೊ ಮಗನೆ ಉಸಿರಿದ್ದೊಡಲೊ’!
ಬೇಂದ್ರೆಯವರ ಕಾಲದಲ್ಲಿಯೇ, ಎಲ್ಲಾ ಯುರೋಪಿಯನ್ ದೇಶಗಳು ಏಶಿಯಾ ಹಾಗೂ ಆಫ್ರಿಕಾ ಖಂಡದ ದೇಶಗಳಲ್ಲಿ ಕ್ರೌರ್ಯದಿಂದ ಅಧಿಕಾರ ಸ್ಥಾಪಿಸಿ, ಆ ದೇಶಗಳನ್ನು ಶೋಷಿಸುತ್ತಿದ್ದವು. ಭಾರತವಂತೂ ಪುರಾತನ ಕಾಲದಿಂದಲೇ ಆಕ್ರಮಣಗಳನ್ನು ಎದುರಿಸುತ್ತ ಬಂದ ನಾಡು.
ಈ ಎಲ್ಲ ಸಂಗತಿಗಳು ಬೇಂದ್ರೆಯವರಿಗೆ ಈ ಕವನವನ್ನು ಬರೆಯಲು ಪ್ರೇರಣೆ ಕೊಟ್ಟಿರಬೇಕು. ಇಂತಹದೇ ಇನ್ನೊಂದು ಕವನವನ್ನು ಅವರು ರಚಿಸಿದ್ದಾರೆ : ‘ಮೊದಲಗಿತ್ತಿ’
(ಮೊದಲಗಿತ್ತಿಯಂತೆ ಮೆರೆಯುವಿಯೇ ತಾಯಿ|
ಮೊದಲಗಿತ್ತಿಯಂತೆ ಮೆರೆಯುತಿಹೆ.)
ಮಾನವನ ನಾಗರಿಕತೆ ಬೆಳೆದಂತೆಲ್ಲ ಶೋಷಣೆಯೂ ಹೆಚ್ಚುತ್ತ ಹೋದದ್ದನ್ನು ಅವರು ತಮ್ಮ ‘ಕರಡಿ ಕುಣಿತ’ ಕವನದಲ್ಲಿ ಬಣ್ಣಿಸಿದ್ದಾರೆ:
ಯಾವ ಕಾಡಡವಿಯಲ್ಲಿ ಜೇನುಂಡು ಬೆಳೆದಿದ್ದ
ಜಾಂಬುವಂತನ ಹಿಡಿದು ತಂದಾನೊ
ಧಣಿಯರ ಮನೆ ಮುಂದೆ ಕಾವಲು ಮಾಡಣ್ಣ
ಧಣಿ ದಾನ ಕೊಡುವನು ಎಂದಾನೊ.
ಜಾಂಬುವಂತ ಅಂದರೆ ಮೂಲಜನಾಂಗದ ಪ್ರತಿನಿಧಿ. ಧಣಿ ಅಂದರೆ ಯಜಮಾನ ನಾಗರಿಕತೆಯ ಪ್ರತಿನಿಧಿ.
ಅಡವಿಯಲ್ಲಿ ಸ್ವತಂತ್ರನಾಗಿ, ಜೇನುಂಡು ಬದುಕುತ್ತಿದ್ದ ಕರಡಿಯನ್ನು, ನಾಗರಿಕ ಮಾನವನು ಹಿಡಿದು ತಂದು, ಧಣಿ ಕೊಡುವ ದಾನಕ್ಕಾಗಿ (!) ಸಲಾಮು ಹೊಡಿಸುತ್ತಾನೆ!
ಬೇಂದ್ರೆಯವರದು ಭಾರತೀಯ ಆದರ್ಶ. ಈಶಾವಾಸ್ಯ ಉಪನಿಷತ್ತಿನಲ್ಲಿ ಹೇಳುವಂತೆ :
“ಈಶಾವಾಸ್ಯಮಿದಮ್ ಸರ್ವಮ್,ಯತ್ಕಿಂಚ ಜಗತ್ಯಾಂ ಜಗತ್;
ತೇನ ತ್ಯಕ್ತೇನ ಭುಂಜೀಥಾ:, ಮಾ ಗೃಧ: ಕಸ್ಯಸ್ವಿದ್ಧನಮ್.
ಈ ಆದರ್ಶವನ್ನು ಬಿಂಬಿಸುವ ಕವನಗಳೂ ಸಹ ಅವರಿಂದ ಹೊಮ್ಮಿವೆ. ಉದಾಹರಣೆಗೆ, ಅವರ ‘ಬೈರಾಗಿಯ ಹಾಡು’ ಎನ್ನುವ ಅತಿ ಚಿಕ್ಕ ಕವನವೊಂದನ್ನು ನೋಡಬಹುದು:
ಬೈರಾಗಿಯ ಹಾಡು
ಇಕೋ ನೆಲ-ಅಕೋ ಜಲ
ಅದರ ಮೇಲೆ ಮರದ ಫಲ
ಮನದೊಳಿದೆ ಪಡೆವ ಛಲ
ಬೆಳೆವಗೆ ನೆಲವೆಲ್ಲ ಹೊಲ.
ಜಲಧಿವರೆಗು ಒಂದೆ ಕುಲ
ಅನ್ನವೆ ಧರ್ಮದ ಮೂಲ
ಪ್ರೀತಿಯೆ ಮೋಕ್ಷಕ್ಕೆ ಬಲ
ಇದೇ ಶೀಲ ಸರ್ವಕಾಲ || ಇಕೋ ನೆಲ…..
……………………………………………….......
ಟಿಪ್ಪಣಿ:
ಇಂಗ್ಲೀಶಿನ enjambment ಅನ್ನುವ ಅಲಂಕಾರದಲ್ಲಿ ಕವನದ ಗತಿಯನ್ನು ನಡುವಿನ ಒಂದು ಸಾಲಿನ ಮೂಲಕ ಮುರಿಯಲಾಗುತ್ತದೆ. ಬೇಂದ್ರೆ ತಮ್ಮ ಈ ಕವನದಲ್ಲಿ ಆ ಅಲಂಕಾರವನ್ನು ಅತ್ಯುತ್ತಮವಾಗಿ ಬಳಸಿಕೊಂಡಿದ್ದಾರೆ. ಮೊದಲನೆಯ ನುಡಿಯ ಉದಾಹರಣೆಯನ್ನೇ ತೆಗೆದುಕೊಳ್ಳೋಣ:
ಹೊಳಿಹಳ್ಳ ತೊರೆದಾವೋ
ಗೆಣೆಹಕ್ಕಿ ಬೆರೆದಾವೋ
ಆಗದವರ ಹೊಟ್ಟಿ ಉರದಾವೋ
ಗೆಣೆಯಾ ಉರದಾವs
ಅಂಥವರ ದಿಟ್ಟಿ ಮನಿ ಮುರದಾವ;
ಅದನ ತಾ ಕಂಡು ಕೊರಗ್ಯಾsಳೊ
ಮರುಗ್ಯಾsಳೊ
ಸೊರಗ್ಯಾsಳೋ
ಹೂ ಕಾಯಿ ಹಣ್ಣು ತುಂಬಿದ ಬನದಾsಗ .
ಈ ನುಡಿಯ ಮೊದಲ ನಾಲ್ಕು ಸಾಲುಗಳಲ್ಲಿ ಒಂದು ಚಿತ್ರವಿದೆ ; ಕೊನೆಯ ನಾಲ್ಕು ಸಾಲುಗಳಲ್ಲಿ ಭೂಮಿತಾಯಿಯ ಸಂಕಟವಿದೆ. ಇವುಗಳ ಪ್ರವಾಹವನ್ನು ನಡುವಿನ ಸಾಲು ಅಂದರೆ ಐದನೆಯ ಸಾಲು ಮುರಿಯುತ್ತದೆ.
ಇದೇ ರೀತಿಯಾಗಿ ಇತರ ನುಡಿಗಳಲ್ಲೂ ಸಹ, ಮೊದಲ ನಾಲ್ಕು ಸಾಲುಗಳನ್ನು ಹಾಗು ಕೊನೆಯ ನಾಲ್ಕು ಸಾಲುಗಳನ್ನು ,ನಡುವಿನ ಅಂದರೆ ಐದನೆಯ ಸಾಲು ಪ್ರತ್ಯೇಕಿಸುತ್ತದೆ.
ಈ ಕವನದ ಇನ್ನೊಂದು ರಚನಾವೈಶಿಷ್ಟ್ಯವನ್ನು ಗಮನಿಸಬಹುದು :
ಪ್ರತಿಯೊಂದು ನುಡಿಯಲ್ಲಿ ಮೊದಲ ನಾಲ್ಕು ಸಾಲುಗಳು ಭೂಮಿತಾಯಿಯ ಒಂದು ಸ್ಥಿತಿಯನ್ನು ಬಣ್ಣಿಸುತ್ತವೆ. ಕೊನೆಯ ನಾಲ್ಕು ಸಾಲುಗಳು ಅವಳು ದುಃಖಿಸುವದನ್ನು ಬಣ್ಣಿಸುತ್ತವೆ.
ಮೊದಲನೆಯ ನುಡಿಯಿಂದ ಕೊನೆಯ ನುಡಿಯವರೆಗೆ, ವಸುಂಧರೆಯ ದುರಂತ ಗಂಭೀರವಾಗುತ್ತ ಹೋಗುವದನ್ನು ವರ್ಣಿಸಲಾಗಿದೆ.
ಬೇಂದ್ರೆಯವರು ತಮ್ಮ ಕವನದಲ್ಲಿ ಭೂಮಿತಾಯಿಯನ್ನು ‘ಚಿಗರಿಗಂಗಳ ಚೆಲುವಿ’ ಎಂದು ಕರೆದಿದ್ದಾರೆ. ಚಿಗರಿಯ ಕಣ್ಣುಗಳು ಸೌಂದರ್ಯಕ್ಕೆ ಹೆಸರಾದಂತಹವು. ಸಂಸ್ಕೃತ ಸಾಹಿತ್ಯದಲ್ಲಿಯೂ ಸಹ ಸುಂದರ ಕಣ್ಣುಗಳ ಸ್ತ್ರೀಯನ್ನು ‘ಮೃಗನಯನಿ’ ಎಂದು ಕರೆಯಲಾಗಿದೆ. ಆದರೆ ಈ ಕವನದಲ್ಲಿ ಭೂಮಿತಾಯಿ ಸುಂದರ ಕಣ್ಣುಗಳಿಗಾಗಿ ಚಿಗರಿಗಂಗಳ ಚೆಲುವಿಯಾಗಿಲ್ಲ ; ಅವಳು ಇಲ್ಲಿ ಹೆದರಿದ ಹರಿಣಿ. ಹೆದರಿದ ಹರಿಣಿಯನ್ನು ನೋಡುವವರಿಗೆ ಎದ್ದು ಕಾಣುವ ಸಂಗತಿ ಎಂದರೆ, ಹರಿಣಿಯ ಕಣ್ಣುಗಳು ; ಅತ್ತಿತ್ತ ಚಂಚಲವಾಗಿ ಚಲಿಸುವ ಬೆದರಿದ ಕಣ್ಣುಗಳು.
‘ಚಿಗರಿಗಂಗಳ ಚೆಲುವಿ’ ಈ ಕವನವು ಬೇಂದ್ರೆಯವರ ‘ಸಖೀಗೀತ’ ಕವನಸಂಕಲನದಲ್ಲಿ ಸೇರಿದೆ.
‘ಸಖೀಗೀತ’ವು ೧೯೩೭ರಲ್ಲಿ ಪ್ರಕಟವಾಯಿತು.
………………………………………………………………..
‘ಚಿಗರಿಗಂಗಳ ಚೆಲುವಿ’ ಕವನವು ಮಾನವನ ವಿಕೃತ, ಜೀವಿರೋಧಿ ನಾಗರಿಕತೆಯ ದುರಂತವನ್ನು ಸೂಚಿಸುವ ಕವನ.
ಮಾನವನ ನಾಗರಿಕತೆ ಪ್ರಾರಂಭವಾಗುವ ಮೊದಲು ಈ ಸೃಷ್ಟಿಯು ಒಂದು ಸುಂದರವಾದ ಬನವಾಗಿತ್ತು. ಅಲ್ಲಿರುವ ಸಸ್ಯಸಂಕುಲ ಹಾಗೂ ಪ್ರಾಣಿಸಂಕುಲ ಸಾಮರಸ್ಯದಲ್ಲಿ ಜೀವಿಸುತ್ತಿದ್ದವು.
ನಾಗರಿಕತೆ ಪ್ರಾರಂಭವಾದಾಗಿನಿಂದ, ನಿಸರ್ಗದಲ್ಲಿದ್ದ ಸಾಮರಸ್ಯ ಹಾಳಾಯಿತೆನ್ನಬಹುದು.
ಮಾನವನ ಸ್ವಾರ್ಥ ಹಾಗೂ ದುರಾಸೆಯ ಮೊದಲ ಪೆಟ್ಟು ಬಿದ್ದದ್ದು ಸಸ್ಯಸಂಕುಲಕ್ಕೆ ಹಾಗೂ ಇತರ ಪ್ರಾಣಿಗಳಿಗೆ. ಬಳಿಕ ಮನುಷ್ಯವರ್ಗದಲ್ಲಿಯೇ ನಡೆದ ಆಂತರಿಕ ಕಲಹಗಳಿಂದಾಗಿ, ಸಂಕಷ್ಟಗಳ ಸರಪಳಿಯೇ ಪ್ರಾರಂಭವಾಯಿತು. ಇದನ್ನು ಈ ಕವನದಲ್ಲಿ ಹಂತ ಹಂತವಾಗಿ ವರ್ಣಿಸಲಾಗಿದೆ.
ಬೇಂದ್ರೆಯವರ ಕವನಗಳೆಂದರೆ, ಕವಿಯು ತನ್ನ ಭಾವನೆಗಳನ್ನು, ತನ್ನ ಸುಖ, ದುಃಖಗಳನ್ನು, ತನ್ನ ಅನುಭವಗಳನ್ನು ಎಲ್ಲರೊಡನೆ ಹಂಚಿಕೊಳ್ಳುವ ಕವನಗಳು. “ಚಿಗರಿಗಂಗಳ ಚೆಲುವಿ” ಕವನದಲ್ಲಿಯೂ ಸಹ ಕವಿಯು ತನ್ನ ದುಃಖವನ್ನು, ತನ್ನ ಆಕ್ರೋಶವನ್ನು ತನ್ನ ಗೆಳೆಯನೆದುರಿಗೆ ಹೇಳಿಕೊಳ್ಳುತ್ತಿದ್ದಾನೆ.
ಕವನದ ಪೂರ್ತಿಪಾಠ ಹೀಗಿದೆ:
………………………………………………………………
ಚಿಗರಿಗಂಗಳ ಚೆಲುವಿ ಚೆದsರಿ ನಿಂತಾಳ ನೋಡೋ
ಬೆದsರಿ ನಿಂತಾಳ ||ಪಲ್ಲವಿ||
೧
ಹೊಳಿಹಳ್ಳ ತೊರೆದಾವೋ
ಗೆಣೆಹಕ್ಕಿ ಬೆರೆದಾವೋ
ಆಗದವರ ಹೊಟ್ಟಿ ಉರದಾವೋ
ಗೆಣೆಯಾ ಉರದಾವs
ಅಂಥವರ ದಿಟ್ಟಿ ಮನಿ ಮುರದಾವ;
ಅದನ ತಾ ಕಂಡು ಕೊರಗ್ಯಾsಳೊ
ಮರುಗ್ಯಾsಳೊ
ಸೊರಗ್ಯಾsಳೋ
ಹೂ ಕಾಯಿ ಹಣ್ಣು ತುಂಬಿದ ಬನದಾsಗ || ಚಿಗರಿಗಂಗಳ. . . .
೨
ಬ್ಯಾಟಿ ನಾಯೊದರ್ಯಾವೋ
ಹಸುಜೀವ ಬೆದರ್ಯಾವೋ
ಗಳಗಳನೆ ಗಿಡದೇಲಿ ಉದರ್ಯಾವೋ
ಗೆಣೆಯಾ ಉದರ್ಯಾವs
ದಿನ್ನಿ ಮಡ್ಡಿ ಗುಡ್ಡ ಅದರ್ಯಾವ;
ಅದನ ತಾ ಕಂಡು ನೊಂದಾsಳೊ
ಬೆಂದಾsಳೊ
ಅಂದಾsಳೋ
‘ಇದು ಎಂಥಾ ಜೀವದ ಬ್ಯಾಟಿ ಹಾಡೇ ಹಗಲs’ || ಚಿಗರಿಗಂಗಳ. . .
೩
ಆಳುಗಳ ಹೋರಾಟ
ಆಳುವವರಿಗೆ ಆಟ
ಗಾಳಕ್ಕ ಸಿಕ್ಕ ಮೀನದ ಗೋಳಾಟೊ
ಗೆಣೆಯಾ ಗೋಳಾಟೋ
ಗೆದ್ದವರ ಇದ್ದವರ ಹಾರಾಟ;
ಅರೆಸತ್ತ ಜೀವಾ ಕೊಳೆತಾsವೊ
ಹುಳತಾsವೊ
ಅಳತಾsವೋ
ಹಸುಗೂಸು ತಿರುಗಿ ಹೊಟ್ಟ್ಯಾಗ ಹುಗಿಧ್ಹಾಂಗ || ಚಿಗರಿಗಂಗಳ. . .
೪
ತನ್ನ ತಾ ಸುತ್ತ್ಯಾಳೊ
ಹೊತ್ತಿನ ಬೆನ್ಹತ್ತ್ಯಾಳೊ
ತಿಂಗಳನ ಬಗಲಾಗೆತ್ತ್ಯಾಳೊ
ಗೆಣೆಯಾ ಎತ್ತ್ಯಾಳೊ
ಉಕ್ಕುಕ್ಕುವ ದುಃಖ ಒಳಗೊತ್ತ್ಯಾಳೊ;
ನಿಂತ ನೆಲವೆಂದು ಕಡಿಲಾsಕೊ
ಬಡಿಲಾsಕೊ
ಒಡಿಲಾsಕೊ
ಒಡವ್ಯಲ್ಲೋ ಮಗನೇ ಉಸಿರಿದ್ದೊಡಲಂತಾsಳೋ || ಚಿಗರಿಗಂಗಳ. . .
…………………………………………………………….
ಕವನದ ಮೊದಲ ನುಡಿ ಹೀಗಿದೆ:
ಹೊಳಿಹಳ್ಳ ತೊರೆದಾವೋ
ಗೆಣೆಹಕ್ಕಿ ಬೆರೆದಾವೋ
ಆಗದವರ ಹೊಟ್ಟಿ ಉರದಾವೋ
ಗೆಣೆಯಾ ಉರದಾವs
ಅಂಥವರ ದಿಟ್ಟಿ ಮನಿ ಮುರದಾವ;
ಅದನ ತಾ ಕಂಡು ಕೊರಗ್ಯಾsಳೊ
ಮರುಗ್ಯಾsಳೊ
ಸೊರಗ್ಯಾsಳೋ
ಹೂ ಕಾಯಿ ಹಣ್ಣು ತುಂಬಿದ ಬನದಾsಗ || ಚಿಗರಿಗಂಗಳ. . . .
ಈ ನುಡಿ ಪ್ರಾರಂಭವಾಗುವದು ಸಾಮರಸ್ಯದಿಂದ ಕೂಡಿದ ಸಮೃದ್ಧ ನಿಸರ್ಗದ ವರ್ಣನೆಯೊಂದಿಗೆ :
“ಹೊಳಿಹಳ್ಳ ತೊರೆದಾವೋ
ಗೆಣೆಹಕ್ಕಿ ಬೆರೆದಾವೋ ”
ನಿಸರ್ಗದ ಸಂಪನ್ಮೂಲಗಳಾದ ಹಾಗೂ ಜೀವರಾಶಿಯ ಬೆಳವಣಿಗೆಗೆ ಅವಶ್ಯವಿರುವ ಹೊಳೆಹಳ್ಳಗಳು ತೊರೆಯುತ್ತಿವೆ ಅಂದರೆ ತುಂಬಿಕೊಂಡು ಸಮೃದ್ಧವಾಗಿ ಹರಿಯುತ್ತಿವೆ. ಈ ಸಂಪನ್ಮೂಲಗಳನ್ನು ಭೋಗಿಸುವ ಜೀವರಾಶಿಯಾದ ಹಕ್ಕಿಗಳು ಬೆರೆದಿವೆ ಅಂದರೆ ಹೊಸ ಸೃಷ್ಟಿಯ ಕ್ರಿಯೆಯಲ್ಲಿ ತೊಡಗಿಕೊಂಡಿವೆ. ಇದೆಲ್ಲ ಮನಸ್ಸನ್ನು ಮುದಗೊಳಿಸುವ ನೋಟ.
ಆದರೆ ಈ ಸಾಮರಸ್ಯದ ಪರಿಸ್ಥಿತಿಗೆ ಈಗ ಭಂಗ ಬಂದಿದೆ.
ಯಾಕೆಂದರೆ:
“ಆಗದವರ ಹೊಟ್ಟಿ ಉರದಾವೋ
ಗೆಣೆಯಾ ಉರದಾವs
ಅಂಥವರ ದಿಟ್ಟಿ ಮನಿ ಮುರದಾವ ”
ನಿಸರ್ಗದ ಈ ಸಾಮರಸ್ಯವನ್ನು ಸಹಿಸಲಾರದ ಜೀವಿ ಇಲ್ಲೊಂದಿದೆ. ಅದು ಮಾನವ ಜೀವಿ. ಮಾನವನ ಹೊರತಾಗಿ ಉಳಿದೆಲ್ಲ ಪಶು, ಪಕ್ಷಿಗಳನ್ನು ನಾವು ಆದಿವರ್ಗದ ಜೀವಿಗಳು ಎನ್ನಬಹುದು. ಈ ಅಮಾಯಕ ಜೀವಿಗಳು ನಿಸರ್ಗದೊಡನೆ ಒಂದಾಗಿ ಬಾಳುತ್ತಿವೆ. ಆದರೆ, ಮಾನವ ಎನ್ನುವ ಈ ಜೀವಿಗೆ ದುರಾಸೆ ಬಹಳ. ನಿಸರ್ಗದ ಸಂಪತ್ತನ್ನೆಲ್ಲ ತಾನೇ ಭೋಗಿಸುವ ಸ್ವಾರ್ಥ ಈ ಜೀವಿಗೆ. ಈ ಜೀವಿಗೆ ಬೇರೆ ಜೀವಿಗಳ ಸೌಖ್ಯವನ್ನು ಕಂಡರೆ ಸಹಿಸಲಾಗುವದಿಲ್ಲ. ಇವನಿಗೆ ಉಳಿದ ಜೀವಿಗಳ ಮೇಲೆ ಹೊಟ್ಟೆಕಿಚ್ಚು. ಅದಕ್ಕೆ ಬೇಂದ್ರೆ ಹೇಳುತ್ತಾರೆ:
“ಆಗದವರ ಹೊಟ್ಟಿ ಉರದಾವೋ
ಗೆಣೆಯಾ ಉರದಾವs”
ಇಷ್ಟೇ ಅಲ್ಲ, ಇಂಥವರ ಕೆಟ್ಟ ದೃಷ್ಟಿಯಿಂದಾಗಿ (evil eye) ‘ಮನಿ ಮುರದಾವ’. ಇಲ್ಲಿಯವರೆಗೆ, ಒಂದು ಕ್ರಮದಿಂದ ನಡೆಯುತ್ತಿದ್ದಂತಹ ಸಂಸ್ಥೆ , ಎಲ್ಲ ಜೀವಿಗಳಿಗೆ ನೆಲೆಯಾದ ನಿಸರ್ಗದ ಆಶ್ರಯ (=ಮನಿ) ಈಗ ಭಗ್ನವಾಗುತ್ತಿದೆ.
ಆದರೆ ಭೂಮಿತಾಯಿ ನಿಸ್ಸಹಾಯಕಳು. ತನ್ನ ಒಡಲೆಲ್ಲ ಹೂ,ಕಾಯಿ ಹಾಗು ಹಣ್ಣುಗಳಿಂದ ತುಂಬಿದೆ. ಅದನ್ನೆಲ್ಲ ದುರಾಸೆಯಿಂದ ದೋಚುತ್ತಿರುವವರನ್ನು ಅವಳು ತಡೆಯುವದೆಂತು?
ಹೀಗಾಗಿ, ಅವಳು ಕೊರಗುತ್ತಿದ್ದಾಳೆ (ಪರಿಸ್ಥಿತಿಯ ಬಗೆಗೆ),
ಮರಗುತ್ತಿದ್ದಾಳೆ (ದುರ್ಬಲರ ಬಗೆಗೆ),
ಹಾಗೂ ಈ ಶೋಷಣೆಯಿಂದಾಗಿ ಸೊರಗುತ್ತಿದ್ದಾಳೆ (ಸ್ವತಃ).
“ಅದನ ತಾ ಕಂಡು ಕೊರಗ್ಯಾsಳೊ
ಮರುಗ್ಯಾsಳೊ
ಸೊರಗ್ಯಾsಳೋ
ಹೂ ಕಾಯಿ ಹಣ್ಣು ತುಂಬಿದ ಬನದಾsಗ || ಚಿಗರಿಗಂಗಳ. . . . .”
ಈ ದುರಾಕ್ರಮಣಕ್ಕೆ ಹೆದರಿದ ಅವಳು ಸ್ಥೈರ್ಯವನ್ನು ಕಳೆದುಕೊಂಡಿದ್ದಾಳೆ. ಆದುದರಿಂದ ಧಾವಿಸಲು ಯತ್ನಿಸುವ ಹರಿಣಿಯಂತೆ ಚೆದರಿ, ಚಂಚಲವಾಗಿ ನಿಂತಿದ್ದಾಳೆ. ಯಾವ ಗಳಿಗೆಯಲ್ಲಿ ಯಾರು ಆಕ್ರಮಣ ಮಾಡುತ್ತಾರೊ ಎಂದು ಬೆದರಿ ನಿಂತಿದ್ದಾಳೆ. ಸ್ಥೈರ್ಯ ಹಾಗು ಧೈರ್ಯವನ್ನು ಕಳೆದುಕೊಂಡ ಹರಿಣಿ ಇವಳು. ಇದು ಈ ಕವನದ ಪಲ್ಲವಿ, ಅಂದರೆ ಆವರ್ತಿಸುವ ವಿಷಯ.
“ಚಿಗರಿಗಂಗಳ ಚೆಲುವಿ ಚೆದsರಿ ನಿಂತಾಳ ನೋಡೋ
ಬೆದsರಿ ನಿಂತಾಳ .”
………………………………………………………………
ಮೊದಲನೆಯ ನುಡಿಯಲ್ಲಿ ಒಂದು ಸ್ತಬ್ದ ಚಿತ್ರವಿದೆ. ತಾನು ಸಮೃದ್ಧವಾದ ಬನದಲ್ಲಿದ್ದೂ, ಮನೆಮುರುಕರ ದುರಾಸೆಯ ‘ಕೆಟ್ಟ ಕಣ್ಣಿ’ನಿಂದ ಹೆದರಿದ, ಎಲ್ಲಿ ಓಡಬೇಕೊ ತಿಳಿಯದ ಅಸಹಾಯಕ ಹರಿಣಿಯ ಚಿತ್ರವಿದೆ. ಎರಡನೆಯ ನುಡಿಯಲ್ಲಿ ಆಕ್ರಮಣದ ಚಿತ್ರವಿದೆ.
ಬ್ಯಾಟಿ ನಾಯೊದರ್ಯಾವೋ
ಹಸುಜೀವ ಬೆದರ್ಯಾವೋ
ಗಳಗಳನೆ ಗಿಡದೇಲಿ ಉದರ್ಯಾವೋ
ಗೆಣೆಯಾ ಉದರ್ಯಾವs
ದಿನ್ನಿ ಮಡ್ಡಿ ಗುಡ್ಡ ಅದರ್ಯಾವ;
ಅದನ ತಾ ಕಂಡು ನೊಂದಾsಳೊ
ಬೆಂದಾsಳೊ
ಅಂದಾsಳೋ
‘ಇದು ಎಂಥಾ ಜೀವದ ಬ್ಯಾಟಿ ಹಾಡೇ ಹಗಲs’ || ಚಿಗರಿಗಂಗಳ. . .
ಬೇಂದ್ರೆ ಈ ನುಡಿಯಲ್ಲಿ ಪಳಗಿಸಿದ ಬೇಟೆಯ ನಾಯಿಗಳ ಸಂಕೇತವನ್ನು ಬಳಸುತ್ತಿದ್ದಾರೆ. ಮಾನವನ ನಾಗರಿಕತೆಯಲ್ಲಿ ಜರುಗಿದ ಮೊದಲ ಹಂತದ, ಅಂದರೆ ಬೇಟೆಯಾಡುವ ಹಂತದ ಚಿತ್ರವಿದು. ಬೇಟೆಯಾಡುವ ಪ್ರಾಣಿಗಳನ್ನು ಈಲು ಮಾಡಿ, ಅವುಗಳಿಂದ ಬೇಟೆಯಾಡಿಸುವ ಮಾನವ ಬುದ್ಧಿಯ ಚಿತ್ರವಿಲ್ಲಿದೆ. ಈ ಬೇಟೆಗೆ ‘ಹಸುಜೀವ’ ಬೆದರ್ಯಾವೊ. ಹಸು ಇದು ಪಶು ಪದದ ತದ್ಭವವಾಗಿದ್ದರೂ ಸಹ, ರೂಢಿಯಲ್ಲಿ ಹಸು ಅಂದರೆ ಆಕಳು ; ಆದುದರಿಂದ ಹಸುಜೀವ ಅಂದರೆ ಸಾಧು ಪ್ರಾಣಿಗಳು.
ಅಪ್ರತ್ಯಕ್ಷವಾಗಿ ಇದು ಆಕ್ರಮಣಕಾರರ ಹಾಗು ಪರಾಜಿತ ಜನಾಂಗದವರನ್ನೂ ಸಹ ಸೂಚಿಸುತ್ತಿದೆ.
ಭಾರತ ದೇಶವನ್ನೇ ಉದಾಹರಣೆಗೆ ತೆಗೆದುಕೊಳ್ಳಬಹುದು. ಪ್ರಾಚೀನ ಕಾಲದಿಂದಲೂ ಈ ದೇಶದ ಮೇಲೆ ಆಕ್ರಮಣಗಳು ನಡೆಯುತ್ತಲೆ ಇವೆ. ಸುಸಂಸ್ಕೃತರಾದ ಹಾಗು ಆ ಕಾರಣದಿಂದಲೇ ದುರ್ಬಲರಾದ ಇಲ್ಲಿಯ ಜನತೆ, ಅನಾಗರಿಕ ಆಕ್ರಮಣಕಾರರಿಂದ ಅತ್ಯಾಚಾರಕ್ಕೊಳಗಾಗುತ್ತಲೆ ಬಂದಿದ್ದಾರೆ.
ಈ ಅತ್ಯಾಚಾರದಿಂದ ಪ್ರಕೃತಿಯೂ ಸಹ ಕಂಪಿಸಿದೆ ; ಗಿಡದ ಎಲೆಗಳು ಗಳಗಳನೆ ಉದರಿವೆ. ಅಷ್ಟೇ ಏಕೆ, ನಿರ್ಜೀವ ವಸ್ತುವಾದ ದಿನ್ನಿ, ಮಡ್ಡಿ, ಗುಡ್ಡ ಸಹ ನಡುಗಿವೆ.
ಬೇಂದ್ರೆಯವರು ಈ ವರ್ಣನೆಗಳಲ್ಲಿ ಶ್ರೇಣೀಕರಣದ ಬಳಕೆಯಾಗಿರುವದನ್ನು ಗಮನಿಸಬೇಕು.
ಮೊದಲು ಸಾಧುಪ್ರಾಣಿಗಳಿಗಾದ ಆಘಾತ ವರ್ಣಿಸಿ, ಆ ಬಳಿಕ ಸಸ್ಯಗಳಿಗಾದ ಆಘಾತವನ್ನು ಬಣ್ಣಿಸಲಾಗಿದೆ. ಆ ಬಳಿಕ ನಿರ್ಜೀವ ವಸ್ತುಗಳಿಗಾದ ಆಘಾತ ಬಣ್ಣಿಸಲಾಗಿದೆ. ಅಲ್ಲೂ ಸಹ, ಮೊದಲು ‘ದಿನ್ನಿ’, ಬಳಿಕ ಅದಕ್ಕಿಂತ ದೊಡ್ಡದಾದ ‘ಮಡ್ಡಿ’, ಬಳಿಕ ಅದಕ್ಕೂ ದೊಡ್ಡ ವಸ್ತುವಾದ ‘ಗುಡ್ಡ’ವನ್ನು ಬಣ್ಣಿಸಲಾಗಿದೆ.
ಈ ರೀತಿಯಾಗಿ ಕಲ್ಪನೆಯಲ್ಲೂ ಸಹ ಕ್ರಮಬದ್ಧತೆಯನ್ನು ಅನುಸರಿಸುವದು ಬೇಂದ್ರೆಯವರ ವೈಶಿಷ್ಟ್ಯವಾಗಿದೆ.
ಮೊದಲನೆಯ ನುಡಿಯ ಎರಡನೆಯ ಭಾಗದಲ್ಲಿ ಭೂಮಿತಾಯಿ ಮರುಗಿದಂತೆ, ಇಲ್ಲೂ ಸಹ ಅವಳು ಸಂಕಟಪಡುವ ಚಿತ್ರವಿದೆ:
ಅದನ ತಾ ಕಂಡು ನೊಂದಾsಳೊ
ಬೆಂದಾsಳೊ
ಅಂದಾsಳೋ
‘ಇದು ಎಂಥಾ ಜೀವದ ಬ್ಯಾಟಿ ಹಾಡೇ ಹಗಲs’ || ಚಿಗರಿಗಂಗಳ. . .
ವಸುಂಧರೆಗೆ ಪ್ರತಿ ಜೀವಿಯೂ (-- ಸಸ್ಯವೇ ಇರಲಿ ಅಥವಾ ಚಿಕ್ಕ ಪ್ರಾಣಿಯೇ ಇರಲಿ--) ತನ್ನ ಮಗುವೆ. ಹೀಗಾಗಿ ಇಲ್ಲಿ ನಡೆಯುತ್ತಿರುವ ‘ಜೀವದ ಬೇಟೆ’ಯನ್ನು ಕಂಡು ಅವಳು ಶೋಕಿಸುತ್ತಿದ್ದಾಳೆ.
ಮೂರನೆಯ ನುಡಿಯಲ್ಲಿ, ಮಾನವನ `ನಾಗರಿಕತೆ’ಯ ಬೆಳವಣಿಗೆ ಇನ್ನೂ ಮೇಲಕ್ಕೇರಿದೆ. ಇದೀಗ ಆತ ರಾಜ್ಯಗಳನ್ನು ಕಟ್ಟಿಕೊಂಡಿದ್ದಾನೆ. ಪರರಾಜ್ಯಗಳನ್ನು ಆಕ್ರಮಿಸಿ ಚಕ್ರವರ್ತಿಯಾಗುತ್ತಿದ್ದಾನೆ. ಆದರೆ, ನಾಗರಿಕತೆಯ ಈ ಆಟದಲ್ಲಿ ಸ್ವತಃ ಮಾನವನೇ ಬಲಿಯಾಗುತ್ತಿದ್ದಾನೆ.
ಆಳುಗಳ ಹೋರಾಟ
ಆಳುವವರಿಗೆ ಆಟ
ಗಾಳಕ್ಕ ಸಿಕ್ಕ ಮೀನದ ಗೋಳಾಟೊ
ಗೆಣೆಯಾ ಗೋಳಾಟೋ
ಗೆದ್ದವರ ಇದ್ದವರ ಹಾರಾಟ;
ಅರೆಸತ್ತ ಜೀವಾ ಕೊಳೆತಾsವೊ
ಹುಳತಾsವೊ
ಅಳತಾsವೋ
ಹಸುಗೂಸು ತಿರುಗಿ ಹೊಟ್ಟ್ಯಾಗ ಹುಗಿಧ್ಹಾಂಗ || ಚಿಗರಿಗಂಗಳ. . .
ಹೋರಾಟವೆನ್ನುವದು, ರಾಜ್ಯವಿಸ್ತಾರ ಎನ್ನುವದು ಇವೆಲ್ಲ ಆಳುವವರಿಗೆ ಒಂದು ಆಟ. ಆದರೆ ಹೋರಾಟದಲ್ಲಿ ತೊಡಗಿದ ಆಳುಗಳಿಗೆ ಹಾಗೂ ಅಮಾಯಕ ಪ್ರಜೆಗಳಿಗೆ ಈ ಹೋರಾಟವೆನ್ನುವದು ಒಂದು ದುಃಸ್ವಪ್ನವಿದ್ದಂತೆ. ಕೌರವ-ಪಾಂಡವರ ಯುದ್ಧವೇ ಆಗಲಿ, ಜಾಗತಿಕ ಯುದ್ಧವೇ ಆಗಲಿ, ಸಾಮಾನ್ಯ ಜನತೆಗೆ ಅದು ಬೇಕಾಗಿಲ್ಲದ ಯುದ್ಧ. ಅವರು ಗಾಳಕ್ಕೆ ಸಿಕ್ಕ ಮೀನಿನಂತೆ ಚಡಪಡಿಸುತ್ತಾರೆ. ಎಷ್ಟೇ ಕಣ್ಣೀರು ಹಾಕಿದರೇನು, ಗಾಳವು ಮೀನಿಗೆ ದಯೆ ತೋರುವದೆ?
ಈ ಹೋರಾಟದಲ್ಲಿ ಗೆದ್ದವರು ಹಾಗು ಬದುಕಿದ್ದವರು ಸತ್ತವರ ಮೇಲೆ ಬಾವುಟ ಹಾರಿಸುತ್ತಾರೆ. ಸೋತು ಬದುಕುಳಿದವರ ಪಾಡು ನಾಯಿಪಾಡು. ಅವರು ಅರೆಸತ್ತಂತವರು. ಅವರ ಬದುಕು ಕೊಳೆತು ಹೋಗುತ್ತದೆ, ಹುಳತು ಹೋಗುತ್ತದೆ, ಅಳುವುದೊಂದೇ ಅವರಿಗೆ ಉಳಿದ ಬದುಕು.
ಇದನ್ನು ಕಂಡ ಭೂಮಿತಾಯಿಗೆ ಹೇಗೆ ಅನಿಸುತ್ತದೆ?
ನಾನಾ ಜೀವಿಗಳಿಗೆ ಜನ್ಮ ಕೊಡುತ್ತಿರುವ, ಅನ್ನ ಕೊಡುತ್ತಿರುವ, ತಾಯಿ ವಸುಂಧರೆಗೆ ಹೇಗೆನ್ನಿಸುತ್ತದೆ?
‘ಹಸುಗೂಸು ತಿರುಗಿ ಹೊಟ್ಟ್ಯಾಗ ಹುಗಿಧ್ಹಾಂಗ.’
Her womb is a burial ground for her babies.
ಬೇಂದ್ರೆಯವರ ಉಪಮೆಗಳಲ್ಲಿ ಅತಿ ಕಠೋರವಾದ ಉಪಮೆ ಇದು ಎಂದು ಹೇಳಬಹುದು. ಅವರ ಮತ್ತೊಂದು ರಚನೆ ‘ನೀ ಹೀಂಗ ನೋಡಬ್ಯಾಡ ನನ್ನ’ ಕವನದಲ್ಲಿ ಸಹ ಶೋಕರಸದ ಉನ್ನತ ಉಪಮೆಯೊಂದಿದೆ:
“ಹುಣ್ಣವಿ ಚಂದಿರನ ಹೆಣಾ ಬಂತೊ ಮುಗಿಲಾಗ ತೇಲುತ ಹಗಲs”.
ಆದರೆ ಈ ಉಪಮೆಯಲ್ಲಿ ಶೋಕವಷ್ಟೇ ಅಲ್ಲದೆ, ಕ್ರೌರ್ಯವಿದೆ.
ಕೊನೆಯ ನುಡಿಯಲ್ಲಿ, ಭೂಮಿತಾಯಿಯ ಈ ಬವಣೆ, ಕೊನೆಯಿಲ್ಲದ ಬವಣೆ ಎನ್ನುವ ಭಾವನೆಯನ್ನು ಕವಿ ವ್ಯಕ್ತಪಡಿಸುತ್ತಾರೆ:
ತನ್ನ ತಾ ಸುತ್ತ್ಯಾಳೊ
ಹೊತ್ತಿನ ಬೆನ್ಹತ್ತ್ಯಾಳೊ
ತಿಂಗಳನ ಬಗಲಾಗೆತ್ತ್ಯಾಳೊ
ಗೆಣೆಯಾ ಎತ್ತ್ಯಾಳೊ
ಉಕ್ಕುಕ್ಕುವ ದುಃಖ ಒಳಗೊತ್ತ್ಯಾಳೊ;
ನಿಂತ ನೆಲವೆಂದು ಕಡಿಲಾsಕೊ
ಬಡಿಲಾsಕೊ
ಒಡಿಲಾsಕೊ
ಒಡವ್ಯಲ್ಲೋ ಮಗನೇ ಉಸಿರಿದ್ದೊಡಲಂತಾsಳೋ || ಚಿಗರಿಗಂಗಳ. . . .
ವಾಸ್ತವತೆ ಹಾಗು ಕಲ್ಪನೆಗಳನ್ನು ಕರಗಿಸಿ ಒಂದಾಗಿಸುವ ಬೇಂದ್ರೆ ಪ್ರತಿಭೆ ಇಲ್ಲಿ ಮತ್ತೊಮ್ಮೆ ಕಾಣುತ್ತದೆ.
ಓರ್ವ ಅಸಹಾಯಕ ಸ್ತ್ರೀ, ಸಂಕಟಗಳಿಂದ ಪಾರಾಗಲು ತನ್ನ ಸೀಮಿತ ಪರಿಧಿಯಲ್ಲಿ ಸುತ್ತುವಳು ಎನ್ನುವ ಅರ್ಥವನ್ನು ಕೊಡುವ ಮೊದಲ ಸಾಲು, ಭೂಮಿಯು ತನ್ನ ಅಕ್ಷದ ಸುತ್ತಲೂ ತಿರುಗುವ ವಾಸ್ತವವನ್ನೂ ಹೇಳುತ್ತದೆ. ಅದರಂತೆ ‘ಹೊತ್ತಿನ ಬೆನ್ಹತ್ತ್ಯಾಳೊ’ ಎನ್ನುವ ಸಾಲು ಅವಳು ತನ್ನ ದುಃಖಗಳನ್ನು ನಿವಾರಿಸಲು ಕಾಲವನ್ನು ಕಾಯುತ್ತಿದ್ದಾಳೆ ಎನ್ನುವ ಅರ್ಥದ ಜೊತೆಗೇ, ಸೂರ್ಯನ (=ಹೊತ್ತಿನ) ಸುತ್ತಲೂ ತಿರುಗುವ ಭೂಮಿಯನ್ನೂ ಸಹ ಸೂಚಿಸುತ್ತದೆ. ‘ತಿಂಗಳನ ಬಗಲಾಗೆತ್ತ್ಯಾಳೊ’ ಎನ್ನುವ ಸಾಲು ಹಸುಗೂಸನ್ನು ಎತ್ತಿಕೊಂಡ ಹೆಂಗಸಿನ ಚಿತ್ರವನ್ನು ಕೊಡುತ್ತದೆ; ಅದರಂತೆಯೇ ಚಂದ್ರನು (=ತಿಂಗಳನು) ಭೂಮಿಯ ಸುತ್ತಲೂ ತಿರುಗುತ್ತಿರುವ ವಾಸ್ತವವನ್ನೂ ಒಳಗೊಂಡಿದೆ.
ಇಂತಹ ಭೂಮಿತಾಯಿ ತನ್ನ ದುಃಖವನ್ನು ತನ್ನೊಳಗೇ ಒತ್ತಿ ಹಿಡಿದುಕೊಂಡು, ತನ್ನ ಬುದ್ಧಿಶಾಲಿ (!) ಮಕ್ಕಳಿಗೆ ಅಂದರೆ ಮಾನವರಿಗೆ ಅಂಗಲಾಚುತ್ತಿದ್ದಾಳೆ:
ನಿಂತ ನೆಲವೆಂದು ಕಡಿಲಾsಕೊ
ಬಡಿಲಾsಕೊ
ಒಡಿಲಾsಕೊ
ಒಡವ್ಯಲ್ಲೋ ಮಗನೇ ಉಸಿರಿದ್ದೊಡಲಂತಾsಳೋ.
ಆಳುವವರಿಗೆ ಹೆಣ್ಣು, ಹೊನ್ನು, ಮಣ್ಣು ಇವು ತಮ್ಮ ಘನತೆಯನ್ನು ಸಾರುವ ಆಭರಣಗಳು ;
ದೊಡ್ಡಸ್ತಿಕೆ ತೋರುವ ಸಂಕೇತಗಳು.
ನವಾಬನ ಜನಾನಾ ದೊಡ್ಡದಿದ್ದಷ್ಟೂ ಆತ ದೊಡ್ಡ ನವಾಬ.
ಆದರೆ, ಆತನ ದೊಡ್ಡಸ್ತಿಕೆಗಾಗಿ ಬಲಿಯಾಗುವ ಜನರ ಕಣ್ಣೀರನ್ನು ಆತ ಗಮನಿಸುವದಿಲ್ಲ.
ಇದನ್ನೇ ಭೂತಾಯಿ ಹೀಗೆ ಹೇಳುತ್ತಾಳೆ:
ನನ್ನನ್ನು ನಿರ್ಜೀವ ನೆಲವೆಂದು ತಿಳಿದು ಕಡಿಯಬೇಡ; ನಾನು ಕೇವಲ ಒಡವೆ ಅಲ್ಲ, ನಾನು ಉಸಿರಿರುವ ಒಡಲು; ಯಾಕೆಂದರೆ ನನ್ನ ಉಸಿರಿನಿಂದಲೆ ಬದಕುತ್ತಿವೆ ನನ್ನಲ್ಲಿಯ ಕೋಟಿ ಕೋಟಿ ಜೀವಿಗಳು.
‘ಒಡವ್ಯಲ್ಲೊ ಮಗನೆ ಉಸಿರಿದ್ದೊಡಲೊ’!
ಬೇಂದ್ರೆಯವರ ಕಾಲದಲ್ಲಿಯೇ, ಎಲ್ಲಾ ಯುರೋಪಿಯನ್ ದೇಶಗಳು ಏಶಿಯಾ ಹಾಗೂ ಆಫ್ರಿಕಾ ಖಂಡದ ದೇಶಗಳಲ್ಲಿ ಕ್ರೌರ್ಯದಿಂದ ಅಧಿಕಾರ ಸ್ಥಾಪಿಸಿ, ಆ ದೇಶಗಳನ್ನು ಶೋಷಿಸುತ್ತಿದ್ದವು. ಭಾರತವಂತೂ ಪುರಾತನ ಕಾಲದಿಂದಲೇ ಆಕ್ರಮಣಗಳನ್ನು ಎದುರಿಸುತ್ತ ಬಂದ ನಾಡು.
ಈ ಎಲ್ಲ ಸಂಗತಿಗಳು ಬೇಂದ್ರೆಯವರಿಗೆ ಈ ಕವನವನ್ನು ಬರೆಯಲು ಪ್ರೇರಣೆ ಕೊಟ್ಟಿರಬೇಕು. ಇಂತಹದೇ ಇನ್ನೊಂದು ಕವನವನ್ನು ಅವರು ರಚಿಸಿದ್ದಾರೆ : ‘ಮೊದಲಗಿತ್ತಿ’
(ಮೊದಲಗಿತ್ತಿಯಂತೆ ಮೆರೆಯುವಿಯೇ ತಾಯಿ|
ಮೊದಲಗಿತ್ತಿಯಂತೆ ಮೆರೆಯುತಿಹೆ.)
ಮಾನವನ ನಾಗರಿಕತೆ ಬೆಳೆದಂತೆಲ್ಲ ಶೋಷಣೆಯೂ ಹೆಚ್ಚುತ್ತ ಹೋದದ್ದನ್ನು ಅವರು ತಮ್ಮ ‘ಕರಡಿ ಕುಣಿತ’ ಕವನದಲ್ಲಿ ಬಣ್ಣಿಸಿದ್ದಾರೆ:
ಯಾವ ಕಾಡಡವಿಯಲ್ಲಿ ಜೇನುಂಡು ಬೆಳೆದಿದ್ದ
ಜಾಂಬುವಂತನ ಹಿಡಿದು ತಂದಾನೊ
ಧಣಿಯರ ಮನೆ ಮುಂದೆ ಕಾವಲು ಮಾಡಣ್ಣ
ಧಣಿ ದಾನ ಕೊಡುವನು ಎಂದಾನೊ.
ಜಾಂಬುವಂತ ಅಂದರೆ ಮೂಲಜನಾಂಗದ ಪ್ರತಿನಿಧಿ. ಧಣಿ ಅಂದರೆ ಯಜಮಾನ ನಾಗರಿಕತೆಯ ಪ್ರತಿನಿಧಿ.
ಅಡವಿಯಲ್ಲಿ ಸ್ವತಂತ್ರನಾಗಿ, ಜೇನುಂಡು ಬದುಕುತ್ತಿದ್ದ ಕರಡಿಯನ್ನು, ನಾಗರಿಕ ಮಾನವನು ಹಿಡಿದು ತಂದು, ಧಣಿ ಕೊಡುವ ದಾನಕ್ಕಾಗಿ (!) ಸಲಾಮು ಹೊಡಿಸುತ್ತಾನೆ!
ಬೇಂದ್ರೆಯವರದು ಭಾರತೀಯ ಆದರ್ಶ. ಈಶಾವಾಸ್ಯ ಉಪನಿಷತ್ತಿನಲ್ಲಿ ಹೇಳುವಂತೆ :
“ಈಶಾವಾಸ್ಯಮಿದಮ್ ಸರ್ವಮ್,ಯತ್ಕಿಂಚ ಜಗತ್ಯಾಂ ಜಗತ್;
ತೇನ ತ್ಯಕ್ತೇನ ಭುಂಜೀಥಾ:, ಮಾ ಗೃಧ: ಕಸ್ಯಸ್ವಿದ್ಧನಮ್.
ಈ ಆದರ್ಶವನ್ನು ಬಿಂಬಿಸುವ ಕವನಗಳೂ ಸಹ ಅವರಿಂದ ಹೊಮ್ಮಿವೆ. ಉದಾಹರಣೆಗೆ, ಅವರ ‘ಬೈರಾಗಿಯ ಹಾಡು’ ಎನ್ನುವ ಅತಿ ಚಿಕ್ಕ ಕವನವೊಂದನ್ನು ನೋಡಬಹುದು:
ಬೈರಾಗಿಯ ಹಾಡು
ಇಕೋ ನೆಲ-ಅಕೋ ಜಲ
ಅದರ ಮೇಲೆ ಮರದ ಫಲ
ಮನದೊಳಿದೆ ಪಡೆವ ಛಲ
ಬೆಳೆವಗೆ ನೆಲವೆಲ್ಲ ಹೊಲ.
ಜಲಧಿವರೆಗು ಒಂದೆ ಕುಲ
ಅನ್ನವೆ ಧರ್ಮದ ಮೂಲ
ಪ್ರೀತಿಯೆ ಮೋಕ್ಷಕ್ಕೆ ಬಲ
ಇದೇ ಶೀಲ ಸರ್ವಕಾಲ || ಇಕೋ ನೆಲ…..
……………………………………………….......
ಟಿಪ್ಪಣಿ:
ಇಂಗ್ಲೀಶಿನ enjambment ಅನ್ನುವ ಅಲಂಕಾರದಲ್ಲಿ ಕವನದ ಗತಿಯನ್ನು ನಡುವಿನ ಒಂದು ಸಾಲಿನ ಮೂಲಕ ಮುರಿಯಲಾಗುತ್ತದೆ. ಬೇಂದ್ರೆ ತಮ್ಮ ಈ ಕವನದಲ್ಲಿ ಆ ಅಲಂಕಾರವನ್ನು ಅತ್ಯುತ್ತಮವಾಗಿ ಬಳಸಿಕೊಂಡಿದ್ದಾರೆ. ಮೊದಲನೆಯ ನುಡಿಯ ಉದಾಹರಣೆಯನ್ನೇ ತೆಗೆದುಕೊಳ್ಳೋಣ:
ಹೊಳಿಹಳ್ಳ ತೊರೆದಾವೋ
ಗೆಣೆಹಕ್ಕಿ ಬೆರೆದಾವೋ
ಆಗದವರ ಹೊಟ್ಟಿ ಉರದಾವೋ
ಗೆಣೆಯಾ ಉರದಾವs
ಅಂಥವರ ದಿಟ್ಟಿ ಮನಿ ಮುರದಾವ;
ಅದನ ತಾ ಕಂಡು ಕೊರಗ್ಯಾsಳೊ
ಮರುಗ್ಯಾsಳೊ
ಸೊರಗ್ಯಾsಳೋ
ಹೂ ಕಾಯಿ ಹಣ್ಣು ತುಂಬಿದ ಬನದಾsಗ .
ಈ ನುಡಿಯ ಮೊದಲ ನಾಲ್ಕು ಸಾಲುಗಳಲ್ಲಿ ಒಂದು ಚಿತ್ರವಿದೆ ; ಕೊನೆಯ ನಾಲ್ಕು ಸಾಲುಗಳಲ್ಲಿ ಭೂಮಿತಾಯಿಯ ಸಂಕಟವಿದೆ. ಇವುಗಳ ಪ್ರವಾಹವನ್ನು ನಡುವಿನ ಸಾಲು ಅಂದರೆ ಐದನೆಯ ಸಾಲು ಮುರಿಯುತ್ತದೆ.
ಇದೇ ರೀತಿಯಾಗಿ ಇತರ ನುಡಿಗಳಲ್ಲೂ ಸಹ, ಮೊದಲ ನಾಲ್ಕು ಸಾಲುಗಳನ್ನು ಹಾಗು ಕೊನೆಯ ನಾಲ್ಕು ಸಾಲುಗಳನ್ನು ,ನಡುವಿನ ಅಂದರೆ ಐದನೆಯ ಸಾಲು ಪ್ರತ್ಯೇಕಿಸುತ್ತದೆ.
ಈ ಕವನದ ಇನ್ನೊಂದು ರಚನಾವೈಶಿಷ್ಟ್ಯವನ್ನು ಗಮನಿಸಬಹುದು :
ಪ್ರತಿಯೊಂದು ನುಡಿಯಲ್ಲಿ ಮೊದಲ ನಾಲ್ಕು ಸಾಲುಗಳು ಭೂಮಿತಾಯಿಯ ಒಂದು ಸ್ಥಿತಿಯನ್ನು ಬಣ್ಣಿಸುತ್ತವೆ. ಕೊನೆಯ ನಾಲ್ಕು ಸಾಲುಗಳು ಅವಳು ದುಃಖಿಸುವದನ್ನು ಬಣ್ಣಿಸುತ್ತವೆ.
ಮೊದಲನೆಯ ನುಡಿಯಿಂದ ಕೊನೆಯ ನುಡಿಯವರೆಗೆ, ವಸುಂಧರೆಯ ದುರಂತ ಗಂಭೀರವಾಗುತ್ತ ಹೋಗುವದನ್ನು ವರ್ಣಿಸಲಾಗಿದೆ.
ಸರ್ವಮಂಗಲೆಯಾದ ನಿಸರ್ಗದಲ್ಲಿಯ ಹಿಂಸೆ ಭಾರತೀಯ ಕವಿಗಳನ್ನು ಯಾವಾಗಲೂ ವಿಷಾದಕ್ಕೆ ಈಡು ಮಾಡಿದೆ. ಆದಿಕವಿ ವಾಲ್ಮೀಕಿ ಸಹ ‘ಮಾ ನಿಷಾದ ತ್ವಮಗಮಃ ಶಾಶ್ವತೀ ಸಮಾ: ಯತ್ ಕ್ರೌಂಚಮವಧೀ: ಶಾಶ್ವತೀ ಸಮಾ:’ ಎಂದು ದುಃಖಿಸಿದ್ದು, ಭಾರತದ ಆದಿಕಾವ್ಯವಾದ ‘ರಾಮಾಯಣ’ಕ್ಕೆ ಪ್ರೇರಣೆಯಾಯಿತು. ವಾಲ್ಮೀಕಿಯ ಈ ವಿಷಾದವನ್ನು ಕನ್ನಡದ ಮತ್ತೊಬ್ಬ ಶ್ರೇಷ್ಠ ಕವಿಯಾದ ಅಡಿಗರು ‘ಕ್ರೌಂಚವಧದುದ್ವೇಗದಳಲ ಬತ್ತಲ ಸುತ್ತ ರಾಮಾಯಣಶ್ಲೋಕ ರೇಶ್ಮೆದೊಗಲು’ ಎಂದು ಬಣ್ಣಿಸಿದ್ದಾರೆ.
“ಚಿಗರಿಗಂಗಳ ಚೆಲುವಿ” ಸ್ವತಃ ಬೇಂದ್ರೆಯವರಿಗೇ ಪ್ರಿಯವಾದ ಕವನವಾಗಿತ್ತು.
“ಚಿಗರಿಗಂಗಳ ಚೆಲುವಿ” ಸ್ವತಃ ಬೇಂದ್ರೆಯವರಿಗೇ ಪ್ರಿಯವಾದ ಕವನವಾಗಿತ್ತು.
Subscribe to:
Posts (Atom)